ಬಂಟ್ವಾಳ: ಕೋಳಿ ಟಿಕ್ಕ ಪಾರ್ಸೆಲ್ ಪಡೆಯಲು ಟಿಕ್ಕ ಶಾಪ್ ಗೆ ಬಂದಿದ್ದ ಅಪ್ರಾಪ್ತ ಶಾಲಾ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಲ್ಲದೆ, ಈ ಬಗ್ಗೆ ಮನೆಯವರಿಗೆ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಕಲ್ಲಡ್ಕ-ವಿಟ್ಲ ರಸ್ತೆಯಲ್ಲಿರುವ ಟಿಕ್ ಪಾಯಿಂಟ್ ಮಾಲಕ ಮಹಮ್ಮದ್ ಆಶ್ರಫ್ ಎಂಬಾತ ಪ್ರಕರಣದ ಆರೋಪಿ. ಕಲ್ಲಡ್ಕದಲ್ಲಿರುವ ಟಿಕ್ಕಪಾಯಿಂಟ್ ಗೆ ಪಾರ್ಸೆಲ್ ತರಲು ರಾತ್ರಿ ಸುಮಾರು 8 ಗಂಟೆಗೆ ಬಂದ ವೇಳೆ ಆರೋಪಿ ಕೃತ್ಯ ಎಸಗಿದ್ದಾನೆ. ಬಾಲಕ ಟಿಕ್ಕ ಪಾರ್ಸೆಲ್ ಕೇಳಿದಾಗ, ಟಿಕ್ಕ ಪಾರ್ಸೆಲ್ ಕೊಂಡುಹೋಗಲು ಪ್ಲಾಸ್ಟಿಕ್ ಚೀಲವನ್ನು ತರುವಂತೆ ಅಂಗಡಿಯ ಒಳಗೆ ಬರುವಂತೆ ಹೇಳಿ, ಆತ ಪ್ಲಾಸ್ಟಿಕ್ ಚೀಲ ತರಲು ಒಳಗೆ ಹೋದ ವೇಳೆ ಆರೋಪಿ ಬಾಲಕನ ಹಿಂಬದಿಯಿಂದ ಹೋಗಿ ಆತನನ್ನು ಹಿಡಿದು ಎತ್ತಿಕೊಂಡು ಅಲ್ಲೇ ಸಮೀಪದ ತೋಟಕ್ಕೆ ಕರೆದುಕೊಂಡು ಹೋಗಿ ಅಲ್ಲಿ ದೌರ್ಜನ್ಯ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.ಬಾಲಕನ ಮೇಲೆ ಹಲ್ಲೆ ಅತ್ಯಾಚಾರ ನಡೆಸಿದ ಆರೋಪಿ ಘಟನೆ ನಡೆದು ಎರಡು ತಿಂಗಳ ಬಳಿಕ ಮತ್ತೆ ಅತ್ಯಾಚಾರಕ್ಕೆ ಯತ್ನ…
Author: main-admin
ಮಂಗಳೂರು: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಎರಡು ವರ್ಷಗಳಿಂದ ಮಂಗಳೂರು ದಸರಾ ಶೋಭಾಯಾತ್ರೆ ಇಲ್ಲದೆ ಶಾರದಾ ಮಾತೆ, ನವದುರ್ಗೆಯರ ವಿಸರ್ಜನೆಯು ನಡೆದಿತ್ತು. ಈ ಬಾರಿ ಮತ್ತೆ ವೈಭವದ ಶೋಭಾಯಾತ್ರೆಯ ಕಳೆಗಟ್ಟಿದ್ದು, ತಾಯಿ ಶಾರದೆ, ನವದುರ್ಗೆಯರ ಸಹಿತ, ಮಹಾಗಣಪತಿಯ ಮೃಣ್ಮಯ ಮೂರ್ತಿಗಳ ಶೋಭಾಯಾತ್ರೆ. ಈ ಮೃಣ್ಮಯ ಮೂರ್ತಿಗಳನ್ನು ಮಂಗಳೂರು ನಗರದಾದ್ಯಂತ ಶೋಭಾಯಾತ್ರೆಯ ಮೂಲಕ ಕೊಂಡೊಯ್ದು ಮುಂಜಾನೆ ವೇಳೆಗೆ ಕುದ್ರೋಳಿ ಶ್ರೀಕ್ಷೇತ್ರದ ಪುಷ್ಕರಣಿಯಲ್ಲಿ ವಿಸರ್ಜಿಸಲಾಯಿತು. ವಿವಿಧ ಕಲಾ ತಂಡಗಳು, ಟ್ಯಾಬ್ಲೊಗಳು, ಸಂಗೀತ ವಾದ್ಯ ಮೇಳಗಳು, ಮಂಗಳವಾದ್ಯಗಳು, ಭಜನಾ ಸಂಕೀರ್ತನಾ ತಂಡಗಳು, ವಿವಿಧ ಜಿಲ್ಲೆಗಳ ಸಾಂಸ್ಕೃತಿಕ ಕಲಾ ತಂಡಗಳು ವೈಭವದ ಶೋಭಾಯಾತ್ರೆಗೆ ಮೆರುಗು ನೀಡಿದವು. ಶೋಭಾಯಾತ್ರೆ ಸಾಗುವ ದಾರಿಯುದ್ದಕ್ಕೂ ಮಂಗಳೂರು ನಗರದ ರಾಜಬೀದಿಯು ವಿದ್ಯುತ್ ದೀಪಾಲಂಕೃತದಿಂದ ಕಂಗೊಳಿಸುತ್ತಿತ್ತು. ಈ ವೈಭವದ ಶೋಭಾಯಾತ್ರೆಗೆ ಮಂಗಳೂರು ಮಾತ್ರವಲ್ಲದೆ, ಹೊರ ರಾಜ್ಯ, ಹೊರ ದೇಶಗಳಿಂದಲೂ ಬಂದಿರುವ ಸಾವಿರ ಸಾವಿರ ಮಂದಿ ಸಾಕ್ಷಿಯಾದರು.
ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶರನ್ನವರಾತ್ರಿ ಅಂಗವಾಗಿ ಕಳೆದ 9 ದಿನಗಳಿಂದ ಪೂಜಿಸಲ್ಪಟ್ಟ ಶಾರದೆ ಹಾಗೂ ನವ ದುರ್ಗೆಯರ ವೈಭವದ ಶೋಭಾ ಯಾತ್ರೆ ಇಂದು ಸಂಜೆ ನಡೆಯಲಿದೆ. ಸಂಜೆ 4 ಗಂಟೆಗೆ ಶಾರದಾ ಮಾತೆಯ ಶೋಭಾ ಯಾತ್ರೆಯು ಶ್ರೀ ಕ್ಷೇತ್ರದಿಂದ ಹೊರಟು ಕ್ಷೇತ್ರದ ಅಭಿವೃದ್ಧಿ ರೂವಾರಿ ಮಾಜಿ ಮಂತ್ರಿ ಬಿ ಜನಾರ್ದನ ಪೂಜಾರಿ ನೇತೃತ್ವದಲ್ಲಿ ಕಂಬ್ಳ ರಸ್ತೆ, ಮಣ್ಣಗುಡ್ಡ ರಸ್ತೆಯಾಗಿ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ, ಲಾಲ್ಭಾಗ್, ಬಳ್ಳಾಲ್ ಭಾಗ್, ಪಿವಿಎಸ್ ಸರ್ಕಲ್, ನವಭಾರತ್ ಸರ್ಕಲ್, ಕೆ ಎಸ್ ರಾವ್ ರಸ್ತೆ, ಹಂಪನ್ಕಟ್ಟೆ, ವಿವಿ ಕಾಲೇಜು ವೃತ್ತದಿಂದ ಬಲಕ್ಕೆ ತಿರುಗಿ, ಗಣಪತಿ ಹೈಸ್ಕೂಲ್ ಮಾರ್ಗವಾಗಿ ಶ್ರೀ ವೆಂಕಟ್ರಮಣ ದೇವಸ್ಥಾನದ ಮುಂಭಾಗದಿಂದ ಕಾರ್ ಸ್ಟ್ರೀಟ್, ಸುಚಿತ್ರಾ ಟಾಕೀಸ್, ಅಳಕೆಯಾಗಿ ಕ್ಷೇತ್ರಕ್ಕೆ ಬಂದು ಕ್ಷೇತ್ರದ ಕೆರೆಯಲ್ಲಿ ಜಲಸ್ತಂಭನಗೊಳ್ಳಲಿದೆ.
ಬೆಳ್ತಂಗಡಿ: ನಾರಾವಿ ಅರಸಿಕಟ್ಟೆ ಎಂಬಲ್ಲಿ ಬೈಕೊಂದು ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ನಾರಾವಿ ಗ್ರಾಮದ ಅರಸಿಕಟ್ಟೆ ನಿವಾಸಿ ಸಂತೋಷ್(23) ಎಂದು ಗುರುತಿಸಲಾಗಿದೆ.ಸಂತೋಷ್ ಅವರು ಮನೆ ಸಮೀಪದ ಅಂಗಡಿಗೆ ಹೋಗುತ್ತಿದ್ದ ವೇಳೆ ಬೈಕ್ ನಿಯಂತ್ರಣದ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯುವಾಗಲೇ ಕೊನೆಯುಸಿರೆಳೆದಿದ್ದಾರೆ.ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ಪ್ರಾದೇಶಿಕ ಸಾರಿಗೆ ಪ್ರಾಧಿಕಾರ 2020ರ ಅ.13 ಮತ್ತು 2021ರ ನ.10ರಂದು ವಾಹನ ಪ್ರಯಾಣ ದರ ಪರಿಷ್ಕರಿಸಿ ನಿಗದಿಪಡಿಸಿದ ದರ ಜಾರಿಯಲ್ಲಿದ್ದರೂ ಕೆಲವು ಬಸ್ ಗಳಲ್ಲಿ ಪ್ರಯಾಣಿಕರಿಂದ ಅಧಿಕ ಪ್ರಯಾಣ ದರ ವಸೂಲು ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಮಾಜಸೇವಕರಾದ ಶಿವಕುಮಾರ್ ಶೆಟ್ಟಿಗಾರ್ ಹಾಗೂ ಸತೀಶ್ ಪೂಜಾರಿ ಅವರ ನೇತೃತ್ವದಲ್ಲಿ ಶಾಸಕ ಕೆ.ರಘುಪತಿ ಭಟ್ ಅವರಿಗೆ ಮನವಿ ಸಲ್ಲಿಸಲಾಯಿತು. ಸಾರಿಗೆ ಪ್ರಾಧಿಕಾರ ನಿಗದಿಪಡಿಸಿರುವ ದರಕ್ಕಿಂತ ಅಧಿಕ ದರ ವಸೂಲು ಮಾಡಿದವರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಲು ತಿಳಿಸಲಾಗುವುದು ಎಂದು ಶಾಸಕರು ತಿಳಿಸಿದ್ದಾರೆ.ಒಂದು ವೇಳೆ ಮುಂದಿನ ದಿನಗಳಲ್ಲಿ ಅಧಿಕ ದರ ವಸೂಲಿ ಪ್ರವೃತ್ತಿ ಮುಂದುವರೆಸಿದರೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂದು ಶಿವಕುಮಾರ್ ಶೆಟ್ಡಿಗಾರ್ ಎಚ್ಚರಿಕೆ ನೀಡಿದ್ದಾರೆ.
ಮಂಗಳೂರು: ಅಪ್ರಾಪ್ತೆಯನ್ನು ಅತ್ಯಾಚಾರಗೈದಿರುವ ಆರೋಪ ಜಿಲ್ಲಾ ಮತ್ತು ಸತ್ರ ಹಾಗೂ ಎಫ್ ಟಿಎಸ್ ಸಿ – 2 ನ್ಯಾಯಾಲಯದಲ್ಲಿ ಸಾಬೀತಾಗಿರುವ ಹಿನ್ನೆಲೆಯಲ್ಲಿ ಕಾಮುಕ ಯುವಕನಿಗೆ 15 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ತೀರ್ಪು ವಿಧಿಸಲಾಗಿದೆ. ನಗರದ ತೋಡಾರು ಗ್ರಾಮ ನಿವಾಸಿ ಸೀತಾರಾಮ ಶಿಕ್ಷೆಗೊಳಗಾದ ಆರೋಪಿ. ಸೀತಾರಾಮ ತನ್ನ ಸಂಬಂಧಿಯಾಗಿರುವ ಕೊಂಡೆಮೂಲ ಗ್ರಾಮದ ಗಿಡೆಕೆರೆ ನಿವಾಸಿ ಅಪ್ರಾಪ್ತ ಬಾಲಕಿಯನ್ನು 2019ರ ಜನವರಿ 8ರಂದು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾನೆ. ಅಲ್ಲಿ ಬಲಾತ್ಕಾರವಾಗಿ ಬಾಲಕಿಯ ಇಚ್ಛೆಗೆ ವಿರುದ್ಧವಾಗಿ ಅತ್ಯಾಚಾರ ನಡೆಸಿದ್ದಾನೆ. ಅಲ್ಲದೆ ಕೃತ್ಯದ ವೀಡಿಯೋ ಚಿತ್ರೀಕರಿಸಿ ವೈರಲ್ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾನೆ. ಈ ವಿಚಾರವನ್ನು ಸಂತ್ರಸ್ತ ಬಾಲಕಿ ಮನೆಯಲ್ಲಿ ಹೇಳಿದ್ದಾಳೆ. ಆದರೆ ಈ ಬಗ್ಗೆ 2019ರ ನವೆಂಬರ್ 11ರಂದು ತಡವಾಗಿ ಬಜ್ಪೆ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣದ ತನಿಖೆ ನಡೆಸಿದ ಬಜ್ಪೆ ಠಾಣಾ ನಿರೀಕ್ಷಕ ಕೆ.ಆರ್.ನಾಯಕ್ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ. ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ಜಿಲ್ಲಾ ಮತ್ತು…
ಉಡುಪಿ: ಮಲ್ಪೆ ಬೀಚ್ನಲ್ಲಿ ಮುಳುಗುತ್ತಿದ್ದ ಒಟ್ಟು ಆರು ಮಂದಿ ಪ್ರವಾಸಿಗರನ್ನು ಮಂಗಳವಾರ, ಅಕ್ಟೋಬರ್ 4 ರಂದು ರಕ್ಷಿಸಲಾಗಿದ್ದು, ಆರು ಮಂದಿಯಲ್ಲಿ ಒಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಮತ್ತೊಬ್ಬರು ಚಿಂತಾಜನಕ ಸ್ಥಿತಿಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ದಸರಾ ರಜೆ ಇರುವುದರಿಂದ ಮಲ್ಪೆ ಹಾಗೂ ಸುತ್ತಮುತ್ತಲಿನ ಬೀಚ್ಗಳಿಗೆ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಿದ್ದು, ಮೈಸೂರು ಮೂಲದ ತೋಸಿಭ್ ಮಂಗಳವಾರ ಮಲ್ಪೆ ಬೀಚ್ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದು ಅವರನ್ನು ಜೀವರಕ್ಷಕರು ಬಹಳ ಕಷ್ಟಪಟ್ಟು ಅವರನ್ನು ರಕ್ಷಿಸಿದ್ದಾರೆ.ಕುಟುಂಬ ಸಮೇತ ಬೀಚ್ಗೆ ಭೇಟಿ ನೀಡಿದ್ದ ತಮಿಳುನಾಡಿನ ಸೇಲಂ ಮೂಲದ ಸೆಂಥಿಲ್ ಮತ್ತು ಬಿಜಿಪುರ ಮೂಲದ ಬಸವರಾಜು ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡು ಜೀವರಕ್ಷಕರು ರಕ್ಷಿಸಿದ್ದಾರೆ.ಮತ್ತೊಂದು ಘಟನೆಯಲ್ಲಿ ನವಾಜ್ ಕುಡಿದು ಸಮುದ್ರದಲ್ಲಿ ಈಜುತ್ತಿದ್ದು, ಮಧ್ಯಾಹ್ನ 2:30ರ ಸುಮಾರಿಗೆ ನೀರಿನಲ್ಲಿ ಮುಳುಗುತ್ತಿರುವುದನ್ನು ಗಮನಿಸಿದ ಜೀವರಕ್ಷಕರು ಕೂಡಲೇ ಆತನನ್ನು ರಕ್ಷಿಸಿದ್ದಾರೆ.ತನ್ನ ಸ್ನೇಹಿತರೊಂದಿಗೆ ಈಜುತ್ತಿದ್ದ ಸೋಹಮ್ ಘೋಷ್ ಸಮುದ್ರದ ಅಲೆಯಲ್ಲಿ ಸಿಲುಕಿದ್ದು, ಅವರನ್ನು ಕೂಡ ಸಿಬ್ಬಂದಿಗಳು ರಕ್ಷಿಸಿದ್ದಾರೆ.ಮತ್ತೊಂದು ಘಟನೆಯಲ್ಲಿ ಬೆಂಗಳೂರಿನ ಸಲಾಮ್ ಚೆರ್ರಿ ಮತ್ತು ಮೈಸೂರಿನ ಅಬ್ರಾರ್ ಈಜಲು ಹೋಗಿದ್ದರು,…
ಉಡುಪಿ: ಕಳೆದ 10 ತಿಂಗಳಿನಿಂದ ಮನೆ ಬಿಟ್ಟು ಹೋಗಿರುವ ನನ್ನ ಪತ್ನಿ ಆಶಾ(35) ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದಾಳೆ. ಮಕ್ಕಳು ಆಕೆ ಇಲ್ಲದೆ ಚಿಂತೆಯಲ್ಲಿದ್ದಾರೆ. ಆಕೆಗೆ ಯಾರೇ ಆಶ್ರಯ ನೀಡಿದ್ದರೂ ತಕ್ಷಣವೇ ನನಗೆ ಮಾಹಿತಿ ನೀಡಬೇಕೆಂದು ಬೆಳಪುವಿನ ಸುಬ್ರಹ್ಮಣ್ಯ(42) ಮನವಿ ಮಾಡಿದ್ದಾರೆ. ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಮೆಸ್ತ್ರಿ ಕೆಲಸ ಮಾಡಿಕೊಂಡಿದ್ದು, ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಸಣ್ಣ ಪುಟ್ಟ ವಿಚಾರಕ್ಕಾಗಿ ಮನಸ್ತಾಪಗೊಂಡ ಪತ್ನಿ ಆಶಾ, ಕಳೆದ ಡಿಸೆಂಬರ್ನಲ್ಲಿ ಮನೆ ಬಿಟ್ಟು ಹೋಗಿದ್ದಳು. ಇದರಿಂದ ದೊಡ್ಡ ಮಗಳು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದೆ. ಬಳಿಕ ಆಕೆ ಠಾಣೆಗೆ ಬಂದು ಹಾಜರಾಗಿದ್ದಳು ಎಂದರು. ಇದೀಗ ಆಕೆ ಮತ್ತೆ ಮನೆ ತೊರೆದು ಹೋಗಿದ್ದಾಳೆ. ಅವಳು ಎಲ್ಲಿಯೋ ಕೆಲಸ ಮಾಡಿಕೊಂಡು ಯಾರದ್ದೋ ಆಶ್ರಯದಲ್ಲಿ ವಾಸವಾಗಿದ್ದಾಳೆ. ಆದುದರಿಂದ ಆಶ್ರಯ ನೀಡಿದವರು ತಕ್ಷಣ ನನಗೆ ಮಾಹಿತಿ ನೀಡಬೇಕು. ಮಕ್ಕಳಿಗೋಸ್ಕರ ಆಕೆ ಮನೆ ವಾಪಾಸ್ಸು ಬರಲಿ ಎಂದು ಅವರು ತಿಳಿಸಿದರು.
ಮಂಗಳೂರು: ವಿಮಾನ ನಿಲ್ಧಾಣದಲ್ಲಿ ದುಬೈನಿಂದ ಬಂದಿಳಿದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮುಕ್ಕ ನಿವಾಸಿ ಮೊಹಮ್ಮದ್ (65) ಮೃತರು.ಗುರುವಾರ ದುಬೈಗೆ ತೆರಳಿದ್ದ ಮೊಹಮ್ಮದ್ ಕುಟುಂಬಸ್ಥರನ್ನು ಭೇಟಿಯಾಗಿ ಭಾನುವಾರ ವಾಪಾಸ್ಸಾಗಿದ್ದರು.ಮಂಗಳೂರು ವಿಮಾನ ನಿಲ್ದಾಣ ತಲುಪಿ ಅಧಿಕಾರಿಗಳಿಗೆ ಪಾಸ್ ಪೋರ್ಟ್ ನೀಡಿ ನಿಂತಿದ್ದ ವೇಳೆ ದಿಡೀರ್ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ತಕ್ಷಣ ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.
ಬಂಟ್ವಾಳ: ನಾವು ಮರಳಿ ಬರುತ್ತೇವೆ ಎಂದು ರಸ್ತೆಯಲ್ಲಿ ಬರೆಯುವ ಮೂಲಕ ಪಿಎಫ್ಐ ಸಂಘಟನೆಯು ಆರ್ಎಸ್ಎಸ್ಗೆ ಬೆದರಿಕೆ ಹಾಕಿರುವ ಘಟನೆ ಬಂಟ್ವಾಳ ತಾಲೂಕಿನ ಪಿಲತಾಬೆಟ್ಟು ಗ್ರಾಮದ ಸ್ನೇಹಗಿರಿ ಎಂಬಲ್ಲಿ ಬೆಳಕಿಗೆ ಬಂದಿದೆ. ಚಡ್ಡಿಗಳೆ ಎಚ್ಚರ ನಾವು ಮರಳಿ ಬರುತ್ತೇವೆ ಎಂದು ರಸ್ತೆಯಲ್ಲಿ ಬರೆದುಕೊಂಡಿದ್ದು, ಸ್ಥಳೀಯರು ಪುಂಜಾಲ್ ಕಟ್ಟೆ ಠಾಣೆಗೆ ಈ ಬಗ್ಗೆ ಮಾಹಿತಿ ನೀಡಿ ತಕ್ಷಣಕ್ಕೆ ಕ್ರಮ ಜರುಗಿಸಿ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸುತ್ತಾರೆ.