Author: main-admin

ಎಂಸಿಸಿ ಬ್ಯಾಂಕ್, 31 ಮಾರ್ಚ್ 2026ಕ್ಕೆ ಅಂತ್ಯಗೊಳ್ಳುವ ಆರ್ಥಿಕ ವರ್ಷದಲ್ಲಿ ಎಲ್ಲಾ ವ್ಯವಹಾರ ಮಾನದಂಡಗಳಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಈ ವರ್ಷ ತನ್ನ 114ನೇ ವರ್ಷದ ಸೇವೆಯನ್ನು ಪೂರೈಸಲಿದೆ. ಬ್ಯಾಂಕ್ ಈ ಆರ್ಥಿಕ ವರ್ಷದಲ್ಲಿ ರೂ. 13 ಕೋಟಿ ಲಾಭವನ್ನು ದಾಖಲಿಸಿದೆ. ನಿವ್ವಳ ಎನ್‌ಪಿಎ (Net NPA) ಇಳಿಕೆಗೆ ನಿರಂತರ ಪ್ರಯತ್ನ ನಡೆಸಿ, ಅದನ್ನು ಒಟ್ಟು ಮುಂಗಡಗಳ 1.25% ಮಟ್ಟಕ್ಕೆ ತಗ್ಗಿಸಲು ಯಶಸ್ವಿಯಾಗಿದೆ. ಒಟ್ಟು ವ್ಯವಹಾರ ರೂ.1525 ಕೋಟಿಗೆ ತಲುಪಿದ್ದು, 23% ವೃದ್ಧಿ ಸಾಧಿಸಿದೆ. 2018ನೇ ವರ್ಷದಲ್ಲಿ ಬ್ಯಾಂಕಿನ ಚುಕ್ಕಾಣಿ ಹಿಡಿದ ಪ್ರಸ್ತುತ ಆಡಳಿತ ಮಂಡಳಿಯ ಅವಧಿಯಲ್ಲಿ ರೂ.500 ಕೋಟಿ ಇದ್ದ ಬ್ಯಾಂಕಿನ ಒಟ್ಟು ವ್ಯವಹಾರವು ಕಳೆದ ಏಳೂವರೆ ವರ್ಷದಲ್ಲಿ ಮೂರು ಪಟ್ಟು ಹೆಚ್ಚಾಗಿದೆ. ಇದು 114 ವರ್ಷದ ಇತಿಹಾಸವಿರುವ ಬ್ಯಾಂಕಿನ ಚರಿತ್ರೆಯಲ್ಲಿಯೇ ದಾಖಲೆಯಾಗಿದೆ. ಬ್ಯಾಂಕಿನ ನೆಟ್‌ವರ್ತ್ ರೂ.83.76 ಕೋಟಿಯಿಂದ ರೂ.91.80 ಕೋಟಿಗೆ ಏರಿಕೆಯಾಗಿದೆ. ಬ್ಯಾಂಕ್ ಆರ್ಥಿಕ ವರ್ಷದಲ್ಲಿ ನಿಗದಿಪಡಿಸಿದ್ದ ಠೇವಣಿಗಳು ಹಾಗೂ ಸಾಲಗಳ ಗುರಿಗಳನ್ನು ಯಶಸ್ವಿಯಾಗಿ ಸಾಧಿಸಿದೆ. ಆರ್ಥಿಕ ವರ್ಷದಲ್ಲಿ…

Read More

ಬಂಟ್ವಾಳ: ದ್ವಿಚಕ್ರ ವಾಹನ ಕಳ್ಳತನ ಪ್ರಕರಣವನ್ನು ಭೇದಿಸಿಧ ಬಂಟ್ವಾಳ ಪಟ್ಟಣ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಕದ್ದ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರ ಪ್ರಕಾರ, ಈ ಘಟನೆ ಮಾರ್ಚ್ 21, 2026 ರಂದು ಪರ್ಲಿಯಾದಲ್ಲಿರುವ ವಸತಿಗೃಹದ ಶೆಡ್‌ನಲ್ಲಿ ನಿಲ್ಲಿಸಿದ್ದ ಸ್ಕೂಟರ್ ಅನ್ನು ಕಳವು ಮಾಡಲಾಗಿತ್ತು.ಬಿಎನ್ಎಸ್, 2023 ರ ಸೆಕ್ಷನ್ 303(2) ರ ಅಡಿಯಲ್ಲಿ ಅಪರಾಧ ಸಂಖ್ಯೆ 37/2026 ಎಂದು ಪ್ರಕರಣ ದಾಖಲಿಸಲಾಗಿದ್ದು, ಬಂಟ್ವಾಳ ಪಟ್ಟಣ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತನಿಖೆಯ ವೇಳೆ ಬಂಟ್ವಾಳದ ಸಜೀಪ್ ಮುನ್ನೂರು ನಿವಾಸಿ ಹಸನ್ ಬಾವ (55) ಮತ್ತು ಬಂಟ್ವಾಳದ ಬಿ ಮೂಡ ನಿವಾಸಿ ಮೊಹಮ್ಮದ್ ಇರ್ಷಾದ್ (37) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.ಕದ್ದ ಸ್ಕೂಟರ್ ಸುಮಾರು 50,000 ರೂ. ಮೌಲ್ಯದ್ದಾಗಿದ್ದು, ಆರೋಪಿಗಳಿಂದ ಅದನ್ನು ವಶಪಡಿಸಿಕೊಳ್ಳಲಾಗಿದೆ.

Read More

ಮಂಗಳೂರು : ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ 112 ವರ್ಷಗಳ ಸಮೃದ್ಧ ಪರಂಪರೆಯನ್ನು ಹೊಂದಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) 2025-26ನೇ ಸಾಲಿನಲ್ಲಿ ದಾಖಲೆಯ ಸಾಧನೆ ಮಾಡಿದೆ. ಆಧುನಿಕ ಬ್ಯಾಂಕಿಂಗ್ ವ್ಯವಸ್ಥೆಗಳನ್ನು ಅಳವಡಿಸಿಕೊಂಡು ದೇಶಕ್ಕೆ ಮಾದರಿಯಾಗಿರುವ ಈ ಬ್ಯಾಂಕ್, ರೂ. 20,226.19 ಕೋಟಿ ಒಟ್ಟು ವ್ಯವಹಾರ ದಾಖಲಿಸಿ ಹೊಸ ಇತಿಹಾಸ ನಿರ್ಮಿಸಿದೆ. ದಾಖಲೆ ಲಾಭಬ್ಯಾಂಕ್ 2025-26ನೇ ಆರ್ಥಿಕ ವರ್ಷದಲ್ಲಿ ರೂ. 131.14 ಕೋಟಿ ಲಾಭ ಗಳಿಸಿದ್ದು, ಇದು ಕಳೆದ ವರ್ಷದ ರೂ.110.41 ಕೋಟಿಗೆ ಹೋಲಿಸಿದರೆ ಶೇ.18.78ರಷ್ಟು ಹೆಚ್ಚಾಗಿದೆ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗಳಲ್ಲಿ ಇದು ಸಾರ್ವಕಾಲಿಕ ದಾಖಲೆ ಲಾಭವಾಗಿದೆ. ಅನುತ್ಪಾದಕ ಆಸ್ತಿ (NPA) ಪ್ರಮಾಣವು ಶೇ.2.42ರಿಂದ ಶೇ.2.21ಕ್ಕೆ ಇಳಿಕೆಯಾಗಿರುವುದು ಬ್ಯಾಂಕಿನ ಆರ್ಥಿಕ ಶಕ್ತಿಯನ್ನು ಸೂಚಿಸುತ್ತದೆ ಠೇವಣಿ ಮತ್ತು ಸಾಲ ವಿತರಣೆಬ್ಯಾಂಕ್ ತನ್ನ 113 ಶಾಖೆಗಳ ಮೂಲಕ ರೂ. 9,264.64 ಕೋಟಿ ಠೇವಣಿ ಸಂಗ್ರಹಿಸಿದ್ದು, ಇದು ಕಳೆದ ಸಾಲಿಗಿಂತ ಶೇ.17.53ರಷ್ಟು ಹೆಚ್ಚಾಗಿದೆ.ಮುಂಗಡ ಸಾಲವಾಗಿ ರೂ. 9,706.75 ಕೋಟಿ ವಿತರಿಸಿದ್ದು, ಕೃಷಿ…

Read More

ಬೆಳ್ತಂಗಡಿ: ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಇಂದು ಮಧ್ಯಾಹ್ನ ಪತ್ತೆಯಾಗಿದೆ. ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಇಂದು ಮಧ್ಯಾಹ್ನ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ಮಹಜರು ನಡೆಸಿ ಮೃತದೇಹವನ್ನು ಮಹಜರು ನಡೆಸಿ ಮಂಗಳೂರು ಆಸ್ಪತ್ರೆಗೆ ಸಾಗಿಸಿದ್ದಾರೆ. ಮೇಲ್ನೋಟಕ್ಕೆ ಅಪರಿಚಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಇರಾನ್ ಇಸ್ರೇಲ್ ಯುದ್ಧದ ಪರಿಣಾಮ ರಾಜ್ಯದ ಹಲವೆಡೆ ಆಟೋಗಳಿಗೆ ಗ್ಯಾಸ್ ಪೂರೈಕೆಯಲ್ಲಿ ಅಭಾವ ಉಂಟಾಗಿದ್ದು, ಈ ಹಿನ್ನೆಲೆ ಚಾಲಕರು ಪರದಾಟ ನಡೆಸುತ್ತಿದ್ದಾರೆ. ಈ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಕೇಂದ್ರ ಸರ್ಕಾರಕ್ಕೆ ನಾವು ಕೂಡ ಬೇಡಿಕೆ ಇಟ್ಟಿದ್ದೇವೆ. ಕಾಳ ಸಂತೆಯಲ್ಲಿ ಸಿಲಿಂಡರ್ ಏನಾದರು ಮಾರಾಟ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ವಿಚಾರವಾಗಿ ಮಾತನಾಡಿದ ಅವರು ಯುದ್ಧದಿಂದ ತೊಂದರೆ ಆಗುತ್ತಿದೆ ಅನ್ನುವುದು ಎಲ್ಲರಿಗೂ ಗೊತ್ತು. ಆದರೆ ನಮಗೆ ಕೊಡಬೇಕಾಗಿರುವುದನ್ನು ಕೊಡಬೇಕು ಅಲ್ವಾ? ಎಲ್ಲಾ ರಾಜ್ಯಗಳಿಗೆ ಕೊಟ್ಟಂತೆ ನಮಗೂ ಪೂರೈಕೆ ಮಾಡಬೇಕು. ನಮಗೂ ಸಿಲಿಂಡರ್ ಹಾಗು ತೈಲ ಬೇಕು. ಆದರೆ ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

Read More

ಉಡುಪಿ ಜಿಲ್ಲೆಯ ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪೊಲೀಸರು ಪತ್ತೆಹಚ್ಚಿ ಮೂವರನ್ನು ಬಂಧಿಸಿದ್ದಾರೆ. ಮುಸ್ತಾಕ್ ಹುಸೇನ್ ಸಾಬ್ ನದಾಫ್ (29), ಸಲೀಂ ಹುಸೇನ್ ಸಾಬ್ ನದಾಫ್ (33) ಹಾಗೂ ನದೀಂ ಅಬ್ದುಲ್ ಖಾದರ್ (34) ಬಂಧಿತರು. ಏಪ್ರಿಲ್ 5ರಂದು ಮುಂಜಾನೆ ಸುಮಾರು 5 ಗಂಟೆಗೆ ಪೊಲೀಸರು ಹೊಸಂಗಡಿ ಚೆಕ್‌ಪೋಸ್ಟ್‌ನಲ್ಲಿ ವಾಹನ ತಪಾಸಣೆ ನಡೆಸುವಾಗ, ಹುಲಿಕಲ್ ಘಾಟಿ ದಿಕ್ಕಿನಿಂದ ಬರುತ್ತಿದ್ದ ಟಾಟಾ ಇಂಟ್ರಾ ವಾಹನವನ್ನು ತಡೆದು ಪರಿಶೀಲಿಸಿದಾಗ ಎರಡು ಎತ್ತುಗಳನ್ನು ಹಿಂಸಾತ್ಮಕವಾಗಿ ಕಟ್ಟಿ ಸಾಗಿಸಲಾಗುತ್ತಿರುವುದು ಬೆಳಕಿಗೆ ಬಂದಿದೆ. ಚಾಲಕರನ್ನು ವಿಚಾರಿಸಿದಾಗ, ಜಾನುವಾರುಗಳನ್ನು ವಧೆಗಾಗಿ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ದೊರಕಿದೆ. ಜಾನುವಾರುಗಳ ಅಂದಾಜು ಮೌಲ್ಯ ರೂ.1 ಲಕ್ಷವಾಗಿದ್ದು, ವಾಹನದ ಮೌಲ್ಯ ರೂ.4 ಲಕ್ಷ ಎಂದು ಅಂದಾಜಿಸಲಾಗಿದೆ. ಈ ವೇಳೆ ಅದೇ ದಿಕ್ಕಿನಿಂದ ಟೊಯೋಟಾ ಇಟಿಯೊಸ್ ಕಾರು ಅಕ್ರಮ ಸಾಗಾಟಕ್ಕೆ ಬೆಂಗಾವಲಾಗಿ ಬಂದಿರುವ ಶಂಕೆ ವ್ಯಕ್ತವಾಗಿದ್ದು, ಕಾರನ್ನು ತಡೆದು ನಿಲ್ಲಿಸಿದಾಗ, ಕಾರಿನಲ್ಲಿದ್ದ ಇಬ್ಬರು ವ್ಯಕ್ತಿಗಳು ಓಡಿ ಪರಾರಿಯಾಗಿದ್ದು,…

Read More

ಮಂಗಳೂರು: ವಿಶ್ವವಿದ್ಯಾನಿಲಯ, ರಾಷ್ಟ್ರೀಯ ಸೇವಾ ಯೋಜನೆ, ಪಿ ಎ ಪ್ರಥಮ ದರ್ಜೆ ಕಾಲೇಜು ನಡುಪದವು ಇವರ ವತಿಯಿಂದ ಕರ್ನಾಟಕ ಪಬ್ಲಿಕ್ ಸ್ಕೂಲ್, ಮೊಂಟೆಪದವಿನಲ್ಲಿ “ನನ್ನ ಭಾರತಕ್ಕಾಗಿ ಯುವ ಜನತೆ ಡಿಜಿಟಲ್ ಸಾಕ್ಷರತೆಗಾಗಿ ಯುವ ಜನತೆ” ಎಂಬ ಧ್ಯೇಯ ವಾಕ್ಯದಡಿಯಲ್ಲಿ ನಡೆಯಲಿರುವ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ 2025-26ಕ್ಕೆ ಎಪ್ರಿಲ್ 4, 2026ರಂದು ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಡಾ. ಶೇಷಪ್ಪ ಕೆ. ಅಮೀನ್ ಕಾರ್ಯಕ್ರಮ ಸಂಯೋಜನಾಧಿಕಾರಿ, ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯ, ಉದ್ಘಾಟಿಸಿ ಶುಭಹಾರೈಸಿದರು. ಪಿ ಎ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರ್ಫ್ರಾಜ್ ಜೆ ಹಾಸಿಂ ಅಧ್ಯಕ್ಷತೆ ವಹಿಸಿದ್ದರು. ಡಾ. ಇಕ್ಬಾಲ್, ನಿರ್ದೇಶಕರು, ದೈಹಿಕ ಶಿಕ್ಷಣ ವಿಭಾಗ, ಪಿ. ಎ. ಕಾಲೇಜ್ ಆಫ್ ಇಂಜಿನಿಯರಿಂಗ್, ಶ್ರೀ ಸತ್ಯನಾರಾಯಣ ಭಟ್ ಎಡಂಬಳೆ, ಪ್ರಗತಿಪರ ಕೃಷಿಕರು, ಮೊಂಟೆಪದವು, ಶ್ರೀಮತಿ ಪ್ರಮೀಳಾ ಕೆ. ಬಿ., ಮುಖ್ಯೋಪಾಧ್ಯಾಯರು ಕರ್ನಾಟಕ ಪಬ್ಲಿಕ್ ಸ್ಕೂಲ್, ಮೊಂಟೆಪದವು, ಜ। ಮಹಮ್ಮದ್‌ ಹನೀಫ್ ಚಂದಹಿತ್ಲು, ಅಧ್ಯಕ್ಷರು, ಶಾಲಾ…

Read More

ಉಡುಪಿ: ಜಿಲ್ಲೆಯ ಕಾರ್ಕಳ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯ ರೌಡಿ ಆಸಾಮಿ ಗಣೇಶ್ ಪೂಜಾರಿ (48) ಅವರನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ. ಪೊಲೀಸ್ ಅಧೀಕ್ಷಕರ ವರದಿಯ ಮೇರೆಗೆ, ಉಡುಪಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳು ಏಪ್ರಿಲ್ 4, 2026 ರಂದು ಗೂಂಡಾ ಕಾಯ್ದೆಯಡಿ ಬಂಧನ ಆದೇಶ ಹೊರಡಿಸಿದ್ದಾರೆ. ಬಂಧಿತ ಗಣೇಶ್ ಪೂಜಾರಿ ಅವರು ಕಾರ್ಕಳ ತಾಲೂಕಿನ ಕೌಡೂರು ಗ್ರಾಮದ ಸದ್ಗುಣ ನಿವಾಸದವರು. ಆರೋಪಿಯ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ 4, ದರೋಡೆ 1, ಹಲ್ಲೆ 3, ಅಕ್ರಮ ಕೂಟ 1, ಜೂಜಾಟ 1 ಸೇರಿದಂತೆ ಒಟ್ಟು 11 ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳಲ್ಲಿ 1ರಲ್ಲಿ ಶಿಕ್ಷೆ ವಿಧಿಸಲಾಗಿದ್ದು, 7 ಪ್ರಕರಣಗಳಲ್ಲಿ ಖುಲಾಸೆಗೊಂಡಿದ್ದಾರೆ. ಒಂದು ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದು, ಉಳಿದ 2 ಪ್ರಕರಣಗಳು ತನಿಖೆಯಲ್ಲಿವೆ. ಬಂಧಿತನನ್ನು ಕಲಬುರ್ಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಅಧಿಕಾರಿಗಳು ಆದೇಶಿಸಿದ್ದಾರೆ.

Read More

ಬಂಟ್ವಾಳ: 2020ರಲ್ಲಿ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 7 ವರ್ಷಗಳ ಶಿಕ್ಷೆ ಹಾಗೂ ₹70,000 ದಂಡ ವಿಧಿಸಿ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ದಿನಾಂಕ 10-11-2020 ರಂದು ಮೇಲ್ಕಾರ್ ಬಸ್ ನಿಲ್ದಾಣದ ಬಳಿ ಕಾರಿನಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ, ಆಗಿನ ಬಂಟ್ವಾಳ ನಗರ ಠಾಣೆಯ ಪೊಲೀಸ್ ನಿರೀಕ್ಷಕರಾದ ಚೆಲುವರಾಜ್ ಅವರ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ, ₹49,000 ಮೌಲ್ಯದ 1.480 ಕೆ.ಜಿ ಗಾಂಜಾ ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು.ಈ ಸಂಬಂಧ ಬಂಟ್ವಾಳ ನಗರ ಠಾಣೆಯಲ್ಲಿ ಅಕ್ರಮ ಸಂಖ್ಯೆ 126/2020ರಂತೆ ಪ್ರಕರಣ ದಾಖಲಾಗಿತ್ತು. ಬಳಿಕ ಆಗಿನ ವೃತ್ತ ನಿರೀಕ್ಷಕರಾದ ಟಿ.ಡಿ. ನಾಗರಾಜ್ ಅವರು ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಸವರಾಜ್ ಅವರು, ಆರೋಪಿತ ಮಂಗಳೂರು ಬಂದರು ನಿವಾಸಿ ಟಿ.ಪಿ.…

Read More

ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಪತ್ತೆಹಚ್ಚಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು ₹14 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ನಗದು ವಶಪಡಿಸಿಕೊಳ್ಳಲಾಗಿದೆ. ಮಾರ್ಚ್ 6, 2026 ರಂದು ಸಂಜೆ 7:45ರಿಂದ ರಾತ್ರಿ 10:15ರ ನಡುವೆ, ಹೇರಾಡಿ ಗ್ರಾಮದ ಶ್ರೀ ಸುಬ್ರಹ್ಮಣ್ಯ ಪ್ರದೇಶದ ನಿವಾಸಿ 77 ವರ್ಷದ ಮಂಜುನಾಥ ರಾವ್ ಅವರು ತಮ್ಮ ಪತ್ನಿಯೊಂದಿಗೆ ಮನೆಗೆ ಬೀಗ ಹಾಕಿ ಬಾರಕೂರಿನಲ್ಲಿ ನಡೆಯುತ್ತಿದ್ದ ನಾಗಮಂಡಲ ಕಾರ್ಯಕ್ರಮಕ್ಕೆ ತೆರಳಿದ್ದರು. ಈ ವೇಳೆ ಅಪರಿಚಿತರು ಮನೆಯ ಮುಂದಿನ ಬಾಗಿಲು ಒಡೆದು ಒಳನುಗ್ಗಿ, ಬೆಡ್ ರೂಮ್‌ನಲ್ಲಿದ್ದ ಗೋಡ್ರೇಜ್ ಅಲಮಾರಿಯನ್ನು ಒಡೆದು ಚಿನ್ನಾಭರಣ ಹಾಗೂ ನಗದು ಕಳವು ಮಾಡಿಕೊಂಡಿದ್ದರು. ಕಳುವಾದ ವಸ್ತುಗಳಲ್ಲಿ ಸುಮಾರು 47 ಗ್ರಾಂ ಚಿನ್ನದ ಸರ-ಪೆಂಡೆಂಟ್, 32 ಗ್ರಾಂ ಬಳೆಗಳು, 6 ಗ್ರಾಂ ಬೆಂಡೋಲೆ, 4 ಗ್ರಾಂ ಉಂಗುರ, 3 ಗ್ರಾಂ ಬೆಂಡೋಲೆ, 250 ಗ್ರಾಂ ಬೆಳ್ಳಿಯ ವಸ್ತುಗಳು ಹಾಗೂ ₹49,000 ನಗದು ಸೇರಿದ್ದು, ಒಟ್ಟು ಮೌಲ್ಯ…

Read More