ಮಂಗಳೂರು: ಎರಡು ಮೂರು ದಿನಗಳಿಂದ ಮಂಗಳೂರಿನಲ್ಲಿ ಗೂಡಂಗಡಿ ಹಾಗೂ ಬೀದಿಬದಿ ವ್ಯಾಪಾರಿಗಳನ್ನು ಮಟ್ಟ ಹಾಕಲು ಮತ್ತು ಸಿಗರೇಟು ಬಾಂಗ್ ಗಳಂತಹ ಮಾದಕ ಪದಾರ್ಥಗಳನ್ನು ಮಾರುವುದು ಹಾಗೂ ಉಪಯೋಗಿಸುವುದನ್ನು ನಿಲ್ಲಿಸುವ ಒಳ್ಳೆಯ ಉದ್ದೇಶದಿಂದ ಮಂಗಳೂರು ಮಹಾನಗರಪಾಲಿಕೆ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ಪರವಾನಿಗೆ ಇಲ್ಲದ ಗೂಡಂಗಡಿಗಳನ್ನು ತೆರವು ಮಾಡುವ ಕಾರ್ಯ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಮಂಗಳೂರಿನ ಹೃದಯ ಭಾಗದಲ್ಲಿರುವ ಸೆಂಟ್ರಲ್ ರೈಲು ನಿಲ್ದಾಣದ ಜಾಗ ಹಾಗೂ ಎದುರು ಭಾಗದಲ್ಲಿ ಒಂದು ಗೂಡಂಗಡಿಯನ್ನು ಇರಿಸಲಾಗಿದೆ. ಇದರಲ್ಲಿ ರೈಲ್ವೆ ಅಧಿಕಾರಿಗಳು ಮತ್ತು ರೈಲ್ವೆ ಪೊಲೀಸರು ಶಾಮೀಲಾಗಿರಬಹುದೆಂದು ಸಂಶಯಿಸಲಾಗಿದೆ.ಅನಧಿಕೃತ ಗೂಡಂಗಡಿಯು ತಲೆ ಎತ್ತಿದ್ದು, ಮಹಾನಗರ ಪಾಲಿಕೆ ಮತ್ತು ರೈಲ್ವೇ ಅಧಿಕಾರಿಗಳು ತಕ್ಷಣ ತೆರವುಗೊಳಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.
Author: main-admin
ಕಾಸರಗೋಡು ಜಿಲ್ಲೆಯ ಕಾಞಂಗಾಡ್ನಲ್ಲಿ ಮುಸ್ಲಿಂ ಲೀಗ್ನಿಂದ ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರನೊಬ್ಬ ‘ದೇವಸ್ಥಾನದ ಮುಂದೆ ನಿಮ್ಮನ್ನು ನೇಣು ಹಾಕಿ ಸುಟ್ಟು ಹಾಕುತ್ತೇನೆ’ ಎಂದು ಘೋಷಣೆ ಕೂಗಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಿಡಿಯೋ ವಿವಾದಾತ್ಮಕ ಸ್ವರೂಪ ಪಡೆದುಕೊಂಡಿದೆ. ಹೌದು ಮಣಿಪುರದಲ್ಲಿ ನಡೆದ ಹಿಂಸಾಚಾರದ ವಿರುದ್ಧದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಮೈತ್ರಿಕೂಟದ ಭಾಗವಾಗಿರುವ ಮುಸ್ಲಿಂ ಲೀಗ್ ಸದಸ್ಯರು ನಡೆಸಿರುವ ಪ್ರತಿಭಟನೆಯಲ್ಲಿ ವಿವಾದಾತ್ಮಕ ಘೋಷಣೆಗಳು ಮೊಳಗಿದ ಆರೋಪ ಕೇಳಿ ಬಂದಿದೆ. ಸದ್ಯ ಘೋಷಣೆ ಎತ್ತಿದವನನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ ಎಂದು ಪಕ್ಷದ ಮುಖಂಡರು ಹೇಳಿದ್ದಾರೆ. ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಈವರೆಗೆ 160 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 300ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಮಂಗಳೂರು: ಸುಲಿಗೆ ಪ್ರಕರಣದಲ್ಲಿ 23 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಉಳ್ಳಾಲದ ಬಶೀರ್(51) ಎಂದು ಗುರುತಿಸಲಾಗಿದೆ. ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ. 2000 ,ಡಿಸೆಂಬರ್ 17ರಂದು ರಾತ್ರಿ ಮಹಿಳೆಯೊಬ್ಬರನ್ನು ಅಡ್ಡಗಟ್ಟಿ ಆರೋಪಿಗಳು ಚೂರಿ ತೋರಿಸಿ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಕಸಿದು ಸುಲಿಗೆ ಮಾಡಿ ಪರಾರಿಯಾಗಿದ್ದರೆನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಉರ್ವಾ ಪೊಲೀಸ್ ಠಾಣೆಯಲ್ಲಿ ಠಾಣೆಯಲ್ಲಿ ಅಕ್ರ 130/2000 ಕಲಂ: 392 ಐಪಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಹುಸೇನ್, ಮೊಹಮ್ಮದ್ ಹುಸೇನ್ ಬಶೀರ್ ಮತ್ತು ಮೊಯ್ದೀನ್ ಕುದ್ರೋಳಿ ಎಂಬವರ ಹೆಸರುಗಳಿದ್ದು, ಹುಸೇನ್, ಮೊಹಮ್ಮದ್ ಹುಸೇನ್ ಮತ್ತು ಮೊಯ್ದೀನ್ ಕುದ್ರೋಳಿ ಎಂಬವರನ್ನು ದಸ್ತಗಿರಿ ಮಾಡಲಾಗಿತ್ತು . ಆರೋಪಿ ಬಶೀರ್ ಎಂಬಾತನು ತಲೆ ಮರೆಸಿಕೊಂಡಿದ್ದು ಈತನ ವಿರುದ್ದ ನ್ಯಾಯಾಲಯವು ಉದ್ಘೋಷಣೆಯನ್ನು ಹೊರಡಿಸಿತ್ತು. ಆದರೆ ಆರೋಪಿಯು ನ್ಯಾಯಾಲಯಕ್ಕೂ ಹಾಜರಾಗದೇ ತಲೆಮರೆಸಿಕೊಂಡಿದ್ದು ಜುಲೈ 26ರಂದು ಆರೋಪಿಯನ್ನು ದಸ್ತಗಿರಿ…
ಮಂಗಳೂರು: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಯೊಂದಿಗೆ ಅನೈಸರ್ಗಿಕ ರೀತಿಯಲ್ಲಿ ಲೈಂಗಿಕ ಕ್ರಿಯೆ ನಡೆಸಿ ದೌರ್ಜನ್ಯ ಎಸಗಿದ ಅಪರಾಧಿ ಉಪನ್ಯಾಸಕನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್ ಟಿಎಸ್ಸಿ-1) ಜೀವಾವಧಿ ಶಿಕ್ಷೆ ವಿಧಿಸಿದೆ. ಕುಳಾಯಿಯ ಪೃಥ್ವಿರಾಜ್ (33) ಶಿಕ್ಷೆಗೊಳಗಾದವ. ಈತ ಎಸೆಸ್ಸೆಲ್ಸಿ ವಿದ್ಯಾರ್ಥಿಯೋರ್ವನಿಗೆ 2014ರ ಆ. 1ರಿಂದ 2016ರ ಸೆ. 2ರ ವರೆಗೆ ಅನೈಸರ್ಗಿಕ ರೀತಿಯ ಲೈಂಗಿಕ ಕ್ರಿಯೆ ಮೂಲಕ ದೌರ್ಜನ್ಯ ಎಸಗಿದ್ದ. ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಅಪರಾಧಿ ಪೃಥ್ವಿರಾಜ್ ವಿದ್ಯಾರ್ಥಿಯನ್ನು ತನ್ನ ಮನೆಗೆ ಕರೆಯಿಸಿ ನಿರಂತರವಾಗಿ ಲೈಂಗಿಕ ಕ್ರಿಯೆ ನಡೆಸುತ್ತಿದ್ದ. ಯಾರಿಗಾದರೂ ಹೇಳಿದರೆ ಬಿಡುವುದಿಲ್ಲ, ಪರೀಕ್ಷೆಯಲ್ಲಿ ಅಂಕ ಕಡಿತ ಮಾಡುತ್ತೇನೆ. ಹಾಜರಾತಿ ಕಡಿತ ಮಾಡುತ್ತೇನೆ ಎಂದು ಹೆದರಿಸಿದ್ದ. ಬಾಲಕನ ಜನನಾಂಗದಲ್ಲಿ ಹುಣ್ಣಾಗಿ ಗಾಯವಾಗಿ ವೈದ್ಯರಲ್ಲಿ ತಪಾಸಣೆ ನಡೆಸಿ ಚಿಕಿತ್ಸೆ ಪಡೆಯುವ ವೇಳೆ ಬಾಲಕ ತನ್ನ ಮೇಲೆ ನಡೆಯುತ್ತಿದ್ದ ದೌರ್ಜನ್ಯವನ್ನು ಮನೆಯವರು ಮತ್ತು ವೈದ್ಯರಿಗೆ ತಿಳಿಸಿದ್ದ. ಸುರತ್ಕಲ್ ಇನ್ಸ್ಪೆಕ್ಟರ್ ಆಗಿದ್ದ ಚೆಲುವರಾಜ್ ಬಿ. ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ…
ಕಾಸರಗೋಡು: ಅಸ್ವಸ್ಥಗೊಂಡ ಕಾಞ೦ಗಾಡ್ ನ ವಸತಿ ನಿಲಯದ 19 ವಿದ್ಯಾರ್ಥಿಗಳನ್ನು ನೀಲೇಶ್ವರದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಲದಲ್ಲಿರುವ ಏಕಲವ್ಯ ಮಾದರಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಸತತ ಕೆಮ್ಮು ಕಂಡುಬಂದುದರಿಂದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರು ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಭೇಟಿಯಾದ ಜಿಲ್ಲಾಧಿಕಾರಿ ಕೆ. ಇಂಪಾಶೇಖರ್ ಅವರು ಯೋಗ ಕ್ಷೇಮ ವಿಚಾರಿಸಿದರು. ಜಿಲ್ಲಾ ವೈದ್ಯಾಧಿಕಾರಿಗಳು ಜೊತೆಗಿದ್ದರು.
ನವದೆಹಲಿ : ಮುಂಗಾರು ಅಧಿವೇಶನದಲ್ಲಿ ಪಾಲ್ಗೊಳ್ಳಲು ಎಲ್ಲಾ ಸಂಸದರು ಸಂಸತ್ ಭವನಕ್ಕೆ ಆಗಮಿಸುತ್ತಿದ್ದಾರೆ. ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ ಕೂಡ ಬುಧವಾರ ನಡೆದ ಮುಂಗಾರು ಅಧಿವೇಶನದಲ್ಲಿ ಭಾಗವಹಿಸಲು ಆಗಮಿಸಿದ್ದರು, ಆದ್ರೆ, ಅವರಿಗೆ ಇಲ್ಲಿ ವಿಚಿತ್ರ ಪ್ರಸಂಗವೊಂದು ಸಂಭವಿಸಿದೆ. ವಾಸ್ತವವಾಗಿ, ಸಂಸತ್ ಸಂಕೀರ್ಣದಲ್ಲಿ ರಾಘವ್ ಚಡ್ಡಾ ಅವರ ಮೇಲೆ ಕಾಗೆ ದಾಳಿ ಮಾಡಿದೆ, ಅದರ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ಫೋಟೋದಲ್ಲಿ, ರಾಘವ್ ಚಡ್ಡಾ ಮಾನ್ಸೂನ್ ಅಧಿವೇಶನ ನಡೆಯುತ್ತಿರುವ ಸಂಸತ್ತಿನ ಹೊರಗೆ ಕಾಣಿಸಿಕೊಂಡಿದ್ದಾರೆ. ಅವನು ಫೋನ್’ನಲ್ಲಿ ಮಾತನಾಡುತ್ತಿದ್ದಾಗ ಕಾಗೆ ದಾಳಿ ಮಾಡಿದೆ. ಇನ್ನವ್ರು ಅದ್ರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ರಾಘವ್ ಚಡ್ಡಾ ಅವರ ಮೇಲೆ ಕಾಗೆ ದಾಳಿಯ ಈ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ಓಡಾಡುತ್ತಿದ್ದು, ಕಾಮೆಂಟ್ ಮಾಡುವ ಮೂಲಕ ತಮ್ಮ ಪ್ರತಿಕ್ರಿಯೆಯನ್ನ ನೀಡುತ್ತಿದ್ದಾರೆ. ಏತನ್ಮಧ್ಯೆ, ಭಾರತೀಯ ಜನತಾ ಪಕ್ಷವು ಟ್ವೀಟ್ ಮೂಲಕ ಎಎಪಿ ಸಂಸದರ ಕಾಲೇಳೆದಿದೆ. ರಾಘವ್ ಚಡ್ಡಾ ಫೋಟೋವನ್ನ ಹಂಚಿಕೊಂಡಿರುವ ದೆಹಲಿ ಬಿಜೆಪಿ, “ಸುಳ್ಳು ಹೇಳಿದ್ರೆ ಕಾಗೆ ಕುಕ್ಕುತ್ತೆ”…
ಉಡುಪಿ: ನೇತ್ರ ಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡೀಯೋ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿ ತನಿಖೆಯಲ್ಲಿದೆ ಎಂದು ಉಡುಪಿ ಎಸ್ಪಿ ಅಕ್ಷಯ್ ಹಾಕೆ ಮಚ್ಚೇಂದ್ರ ತಿಳಿಸಿದ್ದಾರೆ. ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಮಾಡಿ ಡಿಲೀಟ್ ಆದ ಬಗ್ಗೆ ಮೂವರು ವಿದ್ಯಾರ್ಥಿನಿಯರು ಮತ್ತು ಕಾಲೇಜು ಆಡಳಿತ ಮಂಡಳಿಯವರ ವಿರುದ್ಧ , ಮಹಿಳೆಯ ಮಾನಕ್ಕೆ ಕುಂದುಂಟುಮಾಡುವ ಕೃತ್ಯ , ವ್ಯಕ್ತಿಯ ಖಾಸಗಿ ಚಿತ್ರವನ್ನು ಚಿತ್ರೀಕರಿಸುವ ಕೃತ್ಯ ಅಡಿಯಲ್ಲಿ ಮಲ್ಪೆ ಠಾಣಾ ಪಿಎಸ್ ಐ ಯವರು ಸ್ವಯಂ ಪ್ರೇರಿತವಾಗಿ ಮಲ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ನೇತ್ರ ಜ್ಯೋತಿ ಕಾಲೇಜಿನ ಶೌಚಾಲಯದಲ್ಲಿ ಹಿಡನ್ ಕ್ಯಾಮೆರಾ ಮೂಲಕ ವಿಡಿಯೋ ಚಿತ್ರೀಕರಿಸಿ ಫಾರ್ವಡ್ ಮಾಡಿದ್ದಾರೆ ಎಂದು ಎಡಿಟ್ ಮಾಡಿದ ವಿಡಿಯೋ ಯೂ-ಟ್ಯೂಬ್ ಚಾನಲ್ ನಲ್ಲಿ ಅಪ್ಲೋಡ್ ಆಗಿದ್ದು ಅದನ್ನು ಕಾಲು ಸಿಂಗ್ ಚೌಹಾಣ್ ಎಂಬ ವ್ಯಕ್ತಿ ತನ್ನ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿ ಆಕ್ಷೇಪಾರ್ಹ ಸುಳ್ಳು ಸುದ್ದಿ…
ಉಡುಪಿ: ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಮೂವರು ವಿದ್ಯಾರ್ಥಿನಿಯರು, ಶೌಚಾಲಯದಲ್ಲಿ ಕ್ಯಾಮೆರಾ ಇರಿಸಿ ವಿದ್ಯಾರ್ಥಿನಿಯೊಬ್ಬರ ವಿಡಿಯೋ ಚಿತ್ರೀಕರಣ ಮಾಡಿದ ವಿವಾದಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಪ್ರಕರಣ ನಡೆದು ಒಂದು ವಾರದ ಬಳಿಕ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸೂಮೊಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ವಿಡಿಯೋ ಮಾಡಿದ್ದ ಮೂವರು ಮುಸ್ಲಿಂ ವಿದ್ಯಾರ್ಥಿನಿಯರ ವಿರುದ್ಧ ಎಫ್ ಐಆಅರ್ ದಾಖಲಾಗಿದೆ.ಈತನಕ ,ಸಂತ್ರಸ್ತ ವಿದ್ಯಾರ್ಥಿನಿ ದೂರು ದಾಖಲಿಸಿರಲಿಲ್ಲ. ಇದೀಗ ಪ್ರಕರಣ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ
ಮಂಗಳೂರು: ಬಾವುಟ ಗುಡ್ಡೆಯಲ್ಲಿರುವ ಖಾಸಗಿ ಇನ್ಶೂರೆನ್ಸ್ ಕಂಪೆನಿಯ ಸಂಸ್ಥೆಯ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಇನ್ಶೂರೆನ್ಸ್ ಕಚೇರಿಯು ಕಟ್ಟಡದ ಮೂರನೇ ಅಂತಸ್ತಿನಲ್ಲಿ ಅಗ್ನಿ ಅವಘಢ ಸಂಭವಿಸಿದ್ದು, ತಕ್ಷಣ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದು ಈ ಅವಘಡದಲ್ಲಿ ಕಂಪ್ಯೂಟರ್, ಎಸಿ ಮತ್ತಿತರ ಪರಿಕರಗಳು ಸುಟ್ಟು ಹೋಗಿರುವ ಘಟನೆ ನಡೆದಿದ್ದು, ಲಕ್ಷಾಂತ ರೂ. ನಷ್ಟ ಸಂಭವಿಸಿ ಎಂದು ತಿಳಿದು ಬಂದಿದೆ. ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಘಟನೆ ನಡೆದ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಆಡಳಿತ ಯಂದ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ, ಐವರು ಐಎಎಸ್ ಹಾಗೂ 25 ಮಂದಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ( IAS and KAS Officer Transfer ) ಮಾಡಿ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ದಾವಣಗೆರೆ ಜಿಲ್ಲಾಧಿಕಾರಿಯಾಗಿ ಡಾ.ಎಂ.ವಿ ವೆಂಕಟೇಶ್, ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿ ಗಂಗೂಬಾಯಿ ರಮೇಶ್ ಮಾನಕರ್, ಕೃಷಿ ಮಾರುಕಟ್ಟೆ ಇಲಾಖೆಯ ನಿರ್ದೇಶಕರಾಗಿ ಜಿ.ಎಂ ಗಂಗಾಧರಸ್ವಾಮಿ, ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ನಿರ್ದೇಶಕರನ್ನಾಗಿ ಕೆ.ನಾಗೇಂದ್ರ ಪ್ರಸಾದ್ ಹಾಗೂ ತುಮಕೂರು ಮಹಾನಗರ ಪಾಲಿಕೆಯ ಆಯುಕ್ತೆಯಾಗಿ ಬಿ.ವಿ ಅಶ್ವಿಜಾ ಅವರನ್ನು ವರ್ಗಾವಣೆ ಮಾಡಿದೆ.










