ಮಲೈ: ಮಲ್ಪೆ ಸಮುದ್ರದಲ್ಲಿ ಈಜಾಡಲು ಹೋಗಿ ಸಮುದ್ರ ಪಾಲಾಗುತ್ತಿದ್ದ ಇಬ್ಬರು ಪ್ರವಾಸಿಗರನ್ನು ಬೀಚ್ ನ ಜೀವ ರಕ್ಷಕ ತಂಡ ರಕ್ಷಿಸಿದ ಘಟನೆ ರವಿವಾರ ಸಂಜೆ ನಡೆದಿದೆ. ಸಕಲೇಶಪುರದ ಅವಿನಾಶ್ (26) ಮತ್ತು ಸಾಗರ್ (27) ಅವರು ಬೀಚ್ ನ ನೀರಿಗಿಳಿದು ಈಜಾಡತೊಡಗಿದ್ದರು. ಕಡಲ ಅಲೆಗಳಿಗೆ ಅವರಿಬ್ಬರು ಕೊಚ್ಚಿಕೊಂಡು ಹೋಗುವವರಿದ್ದರು. ತತ್ಕ್ಷಣ ಬೀಚ್ನ ಜೀವರಕ್ಷಕರು ಧಾವಿಸಿ ಬಂದು ಮುಳುಗುತ್ತಿದ್ದ ಇಬ್ಬರನ್ನೂ ರಕ್ಷಿಸಿದರು. ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಮುದ್ರ ತೀರದಲ್ಲಿ ನೆಟ್ ಅಳವಡಿಸದಿದ್ದುರಿಂದ ಆ ಭಾಗದಲ್ಲಿ ಅವರು ಜೀವರಕ್ಷಕ ತಂಡದವರ ಎಚ್ಚರಿಕೆಯನ್ನು ಧಿಕ್ಕರಿಸಿ ನೀರಿಗಿಳಿದಿದ್ದರು.
Author: main-admin
ಬೆಂಗಳೂರು: ಹೌದು ಕೆಎಂಎಫ್ ಪ್ರತಿ ಲೀಟರ್ ಹಾಲಿನ ದರವನ್ನು 3 ಹೆಚ್ಚಿಸಲು ತೀರ್ಮಾನಿಸಿದ್ದು, ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ಹಾಲಿನ ದರ ಹೆಚ್ಚಿಸಲು ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದೆ. 14 ಜಿಲ್ಲಾ ಹಾಲು ಒಕ್ಕೂಟಗಳು ಹಾಲಿನ ದರ ಹೆಚ್ಚಿಸಲು ಒಲವು ತೋರಿದ್ದವು. ಆದರೆ, ದರ ಹೆಚ್ಚಿಸಲು ಸರ್ಕಾರ ಅನುಮತಿ ನೀಡಿದ ಬಳಿಕವೇ ಈ ನಿರ್ಧಾರ ಜಾರಿಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರ ಹೆಚ್ಚಿಸುವಂತೆ ಎಂಟು ತಿಂಗಳಿಂದ ಜಿಲ್ಲಾ ಹಾಲು ಒಕ್ಕೂಟಗಳು ಕೆಎಂಎಫ್ ಮೇಲೆ ಒತ್ತಡ ಹೇರಿದ್ದವು. ಅಧ್ಯಕ್ಷರು ಮನವಿ ಮಾಡಿದ್ದರೂ ಹಾಲಿನ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿರಲಿಲ್ಲ. ರೈತರ ಅನುಕೂಲಕ್ಕೋಸ್ಕರ ಈಗ ದರ ಹೆಚ್ಚಿಸಲು ನಿರ್ಧರಿಸಲಾಗಿದೆ’ ಎಂದು ಆಡಳಿತ ಮಂಡಳಿ ಮೂಲಗಳು ಹೇಳಿವೆ.
ಬೆಳ್ತಂಗಡಿ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಚಾರ್ಮಾಡಿ ಘಾಟ್ ರಸ್ತೆಯಂಚಿನ ತಡೆಗೋಡೆ ಭಾರೀ ಪ್ರಮಾಣದಲ್ಲಿ ಕುಸಿತಗೊಂಡಿದೆ.ಬಿದ್ರುತಳ ಸಮೀಪ ತಡೆಗೋಡೆಯ ಒಂದು ಭಾಗ ಸಂಪೂರ್ಣ ಕುಸಿತ ಕಂಡಿದೆ. ಈ ತಡೆಗೋಡೆ ಇನ್ನಷ್ಟು ಕುಸಿತಗೊಂಡಲ್ಲಿ ರಸ್ತೆ ಸಂಪರ್ಕವೇ ಕಡಿತಗೊಳ್ಳುವ ಸಾಧ್ಯತೆಯಿದೆ. ರಾಷ್ಟ್ರೀಯ ಹೆದ್ದಾ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ.
ಉಳ್ಳಾಲ: ರಾ.ಹೆ 66ರ ತೊಕ್ಕೊಟ್ಟು ಕಲ್ಲಾಪುವಿನಲ್ಲಿ ರವಿವಾರ ತಡರಾತ್ರಿ ಐದು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿ ಹಲವರು ಗಾಯಗೊಂಡಿದ್ದಾರೆ. ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಇನ್ನೋವಾ ಕಾರು ವಾಹನವೊಂದನ್ನು ಓವರ್ಟೇಕ್ ಮಾಡಲು ಏಕಾಏಕಿ ಎಡಭಾಗಕ್ಕೆ ತಿರುಗಿಸಿದ ಪರಿಣಾಮ ಹಿಂಬದಿಯಲ್ಲಿದ್ದ ಐ20 ಕಾರು ಹಠಾತ್ತನೆ ಬ್ರೇಕ್ ಹಾಕಿದ್ದರಿಂದ ಕಾರು ಒಂದು ಸುತ್ತು ತಿರುಗಿ ಅದೇ ರಸ್ತೆಯಲ್ಲಿ ಬರುತ್ತಿದ್ದ ಸ್ಕೂಟರ್ಗೆ ಢಿಕ್ಕಿ ಹೊಡೆದು ಮಹಿಳೆಯರು, ಮಕ್ಕಳು ಸಹಿತ ಕುಟುಂಬವಿದ್ದ ಐ10 ಕಾರಿಗೆ ಢಿಕ್ಕಿ ಹೊಡೆದಿದೆ. ಅನಂತರ ರಸ್ತೆ ಬದಿಯಲ್ಲಿ ನಿಂತಿದ್ದ ಸ್ವಿಫ್ಟ್ ಕಾರಿಗೂ ಢಿಕ್ಕಿ ಹೊಡೆದಿದ್ದು ಈ ಸರಣಿ ಅಪಘಾತದಲ್ಲಿ ಸ್ಕೂಟರ್ ಸವಾರ ಕಾಸರಗೋಡು ನಿವಾಸಿ ತರುಣ್ ಗಾಯಗೊಂಡಿದ್ದಾರೆ. ಅಪಘಾತ ನಡೆಸಿದ ಐ20 ಕಾರಿನಲ್ಲಿದ್ದ ಅಲೋಶಿಯಸ್ ಕಾಲೇಜು ವಿದ್ಯಾರ್ಥಿ ಅಮೃತ್ ಕೂಡ ಗಾಯಗೊಂಡಿದ್ದಾರೆ. ಇನ್ನೊಂದು ಕಾರಿನಲ್ಲಿದ್ದ ಮಹಿಳೆಯರು ಮತ್ತು ಮಕ್ಕಳಿಗೂ ಗಾಯಗಳಾಗಿವೆ. ಘಟನ ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರ ಠಾಣಾ ಪೊಲೀಸರು ಭೇಟಿ ನೀಡಿ ಗಾಯಾಳುಗಳ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸರಣಿ ಅಪಘಾತಕ್ಕೆ ಕಾರಣವಾದ…
ಚಿಕ್ಕಮಗಳೂರು: ಜಿಲ್ಲೆಯ ಚಾರ್ಮಾಡಿ ಘಾಟ್ ನಲ್ಲಿ ಸಾರಿಗೆ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ಧರಿಂದಾಗಿ, ರಸ್ತೆಯಲ್ಲಿ ಮತ್ತೊಂದು ವಾಹನ ಸಂಚರಿಸೋದಕ್ಕೆ ಅವಕಾಶ ಇಲ್ಲದಂತೆ ಆಗಿ, ಕಿಲೋಮೀಟರ್ ದೂರದವರೆಗೆ ಇಂದು ಟ್ರಾಫಿಕ್ ಜಾಮ್ ಉಂಟಾಗಿದೆ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ಇಂದು ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿದೆ. ಇದರಿಂದಾಗಿ ಚಾರ್ಮಾಡಿ ಘಾಟ್ ನಲ್ಲಿ ರಸ್ತೆ ಸಂಚಾರದಲ್ಲಿ ಅವ್ಯವಸ್ಥೆ ಉಂಟಾಗಿದೆ. ಅಪಘಾತದಿಂದಾಗಿ ರಸ್ತೆ ಸಂಚಾರ ಬಂದ್ ಆದ ಕಾರಣ, ಚಾರ್ಮಾಡಿ ಘಾಟ್ ನಲ್ಲಿ ಕಿಲೋಮೀಟರ್ ಗಟ್ಟಲೇ ವಾಹನಗಳು ಟ್ರಾಫಿಕ್ ಜಾಮ್ ನಲ್ಲಿ ಸಿಲುಕುವಂತೆ ಆಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಸಂಚಾರ ಸರಿ ಪಡಿಸೋ ಕಾರ್ಯದಲ್ಲಿ ತೊಡಗಿದ್ದಾರೆ.
ಕುಂದಾಪುರ: ಶ್ರೀ ಮೂಕಾಂಬಿಕಾ ದೇಗುಲಕ್ಕೆ ಆಗಮಿಸಿದ ಕೇರಳದ ತಿರುವನಂತಪುರದ ಯಾತ್ರಾರ್ಥಿ ಮಹಿಳೆಯೊಬ್ಬರು ಸೌಪರ್ಣಿಕಾ ನದಿಯಲ್ಲಿ ಕೊಚ್ಚಿ ಹೋದ ಘಟನೆ ಶನಿವಾರ ಸಂಜೆ ಸಂಭವಿಸಿದೆ. ತಿರುವನಂತಪುರದಿಂದ 14 ಮಂದಿಯ ತಂಡ ಕೊಲ್ಲೂರು ಕ್ಷೇತ್ರಕ್ಕೆ ಆಗಮಿಸಿದ್ದು ಎಲ್ಲರೂ ತೀರ್ಥ ಸ್ನಾನಕ್ಕೆಂದು ನದಿಗೆ ಇಳಿದಿದ್ದರು. ಈ ಸಂದರ್ಭ ಮುರುಗನ್ ಅವರ ಪತ್ನಿ ಶಾಂತಿ ಶೇಖರನ್ (42) ಅವರು ನೀರುಪಾಲಾದರು. ಮುರುಗನ್ ಮತ್ತು ಪುತ್ರ ಆದಿತ್ಯ ನದಿಯ ಸೆಳೆತಕ್ಕೆ ಒಳಗಾದರೂ ಈಜಿ ದಡ ಸೇರಿದರು. ಮಹಿಳೆಗಾಗಿ ಅಗ್ನಿ ಶಾಮಕ ದಳ, ಕೊಲ್ಲೂರು ಪೊಲೀಸರು ಹಾಗು ಗ್ರಾಮಸ್ಥರು ಶೋಧ ಕಾರ್ಯ ನಡೆಸುತ್ತಿದ್ದಾರೆ.
ಪುತ್ತೂರು: ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆಯ ಆರೋಪಿಗಳಲ್ಲಿ ಒಬ್ಬನಾಗಿರುವ ಶಫೀಕ್ ಬೆಳ್ಳಾರೆಯ ಸಹೋದರನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಸಫ್ರಿದ್ ಎಂದು ಗುರುತಿಸಲಾಗಿದೆ. ಪ್ರಶಾಂತ್ ರೈ ಎಂಬವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಿಂದೂ ಕಾರ್ಯಕರ್ತ ಜೀವ ಬೆದರಿಕೆ ಹಾಕಿದ್ದು, ಈ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬೆಳ್ಳಾರೆಯ ಪೊಲೀಸ್ ಠಾಣೆಯ ಎದುರು ಕ್ರಮಕ್ಕೆ ಆಗ್ರಹಿಸಿ ಹಿಂದೂ ಪರ ಕಾರ್ಯಕರ್ತರು ನೆರೆದಿದ್ದರು. ಇನ್ನು ಸಫ್ರಿದ್ನನ್ನು ಬಜ್ಪೆಯಲ್ಲಿ ಪೊಲೀಸರು ಬಂಧಿಸಿದ್ದು, ಈತನನ್ನು ಬೆಳ್ಳಾರೆ ಠಾಣೆಗೆ ಕರೆತಂದಿರುವುದಾಗಿ ತಿಳಿದು ಬಂದಿದೆ
ಬೆಂಗಳೂರು: ನಾಳೆಯಿಂದವಿಧಾನಮಂಡಲಅಧಿವೇಶನಆರಂಭವಾಗಲಿದ್ದು, ಸರ್ಕಾರಹಾಗೂಪ್ರತಿಪಕ್ಷಗಳಮಧ್ಯೆಜಂಗೀಕುಸ್ತಿಶುರುವಾಗಲಿದೆ. 40 ಪರ್ಸೆಂಟ್ ಕಮಿಷನ್, ಬೆಂಗಳೂರಿನ ಮಳೆ ವಿಚಾರಗಳು ಪ್ರತಿಧ್ವನಿಸುವ ಸಾಧ್ಯತೆ ಇದೆ. ವಿರೋಧಪಕ್ಷಕ್ಕೆಆಹಾರವಾಗದಂತೆಆಡಳಿತರೂಢಬಿಜೆಪಿಪ್ಲಾನ್ರೂಪಿಸಿಕೊಂಡಿದೆ. ಇನ್ನೊಂದೆಡೆಸರ್ಕಾರವನ್ನುಇಕ್ಕಟ್ಟಿಗೆಸಿಲುಕಿಸಲುಕಾಂಗ್ರೆಸ್ಮತ್ತುಜೆಡಿಎಸ್ಸಿದ್ಧವಾಗಿದೆ. ಹತ್ತು ದಿನಗಳ ಕಾಲ ಅಧಿವೇಶನ ನಡೆಯಲಿದ್ದು, ಹಲವು ವಿಧೇಯಕಗಳು ಮಂಡನೆಯಾಗಲಿವೆ. ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ, ಮಳೆ ಅನಾಹುತ, ಪಿಎಸ್ ಐ ಸೇರಿದಂತೆ ಇತರೆ ನೇಮಕಾತಿ ಅಕ್ರಮ ಆರೋಪಗಳ ಬಗ್ಗೆ ಪ್ರಸ್ತಾಪಿಸಿ ಆಡಳಿತಾರೂಢ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷ ಕಾಂಗ್ರೆಸ್ ಕಾರ್ಯತಂತ್ರ ರೂಪಿಸಿದ್ದು, ಕಾಂಗ್ರೆಸ್ ತಿರುಗೇಟು ನೀಡಲು ಪ್ರತಿತಂತ್ರದೊಂದಿಗೆ ಆಡಳಿತಾರೂಢ ಬಿಜೆಪಿ ಸಜ್ಜಾಗಿದೆ.
ಸುಳ್ಯ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆಯ ಬಳಿಕ ಸಹಜ ಸ್ಥಿತಿಯತ್ತ ಮರಳುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ ತಲೆದೊರುವಂತಹ ಘಟನೆಯೊಂದು ಜರುಗಿದೆ. ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಫೀಕ್ ಎಂಬಾತನ ಸಹೋದರ ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವುದಾಗಿ ಆರೋಪ ಕೇಳಿ ಬಂದಿದೆ. ಈ ಹಿನ್ನಲೆಯಲ್ಲಿ ಬೆಳ್ಳಾರೆ ಠಾಣೆ ಮುಂದೆ ಹಿಂದೂ ಸಂಘಟನೆಯ ಕಾರ್ಯಕರ್ತರು ಜಮಾಯಿಸಿದ ಘಟನೆ ಸೆ 10 ರಂದು ಬೆಳಿಗ್ಗೆ ಬೆಳ್ಳಾರೆಯಲ್ಲಿ ನಡೆದಿದೆ. ಹಿಂದೂ ಸಂಘಟನೆಯ ಕಾರ್ಯಕರ್ತ ಹಾಗೂ ಬೆಳ್ಳಾರೆಯ ಅಮ್ಮು ರೈ ಕಾಂಪ್ಲೆಕ್ಸ್ ನ ಮ್ಯಾನೇಜರ್ ಪ್ರಶಾಂತ್ ರೈವರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಶಫೀಕ್ ತಮ್ಮ, ಸಫ್ರಿದ್ ಜೀವ ಬೆದರಿಕೆ ಒಡ್ಡಿರುವುದಾಗಿ ಸಂಘಟನೆಯ ಕಾರ್ಯಕರ್ತರು ಆರೋಪಿಸಿದ್ದಾರೆ. ಈತ ದಿ. ಪ್ರವೀಣ್ ನೆಟ್ಟಾರ್ ಅವರ ಕೋಳಿ ಫಾರ್ಮ್ ನಲ್ಲಿ ಕ್ಲಿನಿಂಗ್ ಕೆಲಸ ಮಾಡುತ್ತಿದ್ದ ಇಬ್ರಾಹಿಂ ಎಂಬವರ ಪುತ್ರ.…
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವ್ರು ಸ್ವೀಕರಿಸಿದ ಉಡುಗೊರೆಗಳ ಇ-ಹರಾಜಿನಲ್ಲಿ ಜನರು ವ್ಯಾಪಕವಾಗಿ ಬಿಡ್ ಮಾಡುತ್ತಿದ್ದು, ಸ್ವೀಕರಿಸಿದ ಈ ಮೊತ್ತವನ್ನ ನಮಾಮಿ ಗಂಗೆ ಅಭಿಯಾನಕ್ಕೆ ಬಳಸಲಾಗುವುದು. ಇನ್ನು ಈ ಹರಾಜಿನಲ್ಲಿ ದೇಶದ ವಿವಿಧ ಭಾಗಗಳಿಂದ ಜನರು ಭಾಗವಹಿಸಿದ್ದಾರೆ ಅನ್ನೋದು ವಿಶೇಷ. ಈ ಪೈಕಿ ಉಡುಪಿಯ ಚಾರ್ಟರ್ಡ್ ಅಕೌಂಟೆಂಟ್ ಕೆ. ರಂಗನಾಥ್ ಆಚಾರ್ ಮತ್ತು ರಾಯಪುರದ ಡಾ. ಸಂಜೀವ್ ಜೈನ್ ಅವರು ಮೋದಿಗೆ ನೀಡಿದ ಕೆಲವು ಉಡುಗೊರೆಗಳನ್ನ ಖರೀದಿಸಿದ್ದಾರೆ. ‘ಅವರು 2019 ರಿಂದ ಇ-ಹರಾಜಿನ ಮೂಲಕ ವಿವಿಧ ವಸ್ತುಗಳನ್ನ ಸಂಗ್ರಹಿಸುತ್ತಿದ್ದಾರೆ ಮತ್ತು ಅವರು ಇಲ್ಲಿಯವರೆಗೆ ಖರೀದಿಗಾಗಿ ಸುಮಾರು 3 ಲಕ್ಷ ರೂ.ಗಳನ್ನ ಖರ್ಚು ಮಾಡಿದ್ದಾರೆ. ಅದ್ರಂತೆ, ವಿಷ್ಣುವಿನ ವಿಗ್ರಹವನ್ನ 1.75 ಲಕ್ಷ ರೂ.ಗಳಿಗೆ ಖರೀದಿಸಿದರು’ ಎನ್ನುವ ಮಾಹಿತಿ ಏಜೆನ್ಸಿ ಮೂಲಕ ವ್ಯಕ್ತವಾಗಿದೆ. ಇ-ಹರಾಜಿಗೆ ಕಳೆದ ವರ್ಷ ಅಭೂತಪೂರ್ವ ಬೆಂಬಲ.!ಪ್ರಧಾನಮಂತ್ರಿಗಳು ಸ್ವೀಕರಿಸಿದ ಉಡುಗೊರೆಗಳನ್ನ ದೇಶ ಮತ್ತು ವಿದೇಶಗಳಲ್ಲಿ ಇ-ಹರಾಜು ಮಾಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರಿಂದ ಪಡೆದ ಮೊತ್ತವನ್ನ ನದಿಯ ಪುನರುಜ್ಜೀವನಕ್ಕಾಗಿ ನೀಡಲಾಗುತ್ತಿದೆ.…