Author: main-admin

ಬೆಂಗಳೂರು: ಇನ್ನುಂದ ವಾಹನ ಚಾಲನಾ ಅನುಜ್ಞಾ ಪತ್ರ (ಡಿಎಲ್), ವಾಹನ ನೋಂದಣಿ ಪ್ರಮಾಣಪತ್ರ (ಆರ್ ಸಿ) ಸ್ಟಾರ್ಟ್‌ ಕಾರ್ಡ್‌ಗಳು ಅರ್ಜಿದಾರರ ಮನೆಬಾಗಿಲಿಗೆ ತಲುಪಿಸುವುದಕ್ಕೆ ರಾಜ್ಯ ಸಾರಿಗೆ ಇಲಾಖೆ ಮುಂದಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಸಾರಿಗೆ ಇಲಾಖೆ ಸಚಿವ ಆರ್‌ ರಾಮಲಿಂಗರೆಡ್ಡಿಯವರು ಈ ಸಂಬಂಧ ಸಾರಿಗೆ ಇಲಾಖೆ ಮತ್ತು ಅಂಚೆ ಇಲಾಖೆ ಪರಸ್ಪರ ಒಡಂಬಡಿಕೆ ಮಾಡಿಕೊಂಡಿದ್ದು, ಇದಕ್ಕೆ ಸರಕಾರ ಶುಕ್ರವಾರ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶ ಹೊರಡಿಸಿದೆ ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ನಿತ್ಯ ಮುದ್ರಿತವಾಗುವ ಡೈವಿಂಗ್ ಲೈಸೆನ್ಸ್ ಮತ್ತು ವಾಹನ ನೋಂದಣಿ ಪ್ರಮಾಣಪತ್ರ ಸ್ಟಾರ್ಟ್ ಕಾರ್ಡ್‌ಗಳನ್ನು ಸೂಚನಾ ಪತ್ರದೊಂದಿಗೆ ಲಗತ್ತಿಸಿ ಸ್ಪೀಡ್‌ ಪೋಸ್ಟ್ ಮೂಲಕ ಅರ್ಜಿದಾರರ ಮನೆಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ, ಸಾರಿಗೆ ಇಲಾಖೆ ಕಚೇರಿಯಲ್ಲಿ ಶುಕ್ರವಾರ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸಮ್ಮುಖದಲ್ಲಿ ಸಾರಿಗೆ ಮತ್ತು ಅಂಚೆ ಇಲಾಖೆ ಅಧಿಕಾರಿಗಳು ಈ ಸಂಬಂಧದ ಒಡಂಬಡಿಕೆಗೆ ಸಹಿ ಹಾಕಿದರು. ಇದಲ್ಲದೇ ಸಾರ್ವಜನಿಕರು ಆನ್‌ ಲೈನ್ ಆನ್‌ಲೈನ್ ಮೂಲಕ ದಾಖಲಾತಿಗಳ ಮಾಹಿತಿ ವೀಕ್ಷಿಸಬಹುದಾಗಿದೆ.

Read More

ಮಂಗಳೂರು: ಸುಮಾರು 11 ವರ್ಷಗಳ ಹಿಂದೆ ಕೊಲೆಯಾದ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಾ ನ್ಯಾಯಕ್ಕಾಗಿ ಹೋರಾಡುತ್ತಿರುವ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ರಕ್ಷಣೆಗಾಗಿ ರಾಜ್ಯ ಸರಕಾರವು ಗನ್ ಮ್ಯಾನ್ ಒದಗಿಸಲು ಮುಂದಾಗಿದೆ. ಮಹೇಶ್ ಶೆಟ್ಟಿ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇದೆ ಎಂದು ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಸರಕಾರದ ಗಮನಕ್ಕೆ ತಂದ ಬಳಿಕ ಈ ಬೆಳವಣಿಗೆ ನಡೆದಿದೆ. ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಆಗಸ್ಟ್ 17ರಂದು ಬೆಂಗಳೂರಿನಲ್ಲಿ ಭೇಟಿ ಮಾಡಿದ್ದ ವಸಂತ ಬಂಗೇರ ಮಹೇಶ್ ಶೆಟ್ಟಿ ಅವರಿಗೆ ಇಬ್ಬರು ಗನ್ ಮ್ಯಾನ್ ಒದಗಿಸುವಂತೆ ಮನವಿ ಮಾಡಿದ್ದರು. ಇದೀಗ ಪರಮೇಶ್ವರ್ ದಕ್ಷಿಣ ಕನ್ನಡ ಎಸ್.ಪಿ. ರಿಷ್ಯಂತ್ ಅವರಿಗೆ ಸೂಚನೆ ನೀಡಿ ಗನ್ ಮ್ಯಾನ್ ಒದಗಿಸುವಂತೆ ಅಧಿಕೃತವಾಗಿ ಆದೇಶ ಹೊರಡಿಸಿದ್ದಾರೆ. ಕಳೆದ ತಿಂಗಳು ಎಸ್.ಪಿ.ಗೆ ಮನವಿ ನೀಡಿದ್ದ ಮಹೇಶ್ ಶೆಟ್ಟಿ ಗನ್ ಮ್ಯಾನ್ ಒದಗಿಸುವಂತೆ ಕೇಳಿಕೊಂಡಿದ್ದರು. ಆದರೆ ಯಾವುದೇ ಜೀವ ಬೆದರಿಕೆ ಕರೆ ಇಲ್ಲವೆಂದು ಗುಪ್ತಚರ ಇಲಾಖೆ ವರದಿ ನೀಡಿದ ಹಿನ್ನಲೆಯಲ್ಲಿ ಅಂದಿನ…

Read More

ಬೆಂಗಳೂರು: ರೇಷನ್ ಕಾರ್ಡ್ ವಿತರಣೆ ಸೇರಿದಂತೆ ಇಲಾಖೆ ಕಾರ್ಯನಿರ್ವಹಣೆಗೆ ಸಂಬಂಧಿಸಿದ ತಹಶೀಲ್ದಾರ್ ಮತ್ತು ಉಪ ತಹಶೀಲ್ದಾರ್ ಗಳ ಅಧಿಕಾರ ಹಿಂಪಡೆದು, ಪ್ರತಿ ತಾಲೂಕು ಮಟ್ಟದಲ್ಲಿ ಪ್ರತ್ಯೇಕ ಇಲಾಖಾ ಕಚೇರಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ ಎಂಬುದಾಗಿ ಆಹಾರ ಮತ್ತು ನಾಗರೀಕ ಸಹಕಾರ ಸಚಿವ ಕೆ.ಹೆಚ್ ಮುನಿಯಪ್ಪ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದಂತ ಅವರು, ಪ್ರತಿ ತಾಲೂಕಿಗೆ ಒಬ್ಬ ಸಹಾಯಕ ನಿರ್ದೇಶಕರನ್ನು ನೇಮಕ ಮಾಡಿ, ಆಹಾರ ನಿರೀಕ್ಷಕರು, ಡೇಟಾ ಎಂಟ್ರಿ ಆಪರೇಟರ್ ಮತ್ತಿತರ ಸಿಬ್ಬಂದಿಯನ್ನು ಒಳಗೊಂಡ ಪ್ರತ್ಯೇಕ ವ್ಯವಸ್ಥೆಯನ್ನು ರೇಷನ್ ಕಾರ್ಡ್ ವಿತರಣೆ ಮಾಡೋದಕ್ಕಾಗಿಯೇ ಹೊಸ ಕಚೇರಿ ತೆರೆಯಲು ತೀರ್ಮಾನಿಸಲಾಗಿದೆ ಎಂದರು. ಅಕ್ಕಿ ಅಲಭ್ಯತೆ ಕಾರಣ ಹಣ ನೀಡುವ ತೀರ್ಮಾನದಂತೆ ಎಲ್ಲಾ ಅರ್ಹ ಬಿಪಿಎಲ್ ಕಾರ್ಡಾದರರಿಗೆ ಈ ತಿಂಗಳ 26ರೊಳಗೆ ಡಿಬಿಟಿ ಮೂಲಕ ಹಣ ವರ್ಗಾವಣೆ ಮಾಡಲಾಗುವುದು. 1.28 ಕೋಟಿ ಕಾರ್ಡ್ ದಾರರ ಪೈಕಿ 28 ಲಕ್ಷ ಕಾರ್ಡ್ ಗಳ ಬ್ಯಾಂಕ್ ಖಾತೆ ವಿವರಗಳು ಕಳೆದ ತಿಂಗಳು ಇಲಾಖೆಯಲ್ಲಿ ಇರಲಿಲ್ಲ. ಈ ಪೈಕಿ 2…

Read More

ಬೆಂಗಳೂರು: ಅತ್ಯಾಚಾರದಂತ ಪ್ರಕರಣಗಳು ನಡೆದಾಗ, ಆ ಬಗ್ಗೆ ಶೀಘ್ರವೇ ಪ್ರಕರಣ ದಾಖಲಿಸಿ, ಸಂತ್ರಸ್ತೆಗೆ ರಕ್ಷಣೆ ನೀಡಿ, ಆರೋಪಿಗಳನ್ನು ಬಂಧಿಸೋ ಕೆಲಸವನ್ನು ಪೊಲೀಸರು ಮಾಡಬೇಕು. ಆದ್ರೇ ಆ ಕೆಲಸ ಮಾಡದೇ ರಾಜಿ ಸಂಧಾನಕ್ಕೆ ಇಳಿದಂತ ಬೆಂಗಳೂರಿನ ಬಸವೇಶ್ವನಗರ ಪೊಲೀಸ್ ಠಾಣೆಯ ಪಿಎಸ್‌ಐ ಅನ್ನು ಅಮಾನತುಗೊಳಿಸಲಾಗಿದೆ. ಹೌದು ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆಗೆ ರಾಜೀ ಮಾಡಿಸಲು ಯತ್ನಿಸಿದ ಸಂಬಂಧ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯ ಪಿಎಸ್‌ಐ ಸತೀಶ್ ಅವರನ್ನು ಅಮಾನತುಗೊಳಿಸಲಾಗಿದೆ. ಬಸವೇಶ್ವನಗರ ಪೊಲೀಸ್ ಠಾಣೆಯ ಪಿಎಸ್‌ಐ ಸತೀಶ್ ಅವರು ಅತ್ಯಾಚಾರ ಸಂತ್ರಸ್ತೆಯನ್ನು ಆರೋಪಿ ಜೊತೆ ರಾಜಿ ಮಾಡಿಸಲು ಯತ್ನ ನಡೆಸಿದ್ದರಂತೆ. ಅಲ್ಲದೇ ತನಿಖೆ ವೇಳೆ ಅಸಭ್ಯವಾಗಿ ವರ್ತಿಸಿದ್ದಲ್ಲದೇ, ಹಣ ಕೂಡ ಕೇಳಿದ್ದ ಆರೋಪ ಇತ್ತು. ಈ ಸಂಬಂಧ ಸಂತ್ರಸ್ತೆ ಬಸವೇಶ್ವರನಗರ ಠಾಣೆಯ ಪಿಎಸ್‌ಐ ಸತೀಶ್ ವಿರುದ್ಧ ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ತನಿಖೆ ನಡೆಸಿದ ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರಗಿ ಅವರು, ಪಿಎಸ್‌ಐ ಸತೀಶ್ ಅವರ ವಿರುದ್ಧದ ತನಿಖಾ ವಿಚಾರಣೆ ಬಾಕಿ…

Read More

ಬೆಳ್ತಂಗಡಿ: ರೋಗಿಯೊಬ್ಬರನ್ನು ಕೊಂಡುಹೋಗುತ್ತಿರುವ ವೇಳೆ ಟುಫಾನ್ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವಗ್ಗ ಬಳಿ ಆಗಸ್ಟ್ 18 ರಂದು ನಡೆದಿದೆ. ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

Read More

ಬಂಟ್ವಾಳ: ಬಂಟ್ವಾಳ ತಾಲೂಕಿನ‌ ಪಡಿತರ ಚೀಟಿದಾರರಿಗೆ ವಿತರಿಸಲು ಭಾರತೀಯ ಆಹಾರ ನಿಗಮದಿಂದ ಪೂರೈಕೆಯಾದ ಸುಮಾರು 40 ಲೋಡ್ ಅಂದರೆ ಅಂದಾಜು ಒಂದುವರೆ ಕೋಟಿ ರೂಪಾಯಿ ಮೌಲ್ಯದ ಅಕ್ಕಿಯ ಲೆಕ್ಕಾಚಾರದಲ್ಲಿ ವ್ಯತ್ಯಾಸ ಕಂಡು ಬಂದಿದ್ದು, ಭಾರೀ ಅವ್ಯವಹಾರದ ಶಂಕೆ ವ್ಯಕ್ತವಾಗಿದೆ. ಈ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಶಾಸಕ ರಾಜೇಶ್‌ ನಾಯ್ಕ್‌ ಅವರು ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ ಹಾಗೂ ಇದೇ ವೇಳೆ ಮಂಗಳೂರಿನ ಸಹಾಯಕ ಆಯುಕ್ತ ಹಾಗೂ ತಾಲೂಕು ದಂಡಾಧಿಕಾರಿಯವರು ಬಂಟ್ವಾಳದ ಬಿ.ಸಿ.ರೋಡು ತಲಪಾಡಿ ಎಂಬಲ್ಲಿರುವ ಆಹಾರ ನಿಗಮದ ಗೋದಾಮಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಗಳೂರಿನಲ್ಲಿರುವ ಭಾರತೀಯ ಆಹಾರ ನಿಗಮದ ಗೋದಾಮಿನಿಂದ ಬಂಟ್ವಾಳದ ಬಿ.ಸಿ. ರೋಡ್‌ ನ ಗೋದಾಮಿಗೆ ಸರಬರಾಜು ಆಗಿರುವ ಸುಮಾರು 40 ಲೋಡ್‌ ಅಕ್ಕಿ ಕಾಣೆಯಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಶಾಸಕ ರಾಜೇಶ್‌ ನಾಯ್ಕ್‌ ಅವರು ಜಿಲ್ಲಾಧಿಕಾರಿಗೆ ಬರೆದ ಪತ್ರದಲ್ಲಿ ‘ಬಂಟ್ವಾಳ ತಾಲೂಕಿನ ಪಡಿತರ ಚೀಟಿದಾರರಿಗೆ ವಿತರಿಸಲು ಪೂರೈಕೆಯಾದ ಅಕ್ಕಿಗೆ ಸಂಬಂಧಿಸಿ ಅವ್ಯವಹಾರ ನಡೆಯುತ್ತಿರುವ…

Read More

ಮಂಗಳೂರು: ನಗರದ ಪಂಪ್ವೆಲ್ ನಲ್ಲಿರುವ ಖಾಸಗಿ ಆಸ್ಪತ್ರೆ ಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದ ಘಟನೆ ವರದಯಾಗಿದೆ.ವಿಶೇಷ ಸಾಮರ್ಥ್ಯದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದು, ಬೈಕ್ ಅಫಘಾತ ದಲ್ಲಿ ಗಾಯಗೊಂಡು ಆಸ್ಪತ್ರೆ ಗೆ ಸೇರಿದ್ದ ಮುಂಬೈ ಮೂಲದ ಅಬ್ದುಲ್ ಹಲೀಂ ಮತ್ತು ಮನ್ಸೂರ್ ಅಹ್ಮದ್ ಬಾವ ಎಂಬಾತನಿಗೂ ಅಫಘಾತ ದಲ್ಲಿ ಗಾಯವಾಗಿತ್ತು. ಸಂತ್ರಸ್ತ ಬಾಲಕಿಯ ತಾಯಿಯ ತಮ್ಮನಾಗಿರುವ ಮನ್ಸೂರ್ ಅಹ್ಮದ್ ನನ್ನು ನೋಡಲು ಬಾಲಕಿಯನ್ನು ಸಂತ್ರಸ್ತೆಯ ತಾಯಿ ಕರೆದುಕೊಂಡು ಆಸ್ಪತ್ರೆ ಗೆ ಹೋಗಿದ್ದರು. ಬಳಿಕ ಬಾಲಕಿಯನ್ನು ಆಸ್ಪತ್ರೆ ಯಲ್ಲೇ ಬಿಟ್ಟು ಹೋಗಿದ್ದರು. ಈ ವೇಳೆ ಗಾಯಾಳು ಮನ್ಸೂರ್ ಪತ್ನಿ ಶಮೀನಾ ಬಾನು ಜೊತೆ ಆರೋಪಿ ಹಲೀಂ ಲೈಂಗಿಕ ಕ್ರಿಯೆ ನಡೆಸಿದ್ದ , ಆಸ್ಪತ್ರೆಯಲ್ಲೇ ಇಬ್ಬರು ಲೈಂಗಿಕ ಕ್ರಿಯೆ ಮಾಡುತ್ತಿದ್ದನ್ನು ಅಪ್ರಾಪ್ತ ಬಾಲಕಿ ನೋಡಿದ್ದಾಳೆ. ಬಳಿಕ ಆರೋಪಿ ಹಲೀಂ ಬಾಲಕಿ ಮೇಲೆಯೂ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಪ್ರತಿರೋಧ ಒಡ್ಡಿದಾಗ ಬಾಲಕಿಯ ಬಾಯಿ, ಕೈ ಹಿಡಿದು ಶಮೀನಾ ಬಾನು ಸಹಕರಿಸಿದ್ದಾಳೆ. ಈ…

Read More

ನಿಮ್ಮ ಫೋನ್‌ ನ ಕವರ್‌ ನಲ್ಲಿ ನೀವು 10 ರೂಪಾಯಿಯ ನೋಟು ಅಥವಾ ಇನ್ನಾವುದೇ ನೋಟನ್ನು ಇಟ್ಟುಕೊಂಡರೆ, ಅದು ನಿಮಗೆ ದೊಡ್ಡ ಹಾನಿ ಉಂಟುಮಾಡಬಹುದು. ಇದರಿಂದ ನಿಮಗೆ ಸಾವಿರಾರು ರೂಪಾಯಿ ವೆಚ್ಚವಾಗಬಹುದು ಮತ್ತು ಫೋನ್ ಕೂಡ ಸ್ಫೋಟಗೊಳ್ಳಬಹುದು. ನಿಮ್ಮ ಫೋನ್‌ನ ಕವರ್‌ನಲ್ಲಿ ನೀವು ಹಣ ಅಥವಾ ಯಾವುದೇ ರೀತಿಯ ಕಾಗದವನ್ನು ಇರಿಸಿದರೆ, ನಂತರ ಜಾಗರೂಕರಾಗಿರಿ. ಇಲ್ಲದಿದ್ದರೆ, ನಿಮ್ಮ ಮೊಬೈಲ್ ಫೋನ್ ಸ್ಫೋಟಗೊಳ್ಳುವ ಮಾರಣಾಂತಿಕ ಅಪಘಾತ ನಿಮಗೆ ಸಂಭವಿಸಬಹುದು. ವಾಸ್ತವವಾಗಿ, ಈ ಹಿಂದೆ ಬಂದಿರುವ ವರದಿಗಳ ಪ್ರಕಾರ, ಮೊಬೈಲ್ ಫೋನ್‌ ಗಳಲ್ಲಿ ಬ್ಲಾಸ್ಟ್ ಆಗುವ ಅಪಾಯವಿದೆ ಮತ್ತು ಇದರಲ್ಲಿ ಬಳಕೆದಾರರ ಸಣ್ಣ ತಪ್ಪುಗಳು ಮಾತ್ರ ಸ್ಫೋಟಕ್ಕೆ ಕಾರಣವಾಗುತ್ತವೆ. ಅಂತಹ ಪರಿಸ್ಥಿತಿಯಲ್ಲಿ, ಫೋನ್‌ನ ಕವರ್‌ನಲ್ಲಿ ಹಣ ಅಥವಾ ಯಾವುದೇ ರೀತಿಯ ಕಾಗದವನ್ನು ಇಡದಿರುವುದು ಅವಶ್ಯಕ. ಫೋನ್ ನಲ್ಲಿ ಹಣ ಇಟ್ಟುಕೊಳ್ಳುವುದರಿಂದ ಏನೆಲ್ಲಾ ಸಮಸ್ಯೆಗಳು ಬರಬಹುದು ಮತ್ತು ಅದರಿಂದ ಎಷ್ಟು ನಷ್ಟ ಉಂಟಾಗಬಹುದು ಎಂಬುದನ್ನು ಇಲ್ಲಿ ತಿಳಿಸುತ್ತೇವೆ. ಫೋನ್ ಕವರ್‌ನಲ್ಲಿ ನೋಟ್ ಗಳನ್ನು ಇಡುವುದು ಸ್ಫೋಟಕ್ಕೆ…

Read More

ಕಾಸರಗೋಡು : ರೈಲು ಹಳಿಯಲ್ಲಿ ಕಲ್ಲು ಹಾಗೂ ತುಂಡಾದ ಕ್ಲೋಸೆಟ್ ಪತ್ತೆಯಾದ ಘಟನೆ ಕಾಸರಗೋಡಿನ ಕೋಟಿಕುಲಂ ಎಂಬಲ್ಲಿ ಇಂದು ಮಧ್ಯಾಹ್ನ ಬೆಳಕಿಗೆ ಬಂದಿದ್ದು, ಇದರಿಂದ ಭಾರೀ ಅಪಾಯ ತಪ್ಪಿದೆ. ಕೋಟಿಕುಲಂನ ಚೆಂಬರಿಕ ಸುರಂಗ ಸಮೀಪ ಈ ಘಟನೆ ನಡೆದಿದೆ. ಕಾಸರಗೋಡಿನಿಂದ ಹೊರಟ ಕೊಯಮುತ್ತೂರು – ಮಂಗಳೂರು ಇಂಟರ್ ಸಿಟಿ ಎಕ್ಸ್ ಪ್ರೆಸ್ ರೈಲಿನ ಲೋಕೊ ಪೈಲಟ್ ಇದನ್ನು ಗಮನಿಸಿದ್ದು, ರೈಲು ಹಾದು ಹೋಗುವ ಸಂದರ್ಭ ಏನೋ ಬಡಿದ ಶಬ್ದ ಕೇಳಿದ್ದು, ಇದರಿಂದ ಕಾಸರಗೋಡು ರೈಲ್ವೆ ಅಧಿಕಾರಿಗೆ ಮಾಹಿತಿ ನೀಡಿದ್ದರು. ರೈಲ್ವೆ ಪೊಲೀಸರು ಹಾಗೂ ರೈಲ್ವೆ ಭದ್ರತಾ ಪಡೆ ಸ್ಥಳಕ್ಕೆ ಬಂದು ತಪಾಸಣೆ ನಡೆಸಿದಾಗ ಹಳಿಯಲ್ಲಿ ಕಲ್ಲು ಹಾಗೂ ತುಂಡಾದ ಕ್ಲೋಸೆಟ್ ಪತ್ತೆಯಾಗಿದೆ . ಈ ಬಗ್ಗೆ ತನಿಖೆ ಆರಂಭಿಸಲಾಗಿದೆ. ಸಮೀಪದ ಸಿಸಿಟಿವಿ ಕ್ಯಾಮರ ದೃಶ್ಯಗಳನ್ನು ಕಲೆ ಹಾಕಲಾಗುತ್ತಿದೆ. ಕಣ್ಣೂರು – ಕಾಸರಗೋಡು ನಡುವೆ ಕೆಲ ದಿನಗಳಿಂದ ರೈಲುಗಳ ಮೇಲೆ ಕಲ್ಲೆಸೆದ ಘಟನೆಗಳು ನಡೆದಿದ್ದು, ಇದರ ಬಳಿಕ ಇದೀಗ ರೈಲು ಹಳಿಯಲ್ಲಿ ನಡೆದಿರುವ…

Read More

ಮಂಗಳೂರು: ಮೇಯಲು ಬಿಟ್ಟಿದ್ದ ಎರಡು ದನ ಮತ್ತು ಒಂದು ಕರುವನ್ನು ಕಳವು ಮಾಡಿದ ಘಟನೆ ಮಂಗಳೂರು ತಾಲೂಕಿನ ಬಡಗ ಎಡಪದವು ಗ್ರಾಮದ ಧೂಮಚಡವು ಆಟೋ ರಿಕ್ಷಾ ಪಾರ್ಕ್ ಬಳಿ ನಡೆದಿದ್ದು, ಈ ಬಗ್ಗೆ ಬಜಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಡಗ ಎಡಪದವು ಗ್ರಾಮದ ಹೊಸ ಗದ್ದೆ ನಿವಾಸಿ ಚಂದ್ರ ಗೌಡ ಅವರ ಒಂದು ಕರು ಮತ್ತು ಪರಿಸರದ ನಿವಾಸಿಯೊಬ್ಬರ ಎರಡು ದನಗಳು ಕಳವಾಗಿವೆ. ಆ. 14 ರಂದು ಮೇಯಲು ಹೋಗಿದ್ದ ಚಂದ್ರ ಗೌಡ ಅವರ ದನ ಕರುಗಳ ಪೈಕಿ 2 ದನಗಳು ಮನೆಗೆ ಮರಳಿದ್ದು, ಒಂದು ಕರು ವಾಪಸಾಗಿಲ್ಲ. ಈ ಬಗ್ಗೆ ಆ. 15 ರಂದು ಸಂಜೆ ಧೂಮಚಡವು ಆಟೋ ರಿಕ್ಷಾ ಪಾರ್ಕ್ ಬಳಿ ಹುಡುಕಾಟ ನಡೆಸುತ್ತಿದ್ದಾಗ ಪರಿಚಯದ ವ್ಯಕ್ತಿಯೊಬ್ಬರು ಸಮೀಪದಲ್ಲಿರುವ ಅಂಗಡಿಯ ಸಿಸಿ ಕ್ಯಾಮೆರಾ ಪರಿಶೀಲಿಸುವಂತೆ ತಿಳಿಸಿದ್ದರು. ಅದರಂತೆ ಸಿಸಿ ಕ್ಯಾಮರಾ ಪರಿಶೀಲಿಸಿದಾಗ ಅಂಗಡಿಯ ಮುಂದೆ ಮಲಗಿದ್ದ ದನಗಳನ್ನು ಮತ್ತು ಕರುವನ್ನು ತಡ ರಾತ್ರಿ ವೇಳೆ ಇಬ್ಬರು ಕಳ್ಳರು…

Read More