ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಮೇಲೆ ಇಂದು ಮುಂಜಾನೆ ಡ್ರೋನ್ ಹಾರುತ್ತಿರುವುದು ಕಂಡುಬಂದ ನಂತರ ದೆಹಲಿ ಪೊಲೀಸರು ಸೋಮವಾರ ತನಿಖೆಗೆ ಆದೇಶಿಸಿದ್ದಾರೆ. ಬೆಳಿಗ್ಗೆ 5 ಗಂಟೆ ಸುಮಾರಿಗೆ ವಿಶೇಷ ಸಂರಕ್ಷಣಾ ಗುಂಪಿನ ಅಧಿಕಾರಿಗಳು ಪಿಎಂ ಮೋದಿಯವರ ನಿವಾಸದ ಮೇಲೆ ಡ್ರೋನ್ ಅನ್ನು ನೋಡಿದರು. ಶೀಘ್ರದಲ್ಲೇ, ದೆಹಲಿ ಪೊಲೀಸರಿಗೆ ಎಚ್ಚರಿಕೆ ನೀಡಲಾಯಿತು ಮತ್ತು ಡ್ರೋನ್ ಅನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಇಲ್ಲಿಯವರೆಗೆ ಯಾವುದೇ ಡ್ರೋನ್ ಪತ್ತೆಯಾಗಿಲ್ಲ. ಪ್ರಧಾನ ಮಂತ್ರಿಯವರ ನಿವಾಸವು ಕೆಂಪು ಹಾರಾಟ ನಿಷೇಧ ವಲಯ ಅಥವಾ ಡ್ರೋನ್ ರಹಿತ ವಲಯದ ಅಡಿಯಲ್ಲಿ ಬರುತ್ತದೆ ಎಂಬುದು ಇಲ್ಲಿ ಗಮನಾರ್ಹವಾಗಿದೆ.
Author: main-admin
ಉಳ್ಳಾಲ: ಆಂಬ್ಯುಲೆನ್ಸ್ ವಾಹನ ಢಿಕ್ಕಿ ಹೊಡೆದು ಪಾದಚಾರಿ ಸಾವನ್ನಪ್ಪಿದ ಘಟನೆ ಉಳ್ಳಾಲ ತಲಪಾಡಿ ಮರೋಳಿ ಬಾರ್ ಎದುರುಗಡೆ ಭಾನುವಾರ ಮಧ್ಯಾಹ್ನ ವೇಳೆ ಸಂಭವಿಸಿದೆ. ಕಾಸರಗೋಡು ಮಂಗಲ್ಪಾಡಿ ಹೇರೂರು ನಿವಾಸಿ ಫ್ರಾನ್ಸಿಸ್ ಡಿಸೋಜ (62) ಮೃತರು. ಮನೆಯಿಂದ ತಲಪಾಡಿಗೆ ಬಂದಿದ್ದ ಫ್ರಾನ್ಸಿಸ್, ಮರೋಳಿ ಬಾರ್ ಎದುರುಗಡೆಯಿಂದ ವಾಪಸ್ಸು ಮನೆಗೆ ತೆರಳಲು ರಾಷ್ಟ್ರೀಯ ಹೆದ್ದಾರಿಯನ್ನು ದಾಟುವ ಸಂದರ್ಭ ಕೇರಳದಿಂದ ಮಂಗಳೂರು ಕಡೆಗೆ ಅಮಿತ ವೇಗದಲ್ಲಿ ಬರುತ್ತಿದ್ದ ಖಾಲಿ ಆಂಬ್ಯುಲೆನ್ಸ್ ಫ್ರಾನ್ಸಿಸ್ ಅವರಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಫ್ರಾನ್ಸಿಸ್ ದೂರ ಎಸೆಯಲ್ಪಟ್ಟು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಕ್ಷಣ ಆಂಬ್ಯುಲೆನ್ಸ್ ಚಾಲಕ ಅದೇ ಆಂಬ್ಯುಲೆನ್ಸ್ ಮೂಲಕ ಫ್ರಾನ್ಸಿಸ್ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆತಂದರೂ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಇಹಲೋಕ ತ್ಯಜಿಸಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ಮಕ್ಕಳು ದ್ವಿಚಕ್ರ ವಾಹನ ಚಲಾಯಿಸಿ ಅಪಘಾತ ನಡೆದರೆ ಹೆತ್ತವರ ಮೇಲೆ ಕೇಸ್ ದಾಖಲಿಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಹೇಳಿದ್ದಾರೆ. ದ್ವಿಚಕ್ರ ವಾಹನ ಅಪಘಾತಗಳ ಬಗ್ಗೆ ನಿನ್ನೆ ನಡೆದ ನಗರ ಪೊಲೀಸ್ ಕಮೀಷನರ್ ಅವರ ಫೋನ್-ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಈ ಬಗ್ಗೆ ದೂರು ಸಲ್ಲಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಅವರು, ಇನ್ನು ಮುಂದೆ ಮಕ್ಕಳು ದ್ವಿಚಕ್ರ ಚಲಾಯಿಸಿ ಅಪಘಾತ ನಡೆಸಿದರೆ ಮಕ್ಕಳ ಹೆತ್ತವರ ವಿರುದ್ಧವೇ ಕೇಸ್ ದಾಖಲಿಸಲಾಗುವುದು ಎಂದು ಎಚ್ಚರಿಸಿದ್ದಾರೆ. ಈ ರೀತಿ ಘಟನೆ ನಡೆದರೆ ಆರ್ಸಿ ಓನರ್ ವಿರುದ್ಧ ಕೂಡ ಪ್ರಕರಣ ದಾಖಲಿಸಲು ಸೂಚನೆ ನೀಡಿದ್ದು, ಈ ಬಗ್ಗೆ ಮಕ್ಕಳ ಹೆತ್ತವರಿಗೆ ಕೂಡ ಸೂಚನೆ ನೀಡಲಾಗುವುದು ಎಂದು ಹೇಳಿದ್ದಾರೆ.
ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ನಡೆದ ರೈಲು ದುರಂತಕ್ಕೆ ಇಲಾಖೆ ಸಿಬ್ಬಂದಿ ಎಡವಟ್ಟು ಕಾರಣ ಎಂದು ರೈಲ್ವೆ ಸುರಕ್ಷಿತ ಆಯುಕ್ತರು ವರದಿ ಸಲ್ಲಿಸಿದ್ದಾರೆ, ಜೂನ್ 2 ರಂದು ನಡೆದ ರೈಲುಗಳ ಅಪಘಾತಕ್ಕೆ ಎರಡು ಇಲಾಖೆ ಸಿಬ್ಬಂದಿ ಕಾರಣ. ರೈಲ್ವೆಯ ಸಿಗ್ನಲ್ ಮತ್ತು ಕಾರ್ಯನಿರ್ವಹಣೆ ಸಿಬ್ಬಂದಿ ಕಾರಣ ಎಂದು ರೈಲ್ವೆ ಆಯುಕ್ತರ ವರದಿಯಲ್ಲಿ ಸಿಬ್ಬಂದಿ ಎಡವಟ್ಟಿನ ಬಗ್ಗೆ ಉಲ್ಲೇಖಿಸಲಾಗಿದೆ. ಸಿಬಿಐನಿಂದಲೂ ರೈಲು ದುರಂತದ ಬಗ್ಗೆ ತನಿಖೆ ಮುಂದುವರೆದಿದೆ. ರೈಲು ದುರಂತದ ಹಿಂದೆ ವಿಧ್ವಂಸಕ ಕೃತ್ಯದ ಶಂಕೆ ಹಿನ್ನೆಲೆಯಲ್ಲಿ ಸಿಬಿಐ ತನಿಖೆ ಕೈಗೊಳ್ಳಲಾಗಿದೆ. ರೈಲು ಅಪಘಾತದಲ್ಲಿ 290 ಜನ ಮೃತಪಟ್ಟಿದ್ದರು. ಜೂನ್ 2 ರಂದು ಸಂಭವಿಸಿದ ತ್ರಿವಳಿ ರೈಲು ಅಪಘಾತಕ್ಕೆ ಮಾನವ ತಪ್ಪು ಕಾರಣ ಎಂದು ರೈಲ್ವೆ ಸುರಕ್ಷತಾ ಆಯುಕ್ತರು(CRS) ತಿಳಿಸಿದ್ದಾರೆ. ಆದಾಗ್ಯೂ, ಕೇಂದ್ರೀಯ ತನಿಖಾ ದಳ(ಸಿಬಿಐ) ನಡೆಸುತ್ತಿರುವ ಸಮಾನಾಂತರ ತನಿಖೆಯ ಮೇಲೆ ಪ್ರಭಾವ ಬೀರದಂತೆ ನೋಡಿಕೊಳ್ಳಲು ಮುಚ್ಚಿಟ್ಟಿರುವ ವರದಿಯಲ್ಲಿ ತೋರಿಸಿರುವ ದೋಷಗಳ ಕುರಿತು ಯಾವುದೇ ವಿವರಗಳನ್ನು ಬಹಿರಂಗಪಡಿಸಲು ಅಧಿಕಾರಿಗಳು ನಿರಾಕರಿಸಿದ್ದಾರೆ. ವರದಿಯು ಮಾನವ ದೋಷವನ್ನು…
ಮೈಸೂರು: ಫೇಸ್ಬುಕ್ನಲ್ಲಿ ಸಂಸದ ಪ್ರತಾಪ್ ಸಿಂಹ ಬಗ್ಗೆಅವಹೇಳನಾಕಾರಿ ಪೋಸ್ಟ್ ಹಾಕಿದ್ದ ಮೈಸೂರಿನ ವಿವಿ ಪುರಂ ಠಾಣೆಯ ಟ್ರಾಫಿಕ್ ಹೆಡ್ ಕಾನ್ಸ್ಟೇಬಲ್ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಇಲಾಖಾ ವಿಚಾರಣೆ ಬಾಕಿ ಇರಿಸಿ ಟ್ರಾಫಿಕ್ ಹೆಡ್ ಕಾನ್ಸ್ಟೇಬಲ್ ಬಿ.ಪ್ರದೀಪ್ ಅವರನ್ನು ಅಮಾನತು ಮಾಡಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶಿಸಿದ್ದಾರೆ. ಇನ್ನು ಟ್ರಾಫಿಕ್ ಹೆಡ್ ಕಾನ್ಸ್ಟೇಬಲ್ ಬಿ.ಪ್ರದೀಪ್, ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದು, ಇದನ್ನು ಗಮನಿಸಿದ ಸಂಸದ ಪ್ರತಾಪ ಸಿಂಹ ಹಾಕಲಾಗಿದ್ದ ಕಮೆಂಟ್ ಸ್ಕ್ರೀನ್ಶಾಟ್ ಜೊತೆ ಪೊಲೀಸ್ ಕಮಿಷನರ್ಗೆ ದೂರು ನೀಡಿ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದರು. ದೂರಿನ ಮೇರೆಗೆ ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಮಂಗಳೂರು: ಎನ್ಎಂಪಿಎಗೆ ಪನಾಮದಿಂದ ಎಂಎಸ್ಸಿ ಮಾಕೊಟೊ-2 ನೌಕೆ ಬಂದಿಳಿದಿದೆ. ಈ ಹಡಗು ಈವರೆಗಿನ ಗರಿಷ್ಠ ಪ್ರಮಾಣದ ಒಟ್ಟು 2,689 ಟಿಇಯು ಕಂಟೇನರ್ಗಳನ್ನು ಒಳಗೊಂಡಿತ್ತು ಎಂದು ನವಮಂಗಳೂರು ಬಂದರು ನಿಗಮದ ಟ್ರಾಫಿಕ್ ವ್ಯವಸ್ಥಾಪಕರು ತಿಳಿಸಿದ್ದಾರೆ. ನವಮಂಗಳೂರು ಬಂದರಿನ 14ನೇ ಬರ್ತ್ನಲ್ಲಿ ಯಾಂತ್ರೀಕೃತ ಚಟುವಟಿಕೆ ಆರಂಭಗೊಂಡಿದೆ. ಜೆಎಸ್ಡಬ್ಲ್ಯುನ ಮಂಗಳೂರು ಕಂಟೈನರ್ ಟರ್ಮಿನಲ್ ಜೊತೆಗೂಡಿ ಪಿಪಿಪಿ ಮಾದರಿಯಲ್ಲಿ ಇದನ್ನು ನಿರ್ವಹಿಸಲಾಗುತ್ತಿದೆ. ಇದರೊಂದಿಗೆ ವಲಯಮಟ್ಟದಲ್ಲಿ ಕಂಟೈನರ್ ನಿರ್ವಹಣೆಯಲ್ಲಿ ಮುಂಚೂಣಿಯಲ್ಲಿರುವ ಬಂದರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. 2689 ಟಿಇಯು ಕಂಟೈನರ್ಗಳನ್ನು ನಿರ್ವಹಿಸುವುದರ ಮೂಲಕ ಬಂದರು ಮೈಲುಗಲ್ಲೊಂದನ್ನು ದಾಟಿದೆ. ಗ್ರಾಹಕರಿಗೆ ವಿಶ್ವದರ್ಜೆಯ ಸೇವೆಯನ್ನು ನೀಡುತ್ತಿರುವುದಕ್ಕೆ ಇದೊಂದು ನಿದರ್ಶನ ಎಂದು ನಿಗಮದ ಅಧ್ಯಕ್ಷ ಎ.ವಿ.ರಮಣ ಹೇಳಿದ್ದಾರೆ.
ಪುತ್ತೂರು: ಮಗ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದ ಬೆನ್ನಲ್ಲೇ ತಾಯಿ ನೇಣಿಗೆ ಶರಣಾದ ಘಟನೆ ಪುರುಷರಕಟ್ಟೆ ಇಂದಿರಾನಗರದಲ್ಲಿ ಸಂಭವಿಸಿದೆ. ಇಂದಿರಾನಗರದ ದಿ| ಪ್ರವೀಣ್ ಅವರ ಪತ್ನಿ ಕಾವ್ಯಾ (38) ಆತ್ಮಹತ್ಯೆ ಮಾಡಿಕೊಂಡವರು. ಪ್ರವೀಣ್ ಕೂಡ ಯಾವುದೋ ಕಾರಣಕ್ಕೆ 7 ವರ್ಷಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದು, ಅದೇ ಸ್ಥಳದಲ್ಲಿ ಕಾವ್ಯಾ ಇಹಲೋಕ ತ್ಯಜಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪುತ್ರ ಕಾವ್ಯ ಅವರ ಪುತ್ರ ಪ್ರತೀಕ್ ಜೂ.30ರಂದು ಬೆದ್ರಾಳ ಸಮೀಪ ಸಂಭವಿಸಿದ ಅಪಘಾತವೊಂದರಲ್ಲಿ ತೀವ್ರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ಬೆನ್ನಲ್ಲೇ ಕಾವ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.
ಮಂಗಳೂರು: ಅಪ್ರಾಪ್ತರಿಗೆ ವಾಹನ ನೀಡಿದ್ದಲ್ಲಿ ಆರ್ಸಿ ಓನರ್ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಜೈನ್ ಅವರು ಫೋನ್ ಇನ್ ಕಾರ್ಯಕ್ರಮದಲ್ಲಿ ಬಂದಿರುವ ದೂರೊಂದಕ್ಕೆ ಪ್ರತಿಕ್ರಿಯಿಸಿದ್ದಾರೆ. ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಫೋನ್ ಇನ್ ಕಾರ್ಯಕ್ರಮದಲ್ಲಿ ಒಟ್ಟು 31 ಫೋನ್ ಕರೆಗಳನ್ನು ಪೊಲೀಸ್ ಕಮಿಷನರ್ ಸ್ವೀಕರಿಸಿದರು. ಬಹಳಷ್ಟು ಟ್ರಾಫಿಕ್ ಸಮಸ್ಯೆಗಳ ದೂರುಗಳೇ ಕೇಳಿ ಬಂದಿದೆ. ಅದರಲ್ಲೂ ಹೆಲ್ಮೆಟ್ ರಹಿತ ಚಾಲನೆ, ಅಪ್ರಾಪ್ತರಿಂದ ವಾಹನ ಚಾಲನೆ, ವಾಹನಗಳ ಕರ್ಕಶ ಹಾರ್ನ್, ಬೈಕ್ಗಳ ಕರ್ಕಶ ಸೈಲೆನ್ಸರ್ಗಳಿಂದ ತೊಂದರೆಗಳಾಗುವ ದೂರುಗಳು ಬಂದಿದೆ. ಈ ಬಗ್ಗೆ ದೂರು ಸ್ವೀಕರಿಸಿದ ಪೊಲೀಸ್ ಕಮಿಷನರ್ ಸಮಸ್ಯೆಗಳನ್ನು ಬಗೆಹರಿಸಲು ಸಂಬಂಧಿತ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೆ ಹೆಲ್ಮೆಟ್ ರಹಿತ ಚಾಲನೆ ಹಾಗೂ ಅಪ್ರಾಪ್ತರಿಂದ ವಾಹನ ಚಾಲನೆ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲದೆ ಅಪ್ರಾಪ್ತರು ಸೇರಿದಂತೆ ಅವರ ಮನೆಯವರನ್ನು ಠಾಣೆಗೆ ಕರೆದು ಕೌನ್ಸೆಲಿಂಗ್ ಮಾಡಲಾಗುತ್ತದೆ ಎಂದು ಹೇಳಿದರು. ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಸೀಝ್…
ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ತರುವ, ಕೋಮು ಗಲಭೆ ಪ್ರಚೋದಿಸುವ ಪೋಸ್ಟ್ ಗಳನ್ನು ಹರಿಯಬಿಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಂಗಳೂರು ನಗರ ಉತ್ತರ ಶಾಸಕರಾದ ಡಾ. ಭರತ್ ಶೆಟ್ಟಿಯವರು ಮಂಗಳೂರು ಪೊಲೀಸ್ ಕಮೀಷನರ್ ಕುಲದೀಪ್ ಜೈನ್ ಅವರಿಗೆ ಮನವಿ ಮಾಡಿದ್ದಾರೆ. ಪೊಲೀಸ್ ಕಮೀಷನರ್ ಅವರನ್ನು ಕಚೇರಿಯಲ್ಲಿ ಭೇಟಿ ಮಾಡಿದ ಶಾಸಕರು ಸಾಮರಸ್ಯ, ಸಹಬಾಳ್ವೆ ಮತ್ತು ಶಾಂತಿ ಸುವ್ಯವಸ್ಥೆ ತುಂಬಿರುವ ಜಿಲ್ಲೆಯಲ್ಲಿ ಅವಹೇಳನಕಾರಿ ಪೋಸ್ಟ್ ಮೂಲಕ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿರುವ ಸದರಿ ಪೇಜ್ ಗಳ ಅಡ್ಮಿನ್ ಗಳ ವಿರುದ್ಧ ಕಾನೂನು ರೀತಿಯಲ್ಲಿ ಕಠಿಣ ಕ್ರಮ ಜರುಗಿಸಲು ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ಮಂಗಳೂರು ನಗರ ಉತ್ತರ ಮಂಡಲ ಭಾಜಪಾ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಚ್ಚನಾಡಿ ಉಪಸ್ಥಿತರಿದ್ದರು.
ಮಂಗಳೂರು: ಯುವಕನನ್ನು ಹೊಡೆದು ಸಾಯಿಸಿದ ಅಪರಾಧಿಗಳಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಮಂಗಳೂರಿನ ಬಡಗ ಎಡಪದವು ನಿವಾಸಿಗಳಾದ ರಮೇಶ್ ಶೆಟ್ಟಿಗಾರ್(41) ಹಾಗೂ ನಿತ್ಯಾನಂದ (41) ಶಿಕ್ಷೆಗೊಳಗಾದ ಅಪರಾಧಿಗಳು. ನ್ಯಾಯಾಧೀಶ ಕಾಂತರಾಜು ಎಸ್.ವಿ.ಯವರು ಜೀವಾವಧಿ ಶಿಕ್ಷೆ ವಿಧಿಸಿದ ತೀರ್ಪು ನೀಡಿದ್ದಾರೆ. ಹಣದ ವ್ಯವಹಾರ ಮತ್ತು ರಮೇಶ ಶೆಟ್ಟಿಗಾರ್ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾನೆಂಬ ದ್ವೇಷದಿಂದ ಆರೋಪಿಗಳು 2019ರ ಮೇ 17ರ ರಾತ್ರಿ 11.50ಕ್ಕೆ ಬಡಗ ಎಡಪದವು ಗ್ರಾಮದ ದೂಮಚಡವು ದಡ್ಡಿ ಕ್ರಾಸ್ ಎಂಬಲ್ಲಿ ಬಡಗ ಎಡಪದವು ನಿವಾಸಿ ನವೀನ (28) ಎಂಬವರ ತಲೆಗೆ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದರು.ಬಳಿಕ ತಮ್ಮ ಬಟ್ಟೆ ಬರೆಗಳನ್ನು ಕಾಡಿನಲ್ಲಿ ಸುಟ್ಟು ಸಾಕ್ಷ್ಯ ನಾಶ ಮಾಡಿದ್ದರು. ಈ ಬಗ್ಗೆ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಪೊಲೀಸ್ ನಿರೀಕ್ಷಕ ಕೆ.ಆರ್.ನಾಯ್ಕ್ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗಳಿಗೆ ಐಪಿಸಿ ಕಲಂ 302ರಡಿ…










