Author: main-admin

ಬೆಂಗಳೂರು : ‘ಶಕ್ತಿ ಯೋಜನೆ’ ವಿರೋಧಿಸಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸೆ.11 ರಂದು ನಾಳೆ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಬಂದ್ ಗೆ ಕರೆ ನೀಡಿದ್ದು, ಖಾಸಗಿ ವಾಹನಗಳ ಸಂಚಾರದಲ್ಲಿ ವ್ಯತ್ಯಯವಾಗಲಿದ್ದು, ಪ್ರಯಾಣಿಕರಿಗೆ ಬಂದ್ ಬಿಸಿ ತಟ್ಟಲಿದೆ. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ಒಕ್ಕೂಟದ ಸದಸ್ಯರ ನಡುವೆ ನಿನ್ನೆ ನಡೆದ ಸಂಧಾನ ಸಭೆ ವಿಫಲವಾಗಿದ್ದು, ಈ ಹಿನ್ನೆಲೆ ಸೆ.11 ರಂದು ಖಾಸಗಿ ಒಕ್ಕೂಟಗಳ ಬೆಂಗಳೂರು ಬಂದ್ ಖಚಿತವಾಗಿದೆ. ನಾಲೆ ಟ್ಯಾಕ್ಸಿ, ಆಟೋ, ಮ್ಯಾಕ್ಸಿ ಕ್ಯಾಬ್, ಖಾಸಗಿ ಬಸ್ ಗಳು ಸಂಪೂರ್ಣ ಬಂದ್ ಆಗಲಿದ್ದು, ಶಾಲಾ ವಾಹನಗಳು ಕೂಡ ಬಂದ್ ಆಗಲಿದೆ. ಆಟೋ, ಟ್ಯಾಕ್ಸಿ, ಖಾಸಗಿ ಬಸ್, ಸ್ಕೂಲ್ ಬಸ್ ಗಳನ್ನು ರಸ್ತೆಗೆ ಇಳಿಸದಿರಲು ಖಾಸಗಿ ಸಾರಿಗೆ ಒಕ್ಕೂಟ ನಿರ್ಧರಿಸಿದೆ. ಈ ಹಿನ್ನೆಲೆ ಸೆ.11 ರಂದು ಪ್ರಯಾಣಿಕರಿಗೆ ತೊಂದರೆಯಾಗುವ ಸಾಧ್ಯತೆಯಿದೆ. ಸರ್ಕಾರಿ ಬಸ್ ಗಳಾದ ಬಿಎಂಟಿಸಿ ಹಾಗೂ ಕೆಎಸ್ ಆರ್ ಟಿಸಿ ನಾಳೆ ಎಂದಿನಂತೆ ಸಂಚಾರ ಮಾಡಲಿದ್ದು, ಪ್ರಯಾಣಿಕರಿಗೆ ತೊಂದರೆ ಇರುವುದಿಲ್ಲ.…

Read More

ನವದೆಹಲಿ : ಇಂದು ನಾವು ನಿಮಗೆ ಹೋಟೆಲ್ ಒಂದರ ಬಗ್ಗೆ ಹೇಳುತ್ತಿದ್ದೇವೆ. ಈ ಹೋಟೆಲ್ ಕಟ್ಟಿ 25 ವರ್ಷಗಳು ಕಳೆದಿವೆ. ಇನ್ನಿದಕ್ಕೆ 16 ಸಾವಿರ ಕೋಟಿ ಖರ್ಚು ಮಾಡಲಾಗಿದೆ. ಆದ್ರೆ, ಇಲ್ಲಿಯವರೆಗೆ ಒಬ್ಬ ಅತಿಥಿಯೂ ಇಲ್ಲಿಗೆ ಬಂದಿಲ್ಲ. ಹಾಗಾಗಿ ಈಗ ಸರ್ಕಾರ ಈ ಹೋಟೆಲ್ ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿದೆ. ಈ ಹೋಟೆಲ್‌ನ ಹೆಸರು Ryugyong. ಈ ಹೋಟೆಲ್ ಎಲ್ಲಿದೆ.?ವರದಿಯ ಪ್ರಕಾರ, Ryugyong ಹೋಟೆಲ್ ಉತ್ತರ ಕೊರಿಯಾದ ರಾಜಧಾನಿ Pyongyang ನಲ್ಲಿದೆ. ಈ ಹೋಟೆಲ್’ನ್ನ ಸರ್ವಾಧಿಕಾರಿ ಕಿಮ್ ಜಾಂಗ್-ಉನ್ ಅವರ ಮನೆಯಿಂದ ಸುಮಾರು 12 ಮೈಲಿ (19.3 ಕಿಲೋಮೀಟರ್) ದೂರದಲ್ಲಿ ನಿರ್ಮಿಸಲಾಗಿದೆ. ಈ ಹೋಟೆಲ್‌ನ ಎತ್ತರ 1082 ಅಡಿಗಳು ಇದರಲ್ಲಿ 3000 ಕೊಠಡಿಗಳನ್ನ ನಿರ್ಮಿಸಲು ಯೋಜಿಸಲಾಗಿತ್ತು. ಈ ಹೋಟೆಲ್ ದೇಶದ ಆರ್ಥಿಕ ಮತ್ತು ರಾಜಕೀಯ ಶಕ್ತಿಗೆ ವಿಭಿನ್ನವಾದ ಗುರುತನ್ನ ನೀಡುತ್ತಿತ್ತು. ಆದ್ರೆ, 25 ವರ್ಷಗಳ ನಂತ್ರವೂ ಈ ಹೋಟೆಲ್ ಖಾಲಿ ಬಿದ್ದಿದೆ. ಈಗ ಈ ಹೋಟೆಲ್’ನ್ನ ‘ಹೋಟೆಲ್ ಆಫ್ ಡೂಮ್’ ಎಂದು ಕರೆಯಲಾಗುತ್ತದೆ. 1987ರಲ್ಲಿ…

Read More

ಮಂಗಳೂರು: ಡ್ರಗ್ ಅಡಿಕ್ಟ್ ಹೆಸರಲ್ಲಿ ಮಾನಸಿಕ ಸಮಸ್ಯೆಯ ಯುವತಿಯ ವಿಡಿಯೋವೊಂದು ವೈರಲ್ ಆಗಿದೆ. ಮಂಗಳೂರಿನ ಕದ್ರಿ ಠಾಣೆಯಲ್ಲಿ ಪೊಲೀಸರ ಮೇಲೆ ದಾಳಿ‌ ನಡೆಸುವ ವಿಡಿಯೋ ವೈರಲ್ ಆಗಿದೆ. ಯುವತಿಯೊಬ್ಬಳನ್ನ ನಾಲ್ಕೈದು ಮಹಿಳಾ ಪೊಲೀಸ್ ಸಿಬ್ಬಂದಿ ನಿಯಂತ್ರಿಸುತ್ತಿರುವುದು ದೃಶ್ಯದಲ್ಲಿ ಸೆರೆಯಾಗಿದೆ. ಈ ವೇಳೆ ಪೊಲೀಸ್ ಸಿಬ್ಬಂದಿಗೆ ತುಳಿದು ಹಲ್ಲೆಗೆ ಯತ್ನಿಸಿದ್ದಾರೆ.ಈ ವೇಳೆ ಯುವತಿ ನಿಯಂತ್ರಿಸಲು ಪೊಲೀಸರು ಕೈ ಗೆ ಕೋಳ ತೊಡಿಸಲು ಮುಂದಾಗಿದ್ದಾರೆ. ಘಟನೆ ಬಳಿಕ ವೈರಲ್ ವಿಡಿಯೋ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಸ್ಪಷ್ಟನೆ ನೀಡಿದ್ದು, ಸೆ.1 ರ ಬೆಳಿಗ್ಗೆ 06.50ಕ್ಕೆ ಪಂಪವೆಲ್ ಗಣೇಶ್ ಮೆಡಿಕಲ್ ನಲ್ಲಿ ಈ ಯುವತಿ ಸಿಕ್ಕಿದ್ದಾಳೆ.ಅಸಾಮಾನ್ಯವಾಗಿ ಹಾಗೂ ಆಕ್ರಮಣಕಾರಿ ರೀತಿಯಲ್ಲಿ ವರ್ತಿಸಿದ್ದಾಳೆ. ಇದನ್ನು ಅಬಕಾರಿ ಇಲಾಖೆಯ ಅಧಿಕಾರಿಯೊಬ್ಬರು ಗಮನಿಸಿ ಮಾದಕ ದ್ರವ್ಯ ಸೇವನೆ ಅನುಮಾನ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಆಕೆಯನ್ನು ವೈದ್ಯಕೀಯ ತಪಾಸಣೆಗೆ ಕರೆದುಕೊಂಡು ಹೋಗಲು ಪ್ರಯತ್ನಿಸಿದಾಗ ಹಲ್ಲೆಗೆ ಯತ್ನಿಸಿದ್ದಾಳೆ. ಬಳಿಕ ಕದ್ರಿ ಪೊಲಿಸರ ಸಹಾಯದಿಂದ ಠಾಣೆಗೆ ಅಬಕಾರಿ ಅಧಿಕಾರಿ ಕರೆ ತಂದಿದ್ದಾರೆ. ಈ…

Read More

ಕಾರ್ಕಳ : ಕಾರ್ಕಳದ ಉಮಿಕಲ್ ನಲ್ಲಿರುವ ಪರುಶುರಾಮ ಪ್ರತಿಮೆಯ ರಿಯಾಲಿಟಿ ಚೆಕ್ ಗೆ ಆಗ್ರಹಿಸಿ ಕಳೆದ 8 ದಿನಗಳಿಂದ ದಿವ್ಯಾನಾಯಕ್ ನೇತೃತ್ವದಲ್ಲಿ ನಡೆಯುತ್ತಿದ್ದ ಉಪವಾಸ ಸತ್ಯಾಗ್ರಹ ಆರೋಗ್ಯ ಏರುಪೇರಾದ ಹಿನ್ನಲೆ ಹಿಂತೆಗೆದುಕೊಳ್ಳಲಾಗಿದೆ. ಬೈಲೂರು ಪರಶುರಾಮ ಮೂರ್ತಿಯ ಗುಣಮಟ್ಟ ಪರಿಶೀಲನೆಯಾಗಬೇಕೆಂದು ಆಗ್ರಹಿಸಿ ಕಳೆದ 8 ದಿನಗಳಿಂದ ದಿವ್ಯಾ ನಾಯಕ್‌ ನೇತೃತ್ವದ ತಂಡ ತಾಲೂಕು ಕಚೇರಿ ಮುಂಭಾಗದಲ್ಲಿ ಅನಿರ್ಧಿಷ್ಠಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿತ್ತು. ಇಂದು ದಿವ್ಯಾ ನಾಯಕ್‌ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಪ್ರತಿಭಟನೆಯನ್ನು ಹಿಂತೆಗೆದುಕೊಂಡಿತು.ದಿವ್ಯಾ ನಾಯಕ್‌ ಮತ್ತು ವಿವೇಕ್‌ ಶೆಟ್ಟಿ ಉಪವಾಸದಲ್ಲಿದ್ದು, ಪರಶುರಾಮ ಮೂರ್ತಿಯ ಗುಣಮಟ್ಟ ಪರಿಶೀಲನೆ ಯಾವತ್ತು ನಡೆಸುತ್ತಾರೆ ಎಂದು ಜಿಲ್ಲಾಧಿಕಾರಿಯವರು ದಿನಾಂಕ ತಿಳಿಸುವವರೆಗೆ ಉಪವಾಸವನ್ನು ಕೈ ಬಿಡುವುದಿಲ್ಲ ಎಂದಿದ್ದರು. ಆದರೆ ಇಂದು ದಿವ್ಯಾ ನಾಯಕ್‌ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಈ ಹಿನ್ನೆಲೆ ವೈದ್ಯಕೀಯ ಪರಿಶೀಲನೆ ನಡೆಸಿ ವರದಿಯನ್ನು ತಹಶೀಲ್ದಾರಿಗೆ ನೀಡಲಾಗಿತ್ತು. ಈ ಕುರಿತು ತಹಶೀಲ್ದಾರರು ಜಿಲ್ಲಾಧಿಕಾರಿಯವರಿಗೆ ಮಾಹಿತಿ ನೀಡಿದ್ದು, ನಂತರ ಪ್ರತಿಭಟನಕಾರರ ಮನವಿಯಂತೆ ಜಿಲ್ಲಾಧಿಕಾರಿಯವರಿಗೆ ಫೋನ್‌ ಕರೆ ಮಾಡಿಕೊಡಲಾಯಿತು. ಫೋನ್‌…

Read More

ಉಳ್ಳಾಲ : ಸರಣಿ ಅಪಘಾತದಲ್ಲಿ ವ್ಯಾಗನರ್ ಕಾರೊಂದು ಅಪ್ಪಚ್ಚಿಯಾದ ಘಟನೆ ರಾಷ್ಟ್ರೀಯ 66ರ ಜೆಪ್ಪುವಿನ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ಸಮೀಪದಲ್ಲೇ ಸಂಭವಿಸಿದೆ. ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಸಿಯಾಝ್ ಕಾರಿನ ಚಾಲಕ ಹಠಾತ್ ಬ್ರೇಕ್ ಹಾಕಿದ್ದಾರೆ.ಇದರಿಂದಾಗಿ ಹಿಂಬದಿಯಲ್ಲಿದ್ದ ಲಾರಿ ಸಿಯಾಝ್ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ. ಅದೇ ವೇಳೆ ಲಾರಿ ಹಿಂಭಾಗದಲ್ಲಿದ್ದ ವ್ಯಾಗನಾರ್ ಕಾರು ಲಾರಿಯ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ. ಅದೇ ವೇಳೆ ವ್ಯಾಗನರ್ ಕಾರಿನ ಹಿಂಭಾಗದಲ್ಲಿದ್ದ ಕೇರಳ ಸಾರಿಗೆ ಬಸ್ಸು ವ್ಯಾಗನಾರ್ ಕಾರಿಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಲಾರಿ ಹಾಗೂ ಬಸ್ ನಡುವೆ ಸಿಲುಕಿದ ವ್ಯಾಗನಾರ್ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿ ಅಪ್ಪಚ್ಚಿಯಾಗಿದೆ. ಉಳಿದ ವಾಹನಗಳ ಹಿಂಭಾಗಕ್ಕೆ ಹಾನಿಯಾಗಿದೆ. ವ್ಯಾಗನಾರ್ ಕಾರಿನ ಲ್ಲಿ ಚಾಲಕ ಮಾತ್ರ ಇದ್ದು, ಆತ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾನೆ. ಎಲ್ಲಾ ವಾಹನಗಳಲ್ಲಿದ್ದ ಐದು ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಬೆಂಗಳೂರು: ಬೆಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 500ಕ್ಕೂ ಹೆಚ್ಚು ಪಬ್, ಬಾರ್ ಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬೆಂಗಳೂರು ನಗರದಾದ್ಯಂತ ಇರುವ ಅನಧಿಕೃತ ಪಬ್, ಹುಕ್ಕಾ ಬಾರ್ ಗಳ ಮೇಲೆ ಸಿಸಿಬಿ ಪೊಲೀಸರು ತಡ ರಾತ್ರಿ ದಾಳಿ ನಡೆಸಿದ್ದು, ನಕಲಿ ಆಧಾರ್ ಕಾರ್ಡ್ ಗಳನ್ನು ಬಳಸಿ ಅಪ್ರಾಪ್ತರು ಪಬ್ ಗಳಿಗೆ ತೆರಳುತ್ತಿರುವುದು ಹಾಗೂ ಡ್ರಗ್ಸ್ ಸೇವನೆ ಮಾಡುತ್ತಿರುವುದುಪತ್ತೆಯಾಗಿದೆ. ದಾಳಿ ವೇಳೆ ಹಲವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.

Read More

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿ ಮಾಡಲು ಶೇ. 50 ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಇಂದು ಕೊನೆಯ ದಿನಾಂಕವಾಗಿದ್ದು, ಇಂದು ಸೆಪ್ಟೆಂಬರ್ 9 ರೊಳಗೆ ವಾಹನ ಸವಾರರು ರಿಯಾಯಿತಿ ದರದಲ್ಲಿ ದಂಡ ಕಟ್ಟಬೇಕು.ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಿದೆ.ಸೆಪ್ಟೆಂಬರ್ 9 ರೊಳಗೆ ವಾಹನ ಸವಾರರು ರಿಯಾಯಿತಿ ದರದಲ್ಲಿ ದಂಡ ಕಟ್ಟಬಹುದಾಗಿದೆ. ಸಂಚಾರಿ ಪೊಲೀಸ್ ಇಲಾಖೆಯ ಇ-ಚಲನ್ನಲ್ಲಿ ಫೆಬ್ರವರಿ 11, 2023ರ ಒಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಈ ಅವಕಾಶ ನೀಡಲಾಗಿದೆ. ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು. ರಿಯಾಯಿತಿ ದರದಲ್ಲಿ ದಂಡ ಕಟ್ಟೋದು ಹೇಗೆ..? 1) ಕರ್ನಾಟಕ ರಾಜ್ಯ ಪೊಲೀಸ್ ಅಧಿಕೃತ ಮೊಬೈಲ್ ಅಪ್ಲಿಕೇಶನ್ ಮೂಲಕ ಪಾವತಿ ಮಾಡಬಹುದು. 2) ಪೇಟಿಎಂ ಅಪ್ಲಿಕೇಶನ್ ಮುಖಾಂತರವು ಉಲ್ಲಂಘನೆಯ ವಿವರಗಳನ್ನು ಪಡೆದು ಪಾವತಿಸಬಹುದಾಗಿದೆ. 3) ಕರ್ನಾಟಕ ಒನ್ ಅಥವಾ ಬೆಂಗಳೂರು…

Read More

ಮೊರಾಕೊ:ಮೊರಾಕೊದಲ್ಲಿ ಶುಕ್ರವಾರ ತಡರಾತ್ರಿ ಮರ್ಕೆಚ್ ಬಳಿ ಪ್ರಬಲ ಭೂಕಂಪ ಸಂಭವಿಸಿದ್ದು ಕನಿಷ್ಠ 296 ಜನರು ಸಾವನ್ನಪ್ಪಿದ್ದಾರೆ ಎಂದು ದೇಶದ ಆಂತರಿಕ ಸಚಿವಾಲಯ ತಿಳಿಸಿದೆ. ಸಮೀಪದ ಮರಕೇಶ್‌ನಲ್ಲಿ ಕಟ್ಟಡಗಳು ಅ ಲುಗಾಡುತ್ತಿವೆ ಮತ್ತು ಭಯಭೀತರಾದ ನಿವಾಸಿಗಳು ಬೀದಿಗಿಳಿದಿದ್ದಾರೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ಹೇಳಿದೆ. ಆದರೆ, ಅಧಿಕಾರಿಗಳು ಇನ್ನೂ ಹಾನಿಯ ಪ್ರಮಾಣವನ್ನು ಲೆಕ್ಕಾಚಾರ ಮಾಡಬೇಕಾಗಿದೆ. ಭೂಕಂಪದ ಕೇಂದ್ರಬಿಂದುವು ತುಲನಾತ್ಮಕವಾಗಿ 18.5 ಕಿಮೀ ಆಳದಲ್ಲಿದೆ ಮತ್ತು ಯುಎಸ್‌ಜಿಎಸ್ ಪ್ರಕಾರ, ಸ್ಥಳೀಯ ಕಾಲಮಾನದ ಪ್ರಕಾರ ರಾತ್ರಿ 11 ಗಂಟೆಯ ನಂತರ ಮರಕೇಶ್‌ನ ನೈರುತ್ಯಕ್ಕೆ 72 ಕಿಮೀ ಮತ್ತು ಅಟ್ಲಾಸ್ ಪರ್ವತ ಪಟ್ಟಣವಾದ ಒಕೈಮೆಡೆನ್‌ನಿಂದ 56 ಕಿಮೀ ಪಶ್ಚಿಮಕ್ಕೆ ಸಂಭವಿಸಿದೆ. ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾದ ಕೆಲವು ವೀಡಿಯೊಗಳು, ಒಂದು ಕಟ್ಟಡವು ಕುಸಿದುಬೀಳುವುದನ್ನು ಮತ್ತು ಬೀದಿಗಳಲ್ಲಿ ಕಲ್ಲುಮಣ್ಣುಗಳನ್ನು ತೋರಿಸಿದೆ.ಜನರು ಶಾಪಿಂಗ್ ಸೆಂಟರ್, ರೆಸ್ಟೋರೆಂಟ್‌ಗಳು ಮತ್ತು ಅಪಾರ್ಟ್ಮೆಂಟ್ ಕಟ್ಟಡಗಳಿಂದ ಓಡಿಹೋಗುವುದನ್ನು ಮತ್ತು ಹೊರಗೆ ಒಟ್ಟುಗೂಡುವುದನ್ನು ತೋರಿಸಿದೆ. ಮರಕೇಶ್‌ನಲ್ಲಿ, ನಿವಾಸಿ ಬ್ರಾಹಿಂ ಹಿಮ್ಮಿ ಅವರು “ಹಳೆಯ ಪಟ್ಟಣದಿಂದ ಆಂಬ್ಯುಲೆನ್ಸ್‌ಗಳು ಬರುತ್ತಿರುವುದನ್ನು ನೋಡಿದ್ದಾರೆ…

Read More

ಮಂಗಳೂರು: 2023-24 ಸಾಲಿನಲ್ಲಿ ಪಿ.ಎಂ.ಇ.ಜಿ.ಪಿ ಯೋಜನೆ ಗ್ರಾಮೀಣ ಹಾಗೂ ನಗರ ಭಾಗದ ನಿರುದ್ಯೋಗಿಗಳಿಗೆ ಹೊಸದಾಗಿ ಸ್ವಂತ ಉದ್ಯೋಗ ಪ್ರಾರಂಭಿಸಲು ಅರ್ಜಿ ಆಹ್ವಾನಿಸಲಾಗಿದೆ. ಸ್ವಉದ್ಯೋಗ ಮಾಡಿಕೊಳ್ಳುವವರಿಗೆ ಗ್ರಾಮೀಣ, ಪಟ್ಟಣ, ನಗರ ಪ್ರದೇಶದಲ್ಲಿ ಹೊಸ ಉದ್ದಿಮೆ ಘಟಕಗಳನ್ನು ಪ್ರಾರಂಭಿಸುವವರಿಗೆ ಬ್ಯಾಂಕಿನಿಂದ ಉತ್ಪಾದನೆ ಘಟಕಕ್ಕೆ ಗರಿಷ್ಠ 50 ಲಕ್ಷ ಹಾಗೂ ಸೇವಾ ಘಟಕಕ್ಕೆ ಗರಿಷ್ಠ ಮೊತ್ತ 20 ಲಕ್ಷ ರೂಗಳ ವರೆಗೆ ಸಾಲ ಪಡೆಯಲು ಅರ್ಹರಿದ್ದು, ಈ ಸಾಲಕ್ಕೆ ಗರಿಷ್ಟ ಶೇ.25ರಿಂದ 35ರವರೆಗೆ ಇಲಾಖಾ ವತಿಯಿಂದ ಸಹಾಯಧನ ನೀಡಲಾಗುವುದು.ಅರ್ಹ ಅರ್ಜಿದಾರರು ಆನ್ಲೈನ್ ಮೂಲಕ ಅರ್ಜಿಗಳನ್ನು ಕೆವಿಐಬಿ ಇಲಾಖೆಗೆ ಈ ಕೆಳಗೆ ತಿಳಿಸಿರುವ ದಾಖಲೆಗಳೊಂದಿಗೆ ಸಲ್ಲಿಸಬಹುದಾಗಿದೆ. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು ಭಾವಚಿತ್ರ, ಆಧಾರ್ ಪ್ರತಿ, ಯೋಜನಾ ವರದಿ, ವಿದ್ಯಾರ್ಥಿ ಪ್ರಮಾಣ ಪತ್ರ, ಘಟಕ ಸ್ಥಳ ಗ್ರಾಮೀಣ ಪ್ರದೇಶವಾಗಿದ್ದಲ್ಲಿ ಗ್ರಾಮ ಪಂಚಾಯಿತಿಯಿಂದ ದೃಡೀಕರಣ, ಜಾತಿ ಪ್ರಮಾಣ ಪತ್ರ, ವಾಸ ಸ್ಥಳ ದೃಢೀಕರಣ, ಮನೆ ತೆರಿಗೆ ಬಾಡಿಗೆ ಕರಾರು ಪತ್ರ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಕೊಟೇಶನ್…

Read More

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಹಾಗೂ ಉಪಮೇಯರ್ ಹುದ್ದೆಗೆ ಇಂದು ನಡೆದ ಚುನಾವಣೆಯಲ್ಲಿ ಬಿಜೆಪಿಯ ಸುಧೀರ್ ಶೆಟ್ಟಿ ಮೇಯರ್ ಆಗಿ ಮತ್ತು ಉಪಮೇಯರ್ ಆಗಿ ಬಿಜೆಪಿಯ ಸುನಿತಾ ಆಯ್ಕೆಯಾಗಿದ್ದಾರೆ. ಶುಕ್ರವಾರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಚುನಾವಣಾಧಿಕಾರಿ ಮೈಸೂರು ಉಪವಿಭಾಗದ ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ.ಪ್ರಕಾಶ್ ಚುನಾವಣೆ ನಡೆಸಿದರು. ಈ ಅವಧಿಯ ನಾಲ್ಕನೇ ಮೇಯ‌ರ್ ಹುದ್ದೆ ಸಾಮಾನ್ಯ ವರ್ಗಕ್ಕೆ ಹಾಗೂ ಉಪಮೇಯರ್ ಹುದ್ದೆ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿತ್ತು.  ಪಾಲಿಕೆಯ ಒಟ್ಟು 60 ಸ್ಥಾನಗಳಲ್ಲಿ ಬಿಜೆಪಿ 44, ಕಾಂಗ್ರೆಸ್ 14 ಹಾಗೂ ಇಬ್ಬರು ಎಸ್‌ಡಿಪಿಐ ಸದಸ್ಯರು ಇದ್ದಾರೆ. ಹಿಂದಿನ ಅವಧಿಯಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಸದಸ್ಯರು ಮೇಯರ್ ಹುದ್ದೆಗೆ ಆಯ್ಕೆಯಾಗಿದ್ದರು. ಈ ಬಾರಿ ಮಂಗಳೂರು ದಕ್ಷಿಣ ಕ್ಷೇತ್ರಕ್ಕೆ ಮೇಯರ್ ಹುದ್ದೆ, ಮಂಗಳೂರು ಉತ್ತರಕ್ಕೆ ಉಪಮೇಯ‌ರ್ ಹುದ್ದೆ ಸಿಕ್ಕಿದೆ. ಚುನಾವಣೆಯಲ್ಲಿ ಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಸುಧೀರ್ ಶೆಟ್ಟಿ ಕಣ್ಣೂರು ಮತ್ತು ಕಾಂಗ್ರೆಸ್​ನಿಂದ ನವೀನ್ ಆರ್.ಡಿಸೋಜ ನಾಮಪತ್ರ ಸಲ್ಲಿಸಿದ್ಧರು.

Read More