Author: main-admin

ನವದೆಹಲಿ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದ ರಾಜ್ಯದ ಹಿಜಾಬ್ ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್ ನೀಡಿರುವಂತ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿಕೆ ಮಾಡಿದೆ. ಮೇಲ್ಮನವಿಗಳ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ ನಡೆಸಲಿದೆ ಎನ್ನಲಾಗಿತ್ತು. ಆದರೆ ಸುಪ್ರೀಂ ಕೋರ್ಟ್ ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿಕೆ ಮಾಡಿದೆ ಎಂದು ವರದಿಯಾಗಿದೆ. ಇದೇ ವೇಳೆ ರಾಜ್ಯ ಸರ್ಕಾರಕ್ಕೆ ನೋಟಿಸ್​ ನೀಡಿರುವ ಸುಪ್ರೀಂಕೋರ್ಟ್​​ ವಿಚಾರಣೆ ಮುಂದೂಡುವಂತೆ ಕೋರುವ ಮನವಿಯನ್ನು ಸ್ವೀಕರಿಸುವುದಿಲ್ಲ ಎಂದಿದೆ.

Read More

ಸುಳ್ಯ: ಡಿಡೀರ್ ಪ್ರವಾಹ ಉಂಟಾಗಿ ಪಯಸ್ವಿನಿ ನದಿ ಉಕ್ಕಿ ಹರಿದು ಹಲವೆಡೆ ನೀರು ನುಗ್ಗಿ ಆವಾಂತರ ಸೃಷ್ಠಿಯಾದ ಘಟನೆ ನಡೆದಿದೆ. ಇಂದು ಬೆಳಿಗ್ಗಿನ ಜಾವ ಪಯಸ್ವಿನಿ ನದಿಯಲ್ಲಿ ಭಾರೀ ಪ್ರಮಾಣದಲ್ಲಿ ಪ್ರವಾಹ ನೀರು ತುಂಬಿ ಹರಿಯಿತು. ಹಲವು ಕಡೆಗಳಲ್ಲಿ ನದೀ ಬದಿಯ ಪ್ರದೇಶಗಳಿಗೆ ನೀರು ನುಗ್ಗಿದೆ. ಕೊಯನಾಡು ಶಾಲೆ ಬಳಿಯ 5 ಮನೆಗಳು ಜಲಾವೃತವಾಯಿತು. ಬಳಿಕ ಈ ಮನೆಯವರನ್ನು ಸುರಕ್ಷಿತ ಸ್ಣಳಗಳಿಗೆ ಸ್ಥಳಾಂತರಿಸಲಾಯಿತು‌. ಭಾರೀ ಗಾತ್ರದ ಮರಗಳು ಪ್ರವಾಹ ನೀರಿ‌ನಲ್ಲಿ ಕೊಚ್ಚಿ ಬಂದು ಕೊಯನಾಡಿನ ಕಿಂಡಿ ಅಣೆಕಟ್ಟಿನಲ್ಲಿ ಅಡ್ಡಲಾಗಿ ನಿಂತಿದೆ. ಹಲವೆಡೆ ಕೃಷಿ, ತೋಟಗಳಿಗೆ ನೀರು ನುಗ್ಗಿದೆ. ಊರುಬೈಲು, ಚೆಂಬು ಭಾಗದಲ್ಲಿ ಸೇತುವೆಗೆ ಹಾನಿಯಾಗಿರುವ ಬಗ್ಗೆ ವರದಿ ಯಾಗಿದೆ. ಸಂಪಾಜೆ ಭಾಗದಲ್ಲಿ ಮಳೆ ಕಡಿಮೆ ಇದ್ದರೂ ಪ್ರವಾಹ ಬಂದು ನದಿ ಉಕ್ಕಿ ಹರಿದು ನೀರು ನುಗ್ಗಿದ ಕಾರಣ ಜನರಲ್ಲಿ ಆತಂಕ ಸೃಷ್ಠಿಯಾ ಯಿತು. ಪಯಸ್ವಿನಿ ನದೀ ಪಾತ್ರದ ಗೂನಡ್ಕ, ಪೇರಡ್ಕ ಭಾಗದಲ್ಲಿಯೂ ನೀರು ನುಗ್ಗಿದೆ. ಪಯಸ್ವಿನಿ ಉದ್ಭವ ಭಾಗದಲ್ಲಿ ಭಾರೀ ಮಳೆಯಾ…

Read More

ಉಡುಪಿ: ಬಡ ಮಕ್ಕಳ ಚಿಕಿತ್ಸೆಗಾಗಿ ಪ್ರತಿವರ್ಷ ಶ್ರೀ ಕೃಷ್ಣ ಜನ್ಮಾಷ್ಟಮಿಗೆ ವಿಶಿಷ್ಟ ವೇಷಧಾರಣೆ ಮಾಡಿಕೊಂಡು ಹಣ ಸಂಗ್ರಹ ಮಾಡಿ ಸಾರ್ಥಕ ಸಮಾಜ ಸೇವೆ ಮಾಡಿದ್ದ ರವಿ ಕಟಪಾಡಿ ಅವರು ತಮ್ಮ ವೇಷಧಾರಣೆಗೆ ವಿದಾಯ ಹೇಳಲಿದ್ದಾರೆಂಬ ಸುದ್ದಿಗಳು ಸದ್ಯ ವೈರಲ್ ಆಗುತ್ತಿವೆ. ಆದರೆ ಇದನ್ನು ರವಿ ಕಟಪಾಡಿ ಅವರು ಅಧಿಕೃತಗೊಳಿಸಿಲ್ಲ. ರವಿ ಅವರು ಕಳೆದ ಏಳು ವರ್ಷಗಳಿಂದ ಸಂಗ್ರಹಿಸಿದ ಮೊತ್ತ ಈ ಅಷ್ಟಮಿಗೆ ಒಂದು ಕೋಟಿ ರೂ.ಗಳಾಗಿದ್ದು, ಮುಂದಿನ ಮಂಗಳವಾರ ಇದರ ವಿತರಣೆಗಾಗಿ ಸಮಾರಂಭವೊಂದನ್ನು ಆಯೋಜಿಸಲಾಗಿದೆ. ತಮ್ಮ ಸಮಾಜ ಸೇವೆಯ ಮುಂದುವರಿಕೆ ಅಥವಾ ನಿಲ್ಲಿಸುವ ಬಗ್ಗೆ ಈ ಸಮಾರಂಭದಲ್ಲೇ ಅವರು ಮಾಹಿತಿ ನೀಡಲಿದ್ದಾರೆ. ಈ ಕುರಿತು ರವಿ ಕಟಪಾಡಿಯವರೇ ಮಾಹಿತಿ ನೀಡಿದ್ದು, ಸದ್ಯ ಹರಿದಾಡುತ್ತಿರುವ ಸುದ್ದಿಗಳು ಸತ್ಯಕ್ಕೆ ದೂರವಾಗಿವೆ. ನಾನು ವೇಷಧಾರಣೆ ನಿಲ್ಲಿಸುವ ಬಗ್ಗೆ ಈವರೆಗೆ ಎಲ್ಲೂ ಹೇಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ವಿಶಿಷ್ಟ ವೇಷಧಾರಣೆ ಮಾಡಿಕೊಂಡು ಬಡ ಮಕ್ಕಳ ಚಿಕಿತ್ಸೆಗಾಗಿ 90 ಲಕ್ಷ ರೂ.ಗಳನ್ನು ರವಿ ಅವರು ಸಂಗ್ರಹಿಸಿದ್ದರು. ಈ ಬಾರಿ ಡೆಮೋನ್ ಮೂಲಕ…

Read More

ಶಿವಮೊಗ್ಗ: ಇನ್ನು ಮುಂದೆ ಕಾರು ಹೊಂದಿದವರ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಆನಂದಪುರಂನ ಮುರುಘಾ ಮಠದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಈಗ 50 ಸಾವಿರ ಹಾಗೂ 1 ಲಕ್ಷಕ್ಕೂ ಹಳೆ ಕಾರುಗಳು ಸಿಗುತ್ತಿವೆ. ಗಾರೆ ಮಾಡುವವರು, ಮೀನು ಹಿಡಿಯುವವರೂ ಕಾರು ತೆಗೆದುಕೊಂಡು ಹೋಗುತ್ತಾರೆ. ಅಂತವರ ಕಾರ್ಡ್ ಸಹಿತ ರದ್ದಾಗಿರುವುದು ಸರಿಯಲ್ಲ ಎಂದರು. ಈ ವಿಷಯವಾಗಿ ಶಾಸಕ ಎಚ್‌.ಹಾಲಪ್ಪ ಹರತಾಳು ಹಾಗೂ ನಾನು ಮುಖ್ಯಮಂತ್ರಿ ಬಳಿ ಚರ್ಚಿಸಿದ್ದೇವೆ. ಈ ಕಾನೂನಿನಿಂದ ಬಡವರು ಹೊಂದಿರುವ ಕಾರ್ಡ್ ರದ್ದಾಗುತ್ತದೆ. ಅವರ ಜೀವನಾಧಾರಕ್ಕೆ ತೊಂದರೆ ಆಗುತ್ತದೆ ಎಂದು ಮನವರಿಕೆ ಮಾಡಿದ್ದೇವೆ. ಬಡವರ ಮೇಲೆ ಕರುಣೆ ತೋರಿ ಸಿಎಂ ಆದೇಶ ಹೊರಡಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Read More

ಉಳ್ಳಾಲ: ಬ್ರೇಕ್ ಫೇಲ್‌ಗೊಳಗಾದ ಬಸ್‌ ಕಾರಿಗೆ ಢಿಕ್ಕಿ ಹೊಡೆದ ಘಟನೆ ತೊಕ್ಕೊಟ್ಟು ಜಂಕ್ಷನ್‌ನಲ್ಲಿ ಭಾನುವಾರ ಸಂಭವಿಸಿದ್ದು, ಬಸ್‌ ಚಾಲಕನ ಸಮಯ ಪ್ರಜ್ಞೆಯಿಂದ 21 ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಮಂಗಳೂರಿನಿಂದ ಮುಡಿಪು ಕಡೆಗೆ ತೆರಳುತ್ತಿದ್ದ ಎನ್.ಎಸ್ ಟ್ರಾವೆಲ್ಸ್ ಬಸ್ಸು ತೊಕ್ಕೊಟ್ಟು ಬಸ್ ನಿಲ್ದಾಣಕ್ಕೆ ಹೋಗಬೇಕಾಗಿತ್ತು. ಆದರೆ ಬ್ರೇಕ್ ಫೇಲ್ ಆದ ಕಾರಣ ನೇರ ತೊಕ್ಕೊಟ್ಟು ಜಂಕ್ಷನ್‌ಗೆ ಬಸ್ಸನ್ನು ಚಲಾಯಿಸಿದ್ದು, ಈ ವೇಳೆ ಉಳ್ಳಾಲದಿಂದ ಮುಡಿಪುವಿನತ್ತ ತೆರಳುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ. ಜನದಟ್ಟಣೆ ಹೆಚ್ಚಿರುವ ತೊಕ್ಕೊಟ್ಟು ಜಂಕ್ಷನ್‌ನಲ್ಲಿ ಸಂಭಾವ್ಯ ಅನಾಹುತ ತಪ್ಪಿದೆ. ಕಾರಿನಲ್ಲಿದ್ದ ಮುಡಿಪು ನಿವಾಸಿ ಮೊಹಮ್ಮದ್ ಮತ್ತು ಅವರ ಸಂಬಂಧಿ ಪ್ರಯಾಣಿಕ ಅಪಾಯವಿಲ್ಲದೆ ಪಾರಾಗಿದ್ದಾರೆ. ಘಟನೆಯ ಪರಿಣಾಮ ಕಾರಿನ ಒಂದು ಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಜೆಪ್ಪು ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಕಾಪು: ಮೂಳೂರಿನಲ್ಲಿ ಮೀನಿನ ವಾಹನಕ್ಕೆ ಟೂರಿಸ್ಟ್ ಬಸ್ ಡಿಕ್ಕಿಯಾದ ಪರಿಣಾಮ ಪಲ್ಟಿಯಾದ ಮೀನಿನ ವಾಹನದಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಟ್ಕಳದಿಂದ ಕೇರಳಕ್ಕೆ ಮೀನು ಸಾಗಾಟ ಮಾಡುತ್ತಿದ್ದ ಗೂಡ್ಸ್ ಟೆಂಪೊಗೆ ಹಿಂದಿನಿಂದ ಬರುತ್ತಿದ್ದ ಕರಾವಳಿಗರೇ ತುಂಬಿದ ಬಸ್ಸು ಡಿಕ್ಕಿಯಾದ ರಭಸಕ್ಕೆ ನಿಯಂತ್ರಣ ಕಳಕೊಂಡ ಗೂಡ್ಸ್ ವಾಹನ ರಸ್ತೆ ವಿಭಜಕ ಏರಿ ಮತ್ತೊಂದು ಪಾಶ್ವಕ್ಕೆ ಹೋಗಿ ಪಲ್ಟಿಯಾಗಿದೆ. ತಕ್ಷಣ ಸ್ಥಳಕ್ಕೆ ಬಂದ ಪಡುಬಿದ್ರಿ ಪೊಲೀಸರು ಹೆಜಮಾಡಿ ಟೋಲ್ ಪ್ಲಾಜಾಕ್ಕೆ ಕರೆ ಮಾಡಿ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಟೋಲ್ ನಲ್ಲಿ ಬಸ್ ತಡೆಯಲಾಯಿತು. ರಸ್ತೆಯಲ್ಲೇ ಪಲ್ಟಿಯಾದ ವಾಹನ ಇದ್ದ ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಸ್ಥಳಕ್ಕೆ ಆಗಮಿಸಿದ ಕಾಪು ಹಾಗೂ ಪಡುಬಿದ್ರಿ ಪೊಲೀಸರು ವಾಹನ ಸಂಚಾರ ಸುಗಮಗೊಳಿಸಿದ್ದಾರೆ.

Read More

ರಸ್ತೆ ಬದಿಗಳಲ್ಲಿ ಇರುವ ಚಾಟ್ಸ್ ಅಂಗಡಿಗಳಲ್ಲಿ ನಿಂತು ಕ್ಯಾಬೇಜ್​ ಮಂಚೂರಿಯನ್​ ಸವಿಯೋ ಮಜಾನೇ ಬೇರೆ. ಆದರೆ ಕರೊನಾದಿಂದಾಗಿ ಮನೆಯಿಂದ ಹೊರಗೆ ಬರೋಕೂ ನೂರು ಬಾರಿ ಯೋಚನೆ ಮಾಡಬೇಕಾದ ಪರಿಸ್ಥಿತಿ ಬಂದುಬಿಟ್ಟಿದೆ. ಆದರೆ ಈ ಕ್ಯಾಬೇಜ್​ ಮಂಚೂರಿಯನ್​ನ್ನ ನೀವು ಮನೆಯಲ್ಲೇ ಬಹಳ ಆರಾಮಾಗಿ ತಯಾರು ಮಾಡಬಹುದು. ಬೇಕಾಗುವ ಸಾಮಗ್ರಿ: ಕ್ಯಾಬೇಜ್​ – 1 (ಮಧ್ಯಮ ಗಾತ್ರದ್ದು), ಮೈದಾ ಹಿಟ್ಟು – 1/2 ಕಪ್​​, ಜೋಳದ ಹಿಟ್ಟು – 3/4 ಕಪ್​, ಈರುಳ್ಳಿ – 1(ದೊಡ್ಡದು).ಹಸಿ ಮೆಣಸು – 2, ಕೊತ್ತಂಬರಿಸೊಪ್ಪು, 1 ಕಪ್ ಅಡುಗೆ ಎಣ್ಣೆ – 1, ಕಾಳು ಮೆಣಸು ಪುಡಿ – 1/2 ಚಮಚ, ಸೋಯಾ ಸಾಸ್​ – 1 ಚಮಚ , ವಿನೇಗರ್​ – 1 ಚಮಚ, ಶುಂಠಿ ಬೆಳ್ಳುಳ್ಳಿ ಪೇಸ್ಟ್ – 2 ಚಮಚ, ಚಿಟಿಕೆಯಷ್ಟು ರೆಡ್​ ಫುಡ್​ ಕಲರ್​( ಅಗತ್ಯವಿದ್ದರೆ ಮಾತ್ರ), ರುಚಿಗೆ ತಕ್ಕಷ್ಟು ಉಪ್ಪು, ನೀರು ಮಾಡುವ ವಿಧಾನ: ಕ್ಯಾಬೇಜ್​ನ್ನ ಸಣ್ಣಗೆ ತುರಿದು ಚೆನ್ನಾಗಿ ತೊಳೆದುಕೊಳ್ಳಿ .…

Read More

ಕುಂದಾಪುರ: ತಾಲೂಕಿನ ಕರ್ಕುಂಜೆ ಗ್ರಾಪಂ ವ್ಯಾಪ್ತಿಯ ನೇರಳಕಟ್ಟೆ ಅರಳಿಕಟ್ಟೆಯ ಬಾವಿಕಟ್ಟೆಯ ಬಳಿ ಹಾಗೂ ನೇರಳಕಟ್ಟೆಯ ಜಾಡ್ಕಟ್ಟು ಶ್ರೀಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಸಮಿಪ ವಾಮನ ಮುದ್ರಿಕೆಯ ಕಲ್ಲುಗಳು ಪತ್ತೆಯಾಗಿವೆ. ಶೈವರು, ವೈಷ್ಣವರು, ಜೈನರ ಆರಾಧನೆಗೆ ಸಂಬಂಧಿಸಿದ ಹಾಗೂ ಅವರ ಆರಾಧನೆಗೆ ಗಡಿಗಳನ್ನು ಗುರುತಿಸುವುದು ಸಹಜ. ಶೈವರ ಗಡಿಗಳಿಗೆ ಲಿಂಗ ಮುದ್ರಿಕೆ ಕಲ್ಲು ಅಥವಾ ಶೈವ ಮುದ್ರಿಕೆ ಕಲ್ಲು, ವೈಷ್ಣವರ ಗಡಿಗಳಿಗೆ ವಾಮನ ಮುದ್ರಿಕೆ ಕಲ್ಲು, ಜೈನರ ಗಡಿಗಳಿಗೆ ಮುಕ್ಕೋಡೆ ಕಲ್ಲುಗಳನ್ನು ಹಾಕುತ್ತಿದ್ದರು. ಈ ಮೂಲಕ ಬಹಳ ಸ್ಪಷ್ಟವಾಗಿ ಅವರವರ ಗಡಿಗಳನ್ನು ಗುರುತಿಸಲು ಸಾಧ್ಯವಾಗುತ್ತಿತ್ತು ಎನ್ನಲಾಗಿದೆ. ನೇರಳಕಟ್ಟೆಯ ಎರಡು ವಾಮನ ಮುದ್ರಿಕೆಯ ಕಲ್ಲುಗಳಲ್ಲಿ ಸೂರ್ಯ ಚಂದ್ರ ಇರುವ ತನಕ ಅಜರಾಮರವಾಗಿರಲಿ ಎಂದು ಸಂದೇಶ ಸಾರುವಂತಹ ಸೂರ್ಯ ಹಾಗೂ ಚಂದ್ರ ಶಿಲ್ಪಕಲೆಯೊಂದಿಗೆ ವ್ಯಕ್ತಿ ಅಂದರೆ ವಾಮನ ಅವರ ಒಂದು ಕೈಯಲ್ಲಿ ಕೊಡೆ ಇನ್ನೊಂದು ಕೈಯಲ್ಲಿ ಕಮಂಡಲವಿದ್ದು ಇದು ವಾಮನ ಶಿಲ್ಪಕಲೆಯಲ್ಲಿ ಸಹಜವಾಗಿ ಕಂಡುಬರುತ್ತದೆ. ಅಂತೆಯೇ ವಾಮನ ಮುದ್ರಿಕೆಯ ಕಲ್ಲಿನ ಅಣತಿ ದೂರದಲ್ಲಿ ಶ್ರೀಲಕ್ಷ್ಮೀ ವೆಂಕಟರಮಣ ದೇವಸ್ಥಾನವಿದೆ.…

Read More

ಉಡುಪಿ: ಗೌರಿ-ಗಣೇಶ ಹಬ್ಬದ ಪ್ರಯುಕ್ತ ಬಣ್ಣದಿಂದ ತಯಾರಿಸಿರುವ ಗೌರಿ ಹಾಗು ಗಣೇಶನ ವಿಗ್ರಹಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿ ಕೆರೆ, ಬಾವಿ ಹಾಗೂ ಇತರೆ ನೈಸರ್ಗಿಕ ಜಲಮೂಲಗಳಲ್ಲಿ ವಿಸರ್ಜಿಸುವುದರಿಂದ ನೀರು ಕಲುಷಿತಗೊಂಡು ಜಲಚರಗಳಿಗೆ ಹಾನಿಯುಂಟಾಗುತ್ತದೆ. ಇದನ್ನು ತಪ್ಪಿಸಲು ಜೇಡಿಮಣ್ಣಿನಿಂದ ಹಾಗೂ ನೈಸರ್ಗಿಕ ಬಣ್ಣಗಳಿಂದ ತಯಾರಿಸಿದ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಗೌರಿ ಗಣೇಶ ಚತುರ್ಥಿ ಆಚರಣೆಯನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ವಿಷಕಾರಿ ರಾಸಾಯನಿಕ, ಲೋಹಲೇಪದ ಪ್ಲಾಸ್ಟರ್ ಆಫ್ ಪ್ಯಾರಿಸ್‌ನ ಗಣೇಶನ ಮೂರ್ತಿ ಬಳಕೆ ಮಾಡದೆ, ಸಾದಾ ಜೇಡಿಮಣ್ಣಿನಿಂದ ತಯಾರಿಸಿದ, ಎಲೆ, ಹೂವುಗಳಿಂದ ಮಾಡಿದ ನೈಸರ್ಗಿಕ ಬಣ್ಣದಿಂದ ತಯಾರಿಸಿದ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಬಹುದಾಗಿದೆ. ಸಾಮೂಹಿಕವಾಗಿ ನಡೆಸುವ ಗಣೇಶನ ಚಪ್ಪರಕ್ಕೆ ಪ್ಲಾಸ್ಟಿಕ್ ವಸ್ತುಗಳನ್ನು ಬಳಸದೇ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಬೇಕು. ಬಾವಿ, ಕೆರೆ ಹಾಗೂ ಹೊಳೆಗಳಲ್ಲಿ ಗಣಪತಿ ವಿಗ್ರಹಗಳನ್ನು ವಿಸರ್ಜನೆ ಮಾಡುವುದರಿಂದ ಅಂತರ್ಜಲ, ಕುಡಿಯುವ ನೀರಿನ ಸೆಲೆಗಳು ಹಾಳಾಗುತ್ತದೆ. ಆದ್ದರಿಂದ ಬಕೆಟ್‌ನಲ್ಲಿ ಮೂರ್ತಿಯನ್ನು ವಿಸರ್ಜಿಸಬೇಕು ಅಥವಾ ಸೂಚಿತ ಕೆರೆಗಳಲ್ಲಿ…

Read More

ಮಂಗಳೂರು: ಸರ್ಕಾರ ಹಾಗೂ ಹೈಕೋರ್ಟ್ ಹೊರಡಿಸಿರುವ ಮಾರ್ಗಸೂಚಿಗಳನ್ನು ಪಾಲಿಸಿ ಗಣೇಶ ಹಬ್ಬವನ್ನು ಆಚರಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.ಯವರು ಜಿಲ್ಲೆಯ ಗಣೇಶೋತ್ಸವ ಸಮಿತಿಗಳ ಮುಖಂಡರಿಗೆ ಸಲಹೆ ನೀಡಿದರು. ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಈ ಕುರಿತು ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸುವ ಸಮಿತಿಗಳು ಆಯಾ ವ್ಯಾಪ್ತಿಯ ಪೊಲೀಸ್ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಪಂಗಳಿಂದ ಅನುಮತಿ ಪಡೆಯಬೇಕು. ಸೌಹಾರ್ದತೆ ಹಾಗೂ ಸಾಮಾಜಿಕ ಸ್ವಾಸ್ಥ್ಯ ಕದಡುವ ಬರಹವುಳ್ಳ ಬ್ಯಾನರ್ ಅಳವಡಿಕೆ ಬೇಡ. ಶುಭ ಕೋರುವ ಬ್ಯಾನರ್ ಗಳನ್ನು ಅನುಮತಿ ಪಡೆದು ಅಳವಡಿಸಬೇಕು ಎಂದು ಹೇಳಿದರು. ಮಳೆಗಾಲದ ಹಿನ್ನೆಲೆಯಲ್ಲಿ ಹಾನಿಯಾಗದಂತಹ ಪೆಂಡಾಲ್‍ಗಳನ್ನು ಹಾಕಬೇಕು. ವಿದ್ಯುತ್ ಅವಘಡಗಳಾಗದಂತೆ ಎಚ್ಚರ ವಹಿಸಬೇಕು. ವಿದ್ಯುತ್ ಸಂಪರ್ಕ ಪಡೆಯಲು ತಾತ್ಕಾಲಿಕ ಅನುಮತಿ ಪಡೆಯಬೇಕು. ಬೃಹತ್ ಗಾತ್ರದ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಸಮಿತಿಗಳು ಕಡ್ಡಾಯವಾಗಿ ಸಿಸಿಟಿವಿಯನ್ನು ಅಳವಡಿಸಿಕೊಳ್ಳಬೇಕು. ಸಾರ್ವಜನಿಕರ ಓಡಾಟಕ್ಕೆ ಅನುಕೂಲವಾಗುವಂತೆ ನೋಡಿಕೊಳ್ಳಬೇಕು. ಧ್ವನಿ ವರ್ಧಕಗಳನ್ನು ಬಳಸುವ ಮುನ್ನ ಸಂಬಂಧಪಟ್ಟವರಿಂದ ಅನುಮತಿ ಪಡೆಯಬೇಕು. ನ್ಯಾಯಾಲಯದ ಆದೇಶದಂತೆ…

Read More