Author: main-admin

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರ ಆಯ್ಕೆಗೆ ಚುನಾವಣೆ ಸೆ. 9ರಂದು ಮಧ್ಯಾಹ್ನ 12 ಗಂಟೆಗೆ ನಿಗದಿಯಾಗಿದೆ. ಇನ್ನು ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಚುನಾವಣೆ ನಡೆಯಲಿದೆ ಎಂದು ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ತಿಳಿಸಿದ್ದಾರೆ. ಕಳೆದ ಮಾರ್ಚ್‌ 2ರಂದು ನಡೆಯಬೇಕಾಗಿದ್ದ ಚುನಾವಣೆಯು ಸುಪ್ರೀಂ ಕೋರ್ಟ್‌ ಆದೇಶವೊಂದರ ಗೊಂದಲದಿಂದ ಮುಂದೂಡಿಕೆಯಾಗಿತ್ತು. ಹೀಗಾಗಿ ಒಂದು ವರ್ಷ ಅವಧಿ ಪೂರ್ಣಗೊಳಿಸಿದ್ದ ಪ್ರೇಮಾನಂದ ಶೆಟ್ಟಿ ಅವರೇ ಮೇಯರ್ ಸ್ಥಾನದಲ್ಲಿ ಹಾಗೂ ಸುಮಂಗಳಾ ರಾವ್ ಉಪಮೇಯರ್ ಸ್ಥಾನದಲ್ಲಿ ಮುಂದುವರಿದಿದ್ದರು. ಹಾಲಿ ಮೇಯರ್ ಅವಧಿ ಮುಂದುವರಿದಿರುವ ಕಾರಣ ಹಾಲಿ ಬಿಜೆಪಿ ಆಡಳಿತದ ಕೊನೆಯ ಮೇಯರ್ ಅವರ ಅಧಿಕಾರವಧಿ ಅಷ್ಟು ದಿನ ಕಡಿತವಾಗಲಿದೆ. 23ನೇ ಅವಧಿಗೆ ಮೇಯರ್ ಸ್ಥಾನಕ್ಕೆ ಸಾಮಾನ್ಯ, ಉಪ ಮೇಯರ್ ಸ್ಥಾನಕ್ಕೆ ಹಿಂದುಳಿದ ವರ್ಗದ ಮಹಿಳೆಗೆ ಮೀಸಲಾತಿ ನಿಗದಿಯಾಗಿತ್ತು. ಈ ನಡುವೆ ಆಗಸ್ಟ್ 24ರಂದು ಪಾಲಿಕೆಯ 24ನೇ ಅವಧಿಯ ಮೀಸಲಾತಿ ಪ್ರಕಟಗೊಂಡಿದೆ.…

Read More

ಉಪ್ಪಿನಂಗಡಿ: ಸರಕಾರಿ ಮೀಸಲು ರಕ್ಷಿತಾರಣ್ಯದಿಂದ ಮರ ಕಡಿದು ಅಲ್ಲೇ ತುಂಡುಗಳನ್ನಾಗಿ ಮಾಡಿ ಸಾಗಾಟಕ್ಕೆ ಸಿದ್ಧತೆ ಮಾಡಿಕೊಂಡಿದ್ದ ಪ್ರಕರಣ ವನ್ನು ಪತ್ತೆಹಚ್ಚಿದ ಉಪ್ಪಿನಂಗಡಿ ವಲಯ ಅರಣ್ಯ ಇಲಾಖಾ ಸಿಬ್ಬಂದಿಗಳು, ಬೆಳೆಬಾಳುವ ದಿಮ್ಮಿ ಸಹಿತ ಮೂವರು ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಪದ್ಮುಂಜ ನಿವಾಸಿ ಗಳಾದ ದಿನೇಶ್, ಉಮೇಶ್ ಗೌಡ ಹಾಗೂ ಹೇಮಂತ್ ಎಂದು ಗುರುತಿಸಲಾಗಿದೆ. ಬಂಧಿತರು ಕಣಿಯೂರು ಗ್ರಾಮದ ಮಲೆಂಗಲ್ಲು ಎಂಬಲ್ಲಿ ರುವ ಸರಕಾರಿ ಮೀಸಲು ರಕ್ಷಿತಾರಣ್ಯದಿಂದ ಬೃಹತ್ ಗಾತ್ರದ ಕಲ್ಬಾಜಿ ಮರವನ್ನು ಕಡಿಯು ತ್ತಿರುವ ಬಗ್ಗೆ ಉಪ್ಪಿನಂಗಡಿ ವಲಯ ಅರಣ್ಯಾ ಧಿಕಾರಿ ಮಧುಸೂದನ್‍ರವರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಅರಣ್ಯ ಸಿಬ್ಬಂದಿ ಮರದ ದಿಮ್ಮಿ ಸಮೇತ ಮೂವರನ್ನು ಬಂಧಿಸಿದ್ದಾರೆ. ಆರೋಪಿಗಳು ಮರವನ್ನು ಯಂತ್ರದ ಮೂಲಕ ಉರುಳಿಸಿ, ಬಳಿಕ ಕಾಡಿನ ಒಳಗಡೆ ಅವುಗಳನ್ನು ದಿಮ್ಮಿಗಳನ್ನಾಗಿ ಮಾಡಿ ಸಾಗಾಟ ಮಾಡಲು ತಯಾರಿ ನಡೆಸಿಕೊಂಡಿದ್ದು, ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ಯಂತ್ರಗಳ ಸಹಿತ ಮರಗಳ ದಿಮ್ಮಿಗಳನ್ನು ವಶಕ್ಕೆ…

Read More

ಉಡುಪಿ: ಉಡುಪಿಯಲ್ಲಿ ಹಲವು ವರ್ಷಗಳಿಂದ ಮೆಕ್ಯಾನಿಕ್ ಆಗಿ ಜೀವನ ನಿರ್ವಹಿಸುತ್ತಿದ್ದ ಬಾದಾಮಿ ಮೂಲದ ಅಯ್ಯಪ್ಪ (28) ಎಂಬವರು ಗುರುವಾರ ಹಠಾತ್ ಹೃದಯಾಘಾತದಿಂದ ಮೃತ ಪಟ್ಟಿದ್ದು, ಸಾಂತ್ವನ ಹೇಳಬೇಕಾದ ಬಾಂಧವರು ಮೃತನ ಪತ್ನಿ ಹಾಗೂ ಮಗುವನ್ನು ತಿರಸ್ಕರಿಸಿದ ಅಮಾನವೀಯ ಘಟನೆ ನಡೆದಿದೆ.ಈ ಬಗ್ಗೆ ಮಾಹಿತಿ ಪಡೆದ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರು ಸ್ಥಳಕ್ಕೆ ಧಾವಿಸಿ ಮೃತನ ಪತ್ನಿ ಹಾಗೂ ಆಕೆಯ 20 ದಿನಗಳ ಮಗುವನ್ನು ಉಡುಪಿಯ ಸಖಿ ಸೆಂಟರ್‌ಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಮೃತ ಅಯ್ಯಪ್ಪ ಅವರ ಪತ್ನಿಗೆ ಹೆರಿಗೆಯಾಗಿ 20 ದಿನಗಳಷ್ಟೇ ಕಳೆದಿದ್ದು, ವಿಧಿಯ ಲೀಲೆಗೆ ಕುಟುಂಬ ತತ್ತರಿಸಿದೆ. ಪ್ರಕರಣದ ಹಿನ್ನಲೆ : ಅಯ್ಯಪ್ಪ ಅವರು ಉಡುಪಿಯಲ್ಲಿ ವೃತ್ತಿಯಲ್ಲಿ ಮೆಕ್ಯಾನಿಕ್ ಆಗಿದ್ದು, ಗುರುವಾರ ಬೆಳಗ್ಗೆ ಎದೆ ನೋವು ಕಾಣಿಸಿಕೊಂಡಾಗ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ. ಅಯ್ಯಪ್ಪ ಅವರು ಎರಡು ವರ್ಷಗಳ ಹಿಂದೆ ಗಂಗಾವತಿಯ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದರು. ಇವರ ಮದುವೆಗೆ ಎರಡೂ ಕಡೆಯಿಂದಲೂ ತೀವ್ರ…

Read More

ಕಡಬ: ಮರಳು ಸಾಗಿಸುವ ಟಿಪ್ಪರ್ ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿ ತಾಯಿ ಮತ್ತು ಮಗ ಅದೃಷ್ಟವಶಾತ್‌ ಪಾರಾದ ಘಟನೆ ನೆಲ್ಯಾಡಿಯ ಗೋಳಿತೊಟ್ಟು ಗ್ರಾಮದ ನೂಜೋಲು ಎಂಬಲ್ಲಿ ನಡೆದಿದೆ. ನಿನ್ನೆ ಮಧ್ಯಾಹ್ನ ಉಪ್ಪಿನಂಗಡಿ ಕಡೆಯಿಂದ ನೂಜೋಲು ನಿವಾಸಿ ಕುಶಾಲಪ್ಪ ಹಾಗೂ ಅವರ ತಾಯಿ ಸ್ಕೂಟಿಯಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಅತಿವೇಗದಲ್ಲಿ ಬಂದ ಮರಳು ಸಾಗಿಸುವ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಟಿಪ್ಪರ್ ನ ಅಡಿಗೆ ಬಿದ್ದಿದ್ದ ಮಹಿಳೆಯನ್ನು ಎರಡು ಕ್ರೈನ್ ಗಳ ಸಹಾಯದಿಂದ ಟಿಪ್ಪರನ್ನು ಮೇಲೆತ್ತಿ ಮಹಿಳೆಯನ್ನು ಹೊರತೆಗೆಯಲಾಯಿತು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಹಾಗೂ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿದ್ದರು. ಘಟನೆಯಲ್ಲಿ ತಾಯಿ-ಮಗ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Read More

ಕಡಬ: ಅನಾರೋಗ್ಯ ಪೀಡಿತ ವೃದ್ಧೆಯನ್ನು ಹೊತ್ತುಕೊಂಡು ಸಾಗಾಟ ನಡೆಸಿದ ಪ್ರಕರಣದಲ್ಲಿ ಕಡಬ ಸುದ್ದಿಯಾಗಿತ್ತು. ಇದೀಗ ಅದೇ ಮನೆಯಿಂದ ಅಡಿಕೆಯನ್ನು ಜೀಪಿನಲ್ಲಿ ಸಾಗಿಸಿರುವ ಬಗ್ಗೆ ಆರೋಪಿಸಲಾಗಿದೆ. ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಬಳಕ್ಕ ಎಂಬಲ್ಲಿ ರಸ್ತೆ ಸರಿ ಇಲ್ಲದೆ ಕಮಲ ಎಂಬ 70 ವರ್ಷದ ವೃದ್ಧೆಯನ್ನು ಬಡಿಗೆಗೆ ಬಟ್ಟೆ ಕಟ್ಟಿ ಆಸ್ಪತ್ರೆಗೆ ಸಾಗಾಟ ನಡೆಸಿದ್ದರು. ರಸ್ತೆ ಸಂಪರ್ಕ ವ್ಯವಸ್ಥಿತವಾಗಿಲ್ಲ ಎಂಬ ಆರೋಪ ವ್ಯಕ್ತವಾಗಿ ರಾಜ್ಯವಾಪಿ ಸುದಿಯಾಗಿತ್ತು.ಅದರೆ ನಿನ್ನೆ ವೃದ್ಧೆಯ ಮನೆಯಿಂದಲೇ ಅಡಿಕೆಯನ್ನು ಜೀಪಿನಲ್ಲಿ ಸಾಗಾಟ ನಡೆಸಿದ್ದಾರೆಂದು ಕೆಲವರು ತರಾಟೆಗೆ ತೆಗೆದುಕೊಂಡರು. 2-3 ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದರೂ ಅಡಿಕೆ ಸಾಗಾಟಕ್ಕೆ ಟೂ ವೀಲ್‌ ಜೀಪು ಬಳಿಸಿದ್ದೀರಾ,ಮೊನ್ನೆ ವೃದ್ಧೆಯನ್ನು ಹೊತ್ತುಕೊಂಡು ಸಾಗಿಸುತ್ತಾ ರಸ್ತೆ ಸರಿಯಿಲ್ಲ ಎಂದು ಅಪಪ್ರಚಾರ ನಡೆಸಿದ್ದೀರಾ ಎಂದು ಪ್ರಶ್ನಿಸುತ್ತಿರುವುದು ವಿಡಿಯೋದಲ್ಲಿದೆ. ಇದು ಸ್ಥಳೀಯ ಶಾಸಕರ ಹಾಗೂ ನೂಜಿಬಾಳ್ತಿಲ ಗ್ರಾ.ಪಂ. ಬಗ್ಗೆ ತೇಜೋವಧೆ ನಡೆಸಲು ಮೊನ್ನೆ ನಡೆಸಲಾದ ವ್ಯವಸ್ಥಿತ ಸಂಚು ಎಂದು ಸ್ಥಳೀಯ ಗ್ರಾ.ಪಂ.ಸದಸ್ಯರು ಆರೋಪಿಸಿದ್ದಾರೆ.

Read More

ಸುಳ್ಯ : ಬೆಳ್ಳಾರೆಯ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಮಾಡಿದ ಹತ್ತು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದು, ಇದೀಗ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ) ಕೈಗೆತ್ತಿಕೊಂಡಿದೆ. ಎನ್.ಐ.ಎ ತನಿಖೆಗೆ ಸಹಕರಿಸಲು ಒಂದು ತಿಂಗಳವರೆಗೆ ಓಓಡಿ ಮೂಲಕ ಬೆಂಗಳೂರು ಎನ್.ಐ.ಎ ವಿಭಾಗದ ಅಧಿಕಾರಿಗಳ ಜೊತೆ ಪ್ರಕರಣ ಭೇದಿಸಲು ಪ್ರಮುಖ ದಕ್ಷ ಪೊಲೀಸ್ ಅಧಿಕಾರಿಗಳನ್ನು ಎಡಿಜಿಪಿ ಡಾ.ಎಮ್.ಎ.ಸಲೀಂ ಐಪಿಸ್ ಅವರು ಬುಧವಾರ ಆದೇಶ ಹೊರಡಿಸಿದ್ದು ತಕ್ಷಣ ಎನ್.ಐ.ಎ ಬೆಂಗಳೂರು ಕಛೇರಿಗೆ ವರದಿ ಮಾಡಿಕೊಳ್ಳಲು ತಿಳಿಸಿದ್ದಾರೆ. ಎನ್.ಐ.ಎ ಗೆ 9 ಮಂದಿ ಪೊಲೀಸರು ನೇಮಕ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ ಐ ಪ್ರಸನ್ನ , ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ ಐ ಉದಯ ರವಿ, ವೇಣೂರು ಠಾಣೆಯ ಹೆಡ್ ಕಾನ್ಟೇಬಲ್ ಪ್ರವೀಣ್.ಎಮ್, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಪ್ರವೀಣ್ ರೈ ಮತ್ತು ಆದ್ರಾಮ, ವಿಟ್ಲ ಪೊಲೀಸ್ ಠಾಣೆಯ ಹೆಡ್ ಕಾನ್ಸ್…

Read More

ಶಿರೂರು: ರೈಲು ಢಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ಮೃತಪಟ್ಟ ಘಟನೆ ಶಿರೂರು ಗ್ರಾಮದ ನಿರೋಡಿ ಎಂಬಲ್ಲಿ ಗುರುವಾರ ಮದ್ಯಾಹ್ನ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ 17ವರ್ಷ ಪ್ರಾಯದ ಸಂಪತ್ ಪೂಜಾರಿ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಹಾಗೂ ಬೈಂದೂರು ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

Read More

ಪುತ್ತೂರು: ಅನ್ಯ ಕೋಮಿನ ಯುವಕ-ಯುವತಿಯರ ಬಗ್ಗೆ ಪೊಲೀಸರಿಗೆ ಹಿಂದೂ ಸಂಘಟನೆ ಮಾಹಿತಿ ನೀಡಿರುವ ಘಟನೆ ಪುತ್ತೂರಿನ‌ ನೆಲ್ಲಿಕಟ್ಟೆ ಬಳಿ ನಡೆದಿದೆ. ನೆಲ್ಲಿಕಟ್ಟೆ ಫಿಜಾ ಹಟ್ ನಲ್ಲಿ ಅನ್ಯಕೋಮಿನ ಯುವಕ ಯುವತಿಯರು ಜೊತೆಗಿದ್ದರು.ಇದನ್ನು ಕಂಡು ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಜೊತೆಗಿದ್ದವರಲ್ಲಿ ಹಿಂದೂ,ಮುಸ್ಲಿಂ,ಕ್ರಿಶ್ಚಿಯನ್ ಯುವತಿಯರಿದ್ದರು ಎನ್ನಲಾಗಿದೆ.ಎಲ್ಲರೂ ಸರ್ವಧರ್ಮದವರಾಗಿದ್ದರು.ಆದರೆ ಇದನ್ನು ವಿರೋಧಿಸಿ ಹಿಂದೂ ಸಂಘಟನೆ ಪೊಲೀಸರಿಗೆ ಮಾಹಿತಿ ನೀಡಿದೆ ಎಂದು ವರದಿಯಾಗಿದೆ. ಜೊತೆಗಿದ್ದವರು ಸ್ಥಳೀಯರು ಎನ್ನಲಾಗಿದ್ದು, ಸ್ಥಳಕ್ಕೆ ಪೊಲೀಸರು ತೆರಳಿ ವಿಚಾರಣೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ಈ ಕುರಿತು ಹೆಚ್ಚಿನ ಮಾಹಿತಿ‌ ಲಭ್ಯವಾಗಬೇಕಿದೆ..

Read More

ಬೆಳ್ತಂಗಡಿ: ವಿಷ್ಣುಮೂರ್ತಿ ದೇವಸ್ಥಾನಕ್ಕೆ ಕಳ್ಳರು ನುಗ್ಗಿ ಕಾಣಿಕೆ ಡಬ್ಬಿ ಒಡೆದು ಹಣ ದೋಚಿಕೊಂಡು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರುವಿನಲ್ಲಿ ನಡೆದಿದೆ. ಅಲ್ಲಿನ ಸಿ ಸಿ. ಟಿ ವಿ. ಡಿವಿಆರ್, ಮೋನಿಟರ್ ಸಮೇತ ಹಿಡಿದುಕೊಂಡು ಹೋಗಿದ್ದಾರೆ, ದೇವಾಲಯದ ಅರ್ಚಕರು ಇಂದು ಬೆಳಿಗ್ಗೆ ದೇವಸ್ಥಾನಕ್ಕೆ ಬಂದಾಗ ಬಾಗಿಲಿಗೆ ಬೀಗ ಒಡೆದು ಅರ್ಧ ಬಾಗಿಲು ತೆರೆದಿದ್ದು ಸಂಶಯ ಬಂದು ತಕ್ಷಣ ಆಡಳಿತ ಮಂಡಳಿಯ ಸದಸ್ಯರಿಗೆ ಮಾಹಿತಿ ನೀಡಿದಾಗ ಕಳ್ಳರು ನುಗ್ಗಿದ್ದು ಖಚಿತವಾಗಿದೆ. ತಕ್ಷಣ ವೇಣೂರು ಠಾಣೆಗೆ ಮಾಹಿತಿ ನೀಡಿ ಆರಕ್ಷಕ ಠಾಣೆಯ ಠಾಣಾಧಿಕಾರಿ ಸೌಮ್ಯ ಹಾಗೂ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾಹಿತಿ ಸಂಗ್ರಹಿಸಿ ಪ್ರಕರಣ ದಾಖಲಿಸಿದ್ದಾರೆ.ಬೆರಳಚ್ಚು ತಜ್ಞರು, ಶ್ವಾನದಳ ಬಂದು ಪರಿಶೀಲಿಸಿದೆ, ಈ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರಲ್ಲಿ ಠಾಣಾಧಿಕಾರಿ ಸೌಮ್ಯ ಕೆಲವು ಮುಂಜಾಗ್ರತೆಯ ಮಾಹಿತಿ ನೀಡಿ, ಈ ತನಿಖೆಯನ್ನು ಅತ್ಯಂತ ವೇಗವಾಗಿ ಬೇಧಿಸುವುದಾಗಿ ಭರವಸೆ ನೀಡಿದರು. ಈ ಹಿಂದೆಯೂ ಇದೇ ದೇವಸ್ಥಾನದಲ್ಲಿ ಕಳ್ಳತನ ನಡೆದು ದೇವರ ಉತ್ಸವ…

Read More

ಬೆಳ್ತಂಗಡಿ: ವ್ಯಕ್ತಿಯೋರ್ವರು ಮನೆ ಸಮೀಪದ ಬಾವಿಯಲ್ಲಿ ಅಕಸ್ಮಿಕವಾಗಿ ಬಿದ್ದಿರುವ ಘಟನೆ ನಿನ್ನೆ ಮದ್ಯಾಹ್ನ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರುವಿನಲ್ಲಿ ನಡೆದಿದೆ. ಗಾಂಧಿನಗರ ಕಾಫಿನಡ್ಕ ತೆಂಕಕಾರಂದೂರು ನಿವಾಸಿ ರಮಾನಂದ(42) ಮೃತ ದುರ್ದೈವಿ. ರಮಾನಂದರು ಮನೆಯಲ್ಲಿ ಇದ್ದರೂ ಕೂಡಾ ಸಂಜೆಯವರೆಗೆ ಮನೆಯಲ್ಲಿ ಕಾಣಿಸಿಕೊಂಡಿರಲಿಲ್ಲ. ಇದರಿಂದ ಅತಂಕಗೊಂಡ ಮನೆ ಮಂದಿ ಹುಡುಗಾಟ ನಡೆಸಿದೆರೆನ್ನಲಾಗಿದೆ. ರಾತ್ರಿ ವೇಳೆ ರಮಾನಂದರ ಚಪ್ಪಲಿ ಬಾವಿ ಸಮೀಪ ಸಿಕ್ಕಿದರಿಂದ ತಕ್ಷಣ ಗ್ರಾ.ಪಂ.ಅಧ್ಯಕ್ಷ ಹೇಮಂತ ಬೆಳ್ತಂಗಡಿ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಅಗ್ನಿಶಾಮಕದಳ ಬಂದು ಮೃತದೇಹವನ್ನು ಮೇಲಕ್ಕೆತ್ತಲಾಯಿತು. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಯಾಚರಣೆಯಲ್ಲಿ ಪ್ರಮುಖ ಅಗ್ನಿಶಾಮಕ ದಳದ ಸಿಬ್ಬಂದಿ ಕೃಷ್ಣ.ಪಿ. ನಾಯ್ಕ, ಚಾಲಕ ಲಿಂಗರಾಜ್ ಲಮಾಣಿ, ಉಸ್ಮಾನ್, ಮಹಮ್ಮದ್ ಜಂಬಗಿ, ಅರುಣ್ ಪಾಲ್ಗೊಂಡಿದ್ದರು.

Read More