Author: main-admin

ಬೆಳ್ತಂಗಡಿ: ಧರ್ಮಸ್ಥಳ ಬಸ್ ನಿಲ್ದಾಣದ ಬಳಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಅವಿನಾಶ್ ಧರ್ಮಸ್ಥಳ, ನಂದೀಪ್ ಧರ್ಮಸ್ಥಳ, ಅಕ್ಷತ್ ಉಪ್ಪಿನಂಗಡಿ ಬಂಧಿತರು. ಅಗಸ್ಟ್ 2ರ ರಾತ್ರಿ ಧರ್ಮಸ್ಥಳ ಬಸ್ ನಿಲ್ದಾಣ ಬಳಿ ಘಟನೆ ನಡೆದಿದ್ದು, ರಿಕ್ಷಾ ಚಾಲಕ ಮಹಮ್ಮದ್ ಆಸೀಕ್ ಎಂಬವರ ಮೇಲೆ ಹಲ್ಲೆಯಾಗಿತ್ತು. ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಈ ಕುರಿತು ಐಪಿಸಿ 143, 147, 341,323, 307, 395, 153 (ಎ) 504,506 ಜೊತೆಗೆ 149 IPC ಪ್ರಕರಣ ದಾಖಲಾಗಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಉಜಿರೆ ಕಾಲೇಜಿನ ಬೆಂಗಳೂರು ಮೂಲದ ಹಿಂದೂ ವಿದ್ಯಾರ್ಥಿನಿ ಊರಿಗೆ ತೆರಳಲು ಆಸೀಕ್ ಆಟೋ ಹತ್ತಿ ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ಬಂದಿದ್ದಳು. ಈ ವೇಳೆ ತಡೆದು ನಿಲ್ಲಿಸಿ ಹಲ್ಲೆ ಮಾಡಿ ನೈತಿಕ ಪೊಲೀಸ್ ಗಿರಿ ನಡೆಸಲಾಗಿತ್ತು.

Read More

ಬೆಂಗಳೂರು; ಜೈಲಿನಿಂದ ಹೊರಬಂದ ಕೆಲವೇ ಗಂಟೆಗಳಲ್ಲಿ ಕುಖ್ಯಾತ ರೌಡಿಶೀಟರ್ ಸಿದ್ದಾಪುರ ಮಹೇಶ್​ನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಹೊಸ ರೋಡ್​ ಜಂಕ್ಷನ್​ ಬಳಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿಶೀಟರ್​​​ ವಿಲ್ಸನ್​​ಗಾರ್ಡನ್​​​ ನಾಗ, ಡಬಲ್ ಮೀಟರ್​ ಮೋಹನ್​​, ಸುನೀಲ್​ ಸೇರಿದಂತೆ ಹಲವರ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್​​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ವಿಲ್ಸನ್​​ಗಾರ್ಡನ್​​​ ನಾಗ ಮತ್ತು ಸಿದ್ದಾಪುರ ಮಹೇಶ್ ಮಧ್ಯೆ ಮೊದಲಿನಿಂದಲೂ ದ್ವೇಷವಿತ್ತು. 2020 ರಲ್ಲಿ ಜಯನಗರದಲ್ಲಿ ನಡೆದಿದ್ದ ಮದನ್​ ಕೊಲೆ ಕೇಸ್​ನಲ್ಲಿ ಭಾಗಿಯಾಗಿ ಮಹೇಶ್​ ಜೈಲು ಸೇರಿದ್ದ.ಆತನ ಜೈಲಿನಿಂದ ಹೊರ ಬರಲು ಕಾಯಿತ್ತಿದ್ದ ಗ್ಯಾಂಗ್ ಜೈಲಿನಿಂದ ಬರುವಾಗಲೇ ಕಾರು ಅಡ್ಡಗಟ್ಟಿ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ಕುರಿತು ಪರಪ್ಪನ ಅಗ್ರಹಾರ ಪೊಲೀಸರು ಐಪಿಸಿ ಸೆಕ್ಷನ್​​​ 302, 120ಬಿ, 143, 147, 148, 343, 327, 149ರಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಬೆಂಗಳೂರು: ಪ್ರವೀಣ್ ಸೂದ್ ಅವರು ಸಿಬಿಐಗೆ ನೇಮಕಗೊಂಡ ನಂತ್ರ, ಅವರ ತೆರವಾದ ಸ್ಥಾನಕ್ಕೆ ರಾಜ್ಯ ಸರ್ಕಾರದಿಂದ ಡಾ.ಅಲೋಕ್ ಮೋಹನ್ ( Dr Alok Mohan IPS ) ಅವರನ್ನು ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿತ್ತು. ತಾತ್ಕಾಲಿಕ ನೇಮಕಾತಿಯನ್ನು, ಈಗ ಅಧಿಕೃತಗೊಳಿಸಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ. ಡಾ.ಅಲೋಕ್ ಮೋಹನ್, ಐಪಿಎಸ್ (ಕೆಎನ್: 1987) ಪೊಲೀಸ್ ಮಹಾನಿರ್ದೇಶಕರು ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾನಿರ್ದೇಶಕರು, ಗೃಹರಕ್ಷಕ ದಳದ ಕಮಾಂಡೆಂಟ್ ಜನರಲ್, ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (ಎಸ್ಡಿಆರ್‌ಎಫ್) ಮಹಾನಿರ್ದೇಶಕರು, ಕರ್ನಾಟಕ ರಾಜ್ಯದ ನಾಗರಿಕ ರಕ್ಷಣಾ ನಿರ್ದೇಶಕರನ್ನಾಗಿ ಈಗಾಗಲೇ ನೇಮಿಸಲಾಗಿತ್ತು ಎಂದಿದೆ. ಈಗ ಮಹಾನಿರ್ದೇಶಕರಾಗಿ ಮತ್ತು ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ (ಪೊಲೀಸ್ ಪಡೆಯ ಮುಖ್ಯಸ್ಥ) ಆಗಿ ನೇಮಿಸಲಾಗಿದೆ. ಐಪಿಎಸ್ (ವೇತನ) ನಿಯಮಗಳು, 2016 ರ ವೇತನ ಮ್ಯಾಟ್ರಿಕ್ಸ್ ನಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಅಸ್ತಿತ್ವದಲ್ಲಿರುವ ಖಾಲಿ ಹುದ್ದೆಗಳಲ್ಲಿ ಮುಂದಿನ ಆದೇಶದವರೆಗೆ 25,000…

Read More

ಮಂಗಳೂರು : ಪಕ್ಕದ ಮನೆ ಮಹಿಳೆಯೊಬ್ಬರು ಸ್ನಾನ ಮಾಡುವುದನ್ನು ಮೊಬೈಲ್ ನಲ್ಲಿ ವಿಡಿಯೆ ತೆಗೆಯುತ್ತಿದ್ದ ಯುವಕನೋರ್ವನನ್ನು ಸ್ಥಳೀಯರು ಹಿಡಿದು ಮುಲ್ಕಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಬಂಧಿತನನ್ನು ಪಕ್ಷಿಕೆರೆ ಹೊಸಕಾಡು ನಿವಾಸಿ ಸುಮಂತ್ ಪೂಜಾರಿ (22) ಎಂದು ತಿಳಿದು ಬಂದಿದೆ. ಈತ ಹಿಂದೂ ಸಂಘಟನೆ ಪಕ್ಷಿಕೆರೆ ಘಟಕದ ಸಕ್ರೀಯ ಕಾರ್ಯಕರ್ತ ಎಂದು ತಿಳಿದು ಬಂದಿದೆ. ಘಟನೆ ಕೆಮ್ರಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಕ್ಷಿಕೆರೆ ಹೊಸಕಾಡು ಎಂಬಲ್ಲಿ ಬುಧವಾರ ರಾತ್ರಿ 11 ಗಂಟೆಗೆ ನಡೆದಿದ್ದು ಶುಕ್ರವಾರ ಬೆಳಕಿಗೆ ಬಂದಿದೆ . ಆರೋಪಿ ಸುಮಂತ್ ತನ್ನ ನೆರೆ ಮನೆಯ ಬಚ್ಚಲು ಕೋಣೆಯಲ್ಲಿ ಮಹಿಳೆಯೊಬ್ಬರು ಸ್ನಾನ ಮಾಡುವುದನ್ನು ವೀಡಿಯೊ ಮಾಡುತ್ತಿದ್ದ ಎನ್ನಲಾಗಿದೆ. ಈ ವೇಳೆ ಮೊಬೈಲ್ ಕ್ಯಾಮರಾ ಗಮನಿಸಿದ ಮಹಿಳೆ ಕಿರುಚಾಡಿದ್ದು, ಈ ವೇಳೆ ನೆರೆಮನೆಯವರು ಸುಮಂತ್ ನನ್ನು ಹಿಡಿದು ಧಳಿಸಿದ್ದಾರೆ ಎನ್ನಲಾಗಿದೆ. ಬಳಿಕ ಮುಲ್ಕಿ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಮಹಿಳೆ ಸ್ನಾನ ಮಾಡುವ ವೀಡಿಯೊ ಮಾಡಿದ್ದ ಮೊಬೈಲ್ ಸಹಿತ…

Read More

ಬಂಟ್ವಾಳ; ದೇವಸ್ಥಾನವೊಂದರ ಅರ್ಚಕ ನಾಪತ್ತೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಪೆದಮಲೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾಗಿರುವ ಕೃಷ್ಣ ಕೆ.ಬಿ.ಅವರ ಸಹೋದರ ಕೆ.ವಿ.ಜಗನ್ನಾಥ (43)ಅವರು ನಾಪತ್ತೆಯಾದವರು. ಅವರು ಕಳೆದ ವರ್ಷ ಅಕ್ಟೋಬರ್‌ ತಿಂಗಳ 15ನೇ ತಾರೀಖಿನಂದು ತಮ್ಮ ಸ್ವಂತ ಊರಾದ ಕಾಸರಗೊಡಿನ ಅಡ್ಕತ್ತಬೈಲು ಎಂಬಲ್ಲಿಗೆ ಹೋಗಿ ಬರುತ್ತೇವೆ ಎಂದು ಹೇಳಿ ಹೋಗಿರುತ್ತಾರೆ. ಆದರೆ ಅವರು ಮನೆಗೂ ಹೋಗದೆ ಇದ್ದು ಮನೆಯವರಲ್ಲಿ ವಿಚಾರಿಸಿದಾಗ ಬಂದಿರುವದಿಲ್ಲ ತಿಳಿಸಿದ್ದಾರೆ. ಅವರು ಈ ಹಿಂದೆಯೂ ಮನೆಯಲ್ಲಿ ಹೇಳದೆ ಹೋಗುವ ಅಭ್ಯಾಸದವಾಗಿದ್ದು, ಎಲ್ಲಿಯಾದರೂ ಹೋಗಿ ದೇವರ ಧ್ಯಾನ ಮಾಡುತ್ತಿದ್ದರು.ಹಾಗಾಗಿ ವಾಪಾಸ್ ಬರಬಹುದು ಎಂದು ಕಾದು ಕೊನೆಗೆ ದೂರು ನೀಡಲಾಗಿದೆ. ಅಲ್ಲದೆ ಉತ್ತರಖಾಂಡದ ರುದ್ರ ಪ್ರಯಾಗ ಜಿಲ್ಲೆಯ ಕಾಳಿ ಮಠದ ಅಂಡೆಯ ಮನ್ನಣ್ಣ ಮಾಯಿ ದೇವಸ್ಥಾನದಲ್ಲಿ ಪೂಜೆ ಕೂಡಾ ಮಾಡುತ್ತಿದ್ದರು. ಅವಿವಾಹಿತರಾಗಿರುವ ಅವರು ಬಿಎಸ್‌ಸಿ, ಎಂಬಿಎ ಪಧವೀಧರರಾಗಿದ್ದಾರೆ. ಅವರ ಮೊಬೈಲ್‌ ಸ್ವಿಚ್‌ ಆಫ್‌ ಆಗಿದ್ದು, ಇದುವರೆಗೂ ಅವರು ವಾಪಾಸು ಬಾರದಿರುವ…

Read More

ಮಂಗಳೂರು: ಉಜಿರೆಯಲ್ಲಿ ಧರ್ಮಸ್ಥಳ ಭಕ್ತರ ಪ್ರತಿಭಟನೆಯಲ್ಲಿ ಸೌಜನ್ಯ ಪೋಷಕರ ಮೇಲೆ ಹಲ್ಲೆಗೆ ಯತ್ನಿಸಿದವರ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೌಜನ್ಯ ತಾಯಿ ಕುಸುಮಾವತಿ ಮತ್ತು ಸಹೋದರ ಜಯರಾಂ ದೂರಿನ ಹಿನ್ನೆಲೆ ಎಫ್ಐಆರ್ ದಾಖಲಿಸಲಾಗಿದೆ. ವ್ಯಕ್ತಿಯೊಬ್ಬ ತಡೆದು ನಿಲ್ಲಿಸಿ ಮೈಗೆ ಕೈ ಹಾಕಿ ಚೂಡಿದಾರದ ಶಾಲು ಎಳೆದು ಮಾನಕ್ಕೆ ಕುಂದುಂಟು ಮಾಡಿದ ಬಗ್ಗೆ ಪ್ರಕರಣ ದಾಖಲು ಮಾಡಿದ್ದಾರೆ. ಅಲ್ಲದೇ ಮಗ ಜಯರಾಮನಿಗೂ ಹಲ್ಲೆ ಮಾಡಿದ ಹಿನ್ನೆಲೆ ಐಪಿಸಿ 1860, 341, 354, 323, 34 ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಲಾಗಿದೆ. ಇನ್ನು ಇಂದು ಉಜಿರೆಯಲ್ಲಿ ನಡೆದಿದ್ದ ಧರ್ಮಸ್ಥಳ ಭಕ್ತರ ಸಮಾವೇಶ ನಡೆದಿತ್ತು. ಇತ್ತ ಧರ್ಮಸ್ಥಳ ಅವಹೇಳನ ಖಂಡಿಸಿ‌ ನಡೆದಿದ್ದ ಪ್ರತಿಭಟನೆ, ಸಮಾವೇಶಕ್ಕೆ ಸೌಜನ್ಯ ತಾಯಿ ಹಾಗೂ ಕುಟುಂಬಸ್ಥರು ಆಗಮಿಸಿದ್ದರು. ಈ ವೇಳೆ ವೇದಿಕೆ ಹತ್ತದಂತೆ ಆಯೋಜಕರು‌ ಹಾಗೂ ಪೊಲೀಸರು ಇವರನ್ನು ತಡೆದಿದ್ದಾರೆ. ಈ ವೇಳೆ ಧರ್ಮಸ್ಥಳ ಸಂಸ್ಥೆಗೆ ಸೇರಿದ ವ್ಯಕ್ತಿ ವ್ಯಕ್ತಿಯೊಬ್ಬ ಈ ಕೃತ್ಯ ಎಸಗಿದ್ದಾನೆ. ಈ ಸಂಬಂಧ ಧರ್ಮಸ್ಥಳ ಪೊಲೀಸ್…

Read More

ಮಂಗಳೂರು: ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆದ ವಿಡಿಯೋ ಪ್ರಕರಣವನ್ನು ಎಸ್ ಐ ಟಿ ತನಿಖೆಗೆ ನೀಡುವಂತೆ ರಾಜ್ಯ ಸರಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಮಾಜಿ ಸಚಿವರು,ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರು ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು. ಈ ಸಂಧರ್ಭ ಮಂಗಳೂರು ಉತ್ತರ ಶಾಸಕ ಭರತ್‌ ಶಟ್ಟಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ,ಉಡುಪಿ ಶಾಸಕ ಯಶ್ಪಲ್‌ ಸುವರ್ಣ, ಭೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್‌ ಕಾಮತ್‌, , ಕುಂದಾಪುರ ಶಾಸಕ ಕಿರಣ್‌ ಕೊಡ್ಗಿ, ಬಂಟ್ವಾಳ ಶಾಸಕ ರಾಜೇಶ್‌ ನಾಯ್ಕ್‌ ಉಳೆಪಾಡಿ, ಸುಳ್ಯ ಶಾಸಕಿ ಭಾಗೀರತಿ ಮುರುಳ್ಯ ಮುಂತಾದವರು ಉಪಸ್ಥಿತರಿದ್ದರು.

Read More

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅನೇಕ ರೀತಿಯ ಸುಳ್ಳು ಆರೋಪಗಳನ್ನು ಮಾಡಿ, ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವ ಹಿನ್ನೆಲೆಯಲ್ಲಿ ‘ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದ’ ಸಂಘಟನೆಯ ಮೂಲಕ ಮಂಜುನಾಥ ಸ್ವಾಮಿಯ ಭಕ್ತಾಭಿಮಾನಿಗಳಿಂದ ಉಜಿರೆಯಲ್ಲಿ ಆಯೋಜಿಸಲಾಗಿರುವ ಬೃಹತ್ ಸಮಾವೇಶ ಮತ್ತು ಹಕ್ಕೊತ್ತಾಯ ಸಭೆ ನಡೆಯಿತು.ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದಿಂದ ಪೇಟೆ ಮೂಲಕ ಸಾಗಿಬಂದ ಬೃಹತ್ ಮೆರವಣಿಗೆ ಎಸ್.ಡಿ.ಎಂ ಕಾಲೇಜು ಎದುರಿಗೆ ಸಾಗಿ ಬಂತು. ಸುರಿಯುತ್ತಿದ್ದ ಮಳೆಯನ್ನೂ ಲೆಕ್ಕಿಸದೇ ಸಾವಿರಾರು ಜನರು ಶಿಸ್ತುಬದ್ಧವಾಗಿ ಮೆರವಣಿಗೆ ಮೂಲಕ ಸಾಗಿಬಂದರು. ಎಲ್ಲರ ಕೈಯಲ್ಲೂ ಕ್ಷೇತ್ರದ ಪರವಾಗಿ ಮತ್ತು ಡಾ. ಹೆಗ್ಗಡೆ ಪರವಾದ ಬರಹಗಳಿದ್ದ ಫಲಕಗಳಿದ್ದವು.ಸುಮಾರು ಒಂದು ಕಿಲೋಮೀಟರ್ ದೂರ ಸಾಗಲಿರುವ ಈ ಜಾಥಾ ಉಜಿರೆ ಎಸ್.ಡಿ.ಎಂ ಕಾಲೇಜು ಎದುರು ಬಂದು ಸೇರಲಿದ್ದು, ಬಳಿಕ ಇಲ್ಲಿ ಬೃಹತ್ ಸಮಾವೇಶ ನಡೆಯಿತು. ಸಭೆ ಬಳಿಕ ನಡೆದ ಪಾದಯಾತ್ರೆ ವೇಳೆ ಸ್ಥಳಕ್ಕೆ ಆಗಮಿಸಿದ ಸೌಜನ್ಯ ಕುಟುಂಬಸ್ಥರ ಮೇಲೆ ಭಕ್ತವೃಂದದ ಕೆಲವರು ಆಕ್ರೋಶಿತರಾಗಿ‌ ಹಲ್ಲೆಗೆ ಯತ್ನಿಸಿದ್ದಾರೆ. ಸೌಜನ್ಯ ತಾಯಿ ಕುಸುಮಾವತಿ ಮಗಳಿಗೆ…

Read More

ಮಂಗಳೂರು:ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಂನಲ್ಲಿ ಹಿಂದೂ ದೇವರ ಬಗ್ಗೆ ಅಶ್ಲೀಲವಾದ ಸಂದೇಶವನ್ನು ಹಂಚಿಕೊಂಡ ಆರೋಪಿಯನ್ನು ನಗರದ ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ನಗರದ ಬಿಕರ್ನಕಟ್ಟೆಯ ನಿವಾಸಿ ಮೊಹಮ್ಮದ್ ಸಲ್ಮಾನ್ (22) ಎಂದು ಗುರುತಿಸಲಾಗಿದೆ. ಆರೋಪಿಯು ಹಿಂದೂ ದೇವರ ಬಗ್ಗೆ ಇನ್‌ಸ್ಟಾಗ್ರಾಂ ಖಾತೆಯೊಂದರಲ್ಲಿ ಅಶ್ಲೀಲವಾಗಿ ಕಮೆಂಟ್ ಮಾಡಿದ್ದ ಬಗ್ಗೆ ಸೆನ್ ಠಾಣೆಯಲ್ಲಿ ದೂರು ದಾಖಲಾಗಿತ್ತು’ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ನಗರದ 7ನೇ ಜೆ.ಎಂ.ಎಫ್ ‌ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ

Read More

ಮಂಗಳೂರು: ಡ್ರಗ್ಸ್ ಸೇವನೆಯ ದುಷ್ಪರಿಣಾಮಗಳ ಬಗ್ಗೆ ಕಾಲೇಜುಗಳಲ್ಲಿನ ಆಸಕ್ತ ವಿದ್ಯಾರ್ಥಿಗಳಿಂದ ರೀಲ್ಸ್ ಹಾಗೂ ಕಿರು ಚಿತ್ರಗಳನ್ನು ತಯಾರಿಸಲು ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಕಾಲೇಜು ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿಗೆ ಸೂಚನೆ ನೀಡಿದರು. ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಆ.3ರ ಗುರುವಾರ ಹಮ್ಮಿಕೊಳ್ಳಲಾಗಿದ್ದ ನಾರ್ಕೋ ಕೋ-ಆರ್ಡಿನೇಷನ್ ಸೆಂಟರ್‍ನ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕಾಲೇಜುಗಳಲ್ಲಿ ಈಗಾಗಲೇ ಡ್ರಗ್ಸ್ ನಿರ್ಮೂಲನಾ ಸಮಿತಿಯನ್ನು ರಚಿಸಿ, ಸದಸ್ಯರನ್ನು ನೇಮಕ ಮಾಡಲಾಗಿದೆ ಅವರುಗಳು ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಜಾಥಾ ಸೇರಿದಂತೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಿ ಜಾಗೃತಿ ಮೂಡಿಸಬೇಕು, ಅದೇ ರೀತಿ ಜಿಲ್ಲೆಯ ಕಾಲೇಜುಗಳಲ್ಲಿ ಮಾದಕ ದ್ರವ್ಯ ನಿರ್ಮೂಲನೆ ಕುರಿತಂತೆ ಉತ್ತಮ ಸ್ಕ್ರೀಪ್ಟ್ ರಚಿಸಿ ಒಂದು ನಿಮಿಷದೊಳಗೆ ರೀಲ್ಸ್, ಕಿರು ವಿಡಿಯೋಗಳನ್ನು ವಿದ್ಯಾರ್ಥಿಗಳೇ ನಿರ್ಮಿಸಿಕೊಡುವ ಬಗ್ಗೆ ಕಾಲೇಜು ಶಿಕ್ಷಣ ಇಲಾಖೆಯ ವಿಶೇಷ ಅಧಿಕಾರಿ ದೇವಿ ಪ್ರಸಾದ್ ಅವರ ಮೇಲ್ವಿಚಾರಣೆಯಲ್ಲಿ ಕ್ರಮವಹಿಸಬೇಕು ಹಾಗೂ ತಯಾರಾದ ಅತ್ಯುತ್ತಮ ರೀಲ್ಸ್ ಹಾಗೂ ಕಿರು…

Read More