ಗೋವಾ: ನೌಕಾಪಡೆಯ ಮಿಗ್-29ಕೆ(MiG-29K) ತರಬೇತುದಾರ ವಿಮಾನ ಇಂದು ಗೋವಾ ಕರಾವಳಿಯ ಸಮುದ್ರದಲ್ಲಿ ಪತನಗೊಂಡಿದೆ ಎಂಧು ವರದಿಯಾಗಿದೆ. ವರದಿಯ ಪ್ರಕಾರ, MiG 29K ಫೈಟರ್ ಎಂದಿನಂತೆ ಗಸ್ತು ತಿರುಗುತ್ತಿದ್ದ ವೇಳೆ ತಾಂತ್ರಿಕ ದೋಷದಿಂದ ಪತನಗೊಂಡಿದೆ. ಅದೃಷ್ಟವಶಾತ್ ಪೈಲಟ್ಗಳು ಸೇಫ್ ಆಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಭಾರತೀಯ ನೌಕಾಪಡೆ ತಿಳಿಸಿದೆ. ಸುದ್ದಿ ತಿಳಿಯುತ್ತಿದ್ದಂತೇ ನೌಕಾಪಡೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ತ್ವರಿತ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ಅಪಘಾತದ ಕಾರಣವನ್ನು ತನಿಖೆ ಮಾಡಲು ತನಿಖಾ ಮಂಡಳಿಗೆ (BoI) ಆದೇಶಿಸಲಾಗಿದೆ.
Author: main-admin
ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯ ಹರಿಪದವು ಎಂಬಲ್ಲಿ ಹುಲಿವೇಷಧಾರಿ ಜಯಾನಂದ ಆಚಾರ್ಯ (65) ಎಂಬವರನ್ನು ಯುವಕನೋರ್ವ ಕೊಲೆಗೈದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಕೊಲೆ ಆರೋಪಿ ಕುಂಜತ್ಬೈಲ್ ದೇವಿನಗರದ ರಾಜೇಶ್ ಪೂಜಾರಿ (31) ಎಂಬಾತನನ್ನು ಕಾವೂರು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಹುಲಿವೇಷಧಾರಿಯಾಗಿದ್ದ ಜಯಾನಂದ ಆಚಾರ್ಯರ ಮೃತದೇಹ ಕುತ್ತಿಗೆಗೆ ದಾರ ಬಿಗಿದ ಸ್ಥಿತಿಯಲ್ಲಿ ಶನಿವಾರ ಪತ್ತೆಯಾಗಿತ್ತು. ಈ ಬಗ್ಗೆ ಜಯಾನಂದರ ಸಹೋದರ ಅಚ್ಚುತ ಆಚಾರ್ಯ ಎಂಬವರು ಕೊಲೆ ಶಂಕೆ ವ್ಯಕ್ತಪಡಿಸಿ ಕಾವೂರು ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿದ ಕಾವೂರು ಪೊಲೀಸರು ತನಿಖೆ ನಡೆಸಿದಾಗ ಆರೋಪಿ ರಾಜೇಶ್ ಪೂಜಾರಿ ಕೊಲೆ ನಡೆಸಿರುವುದಾಗಿ ತಿಳಿದುಬಂದಿದ್ದು, ಅದರಂತೆ ಆತನನ್ನು ಮಂಗಳವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಮಂಗಳೂರು : ಅ.8 ರಂದು ಮಧ್ಯರಾತ್ರಿ ಸಮಯ ವಾಮಂಜೂರು ಜಂಕ್ಷನ್ ಆಸುಪಾಸಿನಲ್ಲಿ ಶಾರದೋತ್ಸವ ಬಗ್ಗೆ ವಾಮಂಜೂರು ಫ್ರೆಂಡ್ಸ್ ಎಂಬ ಸಂಘಟನೆಯು ಸಾರ್ವಜನಿಕ ಸ್ಥಳದಲ್ಲಿ ಹಾಕಲಾಗಿದ್ದ ಫ್ಲೆಕ್ಸ್ ಗಳನ್ನು ಯಾರೋ ಕಿಡಿಗೇಡಿಗಳು ಹರಿದು ಹಾಕಿ ಧಾರ್ಮಿಕ ಭಾವನೆಗಳಿಗೆ ಅನುಮಾನಗೊಳಿಸುವ ಉದ್ದೇಶದಿಂದ ಕೃತ್ಯವನ್ನು ಎಸಗಿರುವವರ ವಿರುದ್ಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇಂದು ಆರೋಪಿತರಾದ ಸುಮಿತ್ ಹೆಗ್ಡೆ, ಯತೀಶ್ ಪೂಜಾರಿ, ಪ್ರವೀಣ್ ಪೂಜಾರಿ ಎಂಬವರುಗಳನ್ನು ವಶಕ್ಕೆ ಪಡೆದು ಕೊಂಡಿದ್ದು, ಕೃತ್ಯಕ್ಕೆ ಬಳಸಲಾಗಿದ್ದ ಸ್ವಿಪ್ಟ್ ಕಾರನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ಕೇರಳ : ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಇಬ್ಬರು ಮಹಿಳೆಯರು ಕೇರಳದ ತಿರುವಲ್ಲಾದಲ್ಲಿ ನರಬಲಿ ಶಂಕಿತ ಪ್ರಕರಣದಲ್ಲಿ ಹತ್ಯೆಗೀಡಾಗಿದ್ದಾರೆ. ಪೊಲೀಸರ ಪ್ರಕಾರ, ಮಹಿಳೆಯರನ್ನು ಎರ್ನಾಕುಲಂನಿಂದ ಅಪಹರಿಸಿ ತಿರುವಲ್ಲಾದಲ್ಲಿ ಕೊಲೆ ಮಾಡಲಾಗಿದೆ. ಬಲಿಪಶುಗಳನ್ನು ಪದ್ಮ ಮತ್ತು ರೋಸ್ಲಿನ್ ಎಂದು ಗುರುತಿಸಲಾಗಿದೆ. ಭಗವಲ್ ಸಿಂಗ್ ಮತ್ತು ಆತನ ಪತ್ನಿ ಲೀಲಾ ಮತ್ತು ಏಜೆಂಟ್ ಶಿಹಾಬ್ ಕೊಲೆಗೈವರಾಗಿದ್ದಾರೆ. ಎರ್ನಾಕುಲಂನಿಂದ ಇಬ್ಬರು ಮಹಿಳೆಯರನ್ನು ಅಪಹರಿಸಿ ದಂಪತಿಯ ಮನೆಗೆ ಕರೆತಂದಿರುವ ಶಂಕೆ ವ್ಯಕ್ತವಾಗಿದೆ. ಪದ್ಮಾ ನಾಪತ್ತೆಯಾಗಿರುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾಗ ಹತ್ಯೆ ನಡೆದಿರುವುದು ಬೆಳಕಿಗೆ ಬಂದಿದೆ. ಮಹಿಳೆಯರ ಫೋನ್ ಗಳನ್ನು ಮುಹಮ್ಮದ್ ಶಫಿ ಎಂಬಾತನ ಬಳಿ ಪತ್ತೆ ಮಾಡಲಾಗಿದ್ದು, ಆತ ಒಡೆದು ಹಾಕಿದ್ದು, ಅಪಹರಣ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಎರ್ನಾಕುಲಂ ಕಾಣೆಯಾದ ಮಹಿಳೆಗೆ ಸಂಬಂಧಿಸಿದಂತೆ ನಾವು ತನಿಖೆ ನಡೆಸಿದಾಗ, ಆಕೆಯನ್ನು ತಿರುವಲ್ಲಾದ ಆ ದಂಪತಿ ಮನೆಯಲ್ಲಿ ಕೊಂದು ಅವಳ ದೇಹವನ್ನು ತುಂಡುಗಳಾಗಿ ಕತ್ತರಿಸಿ ನಂತರ ಹೂಳಲಾಗಿದೆ. ಇದು ಆರ್ಥಿಕ ಲಾಭಕ್ಕಾಗಿ ದಂಪತಿ ನರಬಲಿ ನೀಡಿದ್ದಾರೆ ಎಂದು ಕೊಚ್ಚಿ ನಗರ…
ಕಾರ್ಕಳ: ಕೊರೊನಾ ಲಸಿಕೆ ನೀಡಿರುವ ಪರಿಣಾಮ ಕೈ ನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಕೌಡೂರು ಗ್ರಾಮದ ತಡ್ಪೆದೋಟ ಎಂಬಲ್ಲಿ ಅ.10ರಂದು ಸಂಜೆ ವೇಳೆ ನಡೆದಿದೆ. ಮೃತರನ್ನು ಕೌಡೂರು ಗ್ರಾಮದ ತಡ್ಪೆದೋಟ ನಿವಾಸಿ ಪ್ರದೀಪ್ ಪೂಜಾರಿ (37) ಎಂದು ಗುರುತಿಸಲಾಗಿದೆ. ಕಳೆದ ವರ್ಷ ಕೊರೋನಾ ಸಂದರ್ಭ ಇವರ ಕೈಗೆ ಲಸಿಕೆ ನೀಡಿದ್ದು ಇದರಿಂದ ಕೈ ನೋವುಂಟಾಗಿ ಸರಿಯಾಗಿ ಕೆಲಸ ಮಾಡಲು ಆಗುತ್ತಿರಲಿಲ್ಲ. ಇದರಿಂದ ಮಾನಸಿಕ ನೊಂದ ಅವರು ಮನೆಯ ಸಮೀಪದ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಕಳ: ಕಾರ್ಕಳ ತಾಲೂಕಿನ ಕೈಯಾರ್ಲದ ಶ್ರೀಮಹಾಕಾಳಿ ದೇವಾಲಯದ ಸಮೀಪದ ನಾಗಬನದಲ್ಲಿ ಪುರಾತನ ನಾಗಭೈರವ ಶಿಲ್ಪ ಪತ್ತೆಯಾಗಿದೆ ಎಂದು ಶಿರ್ವದ ಎಂ.ಎಸ್.ಆರ್.ಎಸ್. ಕಾಲೇಜಿನ ಇತಿಹಾಸ ಮತ್ತು ಪುರಾತತ್ತ್ವ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಪ್ರೊ.ಟಿ.ಮುರುಗೇಶಿ ತಿಳಿಸಿದ್ದಾರೆ. ಆಯತಾಕಾರದ ಬಳಪದ ಶಿಲೆಯ ಕೆಳಭಾಗದಲ್ಲಿ ಕಾಲುಮಂಡಲದ ನಾಲ್ಕು ಪತ್ರ ಗಂಟುಗಳನ್ನು ಒಳಗೊಂಡ ಒಂದು ನಾಗರಾಜನ ಶಿಲ್ಪವನ್ನು ರಚಿಸಲಾಗಿದ್ದು, ನಾಗನ ಹೆಡೆಯ ಮೇಲೆ ಚರ್ತುಬಾಹು ನಾಗಭೈರನ ಶಿಲ್ಪವನ್ನು ನಿಂತಂತೆ ರಚಿಸಲಾಗಿದೆ. ಹಿಂದಿನ ಎರಡು ಕೈಗಳಲ್ಲಿ ಎರಡು ಹೆಡೆಬಿಚ್ಚಿದ ನಾಗಗಳನ್ನು ಹಿಡಿದಂತೆ ಚಿತ್ರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಮುಂದಿನ ಬಲಗೈಯಲ್ಲಿ ನಾಗ ದಂಡವಿದೆ. ಎಡಗೈಯಲ್ಲಿ ರುಂಡವಿದೆ. ನಾಗಭೈರವ ಶಿಲ್ಪದ ಎಡ-ಬಲಗಳಲ್ಲಿ ಹೆಡೆಬಿಚ್ಚಿದ ನಾಗಗಳನ್ನು ಕೈಯಲ್ಲಿ ಹಿಡಿದ ನಾಗ ಕನ್ನಿಕೆಯರ ಶಿಲ್ಪಗಳಿವೆ. ನಾಗಭೈರವನ ತಲೆಯ ಮೇಲೆ ಐದು ಹೆಡೆಗಳ ನಾಗಕೊಡೆಯಿದೆ. ಜನಿವಾರ ಮತ್ತು ಸೊಂಟದ ಕೆಳಗೆ ಅರೆಪಂಚೆಯ ಅಲಂಕಾರವಿದೆ ಎಂದವರು ವಿವರಿಸಿದ್ದಾರೆ. ಶುದ್ಧ ಜನಪದ ಶೈಲಿಯಲ್ಲಿ ರಚಿತವಾಗಿರುವ ಈ ಶಿಲ್ಪ ಸುಮಾರು 14-15ನೇ ಶತಮಾನದ ಜೈನ ನಾಗಶಿಲ್ಪವಾಗಿದೆ. ಈ ಶಿಲ್ಪದ…
ಬಂಟ್ವಾಳ : ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಅವರ ತಾಯಿ ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಪೊಳಲಿ ದೇವಸ್ಥಾನದ ಆಡಳಿತದ ಒಂದು ಮನೆತನವಾದ ಉಳಿಪ್ಪಾಡಿಗುತ್ತು ದಿ| ರಮೇಶ್ ನಾಯ್ಕ್ ಅವರ ಪತ್ನಿ ಸರೋಜಿನಿ ಅವರು ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದು ಸೋಮವಾರ ರಾತ್ರಿ ಸುಮಾರು 10 ಗಂಟೆ ವೇಳೆ ಒಡ್ಡೂರು ಫಾರ್ಮ್ಸ್ ನ ಪುತ್ರನ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.ಇವರು ಪುತ್ರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ , ಓರ್ವ ಪುತ್ರಿಯನ್ನು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇವರ ಅಂತ್ಯಕ್ರಿಯೆ ಇಂದು10 ಗಂಟೆಗೆ ಒಡ್ಡೂರು ಫಾರ್ಮ್ಸ್ ನಲ್ಲಿ ನಡೆಯಲಿದೆ.
ಬಂಟ್ವಾಳ: ನಾಪತ್ತೆಯಾದ ಬಾಲಕಿಯರನ್ನು ಹುಡುಕಿಕೊಂಡು ಬಂದ ಯುವಕರು ಬಸ್ ನಿಲ್ದಾಣದಲ್ಲಿ ನಿಂತಿದ್ದ ಬುರ್ಖಾ ಧರಿಸಿದ್ದ ಯುವತಿಯರ ಮೇಲೆ ಮನಬಂದಂತೆ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಪೇಟೆಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ವಿಟ್ಲ ಬಸ್ ನಿಲ್ದಾಣದಲ್ಲಿ ಕುದ್ದುಪದವು ಮೂಲದ ಇಬ್ಬರು ಯುವತಿಯರು ಹಲ್ಲೆಗೊಳಗಾಗಿದ್ದಾರೆ. ಗಾಯಗೊಂಡ ಇಬ್ಬರು ಯುವತಿಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದರೆ, ಹಲ್ಲೆ ನಡೆಸಿದವರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸೋಮವಾರ ರಾತ್ರಿ ಘಟನೆ ನಡೆದಿದ್ದು, ಎಲ್ಲರೂ ಒಂದೇ ಸಮುದಾಯಕ್ಕೆ ಸೇರಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣದ ವಿವರ: ಮುಸ್ಲಿಂ ಸಮುದಾಯದ ಇಬ್ಬರು ಬಾಲಕಿಯರು ಇತ್ತೀಚೆಗೆ ಮನೆ ಬಿಟ್ಟು ತೆರಳಿದ್ದರು. ಅವರನ್ನು ಹುಡುಕಿಕೊಂಡು ಅವರ ಊರಿನ ಯುವಕರು ಹೊರಟಿದ್ದಾರೆ. ಆದರೆ ನಾಪತ್ತೆಯಾದವರೇ ಎಂದು ಭಾವಿಸಿ ಬಸ್ ನಿಲ್ದಾಣದಲ್ಲಿ ಸಿಕ್ಕ ಬೇರೆ ಅಮಾಯಕ ಯುವತಿಯರ ಮೇಲೆ ಹಲ್ಲೆ ನಡೆಸಿದ್ದಾರೆ. ಮನೆಯಲ್ಲಿ ಯಾರಿಗೂ ಹೇಳದೆ ಕೇಳದೆ ಸಾಲೆತ್ತೂರು ಮೂಲದ ಬಾಲಕಿಯೊಬ್ಬಳು ಮನೆಯಿಂದ ಸ್ನೇಹಿತೆಯೊಂದಿಗೆ ತೆರಳಿದ್ದಳು. ಆಕೆಯನ್ನು ಹುಡುಕುತ್ತ ವಿಟ್ಲಕ್ಕೆ ಬಂದಿದ್ದ ಯುವಕರು ಬಸ್ ನಿಲ್ದಾಣದಲ್ಲಿ…
ಪಾವಂಜೆ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ ಸಮೀಪದ ಪಾವಂಜೆ ಜಂಕ್ಷನ್ ಬಳಿ ಮೂಡಬಿದ್ರೆ ಪುತ್ತಿಗೆ ಬಳಿಯ ಅನ್ಯಕೋಮಿನ ಯುವಕನ ಜೊತೆಗೆ ಅಪ್ರಾಪ್ತೆ ಶಾಲಾ ವಿದ್ಯಾರ್ಥಿನಿ ಪತ್ತೆಯಾಗಿದ್ದು, ಸಂಶಯ ಬಂದ ಹಿಂದೂ ಸಂಘಟನೆಯ ಯುವಕರು ಇಬ್ಬರನ್ನೂ ಮುಲ್ಕಿ ಪೊಲೀಸರಿಗೆ ಒಪ್ಪಿಸಿದ್ದು, ಯುವಕನ ವಿರುದ್ಧ ಮುಲ್ಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಹಳೆಯಂಗಡಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಅನ್ಯಕೋಮಿನ ಯುವಕ ಮೂಡಬಿದ್ರೆ ಪುತ್ತಿಗೆ ನಿವಾಸಿ ತೌಫೀಕ್ (26) ಎಂಬಾತ ಮೂಡಬಿದ್ರೆಯ ಶಾಲೆಯಲ್ಲಿ ಕಲಿಯುತ್ತಿದ್ದ ಅಪ್ರಾಪ್ತೆ ಶಾಲಾ ವಿದ್ಯಾರ್ಥಿನಿಯನ್ನು ತನ್ನ ದ್ವಿಚಕ್ರವಾಹನದಲ್ಲಿ ಕುಳ್ಳಿರಿಸಿ ಹೋಗುತ್ತಿದ್ದಾಗ ಪಾವಂಜೆ ಜಂಕ್ಷನ್ ಬಳಿ ತಪಾಸಣೆ ನಡೆಸುತ್ತಿದ್ದ, ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಸಂಶಯದಿಂದ ನಿಲ್ಲಿಸಿ ದಾಖಲೆಗಳನ್ನು ಪರಿಶೀಲಿಸಿದಾಗ ನಂಬರ್ ಪ್ಲೇಟ್ ಇಲ್ಲದೆ ದ್ವಿಚಕ್ರವಾಹನ ಓಡಿಸುತ್ತಿರುವ ಬಗ್ಗೆ ಯುವಕನಿಗೆ ದಂಡ ವಿಧಿಸಿದ್ದಾರೆ. ಈ ಸಂದರ್ಭ ಯುವಕ ತೌಫಿಕ್ ತನ್ನ ಹತ್ತಿರ ಹಣ ಇಲ್ಲ ಎಂದು ಪೊಲೀಸರಲ್ಲಿ ಹೇಳಿ ಪಾವಂಜೆ ಹೆದ್ದಾರಿ ಬದಿಯ ಎಟಿಎಂ ಕಡೆಗೆ ಹೋಗಿದ್ದಾನೆ. ಆಗ ಸ್ಥಳದಲ್ಲಿದ್ದ…
ಕಾಪು: ಕಾಪು ತಾಲೂಕಿನ ಬೆಳಪು ಗ್ರಾಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಕಸಾಯಿಖಾನೆಗೆ ಶಿರ್ವ ಠಾಣಾಧಿಕಾರಿ ರಾಘವೇಂದ್ರ ಅವರ ತಂಡ ದಾಳಿ ನಡೆಸಿ, ಒಂದು ಗಂಡು ಕರುವನ್ನು ರಕ್ಷಿಸಿದೆ. ಈ ಸಂಬಂಧ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಬೆಳಪು ಗ್ರಾಮದ ಬಳಿಯ ದಿ. ಸುಲ್ತಾನ್ ಅಹಮ್ಮದ್ ಅವರ ಮಗ ತಬ್ರೇಸ್ (30), ಮಲ್ಲಾರು ಗ್ರಾಮದ ಅಮಾನುಲ್ಲಾ ಅಸೈನ್ ಅವರ ಮಗ ಮೊಹಮ್ಮದ್ ಅಜೀಮ್ (39), ಬೆಳಪು ಗ್ರಾಮದ ಮಧುರಾ ಸ್ಟೋರ್ ಬಳಿಯ ನಿವಾಸಿ ಮಕ್ಬೂಲ್ ಹುಸೇನ್ ಅವರ ಮಗ ಮೊಹಮ್ಮದ್ ವಲೀದ್ (20) ಪೊಲೀಸರು ವಶಕ್ಕೆ ಪಡೆದ ಆರೋಪಿಗಳು. ಕಾರ್ಯಚರಣೆಯಲ್ಲಿ 30,000 ರೂ. ಮೌಲ್ಯದ 3 ಬೈಕ್, 10 ಕೆಜಿ ಮಾಂಸ, ಚರ್ಮ, ಎರಡು ಕತ್ತಿಗಳು, ಮೂರು ಚಾಕುಗಳು, 1,000 ರೂ. ಮೌಲ್ಯದ ತೂಕದ ಇಲೆಕ್ಟ್ರಾನಿಕ್ ಯಂತ್ರ ಮತ್ತು 5 ಹಗ್ಗಗಳನ್ನು ವಶಕ್ಕೆ ಪಡೆಯಲಾಗಿದೆ.