Author: main-admin

ಮಲ್ಪೆ: ಉಡುಪಿಯ ಮಲ್ಪೆ ಪೊಲೀಸ್ ಠಾಣೆಯ ಎಎಸ್‌ಐ ವಿಶ್ವನಾಥ್ (58) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.ನವೆಂಬರ್ 1ರಂದು ರಾತ್ರಿ ಮಲ್ಪೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು. ಬಳಿಕ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅದಾಗಲೇ ಹೃದಯಾಘಾತದಿಂದ ವಿಶ್ವನಾಥ್ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿರುವ ವಿಶ್ವನಾಥ್‌ ಅವರು ಜನಸಾಮಾನ್ಯರಿಗೆ ಹತ್ತಿರವಾಗಿದ್ದರು. ಇತ್ತೀಚೆಗಷ್ಟೇ ಮಲ್ಪೆ ಠಾಣೆಗೆ ವರ್ಗಾವಣೆಗೊಂಡಿದ್ದರು. ಅವರ ಅಕಾಲಿಕ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತವಾಗಿದೆ.

Read More

ಹಿಂದೂ ಪರ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಎನ್‌ಐಎ ಅಧಿಕಾರಿಗಳು 11 ಆರೋಪಿಗಳ ವಿರುದ್ಧ ಬೆಂಗಳೂರು ಎನ್‌ಐಎ ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ದೇಶದ್ರೋಹ ಕಾಯ್ದೆ ಸೇರಿದಂತೆ ವಿವಿಧ ಕಾಯಿದೆಗಳಡಿ ಪ್ರಕರಣ ದಾಖಲಾಗಿದ್ದು, ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.  2025ರ ಮೇ 1ರಂದು ಸುಹಾಸ್ ಶೆಟ್ಟಿಯನ್ನು ಬಜ್ಜೆಯಲ್ಲಿ ನಡುರಸ್ತೆಯಲ್ಲಿ ಕೊಲೆ ಮಾಡಲಾಗಿತ್ತು. ಹಲವು ಸಮಯದಿಂದ ಹೊಂಚು ಹಾಕಿ ಜನರಲ್ಲಿ ಭಯ ಮೂಡಿಸುವುದಕ್ಕಾಗಿಯೇ ಈ ರೀತಿ ಭಯಾನಕವಾಗಿ ಕೊಲೆ ಮಾಡಲಾಗಿತ್ತು ಎಂದು ಎನ್‌ಐಎ ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಿದೆ. ಸುಹಾಸ್ ಶೆಟ್ಟಿ ಕೊಲೆ ನಡೆಸುವುದಕ್ಕಾಗಿ ನಿಷೇಧಿತ ಪಿಎಫ್‌ಐ ಸಂಘಟನೆಯ ಮಾಜಿ ಸದಸ್ಯ ಅಬ್ದುಲ್ ಸಫಾನ್ ಎಂಬಾತ ನಿಯಾಜ್, ಮುಹಮ್ಮದ್ ಮುಸಾಮಿರ್, ಮಹಮ್ಮದ್ ಮುಜಾಮಿಲ್, ಇನ್ನೊಬ್ಬ ಪಿಎಫ್‌ಐ ಸದಸ್ಯ ವಾಮಂಜೂರು ನೌಶಾದ್ ಮತ್ತು ಆದಿಲ್ ಮಹರೂಫ್ ಜೊತೆಗೂಡಿ ಸಂಚು ನಡೆಸಿದ್ದರು. ಕೃತ್ಯ ನಡೆಸುವುದಕ್ಕಾಗಿ ಆದಿಲ್ ಆರೋಪಿಗಳಿಗೆ ಹಣಕಾಸಿನ ನೆರವು ನೀಡಿದ್ದ ಎಂದು ಎನ್‌ಐಎ ಅಧಿಕಾರಿಗಳು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದ್ದಾರೆ. ಚಿಕ್ಕಮಗಳೂರು ಮೂಲದ…

Read More

ಕೇರಳ: ಕೇರಳದಲ್ಲಿ ಮಂಗಳೂರಿನ ಕುಖ್ಯಾತ ರೌಡಿಶೀಟರ್ ಬರ್ಬರ ಹತ್ಯೆ ಮಾಡಲಾಗಿದೆ. ನಟೋರಿಯಸ್ ರೌಡಿಶೀಟರ್ ಟೋಪಿ ನೌಫಾಲ್ ಎಂಬಾತನನ್ನು ಬರ್ಬರ ಹತ್ಯೆ ಮಾಡಲಾಗಿದೆ. ಕೇರಳದ ಕಾಸರಗೋಡು ಜಿಲ್ಲೆಯ ಉಪ್ಪಳದ ರೈಲ್ವೆ ಗೇಟ್ ಬಳಿಯಲ್ಲಿ ಕೊಚ್ಚಿ ನೌಫಾಲ್ ಕೊಲೆ ಮಾಡಲಾಗಿದೆ. ನೌಫಾಲ್, ಫರಂಗಿಪೇಟೆ ಜೋಡಿ ಕೊಲೆ ಕೇಸ್ ನಲ್ಲಿ ಪ್ರಮುಖ ಆರೋಪಿಯಾಗಿದ್ದನು. ಮಾರಕಾಸ್ತ್ರಗಳಿಂದ ಕೊಚ್ಚಿ ನೌಫಾಲ್ ಅನ್ನು ದುಷ್ಕರ್ಮಿಗಳು ಕೊಂದಿದ್ದಾರೆ. ಮಂಗಳೂರಿನ ಫೈಸಲ್ ನಗರದ ನಿವಾಸಿ ಟೋಪಿ ನೌಫಾಲ್ ಆಗಿದ್ದನು. ಉಪ್ಪಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು ನಗರದಲ್ಲಿ ಸುಗಮ ಸಂಚಾರ ಅನುವು ಮಾಡಿಕೊಡಲು ಹಾಗೂ ರಸ್ತೆಗಳಲ್ಲಿ ಅನಧಿಕೃತವಾಗಿ ವಾಹನಗಳನ್ನು ನಿಲುಗಡೆಗೊಳಿಸಿ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿರುವ ಹಿನ್ನಲೆಯಲ್ಲಿ, ಈ ಬಗ್ಗೆಮಂಗಳೂರು ನಗರ ಪೊಲೀಸರು ಕಳೆದ ಮೂರು ತಿಂಗಳಲ್ಲಿ ವಿಶೇಷ ಕಾರ್ಯಾಚರಣೆಗಳನ್ನು ಕೈಗೊಂಡಿದ್ದಾರೆ. ಕಳೆದ ಮೂರು ತಿಂಗಳಲ್ಲಿ ವಿಶೇಷ ಕಾರ್ಯಾಚರಣೆಯ ಸಮಯದಲ್ಲಿ ಪೊಲೀಸರು, ‘ನೋ ಪಾರ್ಕಿಂಗ್, ರಾಂಗ್ ಪಾರ್ಕಿಂಗ್, ಡಬಲ್ ಪಾರ್ಕಿಂಗ್, ಫುಟ್‌ಪಾತ್ ಪಾರ್ಕಿಂಗ್’ ಮಾಡಿದ ವಾಹನ ಮಾಲಕ ಮತ್ತು ಚಾಲಕರ ವಿರುದ್ಧ 4793 ಪ್ರಕರಣಗಳನ್ನು ದಾಖಲಿಸಿ ರೂ. 23,21,200 ರೂ. ದಂಡವನ್ನು ವಿಧಿಸಲಾಗಿದೆ. ಕೆಲವು ವಾಣಿಜ್ಯ ಸಂಕೀರ್ಣ ಮತ್ತು ದೊಡ್ಡ ವ್ಯಾಪಾರ ಮಳಿಗೆಗಳಿಂದ ಸಂಚಾರಕ್ಕೆ ಅಡಚಣೆಯಾಗುತ್ತಿರುವುದರಿಂದ, ಅವುಗಳ ನಿರ್ವಹಣಾ ಮಂಡಳಿಗಳೊಂದಿಗೆ ಸಭೆಗಳನ್ನು ನಡೆಸಲಾಗಿದೆ. ಈ ಮೂಲಕ ಸೂಕ್ತ ವಾಹನ ನಿಲುಗಡೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿ ನೋಟಿಸ್ ಜಾರಿಗೊಳಿಸಲಾಗಿದೆ. ಅಪಘಾತವನ್ನು ತಡೆಗಟ್ಟುವ ನಿಟ್ಟಿನಲ್ಲಿ, ಬ್ಲಾಕ್ ಸ್ಪಾಟ್‌ಗಳ (ಹೆಚ್ಚು ಅಪಘಾತಗಳಾಗುವ) ಬಳಿ ಅತೀ ವೇಗವಾಗಿ ಚಾಲನೆ ಮಾಡುವ ವಾಹನಗಳ ವಿರುದ್ಧ್ದ ಕ್ರಮ ಕೈಗೊಂಡು…

Read More

ಬೆಳ್ತಂಗಡಿ: ಸುಮಾರು 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣಾ CR NO. 99/2014 00, 406,420, 468, 478, 201 ಐಪಿಸಿ. ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಲಯಕ್ಕೆ ಸುಮಾರು 2 ವರ್ಷಗಳಿಂದ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಮಲಾಕ್ಷ ಮಂಜೇಶ್ವರ ಎಂಬವರನ್ನು ಅ.30ರಂದು ಕಾಸರಗೋಡು ವಿದ್ಯಾನಗರ ಎಂಬಲ್ಲಿ ದಸ್ತಗಿರಿ ಮಾಡಿದ್ದಾರೆ.

Read More

ಮಂಗಳೂರಿನ ಬಿಜೈಯ ಹಿರಿಯ ನಾಗರಿಕ ಮಹಿಳೆಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ, ಸುಮಾರು 17 ಲಕ್ಷ ರೂಪಾಯಿ ವರ್ಗಾಯಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಹಣ ವಂಚಕರ ಪಾಲಾಗದಂತೆ ತಡೆದ ಪೊಲೀಸರ ಕಾರ್ಯವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘಿಸಿದ್ದಾರೆ. ಡಿಸಿಪಿಗಳಾದ ಮಿಥುನ್‌ ಹಾಗೂ ರವಿಶಂಕರ್ ಅವರು ಈಗಾಗಲೆ ಸಂತ್ರಸ್ತೆಗೆ, ಅವರು ಕಳೆದುಕೊಂಡ 17 ಲಕ್ಷ ರೂಪಾಯಿಗಳ ವರ್ಗಾವಣೆಯ ಆದೇಶ ಪತ್ರವನ್ನು ಹಸ್ತಾಂತರಿಸಲಾಗಿದ್ದು, ಪೊಲೀಸ್ ಇಲಾಖೆಯ ಕಾರ್ಯ ನಿಜಕ್ಕೂ ಶ್ಲಾಘನೀಯ, ಇಂಥ ಕಾರ್ಯಚರಣೆ ಗಳಿಂದ ಸಾರ್ವಜನಿಕರಿಗೆ ಅದರಲ್ಲೂ ಹಿರಿಯ ನಾಗರಿಕರಿಗೆ ಪೊಲೀಸ್ ಇಲಾಖೆ ಮೇಲೆ ಮತ್ತಷ್ಟು ವಿಶ್ವಾಸ ಹೆಚ್ಚುತ್ತದೆ. ಸೈಬರ್ ವಂಚನೆ, ಡಿಜಿಟಲ್ ಅರೆಸ್ಟ್ ವಂಚನೆಗಳಿಂದ ನಾಗರಿಕರು ದೂರ ಉಳಿಯಬೇಕು, ಪೊಲೀಸರಿಗೆ ಸಹಕರಿಸಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮನವಿ ಮಾಡಿದ್ದಾರೆ.

Read More

ಸಾಮಾಜಿಕ ಜಾಲತಾಣ Facebook ನಲ್ಲಿ purush acharya ಎಂಬ ಹೆಸರಿನ ಖಾತೆಯಿಂದ ದಸರಾ ಉದ್ಘಾಟನೆ ಮಾಡಿದ ಬಾನು ಮುಸ್ತಾಕ್ ರವರ ಬಗ್ಗೆ ಮತ್ತು ಮಾನ್ಯ ಮುಖ್ಯ ಮಂತ್ರಿಗಳ ಬಗ್ಗೆ ಅಸಭ್ಯ ಪದಗಳಲ್ಲಿ ನಿಂದಿಸಿ ಪೋಸ್ಟ್ ಮಾಡಿದ ಬಗ್ಗೆ ಸುಳ್ಯ ಪೊಲೀಸ್ ಠಾಣಾ ಅಕ್ರ 112/2025 ಕಲಂ 296,196,354 BNS ಹಾಗೂ ಸುಬ್ರಮಣ್ಯ ಠಾಣೆಯಲ್ಲಿ 55/2025 ಕಲಂ 353(3),353(4) BNS ರಂತೆ ಪ್ರಕರಣಗಳು ದಾಖಲಾಗಿರುತ್ತವೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್ ನ ಸಹಕಾರದಿಂದ ಸುಳ್ಯ ಪೊಲೀಸರು ಪ್ರಕರಣದ ಆರೋಪಿ ಪುರುಷೋತ್ತಮ ಆಚಾರ್ಯ ಬರಿಮಾರು ಬಂಟ್ವಾಳ ತಾಲೂಕು ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿರುತ್ತದೆ. ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.

Read More

ಮಂಗಳೂರು; ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಫೇಸ್ ಬುಕ್ ನಲ್ಲಿ ಪ್ರಚೋದನಕಾರಿ ಪೋಸ್ಟ್ ಶೇರ್ ಮಾಡಿದ ಆರೋಪದಡಿ ಮಂಗಳೂರಿನ ಕದ್ರಿ ಠಾಣೆ ಪೊಲೀಸರು ಶರಣ್ ಪಂಪ್ ವೆಲ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಆರ್ ಎಸ್ ಎಸ್ ಮುಖಂಡರೊಬ್ಬರ ಭಾಷಣದ ವಿಡಿಯೋ ಶೇರ್ ಮಾಡಿದ್ದಾರೆ ಎಂಬ ಆರೋಪದಡಿ ಶರಣ್ ಪಂಪ್ ವೆಲ್ ವಿರುದ್ದ ಎಫ್ಐಆರ್ ದಾಖಲಿಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕದ್ರಿ ಪೊಲೀಸ್ ಠಾಣೆಗೆ ಆಗಮಿಸಿದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್, ಬಿಜೆಪಿ ಜಿಲ್ಲಾಧ್ಯಕ್ಚ ಸತೀಶ್ ಕುಂಪಲ ಆಗಮಿಸಿದ್ದಾರೆ. ಕದ್ರಿ ಠಾಣೆಯ ಬಳಿ ಹಿಂದೂ ಸಂಘಟನೆಯ ಕಾರ್ಯಕರ್ತರು ಸೇರಿದ್ದಾರೆ. ಯಾವುದೇ ನೊಟೀಸ್ ನೀಡದೇ ಕರೆದುಕೊಂಡು ಬಂದಿದ್ದಾರೆ ಎಂದು ಆರೋಪಿಸಲಾಗಿದ್ದು, ಸದ್ಯ ಪೊಲೀಸ್ ಅಧಿಕಾರಿಗಳ ಜೊತೆ ಶಾಸಕರು, ನಾಯಕರ ಮಾತುಕತೆ ನಡೆಸುತ್ತಿದ್ದಾರೆ.

Read More

ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ಯುವಕನೋರ್ವನನ್ನು ಕಾರಿನಲ್ಲಿ ಅಪಹರಿಸಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಹಲ್ಲೆಗೊಳಾಗದ ಯುವಕ ನಿತಿನ್ ಎಂದು ತಿಳಿದು ಬಂದಿದೆ. ಹಲ್ಲೆ ನಡೆಸಿದ ಆರೋಪಿಗಳು ಸಂಪತ್, ಅಭಿಷೇಕ್‌ ಪಾಲನ್, ರಕ್ಷತ್‌, ಸನತ್‌ ಮತ್ತು ಚೇತನ್‌ ಎಂದು ತಿಳಿದು ಬಂದಿದೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣದ ವಿವರ : ಪಿರ್ಯಾದಿದಾರರಾದ ನಿತಿನ್‌ (26), ಹಂದಾಡಿ ಗ್ರಾಮ, ಬ್ರಹ್ಮಾವರ ಇವರು ದಿನಾಂಕ 29/10/2025 ರಂದು ರಾತ್ರಿ 21:15 ಗಂಟೆಯ ವೇಳೆಗೆ ಬಾರ್ಕೂರಿನಲ್ಲಿ ಇರುವಾಗ, 1 ನೇ ಆರೋಪಿ ಸಂಪತ್‌ ಎಂಬಾತನು ‌ ಕರೆ ಮಾಡಿ ಎಲ್ಲಿದ್ದೀಯ ಎಂದು ಕೇಳಿ, ಸ್ವಲ್ಪ ಸಮಯದ ಬಳಿಕ ಅಲ್ಲಿಗೆ ಸಂಪತ್, ಅಭಿಷೇಕ್‌ ಪಾಲನ್, ರಕ್ಷತ್‌, ಸನತ್‌ ಮತ್ತು ಚೇತನ್‌ ರವರುಗಳು ಬೈಕಿನಲ್ಲಿ ಮತ್ತು ಕಾರಿನಲ್ಲಿ ಬಂದು, ಅವರೆಲ್ಲರೂ ಸೇರಿ ಪಿರ್ಯಾದಿದಾರರನ್ನು ಕಾರಿನಲ್ಲಿ ಎಳೆದು ಕೂರಿಸಿಕೊಂಡು ಬ್ರಹ್ಮಾವರ ತಾಲೂಕು 52 ನೇ ಹೇರೂರು ಗ್ರಾಮದ ಕೆ.ಇ.ಬಿ ಬಳಿ ಇರುವ ಗ್ರೌಂಡ್‌…

Read More

ಬಂಟ್ವಾಳ: ಅ.30ರಂದು ಬಿಸಿಲೆ ಘಾಟ್ ಘಾಟ್ ನಲ್ಲಿ ಸಂಭವಿಸಿದಅಪಘಾತದ ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ಚಿಕಿತ್ಸೆಗೆ ಕರೆತಂದ ಸಮಯ ಅಲ್ಲಿನ ವೈದ್ಯರು ತುರ್ತು ಚಿಕಿತ್ಸೆ ನೀಡಿ ಗಂಭೀರ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲು ಸೂಚಿಸಿದ್ದು ಅದರಂತೆ ಪುತ್ತೂರಿನಿಂದ ಮಂಗಳೂರಿಗೆ ಅಂಬ್ಯುಲೆನ್ಸ್ ನಲ್ಲಿ ಕರೆದುಕೊಂಡು ಹೋಗುತ್ತಿದ್ದ ಸಮಯ ಮದ್ಯಾಹ್ನ 1.30 ಗಂಟೆಗೆ ಬಂಟ್ವಾಳ ತಾಲೂಕು ಬಿ.ಸಿ.ರೋಡ್ ಎನ್ ಜಿ ಸರ್ಕಲ್ಲಿಂದ ಅಂಬ್ಯುಲೆನ್ಸ್ ಮುಂದಿನಿಂದ ದ್ವಿಚಕ್ರ ವಾಹನ ಸವಾರನೋರ್ವ ಅಂಬ್ಯುಲೆನ್ಸ್ ನ ಸೈರನ್ ಶಬ್ದ ಕೇಳಿಯೂ ಅಂಬ್ಯುಲೆನ್ಸ್ ಗೆ ದಾರಿ ಬಿಟ್ಟು ಕೊಡದೆ ಅಂಬ್ಯುಲೆನ್ಸ್ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದ. ಈ ಹಿನ್ನೆಲೆಯಲ್ಲಿ ಬೆಟ್ಟಂಪಾಡಿ ಗ್ರಾಮದ ಮಹಮ್ಮದ್ ಮನ್ಸೂರು (38ವ) ಎಂಬವರ ಮೇಲೆ ಬಂಟ್ವಾಳ ನಗರ ಪೊಲೀಸ್ ಠಾಣಾ ಅ.ಕ್ರ 128/2025 ಕಲಂ: 110, 125 ಬಿ.ಎನ್.ಎಸ್ ನಂತೆ ಪ್ರಕರಣ ದಾಖಲಿಸಿ ವಶಕ್ಕೆ ಪಡೆದುಕೊಂಡಿದ್ದು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Read More