ವಿಟ್ಲ : ಪದವಿಪೂರ್ವ ಕಾಲೇಜಿನ ನಿವೃತ್ತ ಅಧ್ಯಾಪಕರಾದ ಚನಿಲ ಸುಬ್ರಹ್ಮಣ್ಯ ಭಟ್ (63) ರವರು ನಿಧನರಾದರು. ಸುಬ್ರಹ್ಮಣ್ಯ ಭಟ್ ರವರು ಲೋ ಬಿ.ಪಿ. ಸಮಸ್ಯೆಯಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೇ ಇಂದು ಹೃದಯಾಘಾತದಿಂದಾಗಿ ನಿಧನರಾಗಿದ್ದಾರೆ. ಸುಬ್ರಹ್ಮಣ್ಯ ಭಟ್ ರವರು ಹವ್ಯಾಸಿ ಯಕ್ಷಗಾನ ಕಲಾವಿದರೂ ಆಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
Author: main-admin
ಮೊರಾದಾಬಾದ್: ಉತ್ತರ ಪ್ರದೇಶದ ಸಂಭಾಲ್ನ ಬಿಜೆಪಿ ನಾಯಕ ಅನುಜ್ ಚೌಧರಿ ಅವರನ್ನು ಮೊರಾದಾಬಾದ್ನಲ್ಲಿರುವ ಅವರ ನಿವಾಸದ ಹೊರಗೆ ಗುರುವಾರ ಸಂಜೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರ ಪ್ರದೇಶದ ಸಂಭಾಲ್ನ ಬಿಜೆಪಿ ನಾಯಕ ಅನುಜ್ ಚೌಧರಿ ಅವರು ಗುರುವಾರ ಸಂಜೆ ತನ್ನ ಗೆಳೆಯನ ಜೊತೆ ತನ್ನ ಅಪಾರ್ಟ್ಮೆಂಟ್ನ ಹೊರಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಮೂವರು ಅಪರಿಚಿತರು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಗಂಭೀರ ಗಾಯಗೊಂಡ ಚೌಧರಿ ಅವರನ್ನು ಕೂಡಲೇ ಮೊರಾದಾಬಾದ್ನಲ್ಲಿರುವ ಬ್ರೈಟ್ಸ್ಟಾರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುವ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸ್ಥಳೀಯ ರಾಜಕೀಯದಲ್ಲಿ ಸಕ್ರಿಯವಾಗಿ ಭಾಗಿಯಾಗಿರುವ ಚೌಧರಿ ಅವರು ಸಂಭಾಲ್ನ ಅಸ್ಮೋಲಿ ಬ್ಲಾಕ್ನಿಂದ ಬ್ಲಾಕ್ ಮುಖ್ಯಸ್ಥರ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು ಆದರೆ ಅದರಲ್ಲಿ ಯಶಸ್ವಿಯಾಗಲಿಲ್ಲ ಎನ್ನಲಾಗಿದೆ. ಚೌಧರಿ ಮೇಲೆ ದಾಳಿ ನಡೆಸುವ ದೃಶ್ಯಾವಳಿಗಳು ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಚೌಧರಿ ಕುಟುಂಬ ನೀಡಿದ ದೂರಿನ ಮೇಲೆ ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ನವದೆಹಲಿ: ಟಾಟಾ ಸಮೂಹದ ಒಡೆತನದಲ್ಲಿರುವ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯು ನೂತನ ಲೋಗೊವನ್ನು ಗುರುವಾರ ಅನಾವರಣಗೊಳಿಸಲಾಯಿತು. ಕೇಂದ್ರ ಸರ್ಕಾರದ ಅಧೀನದಲ್ಲಿದ್ದ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯನ್ನು ಟಾಟಾ ಸನ್ಸ್ ಸ್ವಾಧೀನಪಡಿಸಿಕೊಂಡ ಒಂದೂವರೆ ವರ್ಷಗಳ ಬಳಿಕ ಸಂಸ್ಥೆಗೆ ಹೊಸ ಬ್ರ್ಯಾಂಡ್ ಅನ್ನು ಪರಿಚಯಿಸಲಾಗಿದೆ. ಹೊಸ ಲೋಗೋ ಮತ್ತು ಲಿವರಿ ಬಣ್ಣಗಳನ್ನು ಗುರುವಾರ ಬಹಿರಂಗಪಡಿಸಲಾಗಿದ್ದು, ಲೋಗೋದ ಭಾಗವಾಗಿ, ಏರ್ ಇಂಡಿಯಾ ನೇರಳೆ ಬಣ್ಣದ ಡ್ಯಾಶ್ನೊಂದಿಗೆ ಕೆಂಪು ಮತ್ತು ಬಿಳಿ ಬಣ್ಣವನ್ನು ಉಳಿಸಿಕೊಂಡಿದೆ. ಹೊಸ ಲೋಗೋವನ್ನು ‘ದಿ ವಿಸ್ಟಾ’ ಎಂದು ಕರೆಯಲಾಗುವುದು ಎಂದು ಸಂಸ್ಥೆ ಹೇಳಿಕೊಂಡಿದೆ. ಕಾರ್ಯಕ್ರಮದ ಭಾಗವಾಗಿ ಏರ್ಲೈನ್ ತನ್ನ ಹೊಸ ಟೈಲ್ ವಿನ್ಯಾಸ ಮತ್ತು ಥೀಮ್ ಸಾಂಗ್ ಅನ್ನು ಕೂಡ ಬಿಡುಗಡೆ ಮಾಡಿದೆ. ಲಾಂಛನವು ಮಿತಿಯಿಲ್ಲದ ಸಾಧ್ಯತೆಗಳು ಮತ್ತು ಆತ್ಮವಿಶ್ವಾಸವನ್ನು ಸೂಚಿಸುತ್ತದೆ ಎಂದು ಟಾಟಾ ಸನ್ಸ್ ಅಧ್ಯಕ್ಷ ಚಂದ್ರಶೇಖರನ್ ಹೇಳಿದ್ದಾರೆ. ಜನವರಿ 27, 2022 ರಂದು, ಟಾಟಾ ಸನ್ಸ್ ತನ್ನ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾದ ಟ್ಯಾಲೇಸ್ ಪ್ರೈವೇಟ್ ಲಿಮಿಟೆಡ್ ಮೂಲಕ ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಏರ್…
ಮಂಗಳೂರು: ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿಯನ್ನು ಲಾಡ್ಜ್ ಗಳಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಲ್ಲದೆ, ಆಕೆಯ ಖಾಸಗಿ ಫೋಟೋವನ್ನು ವೈರಲ್ ಮಾಡಿ ಹಣಕ್ಕೆ ಬೇಡಿಕೆಯಿಟ್ಟಿದ್ದ ಆರೋಪಿಯನ್ನು ಮಂಗಳೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ರಾಯಚೂರು ಮೂಲದ ಯಮನೂರ ಬಂಧಿತ ಆರೋಪಿ. ಸಂತ್ರಸ್ತ ಯುವತಿಗೆ ಯಮನೂರ ಇನ್ ಸ್ಟಾಗ್ರಾಂ ಮುಖಾಂತರ ಪರಿಚಯವಾಗಿದ್ದಾನೆ. ಆತ ತಾನು ವಾಮಂಜೂರು ಸ್ಟೇಷನ್ ನಲ್ಲಿ ಪಿಎಸ್ಐ ಎಂದು ಆಕೆಯನ್ನು ನಂಬಿಸಿದ್ದಾನೆ. ಬಳಿಕ ಯುವತಿಯ ಮನೆಯವರಿಗೆ ಕೆಲಸ ಕೊಡಿಸುವುದಾಗಿ ಅವರ ದಾಖಲಾತಿಗಳನ್ನು ಪಡೆದುಕೊಂಡಿದ್ದಾನೆ. 2023 ಮೇಯಲ್ಲಿ ಆಕೆಯನ್ನು ಕದ್ರಿ ದೇವಸ್ಥಾನದಲ್ಲಿ ಭೇಟಿ ಮಾಡಿದ್ದಾನೆ. ಬಳಿಕ ಅದೇ ವಾರ ತಣ್ಣೀರುಬಾವಿ ಬೀಚ್ ಗೆ ಕರೆದೊಯ್ದು ಅಲ್ಲಿ ಆಕೆಯೊಂದಿಗೆ ಫೋಟೋ ತೆಗೆದಿದ್ದಾನೆ. ಬಳಿಕ ಆ ಫೋಟೋವನ್ನು ವೈರಲ್ ಮಾಡುವುದಾಗಿ ಹೆದರಿಸಿ ಸಂತ್ರಸ್ತ ಯುವತಿಯನ್ನು ಬೆಂಗಳೂರಿಗೆ ಕರೆಯಿಸಿದ್ದಾನೆ. ಅಲ್ಲಿ ರಾತ್ರಿ ನೆಲಮಂಗಲದ ಲಾಡ್ಜ್ ಗೆ ಕರೆದೊಯ್ದು ಆಕೆಯ ಇಚ್ಛೆಗೆ ವಿರುದ್ಧವಾಗಿ ಅತ್ಯಾಚಾರ ಮಾಡಿದ್ದಾನೆ. ಬಳಿಕ ಮುಲ್ಕಿಯ ಕಿನ್ನಿಗೋಳಿಯ ಲಾಡ್ಜ್ ಗೆ ಕರೆದುಕೊಂಡು ಹೋಗಿ ಅಲ್ಲಿ ಅತ್ಯಾಚಾರ ಮಾಡಿದ್ದಾನೆ.…
ಉಡುಪಿ : ಉಡುಪಿಯ ಕಾಲೇಜು ಒಂದರಲ್ಲಿ ಹಿಂದೂ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಂದು ಸಿಐಡಿ ಎಡಿಜಿಪಿ ಮನೀಶ್ ಕರ್ಬಿಕರ್ ಅವರು ಭೇಟಿ ನೀಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ತನಿಖೆ ಆದ ಬಳಿಕ ಕೋರ್ಟಿಗೆ ವರದಿ ಸಲ್ಲಿಕೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು. ಉಡುಪಿಯಲ್ಲಿ ಸಿಐಡಿ ಎಡಿಜಿಪಿ ಮನಿಶ್ ಕರ್ಬಿಕರ್ ಈ ಕುರಿತು ಹೇಳಿಕೆ ಒಂದನ್ನು ನೀಡಿದ್ದಾರೆ.ಉಡುಪಿ ಪೊಲೀಸರು ನಡೆಸಿದ ತನಿಖಾ ವರದಿ ಪಡೆದುಕೊಂಡಿದ್ದೇನೆ. ಸಿಐಡಿ ಅಧಿಕಾರಿಗಳ ಜೊತೆ ಈ ಪ್ರಕರಣದ ಕುರಿತು ಚರ್ಚಿಸಿದ್ದೇನೆ ಮುಂದಿನ ತನಿಕ ಪ್ರಕ್ರಿಯೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ. ತನಿಖಾಧಿಕಾರಿಯಾಗಿ ಸಿಐಡಿ ಡಿವೈಎಸ್ಪಿ ಅಂಜುಮಾಲಾ ನೇಮಕಗೊಂಡಿದ್ದಾರೆ ಎಂದರು. ಮೇಲ್ವಿಚಾರಣೆಯನ್ನು ಸಿಐಡಿ ಎಸ್ ಪಿ ರಾಘವೇಂದ್ರ ಹೆಗಡೆ ನಡೆಸುತ್ತಾರೆ.ವಿಧಿವಿಜ್ಞಾನ ಪ್ರಯೋಗಾಲಯದ ವರದಿ ತನಿಖಾಧಿಕಾರಿ ಕೈ ಸೇರಲಿದೆ. ಕೇಸ್ ತನಿಖೆಯಾದ ಬಳಿಕ ಕೋರ್ಟಿಗೆ ವರದಿ ಸಲ್ಲಿಕೆ ಮಾಡುತ್ತೇವೆ ಎಂದು ಉಡುಪಿಯಲ್ಲಿ ಸಿಐಡಿ ಎಡಿಜಿಪಿ ಮನೀಶ್ ಹೇಳಿಕೆ ನೀಡಿದ್ದಾರೆ.
ಕಾಸರಗೋಡು: ಕೂಪಪುನ್ನ ಸ್ವಸ್ತಿ ಕ್ಲಬ್ ಶಿಂಗಾರಿಮೇಳ ಕಲಾವಿದೆಯಾಗಿದ್ದ ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡು ಜಿಲ್ಲೆಯಲ್ಲಿ ನಡೆದಿದೆ. ಕಾಸರಗೋಡು ಜಿಲ್ಲೆಯ ಮೈಲಟ್ಟಿ ದೇವನಪೊಡಿಚಾಪರ ಏಕಲ್ ನ ನೀತುಕೃಷ್ಣ (21) ಮೃತರು. ನೀತುಕೃಷ್ಣ ಅವರ ಮದುವೆ ನಿಶ್ಚಯವಾಗಿತ್ತು.ಟೈಲರ್ ಆಗಿರುವ ತಂದೆ ಕೆ. ಕೃಷ್ಣನ್ ಕೆಲಸದ ನಿಮಿತ್ತ ಕಾಸರಗೋಡ್ ಗೆ ಹಾಗೂ ತಾಯಿ ಕೆ.ಟಿ.ಶ್ರೀಲತಾ ಕಾಞಂಗಾಡ್ ಗೆ ತೆರಳಿದ್ದರು. ಈ ವೇಳೆ ನೀತುಕೃಷ್ಣ ನೇಣು ಬಿಗಿದುಕೊಂಡಿದ್ದಾಳೆ. ಕೂಪಪುನ್ನ ಸ್ವಸ್ತಿ ಕ್ಲಬ್ ಶಿಂಗಾರಿಮೇಳ ಕಲಾವಿದೆಯಾಗಿದ್ದ ಇವರು ಡಿವೈಎಫ್ಐ ಕೂಪಪುನ್ನ ಪ್ರಾಂತ ಕಾರ್ಯಕಾರಿ ಸಮಿತಿ ಸದಸ್ಯೆಯಾಗಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಸ್ನೇಹಿತೆಗೆ ಸಂದೇಶ ಕಳುಹಿಸಿ ಈಕೆ ನೇಣು ಬಿಗಿದುಕೊಂಡಿದ್ದಾಳೆ. ನಂತರ ಸ್ನೇಹಿತೆ ಕಳುಹಿಸಿದ ಮೆಸೇಜ್ನ್ನು ನೀತುಕೃಷ್ಣ ಸ್ವೀಕರಿಸದ ಕಾರಣ ಅನುಮಾನಗೊಂಡು ತನ್ನ ಸಂಬಂಧಿಕರಿಗೆ ಮಾಹಿತಿ ತಿಳಿಸಿದಳು. ಆದರೆ ಅಲ್ಲಿಗೆ ತಲುಪಿದಾಗ ನೀತು ಶವವಾಗಿ ಪತ್ತೆಯಾಗಿದ್ದಳು. ನೀತುಕೃಷ್ಣ ಪದವಿ ಮುಗಿಸಿ ಬಿ.ಎಡ್ ಸೇರಲು ತಯಾರಿ ನಡೆಸುತ್ತಿದ್ದರು. ಬೇಕಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು: ಇತ್ತೀಚೆಗೆ ಅಂಗನವಾಡಿಗೆ ಕೊಳೆತ ಮೊಟ್ಟೆಗಳು ಪೂರೈಕೆಯಾಗುತ್ತಿರವ ಬಗ್ಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಂಗನವಾಡಿಗಳಿಗೆ ಮೊಟ್ಟೆ ಪೂರೈಕೆ ಮಾಡುವ ಗುತ್ತಿಗೆದಾರನನ್ನು ಬ್ಲಾಕ್ ಲಿಸ್ಟ್ ಗೆ ಹಾಕುತ್ತೇನೆಂದು ಗುಡುಗಿದ್ದರು. ಆದರೆ ಇನ್ನೂ ಈ ಸಮಸ್ಯೆ ಪರಿಹಾರವಾದಂತಿಲ್ಲ. ಇದೀಗ ಮಂಗಳೂರಿನ ಹಲವೆಡೆ ಮತ್ತೆ ಕೊಳೆತ ಮೊಟ್ಟೆ ಪೂರೈಕೆ ಆಗುತ್ತಿರುವುದು ಕಂಡು ಬಂದಿದೆ. ಅಂಗನವಾಡಿಯಿಂದ ನೀಡಿರುವ ಮೊಟ್ಟೆ ಸೇವನೆ ಮಾಡಿದವರು ಅಸ್ವಸ್ಥರಾಗಿದ್ದಾರೆ. ಕಾಟಿಪಳ್ಳದ ಆಸುಪಾಸಿನಲ್ಲಿ ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆಯಾಗಿದೆ. ಆಕಾಶಭವನದಲ್ಲಿ ಗರ್ಭಿಣಿ ಮಹಿಳೆ, ಮಗು ಮೊಟ್ಟೆ ತಿಂದು ಅಸ್ವಸ್ಥರಾಗಿದ್ದಾರೆ. ಕಳೆದ ತಿಂಗಳು ಮಂಗಳೂರಿನ ಹಲವೆಡೆ ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆಯಾಗಿದೆ. ಈ ಬಾರಿಯೂ ಕೆಲವು ಕಡೆಗಳಿಗೆ ಕೊಳೆತ ಮೊಟ್ಟೆ ಪೂರೈಕೆ ಆಗಿರುವ ಮಾಹಿತಿ ಲಭ್ಯವಾಗಿದೆ. ಮತ್ತೆ ಅಂಗನವಾಡಿಗಳಿಗೆ ಗುತ್ತಿಗೆದಾರರು ಕೊಳೆತ ಮೊಟ್ಟೆ ಪೂರೈಸಿರುವ ಬಗ್ಗೆ ಆಕ್ರೋಶ ಕೇಳಿ ಬರುತ್ತಿದೆ.
ಕಿನ್ನಿಗೋಳಿ: ಟಿಪ್ಪರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಆರು ಮಂದಿಯಲ್ಲಿ ಒರ್ವರು ಮೃತ ಪಟ್ಟ ಘಟನೆ ಕಿನ್ನಿಗೋಳಿ ಸಮೀಪದ ಮೂರುಕಾವೇರಿಯಲ್ಲಿ ನಡೆದಿದೆ. ಮೃತ ಪಟ್ಟವರನ್ನು ಬೆಳುವಾಯಿ ನಿವಾಸಿ ರಾಮಣ್ಣ (49) ಎಂದು ಗುರುತಿಸಲಾಗಿದೆ. ಐಕಳ ಕಡೆಯಿಂದ ಮೂಲ್ಕಿ ಕಡೆ ಸಂಚರಿಸುತ್ತಿದ್ದ ಟಿಪ್ಪರ್ ಗೆ ಮೂಲ್ಕಿಯಿಂದ ಬೆಳುವಾಯಿ ಕಡೆಗೆ ಸಂಚರಿಸುತ್ತಿದ್ದ ಕಾರು ಮೂರುಕಾವೇರಿ ಸಮೀಪದಲ್ಲಿ ಟಿಪ್ಪರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಟಿಪ್ಪರಿಗೂ ಹಾನಿಯಾಗಿದೆ. ಕಾರು ಸಂಚರಿಸುವ ಸಂದರ್ಭ ರಸ್ತೆಯ ಅಂಚಿನಿಂದ ಕೆಳಗೆ ಇಳಿದಿದ್ದು, ಅಂಚಿನಿಂದ ಮೇಲೆ ಬರುವ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ, ಮುಂಭಾಗದಿಂದ ಬರುತ್ತಿದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಕಾರು ಸಂಪೂರ್ಣವಾಗಿ ಬಲ ಬದಿಗೆ ಸರಿದಿದ್ದು, ಅಪಘಾತ ತಪ್ಪಿಸಲು ಟಿಪ್ಪರ್ ಎಡ ಬಾಗಕ್ಕೆ ಸಂಚರಿಸಿದರೂ ಅಪಘಾತ ತಡೆಯಲು ಸಾದ್ಯವಾಗಿಲ್ಲ. ಮೃತ ರಾಮಣ್ಣ ಮತ್ತು ಐವರು ಮೂಲ್ಕಿ ಕಾರ್ನಾಡಿನಲ್ಲಿ ಹಳೆಯ ಮನೆಯನ್ನು ಕೆಡವುವ ಕೆಲಸವನ್ನು ಮಾಡಿ ಸಂಜೆ ತಮ್ಮ ಮನೆ ಬೆಳುವಾಯಿ…
ಪುತ್ತೂರು; ತೆಂಗಿನಕಾಯಿ ತೆಗೆಯೋ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಮರದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಸವಣೂರಿನಲ್ಲಿ ನಡೆದಿದೆ.ಸವಣೂರು ಸಮೀಪದ ಪುಣ್ಚಪ್ಪಾಡಿ ಗ್ರಾಮದ ಸುಚಿತ್ರ (30) ಮೃತ ಮಹಿಳೆ. ಸುಚಿತ್ರ ತೆಂಗಿನ ಮರ ಹತ್ತಿ ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಖ್ಯಾತಿ ಪಡೆದಿದ್ದರು.ಹಲವಾರು ಸಂಘ ಸಂಸ್ಥೆಗಳಿಂದ ಪ್ರಶಂಸೆಗೆ ಪಾತ್ರರಾಗಿದ್ದರು. ಮೃತರುಪತಿ ಪ್ರಮೋದ್ ಬೊಳ್ಳಾಜೆ್ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಬೆಂಗಳೂರು: ಇತ್ತೀಚೆಗೆ ಥಾಯ್ಲೆಂಡ್ ನಲ್ಲಿ ಹೃದಯ ಸ್ತಂಭನದಿಂದ ಕೊನೆಯುಸಿರೆಳೆದ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಅಂತ್ಯಕ್ರಿಯೆ ಬುಧವಾರ (ಆಗಸ್ಟ್ 09) ಮಧ್ಯಾಹ್ನ ಶ್ರೀರಾಂಪುರದ ಹರಿಶ್ಚಂದ್ರ ಘಾಟ್ ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪತಿ, ನಟ ವಿಜಯ್ ರಾಘವೇಂದ್ರ, ಮೈದುನ ಶ್ರೀಮುರಳಿ, ಸ್ಪಂದನಾ ಕುಟುಂಬ ಸದಸ್ಯರು ಹಾಜರಿದ್ದರು. ಮಾಜಿ ಪೊಲೀಸ್ ಅಧಿಕಾರಿ ಬಿಕೆ ಶಿವರಾಂ ಅವರ ಮಲ್ಲೇಶ್ವರದ ನಿವಾಸದಿಂದ ಹರಿಶ್ಚಂದ್ರ ಘಾಟ್ ವರೆಗೆ ಸ್ಪಂದನಾ ಪಾರ್ಥೀವ ಶರೀರದ ಅಂತಿಮ ಯಾತ್ರೆ ಸಾಗಿತು. ಹರಿಶ್ಚಂದ್ರ ಘಾಟ್ ನಲ್ಲಿ ಈಡಿಗ ಸಂಪ್ರದಾಯದಂತೆ ಸ್ಪಂದನಾ ಅಂತ್ಯಕ್ರಿಯೆ ನೆರವೇರಿಸಲಾಯಿತು. ಸ್ಪಂದನಾ ತಂದೆ ಬಿಕೆ ಶಿವರಾಮ್ ಅವರ ಮಲ್ಲೇಶ್ವರಂ ನಿವಾಸದಲ್ಲಿ ಬುಧವಾರ ಬೆಳಗ್ಗೆಯಿಂದಲೇ ಸ್ಪಂದನಾ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ 2-30ರವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಈ ಸಂದರ್ಭದಲ್ಲಿ ಕುಟುಂಬಸ್ಥರು ಹಾಗೂ ಸಂಬಂಧಿಕರು ಅಂತಿಮವಾಗಿ ದರ್ಶನ ಪಡೆದರು. ಅಂತಿಮ ವಿಧಿ ವಿಧಾನಗಳನ್ನು ಪತಿ ಹಾಗು ನಟ ವಿಜಯರಾಘವೇಂದ್ರ ಹಾಗೂ ಪುತ್ರ ಶೌರ್ಯ ನೆರವೇರಿಸಿ…










