Author: main-admin

ಹೈದರಾಬಾದ್: ತನ್ನ ಮದುವೆಗೆ ಸೂಕ್ತ ಜೋಡಿ ಸಿಗಲಿಲ್ಲ ಎಂಬ ಕಾರಣಕ್ಕೆ 45 ವರ್ಷದ ಮಹಿಳೆಯನ್ನು ಆಕೆಯ ಮಗ ಕೊಲೆ ಮಾಡಿರುವ ಘಟನೆ ಸಿದ್ದಿಪೇಟ್ ಜಿಲ್ಲೆಯಲ್ಲಿ ನಡೆದಿದೆ. ಬುಧವಾರ ಮತ್ತು ಗುರುವಾರ ಮಧ್ಯರಾತ್ರಿ ಜಿಲ್ಲೆಯ ಬಂಡಾ ಮೈಲಾರಂ ಗ್ರಾಮದ ಮಹಿಳೆಯ ನಿವಾಸದಲ್ಲಿ ಈ ಘಟನೆ ನಡೆದಿದೆ. ಕೊಲೆಗೆ ಸಂಬಂಧಿಸಿದಂತೆ ಮಹಿಳೆಯ ಮಗ ಮತ್ತು ಇನ್ನೊಬ್ಬ ಸಂಬಂಧಿಯನ್ನು ಬಂಧಿಸಲಾಗಿದೆ. ಮಹಿಳೆಯ ಮಗಳು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಮತ್ತು ತನಿಖೆಯ ಸಂದರ್ಭದಲ್ಲಿ ಸಂತ್ರಸ್ತೆಯ ಮಗ ಮತ್ತು ಇನ್ನೊಬ್ಬ ಸಂಬಂಧಿ ಅಪರಾಧವನ್ನು ಒಪ್ಪಿಕೊಂಡಿದ್ದಾರೆ ಎಂದು ಅವರು ಹೇಳಿದರು. ಮಹಿಳೆಯನ್ನು ಇಟ್ಟಿಗೆಯಿಂದ ಹೊಡೆದು ಕೊಂದರು. ಪೊಲೀಸರನ್ನು ದಾರಿ ತಪ್ಪಿಸುವ ಸಲುವಾಗಿ ಅವರು ಮಹಿಳೆಯ ಕತ್ತು ಸೀಳಿ ಕಾಲುಗಳನ್ನು ಕತ್ತರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Read More

ಕಾಸರಗೋಡು: ಶಾಲಾ ವಾಹನದಡಿಗೆ ಬಿದ್ದು ನರ್ಸರಿ ವಿದ್ಯಾರ್ಥಿನಿ ಮೃತಪಟ್ಟ ದಾರುಣ ಘಟನೆ ಇಂದು ಮಧ್ಯಾಹ್ನ ಕಂಬಾರ್ ಸಿರಿಬಾಗಿಲು ಎಂಬಲ್ಲಿ ನಡೆದಿದೆ. ಸಿರಿಬಾಗಿಲಿನ ಮುಹಮ್ಮದ್ ಸುಬೈರ್ ರವರ ಪುತ್ರಿ ಆಯಿಷಾ ಸೆಯಾ (4) ಮೃತ ಪಟ್ಟವಳು.ಮನೆ ಸಮೀಪ ಈ ದುರಂತ ನಡೆದಿದೆ ಶಾಲೆ ಬಿಟ್ಟು ಮನೆ ಬಳಿ ಬಾಲಕಿಯನ್ನು ಇಳಿಸಿ ಬಸ್ಸನ್ನು ಹಿಂದಕ್ಕೆ ತೆಗೆಯು ತ್ತಿದ್ದಾ ಗ ಅದೇ ಬಸ್ಸಿನಡಿ ಸಿಲುಕಿ ಈ ಘಟನೆ ನಡೆದಿದೆ. ಸ್ಥಳೀಯರು ಧಾವಿಸಿ ಬಂದು ಕೂಡಲೇ ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ತಲಪಿಸಿದರೂ ಆಗಲೇ ಮೃತಪಟ್ಟಿದ್ದಳು. ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ಬಾಲಕಿ ನೆಲ್ಲಿಕುಂಜೆ ಖಾಸಗಿ ಶಾಲೆಯ ನರ್ಸರಿ ವಿದ್ಯಾರ್ಥಿನಿಯಾಗಿದ್ದಳು.

Read More

ಪುತ್ತೂರು: ಯುವತಿಯೋರ್ವಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ನಡೆದಿದೆ. ಚೂರಿ ಇರಿತಕ್ಕೋಳಗಾದ ಯುವತಿಯನ್ನು ವಿಟ್ಲದ ಕುದ್ದುಪದವು ಮೂಲದವಳು ಎನ್ನಲಾಗಿದೆ. ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಹಿಂಭಾಗದ ಮಹಿಳಾ ಪೊಲೀಸ್ ಠಾಣೆಯ ಬಳಿ ಯುವಕನೋರ್ವ ಯುವತಿಯ ಕುತ್ತಿಗೆಗೆ ಚಾಕು ಇರಿದು ಕೊಲೆಯತ್ನ ನಡೆಸಿದ್ದು, ಗಂಭೀರ ಗಾಯಗೊಂಡ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಕೊಲೆಗೆ ಯತ್ನಿಸಿದ ಯುವಕ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ.

Read More

ಮೂಡುಬಿದಿರೆ: ಮೂಡುಬಿದಿರೆಯ ರಾಜೀವ ಗಾಂಧಿ ಸಂಕೀರ್ಣದ ಎದುರು ತನ್ನ ಸಹಪಾಠಿ ವಿದ್ಯಾರ್ಥಿನಿ ಜೊತೆ ಅನ್ಯ ಮತೀಯ ವಿದ್ಯಾರ್ಥಿಯೋರ್ವ ಮಾತನಾಡಿದ ಎನ್ನುವ ಕಾರಣಕ್ಕೆ  ಆತನ ಮೇಲೆ ಗುಂಪೊಂದು ಹಲ್ಲೆ ನಡೆಸಿದ್ದು, ಈ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿ ಮೂವರ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಸಂಜಯ್, ಅಭಿಲಾಷ್ , ಪ್ರೇಮ್ ಪ್ರಕರಣ ದಾಖಲಾದ ಮೂವರು ಆರೋಪಿಗಳು ಎಂದು ಗುರುತಿಸಲಾಗಿದೆ. ಮೂಡುಬಿದಿರೆ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ಬೆಂಗಳೂರಿಗೆ ಹೋಗಲು ರಾಜೀವ್ ಗಾಂಧಿ ಕಾಂಪ್ಲೆಕ್ಸ್ ಎದುರು ನಿಂತಿದ್ದಳು. ಅದೇ ಸಮಯದಲ್ಲಿ ಆಕೆಯ ಸಹಪಾಠಿ ಕೋಟೆಬಾಗಿಲು ಸಮೀಪದ ವಿದ್ಯಾರ್ಥಿ ಆಕೆಯೊಂದಿಗೆ ಮಾತನಾಡಿದ್ದಾನೆ ಎನ್ನಲಾಗಿದೆ. ಅನ್ಯ ಮತೀಯ ಯುವಕ ಹಿಂದೂ ಯುವತಿ ಜೊತೆ ಸಲುಗೆಯಿಂದ ಮಾತನಾಡಿದ್ದಾನೆ ಎಂದು ಕೆರಳಿದ ಗುಂಪೊಂದು ಯುವತಿ ಬಸ್ ಹತ್ತಿದ ಬಳಿಕ ಹಲ್ಲೆ ನಡೆಸಿದೆ ಎಂದು ದೂರಲಾಗಿದೆ. ಈ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಬುಧವಾರ ಜಿಲ್ಲಾಧಿಕಾರಿಗಳು ಇಲ್ಲಿನ ತಾಲೂಕು ಕಚೇರಿಗೆ ಭೇಟಿ ನೀಡಿದ್ದು,…

Read More

ಬೆಂಗಳೂರು: ಅನಾರೋಗ್ಯ ಪೀಡಿತರಾಗಿದ್ದಂತ ಪೊಲೀಸ್ ಕಾನ್ ಸ್ಟೇಬಲ್ ಒಬ್ಬರು ಚಿಕಿತ್ಸೆ ಪಡೆಯೋದಕ್ಕೆ ಬಂದು, ಇಂದು ಹೃದಯಾಘಾತದಿಂದ ನಗರದಲ್ಲಿ ಸಾವನ್ನಪ್ಪಿರೋ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕು ಗೋಗಿ ಪೊಲೀಸ್ ಠಾಣೆಯಲ್ಲಿ ಕಾನ್ ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಂತ ದೇವಿಂದ್ರಪ್ಪ ಎಂಬುವರು, ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನಲೆಯಲ್ಲಿ ಅವರು ಬೆಂಗಳೂರಿಗೆ ಚಿಕಿತ್ಸೆ ಪಡೆಯೋದಕ್ಕೆ ಬಂದಿದ್ದರು. ಇಂತಹ ಅವರು ಇಂದು ದಿಢೀರ್ ಹೃದಯಾಘಾತಕ್ಕೆ ಒಳಗಾಗಿದ್ದರು. ಅವರನ್ನು ಸಮೀಪದ ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಅಂದಹಾಗೇ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿಯಲ್ಲಿನ ಪೊಲೀಸ್ ಠಾಣೆಯಲ್ಲಿ ದೇವೀಂದ್ರಪ್ಪ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ ಮೂರು ತಿಂಗಳಿನಿಂದ ಅನಾರೋಗ್ಯದ ಕಾರಣ, ಚಿಕಿತ್ಸೆಗಾಗಿ ಬೆಂಗಳೂರಿಗೆ ಆಗಮಿಸಿದ್ದರು. ಆದ್ರೇ ಇಂದು ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.

Read More

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ವ್ಯವಸ್ಥೆ ನೋಡಿಕೊಳ್ಳುತ್ತಿರುವ ಸಿಐಎಸ್‌ಎಫ್ ಸಿಬಂದಿಗೆ ಬಾಂಬ್‌ ಸೂಟ್‌ ಒದಗಿಸಲಾಗಿದೆ. ಈ ಸೂಟ್‌ಗಳನ್ನು ಬಾಂಬ್‌ ಪತ್ತೆ ಮತ್ತು ನಿಷ್ಕ್ರಿಯ ದಳ ಬಳಸಿಕೊಳ್ಳಲಿದೆ. ನಾಗರಿಕ ವಿಮಾನಯಾನ ಭದ್ರತಾ ನಿಯಂತ್ರಣ ಅಗತ್ಯಗಳಿಗೆ ಪೂರಕವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು ಭದ್ರತಾ ತಂಡಕ್ಕೆ ಅತ್ಯಾಧುನಿಕ ಉಪಕರಣಗಳನ್ನು ಒದಗಿಸಲಾಗುತ್ತಿದೆ. ಕಳೆದ ಡಿಸೆಂಬರ್‌ನಲ್ಲಿ ಬಾಂಬ್‌ ಪತ್ತೆ ಮತ್ತು ನಿಷ್ಕ್ರಿಯ ಉಪಕರಣಗಳನ್ನು, ಕಳೆದ ವರ್ಷ ಗುಂಡು ನಿರೋಧಕ ವಾಹನ, ಇತ್ತೀಚೆಗೆ ಹೆಚ್ಚುವರಿ ಬ್ಯಾರಕ್‌ ಒದಗಿಸಲಾಗಿತ್ತು.

Read More

ಬೆಂಗಳೂರು : ಚಂದ್ರಯಾನ-3 ಲ್ಯಾಂಡರ್ ಮಾಡ್ಯೂಲ್ ಚಂದ್ರನ ಮೇಲೆ ಬುಧವಾರ ಸಂಜೆ 06.03ಕ್ಕೆ ಯಶಸ್ವಿಯಾಗಿ ಇಳಿದಿದ್ದು , ಇಸ್ರೋ ಛಲಕ್ಕೆ ಹೊಸದೊಂದು ಬಲ ದೊರಕಿದ್ದು ಭಾರತದ ವೈಜ್ಞಾನಿಕ ಶಕ್ತಿಯ ಅನಾವರಣವಾಗಿ ಜಗತ್ತಿಗೆ ಮತ್ತೊಮ್ಮೆ ಬೆಳಕು ಚಲ್ಲಿದೆ. ನಾಲ್ಕು ವರ್ಷಗಳಲ್ಲಿ ಇಸ್ರೋದ ಎರಡನೇ ಪ್ರಯತ್ನದಲ್ಲಿ ಚಂದ್ರಯಾನ-3 ಮಿಷನ್ ಚಂದ್ರನ ಮೇಲೆ ಸ್ಪರ್ಶಿಸುವಲ್ಲಿ ಮತ್ತು ರೋಬೋಟಿಕ್ ಲೂನಾರ್ ರೋವರ್ ಅನ್ನು ಲ್ಯಾಂಡಿಂಗ್ ಮಾಡುವಲ್ಲಿ ಯಶಸ್ವಿಯಾಗಿದ್ದು, ಯುಎಸ್ ನಂತರ ಚಂದ್ರನ ಮೇಲ್ಮೈಯಲ್ಲಿ ಸಾಫ್ಟ್ ಲ್ಯಾಂಡಿಂಗ್ ತಂತ್ರಜ್ಞಾನ ಯಶಸ್ಸು ಪಡೆದುಕೊಂಡ ನಾಲ್ಕನೇ ದೇಶ ಭಾರತವಾಗಿದೆ. ಚೀನಾ ಮತ್ತು ಹಿಂದಿನ ಸೋವಿಯತ್ ಒಕ್ಕೂಟ ಯಶಸ್ವಿ ಯಾಗಿದ್ದವು. ಇಸ್ರೋ ವಿಜ್ಞಾನಿಗಳು ಚಂದ್ರಯಾನ-3 ನ್ನು ಚಂದ್ರನ ಮೇಲ್ಮೈ ಮೇಲೆ ಮೃದುವಾಗಿ ಇಳಿಸಲು ಸಾಕಷ್ಟು ಎಚ್ಚರಿಕೆಗಳನ್ನು ತೆಗೆದುಕೊಂಡಿದ್ದರು.

Read More

ಮೂಡುಬಿದಿರೆ : ಹಿಂದೂ ಧರ್ಮದ ಸಹಪಾಠಿ ವಿಧ್ಯಾರ್ಥಿನಿ ಜೊತೆ ಮಾತನಾಡಿದ್ದಕ್ಕೆ ಯುವಕರ ಗುಂಪೊಂದು ಮುಸ್ಲಿಂ ವಿಧ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಘಟನೆ ಮೂಡಬಿದಿರೆ ಬಸ್ ನಿಲ್ದಾಣ ಬಳಿ ಸೋಮವಾರ ರಾತ್ರಿ ನಡೆದಿದ್ದು. ಮೂಡುಬಿದಿರೆ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ. ಕಾಲೇಜೊಂದರ ವಿದ್ಯಾರ್ಥಿನಿ ಬೆಂಗಳೂರಿಗೆ ತೆರಳಲು ಬಸ್‌ಗಾಗಿ ಸೋಮವಾರ ರಾತ್ರಿ ಬಸ್‌ನಿಲ್ದಾಣದ ಬಳಿ ಕಾಯುತ್ತಿದ್ದ ವೇಳೆ ಆಕೆಯ ಸಹಪಾಠಿಯಾಗಿದ್ದ ಕೋಟೆಬಾಗಿಲಿನ ಮುಸ್ಲಿಂ ಯುವಕ ಆಕೆ ಜೊತೆ ಮಾತನಾಡುತ್ತಾ ನಿಂತಿದ್ದ. ಇದನ್ನು ಕೆಲವು ಸ್ಥಳಿಯರು ಗಮನಿಸಿದ್ದರು. ವಿದ್ಯಾರ್ಥಿನಿ ಕೆಎಸ್ಆರ್ಟಿಸಿ ಬಸ್ ಹತ್ತಿ ತೆರಳಿದ ನಂತರ ಯುವಕರ ತಂಡವೊಂದು ವಿದ್ಯಾರ್ಥಿಗೆ ಹಲ್ಲೆ ನಡೆಸಿತ್ತು. ಹಲ್ಲೆಗೊಳಗಾದ ವಿದ್ಯಾರ್ಥಿ ನೀಡಿದ ದೂರಿನ ಮೇರೆಗೆ ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳು ಇನ್ನೂ ಪತ್ತೆಯಾಗಿಲ್ಲ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Read More

ಮಂಗಳೂರು: ನಿಷೇಧಿತ ಇ- ಸಿಗರೇಟ್ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯದ ಯುವತಿ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಮಂಗಳೂರಿನ ಲಾಲ್‌ಬಾಗ್‌ ಬಳಿಯ ಸಾಯಿಬಿನ್‌ ಕಾಂಪ್ಲೆಕ್ಸ್‌ನ ನೆಲಮಹಡಿಯಲ್ಲಿರುವ ಆಮಂತ್ರಣ, ಯೂನಿಕ್‌ ವರ್ಲ್ಡ್ ಮತ್ತು ಫೆಂಟಾಸ್ಟಿಕ್‌ ವರ್ಲ್ಡ್ ಅಂಗಡಿಗಳ ಮೇಲೆ ಬರ್ಕೆ ಪೊಲೀಸರು ಸೋಮವಾರ ದಾಳಿ ನಡೆಸಿದ್ದರು. ಈ ವೇಳೆ ನಿಷೇಧಿತ ಇ-ಸಿಗರೇಟ್‌ ಮತ್ತು ಪ್ಯಾಕೆಟ್‌ ಮೇಲೆ ಎಚ್ಚರಿಕೆ ನಮೂದಿಸದ ವಿದೇಶಿ ಸಿಗರೇಟ್‌ ಸೇರಿದಂತೆ ಒಟ್ಟು ಅಂದಾಜು 2.70 ಲ.ರೂ.ಮೌಲ್ಯದ ಸಿಗರೇಟ್‌ಗಳನ್ನು ವಶಕ್ಕೆ ಪಡೆದು ನಾಲ್ವರನ್ನು ಬಂಧಿಸಿದ್ದಾರೆ. ಸುಳ್ಯ ನೆಲ್ಲೂರು ಕೆಮ್ರಾಜೆ ನಿವಾಸಿ ಸ್ವಾತಿ (26), ಮಣ್ಣಗುಡ್ಡೆಯ ಶಿವಕುಮಾರ್‌ (34), ಕುತ್ತಾರ ಪದವಿನ ಹಸನ್‌ ಶರೀಫ್ (50) ಮತ್ತು ರೆಹಮತುಲ್ಲಾ (45) ಬಂಧಿತ ಆರೋಪಿಗಳು. ಬಂಧಿತರಲ್ಲಿ ಇಬ್ಬರಿಗೆ ಜಾಮೀನು ದೊರೆತಿದ್ದು, ಮತ್ತಿಬ್ಬರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

Read More

ಪುತ್ತೂರು: ವ್ಯಕ್ತಿಯೋರ್ವ ಇಬ್ಬರು ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಡಗನ್ನೂರಿನಲ್ಲಿ ನಡೆದಿದೆ. ಸುಳ್ಯ ನಿವಾಸಿ ಸುರೇಶ್ ಎಂಬಾತ, ಬಡಗನ್ನೂರು ನಿವಾಸಿ ಸುರೇಖ(54) ಹಾಗು ಆಲಂಕಾರ್ ಕುಂತೂರು ನಿವಾಸಿ ಗಿರಿಜಾ(52) ಎಂಬುವರ ಮೇಲೆ ಹಲ್ಲೆ ನಡೆಸಿದ್ದಾನೆ. ಸುರೇಖ ಹಾಗು ಗಿರಿಜಾ ಅವರು ಗುಡ್ಡದಲ್ಲಿ ಅಣಬೆ ಹೆಕ್ಕುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಸುರೇಶ್ ಕುತ್ತಿಗೆಯನ್ನು ಬೀಗಿಯಾಗಿ ಹಿಡಿದು, ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದಾನೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿ ಸುರೇಶ್ ನನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಇನ್ನು ಗಿರಿಜಾ ಹಾಗು ಸುರೇಖ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Read More