ಬೆಂಗಳೂರು: ಭಾರತದಲ್ಲಿನ ಅನೇಕ ಮೊಬೈಲ್ ಬಳಕೆದಾರರು ಸರ್ಕಾರದಿಂದ ತುರ್ತು ಎಚ್ಚರಿಕೆಯ ಸಂದೇಶವನ್ನು ಇಂದು ಬೆಳಿಗ್ಗೆ, ಸ್ವೀಕರಿಸಿದ್ದು, ಈ ಸಂಗತಿ ಜಾಲತಾಣದಲ್ಲಿ ಸಾಕಷ್ಟು ಚರ್ಚೆಯಾಗಿದೆ. ಬೆಳಗ್ಗೆ 11:35ಕ್ಕೆ ಆಂಡ್ರಾಯ್ಡ್ ಮತ್ತು ಐಫೋನ್ಗಳಿಗೆ ತುರ್ತು ಸಂದೇಶ ಬಂದಿದ್ದು, ಏನಿದು ಸಂದೇಶ ? ಯಾಕೆ ಬಂತು? ಎನ್ನುವ ಪ್ರಶ್ನೆ ಜಾಲತಾಣದಲ್ಲಿ ಚರ್ಚೆಯಾಗಿದೆ.ಒಂದೆರಡು ಸೆಕೆಂಡ್ಗಳ ಕಾಲ ಮೊಬೈಲ್ನಲ್ಲಿ ಬೀಪ್ ಸೌಂಡ್ ಬಂದಿದ್ದು, ಈ ಬಗ್ಗೆ ವಿಚಾರ ಗೊತ್ತಿಲ್ಲದವರು ಆತಂಕಗೊಂಡರು. ಕೇಂದ್ರ ಸರ್ಕಾರದ ದೂರಸಂಪರ್ಕ ಇಲಾಖೆಯೂ ಈ ಬಗ್ಗೆ ಈಗಾಗಲೇ ಸ್ಪಷ್ಟನೆ ನೀಡಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರದ ಸಹಯೋಗದಲ್ಲಿ ನಡೆದ ಸೆಲ್ ಬ್ರಾಡ್ಕಾಸ್ಟ್ ಅಲರ್ಟ್ ಸಿಸ್ಟಮ್ ಪರೀಕ್ಷೆಯಾಗಿದೆ. ಈ ಪರೀಕ್ಷೆಯನ್ನು ವಾಸ್ತವವಾಗಿ ಇಂದು ಬಿಹಾರ ಮತ್ತು ಉತ್ತರ ಪ್ರದೇಶದಲ್ಲಿ ಮಾಡಲಾಯಿತಾದರೂ ದೇಶದ ಅನೇಕ ಮಂದಿಗೆ ಈ ಸಂದೇಶ ಬಂದಿದೆ. ಕರ್ನಾಟಕದಲ್ಲಿ ಇಂದು ಸೆಲ್ ಬ್ರಾಡ್ಕಾಸ್ಟ್ ಅಲರ್ಟ್ ಸಿಸ್ಟಮ್ ಪರೀಕ್ಷೆಯನ್ನು ಮಾಡುವುದಾಗಿ ರಾಜ್ಯದ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ತಿಳಿಸಿತ್ತು. ರಾಜ್ಯದ ವಿವಿಧೆಡೆಗಳಲ್ಲಿ ಜನತೆಯ ಮೊಬೈಲ್ಗೆ ತುರ್ತು…
Author: main-admin
ಮಂಗಳೂರು : ಮಂಗಳೂರು ನಗರದ ಪಾಂಡೇಶ್ವರದಲ್ಲಿ ಧಾರ್ಮಿಕ ಕ್ಷೇತ್ರಕ್ಕೆ ಮೊಟ್ಟೆ ಎಸೆದ ಘಟನೆಯೊಂದು ವಿಕೋಪಕ್ಕೆ ಹೋಗುವುದನ್ನು ತಪ್ಪಿಸುವ ಮೂಲಕ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಸಮಯಪ್ರಜ್ಞೆ ಮೆರೆದ ಘಟನೆ ಬೆಳಕಿಗೆ ಬಂದಿದೆ. ಸೋಮವಾರ ಮಂಗಳೂರಿನಲ್ಲಿ ನಡೆದ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಶೌರ್ಯ ಜಾಗರಣಾ ರಥಯಾತ್ರೆ ಮತ್ತು ಸಮಾವೇಶ ಆಯೋಜನೆಗೊಂಡಿತ್ತು. ಸಂಜೆ ವೇಳೆ ಸುಮಾರಿಗೆ ಪಾಂಡೇಶ್ವರದ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಕಂಪೌಂಡ್ಗೆ ಯಾರೋ ಕೋಳಿ ಮೊಟ್ಟೆ ಹಾಗೂ ತೆಂಗಿನಕಾಯಿ ಎಸೆದಿದ್ದಾರೆ. ಈ ಸೂಕ್ಷ್ಮಾ ವಿಚಾರನ್ನು ಸ್ಥಳೀಯರು ಕೂಡಲೇ ಶಾಸಕ ವೇದವ್ಯಾಸ್ ಕಾಮತ್ ಗಮನಕ್ಕೆ ತಂದಿದ್ದಾರೆ. ಕೂಡಲೇ ಶಾಸಕರು ಪೊಲೀಸ್ ಕಮಿಷನರ್ ಗೆ ಫೋನ್ ಮಾಡಿ ಯಾವುದೇ ಕಾರಣಕ್ಕೂ ಪರಿಸ್ಥಿತಿ ಕದಡದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ. ಕೂಡಲೇ ಘಟನೆಯ ಸ್ಥಳಕ್ಕೆ ಧಾವಿಸಿದ ಡಿಸಿಪಿ ಸಿದ್ಧಾರ್ಥ ಗೋಯಲ್ ತಂಡ ಪರಿಶೀಲನೆ ನಡೆಸಿದಾಗ, ಅದು ದೇವಸ್ಥಾನದ ಎದುರಿನ ಪ್ಲ್ಯಾಟ್ ನಿಂದ ಅನ್ಯ ಸಮುದಾಯದ ಇಬ್ಬರು ಪುಟಾಣಿಗಳು ಮಾಡಿದ ಮಕ್ಕಳಾಟ ಎಂಬುದು ಗೊತ್ತಾಗಿತ್ತು. 10 ವರ್ಷದೊಳಗಿನ ಈ ಮಕ್ಕಳು…
ಮಂಗಳೂರು: ಅನಾಥ ರೋಗಿಗಳಿಗೆ ಸಹಾಯ ಮಾಡುತ್ತಿದ್ದ ಮುಲ್ಕಿ ನಿವಾಸಿ ಆಪತ್ಥಾಂಧವ ಎಂದೇ ಗುರುತಿಸಲ್ಪಟ್ಟಿದ್ದ ಆಸಿಫ್ ಅವರನ್ನು ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ವೆನ್ಲಾಕ್ ಆಸ್ಪತ್ರೆಯ ಮಹಿಳಾ ಸೆಕ್ಯುರಿಟಿ ಸಿಬ್ಬಂದಿಗೆ ಹಲ್ಲೆ ನಡೆಸಿರುವ ಆರೋಪದ ಮೇರೆಗೆ ಬಂಧಿಸಿದ್ದಾರೆ. ಆಸಿಫ್ ಬುಧವಾರ ಸಂಜೆ ವೆಸ್ಲಾಕ್ ಆಸ್ಪತ್ರೆಗೆ ಇಬ್ಬರು ರೋಗಿಗಳನ್ನು ಕರೆತಂದಿದ್ದರು ಎನ್ನಲಾಗಿದೆ. ಈ ಸಂದರ್ಭ ಸೆಕ್ಯುರಿಟಿ ಗಾರ್ಡ್ ವಾಹನವನ್ನು ಹೊರಗೆ ಒಯ್ಯುವಂತೆ ಸೂಚಿಸಿದಾಗ ತಾನು ರೋಗಿಗಳನ್ನು ಅಡ್ಮಿಷನ್ ಮಾಡಿಸುತ್ತಿದ್ದೇನೆ, ಸ್ವಲ್ಪ ಹೊತ್ತು ಕಾಯಿರಿ ಎಂದು ಆಸಿಫ್ ಹೇಳಿದ್ದಾರೆ. ಆದರೆ ಕೆಲವು ಹೊತ್ತಿನ ಬಳಿಕವೂ ಆ್ಯಂಬುಲೆನ್ಸ್ ತೆರವು ಮಾಡದಿದ್ದಾಗ ಮಹಿಳಾ ಸಿಬ್ಬಂದಿ ಆಕ್ಷೇಪಿಸಿದರು. ಈ ಸಂದರ್ಭ ಆಸಿಫ್ ಮತ್ತು ಮಹಿಳಾ ಸಿಬ್ಬಂದಿಯ ಮಧ್ಯೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ತನ್ನನ್ನು ದೂಡಿ ಹಾಕಿ ಆಸಿಫ್ ಹಲ್ಲೆ ಮಾಡಿದ್ದಾರೆ ಎಂದು ಮಹಿಳಾ ಸಿಬ್ಬಂದಿ ನೀಡಿದ ದೂರಿನ ಮೇರೆಗೆ ಪೊಲೀಸರು ಆಸಿಫ್ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಾಟ್ನಾ: ದೆಹಲಿ- ಕಾಮಾಕ್ಯ ನಾರ್ತ್ ಈಸ್ಟ್ ಸೂಪರ್ಫಾಸ್ಟ್ ರೈಲಿನ ಆರು ಬೋಗಿಗಳು ಬುಧವಾರ ಬಿಹಾರದ ಬಕ್ಸರ್ ಸಮೀಪ ಹಳಿ ತಪ್ಪಿ ಉಂಟಾದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೇರಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಈ ಸೂಪರ್ಫಾಸ್ಟ್ ರೈಲು ರಾತ್ರಿ 9.35ರ ಸುಮಾರಿಗೆ ರಘುನಾಥಪುರ ನಿಲ್ದಾಣದ ಬಳಿ ಹಳಿ ತಪ್ಪಿದೆ. ಎರಡು ಎಸಿ 3 ಟೈರ್ ಬೋಗಿಗಳು ಬುಡಮೇಲಾಗಿದ್ದು, ಇತರ ನಾಲ್ಕು ಬೋಗಿಗಳು ಹಳಿಯಿಂದ ಆಚೆಗೆ ಎಸೆಯಲ್ಪಟ್ಟಿವೆ. “ಆನಂದ್ ವಿಹಾರ್ ಟರ್ಮಿನಲ್ ನಿಂದ ಕಾಮಾಕ್ಯಗೆ ತೆರಳುತ್ತಿದ್ದ ರೈಲುಗಾಡಿ ಸಂಖ್ಯೆ 12506 ನಾರ್ತ್ಈಸ್ಟ್ ಎಕ್ಸ್ಪ್ರೆಸ್ ರೈಲಿನ ಕೆಲ ಬೋಗಿಗಳು ರಾತ್ರಿ 9.35ರ ವೇಳೆಗೆ ದಾನಾಪುರ ವಿಭಾಗದ ರಘುನಾಥಪುರ ನಿಲ್ದಾಣ ಬಳಿ ಹಳಿತಪ್ಪಿವೆ. ಸಹಾಯವಾಣಿ ಸಂಖ್ಯೆ ಪಿಎನ್ ಬಿಇ-9771449971, ಡಿಎನ್ಆರ್- 8905697493, ಎಆರ್ಎ- 8306182542, ಸಿಓಎಂಎಲ್ ಸಿಎಲ್ಎಲ್- 7759070004” ಎಂದು ಉತ್ತರ ರೈಲ್ವೆ ಹೇಳಿಕೆ ನೀಡಿದೆ.“ನಾಲ್ಕು ಸಾವುಗಳು ದೃಢಪಟ್ಟಿವೆ… 21 ಬೋಗಿಗಳು ಹಳಿ ತಪ್ಪಿವೆ” ಎಂದು ಪೂರ್ವ ಕೇಂದ್ರ ರೈಲ್ವೆ ಪ್ರಧಾನ ವ್ಯವಸ್ಥಾಪಕ ತರುಣ್…
ಹರ್ಯಾಣ: ಪೊಲೀಸರ ವಶದಲ್ಲಿದ್ದ ಆರೋಪಿಯೊಬ್ಬ ಪೊಲೀಸರ ವಾಹನವನ್ನೇ ಬಳಸಿ ಎಸ್ಕೇಪ್ ಆಗಿರುವ ಘಟನೆ ಹರ್ಯಾಣದಲ್ಲಿ ನಡೆದಿದೆ. ಕೌಟುಂಬಿಕ ಕಲಹದ ದೂರೊಂದನ್ನು ಸ್ವೀಕರಿಸಿದ ಪೊಲೀಸರು ಸ್ಥಳಕ್ಕೆ ತೆರಳುತ್ತಿದ್ದರು. ಇದೇ ವೇಳೆ ರಸ್ತೆ ಬದಿಯಲ್ಲಿ ಜಗಳವಾಡುತ್ತಿದ್ದ ಗುಂಪನ್ನು ನೋಡಿದ ಪೊಲೀಸರು ಮಧ್ಯಪ್ರವೇಶಿಸಿ, ಘಟನೆಯಲ್ಲಿ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದು ಅದೇ ಪೊಲೀಸ್ ಕಾರಿನಲ್ಲಿ ಕರೆದುಕೊಂಡು ಹೋದರು. ಇದಾದ ಬಳಿಕ ಕೌಟುಂಬಿಕ ಕಲಹದ ದೂರು ಬಂದಿದ್ದ ಖುರ್ದಿ ಗ್ರಾಮಕ್ಕೆ ತೆರಳಿದ ಪೊಲೀಸರು ವಾಹನದಿಂದ ಕೆಳಗಿಳಿದು ದೂರು ಬಂದ ಮನೆಯತ್ತ ಹೋಗಿದ್ದಾರೆ. ಆದರೆ ಪೊಲೀಸರು ಈ ವೇಳೆ ವಾಹನದ ಕೀಯನ್ನು ಬಿಟ್ಟು ಹೋಗಿದ್ದಾರೆ. ಪೊಲೀಸರು ಪ್ರಕರಣವನ್ನು ಬಗೆಹರಿಸಲು ಯತ್ನಿಸುತ್ತಿರುವಾಗ ಇತ್ತ ವಾಹನದಲ್ಲಿ ವ್ಯಕ್ತಿ ಪೊಲೀಸ್ ವಾಹನವನ್ನೇ ಬಳಸಿಕೊಂಡು ಅಲ್ಲಿಂದ ಪರಾರಿ ಆಗಿದ್ದಾನೆ. ಕೂಡಲೇ ಬೈಕ್ನಲ್ಲಿ ಚೇಸ್ ಮಾಡಿದ ಪೊಲೀಸರ ಕಣ್ತಪ್ಪಿಸಿದ ವ್ಯಕ್ತಿ, ಕಾರನ್ನು ಘಟನಾ ಸ್ಥಳದಿಂದ 10 ಕಿ.ಮೀ ದೂರದ ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿ, ಪರಾರಿಯಾಗಿದ್ದಾನೆ. ಕಾರು ಪತ್ತೆಯಾದರು, ಕಾರಿನ ಕೀ ಕಾಣೆಯಾಗಿದೆ. ಸ್ಥಳಕ್ಕೆ ಬಂದ ಪೊಲೀಸರು ವಾಹನವನ್ನು…
ಬೆಳ್ತಂಗಡಿ: ವೇಣೂರು ಶ್ರೀ ಬಾಹುಬಲಿ ಕ್ಷೇತ್ರದ ಪರಿಸರದಲ್ಲಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಜಿನ ಭಜನಾ ಸ್ಪರ್ಧೆಗೆ ತರಬೇತಿ ಪಡೆಯುತ್ತಿದ್ದಾಗ ವ್ಯಕ್ತಿಯೊರ್ವ ಸ್ಥಳಕ್ಕೆ ತೆರಳಿ ಅವಾಚ್ಯ ಶಬ್ದಗಳಿಂದ ಬೈದಿರುವುದಲ್ಲದೆ, ಮಚ್ಚು ತೋರಿಸಿ ಜೀವ ಬೆದರಿಕೆ ಹಾಕಿರುವುದಾಗಿ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಸಂಬಂಧ ಮುಂಡೂರಿನ ಆನಂದ ಆಚಾರ್ಯ (38 ವರ್ಷ) ಎಂಬಾತ ಮೇಲೆ ಪ್ರಕರಣ ದಾಖಲಾಗಿದೆ. ಈತ ವೇಣೂರು ಬಾಹುಬಲಿ ಕ್ಷೇತ್ರದಲ್ಲಿ ವಲಯ ಮಟ್ಟದ ಜಿನ ಭಜನಾ ಸ್ಪರ್ಧೆಗೆ ಮಹಿಳೆಯರು, ಮಕ್ಕಳು ಸೇರಿ ಸುಮಾರು 70 ಮಂದಿ ಅಭ್ಯಾಸ ನಡೆತ್ತಿದ್ದರು. ಈ ವೇಳೆ ಪ್ರವಾಸಿಗರೂ ಕೂಡ ಇದ್ದರು. ಈ ಸಂದರ್ಭ ಅಲ್ಲಿಗೆ ತೆರಳಿದ ಆರೋಪಿ ಮಚ್ಚು ತೋರಿಸಿ, ಬೆದರಿಕೆ ಹಾಕಿದ್ದಾನೆ. ಕೂಡಲೇ ಸ್ಥಳೀಯರು ವೇಣೂರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಚ್ಙನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪಣಂಬೂರು: ಮಡಿಕೇರಿ ಮೂಲದ ವ್ಯಕ್ತಿಯೊಬ್ಬರು ನಗರ ಹೊರವಲಯದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಬ್ಬು ಸ್ವಾಮಿ ದೈವಸ್ಥಾನದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ರೀತಿಯಲ್ಲಿ ಪತ್ತೆಯಾಗಿದ್ದಾರೆ. ಮೃತರನ್ನು ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಗೋಪಾಲ (64) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಗೋಪಾಲ ಅವರು ಮಡಿಕೇರಿಯಿಂದ ಸೋಮವಾರ ತಣ್ಣೀರು ಬಾವಿ ಬೀಚ್ ಗೆ ಬಂದಿದ್ದು, ಬಳಿಕ ದೈವಸ್ಥಾನದ ಪ್ರಾಂಗಣದಲ್ಲಿ ನೈಲಾನ್ ಹಗ್ಗದಿಂದ ಕುತ್ತಿಗೆಗೆ ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ. ಘಟನೆಗೆ ಸಂಬಂಧಿಸಿ ಪಣಂಬೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಉಳ್ಳಾಲ: ಮೀನುಗಾರಿಕೆಗೆ ತೆರಳುತ್ತಿದ್ದ ಲಾರಿಯೊಂದು ಏಕಾಏಕಿ ಬ್ರೇಕ್ ಹೊಡೆದ ಪರಿಣಾಮ ಹಿಂದಿನಿಂದ ಧಾವಿಸುತ್ತಿದ್ದ ಸ್ಕೂಟರ್ ಲಾರಿಗೆ ಡಿಕ್ಕಿ ಹೊಡೆದಿದ್ದು ರಸ್ತೆಗೆಸೆಯಲ್ಪಟ್ಟ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನೇತ್ರಾವತಿ ಸೇತುವೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಕೋಟೆಕಾರ್ ಕೊರಗಜ್ಜನ ಕಟ್ಟೆ ಬಳಿ ನಿವಾಸಿ ಅಝ್ವೀನ್(21) ಮೃತ ಯುವಕ. ಅಝ್ವೀನ್ ಝೊಮೆಟೊ ಕಂಪನಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಇಂದು ಬೆಳಗ್ಗೆ ಕೋಟೆಕಾರಿಂದ ಮಂಗಳೂರಿಗೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ನೇತ್ರಾವತಿ ಸೇತುವೆಯಲ್ಲಿ ಘಟನೆ ನಡೆದಿದೆ. ಮೀನುಗಾರಿಕೆಗೆ ಮಂಗಳೂರಿಗೆ ತೆರಳುತ್ತಿದ್ದ ಲಾರಿಯಲ್ಲಿದ್ದ ಪ್ಲಾಸ್ಟಿಕ್ ಬಾಕ್ಸ್ ರಸ್ತೆಗೆ ಬಿದ್ದಿದ್ದು ಬಾಕ್ಸ್ ಹೆಕ್ಕಲು ಲಾರಿ ಚಾಲಕ ಏಕಾಏಕಿ ಬ್ರೇಕ್ ಹೊಡೆದಿದ್ದಾನೆ. ಪರಿಣಾಮ ಹಿಂದಿನಿಂದ ಬಂದ ಸ್ಕೂಟರ್ ಲಾರಿಗೆ ಡಿಕ್ಕಿ ಹೊಡೆದು ಅಝ್ವೀನ್ ರಸ್ತೆಗೆಸೆಯಲ್ಪಟ್ಟು ಪ್ರಾಣ ಕಳಕೊಂಡಿದ್ದಾನೆ. ಮೃತ ಅಝ್ವೀನ್ ಕುಟುಂಬ ಬಡತನದಲ್ಲಿದ್ದು ಆತನ ತಂದೆ ಹನೀಫ್ ಅವರು ಮನೆಯಲ್ಲಿ ಬಿರಿಯಾನಿ ತಯಾರಿಸಿ ಜೀವನ ನಡೆಸುತ್ತಿದ್ದಾರೆ. ಈ ಸಂಬಂಧ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಗಳೂರು: ಕತಾರ್ನಲ್ಲಿ ಉದ್ಯೋಗ ನೀಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರ ಖಾತೆಯಿಂದ 2,50,325 ರೂ. ವರ್ಗಾಯಿಸಿ ವಂಚನೆಗೈದ ಬಗ್ಗೆ ನಗರದ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ರೋಹನ್ ಶರ್ಮ ಮತ್ತು ಆಲಿ ಎಂದು ಗುರುತಿಸಲಾಗಿದೆ. ಇ-ಮೇಲ್ಗೆ ಕತಾರ್ನ ಕಂಪೆನಿಯೊಂದರಲ್ಲಿ ಇಂಜಿನಿಯರ್ ಉದ್ಯೋಗವಿದ್ದು, ಇದರ ಇಂಟರ್ವ್ಯೂ ಇದೆಯೆಂದು ಸಂದೇಶ ಬಂದಿತ್ತು. ಅದರಂತೆ ದೂರುದಾರರು ಅರ್ಜಿ ಸಲ್ಲಿಸಲು ನಿರ್ಧರಿಸಿ, ಆರೋಪಿಗಳು ಹೇಳಿದಂತೆ ಅಂಕಪಟ್ಟಿ, ರೆಸ್ಯೂಮ್, ಸ್ಯಾಲರಿ ಸ್ಲಿಪ್, ಪಾಸ್ಪೋರ್ಟ್ ಪ್ರತಿ, ಕೋವಿಡ್ ವ್ಯಾಕ್ಸಿನೇಶನ್ ಸರ್ಟಿಫಿಕೇಟ್ನ್ನು ಇ-ಮೇಲ್ ಮೂಲಕ ಕಳುಹಿಸಿಕೊಟ್ಟಿದ್ದರು. ಇದಾದ ಕೆಲದಿನಗಳ ಬಳಿಕ ಅವರ ಖಾತೆಯಿಂದ ಹಂತ ಹಂತವಾಗಿ 2,50,325 ಲಕ್ಷ ರೂ. ಗಳನ್ನು ವರ್ಗಾಯಿಸಿಕೊಂಡಿದ್ದಾರೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಪಣಂಬೂರು: ಮಡಿಕೇರಿ ಮೂಲದ ವ್ಯಕ್ತಿಯೊಬ್ಬರು ನಗರ ಹೊರವಲಯದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಬ್ಬು ಸ್ವಾಮಿ ದೈವಸ್ಥಾನದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ರೀತಿಯಲ್ಲಿ ಪತ್ತೆಯಾಗಿದ್ದಾರೆ. ಮೃತರನ್ನು ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಗೋಪಾಲ (64) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಗೋಪಾಲ ಅವರು ಮಡಿಕೇರಿಯಿಂದ ಸೋಮವಾರ ತಣ್ಣೀರು ಬಾವಿ ಬೀಚ್ ಗೆ ಬಂದಿದ್ದು, ಬಳಿಕ ದೈವಸ್ಥಾನ ಪ್ರಾಂಗಣದಲ್ಲಿ ನೈಲಾನ್ ಹಗ್ಗದಿಂದ ಕುತ್ತಿಗೆಗೆ ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ. ಘಟನೆಗೆ ಸಂಬಂಧಿಸಿ ಪಣಂಬೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.










