ಕಾರ್ಕಳ : ನಗರದ ಬಂಗ್ಲೆಗುಡ್ಡೆಯಲ್ಲಿ ಆ್ಯಂಬುಲೆನ್ಸ್ ಪಲ್ಟಿಯಾದ ಘಟನೆ ಮಾ. 30ರ ಸಂಜೆ ನಡೆದಿದ್ದು, ಪರಿಣಾಮ ಅದರಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. ಕಾರ್ಕಳ ರೋಟರಿ ಆಸ್ಪತ್ರೆಯ ಆ್ಯಂಬುಲೆನ್ಸ್ ಕಾರ್ಕಳದಿಂದ ಎಳ್ಳಾರೆ ಸಾಗುತ್ತಿದ್ದ ವೇಳೆ ಬಂಗ್ಲೆಗುಡ್ಡೆಯಲ್ಲಿ ಬೈಕ್ ಒಂದು ಅಡ್ಡ ಬಂದ ಪರಿಣಾಮ ಆ್ಯಂಬುಲೆನ್ಸ್ ಚಾಲಕ ಅದನ್ನು ತಪ್ಪಿಸಲು ಯತ್ನಿಸಿದ್ದರು. ಈ ಸಂದರ್ಭ ಆ್ಯಂಬುಲೆನ್ಸ್ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಆ್ಯಂಬುಲೆನ್ಸ್ನಲ್ಲಿದ್ದ ನಾಲ್ವರು ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ಎಳ್ಳಾರೆ ಭಾಗದ ನಾಲ್ವರು ರೋಟರಿ ಆಸ್ಪತ್ರೆಯಲ್ಲಿ ಕಣ್ಣಿನ ಶಿಬಿರದಲ್ಲಿ ಸರ್ಜರಿ ಮಾಡಿಸಿಕೊಂಡು ಆಸ್ಪತ್ರೆಯ ಆ್ಯಂಬುಲೆನ್ಸ್ ನಲ್ಲಿ ಮನೆಗೆ ವಾಪಸಾಗುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಚಾಲಕ ಯಾವುದೇ ರೀತಿಯ ಗಾಯವಾಗದೇ ಪಾರಾಗಿದ್ದಾರೆ. ಗಾಯಗೊಂಡವರನ್ನು ಕಾರ್ಕಳ ರೋಟರಿ ಆಸ್ಪತ್ರೆಗೆ ಕರೆಯೊಯ್ಯಲಾಗಿದ್ದು ಪ್ರಥಮ ಚಿಕಿತ್ಸೆ ನೀಡಲಾಗಿದೆ.
Author: main-admin
ಬೆಳ್ತಂಗಡಿ: ಎರಡು ಬೈಕ್ಗಳ ನಡುವೆ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಸವಣಾಲಿನಲ್ಲಿ ನಡೆದಿದೆ. ಸವಣಾಲು ಮಸೀದಿ ಬಳಿ ಎರಡು ಬೈಕ್ ಗಳು ಮುಖಾಮುಖಿ ಢಿಕ್ಕಿಯಾಗಿದ್ದು ಈ ವೇಳೆ ಅಳದಂಗಡಿಯ ಕುರ್ದಲಬೆಟ್ಟು ನಿವಾಸಿ ಹೆನ್ರಿ ಡಿಸೋಜಾ (62) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತೋರ್ವ ಬೈಕ್ ಸವಾರ ಬೆಳ್ತಂಗಡಿ ತಾಲೂಕಿನ ಕರಂಬಾರು ನಿವಾಸಿ ಕರುಣಾಕರ ಹೆಗ್ಡೆ (60) ಗಂಭೀರ ಗಾಯಗೊಂಡಿದ್ದು ಗುರುವಾಯನಕೆರೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸಂತೋಷ್ ಮತ್ತು ಸಿಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
ಮಂಗಳೂರು: ನಗರದ ಬೆಂದೂರ್ ವೆಲ್ ಬಳಿ ರಸ್ತೆ ದಾಟುತ್ತಿದ್ದ ವೇಳೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ತರಕಾರಿ ತಗೊಂಡು ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಬಸ್ ಬಡಿದಿದ್ದು ಮಹಿಳೆ ಸ್ಥಳದಲ್ಲೇ ಒದ್ದಾಡಿ ಪ್ರಾಣ ಬಿಟ್ಟಿದ್ದು ಘಟನೆ ಬಳಿಕ ಚಾಲಕ ಬಸ್ ನೊಂದಿಗೆ ಪರಾರಿಯಾಗಿದ್ದಾನೆ. ಬಸ್ ಪತ್ತೆ ಹಚ್ಚಲು ಪೊಲೀಸರು ಸಿಸಿ ಟಿವಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ಪಟ್ಟ ಮಹಿಳೆ ಗುರುತು ಪತ್ತೆಯಾಗಿಲ್ಲ. ಖಾಸಗಿ ಬಸ್ ನ ಧಾವಂತಕ್ಕೆ ಒಂದು ವಾರದ ನಡುವೆ ಎರಡನೇ ಘಟನೆ ಇದಾಗಿದೆ. ಮಂಗಳೂರು ನಗರದಲ್ಲಿ ಬಸ್ ಗಳ ಮೇಲಾಟ ದಿನೇ ದಿನೇ ಜಾಸ್ತಿಯಾಗುತ್ತಿದ್ದು ಕಿಲ್ಲರ್ ಬಸ್ ಗಳ ಧಾವಂತಕ್ಕೆ ಅಮಾಯಕರು ಬಲಿಯಾಗುತ್ತಿದ್ದಾರೆ. ನಗರದ ಬೆಂದೂರು ಬಳಿ ಮೊನ್ನೆ ತಾನೆ ತಾಯಿ- ಮಗು ಪ್ರಯಾಣಿಸುತ್ತಿದ್ದ ಸ್ಕೂಟಿ ಮೇಲೆ ಬಸ್ ಹರಿದು ಮಗು ದಾರುಣವಾಗಿ ಮೃತಪಟ್ಟ ಸ್ಥಳದಲ್ಲೇ ಇಂದು ಮದ್ಯಾಹ್ನ ಮತ್ತೊಂದು ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಸಂಚಾರಿ ಎಸಿಪಿ ಮತ್ತಿತರ ಅಧಿಕಾರಿಗಳು…
ಕಡಬ: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಸಾವನ್ನಪ್ಪಿದ ಘಟ ಇಂದು ಬೆಳಿಗ್ಗೆ ಕಡಬ ಸಮೀಪದ ಎಡಮಂಗಲ ಗ್ರಾಮದಿಂದ ವರದಿಯಾಗಿದೆ. ಗ್ರಾಮದಲ್ಲಿ ದೈವ ನರ್ತಕರಾಗಿ ಹೆಸರುವಾಸಿಯಾಗಿದ್ದ ಕಾಂತು ಅಜಿಲ ಮೂಲಂಗೀರಿ ಸಾವನ್ನಪ್ಪಿದ ದುರ್ದೈವಿ. ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದಂತೆ ದೈವಾರಾದಕರಾಗಿ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು.ಮಾ.30 ರಂದು ಎಡಮಂಗಲ ಗ್ರಾಮದ ಇಡ್ಯಡ್ಕದಲ್ಲಿ ಗ್ರಾಮಕ್ಕೆ ಸಂಬಂಧಿಸಿದ ನೇಮೊತ್ಸವ ನಡೆಯುತ್ತಿತ್ತು. ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು ಬೀಳುತ್ತಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕರೆತಂದರೂ ಪ್ರಯೋಜನವಾಗಿಲ್ಲ.
ಮಂಗಳೂರು: ಹೊಸತಾಗಿ ಎಸಿ ಮೆಷಿನ್ ಕನೆಕ್ಟ್ ಮಾಡುತ್ತಿದ್ದ ವೇಳೆ ಬಹುಮಹಡಿ ಕಟ್ಟಡದ 9ನೇ ಮಹಡಿಯಿಂದ ಆಯತಪ್ಪಿ ಬಿದ್ದು ಯುವಕನೋರ್ವನು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಜೆ 6 ಗಂಟೆ ನಗರದ ನಂತೂರಿನಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಮಣಿಹಳ್ಳ ನಿವಾಸಿ ವಿನಯ್ ತಾವೋ(23) ಮೃತಪಟ್ಟ ದುರ್ದೈವಿ. ವಿನಯ್ ತಾವ್ರೋ ನಂತೂರಿನ ಹಮಾರಾ ರೆಫ್ರಿಜರೇಟರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇವರು ಇಂದು ನಂತೂರಿನಲ್ಲಿರುವ ಮೌಂಟ್ ಟಿಯಾರಾ ಅಪಾರ್ಟೆಂಟ್ ನಲ್ಲಿ ಹೊಸದಾಗಿ ಎಸಿ ಮೆಷಿನ್ ಕನೆಕ್ಟ್ ಮಾಡಲು ತೆರಳಿದ್ದರು. ಈ ಅಪಾರ್ಟ್ ಮೆಂಟ್ ನ 9ನೇ ಮಹಡಿಯ ಮನೆಯ ಆವರಣ ಗೋಡೆಯ ಹೊರಭಾಗದಲ್ಲಿ ವಿನಯ್ ತಾವ್ರೋ ಹಾಗೂ ಮತ್ತೋರ್ವ ಯುವಕ ಮೆಷಿನ್ ಫಿಟ್ ಮಾಡುತ್ತಿದ್ದರು. ಈ ವೇಳೆ ವಿನಯ್ ಏಕಾಏಕಿ ಆಯತಪ್ಪಿ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಯುವಕನ ತಲೆ ಒಡೆದು ರಕ್ತಸ್ರಾವದಿಂದ ಮೃತನಾಗಿದ್ದಾನೆ. ಸ್ಥಳಕ್ಕೆ ಕದ್ರಿ ಪೊಲೀಸರು ಭೇಟಿ ನೀಡಿದ್ದು ವಿನಯ್ ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ವಿನಯ್ ಇತ್ತೀಚೆಗಷ್ಟೆ ಎಸಿ ಕಂಪೆನಿಗೆ…
ಮಂಗಳೂರು: ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದ್ದು ಬೆಳಿಗ್ಗೆಯಿಂದಲೇ ಮಾದರಿ ಸಂಹಿತೆ ಜಾರಿಗೊಂಡ ಕಾರಣ ಸರ್ಕಾರದ ಅನುದಾನವನ್ನು ಬಳಸಿಕೊಂಡು ಹಾಕಿರುವ ಜಾಹೀರಾತು ಫ್ಲೆಕ್ಸ್, ಬ್ಯಾನರ್ ಹಾಗೂ ಬಂಟಿಂಗ್ಸ್ ಗಳನ್ನು ಜಿಲ್ಲೆಯಾದ್ಯಂತ ಕೂಡಲೇ ತೆರವುಗೊಳಿಸುವಂತೆ ಜಿಲ್ಲೆಯ ಎಲ್ಲಾ ಚುನಾವಣಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರು ನಿರ್ದೇಶನ ನೀಡಿದರು. ಅವರು ಮಾ.29ರ ಬುಧವಾರ ಈ ಕುರಿತು ಹಮ್ಮಿಕೊಂಡಿದ್ದ ವಿಡಿಯೋ ಕಾನ್ಪರೆನ್ಸ್ ಸಭೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೊಂಡಿದೆ, ಕಾರಣ ಅಧಿಕೃತ ಹಾಗೂ ಅನಧಿಕೃತವಾಗಿ ಹಾಕಲಾಗಿರುವ ಎಲ್ಲಾ ರೀತಿಯ ಜಾಹೀರಾತುಗಳನ್ನು ತೆರವುಗೊಳಿಸಬೇಕು, ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಬೇಕು, ಯಾವುದೇ ಸರ್ಕಾರಿ ಕಚೇರಿಯಲ್ಲಿ, ಸರ್ಕಾರದ ಅಧಿಕೃತ ವೆಬ್ಸೈಟ್ಗಳಲ್ಲಿ ಹಾಕಲಾಗಿರುವ ರಾಜಕೀಯ ಪಕ್ಷಗಳ ಮುಖಂಡರ ಭಾವಚಿತ್ರಗಳನ್ನು ಈ ಕೂಡಲೇ ತೆರವುಗೊಳಿಸಬೇಕು ಎಂದ ಅವರು, 24, 72 ಗಂಟೆಯೊಳಗೆ ನಿರ್ವಹಿಸಬೇಕಾದ ಕರ್ತವ್ಯಗಳನ್ನು ವಿವರಿಸಿದರು ಒಮ್ಮೆ ತೆರವು ಮಾಡಲಾದ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ ಹಾಗೂ ಕಟ್ಔಟ್ಗಳನ್ನು ಪುನಃ ಅಳವಡಿಸಿದ್ದಲ್ಲಿ ಪ್ರಜಾಪ್ರತಿನಿಧಿ…
ಧರ್ಮಸ್ಥಳ: ಪತಿ, ಪತ್ನಿ ನಡುವೆ ಜಗಳ ನಡೆದು ಪತಿ ಮೃತಪಟ್ಟ ಘಟನೆ ಧರ್ಮಸ್ಥಳ ಕನ್ಯಾಡಿ ಗಂಗೆತ್ಯಾರ್ ಎಂಬಲ್ಲಿ ನಡೆದಿದೆ. ರಾಮಣ್ಣ ಗೌಡ ಮೃತಪಟ್ಟ ವ್ಯಕ್ತಿ. ರಾಮಣ್ಣ ಪತ್ನಿ ಚೆನ್ನಕ್ಕಗೆ ಕತ್ತಿಯಿಂದ ಹಲ್ಲೆ ನಡೆಸಿದ್ದಾರೆ.ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಗಂಭೀರ ಗಾಯಗಳಾಗಿದೆ ಎನ್ನಲಾಗಿದೆ. ಪತ್ನಿಯೊಂದಿಗೆ ಜಗಳವಾಡಿದ ರಾಮಣ್ಣ ಗೌಡಗೆ ರಕ್ತದ ಒತ್ತಡ ಹೆಚ್ಚಿದ ಪರಿಣಾಮ ಸಾವನ್ನಪ್ಪಿದ್ದಾರೆ. ಘಟನೆ ಬಗ್ಗೆ ಧರ್ಮಸ್ಥಳ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.ಈ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲ.
ಈಗಾಗಲೇ ಕರ್ನಾಟಕ ವಿಧಾನಸಭೆ ಚುನಾವಣೆ ನೀತಿಸಂಹಿತೆ(code of conduct) ಜಾರಿಯಾಗಿದ್ದು ಮೇ.10ರಂದು ಮತದಾನ ಮತ್ತು ಮೇ.13 ರಂದು ಮತ ಎಣಿಕೆ ನಡೆಯಲಿದೆ. ಈ ಹಿನ್ನಲೆ ನೀತಿ ಸಂಹಿತೆಯ ಕೆಲವು ನಿರ್ಬಂಧನೆಗಳು ಈ ಕೆಳಗಿನಂತಿವೆ.1.ಹೊಸ ಕಾರ್ಯಕ್ರಮಗಳ ಅನುಷ್ಟಾನ, ಉದ್ಘಾಟನೆ ಮಾಡುವ ಹಾಗಿಲ್ಲ 2.ಯಾವುದೇ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸುವಂತಿಲ್ಲ. ಸಭೆ, ಸಮಾರಂಭಗಳ ನಡೆಸುವ ಮೊದಲು ಅನುಮತಿ ಪಡೆಯಬೇಕಾಗುತ್ತೆ.4.ಬೈಕ್ ರ್ಯಾಲಿ, ಪ್ರಚಾರ ರ್ಯಾಲಿಗಳಿಗೆ ಅನುಮತಿ ಪಡೆಯುವುದು ಕಡ್ಡಾಯ.5.ವಾಹನಗಳ ಮೇಲೆ ಪಕ್ಷದ ಬಾವುಟಗಳನ್ನು ಕಟ್ಟುವುದಕ್ಕೂ ಅನುಮತಿ ಬೇಕು. ಹೊಸ ಟೆಂಡರ್ಗಳನ್ನೂ ಕರೆಯವುದಕ್ಕೆ ಅವಕಾಶವಿಲ್ಲ.7.ಈಗಾಗಲೇ ಕರೆದಿರುವ ಟೆಂಡರ್ಗಳನ್ನು ಫೈನಲ್ ಮಾಡೋದಕ್ಕೂ ಆಗಲ್ಲ. 8. ಧ್ವನಿವರ್ದಕಗಳನ್ನು ಬೆಳಗ್ಗೆ 6 ರಿಂದ ರಾತ್ರಿ 10ರವರೆಗೆ ಮಾತ್ರ ಬಳಸಬೇಕು. 9. ಕೇಂದ್ರದ ನಾಯಕರು ಪ್ರಚಾರಕ್ಕೆ ಬರುವುದಾದರೆ ಅನುಮತಿ ಪಡೆಯಬೇಕು. 10. ಮತದಾರರಿಗೆ ಆಮಿಷವೊಡ್ಡುವಂತಹ ಉಡುಗೊರೆಗಳನ್ನು ಕೊಡಬಾರದು. 11. ಜನಪ್ರತಿನಿಧಿಗಳು, ಮಂತ್ರಿಗಳ ಸರ್ಕಾರಿ ಕಾರನ್ನು ಬಳಸುವ ಹಾಗಿಲ್ಲ.
ರಾಜ್ಯ ವಿಧಾನಸಭೆ ಚುನಾವಣೆಗೆ ಮೇ.10ಕ್ಕೆ ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದ್ದು, ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ. ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ;ನಾಮಪತ್ರ ಹಿಂಪಡೆತ:24 ಏಪ್ರೀಲ್ಚುನಾವಣೆ ಪ್ರಚಾರಕ್ಕೆ ಕೊನೇ ದಿನಾಂಕ;ಮೇ.10 ಕ್ಕೆ ಚುನಾವಣೆರಿಸಲ್ಟ್;ಮೇ.13ಕ್ಕೆ ಚುನಾವಣೆ ರಿಸಲ್ಟ್ ಹೊರಬರಲಿದೆ.ಒಂದೇ ದಹಂತದಲ್ಲಿ ಮತದಾನ ನಡೆಯಲಿದೆ. ದೆಹಲಿಯ ಚುನಾವಣಾ ಆಯೋಗದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ರಾಜ್ಯ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಮುಕ್ತ ,ನ್ಯಾಯ ಸಮ್ಮತ ಚುನಾವಣೆಗೆ ಆಯೋಗ ಸಿದ್ದವಾಗಿದೆ ಎಂದು ಹೇಳಿದ್ದಾರೆ.ವಿದ್ಯುನ್ಮಾನ ಸೇರಿ ಎಲ್ಲಾ ಸಿದ್ಧತೆ ನಡೆದಿದೆ.ಕರ್ನಾಟಕದಲ್ಲಿ 5 ಕೋಟಿ 21 ಲಕ್ಷ ಮತದಾರರಿದ್ದಾರೆ ಎಂದು ಹೇಳಿದ್ದಾರೆ.ಮೊದಲ ಬಾರಿಗೆ 80 ಕ್ಕಿಂತ ಮೇಲಿನ ವಯಸ್ಕರಿಗೆ ಮನೆಯಲ್ಲಿ ಮತದಾನಕ್ಕೆ ಅವಕಾಶ ನೀಡಲಾಗಿದೆ.58,282 ಮತಗಟ್ಟೆಗಳು ಇರಲಿದೆ.
ಉಡುಪಿ : ಜಿಲ್ಲೆಯ ಶಿರ್ವ ಕುತ್ಯಾರ್ ಶಾಲೆಯೊಂದರ ಬಸ್ನಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದ ಕುತ್ಯಾರು ಬ್ಯಾಂಕ್ ಆಫ್ ಬರೋಡಾ ಶಾಖೆಯ ಬಳಿಯ ಬಾಡಿಗೆ ಮನೆ ನಿವಾಸಿ ಶೈಲೇಶ್ ಕೆ. ಪ್ರಭು (44) ಏಕಾಎಕಿ ನಾಪತ್ತೆಯಾಗಿದ್ದಾರೆ. ಮಾ. 27ರ ಬೆಳಗ್ಗಿನಿಂದ ನಾಪತ್ತೆಯಾಗಿದ್ದು ಈ ಸಂಬಂಧ ದೂರು ದಾಖಲಾಗಿದೆ. ಕುತ್ಯಾರಿನಲ್ಲಿ ತಿಂಗಳ ಹಿಂದೆ ಖರೀದಿಸಿದ ರಿಕ್ಷಾದಲ್ಲಿ ಚಾಲಕನಾಗಿ ಕೂಡ ಶೈಲೇಶ್ ದುಡಿಯುತ್ತಿದ್ದು, ಮಾ. 27ರಂದು ಬೆಳಗ್ಗೆ 9.30ರ ವೇಳೆಗೆ ಬಾಡಿಗೆಗೆ ಹೋದವರು ಮಧ್ಯಾಹ್ನ ಊಟಕ್ಕೆ ಬಾರದೆ ಇದ್ದಾಗ ಪತ್ನಿ ಕರೆ ಮಾಡಿದ್ದಾರೆ. ಕರೆ ಸ್ವೀಕರಿಸಿದ ಅವರು ಬರೋಡಾ ಬ್ಯಾಂಕ್ನ ಸಿಬಂದಿಗೆ ಊಟ ಕೊಟ್ಟು ಬರುತ್ತೇನೆ ಎಂದು ಹೇಳಿದವರು ವಾಪಸ್ ಮನೆಗೆ ಬಾರದೆ ಕರೆ ಮಾಡಿದರೂ ಸ್ವೀಕರಿಸದೆ ನಾಪತ್ತೆಯಾಗಿದ್ದಾರೆ. ಮಾ. 28ರಂದು ಬೆಳಗ್ಗೆ 10ರ ವರೆಗೆ ಮೊಬೈಲ್ ರಿಂಗ್ ಆಗುತ್ತಿದ್ದು,ಬಳಿಕ ಸ್ವಿಚ್ಆಫ್ ಆಗಿದೆ. ಸಂಬಂಧಿಕರೆಲ್ಲರಿಗೆ ಕರೆ ಮಾಡಿ ವಿಚಾರಿಸಿದ್ದು, ಮಾಹಿತಿ ಸಿಗದೆ ಇದ್ದು, ಪತ್ನಿ ಅಂಬಿಕಾ ಪ್ರಭು ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










