ಮಂಗಳೂರು: ಪಾಂಡೇಶ್ವರ ಪೊಲೀಸರು ಕಾರ್ಯಾಚರಣೆ ನಡೆಸಿ ನಗರದ ಎರಡು ಕಡೆ ಮಾರಾಟ ಮಾಡಲಾಗುತ್ತಿದ್ದ ಸುಮಾರು100 ಕೆಜಿಯಷ್ಟು ಮಾದಕ ವಸ್ತು ಮಿಶ್ರಿತ ಚಾಕೊಲೆಟ್ಗಳನ್ನು ವಶಪಡಿಸಿಕೊಂಡಿದ್ದಾರೆ. ನಗರದ ರಥಬೀದಿಯಲ್ಲಿ ಮನೋಹರ್ ಶೇಟ್ ಮತ್ತು ನಗರದ ಫಳ್ನೀರ್ ನ ಗೂಡಂಗಡಿಯಲ್ಲಿ ಉತ್ತರ ಪ್ರದೇಶ ಮೂಲದ ಬೆಚನ್ ಸೋನ್ಕರ್ ಎಂಬಾತ ಮಾದಕ ವಸ್ತು ಮಿಶ್ರಿತ ಬಾಂಗ್ ಎಂಬ ಚಾಕೊಲೆಟ್ ಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಒಟ್ಟು ಸುಮಾರು 100ಕೆಜಿ ಚಾಕೊಲೆಟ್ ಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.ಈ ಚಾಕೊಲೆಟ್ ನ ಮಾದರಿಗಳನ್ನು ಹೆಚ್ಚಿನ ಪರೀಕ್ಷೆಗಾಗಿ ವಿಧಿವಿಜ್ಞಾನ ಪ್ರಯೋಗಲಯಕ್ಕೆ ಕಳುಹಿಸಿದ್ದು, ಅದರ ವರದಿ ಆಧಾರದಲ್ಲಿ ಪೊಲೀಸರು ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.
Author: main-admin
ಪುತ್ತೂರು: ಅಪ್ರಾಪ್ತ ವಯಸ್ಸಿನ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಸೀತಾರಾಮ ಯಾನೆ ಪ್ರವೀಣ್ ಎಂಬಾತ ಆರೋಪಿ ಎಂದು ಗುರುತಿಸಲಾಗಿದೆ. ನಿನ್ನೆ ಬೆಳಗ್ಗೆ ಅಪ್ರಾಪ್ತ ಪ್ರಾಯದ ಇಬ್ಬರು ಬಾಲಕಿಯರು ತಮ್ಮ ಮನೆಯಿಂದ ಪುತ್ತೂರು ನಗರದ ಕಾಲೇಜಿಗೆ ತೆರಳುತ್ತಿದ್ದಾಗ ದಾರಿ ಮಧ್ಯೆ ಅಪರಿಚಿತ ವ್ಯಕ್ತಿಯೋರ್ವ ಈ ಬಾಲಕಿಯರೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಅರೋಪಿಸಲಾಗಿದೆ. ಬಾಲಕಿಯರು ಆತನಿಂದ ತಪ್ಪಿಸಿಕೊಂಡು ಕಾಲೇಜಿಗೆ ತಲುಪಿ ಘಟನೆಯ ಬಗ್ಗೆ ಕಾಲೇಜಿನ ಉಪನ್ಯಾಸಕಿಗೆ ತಿಳಿಸಿದ್ದಾರೆ. ಉಪನ್ಯಾಸಕಿ ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿ ಸೀತಾರಾಮ ಯಾನೆ ಪ್ರವೀಣ್ ಎಂಬಾತನನ್ನು ದಸ್ತಗಿರಿ ಮಾಡಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಸೆರೆಸಿಕ್ಕ ಐವರು ಶಂಕಿತ ಉಗ್ರರನ್ನು ಉಗ್ರರನ್ನು ಸಿಸಿಬಿ ಪೊಲೀಸರು ಕೋರ್ಟ್ಗೆ ಹಾಜರುಪಡಿಸಿದ್ದು, 7 ದಿನ ವಶಕ್ಕೆ ನೀಡಲಾಗಿದೆ. ತನಿಖಾಧಿಕಾರಿ ಎಸಿಪಿ ಕುಮಾರ್ ನೇತೃತ್ವದಲ್ಲಿ ಬೆಂಗಳೂರಿನ ಎನ್ಐಎ ವಿಶೇಷ ಕೋರ್ಟ್ಗೆ ಸಿಸಿಬಿ ಪೊಲೀಸರು ಹಾಜರು ಪಡಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಕೋರ್ಟ್ ಆವರಣದಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿಗರನ್ನು ಬುಧವಾರ ಬೆಳ್ಳಂಬೆಳಗ್ಗೆ ಆಘಾತಕಾರಿ ಸುದ್ದಿಯೊಂದು ಬೆಚ್ಚಿಬೀಳಿಸಿದೆ. ನಿಖರ ಮಾಹಿತಿ ಪಡೆದು ನಗರ ಅಪರಾಧ ವಿಭಾಗ ಪೊಲೀಸರು ಐವರು ಶಂಕಿತ ಉಗ್ರರನ್ನು ಬಂಧಿಸಿದ್ದು ಒಬ್ಬ ಜೈಲಿನಲ್ಲಿದ್ದರೆ ಮಾಸ್ಟರ್ ಮೈಂಡ್ ತಲೆಮರೆಸಿಕೊಂಡಿದ್ದಾನೆ. ಬಂಧಿತರನ್ನು ಸೈಯದ್ ಸುಹೇಲ್, ಉಮರ್, ಜಾನಿದ್, ಮುದಾಸಿರ್ ಮತ್ತು ಜಾಹಿದ್ ಎಂದು ಗುರುತಿಸಲಾಗಿದ್ದು, ಈ ತಂಡ ಬೆಂಗಳೂರಿನಲ್ಲಿ ಸ್ಫೋಟ ನಡೆಸಲು ಯೋಜನೆ ರೂಪಿಸಿತ್ತು ಎಂದು ಶಂಕಿಸಲಾಗಿದೆ.
ಧರ್ಮಸ್ಥಳ: ಧರ್ಮಸ್ಥಳದಲ್ಲಿ ನಡೆಯುತ್ತಿರುವ ಪ್ರಸ್ತುತ ವಿದ್ಯಮಾನಗಳ ಬಗ್ಗೆ ವೀರೇಂದ್ರ ಹೆಗ್ಗಡೆಯವರು ವಿಭಾಗೀಯ ಮುಖ್ಯಸ್ಥರ ಸಭೆ ನಡೆಸಿದ್ದಾರೆ. ವಿಭಾಗೀಯ ಮುಖ್ಯಸ್ಥರ ಸಭೆಯಲ್ಲಿ ಮಾತನಾಡಿದ ವೀರೇಂದ್ರ ಹೆಗ್ಗಡೆಯವರು, ಕ್ಷೇತ್ರದಲ್ಲಿ 60 ವರ್ಷಗಳಲ್ಲಿ ಬಹಳ ಬದಲಾವಣೆ ಆಗಿದೆ, ಹಲವು ಸೇವೆ ಮಾಡಿಕೊಂಡು ಬಂದಿದ್ದೇವೆ. ಒಳ್ಳೆಯ ಕೆಲಸ ಅನ್ನೋದು ಎರಡು ರೀತಿಯ ಕತ್ತಿ ಇದ್ದ ಹಾಗೆ, ಅದು ಎರಡೂ ಕಡೆಯಿಂದ ಕೊಯ್ತದೆ, ಪ್ರಚಾರದ ದೃಷ್ಟಿಯಲ್ಲಿ ಒಳ್ಳೆಯದು ಹಾಗೂ ದ್ವೇಷ ಕೂಡ ಉಂಟು ಮಾಡ್ತಾದೆ. ನಮಗೆ ಕೋಟ್ಯಾಂತರ ಅಭಿಮಾನಿಗಳ ಬಳಗ ಇದೆ, ಇದರಲ್ಲಿ ಕೆಲವರಿಗೆ ದ್ವೇಷ ಆಗಿದೆ. ಇದಕ್ಕೆ ದ್ವೇಷ, ಅಸೂಯೆ ಕಾರಣ, ಧರ್ಮಸ್ಥಳದ ಹೆಸರಲ್ಲಿ ಒಳ್ಳೆಯ ಕೆಲಸ ಆಗ್ತಿದೆ ಅಂತ. ಕ್ಷೇತ್ರದ ಸಂಪತ್ತನ್ನ ಹೇಗೆ ಬಳಸ್ತೀವಿ ಅನ್ನೋದ್ರ ಮೇಲೆ ಅದರ ಪರಿಣಾಮ ಇದೆ. ಈಗ ಅವರು ಮಾತನಾಡುವ ವಿಷಯಗಳು ನಮಗೆ ಸಂಬಂಧವೇ ಇಲ್ಲ, ತನಿಖೆ ಮಾಡಲು ಮೊದಲು ಸರ್ಕಾರಕ್ಕೆ ಮೊದಲು ಪತ್ರ ಬರೆದಿದ್ದೇ ನಾನು. ಸಿಬಿಐಗೆ ಒಪ್ಪಿಸಿ ಅಂತ ಮುಖ್ಯಮಂತ್ರಿಗಳಿಗೆ ಹೇಳಿದ್ದು ನಾನೇ, ಮತ್ತಷ್ಟು ತನಿಖೆ, ಸಂಶೋಧನೆ…
ಸುಳ್ಯ:ಕಲ್ಲಪಳ್ಳಿ ಪಾಣತ್ತೂರು ಅಂತರ್ ರಾಜ್ಯ ಸಂಪರ್ಕದ ರಸ್ತೆಯ ಬಾಟೋಳಿ ಎಂಬಲ್ಲಿ ಬೃಹತ್ ಧರೆ ಕುಸಿತ ಉಂಟಾಗಿ ರಸ್ತೆ ಮೇಲೆ ಮಣ್ಣು ಹಾಗೂ ಮರ ಬಿದ್ದುದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಬಾಟೋಳಿ ಗಡಿ ಪ್ರದೇಶದಿಂದ ಸುಮಾರು 100 ಮೀಟರ್ ಮುಂದೆ ಘಟನೆ ಸಂಭವಿಸಿದ್ದು ಪಾಣತ್ತೂರು ರಸ್ತೆ ಸಂಚಾರ ಬಂದ್ ಆಗಿದೆ. ಈ ಭಾಗದಲ್ಲಿ ಹಿಂದೆಯೂ ಧರೆ ಕುಸಿತಗೊಂಡಿತ್ತು. ಲಘು ವಾಹನಗಳಿಗೆ ಬಡ್ಡಡ್ಕದಿಂದ ರಂಗತಮಲೆ ಪರ್ಯಾಯ ಮಾರ್ಗವಾಗಿ ಸಂಚರಿಸಬಹುದು ಎಂದು ತಿಳಿದು ಬಂದಿದೆ.
ಮಲ್ಪೆ ಸಮುದ್ರದಲ್ಲಿ ಮುಳುಗುತ್ತಿದ್ದ ದೋಣಿಯಿಂದ ಐವರು ಮೀನುಗಾರರನ್ನು ಹಾಗೂ ಲಕ್ಷಾಂತರ ಮೌಲ್ಯದ ಸ್ವತ್ತುಗಳನ್ನು ರಕ್ಷಿಸಿರುವ ಘಟನೆ ಇಂದು ಮಧ್ಯಾಹ್ನ ವೇಳೆ ನಡೆದಿದೆ. ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಮಧ್ಯಾಹ್ನ ದ ಹೊತ್ತಿಗೆ ಸಮುದ್ರದ ಅಲೆಗಳ ಆರ್ಭಟಕ್ಕೆ ಒಡೆದು ನೀರು ತುಂಬಿ ದೋಣಿಯು ಮುಳುಗುವ ಸ್ಥಿತಿಗೆ ತಲುಪಿತ್ತು. ದೋಣಿಯು ಮುಳುಗುತ್ತಿರುವ ವಿಷಯ ತಿಳಿದು ತಕ್ಷಣ ಕಾರ್ಯಪ್ರವ್ರತ್ತರಾದ ಆಪತ್ಭಾಂಧವ ಈಶ್ವರ್ ಮಲ್ಪೆ ಅವರ ತಂಡ ದೋಣಿಯ ಮೂಲಕ ತೆರಳಿ ಐದು ಜನ ಮೀನುಗಾರರನ್ನು ರಕ್ಷಿಸಿದ್ದರು. ಮತ್ತೆ ಮತ್ತೊಂದು ದೋಣಿಯ ಮೂಲಕ ಸಮುದ್ರದ ಅಲೆಗಳನ್ನು ಲೆಕ್ಕಿಸದೆ ಮುಳುಗುತ್ತಿರುವ ದೋಣಿಯ ಬಳಿ ತೆರಳಿ ಸುಮಾರು ಮೂರು ಲಕ್ಷ ರೂಪಾಯಿ ಬೆಲೆಬಾಳುವ ಎರಡು ಎಂಜಿನ್ ಹಾಗೂ ಇಂಧನಗಳನ್ನು ಸುರಕ್ಷಿತವಾಗಿ ತರುವಲ್ಲಿ ಯಶಸ್ವಿಯಾದರು. ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಬಿಲಾಲ್ ಮಲ್ಪೆ, ರವಿ , ಅನಿಲ್ ಹಾಗೂ ನಾಲ್ವರು ಕೈಜೋಡಿಸಿದರು.
ಬೆಂಗಳೂರು: ಕೇಂದ್ರ ಗುಪ್ತಚರ ಮಾಹಿತಿ ಮೇರೆಗೆ ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರು ಸಿಸಿಬಿ ಬಲೆಗೆ ಬಿದ್ದಿದ್ದಾರೆ. ಕನಕನಗರ ಬಳಿಯ ಸುಲ್ತಾನ್ ಪಾಳ್ಯ ಮಸೀದಿ ಬಳಿ ಟೆರರ್ ಮೀಟಿಂಗ್ ವೇಳೆ ಆರೋಪಿಗಳು ಸಿಸಿಬಿ ಬಲಗೆ ಬಿದ್ದಿದ್ದಾರೆ. 2017ರಲ್ಲಿ ಆರ್ಟಿ ನಗರದ ನೂರ್ ಕೊಲೆ ಕೇಸ್ನಲ್ಲಿ ಬಂಧನವಾಗಿದ್ದ ಆರೋಪಿಗಳ ಪೈಕಿ ಐವರು ಟೆರರ್ ಲಿಂಕ್ ಪಡೆದಿದ್ದರು ಎಂದು ಹೇಳಲಾಗುತ್ತಿದೆ. ಕೊಲೆ ಪ್ರಕರಣದ ಪ್ರಮುಖ ಆರೋಪಿ ಜುನೈದ್ ಸದ್ಯ ತಲೆಮರೆಸಿಕೊಂಡಿದ್ದು, ಇವನ ಸಹಚರರಾಗಿರುವ ಸುಹೈಲ್, ಉಮರ್, ತಬ್ರೇಜ್, ಮುದಾಸಿರ್ ಮತ್ತು ಫೈಜಲ್ ರಬ್ಬಾನಿ ಬಂಧಿತ ಆರೋಪಿಗಳಾಗಿದ್ದಾರೆ. ಇನ್ನು ಕೊಲೆ ಕೇಸ್ನಲ್ಲಿ ಜೈಲು ಸೇರಿದ್ದಾಗ 2008ರ ಬೆಂಗಳೂರು ಸಿರಿಯಲ್ ಬಾಂಬ್ ಬ್ಲಾಸ್ಟ್ ಕೇಸ್ನ ರುವಾರಿ ನಾಸೀರ್ ಸಂಪರ್ಕದಲ್ಲಿದ್ದ ಜುನೈದ್ ಉಗ್ರ ಚಟುವಟಿಕೆ ಆಸಕ್ತಿ ತೋರಿ ನಾಸೀರ್ ಹೇಳಿದಂತೆ ವಿದ್ವಾಂಸಕ ಕೃತ್ಯ ನಡೆಸಲು ತಯಾರಿ ನಡೆಸಿದ್ದನಂತೆ. ಅಲ್ಲದೆ ಕೊಲೆ ಕೇಸ್ನಲ್ಲಿ ಬೇಲ್ ಮೇಲೆ ಹೊರ ಬಂದ ನಾಸೀರ್ ಮತ್ತೆ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ದೂರದಲ್ಲೇ ಕುಳಿತು ಜುನೈದ್ ತನ್ನ…
ಮಂಗಳೂರು: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಐಕಳದ ಮನೆಯೊಂದರಲ್ಲಿ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೊಂಡಂತಿಲ ಗ್ರಾಮದ ತಾರಿಗುಡ್ಡ ಸೈಟ್ ಮನೆಯ ಮುಹಮ್ಮದ್ ಶರೀಫ್ (40) ಬಂಧಿತ ಆರೋಪಿ. 2023ರ ಜನವರಿ 15ರಂದು ಸಂಜೆ 6:30ರಿಂದ 16ರ ಬೆಳಗ್ಗೆ 9ರ ಮಧ್ಯೆ ತಾಳಿಪ್ಪಾಡಿ ಗ್ರಾಮದ ಗುತ್ತಕಾಡು ಎಂಬಲ್ಲಿರುವ ಐಕಳ ಹರೀಶ್ ಶೆಟ್ಟಿ ಎಂಬವರ ಮನೆಯ ಎದುರಿನ ಬಾಗಿಲಿನ ಲಾಕನ್ನು ಮುರಿದು ಮನೆಯಲ್ಲಿದ್ದ ಚಿನ್ನಾಭರಣ, ಬೆಳ್ಳಿಯ ಆಭರಣ ಹಾಗೂ ನಗದು ಹಣವನ್ನು ಕಳವುಗೈ ದಿರುವ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಈ ಪ್ರಕರಣದ ತನಿಖೆಯನ್ನು ನಗರ ಅಪರಾಧ ವಿಭಾಗ (ಸಿಸಿಬಿ) ಕ್ಕೆ ಹಸ್ತಾಂತರಿಸಲಾಗಿತ್ತು. ತನಿಖೆ ಕೈಗೊಂಡ ಸಿಸಿಬಿ ಎಸಿಪಿ ಪಿಎ ಹೆಗಡೆ ನೇತೃತ್ವದ ಪೊಲೀಸರು ಪ್ರಕರಣದಲ್ಲಿ ಭಾಗಿಯಾದ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿ 56,50,000 ರೂ, ಚಿನ್ನಾಭರಣಗಳು, ಮೊಬೈಲ್ ಫೋನ್ ಮತ್ತಿತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದರು. ಈ ಪ್ರಕರಣದ ಆರೋಪಿಗಳಿಗೆ ಮನೆಯನ್ನು ತೋರಿಸಿಕೊಟ್ಟ ಆರೋಪಿ ಮುಹಮ್ಮದ್…
ಮಣಿಪಾಲ: ಕೇಂದ್ರ ಕಂದಾಯ ಇಲಾಖೆಯ ನಿವೃತ್ತ ಅಧಿಕಾರಿಯೊರ್ವರ ಶವವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಪೆರ್ಡೂರು ನಿವಾಸಿ 83 ವರ್ಷದ ಗೋಪಾಲ ನಾಯಕ್ ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಮೃತಪಟ್ಟು ಮೂರು ದಿನಗಳು ಕಳೆದಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಮೃತರು ದಶರಥ ನಗರದ ನರಸಿಂಗೆ ದೇವಸ್ಥಾನದ ಬಳಿ ಒಬ್ಬಂಟಿಯಾಗಿ ವಾಸವಾಗಿದ್ದರು. ಮಣಿಪಾಲ ಪೋಲಿಸ್ ಠಾಣೆಯ ಪೋಲಿಸ್ ಅಧಿಕಾರಿಗಳು ಘಟನಾ ಸ್ಥಳಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದರು. ಶವವನ್ನು ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು, ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ನೆರವಾದರು.
ಮಂಗಳೂರು: ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಉರ್ವ ಜಂಕ್ಷನ್ ಹತ್ತಿರದ ಮೈದಾನದಲ್ಲಿ ಮಟ್ಕಾ ಚೀಟಿ ದಂಧೆ ನಡೆಸುತ್ತಿದ್ದ ಆರೋಪದಡಿಯಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ದೀಪಕ್ ಶೆಟ್ಟಿ ಕೋಡಿಕಲ್, ಅನಿಲ್ ಶೆಟ್ಟಿ ಕೋಡಿಕಲ್ ಹಾಗೂ ಗಿರೀಶ್ ರೈ ವಾಮಂಜೂರು ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಉರ್ವಾ ಠಾಣಾ ಪೊಲೀಸರು ತಿಳಿಸಿದ್ದಾರೆ.










