Author: main-admin

ಮಂಗಳೂರು: ಉರ್ವಾ ಠಾಣೆ ವ್ಯಾಪ್ತಿಯ ಕೋಡಿಕಲ್ ಮತ್ತು ಕುಂಟಿಕಾನದಲ್ಲಿ ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಒಟ್ಟು 11 ಮಂದಿ ಬಾಂಗ್ಲಾ ನಿವಾಸಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಪೈಕಿ ನಾಲ್ವರು ಅಪ್ರಾಪ್ತರು ಅನ್ನುವ ಮಾಹಿತಿಯನ್ನು ಪೊಲೀಸರು ತಿಳಿಸಿದ್ದಾರೆ. ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆಯ ನಿವಾಸಿಗಳಾದ ಕೌಸರ್ ಅಲಿ (21), ನೂರ್ ಅಮೀನ್ (34), ನಹೀದುಲ್ ಇಸ್ಲಾಂ (22), ಹುಮಾಯೂನ್ ಕಬೀರ್ (22), ರಮ್ಯಾನ್ ಅಲಿ(23), ಅಬ್ದುಲ್ ರಹಮಾನ್ (19), ನೂಯಾನ್ (24) ಮತ್ತು ಇತರ ನಾಲ್ಕು ಮಂದಿ ಅಪ್ರಾಪ್ತರನ್ನು ಪೊಲೀಸರು ಬಂಧಿಸಿದ್ದಾರೆ. ಇವೆರಲ್ಲ ರಾಜಶಾಹಿ ಜಿಲ್ಲೆಯ ಒಂದೇ ಭಾಗದ ನಿವಾಸಿಗಳೆಂದು ಪೊಲೀಸರು ದೃಢಪಡಿಸಿದ್ದಾರೆ. ವಿದೇಶಿಗರ ಪ್ರಾದೇಶಿಕ ನೋಂದಣಿ ವಿಭಾಗಕ್ಕೆ ಮಾಹಿತಿ ನೀಡಲಾಗಿದ್ದು ಅವರನ್ನು ಗಡೀಪಾರು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ. ಎಸ್‌ಐಆರ್ ಹಿನ್ನೆಲೆಯಲ್ಲಿ ಅಕ್ರಮವಾಗಿ ಕಟ್ಟಡ ಇನ್ನಿತರ ಕೆಲಸಗಳಿಗಾಗಿ ಬಂದು ಉಳಿಯುತ್ತಿರುವ ಕಾರ್ಮಿಕರ ಬಗ್ಗೆ ನಿಗಾ ಇಟ್ಟಿರುವ ಜನರು ಶಂಕೆಯ ಮೇರೆಗೆ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಾರೆ. ಪಶ್ಚಿಮ…

Read More

ಸೌಜನ್ಯಾ ಪ್ರಕರಣದ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಹೊರಡಿಸಲಾಗಿದ್ದ ಗಡಿಪಾರು ಆದೇಶಕ್ಕೆ ತಡೆ ನೀಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಅಪರಾಧ ಹಿನ್ನೆಲೆ ಹೊಂದಿರುವುದು ಹಾಗೂ ನಿರಂತರವಾಗಿ ಸಮಾಜದ ಶಾಂತಿ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡಿದ ಆರೋಪದ ಆಧಾರದಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಮಹೇಶ್ ಶೆಟ್ಟಿ ತಿಮರೋಡಿಯನ್ನು ಗಡಿಪಾರು ಮಾಡುವಂತೆ ಪುತ್ತೂರು ಉಪ ವಿಭಾಗಾಧಿಕಾರಿ ಈ ಹಿಂದೆ ಆದೇಶ ಹೊರಡಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಗಡಿಪಾರು ಆದೇಶಕ್ಕೆ ಮಧ್ಯಂತರ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಅರ್ಜಿಯನ್ನು ಮಾನ್ಯ ಮಾಡಲು ಒಪ್ಪಿಲ್ಲ. ಇದಕ್ಕೂ ಮುನ್ನ ಕರ್ನಾಟಕ ಹೈಕೋರ್ಟ್‌ನಲ್ಲಿಯೂ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಶ್ನಿಸಿದ್ದರು. ಆದರೆ, ಹೈಕೋರ್ಟ್ ಕೂಡ ಗಡಿಪಾರು ಆದೇಶಕ್ಕೆ ತಡೆ ನೀಡಲು ನಿರಾಕರಿಸಿತ್ತು. ಹೀಗಾಗಿ, ಹೈಕೋರ್ಟ್ ಬಳಿಕ ಇದೀಗ ಸುಪ್ರೀಂ ಕೋರ್ಟ್‌ನಲ್ಲಿಯೂ ಮಧ್ಯಂತರ ಪರಿಹಾರ…

Read More

ಮಂಗಳೂರು: ನ್ಯಾಯಾಲಯದಿಂದ 14 ಬಾರಿ ಬಂಧನ ವಾರೆಂಟ್ ಹೊರಡಿಸಿದ್ದರೂ, ವಿಳಾಸ ಬದಲಾಯಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಂಕನಾಡಿ ಠಾಣೆ ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ. ಭದ್ರಾವತಿಯ ಸಂತೆ ಮೈದಾನ ಬೋವಿ ಕಾಲನಿ ನಿವಾಸಿ ಚಂದ್ರ ಶೇಖರ್ ಲಿಂಗರಾಜ್ ಬೋವಿ (26) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಕಂಕನಾಡಿ ನಗರ ಠಾಣೆಯಲ್ಲಿ 2024ರಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದು, ಒಂದೂವರೆ ವರ್ಷದಿಂದ ತಲೆ ಮರೆಸಿಕೊಂಡಿದ್ದ. ಪ್ರದಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗೆ 14 ಬಾರಿ ದಸ್ತಗಿರಿ ವಾರೆಂಟ್ ಹೊರಡಿಸಿತ್ತು. ಆದರೆ ಆರೋಪಿ ವಿಳಾಸ ಬದಲಾಯಿಸಿ ದಸ್ತಗಿರಿಗೆ ಸಿಗದೆ ತಲೆಮರೆಸಿಕೊಂಡಿದ್ದ. ಖಚಿತ ಮಾಹಿತಿ ಮೇರೆಗೆ ಜು.11ರಂದು ಕಂಕನಾಡಿ ನಗರ ಠಾಣಾ ವಾರಂಟ್ ಸಿಬ್ಬಂದಿ ಬಾಲರಾಜ್ ಮತ್ತು ರವಿಕುಮಾರ್ ಅವರು ಬಾಳೆ ಹೊನ್ನೂರು ಬಳಿಯ ಮಲ್ಲಿಗೇಹಳ್ಳಿ ಮೈದಾಳು ಎಂಬಲ್ಲಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

Read More

ಮಂಗಳೂರಿನಲ್ಲಿ ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಹೊಸ ಮೈಲಿಗಲ್ಲಾಗಿರುವ “Mangalore IAS – A School for Civil Services” ಸಂಸ್ಥೆಯ ಉದ್ಘಾಟನಾ ಸಮಾರಂಭ ಇಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರಿನ ಸಂದೇಶ ಫೌಂಡೇಶನ್ ಆವರಣದಲ್ಲಿ ಅದ್ದೂರಿಯಾಗಿ ನಡೆಯಿತು ಕಾರ್ಯಕ್ರಮದ ಉದ್ಘಾಟನೆ ಯನ್ನು ರಿಬ್ಬನ್ ಕತ್ತಾರಿಸುವ ಮೂಲಕ , ಬಳ್ಳಾರಿ ಧರ್ಮಪ್ರಾಂತ್ಯದ ಬಿಷಪ್ ಹಾಗೂ ಸಂದೇಶ ಫೌಂಡೇಶನ್ ಅಧ್ಯಕ್ಷರಾದ ಅತೀ ವಂದನೀಯ ಧರ್ಮ ಧ್ಯಕ್ಷ ರಾದ ಡಾ ಹೆನ್ರಿ ಡಿಸೋಜಾ ಅವರು ಉದ್ಘಾಟನೆ ನೆರವೇರಿಸಿ ಆಶೀರ್ವಾದಿಸಿದರುನಂತರ ರಾಮಕೃಷ್ಣ ಮಠ ದ ಸ್ವಾಮೀಜಿ ಯುಗಾನಂದ ರವರು ದೀಪ ಪ್ರಜ್ವಲನೆ, ಆಶೀರ್ವಚನ ನೀಡಿದರು ನಂತರ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ ದ ಅಧ್ಯಕ್ಷತೆ ಯನ್ನು ಅತೀ ವಂದನೀಯ ಡಾ ಹೆನ್ರಿ ಡಿಸೋಜಾ ರವರು ವಿದ್ಯಾರ್ಥಿಗಳಿಗೆ ನಾವೂ ಎಲ್ಲಿ ಹುಟ್ಟಿದ್ದು ಮುಖ್ಯವಲ್ಲಾ ಎಲ್ಲಿಗೆ ಗುರಿ ಮುಟ್ಟುತ್ತೇವೆ ಏನೂ ಸಾಧನೆ ಮಾಡುತ್ತೇವೆ ಮತ್ತು ಎಷ್ಟ್ಟು ಸಾಧಕ ರಾಗುತ್ತೇವೆ ಅದು ಮುಖ್ಯ ಎಂದು ಸಲಹೆ ನೀಡಿದರು ಮುಖ್ಯ ಅತಿಥಿ…

Read More

ಬೆಂಗಳೂರಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಚರಣೆ ನಡೆಸಿದ್ದು ಸುಮಾರು 12.7 ಕೆಜಿ ಮೌಲ್ಯದ 4 ಕೋಟಿ 22 ಲಕ್ಷ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ ಮಾಡಿದ್ದಾರೆ. ಏರ್ಪೋರ್ಟ್ ನ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು ಬ್ಯಾಂಕಾಕ್ ನಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕನಿಂದ ಇಷ್ಟು ದೊಡ್ಡ ಮೊತ್ತದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಆರೋಪಿ ವಿರುದ್ಧ NDPS ಕಾಯ್ದೆಯ ಅಡಿ ತನಿಖೆ ನಡೆಸುತ್ತಿದ್ದಾರೆ

Read More

ಕಡಬ: ಹುಡುಗಿಯೊಬ್ಬಳ ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯ ಹಿನ್ನೆಲೆಯಲ್ಲಿ ಇಬ್ಬರು ಪರಸ್ಪರ ದೂರು ನೀಡಿದ್ದು, ಕಡಬ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.ಕಡಬ ನಿವಾಸಿ ಮೋನಿಷ್ (21) ನೀಡಿದ ದೂರಿನ ಪ್ರಕಾರ, ಜುಲೈ 10ರಂದು ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಕಾಲೇಜು ರಸ್ತೆಯ ಜಂಕ್ಷನ್ ಬಳಿ ಶರತ್, ದೀಪಕ್ ಹಾಗೂ ವಿಶ್ವನಾಥ ಎಂಬವರು ತಡೆದು ನಿಲ್ಲಿಸಿ ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ. 84/2026ರಡಿ ವಿವಿಧ ಬಿಎನ್‌ಎಸ್ ಕಲಂಗಳಡಿ ಪ್ರಕರಣ ದಾಖಲಾಗಿದೆ. ಇದೇ ಘಟನೆಗೆ ಸಂಬಂಧಿಸಿದಂತೆ ಕುಟ್ರುಪ್ಪಾಡಿ ನಿವಾಸಿ ದೀಪಕ್ (33) ಅವರು ಪ್ರತಿದೂರು ನೀಡಿ, ಮೋನಿಷ್ ತಮ್ಮನ್ನು ತಡೆದು ನಿಲ್ಲಿಸಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಸಂಬಂಧ ಅ.ಕ್ರ. 85/2026ರಡಿ ಮತ್ತೊಂದು ಪ್ರಕರಣ ದಾಖಲಾಗಿದೆ.ಎರಡೂ ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಕಡಬ ಪೊಲೀಸರು ತನಿಖೆ ನಡೆಸುತ್ತಿದ್ದು, ಮುಂದಿನ…

Read More

ಶಿಕ್ಷಕಿಯರ ಕಿರುಕುಳಕ್ಕೆ ಮನನೊಂದು ಎಂಟನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಈ ಸಂಬಂಧ ಶಾಲೆಯ ಅಡುಗೆ ಸಹಾಯಕಿ ಹಾಗೂ ಮೂವರು ಶಿಕ್ಷಕಿಯರ ವಿರುದ್ಧ ಇದೀಗ ಎಫ್‌ಐಆರ್ (FIR) ದಾಖಲಾಗಿದೆ. ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಸುಜಾತ ಈರಪ್ಪ, ಸಹ ಶಿಕ್ಷಕಿಯರಾದ ಕವಿತಾ, ರೂಪಾ ಮತ್ತು ಅಡುಗೆ ಸಹಾಯಕಿ ಕಮಲಮ್ಮ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಇವರೆಲ್ಲರೂ ಸೇರಿ ಮೃತ ವಿದ್ಯಾರ್ಥಿನಿ ಮಧುಶ್ರೀಗೆ ಮಾನಸಿಕವಾಗಿ ತೀವ್ರ ಕಿರುಕುಳ ನೀಡುತ್ತಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆತ್ಮಹತ್ಯೆಗೆ ಶರಣಾಗುವ ಮುನ್ನ ವಿದ್ಯಾರ್ಥಿನಿ ಮಧುಶ್ರೀ, ಶಾಲೆಯ ಇತರ ಕೆಲವು ವಿದ್ಯಾರ್ಥಿಗಳು ತನಗೆ ನೀಡುತ್ತಿದ್ದ ಮಾನಸಿಕ ಕಿರುಕುಳದ ಬಗ್ಗೆ ವಿವರವಾದ ಪತ್ರವೊಂದನ್ನು ಬರೆದಿದ್ದಳು. ಈ ಪತ್ರವನ್ನು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗೆ (PDO) ನೀಡಿ ನ್ಯಾಯ ಕೇಳಲು ನಿರ್ಧರಿಸಿದ್ದ ಆಕೆ, ಅದನ್ನು ತನ್ನ ಶಾಲಾ ಬ್ಯಾಗ್‌ನಲ್ಲಿ ಇಟ್ಟುಕೊಂಡಿದ್ದಳು. ಆದರೆ, ಈ ವಿಷಯ ಶಾಲೆಯ ಶಿಕ್ಷಕಿಯರ ಗಮನಕ್ಕೆ ಬಂದ ತಕ್ಷಣ,…

Read More

ಷೇರು ಮಾರುಕಟ್ಟೆ ಹೂಡಿಕೆಯಿಂದ ಭಾರೀ ಲಾಭದ ಭರವಸೆ ನೀಡಿ ಜನರಿಗೆ ವಂಚಿಸಿದ ಆರೋಪದ ಮೇಲೆ ಉಡುಪಿ ಕೊಳಲಗಿರಿಯ ಕುಕ್ಕಿಕಟ್ಟೆಯ ದೀಪಿಕಾ ಮನೋಜ್ ಶೆಟ್ಟಿ ಎಂಬ ಮಹಿಳೆಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಚೆಕ್ ಬೌನ್ಸ್ ಮತ್ತು ಆರ್ಥಿಕ ವಂಚನೆಗೆ ಸಂಬಂಧಿಸಿದ ಆರೋಪಗಳೂ ಇವೆ. ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ದೂರಿನ ಪ್ರಕಾರ, ಆರೋಪಿಯು ಹೂಡಿಕೆಯ ಮೇಲೆ 10% ರಿಟರ್ನ್ ನೀಡುವುದಾಗಿ ಭರವಸೆ ನೀಡಿ ಒಬ್ಬ ಮಹಿಳೆ ಮತ್ತು ಆಕೆಯ ಸಹೋದರನನ್ನು ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವಂತೆ ಮನವೊಲಿಸಿದ್ದಾಳೆ. ಈ ಭರವಸೆಗಳನ್ನು ನಂಬಿ ಸಂತ್ರಸ್ತರು ಒಟ್ಟು 10 ಲಕ್ಷ ರೂ. ಕಳೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮುಂಬಯಿಯ ಕಾಂದಿವಲಿ ಪಶ್ಚಿಮದಲ್ಲಿ ನಡೆದಿದೆ. ಸುಮಾರು 60 ವರ್ಷ ವಯಸ್ಸಿನ ರಜನಿ ದಯಾನಂದ ಶೆಟ್ಟಿ ಅವರು ನೀಡಿದ ದೂರಿನ ಆಧಾರದ ಮೇಲೆ ಕಾಂದಿವಲಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

Read More

ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಖಾಸಗಿ ಬಸ್‌ನ ಕಂಡಕ್ಟರ್‌ನನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಯನ್ನು ಇರ್ಫಾನ್ (32), ತಂದೆ ಅಬುಸಾಲಿ, ಮೂಲ ನಿವಾಸಿ ಕಲ್ಲೇರಿ ಮನೆ, ಉಪ್ಪಿನಂಗಡಿ, ಪ್ರಸ್ತುತ ಅಬುಬಕರ್ ಅವರ ಬಾಡಿಗೆ ಮನೆ, ಕರ್ವೇಲು, ಉಪ್ಪಿನಂಗಡಿ ನಿವಾಸಿ ಎಂದು ಗುರುತಿಸಲಾಗಿದೆ. ಆರೋಪಿ ಮಂಗಳೂರು–ವಿಟ್ಲ ಮಾರ್ಗದ ಸೆಲೇನ ಖಾಸಗಿ ಬಸ್‌ನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದಾನೆ. ಪೊಲೀಸರ ಮಾಹಿತಿ ಪ್ರಕಾರ, ಜುಲೈ 9, 2026ರಂದು ಸಂಜೆ ಸುಮಾರು 5 ಗಂಟೆ ವೇಳೆಗೆ, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು ಆರೋಪಿ ತನ್ನ ಗುಪ್ತಾಂಗವನ್ನು ಪ್ರದರ್ಶಿಸಿ ಅಸಭ್ಯ ಸನ್ನೆ ಮಾಡಿದ್ದಲ್ಲದೆ, “ಹಿಂದಿನ ಸೀಟಿಗೆ ಬಾ” ಎಂದು ಕರೆದು ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಈ ಸಂಬಂಧ ವಿದ್ಯಾರ್ಥಿನಿಯರ ದೂರಿನ ಮೇರೆಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಜುಲೈ 10ರಂದು ಆರೋಪಿಯನ್ನು ಬಂಧಿಸಿ ಹೆಚ್ಚಿನ ತನಿಖೆ…

Read More

ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಬಾಂಗ್ಲಾದೇಶದ ಪ್ರಜೆಗಳು ಅಕ್ರಮವಾಗಿ ವಾಸ್ತವ್ಯವಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಮಂಗಳೂರು ನಗರ ಪೊಲೀಸರು ಜುಲೈ 9, 2026ರಂದು ದಾಳಿ ನಡೆಸಿದರು. ದಾಳಿಯ ವೇಳೆ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ ಒಟ್ಟು 54 ಕಾರ್ಮಿಕರ ಗುರುತಿನ ದಾಖಲೆಗಳನ್ನು ಪರಿಶೀಲಿಸಲಾಯಿತು. ಸುದೀರ್ಘ ಪರಿಶೀಲನೆಯ ಬಳಿಕ ಅವರಲ್ಲಿ ಎಂಟು ಮಂದಿ ಬಾಂಗ್ಲಾದೇಶದ ಪ್ರಜೆಗಳು ಅಕ್ರಮವಾಗಿ ಭಾರತವನ್ನು ಪ್ರವೇಶಿಸಿ ವಾಸ್ತವ್ಯ ಹೂಡಿರುವುದು ದೃಢಪಟ್ಟಿತು. ಬಂಧಿತರನ್ನು ಈ ಕೆಳಕಂಡಂತೆ ಗುರುತಿಸಲಾಗಿದೆ: ಎಂ.ಡಿ. ಮುಕ್ತಾರ್ ಅಲಿ (36), ಲೇಟ್ ಲಾಲ್ ಮಹಮ್ಮದ್ ಅವರ ಪುತ್ರ, ಉತ್ತರ ಕನಪಾರಾ ಚಾರ್, ಆಶರಿಯಾದಹ, ಗೋದಾಗರಿ, ರಾಜಶಾಹಿ ವಿಭಾಗ, ಬಾಂಗ್ಲಾದೇಶ. ಎಂ.ಡಿ. ರಕೀಬುರ್ ಹೊಸೇನ್ (44), ಎಂ.ಡಿ. ಮತಿಯುರ್ ರಹಮಾನ್ ಅವರ ಪುತ್ರ, ಮತಿಕಟಾ, ಗೋದಾಗರಿ, ರಾಜಶಾಹಿ, ಬಾಂಗ್ಲಾದೇಶ. ಎಂ.ಡಿ. ಅಜರುಲ್ ಇಸ್ಲಾಂ (36), ಎಂ.ಡಿ. ಅಕ್ರಮುಲ್ ಹಕ್ ಅವರ ಪುತ್ರ, ಮತಿಕಟಾ, ಗೋದಾಗರಿ, ರಾಜಶಾಹಿ, ಬಾಂಗ್ಲಾದೇಶ. ಎಂ.ಡಿ. ಜಾಹಿದ್ ಹೊಸೇನ್…

Read More