ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಪ್ರೊ.ಕೆ.ಬೈರಪ್ಪ ಅವರು ಇಂದು(ಜುಲೈ 31) ಬೆಳಿಗ್ಗೆ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. 2014 ಜೂನ್ ನಿಂದ 2019 ಜೂನ್ ವರೆಗೆ ಮಂಗಳೂರು ವಿವಿಯಲ್ಲಿ ಕುಲಪತಿಗಳಾಗಿ ಕಾರ್ಯನಿರ್ವಹಿಸಿ ಬಳಿಕ ನಿವೃತ್ತಿ ಹೊಂದಿದ್ದರು. ನಂತರ ಆದಿ ಚುಂಚನ ಗಿರಿಯಲ್ಲಿ ಸಹ ಕುಲಪತಿಗಳಾಗಿ ಕಾರ್ಯನಿರ್ವಹಿಸುತ್ತಿದ್ದರು. ಬೆಳಗಾವಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದಕ್ಕೆ ತೆರಳಲು ವಿಮಾನ ನಿಲ್ದಾಣಕ್ಕೆ ಬಂದಿದ್ದ ವೇಳೆ ತೀವ್ರ ಹೃದಯಾಘಾತಗೊಂಡು ವಿಧಿವಶರಾಗಿದ್ದಾರೆ.
Author: main-admin
ಜೈಪುರ : ಮಹಾರಾಷ್ಟ್ರದ ಪಾಲ್ಘರ್ ರೈಲ್ವೆ ನಿಲ್ದಾಣದ ಬಳಿ ಚಲಿಸುತ್ತಿದ್ದ ಜೈಪುರ-ಮುಂಬೈ ಎಕ್ಸ್ಪ್ರೆಸ್ ರೈಲಿನಲ್ಲಿ ರೈಲ್ವೆ ರಕ್ಷಣಾ ಪಡೆ (RPF) ಪೇದೆ ಗುಂಡು ಹಾರಿಸಿದ್ದು, ಆರ್ಪಿಎಫ್ ಸಬ್ ಇನ್ಸ್ಪೆಕ್ಟರ್ ಸೇರಿದಂತೆ ಒಟ್ಟು ನಾಲ್ವರು ಸಾವನ್ನಪ್ಪಿದ್ದಾರೆ. ಬೆಳಗಿನ ಜಾವ 5 ಗಂಟೆಯ ಸುಮಾರಿಗೆ ಜೈಪುರದಿಂದ ಮುಂಬೈಗೆ ರೈಲು ಚಲಿಸುತ್ತಿದ್ದ ಸಂದರ್ಭ ಘಟನೆ ನಡೆದಿದೆ. ಪೇದೆ ಸಬ್ ಇನ್ಸ್ಪೆಕ್ಟರ್ ಜೊತೆ ತೀವ್ರ ವಾಗ್ವಾದದಲ್ಲಿ ತೊಡಗಿದ್ದಾನೆ. ಈ ವೇಳೆ ರೈಲಿನಲ್ಲಿದ್ದ ಕೆಲ ಪ್ರಯಾಣಿಕರು ಅವರಿಬ್ಬರ ಮಧ್ಯೆ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ಪೇದೆ ಕೋಪಗೊಂಡು ನಾಲ್ವರನ್ನು ಗುಂಡಿಕ್ಕಿ ಕೊಂದಿದ್ದಾನೆ ಎಂದು ವರದಿಗಳು ತಿಳಿಸಿವೆ. ಆರೋಪಿ ಆರ್ಪಿಎಫ್ ಪೇದೆಯನ್ನು ಚೇತನ್ ಸಿಂಗ್ ಎಂದು ಗುರುತಿಸಲಾಗಿದ್ದು, ಘಟನೆಯ ಬಳಿಕ ರೈಲಿನಿಂದ ಜಿಗಿದು ಪರಾರಿಯಾಗಲು ಯತ್ನಿಸಿದ ಆತನನ್ನು ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡು: ಮಣಿಪುರ ವಿಚಾರವಾಗಿ ವಿವಾದಾತ್ಮಕ ಹೇಳಿಕೆ ನೀಡಿದ ಖ್ಯಾತ ಸಾಹಿತಿ ಮತ್ತು ವಾಗ್ಮಿ ಬದ್ರಿ ಶೇಷಾದ್ರಿ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪೆರಂಬಲೂರು ಜಿಲ್ಲೆಯ ಕುನ್ನಂ ಬಳಿಯ ಕಡೂರಿನ ವಕೀಲ ಕವಿಅರಸು ನೀಡಿದ ದೂರಿನ ಮೇರೆಗೆ ಈ ಬಂಧನ ನಡೆದಿದೆ. ದೂರಿನಲ್ಲಿ ಬದ್ರಿ ಶೇಷಾದ್ರಿ ಅವರು ಜನಪ್ರಿಯ ಯೂಟ್ಯೂಬ್ ಚಾನೆಲ್ನಲ್ಲಿ ನೀಡಿದ ಹೇಳಿಕೆಯನ್ನು ಎತ್ತಿ ತೋರಿಸಿದ್ದಾರೆ. ನಾವು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರ ಕೈಗೆ ಬಂದೂಕು ಕೊಟ್ಟು ಮಣಿಪುರಕ್ಕೆ ಕಳುಹಿಸಬಹುದು. ಅವರು ಅಲ್ಲಿ ಶಾಂತಿಯನ್ನು ತರಬಹುದೇ?.. ಅದೊಂದು ಗುಡ್ಡಗಾಡು ಪ್ರದೇಶ. ಅಲ್ಲಿ ಕೊಲೆಗಳು ನಡೆಯುತ್ತದೆ ಎಂದು ಅವರು ಹೇಳಿದ್ದಾರೆ. ಈ ಹೇಳಿಕೆಗಳು ಶಾಂತಿ ಕದಡುವ, ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಮತ್ತು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳನ್ನು ಅವಮಾನಿಸುವಂತಿವೆ ಎಂದು ಆರೋಪಿಸಿ ದೂರು ಸಲ್ಲಿಸಿದ್ದಾರೆ. ಕುನ್ನಂ ಪೊಲೀಸರು ಬದ್ರಿ ಶೇಷಾದ್ರಿ ವಿರುದ್ಧ ಸೆಕ್ಷನ್ 153, 153 ಎ, ಮತ್ತು 505 (1) (ಬಿ) ಅಡಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ದಾಖಲಾದ…
ಮಂಗಳೂರು: ನಗರದ ಕುಂಟಿಕಾನ ಬಳಿ ಸಾರ್ವಜನಿಕರೊಂದಿಗೆ ಅಸಭ್ಯ ರೀತಿಯಲ್ಲಿ ವರ್ತಿಸುತ್ತಿದ್ದ ಹತ್ತಕ್ಕೂ ಅಧಿಕ ಮಂಗಳಮುಖಿಯರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಶನಿವಾರ ತಡರಾತ್ರಿ ವೇಳೆ ಕುಂಟಿಕಾನದ ಖಾಸಗಿ ಆಸ್ಪತ್ರೆಯ ಬಳಿ ನಿಂತಿದ್ದ ಇವರು ಸಾರ್ವಜನಿಕರೊಂದಿಗೆ ಅಸಭ್ಯ ರೀತಿಯಲ್ಲಿ ವರ್ತಿಸುತ್ತಿದ್ದರು. ಇದರಿಂದ ದಾರಿಯಲ್ಲಿ ಹೋಗುವವರು ಕಿರಿಕಿರಿ ಅನುಭವಿಸಿದ್ದರು. ಆದ್ದರಿಂದ ಸ್ಥಳದಲ್ಲಿ ಜನ ಜಮಾಯಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದ್ದರಿಂದ ಸ್ಥಳಕ್ಕೆ ಉರ್ವ ಠಾಣಾ ಪೊಲೀಸರು ಆಗಮಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಲು ಯತ್ನಿಸಿದ್ದಾರೆ. ಆದರೆ ಸ್ಥಳಕ್ಕೆ ಆಗಮಿಸಿದ ಉರ್ವ ಠಾಣಾ ಇನ್ಸ್ ಪೆಕ್ಟರ್ ರೊಂದಿಗೆ ಮಂಗಳಮುಖಿಯರು ವಾಗ್ವಾದಕ್ಕಿಳಿದಿದ್ದಾರೆ. ಆದ್ದರಿಂದ ಪೊಲೀಸರು ಹತ್ತಕ್ಕೂ ಹೆಚ್ಚು ಮಂಗಳಮುಖಿಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದೀಗ ಸಾರ್ವಜನಿಕ ಶಾಂತಿ ಭಂಗದ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ: ಫ್ಲೈಯಿಂಗ್ ಕಿಸ್ ಕೊಟ್ಟು, ವಿದ್ಯಾರ್ಥಿನಿಯಲ್ಲಿ 9ನೇ ತರಗತಿ ಪಾಸಾಗಿದ್ದಕ್ಕೆ ಟ್ರೀಟ್ ಕೇಳಿ ಲೈಂಗಿಕ ಕಿರುಕುಳ ನೀಡಿದ್ದ ಅನ್ಯಮತೀಯ ಆಟೋ ಚಾಲಕನನ್ನು ಕೊಣಾಜೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬೆಳ್ಮ ಗ್ರಾಮದ ಬರುವ ನಿವಾಸಿ ಆಟೋ ಚಾಲಕ ಇಕ್ಬಾಲ್ (37) ಬಂಧಿತ ಆರೋಪಿ. ಅಂಬ್ಲಮೊಗರು ಗ್ರಾಮದ ಎಸ್ಸೆಸ್ಸೆಲ್ಸಿಯ ಅಪ್ರಾಪ್ತ ವಿದ್ಯಾರ್ಥಿನಿಗೆ ಆರೋಪಿ ಇಕ್ಬಾಲ್ ಲೈಂಗಿಕ ಕಾಟ ಕೊಟ್ಟಿದ್ದ. ಈ ಸಂಬಂಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಎಸ್ಸೆಸ್ಸೆಲ್ಸಿ ಓದುತ್ತಿರುವ ಸಂತ್ರಸ್ತ ವಿದ್ಯಾರ್ಥಿನಿಯು ಜೂನ್ ತಿಂಗಳಲ್ಲಿ ಅಂಬ್ಲಮೊಗರು ಗ್ರಾಮದ ಬಸ್ಸು ನಿಲ್ದಾಣದಲ್ಲಿ ಬೆಳಿಗ್ಗೆ ಶಾಲೆಗೆ ತೆರಳಲು ನಿಂತಿದ್ದ ಸಂದರ್ಭದಲ್ಲಿ 9ನೇ ತರಗತಿ ಪಾಸಾಗಿರುವುದಕ್ಕೆ ಟ್ರೀಟ್ ಇಲ್ವಾ? ಚಾಕಲೇಟ್ ಇಲ್ಲದಿದ್ದರೆ ಬೇರೇನಾದರೂ ಕೊಡು ನಿನ್ನನ್ನ ನಾನು ಆಟೋದಲ್ಲಿ ಫ್ರೀಯಾಗಿ ಕರ್ಕೊಂಡು ಹೋಗ್ತೀನಿ ಎಂದು ಆರೋಪಿ ಇಕ್ಬಾಲ್ ಪೀಡಿಸಿದ್ದ. ಅಷ್ಟೇ ಅಲ್ಲದೆ ಬಾಲಕಿಯ ಕೈ, ಎದೆ ಭಾಗವನ್ನು ಸ್ಪರ್ಶಿಸಿ ಅಶ್ಲೀಲವಾಗಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದನಂತೆ. ನೊಂದ ಬಾಲಕಿ ರಿಕ್ಷಾ ಚಾಲಕ ಇಕ್ಬಾಲನ…
ಉಳ್ಳಾಲ: ನೇತ್ರಾವತಿ ನದಿ ತಟದಲ್ಲಿ ಅಪರಿಚಿತ ವ್ಯಕ್ತಿಯೋರ್ವರ ಮೃತದೇಹ ಜು.29ರ ಶನಿವಾರ ಸಂಜೆ ವೇಳೆ ಪತ್ತೆಯಾಗಿದೆ.ಸುಮಾರು 40-50 ರ ಹರೆಯದ ವ್ಯಕ್ತಿಯ ಮೃತದೇಹ ಇದಾಗಿದ್ದು, ಮಳೆಯಿಂದ ನೀರಿಗೆ ಬಿದ್ದು ಸಾವನ್ನಪ್ಪಿರುವ ಶಂಕೆ ಇದೆ.ಉಳ್ಳಾಲದ ಪ್ರೇಮ್ ಪ್ರಕಾಶ್ ಡಿಸೋಜ, ಪ್ರವೀಣ್ ಡಿಸೋಜ, ಆಲ್ವಿನ್ ಡಿಸೋಜ, ರಾಜೇಶ್ ಡಿಸೋಜ, ಕಿಶೋರ್ ಡಿಸೋಜ ಮೃತದೇಹ ಮೇಲಕ್ಕೆತ್ತುವಲ್ಲಿ ಸಹಕರಿಸಿದರು. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ಅಕ್ರಮವಾಗಿ ಪಿಸ್ತೂಲ್ ಹೊಂದಿದ್ದ ದುಷ್ಕರ್ಮಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಹೆಡೆಮುರಿಕಟ್ಟಿ ಬಂಧಿಸಿದ್ದಾರೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರ ಮೀಯಪದವು, ಚಿಗುರುಪಾದೆ ನಿವಾಸಿ ಅಬ್ಬಾಸ್ ಯಾನೆ ಬೆಡಿ ಅಬ್ಬಾಸ್ (61) ಮತ್ತು ಮಂಜೇಶ್ವರ ತಾಲೂಕಿನ ಪೈವಳಿಕೆ ನಿವಾಸಿ ಯಶವಂತ್ ಕುಮಾರ್ (45) ಬಂಧಿತ ಆರೋಪಿಗಳು. ಆರೋಪಿಗಳಿಬ್ಬರೂ ಬಜಪೆ ಗ್ರಾಮದ ಒಡ್ಡಿದಕಲ ಎಂಬಲ್ಲಿ ಬೈಕ್ ವೊಂದರಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಪಿಸ್ತೂಲ್ ವಶದಲ್ಲಿರಿಸಿಕೊಂಡು ತಿರುಗಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಅಕ್ರಮ ಪಿಸ್ತೂಲ್ ಹೊಂದಿದ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರಿಂದ 1 ಪಿಸ್ತೂಲ್, 2 ಮೊಬೈಲ್ ಫೋನ್ ಗಳು ಹಾಗೂ ಹೀರೋ ಹೊಂಡಾ ಫ್ಯಾಶನ್ ಪ್ಲಸ್ ಬೈಕನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 1,45,000 ರೂ. ಆಗಬಹುದೆಂದು ಅಂದಾಜಿಸಲಾಗಿದೆ. ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ಟಾಯ್ಲೆಟ್ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ತನಿಖಾಧಿಕಾರಿಯನ್ನು ಬದಲಿಸಲಾಗಿದೆ. ತನಿಖಾಧಿಕಾರಿಯನ್ನು ಬದಲಾಯಿಸಿ ಎಸ್ ಪಿ ಅಕ್ಷಯ್ ಮಚ್ಚಿಂದ್ರ ಹಾಕೆ ಆದೇಶ ಹೊರಡಿಸಿದ್ದಾರೆ. ಮಲ್ಪೆ ಇನ್ಸ್ ಪೆಕ್ಟರ್ ಮಂಜುನಾಥ್ ಗೌಡ ಈ ಮೊದಲು ತನಿಖಾಧಿಕಾರಿಯಾಗಿದ್ದು ಅವರನ್ನು ಬದಲಾಯಿಸಬೇಕೆಂಬ ಒತ್ತಾಯ ಕೇಳಿಬಂದಿತ್ತು.ಈ ಹಿನ್ನೆಲೆಯಲ್ಲಿ ಕುಂದಾಪುರ ಡಿವೈಎಸ್ಪಿ ಮೂಲಕ ತನಿಖೆ ನಡೆಸಲು ನಿರ್ಧಾರ ಮಾಡಲಾಗಿದೆ.ಅದರಂತೆ ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಈಗ ತನಿಖಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.
ಮಂಗಳೂರು: ರೈಲು ಡಿಕ್ಕಿಯಾಗಿ ಅಪರಿಚಿತ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಪಚ್ಚನಾಡಿ ರೈಲ್ವೆ ಬ್ರಿಡ್ಜ್ ಬಳಿ ನಡೆದಿದೆ. ಪಚ್ಚನಾಡಿ – ವಾಮಂಜೂರು ಸಂಪರ್ಕದ ರೈಲ್ವೇ ಮೇಲ್ಸೆತುವೆಯ ಬಳಿ ಈ ಘಟನೆ ಇಂದು ಬೆಳಗ್ಗೆ 11.30 ಸುಮಾರಿಗೆ ನಡೆದಿದೆ. ಮತ್ಯ್ಸಗಂಧ ರೈಲು ಡಿಕ್ಕಿ ಹೊಡೆದು ಈ ಅಪರಿಚಿತ ವ್ಯಕ್ತಿ ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿ ಸುಮಾರು 52ವರ್ಷ ಪ್ರಾಯದವರು ಆಗಿರಬಹುದು ಎಂದು ಶಂಕಿಸಲಾಗಿದೆ. ಆದರೆ ರೈಲು ಡಿಕ್ಕಿಯಾಗಿ ವ್ಯಕ್ತಿಯ ಮುಖ ಜಜ್ಜಿ ಹೋಗಿರುವುದರಿಂದ ಅವರ ಗುರುತು ಪತ್ತೆ ಇನ್ನಷ್ಟೇ ಆಗಬೇಕಿದೆ. ಸ್ಥಳಕ್ಕೆ ಆರ್ ಪಿ ಎಫ್, ಜಿ ಆರ್ ಪಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಸಿಸಿಬಿ ಪೊಲೀಸರು ಮಂಗಳೂರಲ್ಲಿ ಮಾದಕ ವಸ್ತು ಹೊಂದಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಮಾದಕ ವಸ್ತುವಾದ ಎಂಡಿಎಂಎಯನ್ನು ಕಾರಿನಲ್ಲಿಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದವನನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ದಸ್ತಗಿರಿ ಮಾಡಿದ್ದಾರೆ. ಮಂಗಳೂರು ನಗರದಲ್ಲಿ ಮಾದಕ ವಸ್ತುವಾದ ಎಂಡಿಎಂಎಯನ್ನು ಕಾರಿನಲ್ಲಿಟ್ಟುಕೊಂಡು ಮುಡಿಪು ಕಂಬಳ ಪದವು ಕೆಐಡಿಬಿ ರಸ್ತೆ ಪರಿಸರದಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ನಿಷೇದಿತ ಮಾದಕ ವಸ್ತುವಾದ ಎಂಡಿಎಂಎನ್ನು ಹೊಂದಿದ ಮಹಮ್ಮದ್ ಆರೀಫ್ ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನಿಂದ ಒಟ್ಟು 25 ಗ್ರಾಂ ತೂಕದ ರೂ. 1,25,000 ಮೌಲ್ಯದ ಎಂಡಿಎಂಎ ಮಾದಕ ವಸ್ತು, KA-19-MH-3023 ಮಾರುತಿ ಅಲ್ಟೋ800 ಕಾರು, ಮೊಬೈಲ್ ಫೋನ್-1, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 6,35,500/-ಆಗಬಹುದು. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಮಾದಕ ವಸ್ತು ಮಾರಾಟ ಜಾಲದಲ್ಲಿ ಇನ್ನೂ ಹಲವಾರು ಆರೋಪಿಗಳು ಭಾಗಿಯಾಗಿದ್ದು ಪತ್ತೆ ಕಾರ್ಯ ಮುಂದುವರಿದಿದೆ.…










