Author: main-admin

ರೇಷ್ಮೆ ಬೆಳೆಗೆ ಸಿಂಪಡಿಸಲು ಎಂದು ತಂದಿಟ್ಟ ಕೀಟನಾಶಕವನ್ನು ಎರಡು ವರ್ಷದ ಮಗು ಜ್ಯೂಸ್ ಎಂದು ಭಾವಿಸಿ ಕುಡಿದು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೃಷ್ಣಾಪುರದಲ್ಲಿ ನಡೆದಿದೆ. ಜ್ಯೂಸ್ ಎಂದು ಕೀಟನಾಶಕ ಸೇವಿಸಿ ಎರಡು ವರ್ಷದ ಮಗು ಸಾವನ್ನಪ್ಪಿದೆ. ಕೃಷ್ಣಾಪುರ ಗ್ರಾಮದಲ್ಲಿ ಎರಡು ವರ್ಷದ ಯಶವಂತ್ ಕೆ ಗೌಡ ಸಾವನ್ನಪ್ಪಿರುವ ಮಗುವಾಗಿದೆ.ರೇಷ್ಮೆ ಹುಳು ಹೋಗಿ ಸಿಂಪಡಿಸಲು ಕೀಟನಾಶಕವನ್ನು ತಂದಿಟ್ಟಿದ್ದರು. ಜ್ಯೂಸ್ ಎಂದು ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದ ಯಶಂಕ್ ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯದ ವಿಮ್ಸ್ ಆಸ್ಪತ್ರೆಗೆ ಮಗುವನ್ನು ದಾಖಲಿಸಲಾಗಿತ್ತು. ಆದರೆ ಈ ಸಂದರ್ಭದಲ್ಲಿ ಚಿಕಿತ್ಸೆ ಫಲಿಸದೆ ಯಶಾಂಕ ಗೌಡ ಸಾವನ್ನಪ್ಪಿದ್ದಾನೆ. ಕುಟುಂಬಸ್ಥರ ಹಾಗೂ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Read More

ಬೆಂಗಳೂರು: ಸಶಸ್ತ್ರ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಇದೇ ಸೆ.10ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಈ ಬಗ್ಗೆ ಪೊಲೀಸ್ ಇಲಾಖೆಯ ನೇಮಕಾತಿ ವಿಭಾಗದಿಂದ ಮಾಹಿತಿ ನೀಡಲಾಗಿದ್ದು, ಸೆಪ್ಟೆಂಬರ್.10ರಂದು ಸಶಸ್ತ್ರ ಪೊಲೀಸ್ ಕಾನ್ ಸ್ಟೇಬಲ್ ( ಸಿಎಆರ್/ಡಿಎಆರ್) ಹುದ್ದೆಗಳ ನೇಮಕಾತಿಗೆ ಬೆಂಗಳೂರಿನ 41 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ ಎಂದಿದೆ. ಸೆ.10ರಂದು ನಡೆಯಲಿರುವಂತ ಸ್ಪರ್ಧಾತ್ಮಕ ಪರೀಕ್ಷೆಗೆ 20,560 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಈಗಾಗಲೇ ಅಭ್ಯರ್ಥಿಗಳ ಮಾಹಿತಿಯನ್ನು ಇಲಾಖೆಯ ಜಾಲತಾಣ https://ksp.karnataka.gov.in ಅಥವಾ https://ksp-recruitment.inನಲ್ಲಿ ಬಿಡುಗಡೆ ಮಾಡಲಾಗಿದೆ ಎಂದಿದೆ. ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದಂತ ಅರ್ಹ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಂಡು, ಸರಿಯಾದ ಸಮಯಕ್ಕೆ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗುವಂತೆ ಕೋರಿದೆ.

Read More

ಉಳ್ಳಾಲ: ಸಹಪಾಠಿಗಳೊಂದಿಗೆ ಸಮುದ್ರ ವಿಹಾರಕ್ಕೆಂದು ಬಂದಿದ್ದ ವೈದ್ಯನೋರ್ವ ರುದ್ರ ಪಾದೆಯಿಂದ ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಸೋಮೇಶ್ವರದಲ್ಲಿ ನಿನ್ನೆ ತಡರಾತ್ರಿ 11 ಗಂಟೆಗೆ ಸಂಭವಿಸಿದ್ದು ಇಂದು ಬೆಳಿಗ್ಗೆ ಮೃತದೇಹ ಪತ್ತೆಯಾಗಿದೆ. ಮೃತ ವೈದ್ಯನನ್ನು ನಗರದ ಎ.ಜೆ ಆಸ್ಪತ್ರೆಯ ಸರ್ಜನ್ ರಾಮನಗರ ನಿವಾಸಿ ಡಾ. ಆಶೀಕ್ ಗೌಡ (30) ಎಂದು ಗುರುತಿಸಲಾಗಿದೆ. ನಿನ್ನೆ ಮಧ್ಯರಾತ್ರಿ ಮೃತ ಆಶಿಕ್ ಗೌಡ ಇನ್ನೋರ್ವ ಸಹಪಾಠಿ ಸರ್ಜನ್ ಕುಂದಾಪುರ ಮೂಲದ ಡಾ.ಪ್ರದೀಶ್ ಮೂವರು ಇಂಟನ್೯ಶಿಪ್ ನಡೆಸುತ್ತಿರುವ ವೈದ್ಯೆಯರ ಜೊತೆಗೆ ಸಮುದ್ರ ವಿಹಾರಕ್ಕೆಂದು ಸೋಮೇಶ್ವರಕ್ಕೆ ಬಂದಿದ್ದಾರೆ. ರುದ್ರಪಾದೆಯಲ್ಲಿ ವಿಹರಿಸುತ್ತಿದ್ದ ಸಂದರ್ಭ ಡಾ.ಪ್ರದೀಶ್ ಕಲ್ಲಿನಿಂದ ಸಮುದ್ರಕ್ಕೆ ಜಾರಿ ಬಿದ್ದಿದ್ದಾರೆ. ನೀರಿನಲ್ಲಿ ನಿಂತು ರಕ್ಷಣೆಗೆ ಕೂಗುತ್ತಿದ್ದ ಸಂದರ್ಭ ಡಾ.ಆಶೀಕ್ ಗೌಡ ಇಣುಕುವ ಕ್ಷಣದಲ್ಲಿ ಕಾಲುಜಾರಿ ಬಿದ್ದು ಸಮುದ್ರಪಾಲಾಗಿದ್ದಾರೆ. ಡಾ. ಪ್ರದೀಶ್ ಸಣ್ಣ ಕಲ್ಲು ಹಿಡಿದು ಈಜಿ ಬಚಾವಾಗಿದ್ದಾರೆ. ತಡರಾತ್ರಿವರೆಗೂ ಅಗ್ನಿಶಾಮಕ ದಳ, ಉಳ್ಳಾಲ ಪೊಲೀಸ್ ಠಾಣೆಯವರು ರಕ್ಷಣಾ ಕಾರ್ಯಾಚರಣೆ ನಡೆಸಿದರೂ ಪ್ರಯೋಜನವಾಗಲಿಲ್ಲ. ಇಂದು ಅಲ್ಲೇ ಸಮುದ್ರ ತೀರದಲ್ಲಿ ಡಾ.ಆಶೀಖ್ ಮೃತದೇಹ ಪತ್ತೆಯಾಗಿದೆ.

Read More

ಮಂಗಳೂರು: ಸುರತ್ಕಲ್ ನಲ್ಲಿ ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಸಿದಂತೆ ಮೂವರು ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಕಳವಾರು ನಿವಾಸಿಗಳಾದ ಪ್ರಶಾಂತ್ (28), ಧನರಾಜ್ (23) ಮತ್ತು ಯಜ್ಞೆಶ್ (22) ಎಂದು ಗುರುತಿಸಲಾಗಿದ್ದು, ಸುರತ್ಕಲ್ ಠಾಣೆ ವ್ಯಾಪ್ತಿಯ ಕಳವಾರಿನಲ್ಲಿ ನಿನ್ನೆ ರಾತ್ರಿ ಶಾಂತಿಗುಡ್ಡೆ ನಿವಾಸಿ ಅಬ್ದುಲ್ ಸಫ್ವಾನ್‌ (23) ಎಂಬಾತನಿಗೆ ಚೂರಿ ಇರಿತ ಆಗಿತ್ತು, ಕೂಡಲೇ ಸುರತ್ಕಲ್ ಠಾಣೆ ಪೊಲೀಸರು ರಾತ್ರಿಯೇ ಕಾರ್ಯಾಚರಣೆ ನಡೆಸಿದ್ದಾರೆ. ‌ಹಲವರನ್ನು ವಶಕ್ಕೆ ಪಡೆದಿದ್ದು ಮೂವರನ್ನು ಬಂಧಿಸಿದ್ದಾಗಿ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ತಿಳಿಸಿದ್ದಾರೆ. ಆಗಸ್ಟ್ 31ರಂದು ನಡೆದ ಗಲಾಟೆ ಬಗ್ಗೆ ಮಾತುಕತೆಗೆಂದು ಇಬ್ಬರನ್ನು ಕರೆದಿದ್ದು ಅಬ್ದುಲ್ ಸಫ್ವಾನ್ ಮತ್ತು ಮೊಹಮ್ಮದ್ ಸಫ್ವಾನ್ ಬೈಕಿನಲ್ಲಿ ಬರುತ್ತಿದ್ದಾಗಲೇ ಎರಡು ಬೈಕ್ ಗಳಲ್ಲಿ ಬಂದಿದ್ದ ಐದಾರು ಮಂದಿ ತಡೆದು ಹಲ್ಲೆ ನಡೆಸಿದ್ದರು‌‌. ಅಬ್ದುಲ್ ಸಫ್ವಾನ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು ಬಳಿಕ ಸ್ಥಳದಲ್ಲಿ ಜನ ಸೇರುತ್ತಿದ್ದಾಗ ಆರೋಪಿಗಳು ಪರಾರಿಯಾಗಿದ್ದರು. ಸಫ್ವಾನ್‌ ಅವರ ಕೈ , ತೋಳು ಹಾಗೂ ಬೆನ್ನಿಗೆ…

Read More

ಚೆನ್ನೈ: ಚಂದ್ರಯಾನ ಯಶಸ್ಸು ಭಾರತದ ಕೀರ್ತಿಯನ್ನು ಮುಗಿಲೆತ್ತರಕ್ಕೆ ಏರಿಸಿದೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ರಷ್ಯಾ ಸೇರಿದಂತೆ ಮುಂದುವರಿದ ರಾಷ್ಟ್ರಗಳನ್ನೇ ಮೀರಿಸುವಂತೆ ದೇಶ ಸಾಧನೆ ಮಾಡುತ್ತಿದೆ. ಈ ಯಶಸ್ಸಿನ ಹಿಂದೆ ಇಸ್ರೋ ವಿಜ್ಞಾನಿಗಳ ಶ್ರಮ ಸಾಕಷ್ಟಿದೆ. ಅದೇ ರೀತಿ ಚಂದ್ರಯಾನ 3 ಉಡಾವಣೆ ಸಂದರ್ಭದಲ್ಲಿ ಕೌಂಟ್​ಡೌನ್ ಹಿಂದಿನ ಧ್ವನಿಯಾಗಿದ್ದ ಇಸ್ರೋ ವಿಜ್ಞಾನಿ ವಲಮರ್ತಿ ಹೃದಯಸ್ತಂಭನದಿಂದ ನಿಧನರಾಗಿದ್ದಾರೆ. ಜುಲೈ 14 ರಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ-3 ಅನ್ನು ಉಡಾವಣೆ ಮಾಡಲಾಯಿತು. ಇಸ್ರೋ ರಾಕೆಟ್ ಉಡಾವಣೆಯ ಸಮಯದಲ್ಲಿ ಕೌಂಟ್​ಡೌನ್ ಎಂಬುದು ಅತ್ಯಂತ ಪ್ರಮುಖ ಪಾತ್ರವಹಿಸುತ್ತದೆ. ಇದು ಇಡೀ ರಾಷ್ಟ್ರವನ್ನು ಒಟ್ಟುಗೂಡಿಸುವ ಒಂದು ಅಪ್ರತಿಮ ಘಟನೆಯಾಗಿದೆ. ಚಂದ್ರಯಾನ 3ರ ವೇಳೆ ಕೇಳಿದ್ದ ಕೌಂಟ್​ಡೌನ್ ಧ್ವನಿಯಾಗಿದ್ದ ವಿಜ್ಞಾನಿ ವಲಮರ್ತಿ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು, ಚೆನ್ನೈನ ಆಸ್ಪತ್ರೆಯಲ್ಲಿ ನಿಧನರಾದರು.

Read More

ಮಂಗಳೂರು: ಗೆಳೆಯರ ಜೊತೆ ಮೈದಾನದಲ್ಲಿ ಆಟವಾಡಿ ಮನೆಗೆ ಹೋಗುತ್ತಿದ್ದ ಯುವಕನಿಗೆ ವ್ಯಕ್ತಿಯೊಬ್ಬ ಚೂರಿಯಿಂದ ಇರಿದು ಗಾಯಗೊಳಿಸಿರುವ ಘಟನೆ ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಕಳವಾರು ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಗಾಯಗೊಂಡ ಯುವಕನನ್ನು ಬಜ್ಪೆ ಕಳವಾರು ಶಾಂತಿಗುಡ್ಡೆ ನಿವಾಸಿ ಸಫ್ವಾನ್‌ (23) ಎಂದು ಗುರುತಿಸಲಾಗಿದೆ. ಸಫ್ವಾನ್‌ ಅವರ ಕತ್ತು, ಕೈಗೆ ಹಾಗೂ ಬೆನ್ನಿಗೆ ಚೂರಿಯಿಂದ ಇರಿಯಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುವನ್ನು ಬಜ್ಪೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರಿಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಸಫ್ವಾನ್‌ ಗೆಳೆಯರೊಂದಿಗೆ ಆಟವಾಡಿ ಮನೆಗೆ ತೆರಳುತ್ತಿದ್ದ ವೇಳೆ ಸ್ಥಳೀಯನೇ ಆಗಿರುವ ಯುವಕ ಚೂರಿ ಇರಿದಿದ್ದಾನೆ ಎನ್ನಲಾಗಿದೆ. ಕೆಲದಿನಗಳಿಂದ ಕಳವಾರು ಭಾಗದಲ್ಲಿ ಮದ್ಯ ವ್ಯಸನಿಯೊಬ್ಬ ಹಲ್ಲೆ ನಡೆಸಿದ್ದ ಪ್ರಕರಣ ದಾಖಲಾಗಿತ್ತು. ಇದೇ ಹಿನ್ನೆಲೆಯಲ್ಲಿ ಚೂರಿ ಇರಿತ ಸಂಭವಿಸಿರಬಹುದು ಎಂಬ ಶಂಕೆ ವ್ಯಕ್ತವಾಗುತ್ತಿದೆ.

Read More

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ನಡೆದ ಸೌಜನ್ಯ ಅತ್ಯಾಚಾರ ಕೊಲೆ ಮರುತನಿಖೆಗೆ ಒತ್ತಾಯಿಸಿ ನಡೆದ ಪ್ರತಿಭಟನೆಯಲ್ಲಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮಾತನಾಡಿದರು. ನಮ್ಮ ಮನೆ ಮಗಳ ಬಗ್ಗೆ ಮಾತನಾಡೋಕೆ ನಾವು ಪರ್ಮಿಷನ್ ತೆಗೋಬೇಕಾ? ಎಂದು ಪ್ರಶ್ನಿಸಿದರು. ನಾವು ಟ್ಯಾಕ್ಸ್ ಕಟ್ಟಿ ಸಾಕುವ ಪಾಪಿಗಳು‌ನ್ನು ನಾವು ಏನು ಮಾತನಾಡಬೇಕು ಅಂತ ಹೇಳಬೇಕಾ?. ಪೊಲೀಸರು, ಇಲ್ಲಿನ ಪಾಪಿ ರಾಜಕಾರಣಿಗಳಿಂದಾಗಿ ಜನರು ನಕ್ಸಲೈಟ್ ಆಗಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಒಬ್ಬ ಅಪ್ರಾಪ್ತ ಹೆಣ್ಣು ಮಗಳ ಮೇಲೆ ಗ್ಯಾಂಗ್ ರೇಪ್ ಆಗಿರೋ ಪ್ರದೇಶ ಪಾಕಿಸ್ತಾನದಲ್ಲಿ ಇದೆಯೇ ಎಂದು ಪ್ರಶ್ನಿಸಿ ಆಕ್ರೋಶ ಹೊರಹಾಕಿದರು. ಇವತ್ತು ಹೊಸ ಸಂಗ್ರಾಮ ಆರಂಭವಾಗಿದೆ, ಹನ್ನೊಂದು ವರ್ಷದಿಂದ ಸೌಜನ್ಯ ಹೋರಾಟ ‌ನಡೆದಿದೆ. ತುಳುನಾಡಿನ ದೈವದ ನಡೆಯಲ್ಲಿ ಹನ್ನೆರೆಡನೇ ವರ್ಷದಲ್ಲಿ ನ್ಯಾಯ ತೀರ್ಮಾನ ಸಿಕ್ಕಿದೆ. ಕಾಮುಕರನ್ನು ಕಾಮಾಂಧರು ಎನ್ನದೇ ಬೇರೆ ಏನು ಎನ್ನಬೇಕು. ನೀವು ಹೆಸರು‌ ಹೇಳಬಾರದು ಅಂತ ಹೇಳಿದ್ರೆ ನಾನು ಹೇಳದೇ ಕೂರುವುದಿಲ್ಲ. ನಾನು ನನ್ನ ಮನೆಯ ಊಟ ಮಾಡುವುದು. ನೀವು ನಮ್ಮ ಹಣದ ಊಟ ಮಾಡೋದು…

Read More

ಉಳ್ಳಾಲ : ಉಳ್ಳಾಲ ಪೊಲೀಸ್ ಠಾಣೆಯ ಹಿಂಬದಿಯಲ್ಲಿರುವ ಕ್ವಾಟ್ರಸ್ ನಲ್ಲಿ ಬೀದಿ‌ ನಾಯಿಗಳು ಬಿಡಾರ ಹೂಡಿದ್ದು ಕಳೆದ ವಾರ ಇಬ್ಬರು ಪೊಲೀಸ್ ಕಾನ್ಸ್ ಟೇಬಲ್ ಮತ್ತು ಲೇಡಿ ಪೊಲೀಸ್ ಕಾನ್ಸ್ ಟೇಬಲ್ ಓರ್ವರ ಪತಿಗೆ ಹುಚ್ಚು ನಾಯಿಯೊಂದು ಕಚ್ಚಿದ ಪ್ರಕರಣ ತಡವಾಗಿ ವರದಿಯಾಗಿದೆ. ಉಳ್ಳಾಲ ಪೊಲೀಸ್ ಠಾಣಾ ಪಿಸಿಗಳಾದ ಸತೀಶ್ ,ನವೀನ್ ಮತ್ತು ಲೇಡಿ ಪಿಸಿ ಭಾಗ್ಯಶ್ರೀ ಯವರ ಪತಿ ರಂಗನಾಥ್ ಎಂಬವರಿಗೆ ಹುಚ್ಚು ನಾಯಿ ಕಡಿದಿದೆ.ಕಳೆದ ಆ.28 ರಂದು ಪೊಲೀಸ್ ವಸತಿ ಗೃಹದ ಆವರಣದಲ್ಲಿ ಘಟನೆ ನಡೆದಿದೆ. ವಸತಿ ಗೃಹದ ಆವರಣದಲ್ಲಿ ಬೀದಿ ನಾಯಿಗಳು ಸುತ್ತುತ್ತಿದ್ದು ಅದರಲ್ಲೊಂದು ನಾಯಿ ಮೂವರನ್ನ ಕಚ್ಚಿ ಗಾಯಗೊಳಿಸಿದೆ. ಪೊಲೀಸರು ಮಂಗಳೂರಿನ ಆನಿಮಲ್ ಕೇರ್ ನವರಿಗೆ ಕರೆ ಮಾಡಿ ದಾಳಿ ನಡೆಸಿದ ನಾಯಿಯನ್ನ ಕೊಂಡೊಯ್ಯುವಂತೆ ಹೇಳಿದ್ದು ಆನಿಮಲ್ ಕೇರ್ ನವರು ಕಚ್ಚಿದ ನಾಯಿಯ ವಿಡಿಯೋ ತೆಗೆದು ವಾಟ್ಸ್ ಅಪ್ ನಲ್ಲಿ ಕಳಿಸಲು ತಿಳಿಸಿದ್ದು ಪೊಲೀಸರು ನಾಯಿಯ ವಿಡಿಯೋವನ್ನ ಕಳುಹಿಸಿದ್ದಾರೆ. ಹುಚ್ಚು ನಾಯಿ ಕಡಿತಕ್ಕೊಳಗಾದ ಪೊಲೀಸ್ ಸಿಬ್ಬಂದಿಗಳು…

Read More

ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ, ಸರಳಿಕಟ್ಟೆ ಮೂಡಡ್ಕ ಎಂಬಲ್ಲಿ ಮಾದಕ ದ್ರವ್ಯ ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನಡೆದಿದೆ. ಬಂಟ್ವಾಳ ಪೆರ್ನೆ ನಿವಾಸಿಗಳಾದ ಮಹಮ್ಮದ್ ಸಫೀಕ್ (24) ಹಾಗೂ ಅಬ್ದುಲ್ ಸಲೀಂ (24) ಬಂಧಿತ ಆರೋಪಿಗಳು. ಇಬ್ಬರು ವ್ಯಕ್ತಿಗಳು ಅಮಲು ಸೇವನೆ ಮಾಡಿ ನಶೆಯಲ್ಲಿದ್ದಂತೆ ಅನುಚಿತವಾಗಿ ವರ್ತಿಸುತ್ತಿರುವುದನ್ನು ಕಂಡು ಉಪ್ಪಿನಂಗಡಿ ಪೊಲೀಸ್ ಠಾಣಾಧಿಕಾರಿಗಳು ಸಿಬ್ಬಂದಿಗಳೊಂದಿಗೆ ತೆರಳಿ ವಿಚಾರಿಸಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ವೇಳೆ ಆರೋಪಿಗಳು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಇನ್ನು ಆರೋಪಿಗಳಿಂದ ಅಂದಾಜು 7.500 ಮೌಲ್ಯದ 2 ಮೊಬೈಲ್ ಪೋನ್ ವಶಕ್ಕೆ ಪಡೆಕೊಳ್ಳಲಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

Read More

ಮಂಗಳೂರು: ಮಂಗಳೂರು ಪೊಲೀಸರು ಡ್ರಗ್ಸ್ ಜಾಲದ ಕಿಂಗ್ ಪಿನ್ ನೈಜೀರಿಯಾ ಮೂಲದ ಮಹಿಳೆಯನ್ನು ಬೆಂಗಳೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಮಹಿಳೆಯನ್ನು ನೈಜಿರಿಯಾ ಮೂಲದ ಅಡೆವೊಲೆ ಅಡೆಟುಡು ಆನು(33) ಎಂದು ಗುರುತಿಸಲಾಗಿದೆ. ಈಕೆಯನ್ನು ಬೆಂಗಳೂರಿನ ಯಲಹಂಕದ ಚೊಕ್ಕನ ಹಳ್ಳಿಯಲ್ಲಿ ಸೆರೆ ಹಿಡಿಯಲಾಗಿದೆ. ಇತ್ತಿಚೇಗೆ ಮಂಗಳೂರು ಸಿಸಿಬಿ ಪೊಲೀಸರು ಲಕ್ಷಾಂತರ ಮೌಲ್ಯದ MDMA ಮಾರಾಟ ಜಾಲ ಭೇದಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳಿಗೆ ಮಹಿಳೆ ಅಡೆವೊಲೆ ಅಡೆಟುಡು ಆನು MDMA ಡ್ರಗ್ ಪೂರೈಸಿದ್ದಳು. ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿದಾಗ ಈ ವಿಚಾರ ಬೆಳಕಿಗೆ ಬಂದಿದೆ. ಮಾಹಿತಿ ಪ್ರಕಾರ ಮಹಿಳೆಯ ಬೆಂಗಳೂರಿನ ಮನೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಲಾಗಿತ್ತು. ದಾಳಿ ವೇಳೆ 400 ಗ್ರಾಂ ತೂಕದ 20 ಲಕ್ಷ ರೂಪಾಯಿ ಮೌಲ್ಯದ MDMA ಮತ್ತು ನಗದು, ಐಫೋನ್‌ ಮೊಬೈಲ್ ಸೇರಿದಂತೆ ಒಟ್ಟು 20 ಲಕ್ಷ ಮೌಲ್ಯದ 52 ಸಾವಿರ ಮೌಲ್ಯದ ಸೊತ್ತುಗಳ ವಶಕ್ಕೆ ಪಡೆಯಲಾಗಿದೆ. ಈ ಬಂಧಿತ ಮಹಿಳೆ ನೈಜೀರಿಯಾ ದೇಶದಿಂದ ವ್ಯಾಸಂಗ ವೀಸಾದಡಿ…

Read More