Author: main-admin

ಕಾರ್ಕಳ: ಕಾರ್ಕಳ ತಾಲೂಕಿನ ತೆಳ್ಳಾರು ಗುಡ್ಡೆಯಂಗಡಿ ನಿವಾಸಿ ಉರಗತಜ್ಞ ಅನಿಲ್ ಪ್ರಭು ಅವರು ಹಾವು ಕಡಿತಕ್ಕೊಳಗಾಗಿ ಗಂಭೀರವಾಗಿ ಅಸ್ವಸ್ಥಗೊಂಡು ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಿಲ್ ಪ್ರಭು ನಿನ್ಮೆ ತಮ್ಮ ಮನೆಯಲ್ಲಿ ಗಾಯಗೊಂಡಿದ್ದ ನಾಗರ ಹಾವಿನ ಆರೈಕೆ ಮಾಡುತ್ತಿದ್ದರು.ಈ ವೇಳೆ ಹಾವು ಅವರ ಕೈಗೆ ಕಡಿದಿದೆ. ತಕ್ಷಣ ಅವರನ್ನು ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಗಂಭೀರವಿದೆ ಎಂದು ತಿಳಿದುಬಂದಿದೆ.ಈ ಹಿಂದೆ ಆರೇಳು ಬಾರಿ ಅವರಿಗೆ ಹಾವು ಕಡಿದಿದ್ದರೂ ಪ್ತಾಣಾಪಾಯದಿಂದ ಪಾರಾಗಿದ್ದರು.

Read More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಸಂಜೆ 6 ಗಂಟೆಗೆ ಮುಚ್ಚುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ. ಇಂದು ಸಂಜೆ (ಜು.29) ರಿಂದ ಆ.1 ರವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಾತ್ರ ಅಂಗಡಿ-ಮುಂಗಟ್ಟು ತೆರೆಯಲು ಅನುಮತಿ. ಉಳಿದಂತೆ ಸಂಜೆ 6 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಮುಚ್ಚಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

Read More

ಉಡುಪಿ: ಕರಾವಳಿ ಜಿಲ್ಲೆಯಲ್ಲಿ ಕಳೆದ ಒಂದು ವಾರ ಅಂತರದಲ್ಲಿ ಎರಡು ಕೊಲೆ ನಡೆದಿರುವ ಹಿನ್ನೆಲೆಯಲ್ಲಿ ಸಂಘಟನೆಗಳ ಮುಖ್ಯಸ್ಥರಿಗೆ ಎಚ್ಚರಿಕೆಯಿಂದ ಇರುವಂತೆ ಪೊಲೀಸರು ಸಂದೇಶ ರವಾನಿಸಿದ್ದಾರೆ. ಬೆಳ್ಳಾರೆಯ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆಯ ಬಳಿಕ ನಿನ್ನೆ ಸಂಜೆ ಸುರತ್ಕಲ್‌ನಲ್ಲಿ ಇನ್ನೋರ್ವ ಯುವಕನ ಕೊಲೆ ನಡೆದಿರುವ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳ ಪ್ರಮುಖರಿಗೆ ಎಚ್ಚರದಿಂದ ಇರುವಂತೆ ಪೊಲೀಸ್‌ ಇಲಾಖೆಯಿಂದ ಸಂದೇಶ ರವಾನೆ ಮಾಡಲಾಗಿದೆ. ಈ ಎರಡೂ ಘಟನೆಗಳಿಂದ ಕರಾವಳಿಯಲ್ಲಿ ಉದಿಗ್ನ ಪರಿಸ್ಥಿತಿ ಉಂಟಾಗಿದೆ.ಪೊಲೀಸ್‌ ಇಲಾಖೆ ಕೂಡ ವಿಶೇಷ ಕಾರ್ಯಾಚರಣೆ ನಡೆಸುತ್ತಿದೆ. ಹಾಗೆಯೇ ಸಂಘ ಪರಿವಾರ ಸಹಿತ ವಿವಿಧ ಸಂಘಟನೆಗಳ ಪ್ರಮುಖರಿಗೆ ಎಚ್ಚರದಿಂದ ಇರುವಂತೆ ಹಾಗೂ ರಾತ್ರಿ ವೇಳೆಯಲ್ಲಿ ಒಬ್ಬೊಬ್ಬರಾಗಿ ಸುತ್ತಾಡದಂತೆ ಸಲಹೆ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

Read More

ಪುತ್ತೂರು: ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಚಿಕನ್ ಸೆಂಟರ್ ಹೊಂದಿದ್ದ ಸದ್ದಾಂ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಮೂರನೇ ಆರೋಪಿಯನ್ನು ಕಾಣಿಯೂರಿನಲ್ಲಿ ವಶ ಪಡಿಸಿಕೊಳ್ಳಲಾಗಿದ್ದು, ಆತ ಬೆಳ್ಳಾರೆ ಮೂಲದವನು ಎಂಬ ಮಾಹಿತಿ ಇದೆ.ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಬೆಳ್ಳಾರೆಯ ಶಫೀಕ್‌ (27) ಮತ್ತು ಸವಣೂರಿನ ಝಾಕೀರ್‌ (29) ರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

Read More

ಕಾಪು: ಬಸ್ಸಿನಡಿಗೆ ಬಿದ್ದು ಅಪರಿಚಿತ ವ್ಯಕ್ತಿಯೋರ್ವ ಗಂಭೀರ ಗಾಯಗೊಂಡ ಘಟನೆ ಕಾಪು ಪೇಟೆಯಲ್ಲಿ ನಡೆದಿದೆ.ಶಿರ್ವ ನಿವಾಸಿ, ಕೂಲಿ ಕಾರ್ಮಿಕ ಬಾಲಕೃಷ್ಣ ತೀವ್ರ ಗಾಯಗೊಂಡಿದ್ದು ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಬಸ್ ನಿಲ್ದಾಣದಲ್ಲಿದ್ದ ವ್ಯಕ್ತಿ ನೇರವಾಗಿ ಬಂದು ಬಸ್‌ನತ್ತ ಬಂದಿದ್ದು, ಚಾಲಕ ಬ್ರೇಕ್ ಹಾಕುವಷ್ಟರಲ್ಲಿ ಹಿಂಬದಿಯ ಚಕ್ರದಡಿಗೆ ಸಿಲುಕಿಯಾಗಿತ್ತು. ಗಾಯಾಳುವಿನ ಕಾಲು ಸಂಪೂರ್ಣ ಮುರಿತಕ್ಕೊಳಗಾಗಿದ್ದು ಸ್ಥಳೀಯರು ಕೂಡಲೇ ಆತನನ್ನು ಬಸ್‌ನ ಅಡಿಯಿಂದ ಹೊರಕ್ಕೆ ತೆಗೆದು ಉಪಚರಿಸಿ, ಉಡುಪಿ ಆಸ್ಪತ್ರೆಗೆ ಸಾಗಿಸಿದ್ದು, ಅಲ್ಲಿಂದ ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿದೆ.ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಮಂಗಳೂರು:ಸುರತ್ಕಲ್,ಮುಲ್ಕಿ, ಬಜಪೆ, ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ಸುರತ್ಕಲ್‌ನಲ್ಲಿ ಗುರುವಾರ ರಾತ್ರಿ ನಡೆದ ಕೊಲೆ ಕೃತ್ಯದ ಹಿನ್ನೆಲೆಯಲ್ಲಿ ಸುರತ್ಕಲ್, ಮುಲ್ಕಿ, ಬಜಪೆ, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜೊತೆಗೆ ಎಲ್ಲ ಶಾಲೆ, ಕಾಲೇಜುಗಳಿಗೆ ಶುಕ್ರವಾರ ಇಂದು (ಜು.29) ರಜೆ ಘೋಷಿಸಲಾಗಿದೆ. ಪೊಲೀಸ್ ಕಮಿಷನರ್ ಶಶಿಕುಮಾರ್ ಮನವಿಯಂತೆ ದ.ಕ. ಜಿಲ್ಲಾಧಿಕಾರಿ ರಜೆ ಘೋಷಿಸಿ ತಡರಾತ್ರಿ ಆದೇಶಿಸಿದ್ದಾರೆ.

Read More

ಸುರತ್ಕಲ್; ಯುವಕನೋರ್ವನ ಮೇಲೆ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದು, ಗಂಭೀರ ಗಾಯಗೊಂಡ ಯುವಕ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತರನ್ನು ಸುರತ್ಕಲ್ ಮಂಗಳಪೇಟೆ ನಿವಾಸಿ ಮುಹಮ್ಮದ್ ಫಾಝಿಲ್ ಎಂದು ಗುರುತಿಸಲಾಗಿದೆ. ಸುರತ್ಕಲ್ ಬೀಜೇಶ್‌ ಎಂಬ ಜವಳಿ ಅಂಗಡಿಯ ಮುಂಭಾಗ ಇಂದು ರಾತ್ರಿ ಈ ಘಟನೆ ನಡೆದಿದೆ. ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಮುಹಮ್ಮದ್ ಫಾಝಿಲ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸ್‌ ಕಮಿಷನರ್‌ ಶಶಿಕುಮಾರ್‌ ಅವರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Read More

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಭಾರೀ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಹಾಗೂ ಅಹಿತಕರ ಘಟನೆ ನಡೆಯದಂತೆ ಮದ್ಯಮಾರಾಟ ಬಂದ್ ಮಾಡಲು ಆದೇಶಿಸಲಾಗಿದೆ. ನಿನ್ನೆಯಿಂದ ನಾಳೆ (ಜುಲೈ 29) ಮಧ್ಯರಾತ್ರಿ 12 ಗಂಟೆವರೆಗೆ ಸುಳ್ಯ, ಬಂಟ್ವಾಳ, ಪುತ್ತುರು, ಕಡಬದಲ್ಲಿ ಮದ್ಯದ ಅಂಗಡಿಗಳನ್ನು ಮುಚ್ಚಲು ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.

Read More

ಬೆಳ್ಳಾರೆ: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರ್ ಹತ್ಯೆಯಿಂದ ಆಘಾತಕ್ಕೊಳಗಾಗಿರುವ ತಂದೆಯ ಆರೋಗ್ಯದಲ್ಲಿ ಏರುಪೇರಾಗಿದ್ದು, ಇದೀಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗನ ಸಾವಿನಿಂದ ಶೇಖರ್ ಪೂಜಾರಿ ತೀವ್ರ ಆಘಾತಕ್ಕೊಳಗಾಗಿದ್ದರು. ಮೊದಲೇ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ತಂದೆ ಶೇಖರ್ ಪೂಜಾರಿ ಅವರು ಇದ್ದ ಒಬ್ಬ ಮಗನ ಸಾವಿನಿಂದ ಕಂಗಾಲಾಗಿದ್ದರು. ಇದೀಗ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದ್ದು, ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಂಬುಲೆನ್ಸ್ ಮೂಲಕ ಬೆಳ್ಳಾರೆಯ ಭಾರದ್ವಾಜ್ ಆಸ್ಪತ್ರೆಗೆ ಶೇಖರ್ ಅವರನ್ನು ರವಾನೆ ಮಾಡಲಾಗಿದೆ.

Read More

ಉಡುಪಿ: ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಅವರ ಹತ್ಯೆ ಖಂಡಿಸಿ ಮತ್ತು ಮನನೊಂದು ರಾಜೀನಾಮೆ ನೀಡುವುದು ಮುಂದುವರೆದಿದೆ. ಮಲ್ಪೆಯ ಬೈಲಕೆರೆ ತೆಂಕನಿಡಿಯೂರು ಗ್ರಾಮದಲ್ಲಿಯೇ 50 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ತಮ್ಮ ಪ್ರಾಥಮಿಕ ಸದಸ್ಯತ್ವಕ್ಕೆ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರಿಗೆ ತಮ್ಮ ರಾಜಿನಾಮೆ ಪತ್ರವನ್ನು ಸಲ್ಲಿಸಿರುವ ಬೈಲಕೆರೆಯ ಬಿಜೆಪಿ ಕಾರ್ಯಕರ್ತರು, ಹಿಂದು ಕಾರ್ಯಕರ್ತರಿಗೆ ರಕ್ಷಣೆ ಇಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಬೈಲಕೆರೆ, ಬಿಜೆಪಿ ಕಾರ್ಯಕರ್ತರು ಬಿಜೆಪಿಯಲ್ಲಿ ಹಲವಾರು ಸಮಯದಿಂದ ಜವಾಬ್ದಾರಿಯುತ ಕಾರ್ಯಕರ್ತರಾಗಿ ದುಡಿಯುತ್ತಿದ್ದೇವೆ. ನಾವು ಕಾರ್ಯಕರ್ತರ ನಿರಂತರ ಹತ್ಯಾಕಾಂಡದಿಂದ ಬೇಸತ್ತು, ಹಿಂದೂ ಕಾರ್ಯಕರ್ತರ ಸುರಕ್ಷತೆಯ ಬಗ್ಗೆ ಯೋಚಿಸದ ಬಿಜೆಪಿ ಸರಕಾರದಿಂದ ವಿಶ್ವಾಸ ಕಳೆದುಕೊಂಡಿರುವುದರಿಂದ ಅತ್ಯಂತ ನೋವಿನಿಂದ ಕಠಿಣ ನಿರ್ಧಾರ ತೆಗೆದುಕೊಂಡು ರಾಜಿನಾಮೆ ನೀಡುತ್ತಿರುವುದಾಗಿ ಪತ್ರದಲ್ಲಿ ತಿಳಿಸಲಾಗಿದೆ.

Read More