ಉಪ್ಪಿನಂಗಡಿ : ಹಿರಿಯ ನಾಗರಿಕರೊಬ್ಬರನ್ನು ಬೈಕ್ ನಲ್ಲಿ ಆಗಮಿಸಿದ ಅಪರಿಚಿತ ಯುವಕನೋರ್ವ ಪರಿಚಿತನಂತೆ ಮಾತನಾಡಿಸಿ, ಕೊರೋನ ಸಂದರ್ಭದಲ್ಲಿ ಪ್ರಧಾನಿ ಮೋದಿಯ ಹಣ ಬೇಕಾದಷ್ಟು ಬಂದಿದೆ. ಅದನ್ನು ನಿಮಗೆ ಸಿಗುವ ಹಾಗೆ ಮಾಡುತ್ತೇನೆ ಎಂದು ನಂಬಿಸಿ ಅದಕ್ಕಾಗಿ ಏಳು ಸಾವಿರ ರೂ. ಪಡೆದು ವಂಚಿಸಿ ಪರಾರಿಯಾದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಪದ್ಮುಂಜ ಸಮೀಪದ ದೇವಪ್ಪ ಗೌಡ (65)ಎಂಬವರು ಉಪ್ಪಿನಂಗಡಿಯಲ್ಲಿ ಅಡಿಕೆ ಮಾರಾಟ ಮಾಡಿ ಹಿಂದಿರುಗುತ್ತಿದ್ದರು. ಈ ವೇಳೆ ಬೈಕ್ನಲ್ಲಿ ಆಗಮಿಸಿದ ಯುವಕನೋರ್ವ, ನಾನು ನಿಮ್ಮ ಮಗಳ ಶಾಲಾ ಸಹಪಾಠಿ ಮೋಹನ್ ಎಂದು ತನ್ನನ್ನು ಪರಿಚಯಿಸಿಕೊಂಡಿದ್ದಲ್ಲದೆ, ತಾನೀಗ ಕೆನರಾ ಬ್ಯಾಂಕ್ನಲ್ಲಿರೋದು. ಕೊರೋನ ಸಂದರ್ಭದಲ್ಲಿ ಬಂದ ಮೋದಿಯವರ ಹಣ ಬ್ಯಾಂಕ್ನಲ್ಲಿ ಹಾಗೆನೇ ಕೊಳೆಯುತ್ತಾ ಇದೆ. ಅದನ್ನು ಯಾರ ಅಕೌಂಟ್ಗೂ ಹಾಕಬಹುದು. ನಿಮ್ಮ ಪಾಸ್ ಪುಸ್ತಕ, ಆಧಾರ್ ಕಾರ್ಡ್ನ ಜೆರಾಕ್ಸ್ ಕಾಪಿ ಕೊಟ್ಟರೆ ಸಾಕು. ಅದಕ್ಕಾಗಿ ನೀವು ನನಗೆ 7 ಸಾವಿರ ರೂ. ನೀಡಿದರೆ ಸಾಕು ಎಂದೆಲ್ಲಾ ಮಾತಿನಲ್ಲಿ ನಂಬಿಸಿದ್ದಾನೆ. ಆತನ ಮಾತನ್ನು ನಂಬಿದ ವೃದ್ಧ ಅಡಿಕೆ…
Author: main-admin
ಉಳ್ಳಾಲ: ಬೈಕ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿದ್ದ ಸಹಸವಾರ ಸಾವನಪ್ಪಿದ್ದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಚೆಂಬುಗುಡ್ಡೆ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಅಳೇಕಲ ನಿವಾಸಿ ಅಬ್ಬಾಸ್(58) ಎಂದು ಗುರುತಿಸಲಾಗಿದೆ. ಅವರು ಶನಿವಾರ ಬೆಳಗ್ಗೆ ಮಗ ನೌಶಾದ್ ಜತೆ ಬೈಕ್ನಲ್ಲಿ ದೇರಳಕಟ್ಟೆಗೆ ತೆರಳಿದ್ದರು. ಈ ಸಂದರ್ಭ ಚೆಂಬುಗುಡ್ಡೆ ಬಳಿ ಕಾರೊಂದು ಬೈಕ್ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ ಬೈಕ್ನಲ್ಲಿದ್ದ ಇಬ್ಬರು ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು, ಈ ಪೈಕಿ ತಂದೆ ಅಬ್ಬಾಸ್ ಅವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡ ನೌಶಾದ್ನನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಸರ್ಕಾರದ ವಿರುದ್ದ ಪೋಸ್ಟ್ ಮಾಡುವುದು ಹೆಚ್ಚಾಗಿದ್ದು, ಅಂತವರ ವಿರುದ್ದ ಪ್ರಕರಣ ದಾಖಲು ಮಾಡಲಾಗುತ್ತಿದೆ.ಅದೇ ರೀತಿ ಕಡೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಎಸ್. ಆನಂದ್ ಅವರ ವಿರುದ್ಧ ವಾಟ್ಸ್ಪ್ ಸ್ಟೇಟಸ್ ಹಾಕಿದ್ದ ಮಹಿಳಾ ಪೊಲೀಸ್ ಪೇದೆಯೊಬ್ಬರನ್ನು ಸೇವೆಯಿಂದ ಅಮಾನತು ಮಾಡಿರುವುದು ಬೆಳಕಿಗೆ ಬಂದಿದೆ. ತನಗೆ ಏನಾದರೂ ಆದರೆ ಅದಕ್ಕೆ ಶಾಸಕ ಆನಂದ್ ಅವರೇ ಹೊಣೆ. ಕಡೂರು ಶಾಸಕರಿಗೆ ನನ್ನ ಧಿಕ್ಕಾರವಿರಲಿ ಎಂದು ಮಹಿಳಾ ಪೊಲೀಸ್ ಪೇದೆ ಲಂತಾ ಅವರು ವಾಟ್ಸಪ್ ಸ್ಟೇಟಸ್ ಹಾಕಿದ್ದರು. ಇದಕ್ಕೆ ಸಂಬAಧಿಸಿದ ಸ್ಕ್ರೀನ್ಶಾಟ್ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಅವರನ್ನು ಅಮಾನತು ಮಾಡಲಾಗಿದೆ.ಈ ಸಂದೇಶವನ್ನು ಗಮನಿಸಿದ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರು ಲತಾ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಚುನಾವಣಾ ಪ್ರಚಾರದ ವೇಳೆ ಹೆಲ್ಮೆಟ್ ಧರಿಸದ ಕಾಂಗ್ರೆಸ್ ಕಾರ್ಯಕರ್ತರಿಗೆ ಲತಾ ಅವರು ದಂಡ ವಿಧಿಸಿದ್ದರು. ಆನಂದ್ ಅವರು ಸ್ಥಳಕ್ಕೆ ಆಗಮಿಸಿ ತಮ್ಮ ಬೆಂಬಲಿಗರಿಗೆ ದಂಡ ವಿಧಿಸಿದ್ದನ್ನು…
ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ನ್ಯಾಯ ಸಿಗಬೇಕೆಂದು ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಈ ಬೆನ್ನಲ್ಲೇ ಇಂದು (ಆ.12) ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಧರ್ಮಸ್ಥಳ ಸಮೀಪ ಪಾಂಗಾಳದ ಸೌಜನ್ಯ ಮನೆ ಹಾಗೂ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಭೇಟಿ ನೀಡಿದ್ದಾರೆ.ಸೌಜನ್ಯ ಪ್ರಕರಣದ ಈವರೆಗಿನ ಹೋರಾಟದ ಬಗ್ಗೆ ಜೊತೆಗೆ , ಮುಂದೆ ಯಾವ ರೀತಿಯಾಗಿ ಹೋರಾಟ ನಡೆಯಲಿದೆ ಎಂಬ ಕುರಿತು ಮಾಹಿತಿ ಪಡೆದಿದ್ದಲ್ಲದೆ ಈ ನ್ಯಾಯದ ಹೋರಾಟಕ್ಕೆ ಪ್ರಮೋದ್ ಮುತಾಲಿಕ್ ಸಾಥ್ ನೀಡಲಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ. ಇಬ್ಬರೂ ಘಟಾನುಘಟಿ ನಾಯಕರ ಮಾತುಕತೆ ಬಳಿಕ ಸೌಜನ್ಯ ಪ್ರಕರಣದ ಹೋರಾಟ ಇನ್ನಷ್ಟು ಕಾವು ಪಡೆದುಕೊಳ್ಳುವ ಲಕ್ಷಣಗಳು ಗೋಚರವಾಗುತ್ತಿದೆ.
ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಆಂಧ್ರಪ್ರದೇಶದ ಅಕ್ಕಿ ಬರಲಿದೆ. ಎಫ್.ಸಿ.ಐ. ನಿಗದಿಪಡಿಸಿದ ದರಕ್ಕೆ ಅಕ್ಕಿ ಪೂರೈಕೆ ಮಾಡಲು ಆಂಧ್ರಪ್ರದೇಶ ಸರ್ಕಾರ ಮುಂದೆ ಬಂದಿದೆ. ಇದರಿಂದಾಗಿ ಅನ್ನ ಭಾಗ್ಯ ಯೋಜನೆಯ ಹೆಚ್ಚುವರಿ ಅಕ್ಕಿ ವಿತರಣೆ ಸಮಸ್ಯೆ ಬಗೆಹರಿಯುವ ಸಾಧ್ಯತೆ ಇದೆ. ಈ ಕುರಿತಾಗಿ ಆಹಾರ ಖಾತೆ ಸಚಿವ ಕೆ.ಹೆಚ್. ಮುನಿಯಪ್ಪ ಅವರೊಂದಿಗೆ ಆಂಧ್ರಪ್ರದೇಶದ ಆಹಾರ ಇಲಾಖೆ ಸಚಿವ ಕಾರುಮುರಿ ವೆಂಕಟನಾಗೇಶ್ವರರಾವ್ ನೇತೃತ್ವದ ನಿಯೋಗ ಚರ್ಚೆ ನಡೆಸಿದೆ. ಬೆಂಗಳೂರಿನಲ್ಲಿ ಉಭಯ ಸಚಿವರು ಭೇಟಿಯಾಗಿ ಮಾತುಕತೆ ನಡೆಸಿದ್ದು, ಎಫ್ಸಿಐ ನಿಗದಿಪಡಿಸಿದ ದರದಲ್ಲಿ ಅಕ್ಕಿ ಪೂರೈಕೆ ಮಾಡಲು ಅವಕಾಶ ನೀಡುವ ಜೊತೆಗೆ ನಿರ್ದಿಷ್ಟ ಪ್ರಮಾಣವನ್ನು ತಿಳಿಸಬೇಕು. ಆದಷ್ಟು ಬೇಗನೆ ಅನುಮತಿ ನೀಡಿದಲ್ಲಿ ಅಕ್ಕಿ ಪೂರೈಕೆ ಮಾಡಲಾಗುವುದು ಎಂದು ನಿಯೋಗ ಹೇಳಿದೆ. ನಿಯೋಗದ ಜತೆ ವಿಸ್ತೃತ ಚರ್ಚೆ ನಡೆಸಿದ ಸಚಿವ ಮುನಿಯಪ್ಪ, ಮಾತುಕತೆಯ ವಿವರಗಳ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚೆ ನಡೆಸಿ ಒಪ್ಪಿಗೆ ಪಡೆದು ನಿಮಗೆ ಮಾಹಿತಿ ನೀಡುವುದಾಗಿ ನಿಯೋಗಕ್ಕೆ ಭರವಸೆ ನೀಡಿದ್ದಾರೆ.
ಬೆಂಗಳೂರು: ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಬಂಧಿಸಿರುವ ಬಗ್ಗೆ ವರದಿಯಾಗಿದೆ. ಹಿಂದುತ್ವ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಗೂಂಡಾಗಿರಿ ನಡೆಸುತ್ತಿದ್ದ, ಇದ್ರೀಸ್ ಪಾಷಾ ಕೊಲೆ ಆರೋಪಿ, ಪುನೀತ್ ಕೆರೆಹಳ್ಳಿ ವಿರುದ್ಧ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಡರಾತ್ರಿಯೇ ಸಿಸಿಬಿ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಕೆರೆಹಳ್ಳಿಯ ಪುನೀತ್,� ಬೆಂಗಳೂರಿನ ಜೆ.ಪಿ.ನಗರ 7ನೇ ಹಂತದಲ್ಲಿ ವಾಸವಿದ್ದ. ರಾಷ್ಟ್ರ ರಕ್ಷಣಾ ಪಡೆ ಹೆಸರಿನಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುತ್ತಿದ್ದ. ಎಲ್ಲ ಕೃತ್ಯಗಳ ಬಗ್ಗೆ ವರದಿ ಸಿದ್ಧಪಡಿಸಿ ವಶಕ್ಕೆ ಪಡೆಯಲಾಗಿದೆ’ ಎಂದು ಮೂಗಳು ತಿಳಿಸಿವೆಅಪರಾಧ ಪ್ರಕರಣಗಳಲ್ಲಿ ಪದೇ ಪದೇ ಭಾಗಿಯಾಗುತ್ತಿರುವುದರಿಂದ ಪುನೀತ್ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ’ ಎಂದು ಸಿಸಿಬಿ ಮೂಲಗಳು ತಿಳಿಸಿವೆ. ಜೂನ್ 28ರಂದು ಸಹಾಯಕ ಪೊಲೀಸ್ ಆಯುಕ್ತರು ಪುನೀತ್ ಕೆರೆಹಳ್ಳಿಗೆ ಜಾರಿ ಮಾಡಿದ್ದ ನೋಟಿಸ್ ನಲ್ಲಿ, ‘ಹಲವು ಪ್ರಕರಣಗಳ ಆರೋಪಿಯಾಗಿರುವ ನೀವು ಸ್ಪಷ್ಟೀಕರಣ ನೀಡದಿದ್ದಲ್ಲಿ ನಿಮ್ಮ ವಿರುದ್ಧ ರೌಡಿಶೀಟರ್ ಪಟ್ಟಿ ತೆರೆಯುತ್ತೇವೆ’ ಎಂದು…
ಉಳ್ಳಾಲ: ಮಂಗಳೂರು ವಿವಿ ಇತಿಹಾಸ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ.ಉದಯ ಬಾರ್ಕೂರು(59) ಅವರು ಶುಕ್ರವಾರ ಸಂಜೆ ನಿಧನರಾದರು.ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಮಂಗಳೂರು ವಿಶ್ವವಿದ್ಯಾಲಯದಲ್ಲಿ ಕಳೆದ 34 ವರ್ಷಗಳಿಂದ(1989)ರಿಂದ ಇತಿಹಾಸ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವ ಅವರು ವಿಭಾಗದ ಅಧ್ಯಕ್ಷರಾಗಿ, ವಿವಿಯ ಸಿಂಡಿಕೇಟ್ ಸದಸ್ಯರಾಗಿ, ಕಲಾ ವಿಭಾಗದ ಡೀನ್ ಆಗಿ ವಿವಿಧ ಜವಬ್ಧಾರಿಗಳನ್ನು ನಿರ್ವಹಿಸಿದ್ದರು. ಮಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಕ್ಷೇಮಪಾಲನಾ ವಿಭಾಗದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.2017 ರಲ್ಲಿ ಮಂಗಳೂರು ವಿವಿಯಿಂದ ಉತ್ತಮ ಪ್ರಾಧ್ಯಾಪಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು. ಇಂಡಿಯನ್ ಹಿಸ್ಟರಿ ಕಾಂಗ್ರೆಸ್, ಸೌತ್ ಇಂಡಿಯನ್ ಕಾಂಗ್ರೆಸ್, ಕರ್ನಾಟಕ ಹಿಸ್ಟರಿ ಕಾಂಗ್ರೆಸ್ ನ ಸದಸ್ಯರಾಗಿದ್ದ ಡಾ.ಉದಯ ಕುಮಾರ್ ಅವರು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸಮ್ಮೇಳನ ಮತ್ತು ವಿಚಾರಸಂಕಿರಣಗಳಲ್ಲಿ ಭಾಗವಹಿಸಿ ಪ್ರಬಂಧಗಳನ್ನು ಮಂಡಿಸಿದ್ದರು. ಇತಿಹಾಸ ತಜ್ಞನಾಗಿ ಗುರುತಿಸಿದ್ದ ಇವರ ಮಾರ್ಗದರ್ಶನದಲ್ಲಿ ಏಳು ವಿದ್ಯಾರ್ಥಿಗಳು ಪಿಎಚ್ಡಿ ಪದವಿ ಪಡೆದುಕೊಂಡಿದ್ದಾರೆ.’ವಸಾಹತುಶಾಹಿ ಇತಿಹಾಸ ಚರಿತ್ರೆಯ ವಾಸ್ತವ :ಟಿಪ್ಪು- ಹೈದರಾಲಿ : ಇತಿಹಾಸ ಕಥನ’ , ‘ಹಿಸ್ಟರಿಯಾಗ್ರಫಿ ಆಫ್ ತುಳು ಕಲ್ಚರ್…
ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1993 ನೇ ಇಸವಿಯಲ್ಲಿ ದಾಖಲಾದ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸುರತ್ಕಲ್ ಠಾಣಾ ವ್ಯಾಫ್ತಿಯಲ್ಲಿ 1993 ನೇ ಇಸವಿಯಲ್ಲಿ ಮನೆಯೊಂದಕ್ಕೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಭಾಗಿಯಾಗಿ ನಂತರ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಹಳೆಯ ಆರೋಪಿ ಮೂಲತಃ ಉಡುಪಿ ಜಿಲ್ಲೆ ನಂದಿಕೂರಿನ ಪ್ರಸ್ತುತ ಕುಳಾಯಿಯಲ್ಲಿ ವಾಸ ಮಾಡುತ್ತಿರುವ ಮುಸ್ತಾಫಾ ಎಂಬಾತನನ್ನು ಪಲಿಮಾರಿನಿಂದ ವಶಕ್ಕೆ ಪಡೆದು ಮುಂದಿನ ಕ್ರಮಕ್ಕಾಗಿ ಸುರತ್ಕಲ್ ಪೊಲೀಸ್ ಠಾಣೆಗೆ ಹಸ್ತಾಂತರಿಲಾಗಿದೆ. ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ಸುದೀಪ್ ಎಂ ವಿ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.
ಮಂಗಳೂರು:ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಪ್ಯಾಸೆಂಜರ್ ರೈಲಿನಿಂದ ₹3.16 ಲಕ್ಷ ಮೌಲ್ಯದ 6.3 ಕೆ.ಜಿ ಅನ್ ಕ್ಲೇಮ್ಡ್ ಗಾಂಜಾವನ್ನು ರೈಲ್ವೇ ರಕ್ಷಣಾ ಪಡೆ (ಆರ್ಪಿಎಫ್) ವಶಪಡಿಸಿಕೊಂಡಿದೆ. ಆರ್ಪಿಎಫ್ ತಂಡವು ಪಾಲಕ್ಕಾಡ್ ರೈಲ್ವೆ ವಿಭಾಗದ ಅಪರಾಧ ತನಿಖಾ ಬ್ಯೂರೋ ಮತ್ತು ಕರ್ನಾಟಕ ಅಬಕಾರಿ ಇಲಾಖೆಯೊಂದಿಗೆ ಸ್ವಾತಂತ್ರ್ಯ ದಿನಾಚರಣೆಯ ಮೊದಲು ರೈಲುಗಳನ್ನು ಪರಿಶೀಲಿಸುತ್ತಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ತಪಾಸಣೆ ಸಂದರ್ಭದಲ್ಲಿ ರೈಲು ನಂ. 16516 ಕಾರವಾರ-ಯಶವಂತಪುರ ಟ್ರೈ-ವೀಕ್ಲಿ ಎಕ್ಸ್ಪ್ರೆಸ್, ಆರ್ಪಿಎಫ್ ಮಂಗಳೂರು ಜಂಕ್ಷನ್ ಇನ್ಸ್ಪೆಕ್ಟರ್ ಮನೋಜ್ ಕುಮಾರ್ ಯಾದವ್, ಕ್ರೈಂ ಬ್ಯೂರೋ ಸರ್ಕಲ್ ಇನ್ಸ್ಪೆಕ್ಟರ್ ಎನ್. ಕೇಶವದಾಸ್ ಮತ್ತು ಅಬಕಾರಿ ಇನ್ಸ್ಪೆಕ್ಟರ್ ಸುನೀಲ್ ಕುಮಾರ್ 11.15 ರ ಸುಮಾರಿಗೆ ಸಾಮಾನ್ಯ ಎರಡನೇ ದರ್ಜೆಯ ಕೋಚ್ನಲ್ಲಿ ಸಾಮಾನುಗಳನ್ನು ಪತ್ತೆ ಮಾಡಿದರು, ಯಾರೂ ಅದರ ಮಾಲೀಕತ್ವವನ್ನು ಹೇಳಲಿಲ್ಲ. ತಂಡವು ಸಾಮಾನುಗಳನ್ನು ವಶಪಡಿಸಿಕೊಂಡಿತು ಮತ್ತು ಅದನ್ನು ತೆರೆದಾಗ ಗಾಂಜಾ ಪತ್ತೆಯಾಗಿದೆ.
ನವದೆಹಲಿ: ಕೇಂದ್ರ ಸರ್ಕಾರದಿಂದ ದೇಶದಲ್ಲಿನ ಗ್ಯಾಂಗ್ ರೇಪ್ ನಂತಹ ಪ್ರಕರಣ ತಡೆಗಟ್ಟೋದಕ್ಕಾಗಿ ಮಹತ್ವದ ಹೆಜ್ಜೆಯನ್ನು ಇರಿಸಲಾಗಿದೆ. ಈ ನಿಟ್ಟಿನಲ್ಲಿ ಲೋಕಸಭೆಯಲ್ಲಿ ತಿದ್ದುಪಡಿ ಮಸೂಧೆಯನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಡಿಸಿದ್ದಾರೆ. ಈ ತಿದ್ದುಪಡಿ ಮಸೂದೆಯಂತೆ ಇನ್ಮುಂದೆ ಗ್ಯಾಂಗ್ ರೇಪ್ ಮಾಡಿದವರಿಗೆ 20 ವರ್ಷ ಶಿಕ್ಷೆ ವಿಧಿಸುವಂತ ಕಾನೂನು ಜಾರಿಯಾಗಲಿದೆ. ಈ ಸಂಬಂಧ ಸಂಸತ್ ಮುಂಗಾರು ಅಧಿವೇಶನದ ಕೊನೆಯ ದಿನದಂದು ಲೋಕಸಭೆಯಲ್ಲಿ ಅಪರಾಧ ಕಾನೂನು ತಿದ್ದುಪಡಿ ಕಾಯ್ದೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಡಿಸಿದರು. ಈ ವೇಳೆ ಮಾತನಾಡಿದ ಅವರು, ನಾನು ಇಂದು ಮಂಡಿಸುತ್ತಿರುವ ಮೂರು ಮಸೂದೆಗಳಲ್ಲಿ ಕ್ರಿಮಿನಲ್ ನ್ಯಾಯ ವ್ಯವಸ್ಥೆಯ ಮೂಲ ಕಾನೂನು ಸೇರಿದೆ. ಮೊದಲನೆಯದು 1860 ರಲ್ಲಿ ರೂಪುಗೊಂಡ ಭಾರತೀಯ ದಂಡ ಸಂಹಿತೆ, ಎರಡನೆಯದು 1898 ರಲ್ಲಿ ರೂಪುಗೊಂಡ ಕ್ರಿಮಿನಲ್ ಪ್ರೊಸೀಜರ್ ಕೋಡ್ ಮತ್ತು ಮೂರನೆಯದು 1872 ರಲ್ಲಿ ರೂಪುಗೊಂಡ ಭಾರತೀಯ ಸಾಕ್ಷ್ಯ ಕಾಯ್ದೆ. ಬ್ರಿಟಿಷರು ತಂದ ಈ ಕಾನೂನುಗಳನ್ನು ನಾವು ಇಂದು ಕೊನೆಗೊಳಿಸುತ್ತೇವೆ ಎಂದರು. ಅಪರಾಧ…










