ಧರ್ಮಸ್ಥಳ ಸೌಜನ್ಯಾ ಹತ್ಯೆ ಹಾಗೂ ಹತ್ಯಾಚಾರ ಪಕರಣ ಕುರಿತಂತೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಇಂದು (ಸೆಪ್ಟೆಂಬರ್ 08) ಹೈಕೋರ್ಟ್ ಕೈಗೆತ್ತಿಕೊಳ್ಳಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಧರ್ಮಸ್ಥಳ ಗ್ರಾಮದ ಮಣ್ಣಸಂಕದಲ್ಲಿ ನಡೆದ ಉಜಿರೆ ಎಸ್.ಡಿ.ಎಂ.ಕಾಲೇಜು ವಿದ್ಯಾರ್ಥಿನಿ, ಪಾಂಗಳ ನಿವಾಸಿ ಚಂದಪ್ಪ ಗೌಡ ಮತ್ತು ಕುಸುಮಾವತಿ ದಂಪತಿಯ ಪುತ್ರಿ ಸೌಜನ್ಯಾ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆ ನಡೆಸಲು ಸರಕಾರಕ್ಕೆ ನಿರ್ದೇಶನ ನೀಡುವಂತೆ ಆಗ್ರಹಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಲಿದೆ. ಸೌಜನ್ಯಳನ್ನು ಅಪಹರಿಸಿ ಅತ್ಯಾಚಾರ ನಡೆಸಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ, ಸಿಐಡಿ ಮತ್ತು ಸಿಬಿಐಯಿಂದ ತನಿಖೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಸಂತೋಷ್ ರಾವ್ ನಿರಪರಾಧಿ ಎಂದು ಸಿಬಿಐ ವಿಶೇಷ ನ್ಯಾಯಾಲಯ ಇತ್ತೀಚೆಗೆ ತೀರ್ಪು ನೀಡಿತ್ತು. ಪ್ರಕರಣದ ನೈಜ ಅಪರಾಧಿಗಳನ್ನು ಬಂಧಿಸಬೇಕು. ತನಿಖೆಯ ಆರಂಭದಲ್ಲಿ ಲೋಪ ಎಸಗಿರುವ ತನಿಖಾಧಿಕಾರಿ ಮತ್ತು ವೈದ್ಯಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹ…
Author: main-admin
ಪುತ್ತೂರಿನಿಂದ ಕಾಣಿಯೂರು ಕಡೆಗೆ ಬರುವ ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ಯುವಕನೋರ್ವ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಮಹಿಳೆಯೋರ್ವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಟ್ವೀಟರ್ ಖಾತೆಗೆ ಟ್ವೀಟ್ ಮೂಲಕ ದೂರಿದ್ದು, ಇದಕ್ಕೆ ಸ್ಪಂದಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಯುವಕನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆಂದು ತಿಳಿದು ಬಂದಿದೆ.ಮಹಿಳೆ ಪುತ್ತೂರಿನಿಂದ ನಿಂತಿಕಲ್ಲಿಗೆ ಬಸ್ಸಲ್ಲಿ ಸಂಜೆ ಬರುತ್ತಿರುವಾಗ ಯುವಕನೋರ್ವ ಅನುಚಿತವಾಗಿ ವರ್ತಿಸಿ ಕಿರುಕುಳ ನೀಡಿದ್ದು ಈ ಬಗ್ಗೆ ಟ್ವೀಟ್ ಮೂಲಕ ದೂರು ನೀಡಿದ್ದರು. ಆ ಯುವಕ ಫೋನ್ ನಂಬರನ್ನು ಮಹಿಳೆಗೆ ನೀಡಿದ್ದು ಬಳಿಕ ಸವಣೂರಲ್ಲಿ ಬಸ್ಸಿನಿಂದ ಇಳಿದು ಹೋಗಿದ್ದರು.ಈ ಬಗ್ಗೆ ಮಹಿಳೆಯಿಂದ ದೂರನ್ನು ಸ್ವೀಕರಿಸಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿರುತ್ತದೆ. ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಟ್ವಿಟರ್ ಖಾತೆಯಿಂದ ಪ್ರತಿಕ್ರಿಯಿಸಿದ್ದಾರೆ.
ಮಂಗಳೂರು: ಕರ್ನಾಟಕ ಸರ್ಕಾರದ ಘನವೆತ್ತ ರಾಜ್ಯಪಾಲರಾದ ತಾವರ್ ಚಂದ್ ಗೆಹ್ಲೋಟ್ ಅವರು ಸೆ.8ರಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ ವಿವರ ಇಂತಿದೆ:ಸೆ.8 ರ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. 11.25ಕ್ಕೆ ಸಕ್ರ್ಯೂಟ್ ಹೌಸ್ ಗೆ ತೆರಳಿ ವಾಸ್ತವ್ಯ ಮಾಡುವರು. ನಂತರ ಅಲ್ಲಿಂದ 12 ಗಂಟೆಗೆ ನಗರದ ಟಿ.ಎಂ.ಎ. ಪೈ ಕನ್ವೆನ್ಶನ್ ಸಭಾಂಗಣದಲ್ಲಿ ದಿ ಫಿಸಿಯೋಥೆರಪಿ ಕಾನ್ಫರೆನ್ಸ್ ಮ್ಯಾಂಗಳೂರ್ ಫಿಸಿಯೋಕಾನ್ 2023 ಕಾರ್ಯಕ್ರಮ ಉದ್ಘಾಟಿಸುವರು. ಮಧ್ಯಾಹ್ನ 1 ಗಂಟೆಗೆ ನಗರದ ಹೋಟೆಲ್ ತಾಜ್ ವಿವಂತಾದಲ್ಲಿ ವಾಸ್ತವ್ಯ ಮಾಡುವರು. 1.30ಕ್ಕೆ ಖಾಸಗಿ ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳ ಆಡಳಿತದ ಅಧಿಕಾರಿಗಳೊಂದಿಗೆ ಸಂವಾದ ನಡೆಸುವರು. ಸಂಜೆ 5.25ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು.
ಪುತ್ತೂರು : ಪುತ್ತೂರು ಶಾಸಕ ಅಶೋಕ್ ರೈ ಬೆಂಬಲಿಗ ಗ್ರಾಮಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್ ರೈ ಮನೆಗೆ ದರೋಡೆಕೋರರು ನುಗ್ಗಿ ಮನೆ ಮಂದಿಯನ್ನು ಕಟ್ಟಿ ಹಾಕಿ ನಗ-ನಗದು ದರೋಡೆ ಮಾಡಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮಪಂಚಾಯತ್ ವ್ಯಾಪ್ತಿಯ ಕುದ್ಕಾಡಿ ಎಂಬಲ್ಲಿ ನಡೆದಿದೆ. ಬಡಗನ್ನೂರು ಗ್ರಾಮಪಂಚಾಯತ್ ನ ಮಾಜಿ ಸದಸ್ಯ ಗುರುಪ್ರಸಾದ್ ರೈ ಎಂಬವರ ಮನೆಯಲ್ಲಿ ಈ ದರೋಡೆ ನಡೆದಿದ್ದು ಸೆಪ್ಟೆಂಬರ್ 7 ರ ಮುಂಜಾನೆ ಸುಮಾರು 2 ಗಂಟೆಗೆ ಮನೆಯ ಬಾಗಿಲು ಒಡೆದು ನುಗ್ಗಿದ ಸುಮಾರು 8 ಮಂದಿ ದರೋಡೆಕೋರರ ತಂಡ ಗುರುಪ್ರಸಾದ್ ಅವರನ್ನು ಕಟ್ಟಿಹಾಕಿ, ಕುತ್ತಿಗೆಗೆ ಚಾಕು ಹಿಡಿದು ಕಪಾಟಿನಲ್ಲಿದ್ದ ಸುಮಾರು 40 ಸಾವಿರ ರೂಪಾಯಿ ಮತ್ತು ಸುಮಾರು 15 ಪವನ್ ಚಿನ್ನವನ್ನು ದರೋಡೆ ಮಾಡಿದೆ. ಮನೆಯೊಳಗೆ ನುಗ್ಗಿದ ದರೋಡೆಕೋರರ ತಂಡ ಸುಮಾರು ಒಂದೂವರೆ ಗಂಟೆಗಳವರೆಗೆ ಮನೆಯೊಳಗೇ ಇದ್ದು, ಮನೆಯ ಎಲ್ಲಾ ಕಡೆಗಳಲ್ಲೂ ಹುಡುಕಾಡಿದೆ. ತುಳು ಮತ್ತು ಕನ್ನಡ ಭಾಷೆಯನ್ನು ಮಾತನಾಡುತ್ತಿದ್ದ ದರೋಡೆಕೋರರ ತಂಡ ಹಿಂಬಾಗಿಲಿನಿಂದ…
ಮಂಗಳೂರು: ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಅನುಪಮ್ ಅಗರ್ವಾಲ್ ಅಧಿಕಾರ ಸ್ವೀಕರಿಸಿದರು. ನಿರ್ಗಮನ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ಅವರಿಂದ ಅಧಿಕಾರ ಸ್ವೀಕರಿಸಿ ಅನುಪಮ್ ಅಗರ್ವಾಲ್ ಮಾತನಾಡಿ, ಬೇರೆ ಜಿಲ್ಲೆಗಳಲ್ಲಿ ಕೆಲಸ ಮಾಡಿದ ಸಂದರ್ಭ ಇಲ್ಲಿನ ಡ್ರಗ್ಸ್ ಸಮಸ್ಯೆಯ ಬಗ್ಗೆ ಕೇಳಿದ್ದೇನೆ. ಹಿಂದಿನ ಕಮಿಷನರ್ ಕುಲದೀಪ್ ಕುಮಾರ್ ಅವರು ಕೂಡಾ ಈ ದಿಸೆಯಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಡ್ರಗ್ಸ್ ಮುಕ್ತ ಮಂಗಳೂರು ಅಭಿಯಾನ ಯಶಸ್ವಿ ಕಾಣುತ್ತಿದ್ದು, ನಶೆ ಮುಕ್ತ ಮಂಗಳೂರು ಕನಸು ನನಸು ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳ ಜತೆ ಈ ಅಭಿಯಾನವನ್ನು ಮುಂದುವರಿಸುವ ಭರವಸೆಯನ್ನು ನೀಡುವುದಾಗಿ ಅವರು ತಿಳಿಸಿದರು.
ತಾಯಿ, ಮಗ ಬರ್ಬರವಾಗಿ ಹತ್ಯೆಗೀಡಾದ ಘಟನೆ ಬೆಂಗಳೂರಿನ ಬಾಗಲಗುಂಟೆಯ ರವೀಂದ್ರನಗರದಲ್ಲಿ ನಡೆದಿದೆ. ನವನೀತಾ(33), ಸೃಜನ್(11) ಕೊಲೆಯಾದವರು. ಪತಿ ಚಂದ್ರುನೇ ತನ್ನ ಪತ್ನಿ ಹಾಗೂ ಮಗನನ್ನು ಕೊಂದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಬಾಗಲಗುಂಟೆ ಠಾಣೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಾಗಲಗುಂಟೆ ಪೊಲೀಸರು ಇದೀಗ ಪರಾರಿಯಾದ ಚಂದ್ರು ಪತ್ತೆಗಾಗಿ ಶೋಧ ನಡೆಸಿದ್ದಾರೆ. ಕುಡಿದ ಮತ್ತಿನಲ್ಲಿ ಗಲಾಟೆ ಮಾಡಿ ಪತಿ ಚಂದ್ರುವೇ ಕೊಂದಿರಬಹುದೆಂದು ಮೃತ ನವನೀತಾ ಕುಟುಂಬಸ್ಥರು ಅರೋಪಿಸಿದ್ದಾರೆ. ಕೊಲೆಯಾದ ಮಹಿಳೆ ಆಂಧ್ರ ಪ್ರದೇಶ ಮೂಲದವರಾಗಿದ್ದು, ಕಳೆದ ಮೂರು ವರ್ಷಗಳಿಂದ ರವೀಂದ್ರ ನಗರದಲ್ಲಿ ವಾಸವಿದ್ದರು. ಆದ್ರೆ, ಪತಿಯಿಂದ ಕಳೆದ 2 ವರ್ಷಗಳಿಂದ ದೂರವಾಗಿ ಪ್ರತ್ಯೇಕ ಮನೆಯಲ್ಲಿ ವಾಸಿಸುತ್ತಿದ್ದಳು. ಇನ್ನು ಈ ಪ್ರಕರಣ ಭೇದಿಸಲು ಡಿಸಿಪಿ ಶಿವಪ್ರಕಾಶ್ ದೇವರಾಜ ಅವರು ವಿಶೇಷ ತಂಡವನ್ನು ರಚಿಸಿದ್ದಾರೆ.
ಬಂಟ್ವಾಳ: ಜಮೀನಿಗೆ ನುಗ್ಗಿ ಅಡಿಕೆ ಕದ್ದ ಆರೋಪ ಹೊತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಹಿಡಿದು ಅವರನ್ನು ವಿಚಾರಿಸುತ್ತಿರುವ ವಿಡಿಯೋ ವೈರಲ್ ಆಗಿದೆ ಮಣಿನಾಲ್ಕೂರು ಗ್ರಾಮದ ಹಂಡೀರಿನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.ಸಿಕ್ಕಿಬಿದ್ದ ಆರೋಪಿಗಳು ಈ ಹಿಂದೆಯೂ ಹಲವು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ಕೆಲ ಸಮಯದಿಂದ ಇಬ್ಬರು ಆರೋಪಿಗಳು ಬೇರೆ ಬೇರೆ ಜಮೀನುಗಳಿಗೆ ನುಗ್ಗಿ ಅಡಿಕೆ ಉತ್ಪನ್ನಗಳ ಕಳ್ಳತನದಲ್ಲಿ ತೊಡಗಿದ್ದರು ಎಂದು ಹೇಳಲಾಗುತ್ತದೆ.ಇದೇ ಕೃತ್ಯ ಮುಂದುವರಿಸಿದ ಸಂದರ್ಭದಲ್ಲಿ ಕೃಷಿಕರ ಕೈಗೆ ಸಿಕ್ಕಿ ಬಿದ್ದು ಅವರನ್ನು ವಿಚಾರಿಸಿ, ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು: ಗೃಹ ಲಕ್ಷ್ಮಿ ಯೋಜನೆಗೆ ನೋಂದಾಯಿತ ಫಲಾನುಭವಿಗಳ ಖಾತೆಗೆ ರೂ.2000 ಜಮಾಗೊಳಿಸುವ ಪ್ರಕ್ರಿಯೆಯಲ್ಲಿ ಗೊಂದಲವಾಗದಿರಲೆಂದು, ನೋಂದಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಶೀಘ್ರವೇ ನೋಂದಣಿ ಪುನರಾರಂಭಗೊಳ್ಳಲಿದೆ ಅಂತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಟ್ವಿಟರ್ನಲ್ಲಿ ಹೇಳಿಕೆಯಲ್ಲಿ ತಿಳಿಸಿದೆ. ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ರಾಜ್ಯ ಸರ್ಕಾರದ ಚಾರಿತ್ರಿಕ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗಿದೆ. ಈ ನಡುವೆ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಯಾವುದೇ ಮಧ್ಯವರ್ತಿಗಳ ಆಮಿಷಕ್ಕೆ ಒಳಗಾಗದೇ ಉಚಿತವಾಗಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಈ ಯೋಜನೆಯ ಸೌಲಭ್ಯವನ್ನು ಪಡೆಯಲು ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಹಾಗೂ ಬಾಪೂಜಿ ಕೇಂದ್ರಗಳಲ್ಲಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು ಅಥವಾ ಸ್ವಯಂಸೇವಕ ‘ಪ್ರಜಾಪ್ರತಿನಿಧಿಗಳು’ ಮನೆ ಮನೆಗೆ ತೆರಳಿ ಉಚಿತವಾಗಿ ನೋಂದಣಿ ಮಾಡುತ್ತಾರೆ.
ಪುತ್ತೂರು : ಮನೆಯವರನ್ನು ಕಟ್ಟಿ ಹಾಕಿ ದರೋಡೆ ನಡೆಸಿದ ಘಟನೆ ಬಡಗನ್ನೂರಿನಲ್ಲಿ ನಡೆದಿದೆ. ಬಡಗನ್ನೂರು ಕುಡ್ಕಾಡಿ ನಿವಾಸಿ, ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್ ರೈ ಎಂಬವರ ಮನೆಯಿಂದ ಚಿನ್ನಾಭರಣವನ್ನು ದೋಚಿದ್ದಾರೆನ್ನಲಾಗಿದೆ. ಗುರುಪ್ರಸಾದ್ ರೈ ಹಾಗೂ ಅವರ ತಾಯಿಯನ್ನು ಕಂಬಕ್ಕೆ ಕಟ್ಟಿ ಹಾಕಿ ಕಳ್ಳತನ ಮಾಡಿದ್ದಾರೆನ್ನಲಾಗಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ.
ನವದೆಹಲಿ: ಸನಾತನ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆಗಳಿಗಾಗಿ ಹಿನ್ನಡೆ ಮತ್ತು ಪ್ರಕರಣಗಳನ್ನು ಎದುರಿಸುತ್ತಿರುವ ಉದಯನಿಧಿ ಸ್ಟಾಲಿನ್ ಬುಧವಾರ (ಸೆಪ್ಟೆಂಬರ್ 6) ವರದಿಗಾರನ ಪ್ರಶ್ನೆಗೆ ಕ್ಷಮೆಯಾಚಿಸಿದರು, ಆದರೆ ಸನಾತನ ಧರ್ಮದ ಬಗ್ಗೆ ನೀಡಿದ ಹೇಳಿಕೆಗೆ ಕ್ಷಮೆಯಾಚಿಸಲು ನಿರಾಕರಿಸಿದರು. ವರದಿಗಾರರು ಉದಯನಿಧಿ ಸ್ಟಾಲಿನ್ ಗೆ ಕ್ಷಮೆಯಾಚಿಸಲು ಬಯಸುತ್ತೀರಾ? ಎಂದು ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಉತ್ತರಿಸಿರುವ ಸ್ಟಾಲಿನ್ “ಕ್ಷಮಿಸಿ, ಇದು ಅವರಿಗೆ ಕ್ಷಮೆಯಾಚನೆಯಲ್ಲ, ಇದು ನಿಮ್ಮ ಪ್ರಶ್ನೆಗಾಗಿ” ಎಂದು ಉತ್ತರಿಸಿದ್ದಾರೆ. ಉದಯನಿಧಿ ಸ್ಟಾಲಿನ್ ಮತ್ತು ಪ್ರಿಯಾಂಕ್ ಖರ್ಗೆ ವಿರುದ್ಧ ಎಫ್ಐಆರ್ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ‘ಸನಾತನ ಧರ್ಮ’ ಕುರಿತ ಹೇಳಿಕೆಗಳು ರಾಷ್ಟ್ರವ್ಯಾಪಿ ವಿವಾದವನ್ನು ಹುಟ್ಟುಹಾಕಿದವು ಮತ್ತು ಉದಯನಿಧಿ ಅವರ ಹೇಳಿಕೆಗಳನ್ನು ಬೆಂಬಲಿಸಿ ಕರ್ನಾಟಕ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗಳು ಮಂಗಳವಾರ (ಸೆಪ್ಟೆಂಬರ್ 5) ಉತ್ತರ ಪ್ರದೇಶದ ರಾಂಪುರದಲ್ಲಿ ಉಭಯ ನಾಯಕರ ವಿರುದ್ಧ ಎಫ್ಐಆರ್ ದಾಖಲಿಸಲು ಕಾರಣವಾಯಿತು. ಇಬ್ಬರು ನಾಯಕರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 153 ಎ, 295 ಎ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ವಕೀಲರು ದೂರು…










