Author: main-admin

ಸುರತ್ಕಲ್: ಪೊಲೀಸ್ ಠಾಣಾ ವ್ಯಾಪ್ತಿಯ ಚೇಳಾಯರು ಎಂಬಲ್ಲಿ 14ರ ಹರೆಯದ ಅಪ್ರಾಪ್ತ ಬಾಲಕಿಗೆ ಲೈಂಗಿಕ‌ ಕಿರುಕುಳ ನೀಡಿದ್ದ ಆರೋಪಿ ವೃದ್ಧನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು ಸುರತ್ಕಲ್ ಚೇಳಾಯರು ನಿವಾಸಿ ಸುಂದರ ಪೂಜಾರಿ(60) ಎಂದು ಹೆಸರಿಸಲಾಗಿದೆ. ಘಟನೆ ಅಕ್ಟೋಬರ್ ತಿಂಗಳಲ್ಲಿ ನಡೆದಿದ್ದು ಮಾನಸಿಕ ಖಿನ್ನತೆಗೊಳಗಾಗಿದ್ದ ಬಾಲಕಿ ವೈದ್ಯರಲ್ಲಿ ತನ್ನ ಮೇಲಾದ ಲೈಂಗಿಕ ದೌರ್ಜನ್ಯ ವಿವರಿಸಿದ್ದು ಈ ಹಿನ್ನೆಲೆಯಲ್ಲಿ ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ. ಬಾಲಕಿ ಹೊಸಬೆಟ್ಟುವಿನಲ್ಲಿ ಟ್ಯೂಶನ್ ಮುಗಿಸಿ ಬಸ್‌ನಲ್ಲಿ ಬಂದು ಮುಕ್ಕ‌ದಲ್ಲಿ ಇಳಿದು ತನ್ನ ಮನೆಗೆ ಒಳ ರಸ್ತೆಯಾಗಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಸುಂದರ ಪೂಜಾರಿ ಎದುರು ಬದಿಯಿಂದ ಬಂದು ಆಕೆಯ ಕೈಹಿಡಿದು ಎಳೆದು ಎದೆಗೆ ಕೈ ಹಾಕಿ ಲೈಂಗಿಕ‌ ಕಿರುಕುಳ ನೀಡಿದ್ದಾನೆ ಎಂದು ಬಾಲಕಿ ಸುರತ್ಕಲ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Read More

ಬಂಟ್ವಾಳ : ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ, 810 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ಬಂಧಿತರು ಬಂಟ್ವಾಳ ತುಂಬೆ ನಿವಾಸಿ ಸಮೀರ್ (31) ಹಾಗೂ ಬಂಟ್ವಾಳ ಗೂಡಿನ ಬಳಿ ನಿವಾಸಿ ಮೊಹಮ್ಮದ್ ಅಸೀಫ್ (35) ಸೆರೆಯಾಗಿರುವ ಆರೋಪಿಗಳು. ಡಿಸೆಂಬರ್ 13ರ ಸಂಜೆ ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಹನಮನಗರ ಪ್ರದೇಶದ ರಾಷ್ಟ್ರೀಯ ಹೆದ್ದಾರಿ ಬಳಿ ಗಾಂಜಾ ಮಾರಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಆಧಾರವಾಗಿ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಮಂಜುನಾಥ್ ಟಿ. ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ದಾಳಿ ನಡೆಸಿದ್ದು, ಪರಿಶೀಲನೆಯ ವೇಳೆ ರಾಷ್ಟ್ರೀಯ ಹೆದ್ದಾರಿಯ ಪಕ್ಕದ ನಿರ್ಜನ ಪ್ರದೇಶದಲ್ಲಿ KA-19-MN-3664 ಸಂಖ್ಯೆಯ ಕಾರು ಹಾಗೂ KA-19-AE-0166 ಸಂಖ್ಯೆಯ ಆಟೋರಿಕ್ಷಾ ಬಳಿ ಅನುಮಾನಾಸ್ಪದವಾಗಿ ನಿಂತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ವಿಚಾರಣೆ ವೇಳೆ ಅವರು ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದುದಾಗಿ ಒಪ್ಪಿಕೊಂಡಿದ್ದಾರೆ. ತಪಾಸಣೆ ವೇಳೆ ಕಾರಿನಿಂದ 450 ಗ್ರಾಂ ಹಾಗೂ ಆಟೋರಿಕ್ಷಾದಿಂದ…

Read More

ಮಂಗಳೂರು: ಅಪ್ರಾಪ್ತ ಬಾಲಕ ಸ್ಕೂಟರ್ ಚಲಾಯಿಸಿ ಅಪಘಾತಕ್ಕೆ ಕಾರಣವಾದ ಆರೋಪದಡಿ ಸ್ಕೂಟರ್ ಮಾಲಕನಿಗೆ ನ್ಯಾಯಾಲಯದ ದಂಡ ವಿಧಿಸಿದೆ. ರಾಷ್ಟ್ರೀಯ ಹೆದ್ದಾರಿ 66ರ ನಂತೂರು ಪದವು ಬಳಿ 2025ರ ಮಾ.30ರಂದು ಮುಂಜಾವ 3:50ರ ವೇಳೆಗೆ ಅಪ್ರಾಪ್ತ ಬಾಲಕ ಸ್ಕೂಟರ್‌ನಲ್ಲಿ ತೆರಳುತ್ತಿದ್ದ. ಆ ವೇಳೆ ಅದೇ ದಿಕ್ಕಿನಲ್ಲಿ ಕುಂಟಿಕಾನ ಕಡೆಗೆ ಸಾಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಬಾಲಕ ಢಿಕ್ಕಿ ಹೊಡೆದಿದ್ದು, ಇದರಿಂದ ಎರಡೂ ವಾಹನದಲ್ಲಿದ್ದವರು ಗಾಯಗೊಂಡಿದ್ದರು. ಈ ಬಗ್ಗೆ ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಎಸ್‌ ಐ ರೋಸಮ್ಮ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಜೆಎಂಎಫ್‌ಸಿ ಎಂಟನೇ ನ್ಯಾಯಾಲಯದ ನ್ಯಾಯಾಧೀಶ ಫವಾಝ್ ಪಿ.ಎ. ಅವರು ಅಪ್ರಾಪ್ತನಿಗೆ ಚಲಾಯಿಸಲು ಸ್ಕೂಟರ್ ನೀಡಿದ ಮಾಲಕ ಅಬ್ದುಲ್ ಹಮೀದ್‌ಗೆ 25,000 ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.

Read More

ಮಂಗಳೂರು: ತಣ್ಣೀರುಬಾವಿ ಟೀ ಪಾರ್ಕ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಮಾರಾಟ ಮಾಡತ್ತಿದ್ದ ಆರೋಪದಲ್ಲಿ ಮೂವರನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಜಾಕೀರ್, ಮಹಮ್ಮದ್ ಹನೀಫ್ ಹಾಗೂ ಶಿಫಾನ್ ಪ್ರಕರಣದ ಆರೋಪಿಗಳು. ಡಿ. 12ರಂದು ಬೆಳಗ್ಗೆ 9.45ರ ವೇಳೆಗೆ ತಣ್ಣೀರುಬಾವಿ ಟೀ ಪಾರ್ಕ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮರದ ಕೆಳಗಡೆ ದ್ವಿಚಕ್ರ ವಾಹನವೊಂದರಲ್ಲಿ ಮೂವರು ಆರೋಪಿಗಳು ಲಾರಿ ಚಾಲಕರುಗಳಿಗೆ, ಉತ್ತರ ಭಾರತದ ಕೂಲಿ ಕಾರ್ಮಿಕರಿಗೆ ಹಾಗೂ ಸಾರ್ವಜನಿಕರಿಗೆ ಎಂಡಿಎಂಎ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದ ಪಣಂಬೂರು ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

Read More

ರಾಜ್ಯ ಸರ್ಕಾರವು ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದ್ದು, ಪೊಲೀಸ್ ಇಲಾಖೆಯಿಂದ 3,600 ಕಾನ್ಸ್ಟೇಬಲ್ ನೇಮಕಾತಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಪರಿಶೀಲನೆಯಲ್ಲಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ನ ಡಿ.ಟಿ. ಶ್ರೀನಿ ವಾಸ್, ಬಿಜೆಪಿಯ ಕಿಶೋರ್ ಕುಮಾರ್ ಪುತ್ತೂರು ಪ್ರತ್ಯೇಕ ಪ್ರಶ್ನೆಗೆ ಉತ್ತರಿಸಿದ ಸಚಿವ ಡಾ.ಜಿ.ಪರಮೇಶ್ವರ್, , ಪೊಲೀಸ್ ಇಲಾಖೆಯಿಂದ 3,600 ಕಾನ್ಸ್ಟೇಬಲ್ ನೇಮಕಾತಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಪರಿಶೀಲನೆಯಲ್ಲಿದೆ. ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ನೇಮಕಾತಿ ಮಾಡಿಕೊಂಡು ಬರುತ್ತಿದೆ. ಸುಮಾರು 900 ಎಎಸ್ ಐ ನೇಮಕಾತಿ ಮಾಡಿದ್ದು, 10 ತಿಂಗಳ ತರಬೇತಿ ಪಡೆಯುತ್ತಿದ್ದಾರೆ. ಪೂರ್ಣಗೊಂಡ ನಂತರ ಹುದ್ದೆ ನೀಡಲಾಗುವುದು ಎಂದರು. ರಾಜ್ಯ ಸರ್ಕಾರದ ಬೇರೆ ಬೇರೆ ಇಲಾಖೆಯಲ್ಲಿ ನೇಮಕಾತಿ ಮತ್ತು ಮುಂಬಡ್ತಿ ಹುದ್ದೆಗಳು 50:50 ಅನುಪಾತದಲ್ಲಿದೆ, ಆದರೆ ಪೊಲೀಸ್ ಇಲಾಖೆಯಲ್ಲಿ 70:30 ಅನುಪಾತದಲ್ಲಿದೆ. ಯುವಕರು ಬರಬೇಕು ಎಂದು ಶೇ.70 ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Read More

ಮಂಗಳೂರು ನಗರ ಹೊರ ವಲಯದ ಪಡೀಲ್‌ನಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಪಡೀಲ್ ಕೊಡೆಕ್ಕಲ್ ನಿವಾಸಿ ಶ್ರವಣ್(26) ಎಂದು ಗುರುತಿಸಲಾಗಿದೆ. ಶ್ರವಣ್ ಅವರ ಮೃತದೇಹ ಪಡೀಲ್ ಕೊಡೆಕ್ಕಲ್ ಬಳಿ ಮರವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಕಂಕನಾಡಿ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದಾರೆ.

Read More

ಮಂಗಳೂರಿನಲ್ಲಿ, ಡಿಸೆಂಬರ್ 10, 2025: ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ (ಬ್ಯಾಂಕ್) ಅನ್ನು ಫೈನಾನ್ಷಿಯಲ್ ಟೈಮ್ಸ್ ಪ್ರಕಟಿಸುವ ದಿ ಬ್ಯಾಂಕರ್ ಪತ್ರಿಕೆಯ ಬ್ಯಾಂಕ್ ಆಫ್ ದಿ ಇಯರ್ ಅವಾರ್ಡ್ಸ್ 2025 ನಲ್ಲಿ ‘ಭಾರತದ ಅತ್ಯುತ್ತಮ ಬ್ಯಾಂಕ್’ ಎಂದು ಘೋಷಿಸಲಾಗಿದೆ. ಈ ಪ್ರಶಸ್ತಿ ಬ್ಯಾಂಕ್ ಆಫ್ ಬರೋಡಾದ ಶ್ರೇಷ್ಠತೆ, ನವೀನತೆ ಮತ್ತು ಬ್ಯಾಂಕಿಂಗ್ ವಲಯಕ್ಕೆ ನೀಡಿದ ಅಸಾಧಾರಣ ಕೊಡುಗೆಯನ್ನು ಗೌರವಿಸುತ್ತದೆ. ಉನ್ನತ ಹಣಕಾಸು ಸಾಧನೆ, ಡಿಜಿಟಲ್ ಪರಿವರ್ತನೆ, ಗ್ರಾಹಕ ಅನುಭವ ವೃದ್ಧಿ ಮತ್ತು ಭಾರತೀಯ ಬ್ಯಾಂಕಿಂಗ್ ಕ್ಷೇತ್ರದಲ್ಲಿನ ತನ್ನ ನೇತೃತ್ವವನ್ನು ಮತ್ತಷ್ಟು ಬಲಪಡಿಸುವುದಕ್ಕೆ ಬ್ಯಾಂಕ್ ನೀಡಿರುವ ನಿರಂತರ ಗಮನವನ್ನು ಇದು ಒತ್ತಿ ಹೇಳುತ್ತದೆ. ಈ ಸಾಧನೆಯ ಬಗ್ಗೆ ಪ್ರತಿಕ್ರಿಯಿಸಿದ ಬ್ಯಾಂಕ್ ಆಫ್ ಬರೋಡಾದ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದೇಬದತ್ತ ಚಾಂದ್ ಹೇಳಿದರು:“ಭಾರತದ ಅತ್ಯುತ್ತಮ ಬ್ಯಾಂಕ್ ಎಂಬ ಮಾನ್ಯತೆ, ಬ್ಯಾಂಕ್ ಆಫ್ ಬರೋಡಾ ಅನುಸರಿಸಿದ ಸ್ಥಿರ ಮತ್ತು ನಿರಂತರ ಬೆಳವಣಿಗೆ ಹಾಗೂ…

Read More

ನಾರಾವಿ: ವ್ಯಕ್ತಿಯೋರ್ವರ ಭಾವಚಿತ್ರ ಹಾಗೂ ಹೆಸರನ್ನು ಬಳಸಿ ನಕಲಿ ಇನ್ಸ್ಟಾಗ್ರಾಂ ನಕಲಿ ಖಾತೆ ತೆರೆದು ಬೇರೆ ಬೇರೆ ಮಂದಿಗೆ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪಿ ವಿರುದ್ಧ ಡಿ. 11ರಂದು ವೇಣೂರು ಪೊಲೀಸರಿಗೆ ದೂರು ನೀಡಲಾಗಿದೆ. ನಾರಾವಿ ತುಂಬೆಗುಡ್ಡೆಯ ಸಂತೋಷ್ ಎಂಬವರು ಈ ಬಗ್ಗೆ ದೂರು ನೀಡಿದ್ದು, ತನ್ನ ಭಾವಚಿತ್ರ ಹಾಗೂ ಹೆಸರನ್ನು ಬಳಸಿ ನಕಲಿ ಇನ್ಸ್ಟಾಗ್ರಾಂ ಅಕೌಂಟ್ ತೆರೆದು ಬೇರೆ ಬೇರೆ ವ್ಯಕ್ತಿಗಳಿಗೆ ಹಣಕ್ಕಾಗಿ ಬೆದರಿಕೆ ಹಾಕಿ ಬೇಡಿಕೆ ಇಡುತ್ತಿರುವುದು ನನ್ನ ಪರಿಚಿತರ ಮೂಲಕ ಗಮನಕ್ಕೆ ಬಂದಿರುತ್ತದೆ. ಯಾರೋ ದುಷ್ಕರ್ಮಿಗಳು ನನ್ನ ಹೆಸರು ಮತ್ತು ಭಾವಚಿತ್ರವನ್ನು ಬಳಸಿ ಫೇಕ್ ಇನ್ಸ್ಟಾಗ್ರಾಂ ಅಕೌಂಟ್ ಕ್ರಿಯೆಟ್ ಮಾಡಿ ನನ್ನ ತೇಜೋವಧೆ ಮಾಡುತ್ತಿರುವ ಆರೋಪಿಯನ್ನು ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

Read More

ಮೂಡುಬಿದಿರೆ: ನಸುಕಿನ ಜಾವ ಕಾರಿನಲ್ಲಿ ಬಂದ ಅಪರಿಚಿತರು ರಿಕ್ಷಾವನ್ನು ಅಡ್ಡಗಟ್ಟಿ ಹಣ್ಣಿನ ವ್ಯಾಪಾರಿ ಬಳಿಯಿದ್ದ.19 ಸಾವಿರ ರೂ.ವನ್ನು ದೋಚಿ ಪರಾರಿಯಾಗಿರುವ ಘಟನೆ ಮಾಂಟ್ರಾಡಿಯಲ್ಲಿ ಗುರುವಾರ ವರದಿಯಾಗಿದೆ. ಈದು ಗ್ರಾಮದ ಮುಹಮ್ಮದ್ ಹಣ ಕಳೆದುಕೊಂಡವರು ಎಂದು ತಿಳಿದು ಬಂದಿದೆ. ಮೂಡುಬಿದಿರೆ ಮಾರುಕಟ್ಟೆಯಲ್ಲಿ ಹಣ್ಣು ಹಂಪಲು ವ್ಯಾಪಾರಿಯಾಗಿರುವ ಮುಹಮ್ಮದ್ ಮಂಗಳೂರಿನಿಂದ ಹಣ್ಣು ಖರೀದಿಸಲು ಗುರುವಾರ ನಸುಕಿನ ಜಾವ ಈದುನಿಂದ ರಿಕ್ಷಾದಲ್ಲಿ ಹೊರಟಿದ್ದರು. ಮಾಂಟ್ರಾಡಿ ತಲುಪಿದಾಗ ಕಾರಿನಲ್ಲಿ ಬಂದ ಅಪರಿಚಿತರ ತಂಡ ಇವರ ರಿಕ್ಷಾವನ್ನು ಅಡ್ಡಗಟ್ಟಿ, ಬೆದರಿಸಿ 19 ಸಾವಿರ ರೂ. ನಗದು ಲೂಟಿ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read More

ಉಪ್ಪಿನಂಗಡಿಯ ಗಾಂಧಿಪಾರ್ಕ್ ಬಳಿ ಇರುವ ಅಡಿಕೆ ಹಾಗೂ ಕಾಡುತ್ಪತ್ತಿ ಖರೀದಿ ಅಂಗಡಿಯಿAದ ನಗದು ಕಳ್ಳತನ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.  ಮೂಡಿಗೆರೆ ನಿವಾಸಿ ಮುಹಮ್ಮದ್ ಶಹಬಾದ್(26) ಹಾಗೂ ಜಂಶೀದ್(25) ಬಂಧಿತ ಆರೋಪಿಗಳು. ಚಿಕ್ಕಮಗಳೂರಿನ ಎನ್.ಆರ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಅಂಗಡಿಯೊOದರಿOದ ನಗದು ಕಳವುಗೈದ ಪ್ರಕರಣದಲ್ಲಿ ಈ ಇಬ್ಬರು ಆರೋಪಿಗಳನ್ನು ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ಠಾಣಾ ಪೊಲೀಸರು ಬಂಧಿಸಿದ್ದರು. ವಿಚಾರಣೆ ವೇಳೆ ಉಪ್ಪಿನಂಗಡಿಯಲ್ಲಿ ಕಳ್ಳತನ ಮಾಡಿರುವುದನ್ನು ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಅ.27ರಂದು ಉಪ್ಪಿನಂಗಡಿ ಗಾಂಧಿಪಾರ್ಕ್ ಬಳಿಯ ಅಡಿಕೆ ಹಾಗೂ ಕಾಡುತ್ಪತ್ತಿ ಕೇಂದ್ರದಿOದ 5 ಲಕ್ಷ ರೂಪಾಯಿ ನಗದು ಕಳವಾಗಿತ್ತು. ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎನ್.ಆರ್ ಪುರ ಪೊಲೀಸರು ಆರೋಪಿಗಳನ್ನು ಉಪ್ಪಿನಂಗಡಿ ಠಾಣೆಗೆ ಕರೆತಂದಿದ್ದಾರೆ., ಉಪ್ಪಿನಂಗಡಿ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ಮಹಜರು ನಡೆಸಿದ್ದಾರೆ. 

Read More