Author: main-admin

ಸುಳ್ಯ:ಅನ್ಯ ಕೋಮಿನ ಕಾಲೇಜು ವಿದ್ಯಾರ್ಥಿನಿ ಜೊತೆ ಮಾತನಾಡಿದ ಕಾರಣಕ್ಕೆ ಅದೇ ಕಾಲೇಜಿನ ವಿದ್ಯಾರ್ಥಿಗೆ, ವಿದ್ಯಾರ್ಥಿಗಳ ತಂಡ ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ಸುಳ್ಯದಿಂದ ವರದಿಯಾಗಿದೆ. ಮೊಹಮ್ಮದ್ ಸನೀಫ್(19) ಹಲ್ಲೆಗೊಳಗಾದ ಯುವಕ. ಸನೀಫ್ ಕೇಸ್ ಆಧಾರದಲ್ಲಿ 7 ಜನರ ಮೇಲೆ ಕೇಸ್ ದಾಖಲಾಗಿದೆ ದೀಕ್ಷಿತ್,ಧನುಷ್,ಪ್ರಜ್ವಲ್,ತನುಜ್,ಅಕ್ಷಯ್,ಮೋಕ್ಷಿತ್, ಗೌತಮ್‌ ಮತ್ತು ಇತರರ ಮೇಲೆ‌ ಕೇಸ್ ದಾಖಲಾಗಿದೆ. ಸುಳ್ಯದ ಕೊಡಿಯಾಲಬೈಲು ಕಾಲೇಜಿನಲ್ಲಿ ಸನೀಫ್ ಗೆ ಕಾಲೇಜಿನ ಗ್ರೌಂಡ್ ಗೆ ಮಾತನಾಡಲಿದೆ ಎಂದು ಕರೆದುಕೊಂಡು ಹೋಗಿ ಅದೇ ಕಾಲೇಜಿನ ವಿದ್ಯಾರ್ಥಿಗಳು ಕಾಲಿನಿಂದ ಒದ್ದು, ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ‌ ಎಂದು ಆರೋಪಿಸಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ಉಡುಪಿ: ಬೈಕ್‌ವೊಂದು ಚರಂಡಿಗೆ ಬಿದ್ದು ಸವಾರ ಸಾವನ್ನಪ್ಪಿದ ಘಟನೆ ಉಡುಪಿಯ ಅಂಬಲಪಾಡಿ ಸಮೀಪದ ಸರ್ವಿಸ್ ರಸ್ತೆಯಲ್ಲಿ ನಿನ್ನೆ ಸಂಜೆ ಸಂಭವಿಸಿದೆ. ಕೊಡವೂರಿನ ಲಿಯಾನ್ ವಿಲ್ಸನ್ ಅಮ್ಮನ್ನ ( 19) ಮೃತ ದುರ್ದೈವಿ. ವಿಲ್ಸನ್ ಅಂಬಲಪಾಡಿ ಕಡೆಯಿಂದ ಕಿನ್ನಿಮೂಲ್ಕಿ ಕಡೆಗೆ ರಾಷ್ಟ್ರೀಯ ಹೆದ್ದಾರಿ 66ರ ಸರ್ವಿಸ್ ರಸ್ತೆಯಲ್ಲಿ ಹೋಗುತ್ತಿದ್ದಾಗ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಲಿಯಾನ್‌ನನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ರಾತ್ರಿ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉಡುಪಿ: ಉಡುಪಿ ನಗರದ ಹೃದಯ ಭಾಗದಲ್ಲಿ ಸಾವರ್ಕರ್ ಅವರ ಸರ್ಕಲ್ ನಿರ್ಮಾಣ ಮಾಡುವ ಬಗ್ಗೆ ಇಂದು ನಡೆದ ನಗರಸಭೆ ಅಧಿವೇಶನದಲ್ಲಿ ನಿರ್ಣಯ ಮಾಡಿದ್ದೇವೆ. ಆದರೆ ಅವರ ಪುತ್ಥಳಿ ಬೇಡ ಎಂದು ಶಾಸಕ ರಘುಪತಿ ಭಟ್ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿದ ಶಾಸಕರು, ಸಾವರ್ಕರ್ ಬಗ್ಗೆ ಅತ್ಯಂತ ಗೌರವ ಇದೆ. ಅವರಿದ್ದ ಅಂಡಮಾನ್ ಜೈಲಿಗೂ ಹೋಗಿ ಬಂದಿದ್ದೇವೆ. ಅವರ ಪುತ್ಥಳಿ ನಿರ್ಮಾಣಕ್ಕೆ ಹಿಂದೂ ಸಂಘಟನೆಗಳು ಮನವಿ ಮಾಡಿದ್ದವು. ಅದರೆ ಪುತ್ಥಳಿ ನಿರ್ಮಾಣ ಮಾಡಿದರೆ ಅದಕ್ಕೆ ಕಿಡಿಗೇಡಿಗಳು ಅವಮಾನ‌ ಮಾಡುವ ಸಾಧ್ಯತೆಗಳಿವೆ. ಹಾಗಾಗಿ ನಗರದ ಪ್ರಮುಖ ರಸ್ತೆಯಲ್ಲೇ ಸರ್ಕಲ್ ನಿರ್ಮಾಣ ಮಾಡುತ್ತೇವೆ ಎಂದು ಹೇಳಿದರು. ಪುತ್ಥಳಿ ಬಗ್ಗೆ ಈಗಾಗಲೇ ಚರ್ಚೆ ಮಾಡಿದ್ದೇವೆ. ಈ ಸಂಬಂಧ ಹಿಂದೂ ಸಂಘಟನೆಗಳ ಮುಖಂಡರಿಗೆ ಮನವಿ ಮಾಡಿಕೊಡುತ್ತೇವೆ. ಶೀಘ್ರದಲ್ಲೇ ವೃತ್ತ ನಿರ್ಮಾಣ ಮಾಡಿ ಸಾವರ್ಕರ್ ಹೆಸರನ್ನು ನಾಮಕರಣ ಮಾಡುತ್ತೇವೆ ಎಂದು ಹೇಳಿದ್ದಾರೆ.

Read More

ಮಂಗಳೂರು: ಪ್ರಧಾನಿ ಮೋದಿಯವರು ಸೆ.2ರಂದು ಮಂಗಳೂರಿಗೆ ಭೇಟಿ ನೀಡಲಿದ್ದು, ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅದೇ ದಿನ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮವೂ ಇರುವುದರಿಂದ ಅಂದು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸೆ.2ರಂದು ಸಾರ್ವಜನಿಕ ಗಣೇಶೋತ್ಸವದ ಮೂರನೇ ದಿನವಾದ ಅಂದು ನಗರದ ಹೆಚ್ಚಿನ ಕಡೆ ಸಾರ್ವಜನಿಕ ಗಣೇಶೋತ್ಸವದ ಶೋಭಯಾತ್ರೆ, ಗಣಪತಿ ವಿಸರ್ಜನೆ ಕಾರ್ಯಕ್ರಮ ನಡೆಯಲಿದೆ. ಗಣಪತಿ ವಿಸರ್ಜನೆಯ ಶೋಭಯಾತ್ರೆಯ ಕಾರ್ಯಕ್ರಮದಿಂದ ಕಾನೂನು ಸುವ್ಯವಸ್ಥೆ ಕಾಪಾಡುವುದು ಮತ್ತು ಮಕ್ಕಳ ಸುರಕ್ಷತೆಯನ್ನು ಕಾಪಾಡುವ ದೃಷ್ಟಿಯಿಂದ ಅಂದು ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ.‌ ಆದ್ದರಿಂದ ಸೆ.2ರಂದು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ, ಸ್ನಾತಕೋತ್ತರ ಪದವಿ , ಡಿಪ್ಲೊಮಾ , ಐಟಿಐ ಸೇರಿದಂತೆ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆ ಗಳಿಗೆ ರಜೆಯನ್ನು ಘೋಷಿಸಿ ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ. ಈ ರಜೆ ನೀಡಿರುವ ಅವಧಿಯಲ್ಲಿ ನಿರ್ವಹಿಸಬೇಕಾದ ಪಠ್ಯಗಳನ್ನು ಇತರ…

Read More

ಬೆಂಗಳೂರು: ನೂತನವಾಗಿ ರಾಜ್ಯಸಭಾ ಸದಸ್ಯನಾಗಿ ಅಧಿಕಾರವನ್ನು ಅಲಂಕರಿಸಿರುವ ಡಾ. ವಿರೇಂದ್ರ ಹೆಗ್ಗಡೆಯವರ ಮನವಿ ಮೇರೆಗೆ ಸಪ್ಟೆಂಬರ್ 1ರಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಇವರು ಸೆ.1ರ ಬೆಳಿಗ್ಗೆ 11.30ಕ್ಕೆ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿ ಅಲ್ಲಿಂದ ಎಸ್‌ಡಿಎಂ ಆಫ್‌ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್‌ ಕ್ಯಾಂಪಸ್‌ಗೆ ಬೇಟಿ ನೀಡಲಿದ್ದಾರೆ. ಡಾ. ಹೆಗ್ಗಡೆಯವರ ಕೋರಿಕೆ ಮೇರೆಗೆ ಯೋಗಿಯವರು ರಾಜ್ಯ ಪ್ರವಾಸ ಕೈಗೊಂಡಿದ್ದು ಈ ಸಂದರ್ಭ ಪಕ್ಷದಿಂದ ಯಾವುದೇ ಕಾರ್ಯಕ್ರಮ ಆಯೋಜನೆ ಮಾಡಿಲ್ಲ.

Read More

ಭಟ್ಕಳ: ಮೀನುಗಾರಿಕೆ ತೆರಳಿದ ದೋಣಿಯೊಂದು ಅಲೆಗಳ ಅಬ್ಬರಕ್ಕೆ ಸಿಲುಕಿ ಮುಳುಗಡೆಯಾಗಿರುವ ಘಟನೆ ಜಾಲಿಯಲ್ಲಿ ಸೋಮವಾರ ಸಂಜೆ ನಡೆದಿದೆ. ಘಟನೆಯಲ್ಲಿ ಓರ್ವ ಮೀನುಗಾರ ನಾಪತ್ತೆಯಾಗಿದ್ದು, (Missing) ಇಬ್ಬರು ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ. ದೋಣಿ ಮುಳುಗಡೆಯಾಗಿ ನಾಪತ್ತೆಯಾದ ಮೀನುಗಾರರ ಜಾಲಿ ನಿವಾಸಿ ನಾಗರಾಜ ರಾಮಕೃಷ್ಣ ಮೊಗೇರ ಎಂದು ತಿಳಿದುಬಂದಿದೆ. ರವಿಕ್ಟರ್ ರಾಜ ಹಾಗೂ ಪುರುಷೋತ್ತಮ ಮೊಗೇರ ಎಂಬವರನ್ನು ರಕ್ಷಿಸಲಾಗಿದೆ. ಅವರನ್ನು ಭಟ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಪತ್ತೆಯಾದ ಮೀನುಗಾರನಿಗಾಗಿ ಹುಡುಕುಕಾಟ ಮುಂದುವರಿದಿದೆ.

Read More

ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಗೊಂಬೆ ಸೂತ್ರಧಾರ ಹಾಗೂ ಅರ್ಥಧಾರಿ, ಹಿರಿಯ ಗೊಂಬೆಯಾಟ ಕಲಾವಿದ ಹೆಮ್ಮಾಡಿ ಹೇಮಾಪುರ ನಿವಾಸಿ ನಾರಾಯಣ ಬಿಲ್ಲವ (63) ಅನಾರೋಗ್ಯದಿಂದ ಸೋಮವಾರ ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ನಾರಾಯಣ ಬಿಲ್ಲವ ಅವರು ಕಳೆದ 43 ವರ್ಷದಿಂದ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಖಾಯಂ ಕಲಾವಿದರಾಗಿದ್ದು, ವಿದೇಶದಲ್ಲಿ ನಡೆದ ಗೊಂಬೆಯಾಟ ಪ್ರದರ್ಶನಲ್ಲಿ ಇಂಗ್ಲಿಷ್ ಭಾಷೆಯಲ್ಲಿ ಅರ್ಥ ಹೇಳುತ್ತಿದ್ದರು. ಕನ್ನಡ, ಕೊಂಕಣಿ, ಇಂಗ್ಲೀಷ್, ಹಿಂದಿ ಭಾಷೆಯಲ್ಲಿ ಹಿಡಿತ ಹೊಂದಿದ್ದ ಅವರು ಗೊಂಬೆಯಾಟದ ಸೂತ್ರಧಾರಿ ಹಾಗೂ ಅರ್ಥಧಾರಿಯಾಗಿ ಜನ ಮಾನಸದಲ್ಲಿ ನೆಲೆಯೂರಿದ್ದರು. ಉಪ್ಪಿನಕುದ್ರು ಗೊಂಬೆಯಾಟದ ಸಂಸ್ಥಾಪಕ ಕೊಗ್ಗ ದೇವಣ್ಣ ಕಾಮತ್ ಅವರ ಒಡನಾಡಿಯಾಗಿದ್ದು, ಅವರೊಟ್ಟಿಗೂ ತಿರುಗಾಟ ಮಾಡಿದ್ದ ಅವರು, ಮುಂದೆ ಕೊಗ್ಗ ಕಾಮತ್ ಅವರ ಪುತ್ರ ಭಾಸ್ಕರ ಕೊಗ್ಗ ಕಾಮತ್ ಜೊತೆ ಕಲಾವಿದರಾಗಿ ಮುಂದುವರಿದಿದ್ದರು. ಓದಿದ್ದು ಸ್ವಲ್ಪವಾದರೂ ಇಂಗ್ಲಿಷ್, ಹಿಂದಿ ಭಾಷೆಯ ಮೇಲಿನ ಅವರ ಹಿಡಿತ ನಿಜಕ್ಕೂ ಅದ್ಭುತವಾಗಿತ್ತು. ಕೊಂಕಣಿ ಭಾಷೆ ನಿರರ್ಗಳವಾಗಿ ಹರಿದು ಬರುತ್ತಿತ್ತು. ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದರು.…

Read More

ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್‌ 2 ರಂದು ಆಗಮಿಸುತ್ತಿದ್ದು, ಆದರೆ ಮೋದಿ ಕಾರ್ಯಕ್ರಮದ ಸಮಯ ಬದಲಾವಣೆಯಾಗಿದೆ. ಸೆಪ್ಟೆಂಬರ್ 2ರ ಮಧ್ಯಾಹ್ನ 1 ಗಂಟೆಗೆ ಸುಮಾರಿಗೆ ಮಂಗಳೂರಿಗೆ ಆಗಮಿಸಲಿರುವ ಮೋದಿ, ಮಧ್ಯಾಹ್ನ 3 ಗಂಟೆ ವೇಳೆಗೆ ವಾಪಸಾಗಲಿದ್ದಾರೆ ಎಂದು ತಿಳಿದುಬಂದಿದೆ. ಈ ಮೊದಲು ಸಂಜೆ 4 ಗಂಟೆಗೆ ನಿಗದಿಯಾಗಿದ್ದ ಕಾರ್ಯಕ್ರಮ ಈಗ ಮಧ್ಯಾಹ್ನವೇ ನಡೆಯಲಿದೆ. ಸೆಪ್ಟೆಂಬರ್‌ 2 ರಂದು ಪ್ರಧಾನಿ ಮೋದಿ ಮಂಗಳೂರಿಗೆ ಆಗಮಿಸುವುದು ದೃಢಪಟ್ಟಿದ್ದು, ಆದರೆ, ಮೋದಿ ಕಾರ್ಯಕ್ರಮದ ಸಮಯ ಬದಲಾವಣೆಯಾಗಿದೆ. ಸೆಪ್ಟೆಂಬರ್ 2ರ ಮಧ್ಯಾಹ್ನ 1 ಗಂಟೆಗೆ ಸುಮಾರಿಗೆ ಮಂಗಳೂರಿಗೆ ಮೋದಿ ಆಗಮಿಸುತ್ತಿದ್ದು, ಮಧ್ಯಾಹ್ನ 1.30ರಿಂದ 2.30ರ ವರೆಗೆ ಸಮಾವೇಶದಲ್ಲಿ ಮೋದಿ ‌ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಕೊಚ್ಚಿಯಿಂದ ವಿಶೇಷ ವಿಮಾನದ ಮೂಲಕ ಮಂಗಳೂರು ಏರ್‌ಪೋರ್ಟ್‌ಗೆ ಆಗಮಿಸಲಿರುವ ಮೋದಿ, ಮಂಗಳೂರು ಏರ್‌ಪೋರ್ಟ್‌ನಿಂದ ಹೆಲಿಕಾಪ್ಟರ್ ಮೂಲಕ ಮಂಗಳೂರು ಬಂದರಿನ ಹೆಲಿಪ್ಯಾಡ್‌ನಲ್ಲಿ‌ ಲ್ಯಾಂಡಿಂಗ್ ಆಗಲಿದ್ದಾರೆ ಎನ್ನಲಾಗಿದೆ. ಅಲ್ಲಿಂದ ಸಮಾವೇಶ ನಡೆಯುವ ಸ್ಥಳವಾದ ಕೂಳೂರಿನ ಗೋಲ್ಡ್ ಫಿಂಚ್‌ ಸಿಟಿ ಮೈದಾನಕ್ಕೆ ರಸ್ತೆ ‌ಮೂಲಕ ಪ್ರಧಾನಿ…

Read More

ಮಂಗಳೂರು: ಪ್ರಧಾನಿ ಮೋದಿ ಅವರ ಆಗಮನದ ಹಿನ್ನೆಲೆ ಬಂಗ್ರ ಕೂಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಸೆ.2ರಂದು ನಡೆಯುವ ಕಾರ್ಯಕ್ರಮದ ಹಿನ್ನೆಲೆ ಮುಂಜಾಗರೂಕತೆಯ ಕ್ರಮವಾಗಿ ಬಂಗ್ರ ಕೂಳೂರಿನ ಗುರುದ್ವಾರದಲ್ಲಿ ಟೆಂಟ್ ಹಾಕಿ ವಾಸಿಸುತ್ತಿದ್ದ ಅಲೆಮಾರಿಗಳನ್ನು ಪೊಲೀಸರು ಬೆದರಿಸಿ ತೆರಳುವಂತೆ ಸೂಚಿಸಿದ್ದು ಅಲೆಮಾರಿಗಳನ್ನು ಬೀದಿಪಾಲು ಮಾಡಿರುವ ಬಗ್ಗೆ ಆರೋಪ ಕೇಳಿ ಬಂದಿತ್ತು. ಪೊಲೀಸರು ಬಂಗ್ರಕೂಳೂರು ಪ್ರದೇಶಕ್ಕೆ ತೆರಳಿ ಅಲ್ಲಿ ಟೆಂಟ್ ಹಾಕಿ ಬದುಕು ಸಾಗಿಸುತ್ತಿದ್ದ 9 ಕುಟುಂಬಗಳನ್ನು ತೆರವುಗೊಳಿಸಿದ್ದು ಇದರಿಂದ ಸುಮಾರು 30ಕ್ಕೂ ಅಧಿಕ ಮಂದಿ ಬೀದಿಪಾಲಾಗಿದ್ದಾರೆ ಎಂದು ವರದಿಯಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಭದ್ರತೆ ದೃಷ್ಠಿಯಿಂದ ಕೂಳೂರಿನಲ್ಲಿ ವಾಸವಿದ್ದ ಕುಟುಂಬಕ್ಕೆ ತಾತ್ಕಾಲಿಕ ವ್ಯವಸ್ಥೆ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ. ಭದ್ರತೆ ಮತ್ತು ಪಾರ್ಕಿಂಗ್ ಮತ್ತು ಇತರ ಕಾರ್ಯಕ್ರಮ ಸಂಬಂಧಿತ ಅವಶ್ಯಕತೆಗಳಿಗಾಗಿ ಲಭ್ಯವಿರುವ ಪ್ರತಿಯೊಂದು ಸ್ಥಳವನ್ನು ಬಳಸಿಕೊಳ್ಳಲು ಪೊಲೀಸರು ಅವರನ್ನು ಸ್ಥಳಾಂತರಿಸಲು ಕೇಳಿಕೊಂಡಿದ್ದಾರೆ. ತಾತ್ಕಾಲಿಕ ವಸತಿಗಾಗಿ ಅವರಿಗೆ ಹತ್ತಿರದ ಸ್ಥಳಗಳನ್ನು ಒದಗಿಸಲಾಗುವುದು ಎಂದಿದ್ದಾರೆ.

Read More

ಕಾಸರಗೋಡು: ಸುಮಾರು ಹತ್ತು ಕೋಟಿ ಮೌಲ್ಯದ ತಿಮಿಂಗಿಲದ ವಾಂತಿಯನ್ನು ವಶಕ್ಕೆ ಪಡೆದುಕೊಂಡು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ ಘಟನೆ ಕಾಸರಗೋಡುವಿನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಞಂಗಾಡ್ ಕೊವ್ವಲ್ ಪಳ್ಳಿಯ ನಿಶಾಂತ್ ಕೆ.ವಿ (41), ಕಾಞಂಗಾಡ್ ಮುರಿಯನಾವಿಯ ಸಿದ್ದೀಕ್ ಮಾಡಂಬಿಲ್ಲತ್ (31) , ಕೊಟ್ಟೋಡಿಯ ದಿವಾಕರ (38) ಬಂಧಿತ ಆರೋಪಿಗಳು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವೈಭವ್ ಸಕ್ಸೇನಾರಿಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ಕಾಞಂಗಾಡ್ ಡಿವೈಎಸ್ಪಿ ಪಿ. ಬಾಲಕೃಷ್ಣನ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದು, ಕಾಞಂಗಾಡ್ ಗ್ರೀನ್ ಲ್ಯಾಂಡ್ ಟೂರಿಸ್ಟ್ ಹೋಂ ನಿಂದ ತಿಮಿಂಗಿಲ ವಾಂತಿ ಸಹಿತ ಮೂವರನ್ನು ವಶಪಡಿಸಿಕೊಳ್ಳಲಾಗಿದೆ ಪೊಲೀಸರು ತಿಳಿಸಿದ್ದಾರೆ.

Read More