Author: main-admin

ಬಾಲಕಿಯೊಬ್ಬಳು ಜೋಕಾಲಿ ಆಡಲು ಹೋಗಿ ಪ್ರಾಣ ಕಳೆದುಕೊಂಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ಲೇಖನಾ (10) ಮೃ*ತ ದುರ್ದೈ*ವಿ. ಘಟನೆ ನಡೆದ ಸಮಯದಲ್ಲಿ ಬಾಲಕಿಯ ಪೋಷಕರು ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ. ಮನೆಯವರು ಹೊರಗೆ ಹೋಗಿದ್ದಾಗ ಒಂಟಿಯಾಗಿದ್ದ ಲೇಖನಾ, ಮನೆಯಲ್ಲಿ ಹಾಕಿದ್ದ ಸೀರೆ ಜೋಕಾಲಿಯಲ್ಲಿ ಆಟವಾಡಲು ಮುಂದಾಗಿದ್ದಾಳೆ. ಈ ವೇಳೆ ಆಕಸ್ಮಿಕವಾಗಿ ಸೀರೆ ಆಕೆಯ ಕೊರಳಿಗೆ ಬಿಗಿದುಕೊಂಡಿದೆ. ಗಾಬರಿಗೊಂಡ ಬಾಲಕಿ ಸೀರೆಯನ್ನು ಬಿಡಿಸಿಕೊಳ್ಳಲು ಪ್ರಯತ್ನಿಸಿದರೂ ಸಾಧ್ಯವಾಗದೆ, ಕತ್ತು ಸಿಲುಕಿ ಸ್ಥಳದಲ್ಲೇ ಉಸಿರುಗಟ್ಟಿ ಸಾವನ್ನಪ್ಪಿದ್ದಾಳೆ. ಪೋಷಕರು ಮನೆಗೆ ಮರಳಿದಾಗ ಬಾಲಕಿ ಶವವಾಗಿ ಪತ್ತೆಯಾಗಿದ್ದು, ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ಸಂಬಂಧ ಚಿಕ್ಕಮಗಳೂರು ಗ್ರಾಮಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ವಿಜಯಪುರ ನಗರದ ಆದರ್ಶನಗರ ಪೊಲೀಸ್ ಠಾಣೆಯ ಪಿಎಸ್‌ಐ ಸೀತಾರಾಮ್ ಲಮಾಣಿ ಭ್ರಷ್ಟಾಚಾರ ಕಿರುಕುಳಕ್ಕೆ ಬೇಸತ್ತು ಸಿಎಂ, ಗೃಹಸಚಿವ ಸೇರಿದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ಠಾಣಾ ಸಿಬ್ಬಂದಿ ಹಾಗೂ ಅಧಿಕಾರಿಗಳು ಸಾಮೂಹಿಕ ದಯಾಮರಣ ಕೋರಿ ಪತ್ರ ಬರೆದಿದ್ದಾರೆ. ಪಿಎಸ್‌ಐ ಲಮಾಣಿ ಆದರ್ಶನಗರ ಪೊಲೀಸ್ ಠಾಣೆಯಿಂದ ತಿಕೋಟ ಪೊಲೀಸ್ ಠಾಣೆಗೆ ವರ್ಗಾವಣೆಗಾಗಿ ಹಣ ಹೊಂದಿಸುತ್ತಿದ್ದಾರೆ. ಹೀಗಾಗಿ ಹಣಕ್ಕಾಗಿ ವಿಪರೀತ ಭ್ರಷ್ಟಾಚಾರ, ಕಾನೂನು ಬಾಹಿರ ಚಟುವಟಿಕೆಗಳಿಂದ ಸಾರ್ವಜನಿಕರಲ್ಲಿ ಹಾಗೂ ಸಿಬ್ಬಂದಿ ವರ್ಗದಲ್ಲಿ ಪಿಎಸ್‌ಐ ತೊಂದರೆಯುಂಟು ಮಾಡುತ್ತಿದ್ದಾರೆ. ಠಾಣೆಯಲ್ಲಿ ದಾಖಲಾಗುವ ಎಫ್‌ಐಆರ್, ದೂರುದಾರರಿಂದ 10,000 ರೂ.ಯಿಂದ 1 ಲಕ್ಷ ರೂ.ವರೆಗೆ ಸಿಬ್ಬಂದಿ ಹಣ ವಸೂಲಿ ಮಾಡಬೇಕು ಎಂದು ಒತ್ತಡ ಹೇರಿದ್ದಾರೆ. ಇನ್ನು ಹಣ ವಸೂಲಿಗೆ 5.0 ಕೋಡ್ ಅಂದ್ರೆ 50,000 ರೂ. ಹೀಗೆ ಕೋಡ್ ಬಳಸಿ ಹಣ ವಸೂಲಿ ಮಾಡಲು ಒತ್ತಡ ಹೇರುತ್ತಿದ್ದಾರೆ. ಇದರ ಜೊತೆಗೆ ಬಾರ್, ಸ್ಪಾ, ಸಿಗರೇಟ್ ಹಾಗೂ ಮಾವಾ (ತಂಬಾಕು), ವೇಶ್ಯಾವಾಟಿಕೆ ಸೇರಿದಂತೆ ಅನೇಕ ವ್ಯವಹಾರಗಳಿಂದ ವಸೂಲಿಗೆ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿಸಿದ್ದಾರೆ.…

Read More

ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ ಅಕ್ರಮವಾಗಿ ಸಾಗಿಸುತ್ತಿದ್ದ ಎಂಟು ಜಾನುವಾರುಗಳನ್ನು ಹಾಗೂ ಸಾಗಾಟಕ್ಕೆ ಬಳಸಿದ ಎರಡು ವಾಹನಗಳನ್ನು ಮೂಡುಬಿದಿರೆ ಪೊಲೀಸರು ಭಾನುವಾರ ತೋಡಾರು ಎಂಬಲ್ಲಿ ವಶಕ್ಕೆ ಪಡೆದಿದ್ದಾರೆ. ಮೂಡುಬಿದಿರೆ ಪೊಲೀಸ್ ಠಾಣೆಯ ಪಿಎಸ್‌ಐ ಪ್ರತಿಭಾ ಕೆ.ಸಿ. ಹಾಗೂ ಸಿಬ್ಬಂದಿ ಗಸ್ತು ಕರ್ತವ್ಯದಲ್ಲಿದ್ದಾಗ, ತೋಡಾರು ಕಡೆಗೆ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಲಭಿಸಿದೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ತೋಡಾರು ಗ್ರಾಮದ ಪ್ರವೇಶದ್ವಾರದ ಬಳಿ ಗರಡಿ ಕಡೆಯಿಂದ ಬರುತ್ತಿದ್ದ ವ್ಯಾಗನ್-ಆರ್ ಕಾರು ಮತ್ತು ಅದನ್ನು ಹಿಂಬಾಲಿಸುತ್ತಿದ್ದ ಪಿಕಪ್ ವಾಹನವನ್ನು ತಡೆಯಲು ಸಂಕೇತ ನೀಡಿದರು. ಆದರೆ, ವಾಹನಗಳು ನಿಲ್ಲಿಸದೆ ಮುನ್ನುಗ್ಗಿದಾಗ ಪೊಲೀಸರು ಬೆನ್ನಟ್ಟಿ ಅವುಗಳನ್ನು ತಡೆದಿದ್ದಾರೆ. ಪೊಲೀಸರು ವಾಹನವನ್ನು ಸುತ್ತುವರಿಯುತ್ತಿದ್ದಂತೆಯೇ, ಪಿಕಪ್ ಚಾಲಕ ಹರ್ಷದ್ ಮತ್ತು ಆತನೊಂದಿಗಿದ್ದ ಇತರರು ಸ್ಥಳದಿಂದ ಓಡಿಹೋಗಿದ್ದಾರೆ. ಪಿಕಪ್ ವಾಹನಕ್ಕೆ ಬೆಂಗಾವಲಾಗಿ (ಎಸ್ಕಾರ್ಟ್) ಬಂದಿದ್ದ ವ್ಯಾಗನ್-ಆರ್ ಕಾರಿನ ಚಾಲಕ ಸಫರ್ ಹಾಗೂ ಹಂಡೇಲು ನಿವಾಸಿ ಅಬೂಬಕರ್ ಕೂಡ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರು ಪಿಕಪ್ ವಾಹನವನ್ನು ಪರಿಶೀಲಿಸಿದಾಗ, ಅದರಲ್ಲಿ…

Read More

ಮಂಗಳೂರು: ಗಂಜಿಮಠದ ಮುಚ್ಚೂರು ಕ್ರಾಸ್ ಬಳಿ ಮದುವೆ ಕಾರ್ಯಕ್ರಮದ ಹಿನ್ನೆಲೆ ಭಾರೀ ಟ್ರಾಫಿಕ್ ಜಾಮ್ ಉಂಟಾದ ಪ್ರಕರಣದಲ್ಲಿ ಹಾಲ್ ಮಾಲೀಕರು ಮತ್ತು ಆಯೋಜಕರ ವಿರುದ್ಧ ಬಜಪೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 12ರಂದು ಮಧ್ಯಾಹ್ನ 12ರಿಂದ 2 ಗಂಟೆಯವರೆಗೆ ನಡೆದ ಈ ಘಟನೆ ವೇಳೆ, ರಾಯಲ್ ಪ್ಯಾಲೇಸ್ ಮತ್ತು ಒಂಡೆಲಾ ಹಾಲ್‌ನಲ್ಲಿ ಮದುವೆ ಕಾರ್ಯಕ್ರಮಕ್ಕೆ ಬಂದ ವಾಹನಗಳಿಗೆ ಸಮರ್ಪಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿರಲಿಲ್ಲ. ಪರಿಣಾಮವಾಗಿ ರಾಷ್ಟ್ರೀಯ ಹೆದ್ದಾರಿ 169ರ ಮೇಲೆಯೇ ವಾಹನಗಳನ್ನು ನಿಲುಗಡೆ ಮಾಡಲಾಗಿದ್ದು, ಸಂಚಾರಕ್ಕೆ ಭಾರೀ ಅಡ್ಡಿ ಉಂಟಾಗಿದೆ.ಈ ಅವ್ಯವಸ್ಥೆಯಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗಿದ್ದು, ಅಪಾಯಕರ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಲ್ ಮಾಲೀಕರು ಹಾಗೂ ಕಾರ್ಯಕ್ರಮ ಆಯೋಜಕರ ವಿರುದ್ಧ ಬಜಪೆ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲಾಗಿದೆ.ಭಾರತೀಯ ನ್ಯಾಯ ಸಂಹಿತೆ (BNS) ಕಲಂ 126(2), 285, 292 ಮತ್ತು ಮೋಟಾರು ವಾಹನ ಕಾಯ್ದೆ (IMV Act) ಕಲಂ 122ರಡಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ.

Read More

ಶಿಕ್ಷಕರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ದುರ್ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮೃತ ವಿದ್ಯಾರ್ಥಿಯನ್ನು ಅನಿಕೇತ್ (14) ಎಂದು ಗುರುತಿಸಲಾಗಿದೆ. ಆತ ಜಯಪುರದ ಗುರುಕುಲ ಮಾದರಿಯ ಶ್ರೀ ಸತ್ಯಸಾಯಿ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಮೃತ ವಿದ್ಯಾರ್ಥಿ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಮೂಲದವನಾಗಿದ್ದಾನೆ. ಭಾನುವಾರ ಮಧ್ಯಾಹ್ನ ಶಿಕ್ಷಕರೊಂದಿಗೆ ಈಜುಕೊಳಕ್ಕೆ ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದೆ. ಈಜಾಡುತ್ತಿದ್ದಾಗ ಅನಿಕೇತ್ ನೀರಿನಲ್ಲಿ ಮುಳುಗಿ ತೀವ್ರ ಅಸ್ವಸ್ಥಗೊಂಡಿದ್ದಾನೆ. ತಕ್ಷಣವೇ ಆತನನ್ನು ನೀರಿನಿಂದ ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಕೊನೆಯುಸಿರೆಳೆದಿದ್ದಾನೆ. ಮೃತ ಅನಿಕೇತ್ ವಿಟ್ಲದ ಕಾಶಿಮಠ ನಿವಾಸಿ ಗೋವರ್ಧನ್ ನಾಯಕ್ ಅವರ ಪುತ್ರನಾಗಿದ್ದಾನೆ. ಗೋವರ್ಧನ್ ನಾಯಕ್ ಅವರು ಜೀವವಿಮಾ ಪ್ರತಿನಿಧಿಯಾಗಿದ್ದು, ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಜೀವವಿಮಾ ನಿಗಮದ ಕಚೇರಿಯನ್ನು ಹೊಂದಿದ್ದಾರೆ. ಅವರು ವಿವಿಧ ಧಾರ್ಮಿಕ ಹಾಗೂ ಸಮಾಜಸೇವಾ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ.ಮೃತ ವಿದ್ಯಾರ್ಥಿಯ ಮರಣೋತ್ತರ ಪರೀಕ್ಷೆ ಪೂರ್ಣಗೊಂಡಿದ್ದು, ಮೃತದೇಹವನ್ನು ಜಯಪುರದಿಂದ ವಿಟ್ಲಕ್ಕೆ…

Read More

ಮಣಿಪಾಲ: ಮಣಿಪಾಲ ಕೆಎಂಸಿ ಆಸ್ಪತ್ರೆ ಹೊರಭಾಗದಲ್ಲಿ ವ್ಯಕ್ತಿಯನ್ನು ಬಲವಂತವಾಗಿ ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತೆಲಂಗಾಣದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ ಅಪಹರಣಕ್ಕೊಳಗಾದ ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ ಮಾರ್ಚ್ 31 ರಾತ್ರಿ 8.15 ಗಂಟೆ ಸುಮಾರಿಗೆ ಕುಂದಾಪುರ ತಾಲೂಕಿನ ದಾಸರಮಕ್ಕಿ ನಿವಾಸಿ ರಾಮ ಮಡಿವಾಳ ಅವರು ತಮ್ಮ ತಮ್ಮ ಲಕ್ಷ್ಮಣರಿಗೆ ಚಿಕಿತ್ಸೆ ನೀಡಲು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಚಿಕಿತ್ಸೆ ಬಳಿಕ ಆಸ್ಪತ್ರೆಯ ಕ್ಯಾಂಟೀನಿನಲ್ಲಿ ರಾಮ ಮಡಿವಾಳ, ಅವರ ಅಣ್ಣ ರಾಜೇಶ್ ಹಾಗೂ ಸುಧೀರ್ ಟೀ ಕುಡಿಯುತ್ತಿದ್ದ ವೇಳೆ ಮಧ್ಯಾಹ್ನ ಸುಮಾರು 12.15 ಗಂಟೆಗೆ ನಂಬರ್ ಪ್ಲೇಟ್ ಇಲ್ಲದ ಕಪ್ಪು ಬಣ್ಣದ ಕಾರಿನಲ್ಲಿ ಏಳು-ಎಂಟು ಮಂದಿ ಬಂದು ರಾಜೇಶ್ ಅವರನ್ನು ಬಲವಂತವಾಗಿ ಹಿಡಿದು ಕಾರಿನಲ್ಲಿ ಕೂರಿಸಿ ಅಪಹರಿಸಿ ಮಣಿಪಾಲದಿಂದ ಹಿರಿಯಡ್ಕ ರಸ್ತೆಯ ಕಡೆಗೆ ತೆರಳಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಕುರಿತು ನೀಡಿದ ದೂರಿನ ಮೇರೆಗೆ ಮಲ್ಲಾರೆಡ್ಡಿ, ತುಳಜಾ, ನರಸಿಂಗ, ಹುಸೇನ್, ಶಂಕರ, ನಾಗೇಶ್, ಪರಮೇಶ್ವರ್ ಹಾಗೂ ವಿಜಯ್…

Read More

ಬೆಳ್ತಂಗಡಿ: ನೇತ್ರಾವತಿ ಸ್ನಾನಘಟ್ಟದ ಸಮೀಪ ಶನಿವಾರ ಸಂಜೆ ವ್ಯಕ್ತಿಯೊಬ್ಬರು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಘಟನೆಯ ತಕ್ಷಣ ಸ್ಥಳೀಯರು ಧೈರ್ಯದಿಂದ ಮುನ್ನಡೆದು ಬೆಂಕಿಯನ್ನು ನಂದಿಸಿ, ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಧಾವಿಸಿದ ಧರ್ಮಸ್ಥಳ ಪೊಲೀಸರು ಗಾಯಾಳುವನ್ನು ವಿಚಾರಣೆ ನಡೆಸಿದಾಗ, ಆತನು ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹಚ್ಚಿಗಟ್ಟ ಗ್ರಾಮದ ನಿವಾಸಿ ನರೇಂದ್ರ (50) ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಮಾಡಲು ಉದ್ದೇಶಪೂರ್ವಕವಾಗಿ ಪೆಟ್ರೋಲ್ ತೆಗೆದುಕೊಂಡು ಧರ್ಮಸ್ಥಳದ ನೇತ್ರಾವತಿ ತೀರಕ್ಕೆ ಬಂದು ಈ ಕೃತ್ಯಕ್ಕೆ ಮುಂದಾಗಿರುವುದಾಗಿ ಆತ ಹೇಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಕುರಿತು ಪೊಲೀಸರು ನರೇಂದ್ರ ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ. ಅವರು ಸ್ಥಳಕ್ಕೆ ಆಗಮಿಸಿದ ಬಳಿಕ ಆತ್ಮಹತ್ಯೆ ಯತ್ನದ ನಿಖರ ಕಾರಣ ತಿಳಿದುಬರುವ ಸಾಧ್ಯತೆ ಇದೆ.ಪ್ರಕರಣದ ಸಂಬಂಧ ಧರ್ಮಸ್ಥಳ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ

Read More

ಕಾರ್ಕಳ: ಬೆಳ್ತಂಗಡಿಯ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ನಿ ಸೌಮ್ಯ ಶೆಟ್ಟಿ (28)ಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.ಮೂಲತಃ ಪುತ್ತೂರು ನೆಲ್ಯಾಡಿಯ ಸುದೀಪ್ ರೈ ಮತ್ತು ಕಾರ್ಕಳ ಕಜೆ ನಿವಾಸಿ, ಪುತ್ತೂರು ಸಬ್ ರಿಜಿಸ್ಟ್ರಾರ್ ಕಚೇರಿ ಉದ್ಯೋಗಿ ಸೌಮ್ಯ ಶೆಟ್ಟಿ ಫೆ.17ರಂದು ರಿಜಿಸ್ಟರ್ ಮ್ಯಾರೇಜ್ ಆಗಿದ್ದರು. ಬಳಿಕ ಸುದೀಪ್ ಮತ್ತು ಸೌಮ್ಯ ಕಾರ್ಕಳ ಜೋಡುರಸ್ತೆಯ ಬಂಗ್ಲೆಗುಡ್ಡೆ ಕಜೆ ಎಂಬಲ್ಲಿ ವಾಸವಾಗಿದ್ದರು. ಮಾ.17ರಂದು ಸುದೀಪ್ ಕಾರಿನಲ್ಲಿ ತನ್ನ ತಾಯಿಯೊಂದಿಗೆ ಪೂಜಾ ಕಾರ್ಯಕ್ರಮದ ನಿಮಿತ್ತ ಕಡಬ ತಾಲೂಕಿನ ನೆಲ್ಯಾಡಿ ಪೇಟೆಯ ಸಮೀಪ ಹೋಗುತ್ತಿದ್ದಾಗ ಸೌಮ್ಯ ಸ್ಕೂಟಿಯಲ್ಲಿ ಬಂದು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಹಾಕಿದ್ದಳು ಎಂದು ದೂರಲಾಗಿತ್ತು. ನಂತರ ಸುದೀಪ್ ಕಾರ್ಕಳಕ್ಕೆ ಹೋಗಿದ್ದು, ಮಾ.22ರಂದು ಸುದೀಪ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಮಾ.24ರಂದು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಸುದೀಪ್‌ಗೆ ಸೌಮ್ಯ ಮಾನಸಿಕ ಚಿತ್ರಹಿಂಸೆ ನೀಡಿ ಆತ್ಮಹತ್ಯೆಗೆ ಪ್ರಚೋದಿಸಿರುವುದಾಗಿ ಮೃತರ ತಂದೆ ದಾಮೋದ‌ರ್ ರೈ ನೀಡಿದ ದೂರಿನಂತೆ…

Read More

ಬಂಟ್ವಾಳ: ಶುಕ್ರವಾರ ರಾತ್ರಿ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲ್ಲದಲ್ಲಿ ಮದರಂಗಿ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿದ್ದಾಗ ಯುವ ನಿರೂಪಕರೊಬ್ಬರು ವೇದಿಕೆಯ ಮೇಲೆ ಕುಸಿದು ಬಿದ್ದು ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಮೃತರನ್ನು ಫರಂಗಿಪೇಟೆಯ ಅಬ್ಬೆಟು ನಿವಾಸಿ ಅಶ್ವಿತ್ (32) ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ, ನಾಯಿಲ್ಲದಲ್ಲಿರುವ ಸಂಬಂಧಿಕರ ಮನೆಯಲ್ಲಿ ಮದರಂಗಿ ಕಾರ್ಯಕ್ರಮವನ್ನು ನಿರೂಪಣೆ ಮಾಡಲು ಅಶ್ವಿತ್ ವೇದಿಕೆಯ ಮೇಲೆ ಹೆಜ್ಜೆ ಹಾಕಿದ್ದರು. ಕಾರ್ಯಕ್ರಮವನ್ನು ಪ್ರಾರಂಭಿಸುತ್ತಿದ್ದಂತೆ, ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದರು. ಅವರನ್ನು ತಕ್ಷಣ ತುಂಬೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಅವರು ಈಗಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು. ಬಂಟ್ವಾಳ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮೈಕ್ರೋ ಫೈನಾನ್ಸ್ ಹೆಸರಿನಲ್ಲಿ ಹಲವರಿಂದ ಭಾರಿ ಹಣ ಸಂಗ್ರಹಿಸಿ, ಹೆಚ್ಚಿನ ಲಾಭದ ಆಮಿಷವೊಡ್ಡಿ ವಂಚಿಸಿದ ಗಾಯಕಿ ಮಂಗ್ಲಿ ಮತ್ತು ಅವರ ಸಹೋದರನ ವಿರುದ್ಧ 10 ಕೋಟಿ ರೂ. ಮೋಸದ ಆರೋಪದಡಿ ಪ್ರಕರಣ ದಾಖಲಾಗಿದೆ. ಮಂಗ್ಲಿ ಅವರು ತೆಲುಗಿನವರಾದರೂ ಕನ್ನಡದಲ್ಲೂ ಜನಪ್ರಿಯತೆ ಪಡೆದ ಗಾಯಕಿ. ಇತ್ತೀಚಿಗೆ ಕನ್ನಡದ ಕೆಡಿ ಚಿತ್ರದ ಹಾಡಿಗೆ ಧ್ವನಿ ನೀಡಿದ್ದರು. ಈಗ ಅವರ ಮೇಲೆ 10 ಕೋಟಿ ರೂಪಾಯಿ ಮೋಸದ ಕೇಸ್ ದಾಖಲಾಗಿದೆ. ಪಂಜಗುಟ್ಟ ಪೊಲೀಸ್ ಠಾಣೆಯಲ್ಲಿ ಮಂಗ್ಲಿ ಹಾಗೂ ಅವರ ಸಹೋದರನ ವಿರುದ್ಧ ಕೇಸ್ ದಾಖಲಾಗಿದೆ. ಮಂಗ್ಲಿ ತಮಗೆ ಮೋಸ ಮಾಡಿದ್ದಾರೆ ಮತ್ತು ಅವರಿಂದ ಅಪಾಯವಿದೆ ಎಂದು ವಕೀಲರೊಬ್ಬರು ಆರೋಪಿಸಿದ್ದಾರೆ. ಮೈಕ್ರೋ ಫೈನಾನ್ಸ್ ಮಾಡುತ್ತಿದ್ದ ಮಂಗ್ಲಿ ಮತ್ತು ಅವರ ಸಹೋದರ ಸುಮಾರು 100 ಜನರಿಂದ ಭಾರಿ ಹಣವನ್ನು ಸಂಗ್ರಹಿಸಿದ್ದು, ಹಣವನ್ನು ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಬರುತ್ತದೆ ಎಂಬ ಆಸೆ ತೋರಿಲಾಗಿತ್ತು. ಇದನ್ನು ನಂಬಿ ಅನೇಕರು ಹಣ ನೀಡಿದ್ದರು. ನಿಗದಪಡಿಸಿದ ಸಮಯ ಕಳೆದರೂ ಲಾಭ ನೀಡಿಲ್ಲ, ಅಸಲನ್ನು…

Read More