Author: main-admin

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಕಡಬ ಪೊಲೀಸರು ಪತ್ತೆಹಚ್ಚಿ, 20 ಜಾನುವಾರುಗಳನ್ನು ರಕ್ಷಿಸಿರುವ ಘಟನೆ ಏಪ್ರಿಲ್ 3ರಂದು ಮುಂಜಾನೆ ನಡೆದಿದೆ. ಪೆರಿಯಶಾಂತಿ ಕಡೆಯಿಂದ ಮರ್ಧಾಳ ಕಡೆಗೆ ಕಂಟೈನರ್ ಲಾರಿಯಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಜಂಬುರಾಜ್ ಮಹಾಜನ್ ಪೊಲೀಸ್ ಉಪನಿರೀಕ್ಷಕರು ಕಡಬ ಪೊಲೀಸ್ ಠಾಣೆ ಸಿಬ್ಬಂದಿಗಳೊಂದಿಗೆ ನೂಜಿಬಾಳ್ತಿಲ ಗ್ರಾಮದ ಕನ್ವರೆ ಪ್ರದೇಶದಲ್ಲಿ ದಾಳಿ ನಡೆಸಿದರು. ಈ ವೇಳೆ KA 11 B 9413 ನೋಂದಣಿಯ ಕಂಟೈನರ್ ಲಾರಿಯನ್ನು ತಡೆದು ಪರಿಶೀಲಿಸಿದಾಗ, ಲಾರಿಯಲ್ಲಿ 20 ಜಾನುವಾರುಗಳನ್ನು ಹಿಂಸಾತ್ಮಕವಾಗಿ ತುಂಬಿಸಿರುವುದು ಪತ್ತೆಯಾಯಿತು. ಲಾರಿಯಲ್ಲಿದ್ದ ವ್ಯಕ್ತಿಯನ್ನು ವಿಚಾರಿಸಿದಾಗ, ಆತ ಹಾಸನ ಜಿಲ್ಲೆಯ ಬೇಲೂರು ನಿವಾಸಿ ಇರ್ಫಾನ್ (26) ಎಂದು ತಿಳಿದುಬಂದಿದೆ.ಜಾನುವಾರು ಸಾಗಾಟಕ್ಕೆ ಸಂಬಂಧಿಸಿದಂತೆ ಯಾವುದೇ ಪರವಾನಿಗೆ ಇಲ್ಲದೇ, ಹಾಸನದಿಂದ ಕೇರಳಕ್ಕೆ ಸಾಗಾಟ ಮಾಡುತ್ತಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಪೊಲೀಸರು ಲಾರಿ ಹಾಗೂ ಜಾನುವಾರುಗಳನ್ನು ಸ್ವಾಧೀನಪಡಿಸಿಕೊಂಡಿದ್ದು, ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ. 36/2026 ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳ…

Read More

ಮಂಗಳೂರು: ನಗರದ ಹೊರವಲಯದ ಕೊಣಾಜೆಯ ಖಾಸಗಿ ಇಂಜಿನಿಯರಿಂಗ್ ಕಾಲೇಜೊಂದರಲ್ಲಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಯಾವುದೋ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ವಾಗ್ವಾದವು ವಿಕೋಪಕ್ಕೆ ತಿರುಗಿ, ವಿದ್ಯಾರ್ಥಿಗಳು ಪರಸ್ಪರ ಹೊಡೆದಾಟಕ್ಕಿಳಿದಿದ್ದಾರೆ ಎನ್ನಲಾಗಿದೆ. ರಸ್ತೆಯಲ್ಲೇ ನಡೆದ ಈ ಗುಂಪು ಘರ್ಷಣೆಯನ್ನು ಕಂಡು ಸಾರ್ವಜನಿಕರು ಹಾಗೂ ಇತರ ವಿದ್ಯಾರ್ಥಿಗಳು ಕೆಲಕಾಲ ಆತಂಕಕ್ಕೊಳಗಾಗಿದ್ದರು. ಸ್ಥಳದಲ್ಲಿದ್ದ ಕೆಲ ವಿದ್ಯಾರ್ಥಿಗಳು ತಮ್ಮ ಮೊಬೈಲ್ ಫೋನ್‌ಗಳಲ್ಲಿ ಈ ದೃಶ್ಯವನ್ನು ಸೆರೆಹಿಡಿದಿದ್ದು, ಈ ವೀಡಿಯೋ ಈಗ ವೈರಲ್ ಆಗಿದೆ. ಈ ಗಲಾಟೆಯಿಂದಾಗಿ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ, ಈ ಬಗ್ಗೆ ಇದುವರೆಗೆ ಪೊಲೀಸ್ ಠಾಣೆಯಲ್ಲಿ ಯಾವುದೇ ಅಧಿಕೃತ ದೂರು ಅಥವಾ ಪ್ರಕರಣ ದಾಖಲಾಗಿಲ್ಲ ಎಂದು ತಿಳಿದುಬಂದಿದೆ.

Read More

ಉಡುಪಿ: ಜಿಲ್ಲೆಯ ಕಾಪು ಪೊಲೀಸ್‌ ಠಾಣಾ ವ್ಯಾಪ್ತಿಯ ವಿಜೇತ ಹಾಗೂ ಪಡುಬಿದ್ರಿ ಪೊಲೀಸ್‌ ಠಾಣಾ ವ್ಯಾಪ್ತಿಯ ಆರೀಫ್ ಸಾಹೇಬ್ ಎಂಬುವರ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿಯವರು ಹಾಗೂ ಪೊಲೀಸ್ ಅಧೀಕ್ಷಕರು ಗಡಿಪಾರು ಆದೇಶ ಹೊರಡಿಸಿದ್ದಾರೆ. ಈ ಪೈಕಿ ಕಾಪು ಪೊಲೀಸ್‌ ಠಾಣಾ ವ್ಯಾಪ್ತಿಯ ವಿಜೇತ ವಿರುದ್ಧ 4 ಕೊಲೆಗೆ ಪ್ರಯತ್ನ ಪ್ರಕರಣ ಮತ್ತು ಹಲ್ಲೆ ಪ್ರಕರಣಗಳು ದಾಖಲಾಗಿವೆ. ಪಡುಬಿದ್ರಿ ಪೊಲೀಸ್‌ ಠಾಣಾ ವ್ಯಾಪ್ತಿಯ ಆರೀಫ್ ಸಾಹೇಬ್ ವಿರುದ್ಧ 5 ಕೊಲೆಗೆ ಪ್ರಯತ್ನ, ಹಲ್ಲೆ ಹಾಗೂ ಮಾದಕ ದ್ರವ್ಯ ಸೇವನೆ ಪ್ರಕರಣಗಳು ದಾಖಲಾಗಿದ್ದು, ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ರೌಡಿ ಶೀಟರ್ ತೆರೆಯಲಾಗಿದೆ. ವಿಜೇತನನ್ನು ಉತ್ತರ ಕನ್ನಡ ಜಿಲ್ಲಾ ವ್ಯಾಪ್ತಿಯ ಕಾರವಾರ ನಗರ ಪೊಲೀಸ್‌ ಠಾಣಾ ವ್ಯಾಪ್ತಿಗೆ ಮತ್ತು ಆರೀಫ್ ಸಾಹೇಬ್ ನನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.ಉಡುಪಿ: ಜಿಲ್ಲೆಯ ಕಾಪು ಪೊಲೀಸ್‌ ಠಾಣಾ ವ್ಯಾಪ್ತಿಯ ವಿಜೇತ ಹಾಗೂ ಪಡುಬಿದ್ರಿ ಪೊಲೀಸ್‌ ಠಾಣಾ ವ್ಯಾಪ್ತಿಯ ಆರೀಫ್ ಸಾಹೇಬ್ ಎಂಬುವರ…

Read More

ಮಂಗಳೂರು: ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬಳಪದವು ಎಂಬಲ್ಲಿ ಗುರುವಾರ ಸಂಜೆ ನಡೆದಿದೆ. ಗಾಯಗೊಂಡ ಯುವಕನನ್ನು ನಡುಪದವು ನಿವಾಸಿ ಬೇಬಿ ಎಂಬವರ ಮಗ ಸುಶಾಂತ್ (23) ಎಂದು ಗುರುತಿಸಲಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸುಶಾಂತ್ ರಸ್ತೆಗೆ ಎಸೆಯಲ್ಪಟ್ಟಿದ್ದು, ಈ ವೇಳೆ ತಲೆಗೆ ತೀವ್ರ ಗಾಯಗಳಾಗಿದೆ. ತಕ್ಷಣ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯನ್ನು ಹಿಟ್‌ ಅಂಡ್‌ ರನ್‌ ಪ್ರಕರಣವೆಂದು ಪರಿಗಣಿಸಲಾಗಿದ್ದು, ಟ್ರಕ್ ಚಾಲಕ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ನಂತರ ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದಾನೆ. ಚಾಲಕನ ಅಜಾಗರೂಕತೆಯಿಂದ ಸ್ಥಳೀಯ ಸಾರ್ವಜನಿಕರಿಂದ ತೀವ್ರ ಆಕ್ರೋಶವಾಗಿದೆ. ಅಪಘಾತದ ಸ್ವಲ್ಪ ಸಮಯದ ನಂತರ ಸ್ಥಳಕ್ಕೆ ಆಗಮಿಸಿದ ಕೊಣಾಜೆ ಪೊಲೀಸರು ಶೋಧ ಕಾರ್ಯಾಚರಣೆಯನ್ನು ನಡೆಸಿ ಅಪಘಾತಕ್ಕೆ ಕಾರಣವಾದ ಟ್ರಕ್ ಅನ್ನು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ. ಚಾಲಕನನ್ನು ಬಂಧಿಸಲು ಮತ್ತು ಘಟನೆಗಳ ನಿಖರವಾದ ಮಾಹಿತಿ ಪಡೆಯಲು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂಬುದಾಗಿ…

Read More

ಬೆಂಗಳೂರು: ಸೈಬರ್ ಅಪರಾಧ ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯವು ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು, ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಕೋರಮಂಗಲದ ಪರೇಡ್ ಮೈದಾನದಲ್ಲಿ ಗುರುವಾರ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ 158 ಪೊಲೀಸರಿಗೆ ಮುಖ್ಯಮಂತ್ರಿಗಳ ಪದಕ ಪ್ರಧಾನ ಮಾಡಿ ಮಾತನಾಡಿದ ಅವರು, ಸೈಬರ್‌ ಕ್ರೈಂ ಹಾಗೂ ಮಾದಕ ದ್ರವ್ಯಗಳ ಅಪರಾಧಗಳಲ್ಲಿ ಶಿಕ್ಷೆಯ ಪ್ರಮಾಣ ಕಡಿಮೆ ಇದೆ. ಈ ಶಿಕ್ಷೆಯ ಪ್ರಮಾಣ ಹೆಚ್ಚಿಸುವ ಕೆಲಸ ಆಗಬೇಕು. ಡ್ರಗ್ಸ್‌ ಮುಕ್ತ ರಾಜ್ಯ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಪೊಲೀಸರು ಪ್ರಯತ್ನ ಮಾಡದಿದ್ದರೆ, ಅಂತಹವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದರು. ನಾನು ಹಲವು ಸಂದರ್ಭಗಳಲ್ಲಿ ಹೇಳಿದ್ದೇನೆ ಮತ್ತು ಈಗಲೂ ಪುನರುಚ್ಚರಿಸುತ್ತಿದ್ದೇನೆ. ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರ ಗಮನಕ್ಕೆ ಬಾರದೆ ಯಾವುದೇ ಕ್ರಿಮಿನಲ್ ಅಪರಾಧಗಳು ನಡೆಯಲು ಸಾಧ್ಯವಿಲ್ಲ. ಇದನ್ನು ಸ್ಪಷ್ಟವಾಗಿ ಅರ್ಥಮಾಡಿಕೊಳ್ಳಬೇಕು. ಪೊಲೀಸ್ ಇನ್ಸ್‌ಪೆಕ್ಟರ್‌ಗಳು ತಮ್ಮ ಮಿತಿಯಲ್ಲಿ ದಕ್ಷತೆಯಿಂದ ಮತ್ತು ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಹಲವಾರು…

Read More

ತುಳು ಚಲನಚಿತ್ರರಂಗದಲ್ಲಿ ವಿಭಿನ್ನ ಶೀರ್ಷಿಕೆ ಹಾಗೂ ವಿನೂತನ ಕಥಾಹಂದರದಿಂದಲೇ ಕುತೂಹಲ ಮೂಡಿಸಿರುವ “90ಎಂಎಲ್ – ಕುಲ್ಲುಗನಾ…?” ಸಿನಿಮಾ ಇದೇ ಏಪ್ರಿಲ್ 10 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲು ಸಜ್ಜಾಗಿದೆ. ಕರಾವಳಿಯ ಸೊಗಡನ್ನು ಹಾಸ್ಯ, ಭಾವನೆ ಮತ್ತು ಸಾಮಾಜಿಕ ಸಂದೇಶದೊಂದಿಗೆ ಬೆರೆಸಿಕೊಂಡಿರುವ ಈ ಚಿತ್ರ, ಕೋಸ್ಟಲ್‌ವುಡ್‌ಗೆ ಹೊಸ ಚೈತನ್ಯ ತುಂಬುವ ನಿರೀಕ್ಷೆ ಮೂಡಿಸಿದೆ. ಡಿಡಿ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಡೋಲ್ಫಿ ಡಿಸೋಜ ನಿರ್ಮಿಸಿರುವ ಈ ಚಿತ್ರವನ್ನು ರಂಜಿತ್ ಸಿ. ಬಜಾಲ್ ನಿರ್ದೇಶಿಸಿದ್ದಾರೆ. ಹಲವು ವರ್ಷಗಳ ಸಹಾಯಕ ನಿರ್ದೇಶಕರಾಗಿ ಅನುಭವ ಪಡೆದಿರುವ ಅವರು, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಗುರುತಿಸಿಕೊಳ್ಳಲು ಮುಂದಾಗಿದ್ದಾರೆ. ತುಳಸಿದಾಸ್ ಮಂಜೇಶ್ವರ ರವರ ಸಂಭಾಷಣೆ ಚಿತ್ರಕ್ಕೆ ಜೀವ ತುಂಬಿದರೆ, ವಿಶಾಲ್ ದೇವಾಡಿಗ ಸಂಕಲನ ಹಾಗೂ ಪ್ರತಿಭಾವಂತರ ತಂಡ ಚಿತ್ರಕ್ಕೆ ಕೈಜೋಡಿಸಿದೆ. ಮನರಂಜನೆ ಜೊತೆಗೆ ಸಂದೇಶ : ‘90 ಎಂಎಲ್’ ಕೇವಲ ಹಾಸ್ಯಚಿತ್ರವಲ್ಲ. ಕುಟುಂಬ ಮನರಂಜನೆ, ಪ್ರೀತಿ, ಸ್ನೇಹ ಮತ್ತು ಜೀವನ ಮೌಲ್ಯಗಳನ್ನು ಒಳಗೊಂಡ ಕಥಾಹಂದರ ಹೊಂದಿದೆ. ಮದ್ಯಪಾನದಂತಹ ಸೂಕ್ಷ್ಮ ವಿಷಯವನ್ನು ಕೇಂದ್ರವಾಗಿಟ್ಟುಕೊಂಡು,…

Read More

ಬೆಳ್ತಂಗಡಿ: ತಾಲೂಕಿನ ಕೊಕ್ಕಡ ಗ್ರಾಮದಲ್ಲಿ ವ್ಯಕ್ತಿಯೋರ್ವರಿಗೆ ಹಣಕಾಸು ವಿಚಾರಕ್ಕೆ ತಕರಾರು ತೆಗೆದು, ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿದ ಘಟನೆ ನಡೆದಿದೆ. ಕೊಕ್ಕಡ ಗ್ರಾಮದ ಅಕ್ಷಯ್‌ (31) ಎಂಬವರು ನೀಡಿದ ದೂರಿನಂತೆ, ಅಕ್ಷಯ್‌ ಅವರು ಮಾರ್ಚ್‌ 29ರಂದು ರಾತ್ರಿ ಕೊಕ್ಕಡ ಎಂಬಲ್ಲಿನ ಬಾರ್‌ ಅಂಡ್‌ ರೆಸ್ಟೋರೆಂಟ್‌ನಲ್ಲಿ ಮದ್ಯ ಸೇವಿಸಲು ಕುಳಿತಿರುವಾಗ, ಅಲ್ಲಿಗೆ ಬಂದ ಯತೀಶ್‌ ಎಂಬಾತ ಹಣಕಾಸಿನ ವಿಷಯವಾಗಿ ತಕರಾರು ತೆಗೆದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾನೆ. ಈ ವೇಳೆ ಯತೀಶ್‌ನೊಂದಿಗೆ ಇದ್ದ ಆರೋಪಿಗಳಾದ ಯತೀಶ, ಧನುಷ್‌ ಭಂಡಾರಿ, ಶರತ್‌ ಭಂಡಾರಿ ಹಾಗೂ ಪ್ರವೀಣ್‌ ಕೂಡ ಸೇರಿಕೊಂಡು ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಹಾಕಿರುವುದಾಗಿ ಅವರು ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ: 23/2026. ಕಲಂ: 352,115(2), 118(1), 351(2) R/W 3(5)ಬಿಎನ್ಎಸ್-2023ಯಂತೆ ಪ್ರಕರಣ ದಾಖಲಾಗಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

Read More

ಮಣಿಪಾಲ ಆಸ್ಪತ್ರೆ ಬಳಿಯ ಕ್ಯಾಂಟೀನ್‌ನಲ್ಲಿ ಚಹಾ ಕುಡಿಯುತ್ತಿದ್ದ ವ್ಯಕ್ತಿಯೋರ್ವರನ್ನು ಅಪಹರಿಸಿರುವ ಬಗ್ಗೆ ದೂರು ದಾಖಲಾಗಿದೆ.  ಕೊಡ್ಲಾಡಿ ಗ್ರಾಮದ ರಾಮ ಮಡಿವಾಳ ಅವರು ತನ್ನ ಸಹೋದರ ಲಕ್ಷ್ಮಣ ಅವರಿಗೆ ಚಿಕಿತ್ಸೆ ಕೊಡಿಸಲು ಮಣಿಪಾಲದ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆಸ್ಪತ್ರೆ ಹೊರಬದಿಯ ಕ್ಯಾಂಟೀನ್‌ಲ್ಲಿ ಇನ್ನೋರ್ವ ಸಹೋದರ ರಾಜೇಶ್ ಮತ್ತು ಸುಧೀ‌ರ್ ಜತೆ ಚಹಾ ಕುಡಿಯುತ್ತಿರುವಾಗ ನಂಬರ್ ಪ್ಲೇಟ್ ಇಲ್ಲದ ಕಪ್ಪು ಬಣ್ಣದ  ಕಾರಿನಲ್ಲಿ ಬಂದ ಏಳೆಂಟು ಮಂದಿ ರಾಜೇಶ್ ಅವರನ್ನು ಏಕಾಏಕಿ ಹಿಡಿದು ಕಾರಿನಲ್ಲಿ ಮಣಿಪಾಲದಿಂದ ಹಿರಿಯಡಕ ಕಡೆ ಕರೆದುಕೊಂಡು ಹೋಗಿದ್ದಾರೆ. ಕಾರಿನಲ್ಲಿ ಬಂದ ಮಲ್ಲಾರೆಡ್ಡಿ, ತುಳಜಾ, ನರಸಿಂಗ, ಹುಸೇನ್, ಶಂಕರ, ನಾಗೇಶ್, ಪರಮೇಶ್ವ‌ರ್ ಮತ್ತು ವಿಜಯ್ ಅವರು ರಾಜೇಶ್ ಜತೆ ಈ ಹಿಂದೆ ವ್ಯವಹಾರದ ವಿಷಯದಲ್ಲಿ ಹುಡುಕಿಕೊಂಡು ಮನೆಗೆ ಬಂದಿದ್ದರು ಎನ್ನಲಾಗಿದೆ. ಅವರೊಂದಿಗಿನ ತೆಲಂಗಾಣದಲ್ಲಿರುವ ವ್ಯವಹಾರದ ವಿಷಯದಲ್ಲಿ ಸಹೋದರನ್ನು ಬಲತ್ಕಾರವಾಗಿ ಅಪಹರಿಸಿಕೊಂಡು ಹೋಗಿರುವ ಬಗ್ಗೆ ರಾಮ ಮಡಿವಾಳ ಅವರು ಮಣಿಪಾಲ ಠಾಣಾ ಪೊಲೀಸರಿಗೆ ದೂರು ನೀಡಿದ್ದಾರೆ. 

Read More

ಮಂಗಳೂರು : ಶಿಕ್ಷಕಿ ದಾಖಲಿಸಿದ ಅತ್ಯಾಚಾರ ಪ್ರಕರಣ ರದ್ದುಕೋರಿ ಅಮಾನತಿನಲ್ಲಿರುವ ಮೂಡುಬಿದಿರೆಯ ಇನ್‌ಸ್ಪೆಕ್ಟರ್ ಸಂದೇಶ್‌ಗೆ ಹೈಕೋರ್ಟ್‌ ತೀಕ್ಷ್ಣವಾಗಿ ಚಾಟಿ ಬೀಸಿದೆ. ಎಫ್ಐಆರ್ ರದ್ದುಕೋರಿ ಸಂದೇಶ ಹೈಕೋರ್ಟ್ ಮೆಟ್ಟಿಲೇದ್ದರು. ಆದರೆ ಹೈಕೋರ್ಟ್​, ಇನ್‌ಸ್ಪೆಕ್ಟರ್ ಮಾಡಿರುವುದು ಅಧಿಕಾರದ ದುರುಪಯೋಗವಲ್ಲವೇ? ದೂರು ಕೊಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸಿದರೆ ಇನ್ನೇನಾಗುತ್ತೆ ಎಂದು ಸಂದೇಶ್​​ಗೆ ತರಾಟೆಗೆ ತೆಗೆದುಕೊಂಡಿದ್ದು, ಪ್ರಕರಣಕ್ಕೆ ಮಧ್ಯಂತರ ತಡೆ ನೀಡಲು ನಿರಾಕರಿಸಿ ವಿಚಾರಣೆಯನ್ನು ಮುಂದೂಡಿದೆ. ಸಂದೇಶ್‌ ಪರ ವಾದಿಸಿದ ವಕೀಲರು, ಮಹಿಳೆಯೊಂದಿಗೆ ಒಪ್ಪಿತ ಸಂಬಂಧವಿತ್ತು. ಇನ್‌ಸ್ಪೆಕ್ಟರ್ ವಿರುದ್ಧದ ಅತ್ಯಾಚಾರ ಆರೋಪಕ್ಕೆ ಆಧಾರಗಳಿಲ್ಲ ಎಂದು ಹೇಳಿದರು. ಇನ್‌ಸ್ಪೆಕ್ಟರ್ ಪರ ವಕೀಲರ ವಾದ ಆಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ಇನ್‌ಸ್ಪೆಕ್ಟರ್ ಮಾಡಿರುವುದು ಅಧಿಕಾರದ ದುರುಪಯೋಗವಲ್ಲವೇ? ದೂರು ಕೊಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸಿದರೆ ಇನ್ನೇನಾಗುತ್ತೆ ಎಂದು ಖಾರವಾಗಿ ಪ್ರಶ್ನಿಸಿದ್ದು, ವಿಚಾರಣೆಯನ್ನು ಏಪ್ರಿಲ್ 6ಕ್ಕೆ ಮುಂದೂಡಿದೆ. ಅಲ್ಲಿಯವರೆಗೆ ಬಂಧಿಸದಂತೆ ಮಧ್ಯಂತರ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಸಂತ್ರಸ್ತೆ ಶಿಕ್ಷಕಿ ನೀಡಿದ ದೂರಿನ ಮೇರೆಗೆ ಮೂಡಿಬಿದಿರೆ ಇನ್ಸ್‌ಪೆಕ್ಟರ್…

Read More

ಉಡುಪಿ: ಸಾಸ್ತಾನದಲ್ಲಿನ ಕೋಸ್ಟಲ್ ಪ್ಯಾರಡೈಸ್ ಹೊಟೇಲ್ ಎದುರು ನಡೆದ ಯುವಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸರು ಮಹತ್ವದ ಕ್ರಮ ಕೈಗೊಂಡಿದ್ದು, ಪ್ರಕರಣವನ್ನು KCOCA ಕಾಯ್ದೆಯಡಿ ದಾಖಲಿಸಿ ಈಗಾಗಲೇ 7 ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನಿಬ್ಬರು ಪ್ರಮುಖ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಸಿದ್ದಾಪುರ ಗ್ರಾಮದ ಮೋಹನ ದಾಸ್ ಶೆಟ್ಟಿ ಅವರ ಪುತ್ರ ತೇಜಸ್ ಅವರನ್ನು ಅಪರಿಚಿತರು ಅಪಹರಿಸಿರುವ ಕುರಿತು ಪ್ರಕರಣ ದಾಖಲಾಗಿದೆ. ತೇಜಸ್‌ನ ಸ್ನೇಹಿತ ಪ್ರಜ್ವಲ್ ನೀಡಿದ ಮಾಹಿತಿಯಂತೆ, ನ.19, 2025ರಂದು ಮಧ್ಯಾಹ್ನ ತೇಜಸ್‌ನನ್ನು ಸಾಸ್ತಾನದಲ್ಲಿರುವ ಕೋಸ್ಟಲ್ ಪ್ಯಾರಡೈಸ್ ಹೊಟೇಲ್ ಎದುರು ಕೆಲವರು ಕಿಡ್ನಾಪ್ ಮಾಡಿಕೊಂಡು ಹೋಗಿದ್ದರು. ಸ್ಥಳಕ್ಕೆ ಧಾವಿಸಿದ ಕುಟುಂಬಸ್ಥರು, ತೇಜಸ್ ಬಳಸುತ್ತಿದ್ದ KA-15-Z-0007 ಫಾರ್ಚೂನರ್ ಕಾರು ಅಲ್ಲಿಯೇ ಇದ್ದುದನ್ನು ಗಮನಿಸಿದರು. ಈ ವೇಳೆ ತೇಜಸ್‌ನ ವಾಟ್ಸ್‌ಆಪ್ ನಂಬರಿನಿಂದ ಪ್ರಜ್ವಲ್‌ಗೆ ಕರೆ ಬಂದಿದ್ದು, ಅಪಹರಣದ ಬಗ್ಗೆ ಮಾಹಿತಿ ನೀಡಲಾಗಿದೆ. ಬಳಿಕ ಅಪರಿಚಿತರು 50 ಲಕ್ಷ ರೂ. ಹಾಗೂ ನಂತರ 3 ಕೋಟಿ ರೂ. ನೀಡುವಂತೆ ಬೆದರಿಕೆ ಹಾಕಿ, ಹಣ ನೀಡದಿದ್ದರೆ ತೇಜಸ್‌ನನ್ನು ಕೊಲ್ಲುವುದಾಗಿ…

Read More