Author: main-admin

ಮುಂಬೈ: ಜೈಪುರ –ಮುಂಬೈ ಎಕ್ಸ್ ಪ್ರೆಸ್ ವೇ ರೈಲಿನಲ್ಲಿ ನಾಲ್ವರನ್ನು ಗುಂಡಿಟ್ಟು ಹತ್ಯೆ ಮಾಡಿದ್ದ ಪ್ರಕರಣದ ತನಿಖೆ ವೇಳೆ ಮಹತ್ವದ ಅಂಶ ಬಹಿರಂಗವಾಗಿದೆ.ಹಂತಕ ಆರ್ ಪಿಎಫ್ ಪೇದೆ ಕೃತ್ಯಕ್ಕೆ ಮೊದಲು ರೈಲಿನಲ್ಲಿ ಬುರ್ಖಾಧಾರಿ ಮಹಿಳೆಗೆ “ಜೈ ಮಾತಾ ದಿ” ಎಂದು ಘೋಷಣೆ ಕೂಗುವಂತೆ ಆಗ್ರಹಿಸಿದ್ದಾನೆ ಎಂದು ತನಿಖೆಯ ವೇಳೆ ಬಯಲಾಗಿದೆ. ಪ್ರಕರಣದ ಕುರಿತು ತನಿಖೆ ನಡೆಸುವ ಬೊರಿವಲಿ ರೈಲ್ವೇ ಪೊಲೀಸರು, ಸಂತ್ರಸ್ತ ಮಹಿಳೆಯನ್ನು ಗುರುತಿಸಿ ಮಹಿಳೆಯಿಂದ ಹೇಳಿಕೆಯನ್ನು ಪಡೆಯಲಾಗಿದೆ ಎಂದು ಹೇಳಿದ್ದಾರೆ. ಪ್ರಕರಣದಲ್ಲಿ ಮಹಿಳೆಯಿಂದ ಹೇಳಿಕ ಪಡೆದು ರೈಲಿನಲ್ಲಿದ್ದ ಸಿಸಿಟಿವಿ ಕ್ಯಾಮೆರಾ ದೃಶ್ಯ ಕೂಡ ಪರಿಶೀಲಿಸಲಾಗಿದೆ. ಹಂತಕ ಚೌಧರಿ ಬುರ್ಖಾ ಧರಿಸಿದ್ದ ಪ್ರಯಾಣಿಕ ಮಹಿಳೆಗೆ ಗನ್ ನ್ನು ತೋರಿಸಿ ಎರಡೆರಡು ಬಾರಿ “ಜೈ ಮಾತಾ ದಿ” ಎಂದು ಕೂಗುವಂತೆ ಒತ್ತಾಯಿಸಿದ್ದಾನೆ ಎಂದು ತನಿಖೆಯ ವೇಳೆ ಬಹಿರಂಗವಾಗಿದೆ. ಸಹಾಯಕ ಸಬ್ ಇನ್ಸ್‌ಪೆಕ್ಟರ್ ಟಿಕಾರಾಂ ಮೀನಾ ಮತ್ತು ಮೂವರು ಪ್ರಯಾಣಿಕರಾದ ಅಬ್ದುಲ್ ಕಾದರ್ ಮೊಹಮ್ಮದ್ ಹುಸೇನ್ ಭಾನ್‌ಪುರವಾಲಾ,ಸೈಯದ್ ಸೈಫುದ್ದೀನ್ ಮತ್ತು ಅಸ್ಗರ್ ಅಬ್ಬಾಸ್ ಶೇಖ್…

Read More

ಬೆಂಗಳೂರು: ತಂದೆಯ ಜೊತೆ ಮಗಳು ಶಾಲೆಗೆ ಬೈಕ್ ನಲ್ಲಿ ಹೋಗುತ್ತಿದ್ದ ಸಂದರ್ಭ ಬಿಎಂಟಿಸಿ ಬಸ್ ಬೈಕ್ ಗೆ ಢಿಕ್ಕಿ ಹೊಡೆದು ಬಾಲಕಿ ರೋಡ್ ಗೆ ಬಿದ್ದ ಪರಿಣಾಮ ಆಕೆಯ ಮೇಲೆ ಬಸ್ ಹರಿದು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಉತ್ತರಹಳ್ಳಿ ಮುಖ್ಯರಸ್ತೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಬೆಂಗಳೂರು ಇಂಟರ್ ನ್ಯಾಶನಲ್ ಪಬ್ಲಿಲ್ ಸ್ಕೂಲ್ ನ ಪ್ರಿ ಕೆಜಿ ವಿದ್ಯಾರ್ಥಿನಿ ಪೂರ್ವಿ ರಾವ್ ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ. ಪೂರ್ವಿಯನ್ನು ಶಾಲೆಗೆ ಬಿಡಲೆಂದು ಆಕೆಯ ತಂದೆ ಪ್ರಸನ್ನ ಅವರು ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುತ್ತಿದ್ದಾಗ ಉತ್ತರಹಳ್ಳಿ ಮುಖ್ಯರಸ್ತೆಯ ಪದ್ಮಾವತಿ ಸಿಲ್ಕ್ ಶೋ ರೂಂ ಬಳಿ ವೇಗವಾಗಿ ಬಂದ ಬಿಎಂಟಿಸಿ ಬಸ್ ಬೈಕ್ ಗೆ ಢಿಕ್ಕಿ ಹೊಡೆದಿದೆ. ಇದರಿಂದ ಬೈಕ್ ಬಿದ್ದು, ಬೈಕ್ ನಲ್ಲಿದ್ದ ಪ್ರಸನ್ನ ಅವರು ದ್ವಿಚಕ್ರ ವಾಹನದ ಎಡಬದಿಗೆ ಬಿದ್ದರೆ ಮಗಳು ಪೂರ್ವಿ ಬಲಬದಿ ಬಿದ್ದಿದ್ದಾರೆ. ಪೂರ್ವಿ ಬಲ ಬದಿ ಬಿದ್ದ ಕಾರಣ ಈ ವೇಳೆ ಆಕೆ ಮೇಲೆ ಬಸ್ ಹರಿದುಹೋಗಿದೆ. ಪರಿಣಾಮ ಆಕೆ ಸ್ಥಳದಲ್ಲೇ…

Read More

ಬೆಂಗಳೂರು: ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದ್ದಾರೆ. ಚಿತ್ರದುರ್ಗ, ದಾವಣಗೆರೆ, ಮಡಿಕೇರಿ, ಬೀದರ್​ ಜಿಲ್ಲೆಗಳಲ್ಲಿ ದಾಳಿ ನಡೆಸಿದ್ದು ಅಪಾರ ಪ್ರಮಾಣದಲ್ಲಿ ಅಕ್ರಮ ಸಂಪತ್ತು ಪತ್ತೆ ಹಚ್ಚಲಾಗಿದೆ ಎನ್ನಲಾಗಿದೆ. ಚಿತ್ರದುರ್ಗದ ಹೊಳಲ್ಕೆರೆ ಸಣ್ಣ ನೀರಾವರಿ‌ ಇಲಾಖೆ ಇಂಜಿನಿಯರ್ ಕೆ.ಮಹೇಶ್, ಪತ್ನಿ BBMP ಎಇ ಹೆಚ್.ಭಾರತಿ ಮನೆ ಮೇಲೆ ಲೋಕಾಯುಕ್ತ ಎಸ್ಪಿ ವಾಸುದೇವರಾಮ್, ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ದಾವಣಗೆರೆಯ ಜಯನಗರದಲ್ಲಿರುವ ಮಹೇಶ್​​ ಮನೆ ಮೇಲೂ ದಾ ನಡೆಸಲಾಗಿದೆ. ಇದಲ್ಲದೇ ಬೀದರ್​ ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ಟೀಚರ್ ಕಾಲೋನಿಯ ಕಾನ್ಸ್​ಟೇಬಲ್​ ವಿಜಯಕುಮಾರ್ ಮನೆ ಮೇಲೂ ದಾಳಿ ಮಾಡಲಾಗಿದೆ. ಧಾರವಾಡದ ನಗರದ ಸಪ್ತಾಪುರ ಬಡಾವಣೆಯ ಮಿಚಿಗನ್ ಲೇಔಟ್​​ನಲ್ಲಿರುವ ಸಂತೋಷ ನಿವಾಸದ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದೆ. ಕೊಡಗು ಜಿಲ್ಲೆಯಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ ಮನೆ ಮೇಲೆ ದಾಳಿ ನಡೆಸಿದ್ದಾರೆ.ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡ ಮನೆಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತದ…

Read More

ಉಡುಪಿ: ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದ್ದ ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ತನಿಖಾ ಇಲಾಖೆ(ಸಿಐಡಿ) ತನ್ನ ಮೊದಲ ಹಂತದ ತನಿಖೆಯನ್ನು ಪೂರ್ಣಗೊಳಿಸಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ತನಿಖಾಧಿಕಾರಿ(ಐಒ) ಸಿಐಡಿ ಡಿವೈಎಸ್ಪಿ ಅಂಜುಮಾಲಾ ನಾಯಕ್ ನೇತೃತ್ವದ ತನಿಖಾ ತಂಡ, ಈಗಾಗಲೇ ಉಡುಪಿಯ ನೇತ್ರ ಜ್ಯೋತಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್‌ನಿಂದ ಸಾಕ್ಷ್ಯಗಳನ್ನು ಸಂಗ್ರಹಿಸಿದೆ ಮತ್ತು ಸಂತ್ರಸ್ತೆ, ಆರೋಪಿಗಳು ಹಾಗೂ ಕಾಲೇಜು ಆಡಳಿತ ಮಂಡಳಿಯ ಪ್ರತಿನಿಧಿಗಳ ಹೇಳಿಕೆ ದಾಖಲಿಸಿದೆ ಎಂದು ಅವರು ಹೇಳಿದ್ದಾರೆ. ಘಟನೆಯ ಬಗ್ಗೆ ಸಂತ್ರಸ್ತೆ ಅಧಿಕೃತವಾಗಿ ದೂರು ನೀಡದಿದ್ದರೂ, ಉಡುಪಿ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ ಮತ್ತು ಡಿವೈಎಸ್ಪಿ ಮಟ್ಟದ ತನಿಖೆ ಪ್ರಾರಂಭಿಸಿದ್ದರು. ಆದರೆ ಬಿಜೆಪಿ ಪ್ರತಿಭಟನೆ ಮುಂದುವರಿಸಿದ ನಂತರ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಲಾಗಿದೆ. ಆ.8ರಂದು ಉಡುಪಿಗೆ ಆಗಮಿಸಿದ್ದ ಸಿಐಡಿ ತಂಡ, ಸ್ಥಳ ಪರಿಶೀಲನೆ ನಡೆಸಿ, ಸಂತ್ರಸ್ತೆ, ಕಾಲೇಜು ಆಡಳಿತ ಮಂಡಳಿ ಹಾಗೂ ಆರೋಪಿ ವಿದ್ಯಾರ್ಥಿಗಳ ಹೇಳಿಕೆಗಳನ್ನು ದಾಖಲಿಸಿಕೊಂಡು, ಬೆರಳಚ್ಚು ಸಂಗ್ರಹಿಸಿ ಈ…

Read More

ಉಡುಪಿ: ಹಣ ದ್ವಿಗುಣಗೊಳಿಸುವ ಆಮಿಷವೊಡ್ಡಿ ಯುವತಿಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ನಡೆದಿದೆ. ಅಕ್ಷತಾ ಅವರಿಗೆ ಆ. 9ರಂದು ವಾಟ್ಸ್‌ಆಯಪ್‌ನಲ್ಲಿ ಹಣ ದ್ವಿಗುಣಗೊಳಿಸುವ ಬಗ್ಗೆ ಸಂದೇಶ ಬಂದಿದ್ದು, ಅದನ್ನು ನಂಬಿದ ಅವರು ಹಂತಹಂತವಾಗಿ ಒಟ್ಟು 1,01,000 ರೂ.ಗಳನ್ನು ಆರೋಪಿಗಳು ನೀಡಿದ ಖಾತೆಗೆ ವರ್ಗಾಯಿಸಿದ್ದಾರೆ. ಆದರೆ ಆರೋಪಿಗಳು ಹಣ ಹಿಂದಿರುಗಿಸದೆ ವಂಚಿಸಿದ್ದಾರೆ. ಈ ಬಗ್ಗೆ ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು: ಮಗ ಆತ್ಮಹತ್ಯೆ ಮಾಡಿಕೊಂಡ 32 ದಿನಗಳ ಬಳಿಕ ತಂದೆಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲದಲ್ಲಿ ನಡೆದಿದೆ. ಮೃತರನ್ನು ಆತ್ಮಹತ್ಯೆ ಮಾಡಿಕೊಂಡ ಕೇರಳ ಕುಂಬಳೆ ಬಳಿಯ ಬಂಬ್ರಾಣ ಕಲ್ಕುಲ ನಿವಾಸಿ ಕಲ್ಲಿನ ಮೇಸ್ತ್ರಿ ಕೆಲಸ ಮಾಡುತ್ತಿದ್ದ ಲೋಕೇಶ್ (52) ಎಂದು ಗುರುತಿಸಲಾಗಿದ್ದು ಅವರ ಮೃತದೇಹ ಸೋಮವಾರ ಬೆಳಿಗ್ಗೆ ಉಳ್ಳಾಲ ಕಡಲ ಕಿನಾರೆಯಲ್ಲಿ ಪತ್ತೆಯಾಗಿದೆ. ಪುತ್ರ ರಾಜೇಶ್ (26) ಕಳೆದ ಜುಲೈ 10 ರಂದು ನಾಪತ್ತೆಯಾಗಿದ್ದ, ಎರಡು ದಿನಗಳ ಬಳಿಕ ರಾಜೇಶ್ ನ ಮೃತದೇಹ ಮಂಗಳೂರು ಬೆಂಗರೆ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿತ್ತು. ಮಗನ ಅಂತ್ಯಕ್ರಿಯೆ ಕಳೆದ ಬಳಿಕ ತಂದೆ ಲೋಕೇಶ್ ನೊಂದುಕೊಂಡಿದ್ದು, ಅಲ್ಲದೆ ಮಗನ ಸಾವಿನ ಬಳಿಕ ಮಾನಸಿಕವಾಗಿ, ಕುಗ್ಗಿ ಹೋಗಿದ್ದರು. ಅಗಸ್ಟ್ 13 ರಂದು ಬೆಳಗ್ಗೆ 9.00 ಗಂಟೆಯ ವೇಳೆ ಪರಿಸರದ ಕೆಲವು ಮಂದಿಗೆ ಲೋಕೇಶ್ ರವರು ಮೊಬೈಲ್ ಮೂಲಕ ವಾಟ್ಸಪ್ ಸಂದೇಶ ಕಳುಹಿಸಿ “ನಾನು ಈಗ ಸೋಮೇಶ್ವರಕ್ಕೆ ಹೋಗಿ ಸಮುದ್ರಕ್ಕೆ ಹಾರುತ್ತೇನೆ. ನನ್ನ ಹೆಣ ಉಳ್ಳಾಲದಲ್ಲಿ ಸಿಗಬಹುದು” ನಾನು ಮೊಬೈಲ್…

Read More

ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಪುರುಷರನ್ನು ಆಕರ್ಷಿಸಿ ಅವರನ್ನು ಹನಿಟ್ರ್ಯಾಪ್ ಗೆ ಬೀಳಿಸುತ್ತಿದ್ದ ಗ್ಯಾಂಗ್ ಒಂದನ್ನು ಪೊಲೀಸರು ಬಲೆಗೆ ಬೀಳಿಸಿದ್ದು, ಒರ್ವ ಮಹಿಳೆ ಸೇರಿದಂತೆ ಮೂವರನ್ನು ಅರೆಸ್ಟ್ ಮಾಡಿದ್ದಾರೆ. ಇಲ್ಲಿಯವರೆಗೆ 12ಕ್ಕೂ ಹೆಚ್ಚು ಪುರುಷರನ್ನು ವಂಚಿಸಿದ ಮೂವರು ಪುರುಷರು ಹಾಗೂ ಮಹಿಳೆಯನ್ನು ಬಂಧಿಸಿದ್ದಾರೆ. ಆರೋಪಿಗಳು ಸಂತ್ರಸ್ತರಿಂದ ಸುಮಾರು 30 ಲಕ್ಷ ರೂಪಾಯಿ ಸುಲಿಗೆ ಮಾಡಿದ್ದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಬಂಧಿತರನ್ನು ನೇಹಾ ಅಲಿಯಾಸ್ ಮೆಹರ್, ಶರಣ್ ಪ್ರಕಾಶ್, ಅಬ್ದುಲ್ ಖಾದರ್ ಮತ್ತು ಯಾಸಿನ್ ಬಂಧಿತರು. ಸಾಮಾಜಿಕ ಜಾಲತಾಣಗಳ ಮೂಲಕ ಪುರುಷರನ್ನು ಟ್ರ್ಯಾಪ್ ಮಾಡಿ ನಂತರ ಆತ್ಮೀಯ ಕ್ಷಣಗಳನ್ನು ರೆಕಾರ್ಡ್ ಮಾಡಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ನೇಹಾ ಅಲಿಯಾಸ್ ಮೆಹರ್ ಎಂಬ ಮಹಿಳೆಗಾಗಿ ಬೆಂಗಳೂರು ಪೊಲೀಸರು ಹುಡುಕಾಟ ನಡೆಸಿದ್ದರು. ಹಲವು ದಿನಗಳ ಶೋಧ ಕಾರ್ಯಾಚರಣೆಯ ನಂತರ ಮಹಿಳೆಯನ್ನು ಮುಂಬೈನಲ್ಲಿ ಪತ್ತೆ ಹಚ್ಚಿ ಮಂಗಳವಾರ ಬೆಂಗಳೂರಿಗೆ ಕರೆತರಲಾಯಿತು . ನೇಹಾ ತನ್ನ ಗ್ರಾಹಕರನ್ನು ಟೆಲಿಗ್ರಾಮ್ ಮೂಲಕ ಸಂಪರ್ಕಿಸುತ್ತಿದ್ದರು. ಮಹಿಳೆಯು ಪುರುಷರೊಂದಿಗೆ ಸಂಪರ್ಕವನ್ನು ಸ್ಥಾಪಿಸಿದ ನಂತರ,…

Read More

ಮಂಗಳೂರು: ಉದ್ಯೋಗಕ್ಕೆಂದು ಮಂಗಳೂರಿಗೆ ಬಂದಿದ್ದ ಯುವತಿ ನಾಪತ್ತೆಯಾಗಿರುವ ಬಗ್ಗೆ ಆಕೆಯ ತಂದೆ ಕದ್ರಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಹೊನ್ನಾವರದ ಸೋನಿಯಾ ರೋಡ್ರಿಗಸ್‌ (23) ನಾಪತ್ತೆಯಾಗಿರುವ ಯುವತಿಯಾಗಿದ್ದಾಳೆ.ಈಕೆ ಸುಮಾರು 8 ತಿಂಗಳ ಹಿಂದೆ ಉದ್ಯೋಗಕ್ಕಾಗಿ ಮಂಗಳೂರಿಗೆ ಬಂದಿದ್ದು, ಸೋನಿಯಾ ಬೆಂದೂರಿನ ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಸವಿರುವುದಾಗಿ ತಿಳಿಸಿದ್ದಳು. ಇತ್ತೀಚೆಗೆ ಕರೆಗಳನ್ನು ಸ್ವೀಕರಿಸದ ಹಿನ್ನೆಲೆಯಲ್ಲಿ ಅಪಾರ್ಟ್‌ಮೆಂಟ್‌ಗೆ ಬಂದು ವಿಚಾರಿಸಿದಾಗ ಆಕೆಯ ಬಗ್ಗೆ ಯಾವುದೇ ಮಾಹಿತಿ ಇಲ್ಲವೆಂದು ಅಪಾರ್ಟ್‌ ಮೆಂಟ್‌ನ ನಿವಾಸಿಗಳು ಹೇಳಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ನಾಪತ್ತೆ ಪ್ರಕರಣ ದಾಖಲಾಗಿದೆ.

Read More

ಕಡಬ : ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ಆತೂರಿನಲ್ಲಿ ನಡೆದಿದ್ದು, ಬೈಕ್ ಸವಾರ ಗಾಯಗೊಂಡಿದ್ದು ಆಸ್ಪತ್ರಗೆ ದಾಖಲಿಸಲಾಗಿದೆ. ಗಾಯಗೊಂಡ ವ್ಯಕ್ತಿಯನ್ನು ಆಲಂಕಾರು ಗ್ರಾಮದ ಕಕ್ವೆ ನಿವಾಸಿ ಸುಧಾಕರ ಎಂದು ಗುರುತಿಸಲಾಗಿದೆ. ಸುಧಾಕರ ಅವರು ಮನೆಯಿಂದ ಉಪ್ಪಿನಂಗಡಿಗೆ ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಆತೂರು ಅಶ್ವಿನಿ ಆಸ್ಪತ್ರೆ ಮುಂಭಾಗ ತಲುಪುತ್ತಿದ್ದಂತೆ ಹಿಂದಿನಿಂದ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಬೈಕ್‌ ಗೆ ಢಿಕ್ಕಿಯಾಗಿದೆ.ಘಟನೆಯಲ್ಲಿ ಬೈಕ್ ಪಲ್ಟಿಯಾಗಿ ಸವಾರ ಸುಧಾಕರ ಅವರು ಕೆಳಕ್ಕೆ ಎಸೆಯಲ್ಪಟ್ಟು ಗಾಯಗೊಂಡಿದ್ದರು. ಢಿಕ್ಕಿಯಾದರೂ ಚಾಲಕ ಕಾರು ನಿಲ್ಲಿಸದೇ ಪರಾರಿಯಾಗಿದ್ದಾರೆ. ಘಟನೆ ಕುರಿತಂತೆ ಬೈಕ್ ಸವಾರ ಸುಧಾಕರ ಅವರು ಕಡಬ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪರಾರಿಯಾದ ಕಾರಿನ ಗುರುತು ಪತ್ತೆಗಾಗಿ ಸ್ಥಳೀಯ ಅಂಗಡಿಯಲ್ಲಿನ ಸಿಸಿ ಟಿವಿ ಫೂಟೇಜ್‌ಗಳನ್ನು ಪರಿಶೀಲಿಸಲಾಗಿದೆ.

Read More

ಮುಂಬಯಿ: ಬಾಲಿವುಡ್‌ ನಟ ಅಕ್ಷಯ್‌ ಕುಮಾರ್ ಕೆನಡಾ ಪೌರತ್ವವನ್ನು ತ್ಯಜಿಸಿ ಭಾರತೀಯ ಪೌರತ್ವ ಹಾಗೂ ಪಾಸ್‌ ಪೋರ್ಟ್‌ನ್ನು ಮರಳಿ ಪಡೆದುಕೊಂಡಿದ್ದಾರೆ. ಕೆನಡಾ ಪೌರತ್ವ ಸಲ್ಲಿಸಿದ್ದು ಯಾಕೆ?: ಬಾಲಿವುಡ್‌ ನಲ್ಲಿ ನಟಿಸಿ, ಭಾರತೀಯರ ಅಪಾರ ಅಭಿಮಾನವನ್ನು ಗಳಿಸಿರುವ ನಟ ಅಕ್ಷಯ್‌ ಕುಮಾರ್‌ ಕೆನಡಾ ದೇಶದ ಪೌರತ್ವವನ್ನು ಹೊಂದಿದ್ದರು. 90 ದಶಕದಲ್ಲಿ ಅವರ ಸಾಲು ಸಾಲ ಸಿನಿಮಾಗಳು ಸೋಲುತ್ತಿದ್ದವು. ಇದರಿಂದ ಮನನೊಂದಿದ್ದ ಅವರು ಬೇರೆ ಏನಾದರೂ ಕೆಲಸ ಮಾಡುವ ನಿಟ್ಟಿನಲ್ಲಿ ಅವರ ಸ್ನೇಹಿತರೊಬ್ಬರ ಸಲಹೆಯಂತೆ ಕೆನಡಾಕ್ಕೆ ತೆರಳಿದ್ದರು. ಆ ಬಳಿಕ ಅಲ್ಲಿನ ಪೌರತ್ವಕೆ ಅರ್ಜಿ ಸಲ್ಲಿಸಿದ್ದರು. ಇದಾದ ಬಳಿಕ ಅವರ ಒಂದೊಂದೇ ಸಿನಿಮಾಗಳು ಹಿಟ್ ಆಗುತ್ತಾ ಹೋಯಿತು. ಆ ಕಾರಣದಿಂದ ಅವರು ಮತ್ತೆ ಭಾರತಕ್ಕೆ ಬಂದಿದ್ದರು. ಆದರೆ ಈ ವೇಳೆ ಅವರು ಪೌರತ್ವ ಹಾಗೂ ಪಾಸ್ ಪೋರ್ಟ್‌ ಎರಡನ್ನೂ ಬದಲಾಯಿಸಿಕೊಂಡಿರಲಿಲ್ಲ. ವಿವಾದಕ್ಕೆ ಕಾರಣವಾಗಿದ್ದ ಸಂದರ್ಶನ: 2019 ರಲ್ಲಿ ಪ್ರಧಾನಿ ಮೋದಿ ಅವರನ್ನು ಸಂದರ್ಶನ ಮಾಡಿದ್ದರು. ಈ ವೇಳೆ ಅಕ್ಷಯ್‌ ಅವರ ಪೌರತ್ವದ ಬಗ್ಗೆ ಸಾಕಷ್ಟು ಚರ್ಚೆ ನಡೆದಿತ್ತು.…

Read More