ಬೈಂದೂರು: ತಾಲೂಕಿನ ಒತ್ತಿನೆಣೆ ಸಮೀಪ ಕಡವೆ ಭೇಟೆಯಾಡಿ ಮಾಂಸ ಮಾಡಿ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ನಝೀರ್ (20), ಅಬ್ದುಲ್ ಅಲಿ (23) ಬಂಧಿತರು. ಒತ್ತಿನೆಣೆ ಪರಿಸರದಲ್ಲಿ ಕಡವೆ ಬೇಟೆ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಬೈಂದೂರು ಪೊಲೀಸರು ಸ್ಥಳಕ್ಕೆ ದಾಳಿ ಮಾಡಿದ್ದರು. ಆದರೆ ಸ್ಥಳದಲ್ಲಿ ಯಾರೂ ಇರಲಿಲ್ಲ. ಅಲ್ಲಿ ಸಿಕ್ಕಂತಹ ಕುರುಹುಗಳ ಆಧಾರದ ಮೇಲೆ ನಾಕಾಬಂದಿ ಮಾಡಿ,ಸಂಶಯಾಸ್ಪದವಾಗಿ ಸ್ಕೂಟಿಯಲ್ಲಿ ಸಂಚರಿಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದು ತಪಾಸಣೆ ನಡೆಸಿದಾಗ 20 ಕೆ.ಜಿ ಕಡವೆ ಮಾಂಸ ಸಾಗಾಟ ಮಾಡುತ್ತಿದ್ದುದು ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಹೆಚ್ಚಿನ ವಿಚಾರಣೆಗೆ ಆರೋಪಿಗಳನ್ನು ಒಂದು ದಿನ ವಲಯ ಅರಣ್ಯ ಇಲಾಖೆಯ ವಶಕ್ಕೆ ನೀಡಲಾಗಿದೆ. ಬೈಂದೂರು ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: main-admin
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ರಾಜ್ಯಕ್ಕೆ ಆಗಮಿಸಿದ್ದು, ನವಮಂಗಳೂರು ಬಂದರು ಪ್ರಾಧಿಕಾರ ಹಾಗೂ ಎಂಆರ್ ಪಿಎಲ್ ನ ಸುಮಾರು 3,800 ಕೋಟಿ ರೂ.ಗಳ 8 ವಿವಿಧ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ. ಪ್ರಮುಖ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದುದು ಸಂತಸ ತಂದಿದೆ ಎಂದು ಹೇಳಿದ್ದಾರೆ. https://twitter.com/narendramodi/status/1565907023568728064?ref_src=twsrc%5Etfw%7Ctwcamp%5Etweetembed%7Ctwterm%5E1565907023568728064%7Ctwgr%5Ea364f764756f5d89c952399cee1585d76f53bad1%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fkannada%2Fkannadanewsnow-epaper-kanowcom
ಮಂಗಳೂರು: ನಗರ ಹೊರವಲಯದ ಬಂಗ್ರ ಕೂಳೂರಿನಲ್ಲಿ ಶುಕ್ರವಾರ ನಡೆದ ಪ್ರಧಾನಿ ನರೇಂದ್ರ ಮೋದಿ ಅವರ ಸಮಾವೇಶಕ್ಕೆ ಬಂದು ಜನಜಂಗುಳಿಯ ನಡುವೆ ಹೆತ್ತವರ ಕೈ ತಪ್ಪಿ ನಾಪತ್ತೆಯಾಗಿದ್ದ ಬಾಲಕಿಯನ್ನು ಪೊಲೀಸರು ಮರಳಿ ಹೆತ್ತವರ ವಶಕ್ಕೆ ಒಪ್ಪಿಸಿದ ಘಟನೆ ವರದಿಯಾಗಿದೆ. ಕಾವೂರು ಜ್ಯೋತಿನಗರದ ನಿವಾಸಿ ಯಮನಪ್ಪ- ದೇವಕಿ ದಂಪತಿಯ ಪುತ್ರಿ , ನಾಲ್ಕನೇ ತರಗತಿ ವಿದ್ಯಾರ್ಥಿನಿ ಪ್ರಜಾ ಮೇಠಿ (10) ಹೆತ್ತವರೊಂದಿಗೆ ಶುಕ್ರವಾರ ಪ್ರಧಾನಿಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಳು. ಆದರೆ ಜನಜಂಗುಳಿಯ ಮಧ್ಯೆ ಹೆತ್ತವರ ಕೈ ತಪ್ಪಿ ಬೇರ್ಪಟ್ಟಿದ್ದಳು.ಪೊಲೀಸರ ಗಮನಕ್ಕೆ ಬಂದ ನಂತರ ಸಂಚಾರ ಉಪವಿಭಾಗದ ಎಸಿಪಿ ಗೀತಾ ಕುಲಕರ್ಣಿ ನೇತೃತ್ವದಲ್ಲಿ ವಿದ್ಯಾರ್ಥಿನಿ ಹೆತ್ತವರ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು ಹೆತ್ತವರ ವಶಕ್ಕೆ ಒಪ್ಪಿಸಿದ್ದಾರೆ.
ಕಾರ್ಕಳ: ಯುವಕನೋರ್ವನಿಗೆ ಚೂರಿಯಿಂದ ಇರಿದ ಘಟನೆ ಮಾಳದಲ್ಲಿ ನಡೆದಿದೆ. ನಾಗರಾಜ್ ಪೂಜಾರಿ ಮೇಲೆ ಭರತ್ ಎಂಬಾತ ಚೂರಿಯಿಂದ ಇರಿದಿದ್ದಾನೆ. ನಾಗರಾಜ್ ಪೂಜಾರಿ ಹಾಗೂ ಭರತ್ ಆತ್ಮೀಯ ಸ್ನೇಹಿತರಾಗಿದ್ದು ಭರತ್ ನು ಕೈಯಲ್ಲಿ ಚೂರಿಯನ್ನು ಹಿಡಿದುಕೊಂಡಿದ್ದಕ್ಕೆ ನಾಗರಾಜ್ ಪೂಜಾರಿಯು ಚೂರಿಯನ್ನು ಕೈಯಲ್ಲಿ ಹಿಡಿದುಕೊಳ್ಳಬೇಡ ಎಂದು ಹೇಳಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಭರತ್ ನು ಕೈಯಲ್ಲಿದ್ದ ಚೂರಿಯಿಂದ ನಾಗರಾಜ್ ಹೊಟ್ಟೆಯ ಬಲಭಾಗಕ್ಕೆ ಇರಿದಿದ್ದಾನೆ. ಕೂಡಲೇ ಗಾಯಗೊಂಡ ನಾಗರಾಜ್ ನನ್ನು ಕಾರ್ಕಳ ಆಸ್ಪತ್ರೆಗೆ ಕರೆತಂದಿದ್ದು ವೈದ್ಯರು ಚಿಕಿತ್ಸೆ ನೀಡಿ ಮನೆಗೆ ಕಳುಹಿಸಿದ್ದಾರೆ. ಆದರೆ ನಿನ್ನೆ ವಾಪಾಸ್ಸು ನೋವು ಉಂಟಾಗಿದ್ದು ಸಂಜೆ ನಾಗರಾಜ್ ಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ:21 ಫೋಕ್ಸೋ ಪ್ರಕರಣಗಳನ್ನು ಮೈಮೇಲೆ ಎಳೆದುಕೊಂಡಿದ್ದ ಕುಂದಾಪುರದ ಪತ್ರಕರ್ತ ಚಂದ್ರ ಕೆ. ಹೆಮ್ಮಾಡಿಗೆ ಎರಡು ಪೋಕ್ಸೋ ಪ್ರಕರಣಗಳಿಗೆ ಸಂಬಂಧಿಸಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ ಪೋಕ್ಸ್ ತ್ವರಿತ ವಿಶೇಷ ನ್ಯಾಯಾಲಯವು 10 ವರ್ಷ ಜೈಲು ಶಿಕ್ಷೆ ವಿಧಿಸಿ ಇಂದು ತೀರ್ಪು ನೀಡಿದೆ. ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2018 ರ ಜೂನ್ ತಿಂಗಳಲ್ಲಿ 14 ವರ್ಷ ಪ್ರಾಯದ ಬಾಲಕನನ್ನು ಚಂದ್ರ ಕೆ ಹೆಮ್ಮಾಡಿ, ಜಲಪಾತದ ಫೋಟೋ ತೆಗೆಯಲು ಇದೆ ಎಂದು ಹೇಳಿ ಕಾಡಿಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದನು. ಈ ಆರೋಪದಲ್ಲಿ ಚಂದ್ರ ಹೆಮ್ಮಾಡಿಯನ್ನು ಬೈಂದೂರು ಪೊಲೀಸರು 2018ರ ನ.28ರಂದು ಬಂಧಿಸಿದ್ದರು.ಆಗಿನ ಬೈಂದೂರು ಪೊಲೀಸ್ ನಿರೀಕ್ಷಕ ಪರಮೇಶ್ವರ್ ಆರ್. ಗುನಗ ನ್ಯಾಯಾಲಯಕ್ಕೆ ದೋಷರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ಒಟ್ಟು 21 ಸಾಕ್ಷಿಗಳ ಪೈಕಿ 14 ಸಾಕ್ಷಿಗಳ ವಿಚಾರಣೆ ನಡೆಸಲಾಗಿದ್ದು, ನೊಂದ ಬಾಲಕರು ಮತ್ತು ಸಾಂದರ್ಭಿಕ ಸಾಕ್ಷ್ಯಗಳ ಆಧಾರದಲ್ಲಿ ಆರೋಪಿಗೆ ನ್ಯಾಯಾಧೀಶ ಶ್ರೀನಿವಾಸ ಸುವರ್ಣ 10 ವರ್ಷಗಳ ಜೈಲು ಶಿಕ್ಷೆ…
ಮಂಗಳೂರು:ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಿ 3,700 ಕೋಟಿಯ ಯೋಜನೆಗಳಿಗೆ ಚಾಲನೆ ಕೊಟ್ಟು ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಮೋದಿ ಭಾಷದಲ್ಲಿ ಏನೇನಿದೆ?ಇಂದು ಭಾರತದ ಸಮುದ್ರ ಶಕ್ತಿಗೆ ದೊಡ್ಡ ದಿನ.ಆರ್ಥಿಕ ಸುರಕ್ಷತೆಯಲ್ಲಿ ಭಾರತ ದೊಡ್ಡ ಸಾಧನೆ ಮಾಡಿದೆ. ಕೆಲಹೊತ್ತಿನ ಹಿಂದೆ ಐಎನ್ಎಸ್ ವಿಕ್ರಾಂತ್ ಲೋಕಾರ್ಪಣೆ ಮಾಡಿದ್ದೇನೆ. ಮಂಗಳೂರಲ್ಲಿ 3,800 ಕೋಟಿ ಮೌಲ್ಯದ ಯೋಜನೆಗಳಿಗೆ ಚಾಲನೆ ನೀಡಿದೆ. 8 ವರ್ಷಗಳಲ್ಲಿ ಕರ್ನಾಟಕಕ್ಕೆ 70 ಸಾವಿರ ಕೋಟಿಯ ಹೈವೇ ಸಿಕ್ಕಿದೆ. ಮಂಗಳೂರು-ಚೆನ್ನೈ ಎಕ್ಸ್ಪ್ರೇಸ್ ವೇ ಆಗ್ತಿದೆ. ಬೆಂಗಳೂರು-ಮೈಸೂರು ಹೈವೇ ಯೋಜನೆ ಆಗ್ತಿದೆ ಎಂದು ಹೇಳಿದರು. ಮಂಗಳೂರು ಬಂದರು ವಿಸ್ತರಣೆ ಆಗಿದೆ. ಮಂಗಳೂರಿನ ಮೀನುಗಾರರ ಗಳಿಕೆ ಹೆಚ್ಚಿಸಲು ಯೋಜನೆ ತಂದಿದ್ದೇವೆ. ಕರ್ನಾಟಕದ ಜನತೆಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಈ ಯೋಜನೆಗಳಿಂದ ಕರ್ನಾಟಕದಲ್ಲಿ ವ್ಯಾಪಾರ ಹೆಚ್ಚಳವಾಗಲಿದೆ. ಕರ್ನಾಟಕದಲ್ಲಿ ಉದ್ಯೋಗ, ಉದ್ದಿಮೆ ಹೆಚ್ಚಾಗಲಿದೆ ಎಂದು ಹೇಳಿದರು. ಮೇಕ್ ಇನ್ ಇಂಡಿಯಾ ವಿಸ್ತರಣೆ ಅತ್ಯಂತ ಮುಖ್ಯವಾಗಿದೆ.ರೈತರು,ಮೀನುಗಾರರು ಅಂತಾರಾಷ್ಟ್ರೀಯ ಮಟ್ಟಕ್ಕೇರಲು ಈ ಯೋಜನೆಗಳು ಸಹಕಾರಿಯಾಗಲಿದೆ.ಅಭಿವೃದ್ಧಿ ಭಾರತಕ್ಕೆ ಜಗತ್ತಿನೆಲ್ಲೆಡೆ ನಮ್ಮ ವಸ್ತುಗಳು ಮಾರಾಟವಾಗ್ಬೇಕುದೊಡ್ಡ ಯೋಜನೆಗಳಿಗೆ ಮೂಲಭೂತ…
ಮಂಗಳೂರು: ಬ್ರಿಟಿಷರ ದಾಸ್ಯದಿಂದ ದೇಶವನ್ನು ಬಿಡಿಸಿಕೊಳ್ಳಲು ವೀರ ವನಿತೆ ರಾಣಿ ಅಬ್ಬಕ್ಕ, ಕಿತ್ತೂರು ರಾಣಿ ಚೆನ್ನಮ್ಮ ನಮಗೆ ಪ್ರೇರಣೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನಗರದ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆದ ಬಂದರು, ಒಳನಾಡು ಜಲಸಾರಿಗೆಗೆ ಸಂಬಂಧಿಸಿದ 3,800 ಕೋಟಿ ರೂ.ಗಳ ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು ದೇಶದ ಅಭಿವೃದ್ಧಿಯಲ್ಲಿ ಕರ್ನಾಟಕದ ಪಾತ್ರವನ್ನು ಕೊಂಡಾಡಿದರು. ಮಂಗಳೂರು ಬಂದರು 25,000 ಜನರನ್ನು ನಿರ್ವಹಿಸುತ್ತದೆ. ಭಾರತದಲ್ಲಿ ಕ್ರೂಸ್ ಟೂರಿಸಂಗೆ ನವ ಮಂಗಳೂರು ಬಂದರು ಸೂಕ್ತವಾಗಿದೆ. ಇದರ ಬಗ್ಗೆ ಹೆಚ್ಚು ನಿರೀಕ್ಷೆ ಇದೆ. ಕರಾವಳಿಯ ಭರಪೂರ ಲಾಭವನ್ನು ನಾವು ಪಡೆಯಬೇಕಿದೆ ಎಂದರು.ʻಕರ್ನಾಟಕ ಸಂಪದ್ಭರಿತ ರಾಜ್ಯ. ವೀರತ್ವಕ್ಕೆ ಹೆಸರುವಾಸಿ. ಇದು ಮೇಧಾವಿಗಳನ್ನು ಸೃಷ್ಟಿಸಿದ ನಾಡು, ತೀರ್ಥಕ್ಷೇತ್ರದ ಬೀಡು ಸಹ ಹೌದು ’ ಎಂದು ʻವೀರ ರಾಣಿಯರಾದ ಅಬ್ಬಕ್ಕ, ಕಿತ್ತೂರು ಚೆನ್ನಮ್ಮನವರ ಹೋರಾಟ ಸ್ಮರಿಸಿದರು. ಬ್ರಿಟಿಷರ ದಾಸ್ಯದಿಂದ ದೇಶವನ್ನು ಬಿಡಿಸಿಕೊಳ್ಳಲು ಈ ವೀರ ವನಿತೆಯರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಹೋರಾಡಿದರು.…
ಮಂಗಳೂರು: ವಿವಿಧ ಯೋಜನೆಗಳ ಉದ್ಘಾಟನೆ ಹಾಗೂ ಶಿಲಾನ್ಯಾಸಕ್ಕಾಗಿ ಪರಶುರಾಮನ ಕ್ಷೇತ್ರ ತುಳುನಾಡಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಪರಶುರಾಮನ ವಿಗ್ರಹವನ್ನು ಕಾಣಿಕೆಯಾಗಿ ನೀಡಲಾಯಿತು. ಸಂಸದ ನಳಿನ್ಕುಮಾರ್ ಕಟೀಲು, ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ಕುಮಾರ್ ಅವರು ಪರಶುರಾಮನ ವಿಗ್ರಹವನ್ನು ಪ್ರಧಾನಿಯವರಿಗೆ ಹಸ್ತಾಂತರಿಸಿದರು. ಅಲ್ಲದೆ, ಕರಾವಳಿ ಕಂಪನ್ನು ಸೂಸುವ ಮಲ್ಲಿಗೆ ಹಾರವನ್ನು ತೊಡಿಸಿ ಶಾಲು ಹೊದಿಸಿ ಕರಾವಳಿ ಸಂಪ್ರದಾಯದಂತೆ ಪ್ರಧಾನಿಯವರಿಗೆ ಸ್ವಾಗತ ಕೋರಲಾಯಿತು. ಇದಕ್ಕೂ ಮುನ್ನ ಪ್ರಧಾನಿಯವರಿಗೆ ಪೇಟ ತೊಡಿಸಿ ಶಾಲು ಹಾಕಿ ಶ್ರೀ ಕೃಷ್ಣನ ಮೂರ್ತಿಯನ್ನು ಕೇಂದ್ರ ಸಚಿವ ಸರಬಾನಂದ ಸೊನೆವಾಲ ಅವರು ಪ್ರಧಾನಿಯವರಿಗೆ ನೀಡಿದರು.
ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಕುಳೂರು ಗೋಲ್ಡ್ ಫಿಂಚ್ ಸಿಟಿಯಲ್ಲಿಯಲ್ಲಿರುವ ಸಮಾವೇಶದ ವೇದಿಕೆಯತ್ತ ಆಗಮಿಸಿದ್ದಾರೆ. ನರೇಂದ್ರ ಮೋದಿಯವರು ನವಮಂಗಳೂರು ಬಂದರು ಪ್ರಾಧಿಕಾರ ಹಾಗೂ ಎಂಆರ್ ಪಿ ಎಲ್ ಒಳಗೊಂಡಂತೆ 3,800 ಕೋ.ರೂ ಮೊತ್ತದ ವಿವಿಧ ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಮಂಗಳೂರು: ಬೃಹತ್ ರಂಗೋಲಿ ಹಾಗೂ ಬೃಹತ್ ಪೆಂಡಲ್ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಸ್ವಾಗತಕ್ಕೆ ವೇದಿಕೆ ಸಿದ್ಧಗೊಂಡಿದೆ. ಮಂಗಳೂರು ನಗರದ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಇಂದು ಮಧ್ಯಾಹ್ನ ನಡೆಯಲಿರುವ ಕಾರ್ಯಕ್ರಮದಲ್ಲಿ 3,800 ಕೋಟಿ ರೂಪಾಯಿಗಳ ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ನಡೆಯಲಿದೆ. ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಸಕಲ ಸಿದ್ಧತೆಯನ್ನು ಜಿಲ್ಲಾಡಳಿತ ನಡೆಸಿದೆ. ಕಾರ್ಯಕ್ರಮ ನಡೆಯಲಿರುವ ಬೃಹತ್ ವೇದಿಕೆ ಎದುರು ಬೃಹತ್ ಆದ ಹೂವಿನ ರಂಗೋಲಿ ಕೂಡ ರಚಿಸಲಾಗಿದೆ.