Author: main-admin

ಉಪ್ಪಿನಂಗಡಿ;ಸರಕಾರಿ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಸೋಮವಾರ ಸಂಜೆ ಉಪ್ಪಿನಂಗಡಿಯ ಬಸ್ ನಿಲ್ದಾಣದಲ್ಲಿ ಪಿಯು ವಿದ್ಯಾರ್ಥಿಗಳ ನಡುವೆ ಕ್ಷುಲ್ಲಕ ವಿಚಾರಕ್ಕೆ ಜಗಳವಾಗಿದೆ‌.ವಿದ್ಯಾರ್ಥಿಗಳು ಗುಂಪು ಕಟ್ಟಿಕೊಂಡು ವಾಗ್ವಾದ ನಡೆಸಿ ಹೊಡೆದಾಟ ಮಾಡಿದ ಬಗ್ಗೆ ವರದಿಯಾಗಿದೆ. ಇನ್ನು ಈ ಸಂಬಂಧ ಮೂವರನ್ನು ಪೊಲೀಸರು ವಶಕ್ಕೆ ಪಡೆದಿರುವ ಮಾಹಿತಿ ಸಿಕ್ಕಿದೆ. ಇತ್ತೀಚೆಗೆ ಇದೇ ಕಾಲೇಜಿನ ವಿದ್ಯಾರ್ಥಿಗಳ ನಡುವಿನ ಗಲಾಟೆ ಪೊಲೀಸರ ಮಧ್ಯಪ್ರವೇಶದಿಂದ ಬಗೆಹರಿದಿತ್ತು.

Read More

ಸುರತ್ಕಲ್: ಚಿಟ್‌ ಫಂಡ್ ವ್ಯವಹಾರದಲ್ಲಿ ವಂಚನೆ ಮಾಡಿರುವ ಘಟನೆ ಸುರತ್ಕಲ್ ಸಮೀಪದ ಇಡ್ಯಾ ಗ್ರಾಮದಲ್ಲಿ  ಬೆಳಕಿಗೆ ಬಂದಿದೆ. ಫೈನಾನ್ಸ್ ಮೂಲಕ ಚಿಟ್‌ ಫಂಡ್ ವ್ಯವಹಾರ ನಡೆಸುತ್ತಿದ್ದ ಅಶೋಕ್ ಭಟ್, ವಿದ್ಯಾ ಹಾಗೂ ಪ್ರಿಯಾಂಕ ಭಟ್ ಎಂಬವರು ತನಗೆ 10 ಲಕ್ಷ ರೂಪಾಯಿಯನ್ನು ನೀಡದೇ ವಂಚಿಸಿದ್ದಾರೆ ಎಂದು ವ್ಯಕ್ತಿಯೊಬ್ಬರು ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಆರೋಪಿಗಳ ಫೈನಾನ್ಸ್‌ ನಲ್ಲಿ ನಾನು 10 ಲಕ್ಷ ರೂಪಾಯಿ ಮೌಲ್ಯದ ಚಿಟ್‌ ಫಂಡ್‌ ಗೆ ಸೇರಿದ್ದು, 2019ರ ಸೆಪ್ಟೆಂಬರ್‌ ನಿಂದ ಪ್ರತೀ ತಿಂಗಳು 50 ಸಾವಿರ ರೂಪಾಯಿ ಚಿಟ್‌ ಫಂಡ್‌ ಗೆ ಪಾವತಿಸಲು ತಿಳಿಸಿದ್ದರು. ಅದಕ್ಕೆ ಒಪ್ಪಿದ ಬಳಿಕ ಆರೋಪಿತರು ಪ್ರತಿದಿನ 1,500 ರೂಪಾಯಿಯನ್ನು ನನ್ನಿಂದ ಪಡೆದುಕೊಂಡು ಹೋಗುತ್ತಿದ್ದರು. ತಿಂಗಳಿಗೊಮ್ಮೆ ಕಚೇರಿಗೆ ಹೋಗಿ ವ್ಯಹಾರದ ಪಾಸ್ ಪುಸ್ತಕದಲ್ಲಿ ಹಣ ಕಟ್ಟಿರುವ ಬಗ್ಗೆ ನಮೂದಿಸಿ ಸಹಿ ಪಡೆದುಕೊಂಡು ಬರುತ್ತಿದ್ದೆ. 2021ರ ಮಾರ್ಚ್ 28ರಂದು ಫಂಡ್ ಮುಕ್ತಾಯವಾಗಿದ್ದು, ನಂತರದ ದಿನಗಳಲ್ಲಿ ಹಣ ಪಾವತಿಸುವುದಾಗಿ ಫೈನಾನ್ಸ್ ಮಾಲಕರು ತಿಳಿಸಿದ್ದರು.…

Read More

ಬಂಟ್ವಾಳ: ಮಂಗಳವಾರ ನಸುಕಿನ ವೇಳೆ ಪಿಎಫ್ಐ ಜಿಲ್ಲಾಧ್ಯಕ್ಷ ಇಜಾಜ್ ಅಹಮದ್ ಸೇರಿದಂತೆ ಮೂವರನ್ನು ಬಂಟ್ವಾಳ ಪೊಲೀಸರು ವಶಕ್ಕೆ ಪಡೆದು (Preventive arrest) ತಹಶೀಲ್ದಾರ್ ಮುಂದೆ ಹಾಜರುಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಂಟ್ವಾಳ ಬಿ.ಸಿ.ರೋಡ್ ಸುತ್ತಮುತ್ತ ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಗೂಡಿನ ಬಳಿಯ ಫಿರೋಜ್ ಮತ್ತು ರಾಝಿಕ್ ಇತರ ಇಬ್ಬರು. ಈಗಾಗಲೇ ಕೆಲ ದಿನಗಳಿಂದ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಪಿಎಫ್ಐ ಕಾರ್ಯಕರ್ತರ ಬಂಧನ ಹಾಗೂ ವಿಚಾರಣೆ ನಡೆಯುತ್ತಿದ್ದು, ಇದರ ಒಂದು ಭಾಗವಾಗಿ ಈ ಕಾರ್ಯಾಚರಣೆ ವರಿಷ್ಠ ಪೊಲೀಸ್ ಅಧಿಕಾರಿಗಳ ಸೂಚನೆಯಂತೆ ಬಂಟ್ವಾಳ ನಗರ ಮತ್ತು ಗ್ರಾಮಾಂತರ ಪೊಲೀಸರು ಕೈಗೊಂಡಿದ್ದಾರೆ. ಬಂಟ್ವಾಳ ಸುತ್ತಮುತ್ತಲಿರುವ ಪಿಎಫ್ಐ ಕಾರ್ಯಕರ್ತರ ಮನೆಗಳಿಗೆ ತೆರಳಿದ ಪೊಲೀಸರು ಮೂವರನ್ನು ವಶಕ್ಕೆ ಪಡೆದು ಅವರನ್ನು ಪ್ರತಿಬಂಧಕ ಕಾಯ್ದೆಯಡಿ ಗರಿಷ್ಠ ಅವಧಿಯ ಮುಚ್ಚಳಿಕೆಗಾಗಿ ಕಾರ್ಯನಿರ್ವಾಹಕ ನ್ಯಾಯಾಧೀಶರೂ ಆಗಿರುವ ಬಂಟ್ವಾಳ ತಹಶೀಲ್ದಾರ್ ಡಾ. ಸ್ಮಿತಾ ರಾಮು ಅವರ ಮುಂದೆ ಹಾಜರುಪಡಿಸಿದ್ದಾರೆ.

Read More

ಉಡುಪಿ: ಜಿಲ್ಲೆಯ ಹೂಡೆ, ಕುಂದಾಪುರ, ಗಂಗೊಳ್ಳಿ ಸೇರಿದಂತೆ ನಾಲ್ಕು ಕಡೆಗಳಲ್ಲಿ ದಾಳಿ ನಡೆಸಿರುವ ಪೊಲೀಸರು ಹಲವು ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ. ಪಿಎಫ್​ಐನ ಸ್ಥಳೀಯ ಮುಖಂಡರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ. ಹೂಡೆಯಲ್ಲಿ ಪಿಎಫ್​ಐ ಮುಖಂಡ ಇಲ್ಯಾಸ್ ಹೂಡೆಯನ್ನು ಮಲ್ಪೆ ಪೊಲೀಸರು, ಕುಂದಾಪುರದ ಆಶಿಕ್ ಕೋಟೇಶ್ವರ ಕುಂದಾಪುರ ಪೊಲೀಸರು, ಗಂಗೊಳ್ಳಿಯಲ್ಲಿ ಪಿಎಫ್​ಐ ಕಾರ್ಯಕರ್ತ ರಜಾಬ್ ಮತ್ತು ಬೈಂದೂರಿನಲ್ಲಿ ಪಿಎಫ್​ಐ ಕಾರ್ಯಕರ್ತ ಕಲಿಲ್ ಸೈಯದ್‌ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ.

Read More

ಬೆಳ್ತಂಗಡಿ: ಉಜಿರೆಗ ಅಜ್ಜರಕಾಡು ಮೈದಾನದ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಅಪರಿಚಿತ ವ್ಯಕ್ತಿಯ ಮೃತದೇಹ ಮಲಗಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಸ್ಥಳೀಯರು ಪರಿಶೀಲನೆ ನಡೆಸಿದಾಗ ಆತ ಮೃತಪಟ್ಟಿರುವುದು ಕಂಡು ಬಂದಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು ಯಾವುದೋ ಅನಾರೋಗ್ಯದಿಂದ ಅಥವಾ ಇನ್ಯಾವುದೇ ಕಾರಣದಿಂದ ವ್ಯಕ್ತಿ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಮೃತ ವ್ಯಕ್ತಿಯ ವಿಳಾಸದ ಬಗ್ಗೆ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ.

Read More

ಮಂಗಳೂರು: ಕರ್ನಾಟಕ ಸರಕಾರದ ಪ್ರವಾಸೋದ್ಯಮ ಇಲಾಖೆಯ ವೆಬ್‌ಸೈಟ್‌ನಲ್ಲಿ ದೈವಾರಾಧನೆ ವಿಚಾರದಲ್ಲಿ ಅನುಚಿತವಾಗಿ ಬರೆಯಲಾಗಿದ್ದು, ಇದನ್ನು ತುಳುವಿನ ಟ್ರೋಲ್ ಪೇಜ್‌ನವರು ಟ್ರೋಲ್ ಮಾಡಿದ್ದರು. ಇದು ಗಮನಕ್ಕೆ ಬರುತ್ತಿದ್ದಂತೆ ಪ್ರವಾಸೋದ್ಯಮ ಇಲಾಖೆಯು ವೆಬ್‌ಸೈಟ್‌ನಲ್ಲಿನ ‘ಭೂತ ಕೋಲ’ ಪೇಜ್ ಅನ್ನು ಡಿಲಿಟ್ ಮಾಡಿದೆ. ಭೂತದ ಕೊಳ/ ಭೂತಾರಾಧನೆ ಎಂಬ ತಲೆಬರಹದಲ್ಲಿರುವ ದೈವಾರಾಧನೆ ವಿಚಾರ ವಿಚಾರ ಟ್ರೋಲ್ ಆಗಿದೆ. ಇಲ್ಲಿ ಭೂತದ ಕೋಲ ಎಂಬ ಪದವು ಭೂತದ ಕೊಳ ಎಂದಾಗಿದೆ‌. ಅಲ್ಲದೆ ಭೂತಾರಾಧನೆಯನ್ನು ದೆವ್ವದ ಆರಾಧನೆ ಎಂದು ಬರೆಯಲಾಗಿದೆ. ಭೂತಗಳನ್ನು ಪ್ರತಿನಿಧಿಸುವ ವಿಗ್ರಹಗಳನ್ನು ಮೆರವಣಿಗೆಯಲ್ಲಿ ಡ್ರಮ್‌ಗಳನ್ನು ಬಾರಿಸುವುದು ಮತ್ತು ಪಟಾಕಿಗಳನ್ನು ಸಿಡಿಸುವ ಮೂಲಕ ಮೆರವಣಿಗೆ ಮಾಡುತ್ತಾರೆ. ಕತ್ತಿ ಮತ್ತು ಗಂಟೆಗಳೊಂದಿಗೆ ಕುಣಿಯುತ್ತ ನರ್ತಕಿ ತಾನು ಪ್ರತಿನಿಧಿಸುವ ದೆವ್ವದ ಅನುಕರಣೆಯಲ್ಲಿ ಸುತ್ತುತ್ತಾನೆ‌. ಉದ್ರಕ್ತವಾಗಿ ಮೇಲಕ್ಕೆ ಕೆಳಕ್ಕೆ ಹೆಜ್ಜೆ ಹಾಕುತ್ತಾನೆ ಎಂದು ಆಕ್ಷೇಪಾರ್ಹವಾಗಿ ಬರೆಯಲಾಗಿದೆ. ತುಳುವಿನ ಟ್ರೋಲ್ ಪೇಜ್ @Tuluvas speaks ಕರ್ನಾಟಕ ಸರಕಾರದಿಂದ ತುಳುವರ ದೈವಕ್ಕೆ ಅವಮಾನ ಎಂದು ಈ ಬರಹದ ಪೇಜ್ ಅನ್ನು ಪೋಸ್ಟ್ ಮಾಡಿ ಟ್ರೋಲ್…

Read More

ಸುಳ್ಯ;ಬೈಕ್ ಗೆ ಆಟೋ ರಿಕ್ಷ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ವಿದ್ಯಾರ್ಥಿ ಮೃತಪಟ್ಟ ಘಟನೆ ಸುಳ್ಯದಲ್ಲಿ ನಡದಿದೆ. ಚೆಂಬು ಗ್ರಾಮದ ಕುದುರೆಪಾಯ ನಿವಾಸಿ ತೇಜೇಶ್ವರ ಎಂಬವರ ಪುತ್ರ ಪ್ರತೀಕ್ (19)ಮೃತಪಟ್ಟ ವಿದ್ಯಾರ್ಥಿ.ಬೇಕರಿಯಲ್ಲಿ ಕೆಲಸ ಮಾಡತ್ತಿರುವ ತೇಜಸ್‌ ಎಂಬ ಯುವಕನ ಜೊತೆ ಇಂದು ಬೆಳಗ್ಗೆ ಕಲ್ಲುಗುಂಡಿಯಿಂದ ಬೈಕ್‌ನಲ್ಲಿ ಪ್ರತೀಕ್ ಸುಳ್ಯದ ಕಡೆಗೆ ಬರುತ್ತಿದ್ದರು.ಈ ವೇಳೆ ಪರಿವಾರಕಾನ ತಿರುವಿನಲ್ಲಿ ಆಟೋರಿಕ್ಷಾವೊಂದು ಬೈಕ್‌ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಬೈಕ್‌ ಸವಾರರಿಬ್ಬರೂ ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು.ಆದರೆ ಆ ವೇಳೆಗಾಗಲೇ ಪ್ರತೀಕ್ ಮೃತಪಟ್ಟರು. ಘಟನೆಯಲ್ಲಿ ಗಂಭೀರ ಗಾಯಗೊಂಡಿರುವ ತೇಜಸ್‌ ಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Read More

ಮಲ್ಪೆ: ಮಲ್ಪೆ ಸಮೀಪದ ಹೂಡೆ ಬೀಚ್‌ನಲ್ಲಿ ನಿನ್ನೆ (ಭಾನುವಾರ) ಸಂಜೆ ನೀರಿಗೆ ಇಳಿದಿದ್ದ ಮಣಿಪಾಲದ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿದ್ದರು. ನಿನ್ನೆ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಇಂದು ಬೆಳಿಗ್ಗೆ ಮತ್ತೋರ್ವನ ಶವವು ಪತ್ತೆಯಾಗಿದೆ. ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ಎಂಐಟಿಯ 15 ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿಗಳು ಕೂಡೆ ಬೀಚ್‌ನಲ್ಲಿ ವಿಹಾರಕ್ಕೆಂದು ನಿನ್ನೆ ಸಂಜೆ ಬೀಚ್‌ಗೆ ತೆರಳಿದ್ದಾಗ ಮೂವರು ನೀರಿನಲ್ಲಿ ಮುಳುಗಿದ್ದರು. ಈ ಪೈಕಿ ನಿನ್ನೆ ತೀವ್ರ ಅಸ್ವಸ್ಥಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಆಗಲೇ ಮೃತಪಟ್ಟಿದ್ದರು. ಬೆಂಗಳೂರಿನ ಷಣ್ಮುಖ (19), ನಿಶಾಂತ್ (19) ಮತ್ತು ಹೈದರಾಬಾದ್‌ನ ಶ್ರೀಕರ (19) ಮೃತ ವಿದ್ಯಾರ್ಥಿಗಳಾಗಿದ್ದಾರೆ. ಶ್ರೀಕರ ಅವರ ಮೃತದೇಹ ಶೋಧ ನಡೆಸಲು‌ ಹಾಗೂ ಮತ್ತಿಬ್ಬರು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಸಾಗಿಸಲು ಎಂದಿನಂತೆ ಅಸಪದ್ಭಾಂಧವ ಈಶ್ವರ್ ಮಲ್ಪೆ ಸಕಾಲದಲ್ಲಿ ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ. ಮೂವರು ಸಹಪಾಠಿಗಳ ಸಾವಿನಿಂದಾಗಿ ಮಣಿಪಾಲ ಕಾಲೇಜಿನಲ್ಲಿ ಸೂತಕದ ಛಾಯೆ ಆವರಿಸಿದೆ.

Read More

ಮಂಗಳೂರು: ರೈಲಿನಡಿಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ನಗರದ ಎಕ್ಕೂರು ಜಪ್ಪು ಬಪ್ಪಲ್ ಸಮೀಪ ಭಾನುವಾರ ಮುಂಜಾನೆ ನಡೆದಿದೆ. ಜಪ್ಪಿನಮೊಗರು ತಂದೊಳಿಗೆ ನಿವಾಸಿ ವಿಶ್ವನಾಥ್ ಎಂಬಾವರ ಪುತ್ರ ಧೀರಜ್( 32) ಎಂಬಾತ ಮೃತ ಯುವಕ. ಸದ್ಯ ಜಪ್ಪುವಿನಲ್ಲಿ ಪತ್ನಿಯೊಂದಿಗೆ ವಾಸವಿದ್ದು, ಕಳೆದ 10 ತಿಂಗಳ ಹಿಂದೆಯಷ್ಟೇ ಕುತ್ತಾರಿನ ಯುವತಿಯನ್ನು ವಿವಾಹವಾಗಿದ್ದರು. ಧೀರಜ್ ಅವರು ಬೆಳಗ್ಗೆ 6.50ಕ್ಕೆ ಮನೆಯಿಂದ ಹೊರಟು ಬಂದಿದ್ದು, ಸುಮಾರು 7 ಗಂಟೆಯ ವೇಳೆಗೆ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ರೈಲಿನಡಿಗೆ ಬಿದ್ದು ಮೃತಪಟ್ಟಿದ್ದಾರೆ. ಮುಂಜಾವಿನ ವೇಳೆ ತಿಂಡಿ ತರುತ್ತೇನೆ ಎಂದು ಮನೆಯಿಂದ ಹೊರಟಿದ್ದರು ಎನ್ನಲಾಗಿದೆ. ಧೀರಜ್ ಅವರು ಖಾಸಗಿ ಕಂಪನಿಯಲ್ಲಿ ಮಾರ್ಕೆಟಿಂಗ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.ಮಂಗಳೂರು ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಬೆಂಗಳೂರು: ನನಗೆ ಯಾರೂ ಲಂಚ ಕೊಡಬೇಕಾಗಿಲ್ಲ, ನಾನು ಭ್ರಷ್ಟ ಅಧಿಕಾರಿಯಾಗಲಾರೆ ಎಂಬ ಶೀರ್ಷಿಕೆಯ ನಾಮಫಲಕವನ್ನು ಅಳವಡಿಸಲು ರಾಜ್ಯ ಸರ್ಕಾರ ಆದೇಶ ಮಾಡಿದೆ. ಈ ಮೂಲಕ ಪೇ ಸಿಎಂ ಪೋಸ್ಟರ್ ಕಾಂಗ್ರೆಸ್ ಅಭಿಯಾನಕ್ಕೆ ರಾಜ್ಯ ಸರ್ಕಾರದಿಂದ ಟಕ್ಕರ್ ಕೊಡಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಅಳವಡಿಸಲು ಅದೇಶ ಮತ್ತು ಸುತ್ತೋಲೆ ಹೊರಡಿಸಲಾಗಿದೆ. ರಾಜ್ಯ ಸರ್ಕಾರದ ವಿರುದ್ಧ ಸರಣಿ ಭ್ರಷ್ಟಾಚಾರ ಆರೋಪ ಹಿನ್ನಲೆಯಲ್ಲಿ ಮುಖ್ಯ ಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ರಿಂದ ಮಹತ್ವದ ಆದೇಶ ಮಾಡಲಾಗಿದೆ. ಅಕ್ಟೋಬರ್ 2ರಿಂದ 20ರವರೆಗೆ ಭ್ರಷ್ಟಾಚಾರ ನಿರ್ಮೂಲನೆ ಅಭಿಯಾನ ಹಮ್ಮಿಕೊಂಡಿರುವ ರಾಜ್ಯ ಸರ್ಕಾರ ತನ್ನ ಮೇಲಿನ ಆರೋಪಮುಕ್ತವಾಗಲು ಹೊರಟಿದೆ. ಈ ಅಭಿಯಾನ ವರ್ಷವಿಡಿ ನಡೆಯಲಿ ಎಂಬ ಬಗ್ಗೆ ಜನ ಆಗ್ರಹ ವ್ಯಕ್ತವಾಗುತ್ತಿದೆ. ಎಲ್ಲಾ ಕಡೆ ಲಂಚದ ಅವತಾರ ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಗಳಲ್ಲಿ ಲಂಚದ ಅವತಾರ ಹೆಚ್ಚಾಗಿದೆ. ಯಾವುದೇ ಒಂದು ಕೆಲಸ ಆಗಲು ಲಂಚ ಕೊಡಲೇಬೇಕು ಎಂಬ ಸ್ಥಿತಿ ಇದೆ. ಗುತ್ತಿಗೆ, ಸರ್ಕಾರಿ ಪ್ರಾಜೆಕ್ಟ್ ಅಲ್ಲೂ ಕಮಿಷನ್…

Read More