Author: main-admin

ಮಂಗಳೂರು: ಮಂಗಳೂರು ಪಣಂಬೂರು ಬೀಚ್ ಪರಿಸರದಲ್ಲಿ ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನಿಸಿದ ಮೂವರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಉಡುಪಿಯ ಸಾಲಿಗ್ರಾಮ ನಿವಾಸಿ ಜಯಕರ, ಶಿವಮೊಗ್ಗ ಜಿಲ್ಲೆಯ ಸಾಗರ ನಿವಾಸಿ ಆದಿತ್ಯ, ಹಾವೇರಿ ಜಿಲ್ಲೆಯ ನಿವಾಸಿ ಲೋಹಿತ್ ಕುಮಾರ್ ಗುರಪ್ಪನವರ್ ಎಂದು ಗುರುತಿಸಲಾಗಿದೆ. ಮಂಗಳೂರು ನಗರದ ಪಣಂಬೂರು ಬೀಚ್ ಪರಿಸರದಲ್ಲಿ ಕೋಟ್ಯಾಂತರ ಬೆಲೆಬಾಳುವ ಅಪರೂಪದ ವನ್ಯ ಜೀವಿ ಉತ್ಪನ್ನವಾದ ಅಂಬರ್ ಗ್ರೀಸ್(ತಿಮಿಂಗಲ ವಾಂತಿ)ನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಮೂವರು ವ್ಯಕ್ತಿಗಳನ್ನು ಸಿ.ಸಿ.ಬಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಸೆರೆ ಹಿಡಿಯುವುದಲ್ಲಿ ಯಶಸ್ವಿಯಾಗಿರುತ್ತಾರೆ. 900 ಗ್ರಾಂ ತೂಕದ 90 ಲಕ್ಷ ಬೆಲೆಬಾಳುವ ಅಂಬರ್ ಗ್ರೀಸನ್ನು ಈ ಮೂವರ ಬಳಿಯಿಂದ ವಶಪಡಿಸಿಕೊಳ್ಳಲಾಗಿದೆ. ಈ ದಾಳಿಯು ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ರವರ ಮಾರ್ಗದರ್ಶನದಲ್ಲಿ ಸಿ.ಸಿ.ಬಿ ಘಟಕದ ಅಧಿಕಾರಿ ಹಾಗೂ ಸಿಬ್ಬಂದಿಯವರು ನಡೆಸಿರುತ್ತಾರೆ.

Read More

ಮಂಗಳೂರು: ಕನ್ನಡ ಚಿತ್ರರಂಗದಲ್ಲಿ ಕನಸಿನ ರಾಣಿಯಾಗಿ ಚಿತ್ರರಸಿಕರ ಮನ ಗೆದ್ದಿರುವ ಆಕ್ಷನ್ ಕ್ಲೀನ್ ಮಾಲಾಶ್ರೀ ಅಭಿನಯದ ಮತ್ತೊಂದು ಆಕ್ಷನ್ ಚಿತ್ರ ಮಾರಕಾಸ್ತ್ರ ತೆರೆಗೆ ಬರಲು ಸಿದ್ಧವಾಗಿದೆ.ಈ ಚಿತ್ರದಲ್ಲಿ ಮಾಲಾಶೀ ಔಟ್ ಅಂಡ್ ಔಟ್ ಅಕ್ಷನ್ ಲುಕ್ ನಲ್ಲಿ ಕಾಣಿಸಿಕೊಂಡಿರುವುದು ಚಿತ್ರರಸಿಕರಲ್ಲಿ ನಿರೀಕ್ಷೆಯನ್ನು ಮೂಡಿಸಿದೆ. ಚಿತ್ರದ ನಾಯಕನಾಗಿ ‘ಆನಂದ್ ಆರ್ಯ, ನಾಯಕಿಯಾಗಿ ಹರ್ಷಿಕಾ ಪುಣಚ್ಚಾ, ಅಯ್ಯಪ್ಪ ಶರ್ಮಾ,ಮೈಕೋ ನಾಗರಾಜ್, ಉಗ್ರಂ ಮಂಜು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಸುಮಾರು ಹಿರಿಯ, ಕಿರಿಯ ಕಲಾವಿದರು ಕಾಣಿಸಿಕೊಂಡಿದ್ದಾರೆ. ಚಿತ್ರವನ್ನು ಗುರುಮೂರ್ತಿ ಸುನಾಮಿ ನಿರ್ದೇಶಿಸಿದ್ದಾರೆ. ನೃತ್ಯ ನಿರ್ದೇಶಕ ಮತ್ತು ನಿರ್ದೇಶಕ ರಾಗಿರುವ ಧನು ಕುಮಾರ್ ಕ್ರಿಯೇಟಿವ್ ಹೆಡ್ ಆಗಿದ್ದಾರೆ.ಗಾಯನದಲ್ಲಿ ಅತೀವ ಆಸಕ್ತಿ ಹೊಂದಿ, ಸ್ವತ: ಗಾಯಕರಾಗಿರುವ ಡಾ| ನಟರಾಜ ಈ ಚಿತ್ರದಲ್ಲಿ ಹಾಡು ಹಾಡುವುದರೊಂದಿಗೆ ನಟನೆ ಮಾಡಿದ್ದಾರೆ. ಕೋಮಲ ನಟರಾಜ ನಿರ್ಮಾಪಕರಾಗಿದ್ದು ಮಂಜುನಾಥ್ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ. ‘ಮಾರಕಾಸ್ತ್ರ’ ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡ ನಿರ್ದೇಶಕ ಗುರುಮೂರ್ತಿ ಸುನಾಮಿ, ‘ನಾನು ಮೂಲತಃ ಬಳ್ಳಾರಿಯವನು. ಇದು ನನ್ನ ನಿರ್ದೇಶನದ ಮೊದಲ…

Read More

ಬೆಂಗಳೂರು: ಸ್ವಿಗ್ಗೀ, ಝೋಮ್ಯಾಟೋ ಸೇರಿದಂತೆ ಎಲ್ಲಾ ಗಿಗ್‌ ಕಾರ್ಮಿಕರಿಗೆ 4 ಲಕ್ಷ ರೂ. ವಿಮೆ ಘೋಷಣೆ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. 2 ಲಕ್ಷ ರೂ. ಅಪಘಾತ ವಿಮೆ, 2 ಲಕ್ಷ ರೂ. ಜೀವವಿಮೆ ಸೇರಿದಂತೆ 4 ಲಕ್ಷ ರೂ. ವಿಮೆ ಘೋಷಣೆ ಮಾಡಿ ಕರ್ನಾಟಕ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ಯೋಜನೆಗೆ ಕರ್ನಾಟಕ ರಾಜ್ಯ ಗಿಗ್‌ ಕಾರ್ಮಿಕರ ವಿಮಾ ಯೋಜನೆಯನ್ನು ರೂಪಿಸಲಾಗಿದೆ. ಗಿಗ್‌ ಕಾರ್ಮಿಕರು ರಾಜ್ಯ ಸರ್ಕಾರದ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅಗತ್ಯ ದಾಖಲೆಗಳೊಂದಿಗೆ ನೇರವಾಗಿ ಅರ್ಜಿ ಸಲ್ಲಿಸಿ ಗುರುತಿನ ಚೀಟಿ ಪಡೆಯಬೇಕಾಗುತ್ತದೆ. ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 18 ರಿಂದ 60 ವರ್ಷದ ಎಲ್ಲ ಪ್ಲಾಟ್‌ಫಾರಂ ಆಧಾರಿತ ಗಿಗ್‌ ಕಾರ್ಮಿಕರು ಯೋಜನೆಗೆ ಒಳಪಡುತ್ತಾರೆ.

Read More

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಗಣೇಶೋತ್ಸವದ ಬಗ್ಗೆ ಎದ್ದಿರುವ ವಿವಾದದ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದು, ಕಳೆದ 40 ವರ್ಷಗಳಿಂದ ಅಲ್ಲಿ ಗಣೇಶೋತ್ಸವ ಆಚರಿಸುತ್ತಾರೆಂಬ ಮಾಹಿತಿ ಇದೆ. ಈಗ ಯಾಕೆ ವಿವಾದ ಮಾಡಲಾಗುತ್ತಿದೆ ಎಂದು ಅರ್ಥವಾಗುತ್ತಿಲ್ಲ. ಜಿಲ್ಲೆಯಲ್ಲಿ ಶಾಂತಿ ಸಾಮರಸ್ಯ ಮುಖ್ಯ ಚುನಾವಣೆ ಹತ್ತಿರ ಬಂದಾಗ ಈ ರೀತಿ ಅಶಾಂತಿ ಸೃಷ್ಟಿಸುವುದನ್ನು ಜನ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮಂಗಳೂರು ವಿಶ್ವವಿದ್ಯಾನಿಲಯ ಈಗಾಗಲೇ ಬಿ. ಗ್ರೇಡ್‌ಗೆ ಹೋಗಿದೆ. ಅದನ್ನು ಎ ಗ್ರೇಡ್‌ಗೆ ತರಲು ಅಗತ್ಯ ಕ್ರಮಗಳನ್ನ ನಾವು ಮೊದಲು ಮಾಡಬೇಕಾಗಿದೆ. ಗಣೇಶೋತ್ಸವದ ಬಗ್ಗೆ ಮಂಗಳೂರು ವಿಶ್ವವಿದ್ಯಾನಿಲಯದ ವಿಸಿ ಹಾಗೂ ರಾಜ್ಯಪಾಲರು ಅದರ ಬಗ್ಗೆ ತೀರ್ಮಾನ ಮಾಡುತ್ತಾರೆ. ಕಲ್ಲಡ್ಕ ಪ್ರಭಾಕರ ಭಟ್ ಏನು ಮಾತನಾಡುತ್ತಾರೋ ಅದು ನಮಗೆ ಸಂಬಂಧಿಸಿದ್ದಲ್ಲ. ವಿವಿ ಶೈಕ್ಷಣಿಕವಾಗಿ ಬೆಳೆಯಬೇಕು. ಅಭಿವೃದ್ಧಿಯಾಗಬೇಕು. ಅನಗತ್ಯ ವಿಚಾರಗ ಬಗ್ಗೆ ಹೊರಗಿನವರು ಯಾಕೆ ಮಾತನಾಡಬೇಕು ಎಂದು ಪ್ರಶ್ನಿಸಿದರು.

Read More

ಬೆಳ್ತಂಗಡಿ : ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಅಟೋ ರಿಕ್ಷಾವೊಂದು ಮಗುಚಿ ಬಿದ್ದು ಒಂಬತ್ತು ವಿದ್ಯಾರ್ಥಿಗಳು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮೂರುಗೋಳಿಯಲ್ಲಿ ಇಂದು ಸಂಭವಿಸಿದೆ. ಕಲ್ಲೇರಿ ಆಸುಪಾಸಿನಿಂದ ಮೂಡಡ್ಕದ ಅಲ್ ಮದೀನಾತುಲ್ ಮುನಾವರ ಆಂಗ್ಲ ಮಾಧ್ಯಮ ಶಾಲೆಗೆ ಮಕ್ಕಳನ್ನು ಕರೆದುಕೊಂಡು ಬರುತ್ತಿದ್ದ ಅಟೋ ರಿಕ್ಷಾಕ್ಕೆ ಮೂರುಗೋಳಿ ಬಳಿ ಮಗುಚಿ ಬಿದ್ದಿದೆ. ದ್ವಿಚಕ್ರ ವಾಹನವೊಂದು ಅಡ್ಡ ಬಂದಿದ್ದು, ಈ ಸಂದರ್ಭ ಚಾಲಕನ ನಿಯಂತ್ರಣ ಕಳೆದುಕೊಂಡ ಅಟೋ ರಿಕ್ಷಾ ಮಗುಚಿ ಬಿದ್ದಿದೆ. ಘಟನೆಯಿಂದ ರಿಕ್ಷಾದಲ್ಲಿದ್ದ 8 ಮಂದಿ ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.   ಉಪ್ಪಿನಂಗಡಿ ಸಮುದಾಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದುಕೊಂಡು ಮನೆಗೆ ಮರಳಿದ್ದಾರೆ.

Read More

ಬಂಟ್ವಾಳ : ಯುವಕನೊಬ್ಬನ ಮೇಲೆ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿದ ಘಟನೆ ಮೈಂದಾಳ ಎಂಬಲ್ಲಿ ಶನಿವಾರ ರಾತ್ರಿ ನಡೆದಿದ್ದು, ಈ ಬಗ್ಗೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದವರನ್ನು ಮೈಂದಾಳ ನಿವಾಸಿ ನಿಸಾರ್ ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ ನಿಸಾರ್ ರಸ್ತೆ ಬದಿ ನಡೆದುಕೊಂಡು ಮೈಂದಾಳ ಸೇತುವೆ ಬಳಿಯ ಗುರಿಮಜಲು ಎಂಬಲ್ಲಿ ಅಟೋ ರಿಕ್ಷಾದ ಬಳಿ ನಿಂತಿದ್ದ 5 ಜನರ ಪೈಕಿ ಇಬ್ಬರು ನಿಸಾರ್ ಅವರನ್ನು ಅಡ್ಡ ಗಟ್ಟಿ ಹಲ್ಲೆ ನಡೆಸಿದ್ದಾರೆ. ಇದೇ ಸಂದರ್ಭ ರಿಕ್ಷಾದ ಬಳಿ ತಲವಾರು ಹಿಡಿದುಕೊಂಡು ನಿಂತಿದ್ದ ಮೂವರ ಪೈಕಿ ಓರ್ವ ನಿಸಾರ್ ಗೆ ದಾಳಿ ಮಾಡುವಂತೆ ಹೇಳುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂದರ್ಭ ನಿಸಾರ್ ದುಷ್ಕರ್ಮಿಗಳ ಕೈಯಿಂದ ತಪ್ಪಿಸಿ ಓಡಿ ಹೋಗಿದ್ದು, ಸ್ನೇಹಿತನಿಗೆ ಕರೆ ಮಾಡಿ ತಿಳಿಸಿ ಬಳಿಕ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ

Read More

ಮಂಗಳೂರು: ನಗರದ ಪ್ರತಿಷ್ಠಿತ ಹೊಟೇಲ್ ನ ಈಜು ಕೊಳದಲ್ಲಿ ಮೃತ ದೇಹ ಪತ್ತೆಯಾಗಿದೆ. ಮಂಗಳೂರಿನ ಪ್ರತಿಷ್ಠಿತ ಮೋತಿ ಮಹಲ್ ಹೊಟೇಲ್ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ‌ ಬ್ಯಾಂಕ್‌ ಅಧಿಕಾರಿ ಸಾವಿಗೀಡಾಗಿದ್ದಾರೆ. ಮೃತ ವ್ಯಕ್ತಿ ಕೇರಳದ ತಿರುವನಂತಪುರಂ ನಿವಾಸಿ ಗೋಪು ಆರ್ ನಾಯರ್ ಎಂದು ತಿಳಿದುಬಂದಿದೆ. ಯೂನಿಯನ್ ಬ್ಯಾಂಕ್ ಅಧಿಕಾರಿಯಾದ ಗೋಪು ಆರ್ ನಾಯರ್ ಅವರು ನಿನ್ನೆ ಭಾನುವಾರ ಮಂಗಳೂರಿಗೆ ಬಂದು ಮೋತಿ ಮಹಲ್ ಹೊಟೇಲ್ ನಲ್ಲಿ ಉಳಿದುಕೊಂಡಿದ್ದರು. ಬ್ಯಾಂಕ್ ಅಧಿಕಾರಿ ನಿನ್ನೆ ಸಂಜೆ 4 ಗಂಟೆ ವೇಳೆ ಹೊಟೇಲ್ ರೂಮ್ ನಿಂದ ಹೊರ ಹೋಗಿದ್ದರು. ಸ್ಥಳಕ್ಕೆ ಪಾಂಡೇಶ್ವರ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Read More

ಮಂಗಳೂರು: ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ವಾಹನವೊಂದನ್ನು ಬಜರಂಗದಳದ ಕಾರ್ಯಕರ್ತರು ಭಾನುವಾರ ಮುಂಜಾನೆ ತಡೆದು ನಿಲ್ಲಿಸಿ, ವಾಹನದಲ್ಲಿದ್ದವರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಗಳನ್ನು ಕಳವಾರು ಗ್ರಾಮದ ದಾವೂದ್‌, ಜೋಕಟ್ಟೆಯ ಬದ್ರುದ್ದೀನ್‌ ಮತ್ತು ಯಾಸೀನ್‌ ಎಂದು ಗುರುತಿಸಲಾಗಿದೆ. ವಾಹನದಲ್ಲಿ 2.5 ಕ್ವಿಂಟಾಲ್‌ಗಿಂತಲೂ ಹೆಚ್ಚಿನ ಪ್ರಮಾಣದ ದನದ ಮಾಂಸವನ್ನು ಜೋಕಟ್ಟೆಯಿಂದ ನಗರದ ಬೀಫ್‌ ಸ್ಟಾಲ್‌ಗ‌ಳಿಗೆ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಗೋ ಹತ್ಯಾ ನಿಷೇಧ ಕಾಯ್ದೆಯಡಿ ಉರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು : ಮಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ನಗರದ ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಈ ಬಗ್ಗೆ ವಿದ್ಯಾರ್ಥಿನಿ ತಾಯಿ ಕದ್ರಿ ಠಾಣೆಗೆ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ. ನಗರದ ಬಿಜೈಯ ಅಪಾರ್ಟ್ ಮೆಂಟ್ ಒಂದರಲ್ಲಿ ಸೆಕ್ಯೂರಿಟಿ ಕೆಲಸ ಮಾಡುತ್ತಿದ್ದ ದಂಪತಿ ಮಗಳು ಈಕೆಯಾಗಿದ್ದು ನಗರದ ಕಾಲೇಜ್ ಒಂದರಲ್ಲಿ ದ್ವಿತೀಯ ಪಿಯುಸಿ ಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ನಿನ್ನೆ ರಾತ್ರಿ ತಾಯಿ ಅಪಾರ್ಟ್‌ ಗಳ ಕಸ ಸಂಗ್ರಹಿಸಲು ತೆರಳಿದ್ದಾಗ ರೂಮ್ ನಲ್ಲಿ ಒಬ್ಬಳೇ ಇದ್ದ ವಿದ್ಯಾರ್ಥಿನಿ ಬಾಗಿಲು ಲಾಕ್ ಮಾಡಿ ಫ್ಯಾನಿಗೆ ನೇಣಾಕಿ ಆತ್ಮಹತ್ಯೆ ಕೊಂಡಿದ್ದಾಳೆ. ಕಸ ಬಿಸಾಡಿ ವಾಪಸ್ ಬಂದಾಗ ರೂಂ ಬಾಗಿಲು ಲಾಕ್ ಆಗಿದ್ದು ಎಷ್ಟೇ ಬಡಿದರೂ ಬಾಗಿಲು ತೆರೆಯದನ್ನು ನೋಡಿ ಕಿಟಿಕಿಯಿಂದ ಗಮನಿಸಿದಾಗ ಮಗಳು ಫ್ಯಾನ್‌ಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಕೂಡಲೇ ಅಪಾರ್ಟ್ ಮೆಂಟ್ ನವರು ಬಾಗಿಲು ಒಡೆದು ಕುಣಿಕೆಯಿಂದ ಕೆಳಗಿಸಿ ಉಪಚರಿಸಲು ಯತ್ನಿಸಿದ್ದರೂ ಅದಾಗಲೇ ಆಕೆಯ ಪ್ರಾಣ…

Read More

ಉಳ್ಳಾಲ : ನಾನು ಅರೆಸ್ಟ್ ಆಗದೆ ತುಂಬಾ ಸಮಯ ಆಯ್ತು. ಅರೆಸ್ಟ್ ಮಾಡಿದ್ರೆ ತುಂಬಾ ಸಂತೋಷ ಮಂಗಳೂರು ವಿವಿ ಮಂಗಳ ಸಭಾಂಗಣದಲ್ಲಿ ಗಣೇಶೋತ್ಸವ ಮಾಡಿಯೇ ಸಿದ್ಧ ಎಂದು ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸವಾಲು ಹಾಕಿದ್ದಾರೆ. ಮಂಗಳೂರು ವಿವಿ ಗಣೇಶೋತ್ಸವಕ್ಕೆ ವಿರೋಧ ಹಾಗೂ ಸ್ಟಾಲಿನ್ ಹೇಳಿಕೆ ಖಂಡಿಸಿ ಅಸೈಗೋಳಿಯ ಮೈದಾನದಲ್ಲಿ ಸಂಘ ಪರಿವಾರ ಹಮ್ಮಿಕೊಂಡ ಸಾಮೂಹಿಕ ಭಜನಾ ಪ್ರಾರ್ಥನೆಯಲ್ಲಿ ಭಾಗವಹಿಸಿ ಮಾತನಾಡಿದರು. ಹೊರಗಿನವರೆಂದರೆ ಯಾರು ಸ್ವಾಮಿ? ನಾವೆಲ್ಲರೂ ಗಣೇಶನ ಭಕ್ತರೇ ಅಲ್ವಾ? ಒಳಗಿರೋರು ಅಂದ್ರೆ ವಿದ್ಯಾರ್ಥಿಗಳು, ಅವರು ಬೇರೆ ಬೇರೆ ಜಾಗದಿಂದ ಬಂದವರು. ಇಡೀ ರಾಜ್ಯದಿಂದ ಅಲ್ಲಿಗೆ ಜನ ಬಂದಿರ್ತಾರೆ, ಇದರಲ್ಲಿ ಹೊರಗಿನವರು ಅಂತ ಇಲ್ಲ. ನಾವೆಲ್ಲರೂ ವಿವಿ ಗಣೇಶೋತ್ಸವಕ್ಕೆ ಬಂದೇ ಬರ್ತೇವೆ, ಅಲ್ಲಿ ಇರ್ತೇವೆ, ಅದರಲ್ಲಿ ಎರಡು ಪ್ರಶ್ನೆ ಇಲ್ಲ. ಬಂದರೆ ಏನು ಮಾಡ್ತಾರೆ, ಅರೆಸ್ಟ್ ಮಾಡ್ತಾರಾ? ಅರೆಸ್ಟ್ ಆಗದೇ ತುಂಬಾ ಸಮಯ ಆಯ್ತು.ಅರೆಸ್ಟ್ ಮಾಡಿದರೆ ಮಾಡಲಿ ಎಂದರು. ವಿವಿ ಅನ್ನೋದು ಹಿಂದೂ ಮೆಜಾರಿಟಿ ಇರೋ ಒಂದು ಸಂಸ್ಥೆ.…

Read More