Author: main-admin

ಮಂಗಳೂರು: 10 ‘IPS ಅಧಿಕಾರಿ’ಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರು ನಗರ ಪೊಲೀಸ್ ಕಮಿಷನರೆಟ್‌ನ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅಂಶು ಕುಮಾರ್ ಅವರನ್ನು ವರ್ಗಾಯಿಸಲಾಗಿದೆ. ಆದರೆ ಅವರಿಗೆ ಯಾವುದೇ ಹುದ್ದೆ ತೋರಿಸಿಲ್ಲ. ಅಂಶುಕುಮಾರ್‌ರ ಸ್ಥಾನಕ್ಕೆ 2019ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಸಿದ್ದಾರ್ಥ್ ಗೋಯಲ್ ಅವರನ್ನು ನಿಯುಕ್ತಿಗೊಳಿಸಲಾಗಿದೆ. 2018ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಅಂಶು ಕುಮಾರ್ ಕಳೆದೊಂದು ವರ್ಷದಿಂದ ನಗರ ಡಿಸಿಪಿಯಾಗಿ ಡ್ರಗ್ಸ್, ಅಕ್ರಮ ಮರಳುಗಾರಿಕೆ ವಿರುದ್ಧ ಕಾರ್ಯಾಚರಣೆ, ಸಿಸಿ ಕ್ಯಾಮರಾ ಅಳವಡಿಕೆ, ತಂತ್ರಜ್ಞಾನಗಳ ಬಳಕೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

Read More

ಕುಂದಾಪುರ: ಕಾರು ಹಾಗೂ ರಿಕ್ಷಾ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬಳು ಸಾವನಪ್ಪಿದ ಘಟನೆ ಶುಕ್ರವಾರ ಕಂದಾವರ ಗ್ರಾಮದ ಮೂಡ್ಲಕಟ್ಟೆ ಕಂಬಳಗದ್ದೆ ಸಮೀಪ ನಡೆದಿದೆ. ಮೃತ ಯುವತಿಯನ್ನು ಕುಂದಾಪುರ ತಾಲೂಕಿನ ಅಂಪಾರು ನಿವಾಸಿ ಅಂಬಿಕಾ(22) ಎಂದು ಗುರುತಿಸಲಾಗಿದೆ. ಈಕೆ ಕುಂದಾಪುರದ ಸಂಬಂಧಿಕರ ಮನೆಯಿಂದ ಅಂಪಾರಿಗೆ ಆಟೋ ರಿಕ್ಷಾದಲ್ಲಿ ತೆರಳುತ್ತಿದ್ದ ವೇಳೆ ಎದುರಿ ನಿಂದ ಬಂದ ಕಾರು ಮತ್ತೊಂದು ಕಾರನ್ನು ಓವರ್‌ ಟೇಕ್ ಮಾಡುವ ಭರದಲ್ಲಿ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ಆಟೋ ರಿಕ್ಷಾ ಪಲ್ಟಿಯಾಗಿದ್ದು ರಿಕ್ಷಾದಲ್ಲಿದ್ದ ಮೂವರು ಗಾಯಗೊಂಡಿದ್ದಾರೆ. ಇದರಲ್ಲಿ ಗಂಭೀರವಾಗಿ ಗಾಯಗೊಂಡ ಅಂಬಿಕಾ ಕುಂದಾಪುರ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ 10 IPS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಪೃಥ್ವಿಕ್ ಶಂಕರ್, ಐಪಿಎಸ್ (ಕೆಎನ್ – 2018) ಪೋಸ್ಟಿಂಗ್ ಗಾಗಿ ಕಾಯುತ್ತಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಖಾಲಿ ಇರುವ ಹುದ್ದೆಯಲ್ಲಿ ಅಪರಾಧ ತನಿಖಾ ಇಲಾಖೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಿ ಆದೇಶಿಸಿದೆ. ಇನ್ನೂ ಕನಿಕಾ ಸಿಕ್ರಿವಾಲ್, ಐಪಿಎಸ್ (ಕೆಎನ್ – 2018) ಪೋಸ್ಟಿಂಗ್ ಗಾಗಿ ಕಾಯುತ್ತಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಖಾಲಿ ಇರುವ ಹುದ್ದೆಯಲ್ಲಿ ಅಪರಾಧ ತನಿಖಾ ಇಲಾಖೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಗುಂಜನ್ ಆರ್ಯ, ಐಪಿಎಸ್ (ಕೆಎನ್ -2018), ಪೋಸ್ಟಿಂಗ್ ಗಾಗಿ ಕಾಯುತ್ತಿದ್ದಾರೆ, ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಖಾಲಿ ಇರುವ ಹುದ್ದೆಯಲ್ಲಿ ಗುಪ್ತಚರ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ. ಪೋಸ್ಟಿಂಗ್ಗಾಗಿ ಕಾಯುತ್ತಿರುವ ಐಪಿಎಸ್ (ಕೆಎನ್ -2018) ಕುಶಾಲ್…

Read More

ಬೆಂಗಳೂರು:ಭಾರತದ ಪ್ರಪ್ರಥಮ ಸೂರ್ಯ ಯೋಜನೆ ಆದಿತ್ಯ-ಎಲ್ 1 ಉಡಾವಣೆ ಯಶಸ್ವಿ ಆಗಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸೂರ್ಯನನ್ನು ಅಧ್ಯಯನ ಮಾಡುವ ತನ್ನ ಮೊದಲ ಬಾಹ್ಯಾಕಾಶ ಆಧಾರಿತ ಮಿಷನ್ ಆದಿತ್ಯ ಎಲ್ -1 ಅನ್ನು ಶನಿವಾರ (ಸೆಪ್ಟೆಂಬರ್ 2) ಬೆಳಿಗ್ಗೆ 11: 50 ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಿದೆ. ಚಂದ್ರನ ದಕ್ಷಿಣ ಧ್ರುವದ ಬಳಿ ಬಾಹ್ಯಾಕಾಶ ನೌಕೆಯನ್ನು ಮೃದುವಾಗಿ ಇಳಿಸಿದ ಮೊದಲ ಬಾಹ್ಯಾಕಾಶ ಸಂಸ್ಥೆ ಎಂಬ ಹೆಗ್ಗಳಿಕೆಗೆ ಇಸ್ರೋ ಪಾತ್ರವಾದ ಕೇವಲ 10 ದಿನಗಳ ನಂತರ ಈ ಉಡಾವಣೆ ನಡೆದಿದೆ. ಈ ಉಪಗ್ರಹದಲ್ಲಿ ಒಟ್ಟು ಏಳು ಉಪಕರಣಗಳಿದ್ದು, ಅದರಲ್ಲಿ ನಾಲ್ಕು ಸೂರ್ಯನ ವೀಕ್ಷಣೆ ಮಾಡಿದ್ರೆ ಉಳಿದ ಮೂರು ಉಪಕರಣಗಳು ಕಿರಣ, ಪ್ಲಾಸ್ಮಾ, ಜ್ವಾಲೆಗಳು ಮತ್ತು ಸೌರ ಬಿರುಗಾಳಿ ಕುರಿತು ಅಧ್ಯಯನ ಮಾಡಲಿವೆ. ಆದಿತ್ಯ L1 ನಲ್ಲಿನ ಪ್ರಮುಖ ಸಾಧನವು ಸೂರ್ಯನ ಕರೋನಾ ವಲಯವನ್ನು ಅಧ್ಯಯನ ಮಾಡುತ್ತದೆ. ಬಾಹ್ಯಾಕಾಶ ನೌಕೆಯಲ್ಲಿ ಏಳು ಉಪಕರಣಗಳನ್ನು ಇರಿಸಲಾಗಿದೆ. ಈ…

Read More

ಉಡುಪಿ: ಶಿರ್ವದ ಆರೋಗ್ಯ ಮಾತಾ ದೇವಾಲಯದ ಬಳಿಯ ಕಾನ್ವೆಂಟ್ ರಸ್ತೆಯ ನಿವಾಸಿ ವಿದ್ಯಾರ್ಥಿನಿ ರಿಯಾನ್ನ ಜೇನ್ ಡಿಸೋಜಾ( 20) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ಬೆಂಗಳೂರಿನಲ್ಲಿ ನಿಧನ ಹೊಂದಿದರು. ರಿಯಾನ್ನ ಜೇನ್ ಕಳೆದ ವರ್ಷ ಕ್ಯಾನ್ಸರ್ ರೋಗಕ್ಕೆ ಒಳಗಾಗಿದ್ದರು. ಮಣಿಪಾಲ ಮತ್ತು ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಶುಕ್ರವಾರ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ. ಇವರು ಬಿ.ಕಾಂ ಪದವಿ ಮುಗಿಸಿ ಎಂಕಾಂ ಪದವಿ ಪ್ರಾರಂಭಿಸುವಷ್ಟರಲ್ಲೇ ಇಹಲೋಕ ತ್ಯಜಿಸಿದ್ದಾರೆ. ಅತ್ಯುತ್ತಮ ಕಾರ್ಯಕ್ರಮ ಸಂಘಟಕಿಯಾಗಿದ್ದ ಇವರು, ವಿದ್ಯಾಭ್ಯಾಸದ ಜೊತೆಯಲ್ಲೇ ಪಠ್ಯೇತರ ಚಟುವಟಿಕೆಗಳಲ್ಲೂ ಮುಂಚೂಣಿಯಲ್ಲಿದ್ದರು. ಇವರು ತಾಯಿ, ಸಹೋದರ ಮತ್ತು ಅಪಾರ ಸ್ನೇಹಿತರು ಮತ್ತು ಬಂಧು ಬಳಗದವರನ್ನು ಆಗಲಿದ್ದಾರೆ.

Read More

ಮಂಗಳೂರು: ನಗರ ವ್ಯಾಪ್ತಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಿಮ್ಮೆಲೆಯಲ್ಲಿ ಪೊಲೀಸ್ ಇಲಾಖೆ ನಿಧನೆಗಳನ್ನು ಜಾರಿಗೆ ತಂದಿದೆ.ಕಾರ್ಯಕ್ರಮ ಆಯೋಜನೆಗೆ ಪೊಲೀಸ್ ಅನುಮತಿ ಕಡ್ಡಾಯಗೊಳಿಸಲಾಗಿದೆ. ಮಡಿಕೆಗಳನ್ನು 14 ಫೀಟ್ ಎತ್ತರದವರೆಗೆ ಮಾತ್ರ ಕಟ್ಟಬೇಕು. ಮಡಿಕೆ ಹೊರತುಪಡಿಸಿ ಬೇರೆ ಯಾವುದೇ ವಸ್ತುಗಳನ್ನು ಕಟ್ಟುವಂತಿಲ್ಲ ಎಂದು ಸೂಚನೆ ಹೊರಡಿಸಲಾಗಿದೆ. ಮಡಿಕೆ ಒಡೆಯುವ ಸ್ವಯಂ ಸೇವಕರ ಮೇಲೆ ತಂಪು ನೀರು ಚೆಲ್ಲುವಂತಿಲ್ಲ ಎಂದು ಉಲ್ಲೇಖಿಸಲಾಗಿದೆ.ಮೆರವಣಿಗೆಯಲ್ಲಿ ಸುಸಜ್ಜಿತ ಆಂಬುಲೆನ್ಸ್ ವ್ಯವಸ್ಥೆ ಮಾಡಿರಬೇಕು. ಮೆರವಣಿಗೆಯಲ್ಲಿ ಯಾವುದೇ ಕಾರಣಕ್ಕೂ ಡಿಜೆ ಬಳಸುವಂತಿಲ್ಲ ಎಂದು ಕಟ್ಟುನಿಟ್ಟಿನ ಆದೇಶವನ್ನು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಅವರ ಪ್ರಕಟನೆ ತಿಳಿಸಿದೆ.

Read More

ಮಂಗಳೂರು: ಆಧಾರ್‌ ಸಕ್ರಿಯಗೊಳಿಸಿದ ಪಾವತಿ ವ್ಯವಸ್ಥೆ-ಎಇಪಿಎಸ್‌ ಪಾವತಿ ಸಿಸ್ಟಮ್‌ನಲ್ಲಿ ವಂಚನೆ ಮಾಡುವ ಸಾಧ್ಯತೆಗಳಿವೆ. ಹಾಗಾಗಿ ಈ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಮಂಗಳೂರು ನಗರ ಪೊಲೀಸ್‌ ಆಯುಕ್ತರು ಸೂಚನೆ ನೀಡಿದ್ದಾರೆ. ಎಇಪಿಎಸ್‌ ಎಂಬುದು ಬ್ಯಾಂಕ್ ತನ್ನ ಗ್ರಾಹಕರಿಗೆ ಆಧಾರ್ ಲಿಂಕ್ ಆಗಿರುವ ಬ್ಯಾಂಕ್‌ ಖಾತೆಗಳಿಂದ ಬಯೋಮೆಟ್ರಿಕ್‌ ಉಪಯೋಗಿಸಿ ಹಣವನ್ನು ವಿದ್ ಡ್ರಾ ಮತ್ತು ರವಾನೆಯಂತಹ ಬ್ಯಾಂಕಿಂಗ್ ವಹಿವಾಟುಗಳನ್ನು ನಿರ್ವಹಿಸಲು ಅನುವು ಮಾಡಿಕೊಡುವ ವ್ಯವಸ್ಥೆಯಾ ಗಿದೆ. ಆಧಾರ್ ಕಾರ್ಡ್ ದಾರರು ತಮ್ಮ ಆಧಾರ್ ಸಂಖ್ಯೆ ಮತ್ತು ಬಯೋಮೆಟ್ರಿಕ್‌ ದೃಢೀಕರಣವನ್ನು ಬಳಸಿಕೊಂಡು ವಹಿವಾಟು ನಡೆಸಬಹುದು. ಆದರೆ ಇದರಲ್ಲಿಯೂ ಇತರ ಪಾವತಿ ವ್ಯವಸ್ಥೆಗಳಂತೆ ವಂಚನೆಯಾಗುವ ಸಾಧ್ಯತೆ ಇರುತ್ತದೆ, ಸೈಬರ್ ವಂಚಕರು ಬಳಕೆದಾರರ ಆಧಾರ್ ದತ್ತಾಂಶಗಳನ್ನು ಸರಕಾರಿ ವೆಬ್‌ ಸೈಟ್‌ಗಳಿಂದ ಅಥವಾ ಇತರ ಮೂಲಗಳಿಂದ ಸಂಗ್ರಹಿಸಿ ಅದನ್ನು ಪಿಒಎಸ್/ ಮೇಲೆ ಕ್ಲಿಕ್ ಮಾಡಬಾರದು. ಮೈಕ್ರೋ ಎಟಿಎಂ ಮೂಲಕ ಹಣ ಡ್ರಾ ಅಥವಾ ವರ್ಗಾವಣೆ ಮಾಡುವ ಅಪಾಯವಿರುತ್ತದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ವಂಚನೆಯಿಂದ ಸುರಕ್ಷಿತರಾಗಿರಬೇಕಾದರೆ ಬಳಕೆದಾರರು ಆಧಾರ್ ಕಾರ್ಡ್ ಬಯೋಮೆಟ್ರಿಕ್…

Read More

 ಆಸ್ತಿ, ಹಣ ಒಡವೆಗಳಿಗೆ ಕೆಲವರು ಏನು ಮಾಡಲೂ ಸಿದ್ದರಾಗಿರುತ್ತಾರೆ ಮತ್ತು ಮಾಡುತ್ತಾರೆ ಕೂಡ ಹೌದು ಇಂತಹುದೇ ಘಟನೆ ಯಾದಗಿರಿಯಲ್ಲಿ ನಡೆದಿದೆ. ಸ್ವಾರ್ಥಿ ಮಹಿಳೆ, ತನಗೆ ಹಾಗೂ ತನ್ನ ಮಕ್ಕಳಿಗೆ ಆಸ್ತಿಯಲ್ಲಿ ಪಾಲು ಕಡಿಮೆಯಾಗುತ್ತದೆ ಎಂದು 5 ತಿಂಗಳ ಹಸುಗೂಸನ್ನೇ ಅಮಾನುಷವಾಗಿ ಕೊಂದಿದ್ದಾಳೆ. ಮಗು ಕುಡಿಯುವ ಹಾಲಿಗೆ ವಿಷ ಬೆರೆಸಿ ಐದು ತಿಂಗಳ ಹಸುಗೂಸನ್ನೇ ಬಲಿ ಪಡೆದಿದ್ದಾಳೆ ಈ ಕಿರಾತಕಿ. ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಬಬಲಾದ ಗ್ರಾಮದಲ್ಲಿ ಸಿದ್ದಪ್ಪ ಚೆಟ್ಟಿಗೇರಿ ಎಂಬಾತ 11 ವರ್ಷಗಳ ಹಿಂದೆ ಮೊದಲು ಶ್ರೀದೇವಿಯನ್ನ ಮದುವೆಯಾಗಿದ್ದ.ಆದರೆ ಮಕ್ಕಳಾಗದ ಹಿನ್ನೆಲೆ ಕಳೆದ‌ 7 ವರ್ಷದ ಹಿಂದೆ ದೇವಮ್ಮಳನ್ನು ಮದುವೆಯಾಗಿದ್ದ. ದೇವಮ್ಮಳನ್ನು ಮದುವೆಯಾದ ನಂತರ ಗಂಡನ ಮನೆ ಬಿಟ್ಟು ಚಾಮನಳ್ಳಿಯ ತನ್ನ ತವರು ಮನೆಯಲ್ಲಿ ಶ್ರೀದೇವಿ ವಾಸವಿದ್ದಳು. ಕಳೆದ ಮೂರು ವರ್ಷಗಳ ಹಿಂದೆ ಮಧ್ಯಪ್ರವೇಶಿಸಿದ ಹಿರಿಯರು, ರಾಜಿ ಸಂಧಾನ ನಡೆಸಿದ್ದಾರೆ. ಇದಾದ ನಂತರ ಆಕೆ ಬಬಲಾದ ಗ್ರಾಮದ ಗಂಡನ ಮನೆಗೆ ಬಂದಿದ್ದಳು. ಕಳೆದ ಐದು ತಿಂಗಳ ಹಿಂದೆ ಹೆಣ್ಣು ಮಗು…

Read More

ಸೌಜನ್ಯಾಳ ಊರಿಗೆ ಸರ್ಕಾರಿ ಬಸ್ ..ಪಾಂಗಾಳ ರಸ್ತೆಯಲ್ಲಿ ಕೊನೆಗೂ ಸರ್ಕಾರ ಬಸ್ ಸಂಚಾರ ಮಾಡುವ ನಿರ್ಧಾರವನ್ನು ಕೈಗೊಂಡಿದೆ. ಹೊಸ ಬಸ್ ಓಡಾಟಕ್ಕೆ ಇಂದು, ಸೆಪ್ಟಂಬರ್ 1 ರ, ಶುಕ್ರವಾರ ಚಾಲನೆ ದೊರಕಿದೆ. ಈ ಬಸ್ ಸಂಚಾರಕ್ಕೆ ಸೌಜನ್ಯ ತಾಯಿ ಕುಸುಮಾವತಿ ಚಾಲನೆ ನೀಡಿದರು. ಸೌಜನ್ಯ ಮಾವ ಪುರಂದರ ಗೌಡ, ಅಜ್ಜ ಬಾಬು ಗೌಡ, ರಮೇಶ್, ತುಕಾರಾಮ್, ಶೇಖರ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಇಂದು ಬೆಳಗ್ಗೆ 8:15 ಕ್ಕೆ ಧರ್ಮಸ್ಥಳದಿಂದ ಹೊರಟ ಬಸ್ ಪಾಂಗಾಳಕ್ಕೆ ಬಂತು. ಅದು ಅಲ್ಲಿಂದ ಜನರನ್ನು ಕರೆದುಕೊಂಡು ವಾಪಸ್ ಧರ್ಮಸ್ಥಳಕ್ಕೆ ಬರುತ್ತದೆ. ಮತ್ತೆ ಸಂಜೆ 4:15 ಕ್ಕೆ ಧರ್ಮಸ್ಥಳದಿಂದ ಪಾಂಗಳಕ್ಕೆ ಬಂದು ಅಲ್ಲಿಂದ ಬಸ್ ಮತ್ತೆ ಧರ್ಮಸ್ಥಳಕ್ಕೆ ಹೊರಡಲಿದೆ. ಇದೇ ಮೊದಲ ಬಾರಿಗೆ ಬಸ್ ಸಂಚಾರವನ್ನು ಪಾಂಗಾಳಕ್ಕೆ ಕಲ್ಪಿಸಿರುವುದು ವಿಶೇಷ. ಮಂಗಳ ಬಸ್ತ್ ನಿಲ್ದಾಣದಿಂದ ಸೌಜನ್ಯ ಮನೆ ಕೇವಲ ಐನೂರು ಮೀಟರ್ ಗಳ ದೂರದಲ್ಲಿದೆ. ಧರ್ಮಸ್ಥಳದಿಂದ ಪಾಂಗಳಕ್ಕೆ ಸರಕಾರಿ ಬಸ್ ಚಾಲನೆ ನೀಡಿದ ಸೌಜನ್ಯ ತಾಯಿ 11 ವರ್ಷಗಳ…

Read More

ಬೆಳ್ತಂಗಡಿ: ಸಾಲದ ಆಯಪ್ ಕಿರುಕುಳಕ್ಕೆ ಬೇಸತ್ತು ಯುವ ಕಬಡ್ಡಿ ಆಟಗಾರ ನೇಣಿಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಪುದುವೆಟ್ಟು ನಿವಾಸಿ ಯುವ ಕಬಡ್ಡಿ ಆಟಗಾರ ಸ್ವರಾಜ್(24) ಆತ್ಮಹತ್ಯೆ ಮಾಡಿಕೊಂಡಿರುವ ಯುವಕನಾಗಿದ್ದು, ಬಡ್ಡಿ ಆಟಗಾರನ ಆತ್ಮಹತ್ಯೆ ಹಿಂದೆ ಲೋನ್​ ಆಯಪ್​ ಕಿರುಕುಳ ಆರೋಪ ಕೇಳಿ ಬಂದಿದೆ. ಲೋನ್ ಆಯಪ್​ನವರು ಅಕ್ಕನ ಮಗಳ ಫೋಟೋವನ್ನು ‘Baby for sale’ಎಂದು ಎಡಿಟ್ ಮಾಡಿ ಸ್ವರಾಜ್​ ಸ್ನೇಹಿತರು, ಕಾಂಟಾಕ್ಟ್ ಲಿಸ್ಟ್ ನಲ್ಲಿರುವವರಿಗೆ ಫಾರ್ವರ್ಡ್ ಮಾಡಿದ್ದಾರೆ ಎನ್ನಲಾಗಿದ್ದು, ಈ ನಡುವೆ ಆ.31 ರಂದು ಮಧ್ಯಾಹ್ನ 2 ಗಂಟೆಗೆ ಹಣ ಕೊಡಬೇಕೆಂದು ಲೋನ್‌ ಆಪ್‌ನವರು ಹೆದರಿಸಿದ್ದಾರೆ ಎನ್ನಲಾಗಿದೆ. ಈ ನಡುವೆ ಮೃತ ಸ್ವರಾಜ್ ಹಣ ನೀಡಿದ್ದರು ಕೂಡ ಒತ್ತಡ ಹೇರಿದ್ದರಂತೆ, ಈ ನಡುವೆ ಒತ್ತಡ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More