ಕುಂಬಳೆ: ರೈಲು ಹಳಿಯ ಮೇಲೆ ಕಲ್ಲುಗಳನ್ನು ಇಟ್ಟು ಜು. 17ರಂದು ವಿದ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಅಘಾತಕಾರಿ ವಿಚಾರ ಬಹಿರಂಗಗೊಂಡಿದೆ. ಬಂದ್ಯೋಡು ಮುಟ್ಟಂನ ಸಮೀಪ ಕೃತ್ಯವೆಸಗಿದ ಸಮಯದಲ್ಲಿ ಆ ಮಾರ್ಗವಾಗಿ ಮಂಗಳೂರು ಚೆನ್ನೈ ಮೈಲ್ ಎಕ್ಸ್ ಪ್ರಸ್ ಸಾಗಬೇಕಿತ್ತು ಆದರೆ ಲೊಕೊ ಪೈಲಟ್ ಇದನ್ನು ಗಮನಿಸಿದ್ದು ಇದರಿಂದ ಮುಂದೊದಗಬಹುದಾದ ದುರಂತ ತಪ್ಪಿತ್ತು.ಕಾಸರಗೋಡು ಮತ್ತು ಕಣ್ಣೂರು ಜಿಲ್ಲೆಗಳ ಕೋಟಿಕುಳಂ, ಕಣ್ಣಾಪುರಂ, ಕಣ್ಣೂರು ಸೌತ್, ವಳಪಟ್ಟಣಂ, ಪಾಪಿನಶ್ಯೇರಿ ಮತ್ತಿತರ ಕಡೆ ಇಂತಹುದೇ ಕೃತ್ಯ ಈ ಹಿಂದೆ ಎಸಗಲಾಗಿತ್ತು. ಈ ಘಟನೆಯನ್ನು ರೈಲ್ವೇ ಭದ್ರತಾ ಪಡೆ (ಆರ್ಪಿಎಫ್) ಮತ್ತು ಪೊಲೀಸ್ ವಿಭಾಗ ಗಂಭೀರವಾಗಿ ಪರಿಗಣಿಸಿದ್ದು, ಈ ಕೃತ್ಯದಲ್ಲಿ ಉಗ್ರಗಾಮಿಗಳ ಕೈವಾಡವಿರುವ ಬಗ್ಗೆಯೂ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.ಜು. 17ರಂದು ಮಂಗಳೂರು ಚೆನ್ನೈ ಮೈಲ್ ಎಕ್ಸ್ ಪ್ರಸ್ ಸಾಗಬೇಕಿದಾದ ಸಮಯದಲ್ಲಿ ರೈಲಿನ ಲೊಕೊ ಪೈಲಟ್ ರೈಲು ಹಳಿಯಲ್ಲಿ ಕಲ್ಲಿರಿಸಿದುದನ್ನು ನೋಡಿ ಅಧಿಕಾರಿಗಳಿಗೆ ಮಾಹಿತಿ ರವಾನಿಸಿದ್ದು ತತ್ಕ್ಷಣದ ಕಾರ್ಯಾಚರಣೆಯಲ್ಲಿ ಕಲ್ಲುಗಳನ್ನು ತೆರವುಗೊಳಿಸಿ ಸಂಭಾವ್ಯ ಅನಾಹುತ ತಪ್ಪಿಸಲಾಗಿತ್ತು.
Author: main-admin
ಹಾಸನ: ರಾಷ್ಟ್ರೀಯ ಹೆದ್ದಾರಿ 75 ದೋಣಿಗಾಲ್ ಶಿರಾಡಿಘಾಟ್ ಮಾರ್ಗದಲ್ಲಿ ಲಾರಿ ಮತ್ತು ಬಸ್ ಸೇರಿದಂತೆ ಎಲ್ಲಾ ವಾಹನ ಸಂಚಾರಕ್ಕೆ ಅನುಮತಿ ಸಿಕ್ಕಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರ ವರದಿ ಮೆರೆಗೆ ಎಲ್ಲಾ ರೀತಿ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕಳೆದ ಒಂದು ವಾರ ಹಿಂದೆ ಭಾರಿ ಮಳೆಯಿಂದಾಗಿ ರಸ್ತೆ ಕುಸಿತವಾಗಿತ್ತು. ಹೀಗಾಗಿ ಬಸ್ ಮತ್ತು ಲಾರಿ ಸಂಚಾರಕ್ಕೆ ಜಿಲ್ಲಾಧಿಕಾರಿ ಬ್ರೇಕ್ ಹಾಕಿದ್ದರು. ಇದೀಗ ಎಲ್ಲ ವಾಹನ ಸಂಚಾರಕ್ಕೂ ಅನುಮತಿ ನೀಡಲಾಗಿದೆ ಎಂದು ತಹಸೀಲ್ದಾರ್ ಜಯಕುಮಾರ್ ಹೇಳಿದ್ದಾರೆ.
ಸುಳ್ಯ: ಬಾಟಲಿಯಿಂದ ಯುವಕನೊಬ್ಬನ ತಲೆಗೆ ಹೊಡೆದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪ್ರಕರಣದ ಎಲ್ಲಾ ಎಂಟು ಮಂದಿ ಆರೋಪಿಗಳನ್ನು ಬೆಳ್ಳಾರೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸುಳ್ಯ ತಾಲೂಕಿನ ಕಳಂಜ ಗ್ರಾಮದ ವಿಷ್ಣು ನಗರ ಎಂಬಲ್ಲಿ ಜು. 19ರಂದು ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿತ್ತು. ಸ್ಥಳೀಯ ನಿವಾಸಿಗಳಾದ ಸುನೀಲ್, ಸುಧೀರ್, ಶಿವ, ಸದಾಶಿವ, ರಂಜೀತ್ ಅಭಿಲಾಷ್, ಜಿಮ್ ರಂಜಿತ್ ಹಾಗೂ ಭಾಸ್ಕರ ಎಂಬವರು ಬಂಧಿತ ಆರೋಪಿಗಳು. ಕಾಸರಗೋಡು ತಾಲೂಕು ಮೊಗ್ರಾಲ್ ಪುತ್ತೂರು ನಿವಾಸಿ ಮಸೂದ್ (18 ವರ್ಷ) ಹಲ್ಲೆಗೊಳಗಾದ ಯುವಕ. ಮೊನ್ನೆ ಸಂಜೆ ಇಲ್ಲಿನ ವಿಷ್ಣು ನಗರದಲ್ಲಿ ಖಾಸಗಿ ಸಮಾರಂಭವೊಂದು ನಡೆದಿದ್ದು ಅದಕ್ಕೆ ಮಸೂದ್ ಬಂದಿದ್ದ. ಈ ವೇಳೆ ಅಲ್ಲಿ ಸಮೀಪದ ಅಂಗಡಿಯ ಬಳಿ ಆರೋಪಿ ಸುದೀರ್ ನಿಂತಿದ್ದು, ಕ್ಷುಲ್ಲಕ ಕಾರಣಕ್ಕೆ ಮಸೂದ್ ಹಾಗೂ ಆರೋಪಿಯ ಮಧ್ಯೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಪರಿಣಾಮ ಎಂಟು ಜನ ಆರೋಪಿಗಳು ಒಟ್ಟು ಸೇರಿ ಏಕಾಏಕಿ ಮಸೂದನಿಗೆ ಕೈಯಿಂದ ಹಲ್ಲೆ ಮಾಡಲು ಪ್ರಾರಂಭಿಸಿದ್ದಾರೆ…
ಬೈಂದೂರು: ನಿನ್ನೆ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ನಲ್ಲಿ ಆಂಬ್ಯುಲೆನ್ಸ್ ದುರಂತ ಸಂಭವಿಸಿದ ಪರಿಣಾಮ ನಾಲ್ವರ ದುರ್ಮರಣಕ್ಕೆ ಸಂಬಂಧಿಸಿ ಪೊಲೀಸರು ಆಂಬ್ಯುಲೆನ್ಸ್ ಚಾಲಕ ರೋಶನ್ ನನ್ನು ವಶಕ್ಕೆ ಪಡೆದಿದ್ದಾರೆ. ಬೈಂದೂರು ಪೊಲೀಸರ ವಶದಲ್ಲಿರುವ ಚಾಲಕ ರೋಶನ್ನ ರಕ್ತದ ಮಾದರಿಯನ್ನು ಮಣಿಪಾಲದ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚಾಲಕ ಮದ್ಯ ಸೇವನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲು ಪೊಲೀಸರು ತೀರ್ಮಾನಿಸಿದ್ದಾರೆ. ಅತಿ ವೇಗದಿಂದ ಬಂದ ಆಂಬ್ಯುಲೆನ್ಸ್ ನಿಯಂತ್ರಣ ತಪ್ಪಿ ಶಿರೂರು ಟೋಲ್ ಗೇಟ್ನ ಕಂಬಕ್ಕೆ ಡಿಕ್ಕಿ ಹೊಡೆದು ನಾಲ್ಕು ಮಂದಿ ಸಾವನ್ನಪ್ಪಿ, ಮೂವರು ಗಂಭೀರ ಗಾಯಗೊಂಡಿದ್ದರು.
ಮಂಗಳೂರು: ನಗರದ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿಗಳ ಲಿಪ್ ಲಾಕ್ ವಿಡಿಯೋವೊಂದು ವೈರಲ್ ಆಗಿದೆ. ಇದೀಗ ಈ ದೃಶ್ಯವನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿರುವ ವಿದ್ಯಾರ್ಥಿಯನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಂಗಳೂರು ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳು ಖಾಸಗಿ ಕೊಠಡಿಯಲ್ಲಿ ಕಿಸ್ಸಿಂಗ್ನಲ್ಲಿ ತೊಡಗಿದ್ದರು ಎನ್ನಲಾಗಿದೆ. ಕಾಲೇಜು ಯೂನಿಫಾರಂನಲ್ಲೇ ಕಿಸ್ಸಿಂಗ್ನಲ್ಲಿ ತೊಡಗಿರುವ ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಇದೇ ಕಾರಣದಿಂದ ಈ ವಿಡಿಯೋದಲ್ಲಿರುವುದು ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ಎನ್ನುವುದು ಬೆಳಕಿಗೆ ಬಂದಿದೆ. ವಿದ್ಯಾರ್ಥಿಗಳ ತಂಡದ ಮಧ್ಯೆಯಿದ್ದ ವಿದ್ಯಾರ್ಥಿಯೊಬ್ಬ ವಿದ್ಯಾರ್ಥಿನಿಗೆ ಲಿಪ್ ಲಾಕ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಇದೀಗ ಈ ವಿಡಿಯೋ ಮಾಡಿ ವೈರಲ್ ಮಾಡಿರುವ ವಿದ್ಯಾರ್ಥಿಯನ್ನ ಮಂಗಳೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಕಾನೂನು ತಜ್ಞರ ಸಲಹೆ ಪಡೆದ ಕ್ರಮಕ್ಕೆ ಮುಂದಾಗಿದ್ದಾರೆ. ಈ ವಿಡಿಯೋದಲ್ಲಿ ಮೂವರು ಯುವಕರು ಹಾಗೂ ಮೂವರು ವಿದ್ಯಾರ್ಥಿನಿಯರಿದ್ದಾರೆ. ಮೂವರು ವಿದ್ಯಾರ್ಥಿನಿಯರು ಕಾಲೇಜು ಯೂನಿಫಾರಂ,…
ಮಂಗಳೂರು: ಉದ್ಯೋಗಿಯಿಂದಲೇ ಬ್ಯಾಂಕ್ ಹಣ ದುರುಪಯೋಗ ದೇರಳಕಟ್ಟೆಯ ವಿಜಯಾಬ್ಯಾಂಕ್ ಯೆನೆಪೊಯ ಯುನಿವರ್ಸಿಟಿಯ ಬ್ರ್ಯಾಂಚ್ ನೌಕರ ವಿಕಾಸ್ ವಿ. ಶೆಟ್ಟಿಗೆ 2ನೇ ಜಿಲ್ಲಾ ಹೆಚ್ಚುವರಿ ಹಾಗೂ ಸತ್ರ ನ್ಯಾಯಾಲಯ 3 ವರ್ಷಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶಿಸಿದೆ. ಬ್ಯಾಂಕ್ ಮ್ಯಾನೇಜರ್ ಸಂದೀಪ್ ಗದ್ದೆಯವರು 2017ರ ಡಿಸೆಂಬರ್ 28-30 ರವರೆಗೆ ರಜೆಯಲ್ಲಿದ್ದರು. ಈ ವೇಳೆ ವಿಕಾಸ್ ವಿ. ಶೆಟ್ಟಿ ಪ್ರಭಾರದಲ್ಲಿದ್ದರು. ಆದರೆ 2017ರ ಡಿಸೆಂಬರ್ 29ರಂದು ಸಂಜೆ ಬ್ಯಾಂಕ್ ಸಿಬ್ಬಂದಿ ಕ್ಲೋಸಿಂಗ್ ಕ್ಯಾಶ್ನ್ನು ಬ್ಯಾಂಕ್ನ ಫಿನಾಕಲ್ ಸ್ವಾಫ್ಟ್ ವೇರ್ನಲ್ಲಿ ಟ್ಯಾಲಿ ಮಾಡಿದಾಗ ಕ್ಲೋಸಿಂಗ್ ಕ್ಯಾಶ್ ಟ್ಯಾಲಿಯಾಗದೆ 27,29,875 ರೂ. ಕಡಿಮೆ ಇತ್ತು. ಈ ಬಗ್ಗೆ ವಿಕಾಸ್ ವಿ.ಶೆಟ್ಟಿಯಲ್ಲಿ ವಿಚಾರಿಸಿದಾಗ, ಈ ಹಣವನ್ನು ತಾನು ತೆಗೆದಿರುವುದಾಗಿ ಒಪ್ಪಿಕೊಂಡಿದ್ದನು. ಹಾಗೂ ಈ ಹಣವನ್ನು ಡಿಸೆಂಬರ್ 31ರಂದು ಬ್ಯಾಂಕಿಗೆ ಮರು ಪಾವತಿ ಮಾಡಿದ್ದಾನೆ. ಆದರೆ ಆರೋಪಿ ಸಾರ್ವಜನಿಕ ಹಣವನ್ನು ತನ್ನ ಸ್ವಂತ ಉಪಯೋಗಕ್ಕೆ ದುರುಪಯೋಗ ಪಡಿಸಿ ನಂಬಿಕೆ ದ್ರೋಹ ಎಸಗಿರುವುದಾಗಿ ಮಂಗಳೂರು ಇಕಾನಮಿಕ್ & ನಾರ್ಕೋಟಿಕ್…
ಬೈಂದೂರು: ಅತಿವೇಗದಿಂದ ಚಲಿಸುತ್ತಿದ್ದ ಆ್ಯಂಬುಲೆನ್ಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಶಿರೂರಿನ ಟೋಲ್ ಗೇಟ್ನ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿ, ಓರ್ವ ಗಂಭೀರ ಗಾಯಗೊಂಡ ಘಟನೆ ಇಂದು ನಡೆದಿದೆ. ಹೊನ್ನಾವರದಿಂದ ಕುಂದಾಪುರ ಆಸ್ಪತ್ರೆಗೆ ರೋಗಿಯನ್ನು ಕರೆತರುವ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಆ್ಯಂಬುಲೆನ್ಸ್ ಶಿರೂರಿನ ಟೋಲ್ ಗೇಟ್ನ ಕಂಬಕ್ಕೆ ಢಿಕ್ಕಿ ಹೊಡೆದ ಬಳಿಕ ಪಲ್ಟಿಯಾಗಿದ್ದು, ಅದರಲ್ಲಿದ್ದ ಮೂವರು ಸಾವನ್ನಪ್ಪಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಬೈಂದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೈಂದೂರು (ಉಪ್ಪುಂದ): ಕವರ್ ಸಹಿತ ಚಾಕಲೇಟ್ ನುಂಗಿ ಎರಡನೇ ತರಗತಿ ವಿದ್ಯಾರ್ಥಿನಿಯೋರ್ವಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬಿಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಳವಾಡಿಯಲ್ಲಿ ಬುಧವಾರ ನಡೆದಿದೆ. ಬಿಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬವಳಾಡಿ ಗ್ರಾಮದ ನಿವಾಸಿ ಸಮನ್ವಿ ಮೃತ ಬಾಲಕಿ ಎಂದು ತಿಳಿದುಬಂದಿದೆ. ಘಟನೆ ವಿವರ: ಸಮನ್ವಿ ಖಾಸಗಿ ಆಂಗ್ಲಮಾಧ್ಯಮದಲ್ಲಿ 2ನೇ ತರಗತಿ ಓದುತ್ತಿದ್ದು, ಮುಂಜಾನೆ ಶಾಲೆಗೆ ಹೊರಡುತ್ತಿರುವ ವೇಳೆ ಹಠ ಹಿಡಿದಿದ್ದಳು. ಮಗಳನ್ನು ಸಮಧಾನಪಡಿಸಲು ಅಮ್ಮ ಚಾಕಲೇಟ್ ನೀಡಿದ್ದಾರೆ. ಈ ವೇಳೆ ಶಾಲಾ ವಾಹನ ಬಂದಿದ್ದು, ವಿದ್ಯಾರ್ಥಿನಿ ಕವರ್ ಸಹಿತ ಚಾಕಲೇಟ್ ನುಂಗಿದ್ದಾಳೆ. ಚಾಕಲೇಟ್ ಗಂಟಲಲ್ಲಿ ಸಿಲುಕಿಕೊಂಡು, ಅಸ್ವಸ್ಥಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಆ ವೇಳೆಗಾಗಲೇ ಬಾಲಕಿ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ ಎಂದು ತಿಳಿದುಬಂದಿದೆ.
ಉಡುಪಿ: ನಗರದ ಕೋರ್ಟ್ ಹಿಂಬದಿ ರಸ್ತೆಯ ವಕೀಲರೊಬ್ಬರ ಮನೆಗೆ ಜು.19 ರಂದು ಹಾಡಹಗಲೇ ನುಗ್ಗಿದ ಕಳ್ಳರು 25 ಲಕ್ಷ ರೂ. ಮೌಲ್ಯದ ನಗನಗದು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ. ಉಡುಪಿಯ ವಕೀಲೆ ವಾಣಿ ವಿ. ರಾವ್ ಎಂಬವರ ಮನೆಗೆ ನುಗ್ಗಿದ ಕಳ್ಳರು ಬೆಡ್ರೂಂನಲ್ಲಿದ್ದ ಕಬ್ಬಿಣದ ಕಪಾಟಿನ ಲಾಕರ್ನಲ್ಲಿ ಇರಿಸಿದ್ದ ಪರ್ಸ್ ನಲ್ಲಿದ್ದ 45,000 ರೂ. ನಗದು ಮತ್ತು ವ್ಯಾನಿಟಿ ಬ್ಯಾಗ್ನಲ್ಲಿರಿಸಿದ್ದ 5 ಪವನ್ ತೂಕದ ಪಚ್ಚೆಕಲ್ಲು ಇರುವ ಚಿನ್ನದ ಬ್ರೇಸ್ಲೇಟ್, 6 ಪವನ್ ತೂಕದ 2 ಮುತ್ತಿನ ಬಳೆ, ಐದೂವರೆ ಪವನ್ ತೂಕದ 2 ಚಿನ್ನದ ಖಡಗ ಬಳೆಗಳು, 6 ಪವನ್ ತೂಕದ ಚಿನ್ನದ ಸರ ಮತ್ತು 1 ಪವನ್ ತೂಕದ ಪೆಂಡೆಂಟ್, 6 ಪವನ್ ತೂಕದ ಮಲ್ಲಿಗೆ ಮೊಗ್ಗು ಚಿನ್ನದ ಸರ, ಒಂದೂವರೆ ಪವನ್ ತೂಕದ ಚಿನ್ನದ ಸರ ಮತ್ತು ನೀಲಿ ಹರಳಿನ ಪೆಂಡೆಂಟ್, ನೀಲಿ ಕಲ್ಲಿನ ಬೆಂಡೋಲೆ ಮತ್ತು ಕರಮಣಿ ಮರಳಿನ 2 ಬೆಂಡೋಲೆ, ಜುಮ್ಕಿ ಮತ್ತು 2…
ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಹಲವು ಪ್ರಕರಣಗಳಲ್ಲಿ ಆರೋಪಿಗಳಾಗಿರುವ ಇಬ್ಬರ ಮೇಲೆ ಗೂಂಡಾ ಕಾಯ್ದೆ ಜಾರಿಯಾಗಿದೆ. ನಗರದ ಎಕ್ಕೂರು ನಿವಾಸಿ ಧೀರಜ್ ಕುಮಾರ್(27), ಬಜಾಲ್ ಜಲ್ಲಿಗುಡ್ಡೆ ನಿವಾಸಿ ಪ್ರೀತಂ ಪೂಜಾರಿ (26) ಗೂಂಡಾ ಕಾಯ್ದೆ ಜಾರಿಗೊಂಡ ಆರೋಪಿಗಳು. ಆರೋಪಿಗಳಿಬ್ಬರೂ ಸಮಾಜ ವಿದ್ರೋಹಿ ಚಟುವಟಿಕೆಗಳಲ್ಲಿ ತೊಡಗಿಕೊಂಡು ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವಂತಹ ಕೃತ್ಯದಲ್ಲಿ ಪದೇ ಪದೇ ತೊಡಗಿಕೊಂಡಿರುತ್ತಾರೆ. ಇವರುಗಳು ಕೊಲೆಯತ್ನ, ಸುಲಿಗೆ, ದರೋಡೆಗೆ ಯತ್ನ, ಹಲ್ಲೆ ಅಪರಾಧಕ್ಕೆ ಒಳಸಂಚು ಪ್ರಕರಣಗಳಲ್ಲಿ ಪದೇ ಪದೇ ನಡೆಸುತ್ತಿದ್ದ ಸಾರ್ವಜನಿಕ ವ್ಯವಸ್ಥೆಗೆ ಧಕ್ಕೆಯಾಗುವಂತಹ ಕೃತ್ಯದಲ್ಲಿ ತೊಡುಗುತ್ತಿರುವುದರಿಂದ ಸಾಮಾನ್ಯ ಕಾನೂನುಗಳಿಂದ ಇವರ ಅಪರಾಧ ಕೃತ್ಯಗಳಿಗೆ ನಿಯಂತ್ರಣ ಹೇರುವುದು ಕಷ್ಟಕರವಾಗಿದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಈ ಇಬ್ಬರೂ ಆರೋಪಿಗಳನ್ನು ಗೂಂಡಾ ಕಾಯ್ದೆಯನ್ವಯ ಗರಿಷ್ಠ ಅವಧಿಗೆ ಬಂಧನದಲ್ಲಿಡುವಂತೆ ಆದೇಶಿಸಲಾಗಿದೆ. ಸದ್ಯ ಇವರಿಬ್ಬರೂ ಮಂಗಳೂರು ಕಾರಾಗೃಹದಲ್ಲಿ ಬಂಧಿಗಳಾಗಿದ್ದಾರೆ.