Author: main-admin

ಬಂಟ್ವಾಳ: ತಾಲೂಕಿನ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಮಹಿಳೆಯೋರ್ವರಿಗೆ ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡ ಮಹಿಳೆಯನ್ನು ಉಳ್ಳಾಲ ತಾಲೂಕಿನ ಬೋಳಿಯಾರು ಗ್ರಾಮದ ಭಾರತಿ(48) ಎಂದು ಗುರುತಿಸಲಾಗಿದೆ. ಅವರು ತನ್ನ ಮಗಳೊಂದಿಗೆ ಮಾ.30 ರಂದು ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿ ಗುಳಿಗಜ್ಜ ಕಟ್ಟೆಗೆ ಹಣ ಹಾಕುವ ಸಲುವಾಗಿ ಬೆಳಿಗ್ಗೆ ಬಂದಿದ್ದರು. ಮೆಲ್ಕಾರ್-ಮುಡಿಪು ರಾಜ್ಯ ಹೆದ್ದಾರಿ ರಸ್ತೆಯನ್ನು ದಾಟಿ ಹೆದ್ದಾರಿ ರಸ್ತೆಯ ಅಂಚಿಗೆ ತಲುಪಿದಾಗ ಮೆಲ್ಕಾರ್ ಕಡೆಯಿಂದ ಮುಡಿಪು ಬರುತ್ತಿದ್ದ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಗಾಯಗೊಂಡ ಮಹಿಳೆಯನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

Read More

ಮಂಗಳೂರು: ಕಳೆದ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಒಬ್ಬನನ್ನು ಉರ್ವಾ ಪೊಲೀಸರು ಮುಂಬೈನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉರ್ವಾ ಹಾಗೂ ಮಂಗಳೂರು ಉತ್ತರ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರಕರಣದಲ್ಲಿ ಆರೋಪಿಯಾಗಿದ್ದ ಸುಹಾನ್ @ ಸೋನು (33), ತಂದೆ ದಿ. ಸೋಮಯ್ಯ, ವಾಸಸ್ಥಳ ಬಿರಾ ಪೂಜಾರಿ ಕಂಪೌಂಡ್, ಅಶೋಕನಗರ, ಮಂಗಳೂರು ಈತನು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಈ ಹಿನ್ನೆಲೆಯಲ್ಲಿ ಉರ್ವಾ ಪೊಲೀಸ್ ಠಾಣೆ ಪ್ರಕರಣದಲ್ಲಿ ಘನ ನ್ಯಾಯಾಲಯವು ಅವನ ವಿರುದ್ಧ LPC ವಾರಂಟ್ ಜಾರಿಗೊಳಿಸಿತ್ತು. ಈತನನ್ನು ದಿನಾಂಕ 29-03-2026 ರಂದು ಮುಂಬೈನಲ್ಲಿ ಉರ್ವಾ ಪೊಲೀಸ್ ಠಾಣೆಯ ಎಎಸ್ಐ ಲಕ್ಷ್ಮಣ್, ಹೆಡ್ ಕಾನ್ಸ್ಟೇಬಲ್ 956 ನಾರಾಯಣ, ಪೊಲೀಸ್ ಕಾನ್ಸ್ಟೇಬಲ್ 3240 ಯಲ್ಲಾಲಿಂಗ ಹಾಗೂ ಪೊಲೀಸ್ ಕಾನ್ಸ್ಟೇಬಲ್ 330 ಮೊಹಮ್ಮದ್ ಹದಿಯ ತಂಡವು ಬಂಧಿಸಿದೆ. ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Read More

ಮಂಗಳೂರು : ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ, ಯುವ ಉದ್ಯಮಿ ಸುದೀಪ್ ರೈ ಮದುವೆಯಾದ ಒಂದೇ ತಿಂಗಳಿಗೆ ಕಾರ್ಕಳದಲ್ಲಿರುವ ಪತ್ನಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಿರುವು ಪಡದುಕೊಂಡಿದೆ. ಪತ್ನಿ ಸೌಮ್ಯಾ ಶೆಟ್ಟಿಯೇ ಸುದೀಪ್ ಸಾವಿಗೆ ಕಾರಣ ಎಂಬ ಆರೋಪ ಕೇಳಿಬಂದಿದೆ. ಮದುವೆಯಾಗಿ ಕೆಲವೇ ದಿನಗಳಲ್ಲಿ ಪತ್ನಿ ಈ ಮೊದಲು ಕೆಲವು ಮದುವೆಯಾಗಿರುವುದು ಬಯಲಾಗಿದೆ. ಹೀಗಾಗಿ ಮದುವೆಯಾದ ಒಂದು ತಿಂಗಳ ಬಳಿಕ ತನ್ನ ತಂದೆ-ತಾಯಿ ಮನೆಗೆ ಬಂದಿದ್ದ ಸುದೀಪ್​​ ಪತ್ನಿ ಹಣ ಒಡವೆ ಕಿತ್ತುಕೊಂಡಿದ್ದಾಳೆ, ತುಂಬಾ ಟಾರ್ಚರ್ ಕೊಡುತ್ತಿದ್ದಾಳೆ ಎಂದು ಅಲವತ್ತುಕೊಂಡಿದ್ದರು ಎಂದು ಸಂದೀಪ್‌ ರೈಯ ತಂದೆ ಮತ್ತು ತಾಯಿ ಮಾಧ್ಯಮದ ಎದುರು ಆರೋಪಿಸಿದ್ದಾರೆ. ಸುದೀಪ್​​ ತನ್ನ ತಂದೆ-ತಾಯಿ ಬಳಿ ಬಂದಿರುವ ವಿಷಯ ತಿಳಿದ ಸೌಮ್ಯಾ ಸ್ಕೂಟಿಯಲ್ಲೇ ನೂರು ಕಿಲೋಮೀಟರ್ ಪ್ರಯಾಣ ಮಾಡಿ ಬಂದಿದ್ದಳು. ನೆಲ್ಯಾಡಿಯಲ್ಲಿ ತಾಯಿ ಜೊತೆ ಕಾರಿನಲ್ಲಿ ತೆರಳುತ್ತಿದ್ದ ಸುದೀಪ್​​ರನ್ನು ಅಡ್ಡಗಟ್ಟಿ, ಗ್ರಾಮಸ್ಥರ ಎದುರು ಗಲಾಟೆ ಮಾಡಿದ್ದಳು ಬಳಿಕ ಪತಿ ಕಾರು ಹತ್ತಿದ್ದ ಈಕೆ ಅರ್ಧ ದಾರಿಯಲ್ಲೇ ತಾಯಿಯನ್ನು…

Read More

ಬೆಂಗಳೂರಿನಲ್ಲಿ ದೇಹಕ್ಕೆ ಧರಿಸಿದ್ದ ಬಾಡಿ ಕ್ಯಾಮೆರಾವನ್ನು ಆಫ್ ಮಾಡಿ ವಾಹನಗಳನ್ನು ತಡೆದು ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇರೆಗೆ 3 ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಬೆಂಗಳೂರಿನ ಹೈಗ್ರೌಂಡ್ಸ್ ಸಂಚಾರಿ ಪೊಲಿಸ್ ಠಾಣೆಯ ಮೂವರು ಸಿಬ್ಬಂದಿ ಬಾಡಿ ಕ್ಯಾಮೆರಾ ಆಫ್ ಮಾಡಿಕೊಂಡು ವಿನಾ ಕಾರಣ ಬೈಕ್ ನಿಲ್ಲಿಸಿ ಹಣ ವಸೂಲಿ ಮಾಡಿದ ಆರೋಪ ಕೇಳಿಬಂದಿದ್ದು, ಸಂಬಂಧ ಇದೀಗ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಹೈ ಗ್ರೌಂಡ್ ಸಂಚಾರಿ ಪೊಲೀಸ್ ಠಾಣೆಯ ಎಎಸ್ ಐ ಸುರೇಶ್ ,ಕಾನ್ಸ್ ಟೇಬಲ್ ಗಳಾದ ಪ್ರಶಾಂತ್ ಹಾಗೂ ಸಾದಿಕ್ ಅವರನ್ನ ಸಸ್ಪೆಂಡ್ ಮಾಡಿ ಪಶ್ಚಿಮ ವಿಭಾಗ ಸಂಚಾರಿ ಡಿಸಿಪಿ ಅನೂಪ್ ಶೆಟ್ಟಿ ಆದೇಶ ಹೊರಡಿಸಿದ್ದಾರೆ. ಸ್ಮಾರ್ಟ್‌ ಟ್ರಾಫಿಕ್‌ ನಿರ್ವಹಣಾ ವ್ಯವಸ್ಥೆ ಜಾರಿಗೆ ಕಾನೂನು ಸುವ್ಯವಸ್ಥೆ ಹಾಗೂ ಮೇಲ್ವಿಚಾರಣೆ ದೃಷ್ಟಿಯಿಂದ ಕರ್ತವ್ಯನಿರತ ಪೊಲೀಸ್‌ ಸಿಬ್ಬಂದಿ ಬಾಡಿ ಕ್ಯಾಮೆರಾ (body worn camera) ಬಳಸುವುದು ಕಡ್ಡಾಯವಾಗಿದೆ. ಆದರೆ ಈ ಮೂವರು ಸಿಬ್ಬಂದಿಗಳು ಬಾಡಿ ಕ್ಯಾಮ್ ಆಫ್ ಮಾಡಿಕೊಂಡು ವಿನಾ ಕಾರಣ ಬೈಕ್…

Read More

ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟು ವಿದ್ಯಾರ್ಥಿಗಳಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿಯ ಕಳಿಯ ಗ್ರಾಮದ ಗೇರುಕಟ್ಟೆ ಬಳಿ ಇಂದು ಬೆಳಗ್ಗೆ ನಡೆದಿದೆ. ಗಾಯಾಳುಗಳನ್ನು ನ್ಯಾಯತರ್ಪು ಗ್ರಾಮದ ಕಲೈತೊಟ್ಟು ನಿವಾಸಿ ನಾಗರಾಜ ಹಾಗೂ ರೂಪಾ ದಂಪತಿಯ ಪುತ್ರಿಯರು ಎಂದು ಗುರುತಿಸಲಾಗಿದೆ. ಈ ಪೈಕಿ ಓರ್ವೆ ಎಸೆಸೆಲ್ಸಿ ವಿದ್ಯಾರ್ಥಿನಿಯಾಗಿದ್ದು, ಇಂದು ಪರೀಕ್ಷೆಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಇನ್ನೊಬ್ಬಳು ಅವಳ ಸಹೋದರಿಯಾಗಿದ್ದು, ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾಳೆ. ಇವರಿಬ್ಬರು ಇಂದು ಬೆಳಗ್ಗೆ ಗೇರುಕಟ್ಟೆಯಿಂದ ಬೆಳ್ತಂಗಡಿಯ ಶಾಲೆಗೆ ತೆರಳಲು ಕೆಎಸ್ಸಾರ್ಟಿಸಿ ಬಸ್ ಹತ್ತಿದ್ದು, ರೇಷ್ಮೆ ರೋಡ್ ಎಂಬಲ್ಲಿ ತಲುಪಿದಾಗ ಏಕಾಏಕಿ ಬಸ್ಸಿನ ಬಾಗಿಲಿನ ತೆರೆಯಲ್ಪಟ್ಟಿದೆ. ಈ ವೇಳೆ ಇವರಿಬ್ಬರು ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಗಂಭೀರ ಗಾಯಗೊಂಡಿರುವ ಅವರಿಬ್ಬರನ್ನು ಚಿಕಿತ್ಸೆಗಾಗಿ ಬೆಳ್ತಂಗಡಿ ಹಾಗೂ ಉಜಿರೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Read More

ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ. ಮಾಹಿತಿಯ ಪ್ರಕಾರ, ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿರುವ ಸಾರ್ಥಕ್ ಎಂಬಾತ ಅತ್ತಾವರದ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿರುವ ತನ್ನ ಗೆಳೆಯನನ್ನು ಭೇಟಿಯಾಗಲು ಬಂದಿದ್ದಾನೆ. ಕಟ್ಟಡದ ಭದ್ರತಾ ಸಿಬ್ಬಂದಿಯ ಬಳಿ ಸಹಿ ಮಾಡಿ 12ನೇ ಮಹಡಿಗೆ ತೆರಳಿದ್ದಾನೆ ಎನ್ನಲಾಗಿದೆ. ಅಲ್ಲಿಗೆ ತೆರಳಿದ ನಂತರ ತನ್ನ ಮೊಬೈಲ್ ಫೋನ್ ಅನ್ನು ಕೆಳಗೆ ಇಟ್ಟು, ಮೇಲ್ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿದ ತಕ್ಷಣ ಪಾಂಡೇಶ್ವರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ

Read More

ಕಾರ್ಕಳ : ಕರ್ತವ್ಯನಿರತ ಪೊಲೀಸ್ ಅಧಿಕಾರಿಗಳ ಮೇಲೆ ಕಾರು ಹರಿಸಲು ಯತ್ನಿಸಿ ಕೊಲೆ ಯತ್ನ ನಡೆಸಿದ ಹಾಗೂ ಸಂಘಟಿತ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಡೂರು ನಿವಾಸಿ ಸುದರ್ಶನ ಶೆಟ್ಟಿ (29), ಕೃತವ್ಯ ಶೆಟ್ಟಿ (27), ಅರುಣ್ ಶೆಟ್ಟಿ (29), ತೇಜಸ್ (28) ಮತ್ತು ಪ್ರಜ್ವಲ್ ಶೆಟ್ಟಿ (29) ಬಂಧಿತರು. ಕಾರ್ಕಳದ ಹಂಚಿಕಟ್ಟೆ ಬಳಿ ತಪಾಸಣೆ ನಡೆಸುತ್ತಿದ್ದ ಪಿಎಸ್‌ಐ ಪ್ರಸನ್ನ ಎಂ.ಎಸ್. ಅವರ ತಂಡ ಕಪ್ಪು ಬಣ್ಣದ ಕಾರನ್ನು ನಿಲ್ಲಿಸಲು ಸೂಚಿಸಿದಾಗ, ಆರೋಪಿಗಳು ಪೊಲೀಸರ ಮೇಲೆ ಕಾರು ಹರಿಸಲು ಯತ್ನಿಸಿ ಪರಾರಿಯಾಗಿದ್ದರು. ಇದೇ ವಾಹನ ವನ್ನು ಶಿರ್ವ ಗ್ರಾಮದ ಪದವು ಬಳಿ ತಡೆದ ಪಿಎಸ್‌ಐ ಮಂಜುನಾಥ ಮರಬಾಡ ಅವರ ಮೇಲೂ ಚಾಲಕ ಕಾರು ಹತ್ತಿಸಲು ಯತ್ನಿಸಿದ್ದಾನೆ. ಅಂತಿಮವಾಗಿ ಶಿರ್ವ ಪಟ್ಟಣದಲ್ಲಿ ಪೊಲೀಸರು ಹರಸಾಹಸ ಪಟ್ಟು ವಾಹನವನ್ನು ತಡೆದು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ವಿಚಾರಣೆ ನಡೆಸಿದಾಗ ಇವರು ದೊಡ್ಡ ಮಟ್ಟದ ಕ್ರಿಕೆಟ್ ಬೆಟ್ಟಿಂಗ್ ಜಾಲದಲ್ಲಿ ತೊಡಗಿರುವುದು…

Read More

ಮಂಗಳೂರಿನ ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದ ವತಿಯಿಂದ ಆಯೋಜಿಸಲಾಗಿದ್ದ ಈ ಪಾದಯಾತ್ರೆಯು ಕ್ರೈಸ್ತ ಧರ್ಮದ ‘ಪವಿತ್ರ ವಾರ’ಕ್ಕೆ ಭವ್ಯ ಚಾಲನೆ ನೀಡಿತು. ಸಾವಿರಾರು ಭಕ್ತರು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡ ಈ ಯಾತ್ರೆಯು ಕೇವಲ ಒಂದು ಸಂಪ್ರದಾಯವಾಗಿರದೆ, ವಿಶ್ವಶಾಂತಿಯ ಆಶಯದೊಂದಿಗೆ ನಡೆದ ಒಂದು ಶಕ್ತಿಯುತ ಪ್ರಾರ್ಥನಾ ಸಭೆಯಾಗಿತ್ತು. ಸಂಜೆ 5:00 ಗಂಟೆಗೆ ಪುಣ್ಯಕ್ಷೇತ್ರದ ಆವರಣದಿಂದ ಆರಂಭವಾದ ಈ ಯಾತ್ರೆಯಲ್ಲಿ ಸಾವಿರಾರು ಕ್ರೈಸ್ತ ಭಕ್ತಾದಿಗಳು ಪಾಲ್ಗೊಂಡು, ಸುಮಾರು ಎರಡು ಗಂಟೆಗಳ ಕಾಲ ಪ್ರಾರ್ಥನಾಪೂರ್ವಕವಾಗಿ ಸಾಗಿ ಮರೋಳಿಯ ಹೋಲಿ ಹಿಲ್ ತಲುಪಿದರು. ಈ ಭವ್ಯ ಮೆರವಣಿಗೆಯ ಉದ್ದಕ್ಕೂ ಭಕ್ತರು ಯೇಸುಕ್ರಿಸ್ತರ ಬಂಧನದಿಂದ ಮರಣದವರೆಗಿನ ಅಂತಿಮ ಕ್ಷಣಗಳನ್ನು ನೆನಪಿಸುವ ಶಿಲುಬೆಯ ಹಾದಿಯನ್ನು ಭಕ್ತಿಯಿಂದ ನೆರವೇರಿಸಿದರು. ಭಕ್ತಿ ಮತ್ತು ಏಕತೆಯ ಸಂಕೇತವಾಗಿ ಒಂದು ಬೃಹತ್ ಶಿಲುಬೆಯನ್ನು ಹೊತ್ತು ಸಾಗಿದ ಭಕ್ತರು, ಜಪಸರವನ್ನು ಪಠಿಸುತ್ತಾ ವಿಶೇಷವಾಗಿ ಮಧ್ಯಪ್ರಾಚ್ಯದ ಸಂಘರ್ಷದ ಪರಿಸ್ಥಿತಿಯಲ್ಲಿ ವಿಶ್ವಶಾಂತಿ ನೆಲೆಸಲಿ ಎಂದು ಪ್ರಾರ್ಥಿಸಿದರು. ಮಂಗಳೂರು ನಗರದ ಮುಖ್ಯ ರಸ್ತೆಯಲ್ಲಿ ಇಂತಹ ಸಾರ್ವಜನಿಕ ಪಾದಯಾತ್ರೆ ನಡೆದಿದ್ದು ಇದೇ ಮೊದಲು ಎಂದು…

Read More

ಬೆಳ್ತಂಗಡಿ: ಕಳೆದ ತಿಂಗಳಷ್ಟೇ ಹಸೆಮಣೆ ಏರಿದ್ದ ಯುವ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರನ್ನು ಪುತ್ತೂರು ತಾಲೂಕಿನ ನೆಲ್ಯಾಡಿ ಮೂಲದ, ಪ್ರಸ್ತುತ ಬೆಳ್ತಂಗಡಿಯ ಲಾಯಿಲ ಗ್ರಾಮದ ಕರ್ನೋಡಿಯಲ್ಲಿರುವ ಅಜ್ಜನ ಮನೆಯಲ್ಲಿ ವಾಸವಿದ್ದ ಬಿ. ಸುದೀಪ್ ರೈ (36) ಎಂದು ಗುರುತಿಸಲಾಗಿದೆ.ಮಾರ್ಚ್ 17 ರಂದು ಸುದೀಪ್ ರೈ ಅವರು ಪತ್ನಿಯ ಮನೆಯಲ್ಲಿ ಆಹಾರದ ಜೊತೆಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ತಿಳಿದುಬಂದಿದೆ. ತಕ್ಷಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಕೆಲವು ದಿನಗಳಿಂದ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಅವರು, ಭಾನುವಾರ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.ಸುದೀಪ್ ರೈ ಅವರು ಪುತ್ತೂರು ಉಪನೋಂದಣಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಕಳ ತಾಲೂಕಿನ ಕಾಜೆ ನಿವಾಸಿಯನ್ನ ಫೆಬ್ರವರಿ 17 ರಂದು ಕುಟುಂಬದವರಿಗೆ ತಿಳಿಸದೆ ರಿಜಿಸ್ಟರ್ ಮ್ಯಾರೇಜ್ ಆಗಿದ್ದರು ಎನ್ನಲಾಗಿದೆ.

Read More

ಮಂಗಳೂರು: ತೊಕ್ಕೊಟ್ಟು ಬಳಿ ಇತ್ತೀಚೆಗೆ ನಡೆದ ಆರಿಫ್ ಕೊಲೆ ಪ್ರಕರಣದ ಮುಂದಿನ ತನಿಖೆಯನ್ನು ಸಿಸಿಬಿ ಎಸಿಪಿ ತಂಡಕ್ಕೆ ವರ್ಗಾಯಿಸಲಾಗಿದೆ. ಪ್ರಕರಣದಲ್ಲಿ ಆರು ಮಂದಿ ಆರೋಪಿಗಳು ಭಾಗಿಯಾಗಿರುವುದನ್ನ ಗುರುತಿಸಲಾಗಿದ್ದು, ಆರೋಪಿಗಳು ನಿರಂತರವಾಗಿ ಸ್ಥಳ ಬದಲಾವಣೆ ಮಾಡುತ್ತಿರುವುದರಿಂದ, ತನಿಖಾ ತಂಡಗಳಿಗೆ ಅವರನ್ನು ತಕ್ಷಣವೇ ಬಂಧಿಸುವುದು ಸವಾಲಾಗಿ ಪರಿಣಮಿಸಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ. “ತನಿಖೆಯ ಸಮಯದಲ್ಲಿ ನಮ್ಮ ತಂಡಗಳು ಸಂಪೂರ್ಣ ಸಂಚು ಮತ್ತು ಘಟನೆಗಳ ಸರಣಿಯನ್ನು ಮರುನಿರ್ಮಾಣ ಮಾಡಿದ್ದು, ಈ ವೇಳೆ ಪ್ರಕರಣದಲ್ಲಿ ಇನ್ನೂ ಕೆಲವು ವ್ಯಕ್ತಿಗಳು ಭಾಗಿಯಾಗಿರುವುದನ್ನು ಪತ್ತೆಹಚ್ಚಿವೆ. ಅಪರಾಧ ಎಸಗಲು ಅಥವಾ ಆರೋಪಿಗಳು ತಪ್ಪಿಸಿಕೊಳ್ಳಲು ಮತ್ತು ಅಡಗಿಕೊಳ್ಳಲು ಸಹಾಯ ಮಾಡಿದ ಶಂಕೆಯಿರುವ ವ್ಯಕ್ತಿಗಳನ್ನು ಪ್ರಸ್ತುತ ವಿಚಾರಣೆ ನಡೆಸಲಾಗುತ್ತಿದೆ. ಅವರ ಪಾತ್ರ ದೃಢಪಟ್ಟಲ್ಲಿ, ಅವರನ್ನೂ ಸಹ ಬಂಧಿಸಲಾಗುವುದು” ಎಂದು ತಿಳಿಸಿದರು.”ಆರೋಪಿಗಳಿಗೆ ಯಾವುದೇ ರೀತಿಯಲ್ಲಿ ಸಹಾಯ ಮಾಡುವವರು ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 249(a) ಅಡಿಯಲ್ಲಿ ಶಿಕ್ಷೆಗೆ ಅರ್ಹರಾಗಿರುತ್ತಾರೆ. ಈ ಹಿಂದಿನಂತೆಯೇ, ಈ ನಿಯಮವನ್ನು ಉಲ್ಲಂಘಿಸುವವರ ವಿರುದ್ಧ…

Read More