Author: main-admin

ಬೆಳ್ತಂಗಡಿ: ಕಡತ ದುರುಪಯೋಗ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಹೋಬಳಿ ವ್ಯಾಪ್ತಿಗೆ ಒಳಪಟ್ಟ ತಣ್ಣೀರುಪಂತ, ಪುತ್ತಿಲ, ಬಾರ್ಯ, ಕರಾಯ ಗ್ರಾಮದ ಗ್ರಾಮಕರಣಿಕ ಜಯಚಂದ್ರ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ‌. ಜಯಚಂದ್ರ ಪಿ.ಎನ್.‌ 2018ರಲ್ಲಿ ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಕೊಕ್ಕಡ ಹೋಬಳಿಯ ಎನ್‌ಸಿಆರ್ ಫೈಲ್‌ಗಳ ಕೇಸ್ ವರ್ಕರ್ ಆಗಿದ್ದ. ಈ ವೇಳೆ ಆತ ಅಕ್ರಮ ಲಾಭಗಳಿಸುವ ದುರುದ್ದೇಶದಿಂದ ಸರಕಾರಿ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸದೆ ತಾಲೂಕು ಕಚೇರಿಗೆ ಸಾರ್ವಜನಿಕರಿಂದ ಬಂದ ಎನ್‌ಸಿಆರ್‌ ಫೈಲ್‌ಗಳನ್ನು ಮತ್ತೋರ್ವ ಆರೋಪಿ ರಾಜು ಎಂಬಾತನಿಗೆ ನೀಡಿ ಸಾರ್ವಜನಿಕರಿಗೆ ವಂಚನೆ ಹಾಗೂ ನಂಬಿಕೆಗೆ ದ್ರೋಹ ಎಸಗಿದ್ದರು. ಈ ವಂಚನೆ ಆರೋಪದ ಬಗ್ಗೆ ಆ.16 ರಂದು ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಸೆ .7ರಂದು ಜಯಚಂದ್ರನನ್ನು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕಡಬ: ಮರದ ಕೊಂಬೆ ಕಡಿಯುವಾಗ ವಿದ್ಯುತ್ ತಗುಲಿ ಯುವಕನೋರ್ವ ಮೃತಪಟ್ಟ ದಾರುಣ ಘಟನೆ ಕಡಬದಲ್ಲಿ ನಡೆದಿದೆ. ಕುಂತೂರು ಕಾಲಾಯಿಲ್ ನಿವಾಸಿ ಮನೋಜ್(43) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಮನೋಜ್ ಅವರು ಮರದ ಕೊಂಬೆಯೊಂದು ಕಡಿಯುವಾಗ 33 kv ವಿದ್ಯುತ್ ತಂತಿ ತಾಗಿ ದುರ್ಮರಣ ಸಂಭವಿಸಿದೆ. ಮನೋಜ್ ಮೃತದೇಹ ಮರದಲ್ಲೇ ನೇತಾಡುತ್ತಿತ್ತು ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತದೇಹವನ್ನು ಕಡಬ ಸರಕಾರಿ ಆಸ್ಪತ್ರೆಗೆ ತರಲಾಗಿದೆ. ಕಡಬ ಪೊಲೀಸ್ ಠಾಣಾ ವ್ಯಾಪಿಯಲ್ಲಿ ಘಟನೆ ನಡೆದಿದೆ.

Read More

ಮಣಿಪಾಲ: ಬೆಂಗಳೂರಿನ ಮಣಿಪಾಲ್ ಗ್ರೂಪ್ ಮೇಲೆ ಐಟಿ ದಾಳಿ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಮಣಿಪಾಲದಲ್ಲೂ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.ಬೆಳಿಗ್ಗೆ ಮಣಿಪಾಲಕ್ಕೆ ಆಗಮಿಸಿದ ಆದಾಯ ತೆರಿಗೆ ಅಧಿಕಾರಿಗಳ ತಂಡ ,ಮಣಿಪಾಲ್ ಗ್ರೂಪ್ ನ ಫೈನಾನ್ಸ್ ವಿಭಾಗದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರು ಮತ್ತು ಮಂಗಳೂರಿ ನಿಂದ ಬಾಡಿಗೆ ಕಾರಿನ ಮೂಲಕ ಅಧಿಕಾರಿಗಳ ತಂಡ ಬೆಳ್ಳಂಬೆಳಿಗ್ಗೆ ಇಲ್ಕಿಗೆ ಆಗಮಿಸಿತ್ತು. ಸದ್ಯ ದಾಖಲೆಗಳನ್ನು ಪರಿಶೀಲಿಸುತ್ತಿರುವ ಐಟಿ ಅಧಿಕಾರಿಗಳು, ಸಂಜೆತನಕ ದಾಖಲೆಗಳನ್ನು ಜಾಲಾಡುವ ಸಾಧ್ಯತೆ ಇದೆ.

Read More

ಮಂಗಳೂರು: ನಗರದ ತಣ್ಣೀರುಬಾವಿ ಬೀಚ್ ಹಾಗೂ ಮೂಡುಬಿದಿರೆಯ ಆಳ್ವಾಸ್ ಮೈದಾನದಲ್ಲಿ 50 ಸಾವಿರ ಯೋಗಪಟುಗಳ ಸೇರುವಿಕೆಯಲ್ಲಿ‌ ಆ.17ರಂದು ಯೋಗಥಾನ್ ಕಾರ್ಯಕ್ರಮ ನಡೆಯಲಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದರು. ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಯೋಗಥಾನ್-2022 ಆಯೋಜನೆಯ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಣ್ಣೀರುಬಾವಿ ಬೀಚ್ ನಲ್ಲಿ 40,000 ಹಾಗೂ ಆಳ್ವಾಸ್ ಮೈದಾನದಲ್ಲಿ 10,000 ಯೋಗಪಟುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಕ್ರೀಡಾ ಇಲಾಖೆ, ನೆಹರೂ ಯುವ ಕೇಂದ್ರ, ಸಾರ್ವಜನಿಕ ಶಿಕ್ಷಣ, ಪದವಿ ಪೂರ್ವ ಶಿಕ್ಷಣ ಇಲಾಖೆ, ಶಿಕ್ಷಣ ಇಲಾಖೆಯ ಅಧಿಕಾರಿಗಳು ಪೂರಕ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅವರು ನಿರ್ದೇಶನ ಮಾಡಿದರು. ಸೆ.17ರ ಬೆಳಗ್ಗೆ 9ರಿಂದ 10ರವರೆಗೆ ನಡೆಯುವ ಯೋಗಥಾನ್‍ಗೆ ಜಿಲ್ಲೆಯ 50 ಸಾವಿರಕ್ಕೂ ಅಧಿಕ ಯೋಗಪಟುಗಳ ನೋಂದಣಿಯಾಗಬೇಕು, ಕೂಡಲೇ ನೋಂದಣಿ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಬೇಕು. ಜಿಲ್ಲೆಯ ಮೆಡಿಕಲ್, ಇಂಜಿನಿಯರಿಂಗ್, ನರ್ಸಿಂಗ್ ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳನ್ನು ಈ ಯೋಗಥಾನ್‍ನಲ್ಲಿ ಭಾಗವಹಿಸಲು ಜಾಗೃತಿ ಮೂಡಿಸುವಂತೆ ಆಯಾ ಕಾಲೇಜುಗಳ ನೋಡಲ್ ಅಧಿಕಾರಿಗಳಿಗೆ ಸೂಚಿಸಬೇಕು. ಈ…

Read More

ನವದೆಹಲಿ: ‘ಕಾರು ಮತ್ತು ಎಸ್‌ಯುವಿ ಗಳ ಹಿಂದಿನ ಆಸನಗಳಲ್ಲಿ ಕುಳಿತು\ ಪ್ರಯಾಣಿಸುವವರು ಕೂಡ ಸೀಟ್‌ ಬೆಲ್ಟ್‌ ಧರಿಸುವುದನ್ನು ಕಡ್ಡಾಯಗೊಳಿಸಲಾಗು ವುದು. ಸೀಟ್‌ ಬೆಲ್ಟ್‌ ಧರಿಸದವರಿಗೆ ದಂಡ ಹಾಕಲಾಗುವುದು. ಈ ಕುರಿತ ಅಧಿಸೂಚನೆಯನ್ನು ಮೂರು ದಿನಗಳಲ್ಲಿ ಹೊರಡಿಸಲಾಗುವುದು’ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಮಂಗಳವಾರ ಹೇಳಿದ್ದಾರೆ. ‘ಹಿಂದಿನ ಆಸನಗಳಲ್ಲಿ ಕುಳಿತವರು ಕೂಡ ಸೀಟ್‌ ಬೆಲ್ಟ್‌ ಧರಿಸುವುದರ ಮಹತ್ವದ ಬಗ್ಗೆ ಕ್ರಿಕೆಟ್‌ ಆಟಗಾರರು ಮತ್ತು ಬಾಲಿವುಡ್‌ ತಾರೆಯರನ್ನು ಬಳಸಿ ಜಾಗೃತಿ ಮೂಡಿಸಲಾಗುವುದು’ ಎಂದೂ ಹೇಳಿದ್ದಾರೆ.

Read More

ಬೆಂಗಳೂರು: ಆಹಾರ ಮತ್ತು ಅರಣ್ಯ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ಉಮೇಶ್ ಕತ್ತಿ (61) ಅವರು ಇಂದು ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾಗಿದ್ದಾರೆ. ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು. ತಂದೆಯ ಅಗಲಿಕೆ ಬಳಿಕ ರಾಜಕೀಯಕ್ಕೆ ಪ್ರವೇಶಿಸಿದ್ದ ಉಮೇಶ್ ಕತ್ತಿ, ತಂದೆಯಂತೆಯೇ ಹೃದಯಾಘಾತಕ್ಕೀಡಾಗಿ ಅಗಲಿದ್ದಾರೆ. ಉಮೇಶ್ ಕತ್ತಿಯವರ ತಂದೆ ವಿಶ್ವನಾಥ ಕತ್ತಿ ಅವರು ಕೂಡ ಹೃದಯಾಘಾತದಿಂದಲೇ ಸಾವಿಗೀಡಾಗಿದ್ದರು. ಅವರು ವಿಧಾನಸಭೆ ಅಧಿವೇಶನ ನಡೆಯುವಾಗಲೇ ಹೃದಯಾಘಾತದಿಂದ ನಿಧನರಾಗಿದ್ದರು. ತಂದೆಯ ಮರಣದ ಬಳಿಕ ಉಮೇಶ್ ಕತ್ತಿ ರಾಜಕೀಯಕ್ಕೆ ಪ್ರವೇಶಿಸಿದ್ದರು.

Read More

ತೊಕ್ಕೊಟ್ಟು: ತೆಂಗಿನ ಕಾಯಿ ಕೀಳಲು ಮರವೇರಿದ್ದ ವೇಳೆ ಕಣಜದ ಹುಳುಗಳು ದಾಳಿ ನಡೆಸಿದ ಪರಿಣಾಮ ಕಾಯಿ ಕೀಳುವವ ಗಂಭೀರ ಗಾಯಗೊಂಡದ್ದಲ್ಲದೆ, ರಸ್ತೆಯಲ್ಲಿ ಹೋಗುತ್ತಿದ್ದ ತಂದೆ, ಮಗಳಿಗೂ ಹುಳುಗಳು ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ತೊಕ್ಕೊಟ್ಟು ಸಮೀಪದ ಉಳ್ಳಾಲ ಬೈಲು ಎಂಬಲ್ಲಿ ನಡೆದಿದೆ. ಉಳ್ಳಾಲ ಬೈಲು ನಿವಾಸಿ ಜಿತನ್ ರೆಸ್ಕಿನ ಅವರು ಕಣಜದ ಹುಳುವಿನ‌ ದಾಳಿಯಿಂದ ಗಂಭೀರ ಗಾಯಗೊಂಡು ನಗರದ ಫಾದರ್ ಮುಲ್ಲರ್ಸ್ ಆಸ್ಪತ್ರೆಯ ತೀವ್ರ ನಿಘಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿತನ್ ಅವರು ವೃತ್ತಿ ಪರ ತೆಂಗಿನ ಕಾಯಿ ಕೀಳುವವರಾಗಿದ್ದು ಇಂದು ಬೆಳಿಗ್ಗೆ ಉಳ್ಳಾಲ ಬೈಲಿನ ಭವಾನಿ ಎಂಬವರ ಮನೆಯಲ್ಲಿ ಮರವೇರುವ ಯಂತ್ರದ ಮೂಲಕ ಕಾಯಿ ಕೀಳುತ್ತಿದ್ದ ವೇಳೆ ಮರದಲ್ಲಿ ಗೂಡು ಕಟ್ಟಿದ್ದ ಕಣಜದ ಹುಳುಗಳು ಏಕಾ ಏಕಿ ದಾಳಿ ನಡೆಸಿ ಕಚ್ಚಿ ಗಾಯಗೊಳಿಸಿವೆ. ನೊಣಗಳ ದಾಳಿಯ ರಭಸಕ್ಕೆ ಜಿತನ್ ಅವರು ಮರದಿಂದ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಪಕ್ಕದ ರಸ್ತೆಯಲ್ಲಿ ಮಗಳನ್ನ ಶಾಲಾ ವಾಹನಕ್ಕೆ ಬಿಡಲು ತೆರಳುತ್ತಿದ್ದ ಸ್ಥಳೀಯ ಬಾಡಿಗೆ…

Read More

ಕಾರವಾರ: ಇತಿಹಾಸ ಸಂಶೋಧಕ ಶ್ಯಾಮಸುಂದರ ಗೌಡ ಅಂಕೋಲಾ ಅವರು ಉತ್ತರ ಕನ್ನಡ ಜಿಲ್ಲಾ ಶಾಸನ ಸಂಪುಟದ ರಚನೆಯ ಹಿನ್ನೆಲೆಯಲ್ಲಿ ಕುಮಟಾ ತಾಲೂಕಿನ ಕೋಡ್ಕಣಿಯಲ್ಲಿ ಕೈಗೊಂಡ ಎರಡನೇ ಹಂತದ ಕ್ಷೇತ್ರಕಾರ್ಯದ ಸಂದರ್ಭದಲ್ಲಿ ಅಲ್ಲಿನ ಶಾಂತಿಕಾ ಪರಮೇಶ್ವರಿ ದೇವಸ್ಥಾನದ ಆವರಣದಲ್ಲಿನ ತೆಂಗಿನ ಮರದ ಬುಡದಲ್ಲಿ ಹನ್ನೆರಡನೇ ಶತಮಾನದ ಅವಧಿಗೆ ಸೇರಿದ ಹೊಸ ಅಪ್ರಕಟಿತ ತಿಗಳಾರಿ ಲಿಪಿ ಮತ್ತು ಕನ್ನಡ ಭಾಷೆಯಲ್ಲಿರುವ ಶಾಸನ ಪತ್ತೆ ಮಾಡಿದ್ದಾರೆ. ಈಗ ದೊರೆತಿರುವ ತಿಗಳಾರಿ ಲಿಪಿಯಲ್ಲಿರುವ ಈ ಶಾಸನ ಒಟ್ಟೂ ಮೂವತ್ತೆರಡು ಸಾಲುಗಳಲ್ಲಿ ಬರೆದಿದ್ದು, ಶಿಶುಗಲಿ ಪಾಂಡ್ಯರ ರಾಜ ವಿಕ್ರಮ ತೈಲನದ್ದಾಗಿದೆ. ಹೆರ್ಗ್ಗಡಹೇಯ (ಬಹುಶಃ ಈಗಿನ ಹೆಗಡೆ) ಗ್ರಾಮದಲ್ಲಿ ಲಿಷ್ಣಮನ ತಮ್ಮ ನಾರಾಯಣ ಮತ್ತು ಸೀಗೆಯ ನಾರಾಯಣರು ಪ್ರತಿಷ್ಠಾಪಿಸಿದ ದೇವರಿಗೆ ನಂದಾದೀಪ ಮತ್ತು ನೈವೇದ್ಯಕ್ಕಾಗಿ ವಿಕ್ರಮತೈಲ ಭೂಮಿದಾನ ನೀಡಿದ ವಿಷಯ ತಿಳಿಸುತ್ತದೆ. ಮುಂದುವರೆದ ಶಾಸನ ಹಟ್ಟಣದ (ಪಟ್ಟಣದ) ತೈಲನೂ ದೇವರಿಗೆ ಭೂಮಿ ಮತ್ತು ಹಣದಾನ ನೀಡಿದ್ದನ್ನು ಶಾಸನ ಉಲ್ಲೇಖಿಸುತ್ತದೆ. ಈ ಶಾಸನದಲ್ಲಿ ಸ್ಪಷ್ಟವಾದ ತೇದಿಯ ಉಲ್ಲೇಖವಿಲ್ಲ. ಕೇವಲ ಮೀನದ ಬೃಹಸ್ಪತಿ…

Read More

ಚಾಮರಾಜನಗರ : ತಾಯಿಯಿಂದ ತಪ್ಪಿಸಿಕೊಂಡ ಆನೆ ಮರಿಯೊಂದು ಶಾಲೆಗೆ ಬಂದು ಮಕ್ಕಳೊಂದಿಗೆ ಆಟ ಆಡಿರುವ ಅಪರೂಪದ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಪುರಾಣಿ ಪೋಡಿನ ವಸತಿ ಶಾಲೆಯಲ್ಲಿ ನಡೆದಿದೆ. ಬಿಳಿಗಿರಿರಂಗನಬೆಟ್ಟ ಅರಣ್ಯ ಪ್ರದೇಶದಲ್ಲಿ ತಾಯಿಯಿಂದ ಬೇರ್ಪಟ್ಟ ಗಂಡು ಮರಿಯಾನೆ ಪುರಾಣಿ ಪೋಡಿನ ವಸತಿ ಶಾಲೆಗೆ ಬಂದಿದೆ. ಆನೆ ಕಂಡದ್ದೇ ತಡ, ಖುಷಿಗೊಂಡ ಮಕ್ಕಳು ಆನೆ ಮರಿಯೊಂದಿಗೆ ಆಡಿ ನಲಿದಾಡಿದ್ದಾರೆ. ಬಳಿಕ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರಿಂದ ಯಳಂದೂರು ವಲಯದ ಸಿಬ್ಬಂದಿ ಬಂದು ಗಸ್ತು ತಿರುಗಿದ್ದಾರೆ. ಈ ವೇಳೆ ತಾಯಿ ಆನೆ ಘೀಳಿಡುತ್ತಿದ್ದುದನ್ನು ಗಮನಿಸಿ, ಈರಣ್ಣ ಕಟ್ಟೆ ಪೋಡಿನ ಬಳಿ ಮರಿಯಾನೆ ತಾಯಿಯನ್ನು ಸೇರುವಂತೆ ಮಾಡಿದ್ದಾರೆ.

Read More

ಮಂಗಳೂರು ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರುಗಳ ಚುನಾವಣೆಯನ್ನು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಇದೇ ಸೆ. 09ರ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಮಂಗಳೂರು ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More