ಕಾರ್ಕಳ: ಜಾನುವಾರು ಕಳವು ಪ್ರಕರಣದಲ್ಲಿ ಸಂಘಟಿತ ಕೃತ್ಯ ಎಸಗಿರುವ ನಾಲ್ವರು ಆರೋಪಿಗಳ ವಿರುದ್ಧ ಕೋಕಾ ಕಾಯಿದೆ ಹಾಕಿ ಅವರನ್ನು ಮರು ಬಂಧನಕ್ಕೆ ಒಳ ಪಡಿಸಲಾಗಿದೆ. ಕಾರ್ಕಳದ ನಲ್ಲೂರು ಗ್ರಾಮದ ಯೂನಿಸ್ (31), ಮೂಡಬಿದಿರೆ ಪುತ್ತಿಗೆ ಗ್ರಾಮದ ಮಿಜಾರು ನಿವಾಸಿ ಇಕ್ಬಾಲ್ (29), ಕಲ್ಲಬೆಟ್ಟು ಗ್ರಾಮದ ನಾಸೀರ್ (28) ಮತ್ತು ಶೌಕತ್ ಅಲಿ (34) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು 2025ರ ಸಪ್ಟೆಂಬರ್ 29ರಂದು ತಡ ರಾತ್ರಿ ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದ ಹಾಡಿಯಂಗಡಿಯ ಜಯಶ್ರೀ ಪೂಜಾರಿ ಎಂಬವರ ಮನೆಯ ಹಟ್ಟಿಗೆ ನುಗ್ಗಿ ಜಾನುವಾರುಗಳನ್ನು ಕಳ್ಳತನ ಮಾಡಲು ಹೋಗಿದ್ದು, ಆಗ ಎಚ್ಚರಗೊಂಡು ಬಂದ ಜಯಶ್ರೀ ಪೂಜಾರಿ ಅವರಿಗೆ ಆರೋಪಿಗಳು ತಲವಾರು ತೋರಿಸಿ ಬೆದರಿಸಿ ಹಟ್ಟಿಯಲ್ಲಿದ್ದ 35,000 ರೂಪಾಯಿ ಮೌಲ್ಯದ ಮೂರು ಜಾನುವಾರುಗಳನ್ನು ವಾಹನದಲ್ಲಿ ತುಂಬಿಸಿಕೊಂಡು ಹೋಗಿ ವಧೆ ಮಾಡಿರುವುದಾಗಿ ದೂರಲಾಗಿತ್ತು. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು, ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ…
Author: main-admin
ಉಡುಪಿ : ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ 2025ನೇ ಸಾಲಿನ ಮಾನ್ಯ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಉಡುಪಿ ಜಿಲ್ಲೆಯ ಮೂವರು ಪೊಲೀಸ್ ಸಿಬ್ಬಂದಿ ಭಾಜನರಾಗಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣೆಯ ASI ಚಂದ್ರ ಶೆಟ್ಟಿ ಅವರು ತಮ್ಮ ಸೇವೆಗೆ ಈ ಗೌರವ ಪಡೆದಿದ್ದಾರೆ. ಕರಾವಳಿ ಕಾವಲು ಪೊಲೀಸ್ ಪಡೆಯಲ್ಲಿ ಸೇವೆ ಸಲ್ಲಿಸುತ್ತಿರುವ AHC ಸಂತೋಷ್ ಶೆಟ್ಟಿ ಅವರು ಕರಾವಳಿ ಕಾವಲು ವಿಭಾಗದಲ್ಲಿ ನೀಡಿದ ವಿಶಿಷ್ಠ ಸೇವೆಗಾಗಿ ಚಿನ್ನದ ಪದಕ ಪಡೆದಿದ್ದಾರೆ.ಇದೇ ರೀತಿ ನಕ್ಸಲ್ ನಿಗ್ರಹ ಪಡೆ, ಕಾರ್ಕಳದಲ್ಲಿ ಸೇವೆ ಸಲ್ಲಿಸುತ್ತಿರುವ RSI ಮಂಜುನಾಥ ದೇವರಮನೆ ಅವರು ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ತೋರಿದ ಅತ್ಯುತ್ತಮ ಸೇವೆಗಾಗಿ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪದಕ ಪುರಸ್ಕೃತರನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹಾಗೂ ಕರಾವಳಿ ಕಾವಲು ಪಡೆ ಮತ್ತು ನಕ್ಸಲ್ ನಿಗ್ರಹ ಪಡೆಯ ಪ್ರಭಾರ ಎಸ್ಪಿ ಹರಿರಾಮ್ ಶಂಕರ್ ಅವರು ಅಭಿನಂದಿಸಿದ್ದಾರೆ.
ಮಂಗಳೂರು: ಕೊಲೆ ಸೇರಿದಂತೆ ಹಲವು ಘೋರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ಕಳೆದ ಎಂಟು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸುಳ್ಯ ಅಜ್ಜಾವರ ನಿವಾಸಿ ಎನ್.ಎಂ. ಅಝೀಝ್ ಎಂಬಾತನೇ ಪತ್ತೆಯಾದ ಆರೋಪಿ. ಈತ ಸದ್ಯ ಆಂಧ್ರಪ್ರದೇಶದ ಚಿತ್ತೂರು ಜೈಲಿನಲ್ಲಿರುವುದು ದೃಢಪಟ್ಟಿದೆ. ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈತನಿಗೆ ಕರ್ನಾಟಕ ಉಚ್ಚ ನ್ಯಾಯಾಲಯವು 10 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಆದರೆ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಈತ ತಲೆಮರೆಸಿಕೊಂಡಿದ್ದನು. 2018ರಲ್ಲಿ ಕೇರಳ ಪೊಲೀಸರು ಈತನನ್ನು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆತರುತ್ತಿದ್ದ ಸಂದರ್ಭದಲ್ಲಿ, ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಈತ ಪರಾರಿಯಾಗಿದ್ದನು. ಪೊಲೀಸರಿಂದ ತಪ್ಪಿಸಿಕೊಂಡ ನಂತರ ಆರೋಪಿ ಅಝೀಝ್ ತನ್ನ ಗುರುತನ್ನೇ ಬದಲಿಸಿಕೊಂಡಿದ್ದನು. ಕಲಬುರಗಿ ಜಿಲ್ಲೆಯ ಜೇವರ್ಗಿ ನಿವಾಸಿ ‘ಬಸವರಾಜು’ ಎಂಬ ಹೆಸರಿನಲ್ಲಿ ನಕಲಿ ಗುರುತು ಸೃಷ್ಟಿಸಿಕೊಂಡು ಆಂಧ್ರಪ್ರದೇಶದಲ್ಲಿ ವಾಸವಿದ್ದನು. ಈತನ ಪತ್ತೆಗಾಗಿ ಪೊಲೀಸರು ಸತತ ಕಾರ್ಯಾಚರಣೆ ನಡೆಸುತ್ತಿದ್ದರು. ತನಿಖೆಯ ವೇಳೆ ಆರೋಪಿಯು ಸದ್ಯ…
ಮಂಗಳೂರು: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ, ದೈವ ನರ್ತಕ ರವೀಶ್ ಪಡುಮಲೆಯವರಿಗೆ ಕರ್ನಾಟಕದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾನಿಲಯದ ಕುಲಾಧಿಪತಿ ಥಾವರ್ ಚಂದ್ ಗೆಹ್ಲೋಟ್ ಅವರು ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು. ಮಂಗಳೂರು ವಿಶ್ವವಿದ್ಯಾನಿಲಯದ 44ನೇ ವಾರ್ಷಿಕ ಘಟಿಕೋತ್ಸವ ವಿಶ್ವವಿದ್ಯಾನಿಲಯದ ಆವರಣದ ಮಂಗಳ ಸಭಾಂಗಣದಲ್ಲಿಂದು ಜರುಗಿತು. ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ, ಕುಲಸಚಿವ ಪ್ರೊ.ದೇವೇಂದ್ರಪ್ಪ (ಪರೀಕ್ಷಾಂಗ )ಗಣೇಶ್ ಸಂಜೀವ (ಪ್ರಭಾರ), ಹಣಕಾಸು ಅಧಿಕಾರಿ ಡಾ.ವೈ.ಸಂಗಪ್ಪ ಮೊದಲಾದವರು ಉಪಸ್ಥಿತರಿದ್ದರು.
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 153 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025ನೇ ಸಾಲಿನ ಪ್ರತಿಷ್ಠಿತ ‘ಮುಖ್ಯಮಂತ್ರಿಗಳ ಪೊಲೀಸ್ ಪದಕ’ವನ್ನು ಪ್ರಕಟಿಸಲಾಗಿದೆ. ಈ ಕುರಿತು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ಐಜಿಪಿ (ಡಿಜಿ-ಐಜಿಪಿ) ಡಾ. ಎಂ.ಎ. ಸಲೀಂ ಅವರು ಮಾರ್ಚ್ 27ರಂದು ಅಧಿಕೃತ ಆದೇಶ ಹೊರಡಿಸಿದ್ದಾರೆ. ಪ್ರಮುಖ ಪುರಸ್ಕೃತರು: ಈ ಬಾರಿಯ ಪುರಸ್ಕೃತರ ಪಟ್ಟಿಯಲ್ಲಿ ಹಿರಿಯ ಐಪಿಎಸ್ ಅಧಿಕಾರಿಗಳಿಂದ ಹಿಡಿದು ಕಾನ್ಸ್ಟೇಬಲ್ ಹಂತದವರೆಗಿನ ಸಿಬ್ಬಂದಿ ಸೇರಿದ್ದಾರೆ. ಪ್ರಮುಖವಾಗಿ: ಡಾ. ಸುಮನ್ ಡಿ. ಪೆನ್ನೇಕರ್ (ಎಸ್ಪಿ, ಬಳ್ಳಾರಿ ಜಿಲ್ಲೆ) ಡಾ. ಅರುಣ್ ಕೆ. (ಎಸ್ಪಿ, ಉಡುಪಿ ಜಿಲ್ಲೆ) ಪ್ರತೀಕ್ ಶಂಕರ್ (ಎಸ್ಪಿ, ಯಾದಗಿರಿ ಜಿಲ್ಲೆ) ಡಾ. ಗೋಪಾಲ ಎಂ. ಬ್ಯಾಕೋಡ (ಡಿಸಿಪಿ, ಸಂಚಾರ ದಕ್ಷಿಣ ವಿಭಾಗ, ಬೆಂಗಳೂರು) ಸೇರಿದಂತೆ ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಒಟ್ಟು 153 ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಸರ್ಕಾರ ಈ ಗೌರವಕ್ಕೆ ಆಯ್ಕೆ ಮಾಡಿದೆ. ಏಪ್ರಿಲ್ 2ರಂದು ಪದಕ ಪ್ರದಾನ ಸಮಾರಂಭ:ಪದಕ ಪುರಸ್ಕೃತರಿಗೆ ಏಪ್ರಿಲ್ 02, 2026…
ಮಂಗಳೂರು: ಉಡುಪಿ ಜಿಲ್ಲೆಯ ವಿವಿಧ ಮೀನುಗಾರರ ಸ್ವಸಹಾಯ ಗುಂಪುಗಳ ಹೆಸರಿನಲ್ಲಿ ವಂಚನೆಯಿಂದ ಪಡೆದ ಸಾಲ ಮನ್ನಾಕ್ಕೆ ಸಂಬಂಧಿಸಿದಂತೆ, ಮಂಗಳೂರು ಉಪ ವಲಯ ಜಾರಿ ನಿರ್ದೇಶನಾಲಯವು 2002 ರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ, ಮೂಕಾಂಬಿಕಾ ಗ್ರಾಮೀಣಾಭಿವೃದ್ಧಿ ಟ್ರಸ್ಟ್, ಶ್ರೀಮತಿ ಬೇಬಿ, ಹರೀಶ್, ಪಿ ರಾಮದಾಸ್ ಮತ್ತು ರಾಮಕೃಷ್ಣ ಪಿ ವಿರುದ್ಧ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಿಸಿದೆ. ರಾಜ್ಯ ಸರಕಾರ ಜಾರಿಗೆ ತಂದಿರುವ ಸಾಲ ಮನ್ನಾ ಯೋಜನೆಯನ್ನು ಬಳಸಿಕೊಂಡು ಅನರ್ಹ ಮೀನುಗಾರರ ಸ್ವಸಹಾಯ ಗುಂಪುಗಳ ಸಾಲ ಮನ್ನಾ ಮಾಡಿದ್ದಕ್ಕಾಗಿ ಶ್ರೀಮತಿ ಬೇಬಿ ಕೊಟಾರಿ, ಹರೀಶ್ ಖಾರ್ವಿ, ರಾಮದಾಸ ಖ್ರಾವಿ ಮತ್ತು ರಾಮಕೃಷ್ಣ ದೇವಾಡಿಗ ವಿರುದ್ಧ ಇತ್ತೀಚೆಗೆ ಉಡುಪಿಯ ಬೈಂದೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಇದೀಗ ಈ ಎಫ್ಐಆರ್ ಆಧಾರದ ಮೇಲೆ ಇದೀಗ ಇಡಿ ತನಿಖೆ ಆರಂಭ ಮಾಡಿದೆ. 2017-18 ರ ಹಣಕಾಸು ವರ್ಷದಲ್ಲಿ ಮೂಕಾಂಬಿಕಾ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಮೂಲಕ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಿಂದ ವಿವಿಧ ಸ್ವಸಹಾಯ ಗುಂಪುಗಳಿಗೆ…
ಉಳ್ಳಾಲ: ಹೊಸ ಬಾವಿ ಕೊರೆಯುವ ಕಾಮಗಾರಿ ನಡೆಸುತ್ತಿದ್ದ ವೇಳೆ ಕ್ರೇನ್ನಿಂದ ಮಣ್ಣು ತುಂಬಿದ್ದ ಕಬ್ಬಿಣದ ಬಕೆಟ್ ತಲೆಗೆ ಬಿದ್ದ ಪರಿಣಾಮ ಕೂಲಿ ಕಾರ್ಮಿಕ ದಾರುಣವಾಗಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಉಳ್ಳಾಲ ಸಮೀಪ ಕುತ್ತಾರು ಪದವಿನ ಸಲಾತ್ ನಗರದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಮಲ್ಲಾಪುರ ನಿವಾಸಿ ಶಿವಕುಮಾರ ಜಿ.ಕೆ (30) ಮೃತರು ಎಂದು ಗುರುತಿಸಲಾಗಿದೆ.ಉಳ್ಳಾಲ ತಾಲೂಕಿನ ಕುತ್ತಾರು ಪದವಿನ ಸಲಾತ್ ನಗರದಲ್ಲಿ ಹೊಸ ಬಾವಿ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಆರು ಕೂಲಿ ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದರು. ಇವರ ಪೈಕಿ ಶಿವಕುಮಾರ್ ಸೇರಿ ಮೂವರು ಕಾರ್ಮಿಕರು ಮೂವತ್ತು ಅಡಿ ಆಳ ಕೊರೆಯಲಾದ ಬಾವಿಯೊಳಗಡೆ ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ಕ್ರೇನ್ ಮೂಲಕ ಕಬ್ಬಿಣದ ಬಕೆಟ್ನಲ್ಲಿ ಮಣ್ಣು ಮೇಲಕ್ಕೆತ್ತುತ್ತಿದ್ದ ಸಂದರ್ಭ ಕ್ರೇನ್ನ ಕೊಕ್ಕೆಯಿಂದ ಬೇರ್ಪಟ್ಟ ಮಣ್ಣು ತುಂಬಿದ ಬಕೆಟ್ ಶಿವಕುಮಾರ್ ತಲೆ ಮೇಲೆ ಬಿದ್ದಿದೆ. ಗಂಭೀರ ಗಾಯಗೊಂಡಿದ್ದ ಶಿವಕುಮಾರ್ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾದರೂ ದಾರಿ ಮಧ್ಯೆ ಅವರು ಮೃತಪಟ್ಟಿರುವುದಾಗಿ…
ಉಡುಪಿ: ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಮಹಮ್ಮದ್ ನೌಫಿಲ್ ಹಾಗೂ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಸುಹಾನ್ ಪೂಜಾರಿ ಎಂಬುವರನ್ನು ಗಡಿಪಾರು ಮಾಡಿ ವಿಶೇಷ ಕಾರ್ಯಾಂಗ ದಂಡಾಧಿಕಾರಿಯವರು ಹಾಗೂ ಪೊಲೀಸ್ ಅಧೀಕ್ಷಕರು ಆದೇಶ ಹೊರಡಿಸಿದ್ದಾರೆ. ಆರೋಪಿಗಳ ಪೈಕಿ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕಾಪು ಕಳತ್ತೂರು ನಿವಾಸಿ ಮಹಮ್ಮದ್ ನೌಫಿಲ್ ಈತನ ವಿರುದ್ಧ 5 ಪ್ರಕರಣ ದಾಖಲಾಗಿದ್ದು ಶಿರ್ವ ಠಾಣೆಯಲ್ಲಿ ರೌಡಿ ಹಾಳೆ ತೆರೆಯಲಾಗಿರುತ್ತದೆ. ಅಂತೆಯೇ ಮಲ್ಪೆ ಠಾಣಾ ವ್ಯಾಪ್ತಿಯ ನಿವಾಸಿ ಸುಹಾನ್ ಪೂಜಾರಿ ವಿರುದ್ಧ 4 ಪ್ರಕರಣ ದಾಖಲಾಗಿರುತ್ತದೆ. ಮಹಮ್ಮದ್ ನೌಫಿಲ್ನನ್ನು ಹಾವೇರಿ ಜಿಲ್ಲೆಯ ಶಿಗ್ಗಾಂವ ಪೊಲೀಸ್ ಠಾಣಾ ವ್ಯಾಪ್ತಿಗೆ ಮತ್ತು ಸುಹಾನ್ ಪೂಜಾರಿಯನ್ನು ಯಾದಗಿರಿ ಜಿಲ್ಲೆಯ ಯಾದಗಿರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.
ಮಂಗಳೂರು: ಇಲ್ಲಿನ ಫ್ಲೈ ಓವರ್ ಮೇಲೆ ಇಂದು ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಆರಿಫ್ ಯಾನೆ ಟ್ಯಾಬ್ಲೆಟ್ ಆರಿಫ್ನ ಕೊಲೆಯ ಸಂದರ್ಭದಲ್ಲಿ ದುಷ್ಕರ್ಮಿಗಳು ಬಳಸಿದ್ದ ಕಾರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರಿಫ್ನನ್ನು ಬೈಕಿನಿಂದ ಕೆಡವಿ ಕೊಲೆಗೈದ ಬಳಿಕ ಆರೋಪಿಗಳು ಕಾರಿನಲ್ಲಿ ಪರಾರಿಯಾಗಿದ್ದರು. ಆ ಕಾರು ಬಂಟ್ವಾಳದ ಬುಡೋಳಿ ಎಂಬಲ್ಲಿ ಪತ್ತೆಯಾಗಿದೆ. ಆರಿಫ್ ಹತ್ಯೆಯ ಬಳಿಕ ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದರು. ಇದೇ ಸಂದರ್ಭದಲ್ಲಿ ಬುಡೋಳಿಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಕಾರೊಂದು ಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ವಿಟ್ಲ ಪೊಲೀಸರು ಕಾರನ್ನು ವಶಕ್ಕೆ ಪಡೆದಿದ್ದಾರೆ.
ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ ಎಸಲಾಗಿದೆ. ಬರೋಬ್ಬರಿ 15 ಯುವಕರಿಂದ ಮೂರರಿಂದ ಐದು ಲಕ್ಷ ಪಡೆದು ವಂಚನೆ ಎಸಗಲಾಗಿದೆ. ಮೈಸೂರಿನ ಅರಣ್ಯ ಪ್ರದೇಶದಲ್ಲಿ ಹುದ್ದೆ ಕೊಡಿಸುತ್ತೇನೆ ಎಂದು ಆಮಿಷ ಒಡ್ಡಲಾಗಿದೆ. ಯುವಕರಿಗೆ ನಕಲಿ ನೇಮಕಾತಿ ಆದೇಶ ಪ್ರತಿನಿಧಿ ಕಳುಹಿಸಿ ವಂಚನೆ ಎಸಲಾಗಿದೆ. ಇನ್ನು ತರಬೇತಿ ನೆಪದಲ್ಲಿ ತೋಟದ ಮನೆಯಲ್ಲಿ ಯುವಕರಿಗೆ ಟ್ರೇನಿಂಗ್ ಕೂಡ ಕೊಟ್ಟಿದ್ದಾರೆ. ಅರಣ್ಯ ಇಲಾಖೆಯ ಮೇಲಾಧಿಕಾರಿಗಳ ನಕಲಿ ಲೆಟರ್ ಹೆಡ್ ಬಳಸಿ ಯುವಕರಿಗೆ ನಕಲಿ ಆದೇಶ ಪತ್ರ ಕೂಡ ನೀಡಿದ್ದಾರೆ. ತರಬೇತಿ ನೆಪದಲ್ಲಿ ತೋಟದ ಮನೆಯಲ್ಲಿ ಯುವಕರಿಗೆ ಟ್ರೇನಿಂಗ ನೀಡಿದ್ದು, ತುಮಕೂರು ತಾಲೂಕಿನ ವಡ್ಡರಹಳ್ಳಿಯಲ್ಲಿ ನಕಲಿ ತರಬೇತಿ ಕೂಡ ಕೊಟ್ಟಿದ್ದಾರೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಇದೀಗ ಯುವಕರು ದೂರು ನೀಡಿದ್ದಾರೆ.ಪ್ರಕರಣಕ್ಕೆ ಸಂಬಂಧಪಟ್ಟಂತೆ ಪವನ್ ಮತ್ತು ಕಿರಣ್ ಎಂಬ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ.










