ರಾಮನಗರ: ಕಳೆದೊಂದು ವಾರದಿಂದ ರಾಜ್ಯದ ವಿವಿಧೆಡೆ ಸುರಿಯುತ್ತಿರುವ ಮಳೆಯಿಂದಾಗಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಸೋಲೂರಿನಲ್ಲಿ ದನದ ಕೊಟ್ಟಿಗೆಯ ಗೋಡೆ ಕುಸಿದು ಮಕ್ಕಳಿಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ನೇಪಾಳ ಮೂಲದ ಫರ್ಬಿನ್(4), ಇಷಿಕಾ(3) ಮೃತಪಟ್ಟವರು. ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಸೋಲೂರು ಗ್ರಾಮದಲ್ಲಿ ಘಟನೆ ನಡೆದಿದೆ. ಕೊಟ್ಟಿಗೆ ಪಕ್ಕದ ಶೆಡ್ ನಲ್ಲಿ ಇಬ್ಬರು ಮಕ್ಕಳು ಮಲಗಿದ್ದರು. ಈ ವೇಳೆ ಕೊಟ್ಟಿಗೆಯ ಗೋಡೆ ಕುಸಿದು ಪಕ್ಕದ ಶೆಡ್ ಮೇಲೆ ಬಿದ್ದು ಮಕ್ಕಳ ಮೇಲೆ ಬಿದ್ದಿದೆ. ಇದರಿಂದ ಮಕ್ಕಳು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮೀನಾ ಮತ್ತು ಮೋನಿಷಾ ಎಂಬಿಬ್ಬರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಟೇಲ್ವೊಂದರಲ್ಲಿ ಕೆಲಸ ಮಾಡುತ್ತಿದ್ದ ಎರಡು ಕುಟುಂಬಗಳು ಒಂದೇ ಶೆಡ್ನಲ್ಲಿ ವಾಸವಾಗಿದ್ದರು. ಕುಸಿದ ಕೊಟ್ಟಿಗೆ ಗಂಗರಂಗಮ್ಮ ಎಂಬವರಿಗೆ ಸೇರಿದ್ದಾಗಿದೆ. ಕುದೂರು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ಘಟಿಸಿದೆ.
Author: main-admin
ಬೆಂಗಳೂರು: ಆಂಧ್ರ ಪ್ರದೇಶದ ಶ್ರೀಹರಿಕೋಟಾ ಉಪಗ್ರಹ ಉಡಾವಣೆ ಕೇಂದ್ರದಿಂದ ಎಸ್ಎಸ್ಎಲ್ವಿ-ಡಿ1 (SSLV-D1) ಉಪಗ್ರಹ ಉಡ್ಡಯನ ವಾಹನವು ಭಾನುವಾರ (ಆಗಸ್ಟ್ 7) ಬೆಳಿಗ್ಗೆ 9:18ರ ಪೂರ್ವ ನಿಗದಿತ ಸಮಯದಲ್ಲಿ ನಭಕ್ಕೆ ಚಿಮ್ಮಿತು. AzaadiSAT ಮೂಲಕ ತಲಾ 50 ಗ್ರಾಂ ತೂಕದ 75 ಪೇಲೋಡ್ಗಳನ್ನು (ಸಣ್ಣ ಉಪಗ್ರಹಗಳು) ಕಕ್ಷೆಗೆ ಸೇರಿಸಲು ಇಸ್ರೋ ಮುಂದಾಗಿದೆ. ಇಸ್ರೋ ರೂಪಿಸಿರುವ EOS-02 ಭೂ ನಿಗಾ ಉಪಗ್ರಹ ಮತ್ತು ಇಸ್ರೋ ಮಾರ್ಗದರ್ಶನದಲ್ಲಿ ದೇಶದ ವಿವಿಧೆಡೆಯ ಗ್ರಾಮೀಣ ವಿದ್ಯಾರ್ಥಿನಿಯರು ರೂಪಿಸಿರುವ 75 ಪುಟ್ಟ ಉಪಗ್ರಹಗಳು (ಪೇಲೋಡ್) ಈ ಬಾಹ್ಯಾಕಾಶ ವಾಹನದ ಮೂಲಕ ಅಂತರಿಕ್ಷದ ಭೂ ಕಕ್ಷೆ ಸೇರಿದವು.
ಉಡುಪಿ; ಅಪರೂಪದ ಪ್ರಕರಣವೊಂದರಲ್ಲಿ ತಾಂತ್ರಿಕ ದೋಷವಿದ್ದ ಮಿಕ್ಸರ್ ಗ್ರೈಂಡರ್ ಕೊಟ್ಟ ಅಂಗಡಿ ವಿರುದ್ದ ಕೋರ್ಟ್ ನಲ್ಲಿ ದಾವೆ ಹೂಡಿದ್ದ ಗ್ರಾಹಕ ಮಹಿಳೆ ಇದೀಗ ಪರಿಹಾರವನ್ನು ಪಡೆದುಕೊಂಡಿದ್ದಾರೆ. ಉಡುಪಿಯ ಪೈ ಇಂಟರ್ನ್ಯಾಷನಲ್ ಹಾಗೂ ಪ್ರೀತಿ ಕಿಚನ್ ಅಪ್ಲೆಯನ್ಸಸ್ ಪ್ರೈ.ಲಿ. ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಪರಿಹಾರ ನೀಡುವಂತೆ ಸೂಚಿಸಿದೆ. ಅನಿತಾ ಎಂಬವರು ಎರಡು ವರ್ಷಗಳ ಹಿಂದೆ ಪೈ ಇಂಟರ್ನ್ಯಾಷನಲ್ ನಲ್ಲಿ 4,239 ರೂ.ಗಳನ್ನು ನೀಡಿ ಪ್ರೀತಿ ಮಿಕ್ಸರ್ ಗ್ರೈಂಡರ್ ಖರೀದಿಸಿದ್ದರು. ಆದರೆ ಮೂರೇ ತಿಂಗಳಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಮಿಕ್ಸಿಗೆ ಎರಡು ವರ್ಷಗಳ ಗ್ಯಾರಂಟಿ ಮತ್ತು 5 ವರ್ಷಗಳ ವಾರೆಂಟಿ ಇರುವುದರಿಂದ ಹೊಸ ಮಿಕ್ಸಿ ಕೊಡುವಂತೆ ಗ್ರಾಹಕಿ ಮನವಿ ಮಾಡಿದ್ದರು. ಆದರೆ ಪೈ ಇಂಟರ್ನ್ಯಾಷನಲ್ ನವರು ಬದಲಿ ಮಿಕ್ಸಿಯನ್ನು ಕೊಡಲು ಒಪ್ಪದೇ ಅದೇ ಮಿಕ್ಸಿಯನ್ನು ಸರಿಪಡಿಸಿ ಕೊಟ್ಟಿದ್ದರು. ಅದರ ಅನಂತರವೂ ಮೂರು ತಿಂಗಳಿಗೊಮ್ಮೆ ಮಿಕ್ಸಿಯಲ್ಲಿ ತಾಂತ್ರಿಕ ತೊಂದರೆಗಳು ಕಾಣಿಸಿಕೊಂಡಿದ್ದವು. ಇದರಿಂದ ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ಪೈ…
ಮಲ್ಪೆ: ಉಡುಪಿಯ ಟ್ಯುಟೋರಿಯಲ್ ಒಂದರಲ್ಲಿ ಪಿಯುಸಿ ಓದುತ್ತಿದ್ದ ತೆಂಕನಿಡಿಯೂರು ಲಕ್ಷ್ಮೀನಗರ ನಿವಾಸಿ ರವಿ ಕುಲಾಲ್ ಹಾಗೂ ಶರ್ಮಿಳಾ ದಂಪತಿ ಮಗ ಸೃಜನ್(17) ಎಂಬವರು ಆ.4ರಂದು ಬೆಳಗ್ಗೆ ಮನೆಯಿಂದ ಹೋದವನು ಮನೆಗೆ ವಾಪಾಸು ಬಾರದೆ ನಾಪತ್ತೆಯಾಗಿದ್ದಾನೆ. ಸೃಜನ್ ಈ ಹಿಂದೆ ಎರಡು ಬಾರಿ ಮನೆ ಬಿಟ್ಟು ಹೋದವನು ಮರುದಿನ ವಾಪಸು ಬಂದಿದ್ದಾನೆ. ಈತ ಮನೆಯಿಂದ ಹೋಗುವಾಗ ಕ್ರೀಮ್ ಕಲರ್ ಪ್ಯಾಂಟ್ ಮತ್ತು ಕಾಫಿ ಬಣ್ಣದ ಹೂಗಳಿರುವ ಉದ್ಧತೋಳಿನ ಶರ್ಟ್ ಧರಿಸಿದ್ದ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂಬಳೆ: ಕಾಸರಗೋಡು ಜಿಲ್ಲೆಯಲ್ಲಿ ಬಿರುಸಿನ ಮಳೆ ಸುರಿಯುತ್ತಿದೆ. ಕೃಷಿಗೆ ಅಪಾರ ಹಾನಿ ಸಂಭವಿಸಿದೆ. ರಸ್ತೆಗಳಲ್ಲಿ ನೆರೆ ನೀರು ಹರಿದು ವಾಹನ ಮತ್ತು ಜನ ಸಂಚಾರಕ್ಕೆ ತೊಡಕಾಗಿದೆ. ಭೀಮನಡಿ ಗ್ರಾಮದ ಕೂರನಗುಂದದಲ್ಲಿ ಕೃಷಿಕ ರವೀಂದ್ರನ್ ಅವರ ಪತ್ನಿ, ನಿವೃತ್ತ ಶಿಕ್ಷಕಿ ಲತಾ ಅವರು ತೋಟಕ್ಕೆ ಬಾಳೆ ಎಲೆ ತರಲು ಹೋಗಿದ್ದಾಗ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದರು. ಅವರ ಮೃತದೇಹ ಪ್ಲಾಚಿಕರ ಮೀಸಲು ಅರಣ್ಯದ ತೋಡಿಗೆ ನಿರ್ಮಿಸಿದ ಅಣೆಕಟ್ಟಿನಲ್ಲಿ ಪತ್ತೆಯಾಗಿದೆ. ಮೃತರು ಪತಿ, ಪುತ್ರನನ್ನು ಅಗಲಿದ್ದಾರೆ. ಇವರು ಎರಡು ತಿಂಗಳ ಹಿಂದೆಯಷ್ಟೇ ನಿವೃತ್ತರಾಗಿದ್ದರು. ಮಳೆ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯ ಎಲ್ಲ ಶಾಲೆ ಮತ್ತು ಅಂಗನವಾಡಿಗಳಿಗೆ ಜಿಲ್ಲಾಧಿಕಾರಿ ರಜೆ ಸಾರಲಾಗಿತ್ತು. ಮಂಗಲ್ಪಾಡಿ ಪಂಚಾಯತ್ನ ಇಚ್ಲಂಗೋಡು ವಳಯಂ ರಸ್ತೆಯ ಹೊಳೆ ಭಾಗ ಕುಸಿದಿದೆ. ಇತ್ತೀಚೆಗಷ್ಟೇ 30 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ರಸ್ತೆ ಇದಾಗಿದ್ದು, ಇನ್ನಷ್ಟು ಮಳೆ ಸುರಿದಲ್ಲಿ ಹೊಳೆ ಪಕ್ಕದ ರಸ್ತೆ ಕುಸಿಯಲಿದೆ ಎಂಬ ಆತಂಕವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.
ಪುತ್ತೂರು: ಇಲ್ಲಿನ ಬೊಳುವಾರು ವಸತಿ ಸಮುಚ್ಚಯ ಮಹಡಿಯಿಂದ ಶುಕ್ರವಾರ ಸಂಜೆ ಬಿದ್ದು ಗಂಭೀರ ಗಾಯಗೊಂಡಿದ್ದ ಸುಧಾನ ವಸತಿ ಶಾಲೆಯ ಪ್ರೌಢಶಾಲೆಯ 9ನೇ ತರಗತಿಯ ಬಾಲಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಸುಹಾನ್ ಬೊಳುವಾರಿನ ಮನೆಯಿರುವ ಫ್ಲಾಟ್ ನ 5ನೇ ಮಹಡಿಯಿಂದ ಕೆಳಗೆ ಬಿದ್ದಿದ್ದು, ಗಂಭೀರ ಗಾಯಗೊಂಡ ಆತನನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಮುಲ್ಕಿ: ಇಲ್ಲಿನ ಪ್ರತಿಷ್ಠಿತ ವಿಜಯ ಕಾಲೇಜಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ನಡುವೆ ಹೊಡೆದಾಟ ಸಂಭವಿಸಿದ್ದು ಓರ್ವ ಗಾಯಗೊಂಡು ಮುಲ್ಕಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಗಾಯಗೊಂಡವನನ್ನು ಮುಲ್ಕಿ ಸಮೀಪದ ಕರ್ನೀರೆ ನಿವಾಸಿ ಸುಜನ್ ಶೆಟ್ಟಿ (20) ಎಂದು ಗುರುತಿಸಲಾಗಿದೆ. ವಿಜಯ ಕಾಲೇಜಿನಲ್ಲಿ ಕಾಲೇಜು ಡೇ ಫಂಕ್ಷನ್ ನಡೆಯುತ್ತಿದ್ದು ಈ ಸಂದರ್ಭ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಹಳೆ ವೈಷಮ್ಯದಿಂದ ಮಾತಿನ ಚಕಮಕಿ ನಡೆದು ಕ್ಷುಲ್ಲಕ ಕಾರಣಕ್ಕೆ ನೂಕಾಟ ತಳ್ಳಾಟ ನಡೆದಿದೆ. ಈ ಸಂದರ್ಭ ಒಂದು ಗುಂಪಿನ ಸುಮಾರು 10ಮಂದಿ ವಿದ್ಯಾರ್ಥಿಗಳು ಹಾಗೂ ಹೊರಗಿನವರು ಸೇರಿ ಕರ್ನೀರೆ ನಿವಾಸಿ ಸುಜನ್ ಶೆಟ್ಟಿ ಎಂಬವರ ಮೇಲೆ ಹಿಗ್ಗಾ ಮುಗ್ಗ ಕೈಯಿಂದ ಹಾಗೂ ಕಾಲಿನಿನಿಂದ ಹಲ್ಲೆ ನಡೆಸಿದ್ದು ಗಾಯಗೊಂಡ ಸುಜನ್ ಮುಲ್ಕಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳಕ್ಕೆ ಮುಲ್ಕಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಮುಲ್ಕಿ ಪೊಲೀಸರು ಬಂಧಿಸಿದ್ದು ಉಳಿದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.ಕಾಲೇಜಿನಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಬಿಗು ಬಂದೋಬಸ್ತ್ ಏರ್ಪಡಿಸಲಾಗಿದೆ. ಜಿಲ್ಲೆಯಲ್ಲಿ…
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಪಟಾಕಿ ಮಾರಾಟಕ್ಕೆ ನೀಡಲಾಗಿದ್ದ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಹಿಂಪಡೆದ ಪೊಲೀಸ್ ಇಲಾಖೆಯ ನಿರ್ಧಾರವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ. ಬೆಂಗಳೂರಿನಲ್ಲಿ ಪಟಾಕಿ ಮಾರಾಟ ಮಾಡುವಂತಿಲ್ಲ ಎಂಬ ಆದೇಶವನ್ನು ಎತ್ತಿ ಹಿಡಿದಿದೆ. ಇದೇ ಮೊದಲ ಬಾರಿಗೆ ಪಟಾಕಿಗಳಿಂದ ಗಾಯಗೊಂಡವರ ಫೋಟೋಗಳನ್ನು ತೀರ್ಪಿನ ಪ್ರತಿಗಳಲ್ಲಿ ಬಳಸಲಾಗಿದೆ. ಪಟಾಕಿ ಗಾಯಗಳಿಂದ ದೃಷ್ಟಿ ಕಳೆದುಕೊಂಡ ಯುವಕರು ಮತ್ತು ಮಕ್ಕಳ ಫೋಟೋಗಳು ಇದರಲ್ಲಿವೆ. ಬೆಂಗಳೂರಲ್ಲಿ ಪಟಾಕಿ ಮಾರುವಂತಿಲ್ಲ ಎಂಬ ಆದೇಶ ಎತ್ತಿಹಿಡಿದಿರುವ ಹೈಕೋರ್ಟ್, “ಈ ಫೋಟೋಗಳು ಸಂವಿಧಾನ ರಚನಾಕಾರರನ್ನು ಅವರ ಸಮಾಧಿಯಲ್ಲೇ ನಡುಗಿಸುವಂತಿವೆ. ಬದುಕುವ ಹಕ್ಕು, ಅಂಗ ಮತ್ತು ಸ್ವಾತಂತ್ರ್ಯದ ಹೆಚ್ಚಿನ ಉಲ್ಲಂಘನೆ ಸಾಧ್ಯವಿಲ್ಲ” ಎಂದು ಹೇಳಿದೆ. ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠವು ಪೊಲೀಸ್ ಇಲಾಖೆಯ ನಿರ್ಧಾರವನ್ನು ಪ್ರಶ್ನಿಸಿದ ಪಟಾಕಿ ವ್ಯಾಪಾರಿಗಳ ವಾದವನ್ನು ತಿರಸ್ಕರಿಸಿದೆ. ಬೆಂಗಳೂರಿನ ಪೊಲೀಸ್ ಆಯುಕ್ತರು 2012ರಲ್ಲಿ ಈ ವ್ಯಾಪಾರಿಗಳ ಎನ್ಒಸಿ ಹಿಂಪಡೆದಿದ್ದರು. ಕರ್ನಾಟಕ ಪೊಲೀಸ್ ಮಹಾನಿರ್ದೇಶಕರು 2013ರಲ್ಲಿ ಆಯುಕ್ತರ ಆದೇಶವನ್ನು ಎತ್ತಿ ಹಿಡಿದಿದ್ದರು. ವ್ಯಾಪಾರಿಗಳು ಇದನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ…
ಉಡುಪಿ: ಕರಾವಳಿ ಕಡಲ ತೀರದಲ್ಲಿ ಪ್ರತಿ ಗಂಟೆಗೆ 45ರಿಂದ 55 ಕಿ. ಮೀ. ವೇಗದಲ್ಲಿ ಗಾಳಿ ಬೀಸಲಿದ್ದು ಮೀನುಗಾರರು ಕಡಲಿಗಿಳಿಯದಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಆ. 5ರಂದು ರಾತ್ರಿ 11.30ರ ತನಕ ಕಡಲ ತೀರದಲ್ಲಿ 3ರಿಂದ 3.8ಮೀ. ಎತ್ತರದ ಅಲೆಗಳು ಮಂಗಳೂರಿನಿಂದ ಕಾರವಾರ ತನಕದ ಕಡಲ ತೀರಕ್ಕೆ ಅಪ್ಪಳಿಸಲಿವೆ. ಆ. 5, 7 ರಂದು ಉಡುಪಿ ಸಹಿತ ಕರಾವಳಿಯ ಅಲ್ಲಲ್ಲಿ ಗಾಳಿ, ಗುಡುಗಿನೊಂದಿಗೆ 115.6ರಿಂದ 204.4 ಮಿ.ಮೀ. ಮಳೆ ಬೀಳಲಿದೆ. ಆ.6ರಂದು 204.5 ಮಿ.ಮೀ. ಮಳೆಯಾಗಲಿದೆ. ಆ, 8, 9ರಂದು 64.5ರಿಂದ 115.5 ಮಿ.ಮೀ. ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಶಿವಮೊಗ್ಗ: ಆಗುಂಬೆ ಘಾಟಿಯಲ್ಲಿ ಭಾರಿ ದುರಂತ ತಪ್ಪಿದೆ. ಚಲಿಸುತ್ತಿದ್ದ ಟಾಟಾ ಏಸ್ ವಾಹನದ ಮೇಲೆ ಬೃಹತ್ ಮರ ಉರುಳಿ ಬಿದ್ದಿದೆ. ಆದರೆ ಅದೃಷ್ಟವಾಶತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಘಟನೆಯಿಂದ ಆಗುಂಬೆ ಘಾಟಿನಲ್ಲಿ ವಾಹನ ಸಂಚಾರರಿಗೆ ಅಡಚಣೆ ಉಂಟಾಗಿತ್ತು.ಸೋಮೇಶ್ವರ ಕಡಿಯಿಂದ ಆಗುಂಬೆ ಘಾಟಿಯ ಎರಡನೇ ತಿರುವಿನಲ್ಲಿ ಈ ಘಟನೆ ಸಂಭವಿಸಿದೆ.