Author: main-admin

ಮಂಗಳೂರು: ಗಾಂಜಾ ಗ್ಯಾಂಗ್ ವೊಂದು ಯುವಕನನ್ನು ಮಾರಕಾಸ್ತ್ರದಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ವಲಚ್ವಿಲ್ ಬಳಿ ನಡೆದಿದೆ. ನಿನ್ನೆ ರಾತ್ರಿ ಅಂಗಡಿಗೆ ಸಾಮಾನು ತರಲು ತೆರಳಿದ್ದ ಮಿಫ್ತಾಹ್ ಎಂಬ ಬಾಲಕನ ಮೇಲೆ ಹಲ್ಲೆಗೆ ಗಾಂಜಾ‌ ಗ್ಯಾಂಗ್ ಮುಂದಾಗಿದ್ದು ಇದನ್ನು ತಡೆಯಲು ಯತ್ನಿಸಿದ ಆತನ‌ ಮಾವ ಆಸೀಫ್ ಮೇಲೆ ಗಂಭೀರ ಹಲ್ಲೆ ನಡೆಸಿರುವ ಬಗ್ಗೆ ಮಾಹಿತಿ‌ ಲಭ್ಯವಾಗಿದೆ. ಘಟನಯಲ್ಲಿ ಅಸೀಫ್ ಸ್ಥಿತಿ ಗಂಭೀರವಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ‌.ಈ ಕುರಿತು ಕಂಕನಾಡಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ.ಮನ್ಸೂರ್ ಮತ್ತು ಆಶಿಕ್ ಎಂಬವರು ಕೃತ್ಯ ನಡೆಸಿದ್ದಾರೆ ಎನ್ನಲಾಗಿದೆ.

Read More

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಡಿಕೇರಿಗೆ ಭೇಟಿ ನೀಡಿದ್ದ ವೇಳೆ ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಕಾರಣಕ್ಕೆ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಅವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದರು. ಇದು ಕಾಂಗ್ರೆಸ್ ಕಾರ್ಯಕರ್ತರನ್ನು ಕೆರಳಿಸಿದೆ. ಅಲ್ಲದೆ ಆಗಸ್ಟ್ 26ರಂದು ಮಡಿಕೇರಿಯ ಜಿಲ್ಲಾ ರಕ್ಷಣಾಧಿಕಾರಿ ಕಚೇರಿ ಮುತ್ತಿಗೆ ಹಾಕುವುದಾಗಿ ಸಿದ್ದರಾಮಯ್ಯ ಗುಡುಗಿದ್ದು, ಇದಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸುವ ನಿರೀಕ್ಷೆ ಇದೆ. ಇದರ ಮಧ್ಯೆ ಕಾಂಗ್ರೆಸ್ ಕಾರ್ಯಕರ್ತರು ಶಾಸಕರ ಭವನದಲ್ಲೂ ಪ್ರತಿಭಟನೆ ನಡೆಸಬಹುದೆಂಬ ಕಾರಣಕ್ಕೆ ಅಲ್ಲಿ ಮೊಟ್ಟೆ ಬ್ಯಾನ್ ಮಾಡಲಾಗಿದೆ. ಅಲ್ಲದೆ ಕೆ.ಜಿ. ಬೋಪಯ್ಯ ಹಾಗೂ ಅಪ್ಪಚ್ಚು ರಂಜನ್ ಅವರ ಕೊಠಡಿಗಳಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಈ ಹಿಂದೆ ಯತ್ನಾಳ್ ಅವರ ಕೊಠಡಿ ಮೇಲೆ ದಾಳಿ ನಡೆದಿದ್ದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ.

Read More

ಮಂಗಳೂರು: ಹಿಜಾಬ್ ಧರಿಸಿ ತರಗತಿಗೆ ಹಾಜರಾಗುವಂತಿಲ್ಲ ಎಂದು ಮಂಗಳೂರು ವಿಶ್ವವಿದ್ಯಾಲಯ ಕಳೆದ ಮೇ ತಿಂಗಳಿನಲ್ಲಿ ಸೂಚಿಸಿದ ಮೇಲೆ ವಿವಿ ಸಂಯೋಜಿತ ಸರ್ಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳ ಎರಡು, ಮೂರು, ನಾಲ್ಕು ಮತ್ತು ಐದನೇ ಸೆಮಿಸ್ಟರ್‌ನ ಶೇ 16ರಷ್ಟು ಮುಸ್ಲಿಂ ವಿದ್ಯಾರ್ಥಿನಿಯರು ಟಿಸಿ ಪಡೆದುಕೊಂಡು, ಕಾಲೇಜಿನಿಂದ ಹೊರಗೆ ಉಳಿದಿದ್ದಾರೆ. ಮಾಹಿತಿ ಹಕ್ಕಿನ ಅಡಿಯಲ್ಲಿ ಈ ವಿಷಯ ಬಹಿರಂಗಗೊಂಡಿದೆ. 2020-21, 2021-22ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರವೇಶ ಪಡೆದಿದ್ದ ಒಟ್ಟು 900 ಮುಸ್ಲಿಂ ವಿದ್ಯಾರ್ಥಿನಿಯರಲ್ಲಿ 145ವಿದ್ಯಾರ್ಥಿನಿಯರು ತಮ್ಮ ಟಿಸಿ ಪಡೆದಿದ್ದಾರೆ. ವಿವಿ ವ್ಯಾಪ್ತಿಯಲ್ಲಿ ಬರುವ ಕೊಡಗಿನ ಸರ್ಕಾರಿ, ಅನುದಾನಿತ 10 ಕಾಲೇಜುಗಳಲ್ಲಿ ಓದುತ್ತಿರುವ 113 ಮುಸ್ಲಿಂ ವಿದ್ಯಾರ್ಥಿನಿಯರು ಇದೇ ಕಾಲೇಜುಗಳಲ್ಲಿ ಶಿಕ್ಷಣ ಮುಂದುವರಿಸಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 39 ಸರ್ಕಾರಿ ಕಾಲೇಜುಗಳು, 36 ಅನುದಾನಿತ ಕಾಲೇಜುಗಳು ಇವೆ. ಕಾಲೇಜು ಶಿಕ್ಷಣ ಅರ್ಧಕ್ಕೆ ಮೊಟಕುಗೊಳಿಸಿದವರಲ್ಲಿ ಸರ್ಕಾರಿ ಕಾಲೇಜಿನವರು ಶೇ 34ರಷ್ಟಿದ್ದರೆ, ಅನುದಾನಿತ ಕಾಲೇಜಿನ ಶೇ 8ರಷ್ಟು ಮುಸ್ಲಿಂ…

Read More

ಉಡುಪಿ: ವಿದ್ಯಾರ್ಥಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಂಗವಳ್ಳಿ ಗ್ರಾಮದ ನಿಲ್ಸಕಲ್ ಎಂಬಲ್ಲಿ ನಡೆದಿದೆ. ಗಣೇಶ(14)ಆತ್ಮಹತ್ಯೆ ‌ಮಾಡಿಕೊಂಡ ಬಾಲಕ.ಈತ ಹಾಲಾಡಿ ಪ್ರೌಡಶಾಲೆಯ 9ನೇ ತರಗತಿ ವಿದ್ಯಾರ್ಥಿಯಾಗಿದ್ದ. ಗಣೇಶ್ ಮನೆಯ ಪಕ್ಕದಲ್ಲಿ ಇರುವ ಸೌದೆ ತುಂಬುವ ಮಾಡಿನ ಒಳಗಡೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.ಶಾಲೆಗೆ ಹೋಗಲು ಮನಸ್ಸು ಇಲ್ಲದೆ ಮನನೊಂದು ವಿದ್ಯಾರ್ಥಿ ಈ ರೀತಿ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

Read More

ಸುರತ್ಕಲ್:ವ್ಯಕ್ತಿಯೊಬ್ಬ ಕತ್ತಿಯಿಂದ ಇಬ್ಬರಿಗೆ ಗಾಯಗೊಳಿಸಿದ್ದಲ್ಲದೆ, ಬಸ್ಸಿಗೆ ಕಲ್ಲು ತೂರಾಟ ನಡೆಸಿದ ಘಟನೆ ಕಾನಾ ಸಮೀಪ ನಡೆದಿದೆ. ಗಾಯಾಳು ಸೇರಿ ಕತ್ತಿ ಬೀಸಿದ ವ್ಯಕ್ತಿಗೂ ಗಾಯವಾಗಿದ್ದು, ಇಬ್ಬರನ್ನೂ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸುರತ್ಕಲ್ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ,ತನಿಖೆ ಆರಂಭಿಸಿದ್ದು,ಆರೋಪಿಯ ತನಿಖೆ ನಡೆಯಲಿದೆ.ಕೃತ್ಯ‌‌ ನಡೆಸಿರುವಾತ ಮಾನಸಿಕ ಅಸ್ವಸ್ಥ ಎಂದು ವರದಿಯಾಗಿದೆ. ಸುರತ್ಕಲ್ ಪೊಲೀಸ್ ಠಾಣೆಯ ಅಧಿಕಾರಿಗಳು ಆರೋಪಿಯ ವಿಚಾರಣೆ ನಡೆಸುತ್ತಿದ್ದಾರೆ.

Read More

ಸುಳ್ಯ: ತಾಲೂಕಿನ ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಐವರು ಆರೋಪಿಗಳನ್ನು ಗುರುವಾರ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದೆ ಎಂದು ತಿಳಿದು ಬಂದಿದೆ. ಪ್ರಕರಣದಲ್ಲಿ ಆರೋಪಿಗಳಾದ ನೌಫಲ್ (28) ಸೈನುಲ್ ಆಬಿದ್ (22), ಮೊಹಮ್ಮದ್ ಸೈಯದ್ (32), ಅಬ್ದುಲ್ ಬಶೀರ್ (29) ಮತ್ತು ರಿಯಾಜ್ (27) ಅವರನ್ನು ಎನ್‌ಐಎ ಆರು ದಿನಗಳ ಕಾಲ (ಆ.23ರ ವರೆಗೆ) ವಶಕ್ಕೆ ಪಡೆದುಕೊಂಡಿದೆ ಎನ್ನಲಾಗಿದೆ. ಜುಲೈ 27ರಂದು ಆರೋಪಿಗಳು ಬಿಜೆಪಿ ಯುವ ಮುಖಂಡ ಪ್ರವೀಣ್ ಅವರನ್ನು ರಸ್ತೆಯಲ್ಲಿ ಭೀಕರವಾಗಿ ಹತ್ಯೆಗೈದಿದ್ದರು. ಈ ಪ್ರಕರಣ ಸಂಬಂಧ ಕಾನೂನು ಬಾಹಿರ ಚಟುವಟಿಕೆಗಳ ತಡೆ (ಯುಎಪಿಎ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಬೆಳ್ಳಾರೆ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಬಳಿಕ ಪ್ರಕರಣವನ್ನು ಎನ್ಐಎಗೆ ವರ್ಗಾಯಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ತನಿಖೆ ಚುರುಕುಗೊಳಿಸಿರುವ ಎನ್‌ಐಎ ಅಧಿಕಾರಿಗಳು ಗುರುವಾರ ಐವರು ಆರೋಪಿಗಳನ್ನು ಆರು ದಿನಗಳ ಕಾಲ ತಮ್ಮ ಕಸ್ಟಡಿಗೆ ಪಡೆದುಕೊಂಡು…

Read More

ಮಂಗಳೂರು: ಕೆಎಂಎಫ್‌ನಲ್ಲಿ ಉದ್ಯೋಗದ ಭರವಸೆ ನೀಡಿ ನೂರಾರು ಮಂದಿಗೆ ಕೋಟ್ಯಂತರ ರೂ. ಪಂಗನಾಮ ಹಾಕಿರುವ ಪ್ರಮುಖ ಆರೋಪಿ ಪೊಲೀಸ್ ಬಲೆಗೆ ಬಿದ್ದಿದ್ದಾನೆ. ಬಂಟ್ವಾಳ ತಾಲೂಕಿನ ಸಾಲೆತ್ತೂರು ನಿವಾಸಿ ರಾಮಪ್ರಸಾದ್ ರಾವ್ ಪಿ. (37) ಬಂಧಿತ ಆರೋಪಿ‌. ಕೆಎಂಎಫ್‌ನಲ್ಲಿ ನೇರ ನೇಮಕಾತಿ ಮೂಲಕ‌ ಉದ್ಯೋಗ ಗಿಟ್ಟಿಸಿಕೊಳ್ಳಲು ಗುಟ್ಟಾಗಿ ಹಣ ನೀಡಿದ್ದಲ್ಲಿ ಉದ್ಯೋಗ ದೊರೆಯುತ್ತದೆ ಎಂದು ಆರೋಪಿ ಅಭ್ಯರ್ಥಿಗಳಿಗೆ ಆಸೆ ಹುಟ್ಟಿಸಿದ್ದ. ಈ ಹಿನ್ನೆಲೆಯಲ್ಲಿ 138ಕ್ಕೂ ಅಧಿಕ ಮಂದಿ ಉದ್ಯೋಗಾರ್ಥಿಗಳನ್ನು ನಂಬಿಸಿ ಸುಮಾರು 1.84 ಕೋಟಿ ರೂ. ಹಣ ಪಡೆದುಕೊಂಡು ಕೆಎಂಎಫ್ ಡೈರಿ ಸರಕಾರಿ ಸಂಸ್ಥೆಯ ನಕಲಿ ಉದ್ಯೋಗ ನೇಮಕಾತಿ ಪತ್ರ, ಕೆಎಂಎಫ್ ಐಡಿ ಕಾರ್ಡ್ ನೀಡಿ ವಂಚನೆಗೈದಿದ್ದಾರೆ ಎಂದು ದೂರು ಬಂದಿತ್ತು. ಇದೀಗ ರಾಮಪ್ರಸಾದ್ ರಾವ್‌ನನ್ನು ಬಂಧಿಸಿರುವ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈತ ರಾಮಪ್ರಸಾದ್ ರಾವ್ ಅಲ್ಲದೆ ಹರೀಶ್, ಕೇಶವ, ಶಶಿಧರ್ ಎಂಬ ಹೆಸರಿನಲ್ಲೂ ಹಲವರನ್ನು ವಂಚಿಸಿದ್ದ ಎಂದು ತಿಳಿದು ಬಂದಿದೆ. ಇನ್ನೂ ಕೆಲವರು ಈ ಪ್ರಕರಣದಲ್ಲಿದ್ದು, ಶೀಘ್ರದಲ್ಲೇ ಪೊಲೀಸರು ಬಂಧಿಸಲಿದ್ದಾರೆ.

Read More

ಮಂಗಳೂರು: ರಾಜ್ಯದಲ್ಲಿ ಸಾವರ್ಕರ್ ಬ್ಯಾನರ್ ವಿವಾದ ತೀವ್ರವಾಗಿರುವ ಸಂದರ್ಭದಲ್ಲಿ ಮಂಗಳೂರಿನಲ್ಲಿ ಬ್ಯಾನರ್ ವಿವಾದ ಪ್ರತಿಧ್ವನಿಸಿದೆ. ಅಖಿಲ ಭಾರತ ಹಿಂದೂ ಮಹಾಸಭಾ ಕೃಷ್ಣ ಜನ್ಮಾಷ್ಟಮಿಗೆ ನಾಡಿನ ಜನತೆಗೆ ಶುಭಾಶಯ ಕೋರುವ ನಿಟ್ಟಿನಲ್ಲಿ ಮತ್ತೊಂದು ವಿವಾದವನ್ನು ಸೃಷ್ಟಿಸಿದೆ. ಬ್ಯಾನರ್‌ನಲ್ಲಿ ಸಾವರ್ಕರ್ ಫೋಟೋ ಜೊತೆಗೆ ನಾಥುರಾಮ್ ಗೋಡ್ಸೆಯ ಫೋಟೋ ಹಾಕಿರುವುದು ತೀವ್ರ ವಿವಾದವನ್ನು ಸೃಷ್ಟಿಸಿದೆ. ಅಖಿಲ ಭಾರತ ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಹೆಸರಿನಲ್ಲಿ ಬ್ಯಾನರ್ ಹಾಕಲಾಗಿದೆ. ಮಂಗಳೂರಿನ ಸುರತ್ಕಲ್, ಬೈಕಂಪಾಡಿ, ಕೂಳೂರು ಭಾಗದಲ್ಲಿ ಬ್ಯಾನರ್ ಅಳವಡಿಸಲಾಗಿದೆ. ಶ್ರೀ ಕೃಷ್ಣ ಜನ್ಮಾಷ್ಟಮಿಗೆ ಶುಭಕೋರುವ ನೆಪದಲ್ಲಿ ಬ್ಯಾನರ್ ಹಾಕಲಾಗಿದೆ. ಈ ಬ್ಯಾನರ್‌ನಲ್ಲಿ ವಿನಾಯಕ ದಾಮೋದರ ಸಾವರ್ಕರ್ ಮತ್ತು ನಾಥುರಾಮ್ ಗೋಡ್ಸೆಯ ಫೋಟೋವನ್ನು ಹಾಕಲಾಗಿದೆ. ಅಲ್ಲದೇ ಬ್ಯಾನರ್‌ನಲ್ಲಿ “ರಾಜಕೀಯವನ್ನು ಹಿಂದುತ್ವಗೊಳಿಸಿ, ಹಿಂದೂಗಳನ್ನು ಸೈನಿಕೀಕರಣಗೊಳಿಸಿ” ಎಂಬ ಘೋಷ ವಾಕ್ಯವನ್ನು ನಮೂದಿಸಿದ್ದಾರೆ. ಬ್ಯಾನರ್‌ನಲ್ಲಿ ಹಿಂದೂ ಮಹಾಸಭಾದ ಪದಾಧಿಕಾರಿಗಳ ಫೋಟೋವನ್ನು ಕೂಡ ಹಾಕಲಾಗಿದೆ. ಇದೀಗ ಈ ಬ್ಯಾನರ್‌ಗೆ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಮಹಾತ್ಮ ಗಾಂಧೀಜೀ ಅವರನ್ನು ಹತ್ಯೆ ಮಾಡಿದ ನಾಥುರಾಮ್ ಗೋಡ್ಸೆಯ…

Read More

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಸರ್ವೀಸ್ ರಸ್ತೆಯಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೊಟೇಲ್ ಗೆ ನುಗ್ಗಿದ್ದು, ಇಬ್ಬರು ಗಾಯಗೊಂಡ ಘಟನೆ ಗುರುವಾರ ಸಂಜೆ ಸಂಭವಿಸಿದೆ. ಮಹೀಂದ್ರಾ ಎಕ್ಸ್ ಯು ವಿ ಕಾರು ಉಡುಪಿ ಕಡೆಯಿಂದ ಬಂಟಕಲ್ಲುಗೆ ತೆರಳುವ ವೇಳೆ ಕಟಪಾಡಿ ಸರ್ವೀಸ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ನಿಲ್ಲಿಸಿದ್ದ ಕಾರಿಗೆ ಢಿಕ್ಕಿ ಹೊಡೆದು, ರಸ್ತೆಯ ಬದಿಯಲ್ಲಿದ್ದ ಹೋಟಿಗೆ ನುಗ್ಗಿದೆ. ಪರಿಣಾಮ ಹೋಟೆಲಿನ ಓರ್ವ ಸಿಬ್ಬಂದಿ ಹಾಗು ಇನ್ನೋರ್ವರಿಗೆ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಢಿಕ್ಕಿಯ ರಭಸಕ್ಕೆ ಎರಡು ಕಾರುಗಳು ಸಂಪೂರ್ಣ ನಜ್ಜು ಗುಜ್ಜಾಗಿದ್ದು, ರಾಯಲ್ ಹಟ್ ಹೊಟೇಲಿಗೆ ಅಪಾರ ನಷ್ಟ ಉಂಟಾಗಿದೆ. ಕಾಪು ಪೋಲಿಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಇನ್ನಷ್ಟೇ ಪ್ರಕರಣ ದಾಖಲಾಗಬೇಕಿದೆ.

Read More

ಉಡುಪಿ: ಬ್ರಹ್ಮಗಿರಿ ವೃತ್ತದಲ್ಲಿ ಸಾವರ್ಕರ್ ಪ್ರತಿಮೆ ಸ್ಥಾಪನೆಗೆ ಅನುಮತಿ ನೀಡುವಂತೆ ಕೋರಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಷ್ಟ್ರೀಯ ಮುಖ್ಯ ಕಾರ್ಯದರ್ಶಿ ಯಶ್‌ಪಾಲ್ ಸುವರ್ಣ ಅವರು ನಗರದ ಪುರಸಭೆಗೆ ಪತ್ರ ಬರೆದಿದ್ದಾರೆ. ಬ್ರಹ್ಮಗಿರಿ ವೃತ್ತದಲ್ಲಿ ಅಳವಡಿಸಿರುವ ಫ್ಲೆಕ್ಸ್‌ನಲ್ಲಿ ಸಾವರ್ಕರ್‍ ಫೋಟೋ ಮುದ್ರಿಸಿರುವುದಕ್ಕೆ ಕಾಂಗ್ರೆಸ್ ಮತ್ತು ಎಸ್‌ಡಿಪಿಐ ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಇದರ ಬೆನ್ನಲ್ಲೇ ಕಾಂಗ್ರೆಸ್ ಮತ್ತು ಎಸ್‌ಡಿಪಿಐಗೆ ಸವಾಲು ಹಾಕಿರುವ ಯಶ್‌ಪಾಲ್ ಸುವರ್ಣ, ಉಭಯ ಪಕ್ಷಗಳು ಸಾವರ್ಕರ್ ಫೋಟೋ ವಿರೋಧಿಸುವುದನ್ನು ಮುಂದುವರಿಸಿದಲ್ಲಿ ಬ್ರಹ್ಮಗಿರಿ ವೃತ್ತದಲ್ಲಿ ಸಾವರ್ಕರ್ ಪ್ರತಿಮೆ ಅಳವಡಿಸಲಾಗುವುದು ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ ಪುರಸಭೆ ಅಧ್ಯಕ್ಷರು ಮತ್ತು ಆಯುಕ್ತರಿಗೆ ಅವರು ಪತ್ರ ಬರೆದಿದ್ದಾರೆ.ವಿನಾಯಕ ದಾಮೋದರ ಸಾವರ್ಕರ್ ಅವರು ಭಾರತದ ಸ್ವಾತಂತ್ರ ಹೋರಾಟದಲ್ಲಿ ಮುಂಚೂಣಿಯಲ್ಲಿ ತೊಡಗಿಸಿಕೊಂಡಿದ್ದರು. ಹೀಗಾಗಿ ಅವರ ಗೌರವಾರ್ಥ ಎಲ್ಲಾ ದೇಶಭಕ್ತರ ಪರವಾಗಿ ಸಾವರ್ಕರ್‍ ಪ್ರತಿಮೆಯನ್ನು ಬ್ರಹ್ಮಗಿರಿ ವೃತ್ತದಲ್ಲಿ ಸ್ಥಾಪಿಸಲು ನಾವು ಉದ್ದೇಶಿಸಿದ್ದೇವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ದೇಶ 75ನೇ ವರ್ಷದ ಸ್ವಾತಂತ್ರ ಸಂಭ್ರಮದಲ್ಲಿರುವಾಗ ಬ್ರಿಟಿಷರನ್ನು ಹಿಮ್ಮೆಟ್ಟಿಸುವಲ್ಲಿ ತೊಡಗಿಸಿಕೊಂಡ ವೀರ್‍ ಸಾವರ್ಕರ್ ಪ್ರತಿಮೆ ಸ್ಥಾಪನೆಗೆ…

Read More