Author: main-admin

ಬೆಳ್ತಂಗಡಿ: ದನಗಳನ್ನು ಕಳವು ಮಾಡಿಕೊಂಡು ಬಂದು ಗೋಮಾಂಸ ಮಾಡುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿ, ದನದ ಮಾಂಸ ಮತ್ತು ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಗಳನ್ನು ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ನಿವಾಸಿ ಅಬ್ದುಲ್ ನಝೀರ್ ಮತ್ತು ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಝಕಾರಿಯಾ ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ಚರ್ಚ್ ಬಳಿಯ ಖಾಸಗಿ ರಬ್ಬರ್ ತೋಟದ ಶೆಡ್ ಒಳಗಡೆ ಅಕ್ರಮವಾಗಿ ಜಾನುವಾರು ಕಡಿದು ಮಾಂಸ ಮಾಡುತ್ತಿದ್ದಾಗ ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಪೊಲೀಸರು ಸೋಮವಾರ ಮಧ್ಯಾಹ್ನ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ದಾಳಿ ವೇಳೆ 91 ಕೆ.ಜಿ ದನದ ಮಾಂಸ ಹಾಗೂ ಪರಿಕರಗಳನ್ನು ವಶಪಡಿಸಿಕೊಂಡಿದ್ದು ಗೋಮಾಂಸ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, 17 ಮಂದಿ ಡಿವೈಎಸ್ ಪಿ (ಸಿವಿಲ್) ಹಾಗೂ ಪಿಐ (ಸಿವಿಲ್)ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಸರ್ಕಾರದ ಅಧಿಸೂಚನೆ ಸಂಖ್ಯೆ: ಒಇ 359 (i) ಪಿಇಜಿ 2025, ದಿನಾಂಕ: 13.10.2025ರಲ್ಲಿ ಈ ಕೆಳಕಂಡ ಪಿಐ (ಸಿವಿಲ್) (ಉಳಿಕೆ ಮೂಲವೃಂದ) ವೃಂದದ ಅಧಿಕಾರಿಗಳಿಗೆ ವೇತನ ಶ್ರೇಣಿ ರೂ.83,700-1,55,200ರ ಡಿವೈಎಸ್‌ಪಿ (ಸಿವಿಲ್) (ಉಳಿಕೆ ಮೂಲವೃಂದ) ವೃಂದದಲ್ಲಿ ಕೆಸಿಎಸ್ ನಿಯಮ 32 ರಡಿ ಸ್ವತಂತ್ರ ಪ್ರಭಾರದಲ್ಲಿರಿಸಿದ್ದು, ಈ ಕೆಳಕಂಡಂತೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಸ್ಥಳಗಳಿಗೆ ಈ ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ.

Read More

ಮಂಗಳೂರು: ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ವಿರುದ್ಧ ಬಿಜೆಪಿ ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿ ನ್ಯಾಯಾಂಗ ತನಿಖೆಗೆ ಒತ್ತಾಯಿಸಿದೆ. ಮಂಗಳೂರಿನಲ್ಲಿ ನಿನ್ನೆ ಬಿಜೆಪಿ ಶಾಸಕ ಡಾಸ. ಭರತ್‌ ಶೆಟ್ಟಿ ಸುದ್ದಿಗೋಷ್ಠಿ ಕರೆದು ಸ್ಪೀಕರ್‌ ಕಚೇರಿ ನವೀಕರಣ ಮತ್ತಿತರ ವ್ಯವಹಾರಗಳಲ್ಲಿ ಭ್ರಷ್ಟಾಚಾರ ನಡೆದಿರುವುದಾಗಿ ಆರೋಪಿಸಿದ್ದರು. ಅದೇ ರೀತಿ ಬೆಂಗಳೂರು ಮತ್ತಿತರೆಡೆಗಳಲ್ಲಿ ಬಿಜೆಪಿ ನಾಯಕರು ಸುದ್ದಿಗೋಷ್ಠಿಗಳಲ್ಲಿ ಖಾದರ್‌ ವಿರುದ್ಧ ಅವ್ಯವಹಾರದ ಆರೋಪ ಹೊರಿಸಿ ಖಾದರ್‌ ಅವರಿಂದಾಗಿ ಸ್ಪೀಕರ್‌ ಹುದ್ದೆಯ ಘಟನತೆಗೆ ಕುಂದುಂಟಾಗಿದೆ ಎಂದು ಹೇಳಿದ್ದಾರೆ. ಸ್ಪೀಕರ್‌ ಅವಧಿಯಲ್ಲಿ ವಿವಾದ, ಗೊಂದಲ, ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿವೆ ಎಂದು ಸಂಸದ ಮತ್ತು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಬೆಂಗಳೂರಿನಲ್ಲಿ ಆರೋಪಿಸಿದ್ದಾರೆ. ಇದೇ ಆರೋಪವನ್ನು ಮಂಗಳೂರಿನಲ್ಲಿ ಶಾಸಕ ಡಾ.ಭರತ್‌ ಶೆಟ್ಟಿ ಮಾಡಿದ್ದಾರೆ. ಸ್ಪೀಕರ್ ಸ್ಥಾನದ ವಿರುದ್ಧ ಬಂದಿರುವ ಆರೋಪಗಳಿಂದ ಆ ಸ್ಥಾನವು ಮುಕ್ತವಾಗಬೇಕು. ಇದಕ್ಕಾಗಿ ಕಾರ್ಯನಿರತ ನ್ಯಾಯಮೂರ್ತಿಗಳಿಂದ ಆರೋಪಗಳ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಸ್ಪೀಕರ್ ಕಾರ್ಯಾಲಯದ ಟೆಂಡರ್ ಮಂಗಳೂರು ಮೂಲದವರಿಗೇ ಯಾಕೆ ಸಿಗುತ್ತಿದೆ, ಅದೂ…

Read More

ಬೆಂಗಳೂರು: ಪೇದೆ, ಪಿಎಸ್‌ಐ ನೇಮಕಾತಿಗೆ ಮುಖ್ಯಮಂತ್ರಿಗಳು ಅನುಮತಿ ಕೊಟ್ಟಿದ್ದಾರೆ. ಕೆಎಸ್‌ಆರ್‌ಪಿ, ಸಿಎಆರ್, ಸಿವಿಲ್ ಸೇರಿದಂತೆ 16 ಸಾವಿರ ಪೊಲೀಸ್ ಪೇದೆ ಹುದ್ದೆಗಳು ಖಾಲಿ ಇವೆ. 8500 ಹುದ್ದೆಗಳನ್ನು ಭರ್ತಿ ಮಾಡಲು ಮುಖ್ಯಮಂತ್ರಿಗಳು ಅನುಮತಿ ನೀಡಿದ್ದಾರೆ. ಒಂದು ವಾರದಲ್ಲಿ ನೋಟಿಫಿಕೇಷನ್ ಮಾಡುತ್ತೇವೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಲಾಖೆಗೆ ಸಂಬಂಧಿಸಿದ ಅನೇಕ ಪ್ರಸ್ತಾವನೆಗಳಿಗೆ ಅನುಮೋದನೆ ಮಾಡಿಕೊಟ್ಟಿದ್ದಾರೆ. ಇನ್‌ಸ್ಪೆಕ್ಟರ್‌ ಹುದ್ದೆಯಿಂದ ಎಸ್‌ಪಿ ಹುದ್ದೆಯವರೆಗಿನ ಅಧಿಕಾರಿಗಳನ್ನು ಎರಡು ವರ್ಷದವರೆಗೆ ವರ್ಗಾವಣೆ ಮಾಡದಂತೆ ಕಾನೂನು ತಂದಿದ್ದೇವೆ. ಕನಿಷ್ಟ ಎರಡು ವರ್ಷ ಒಂದೇ ಸ್ಥಳದಲ್ಲಿ ಕೆಲಸ ಮಾಡಲು ಅವಕಾಶ ಮಾಡಿ ಕೊಟ್ಟರೆ ಅನುಕೂಲವಾಗುತ್ತದೆ ಎಂಬ ನಿಟ್ಟಿನಲ್ಲಿ ಕಾನೂನಾತ್ಮಕವಾಗಿ ಬದಲಾವಣೆ ತಂದಿದ್ದೇವೆ. ಬಹಳ ಜನ ಇದನ್ನು ಪ್ರಶಂಸೆ ಮಾಡಿದ್ದಾರೆ. ಕೆಳ ಹಂತದ ಸಿಬ್ಬಂದಿಗಳಿಗೆ ಎಸ್‌ಪಿ ಹಂತದಲ್ಲಿ ವರ್ಗಾವಣೆ ಮಾಡಲು ಅವಕಾಶ ಮಾಡ ಕೊಟ್ಟಿದ್ದೇವೆ ಎಂದರು. ಪೇದೆ, ಪಿಎಸ್‌ಐ ನೇಮಕಾತಿಗೆ ಮುಖ್ಯಮಂತ್ರಿಗಳು ಅನುಮತಿ ಕೊಟ್ಟಿದ್ದಾರೆ. ಕೆಎಸ್‌ಆರ್‌ಪಿ, ಸಿಎಆರ್, ಸಿವಿಲ್ ಸೇರಿದಂತೆ 16 ಸಾವಿರ ಪೊಲೀಸ್…

Read More

ಬೆಂಗಳೂರು : ರಾಜ್ಯದಲ್ಲಿ ಮಾದಕ ದ್ರವ್ಯ ಸೇವನೆ ಹಾಗೂ ಬಳಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇದೀಗ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯೊಂದು ಇಟ್ಟಿದ್ದು, ಮಾದಕವಸ್ತುಗಳ ಹಾವಳಿಯನ್ನು ನಿಗ್ರಹಿಸಲು ರಚಿಸಲಾದ ಮಾದಕದ್ರವ್ಯ ವಿರೋಧಿ ಕಾರ್ಯಪಡೆ (ANTF)ಗೆ ಇಂದು ಚಾಲನೆ ನೀಡಲಾಯಿತು. ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಒಂದು ಕಾರ್ಯಪಡೆಗೆ ಚಾಲನೆ ನೀಡಿದ್ದಾರೆ.66 ಸಿಬ್ಬಂದಿಗಳ ಅನುಮೋದಿತ ಬಲದೊಂದಿಗೆ ಮಾದಕವಸ್ತು ನಿಗ್ರಹ ದಳವನ್ನು ರಚಿಸಿ ಆಗಸ್ಟ್‌ನಲ್ಲಿ ರಾಜ್ಯ ಸರ್ಕಾರ ಆದೇಶಿಸಿತ್ತು. ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಅವರು ನೂತನ ಕಾರ್ಯಪಡೆಗೆ ಚಾಲನೆ ನೀಡಿದರು. ಹೇಗೆ ಕಾರ್ಯ ನಿರ್ವಹಿಸಲಿದೆ? ಕೇಂದ್ರ ತನಿಖಾ ಸಂಸ್ಥೆಯಾಗಿರುವ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಮಾದರಿಯಲ್ಲಿ ಕಾರ್ಯ ನಿರ್ವಹಿಸಿಸಲಿರುವ ರಾಜ್ಯ ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ, ಬೆಂಗಳೂರು ಸೇರಿದಂತೆ ರಾಜ್ಯದ ಇತರ ನಗರಗಳು ಮಾತ್ರವಲ್ಲದೆ ಜಿಲ್ಲೆಗಳಲ್ಲಿನ ಸಂಘಟಿತ ಮಾದಕವಸ್ತು ಜಾಲಗಳನ್ನು ಪತ್ತೆ ಹಚ್ಚಲು ಕಾರ್ಯ ನಿರ್ವಹಿಸಲಿದೆ. ಹಾಗೂ ಕೇಂದ್ರ ತನಿಖಾ ಸಂಸ್ಥೆಗಳೊಂದಿಗೆ…

Read More

ಮಂಗಳೂರು: ಸುರತ್ಕಲ್ ಚಾಕು ಇರಿತ ಪ್ರಕರಣದ ಪ್ರಮುಖ ಆರೋಪಿ ಗುರುರಾಜ್ ಆಚಾರಿ (29) ಪೊಲೀಸರ ಮೇಲೆ ಹಲ್ಲೆ ನಡೆಸಿ, ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಕು ಇರಿತದ ಘಟನೆಯ ನಂತರ ಗುರುರಾಜ್ ತಲೆಮರೆಸಿಕೊಂಡಿದ್ದನು. ಕುಲಾಯಿ ಗುಡ್ಡೆಯಲ್ಲಿರುವ ಪ್ರಗತಿ ನಗರದ ಬಳಿ ಆತ ಕಾಣಿಸಿಕೊಂಡಿರುವ ಬಗ್ಗೆ ಮಾಹಿತಿ ಪಡೆದ ಸುರತ್ಕಲ್ ಪೊಲೀಸ್ ಠಾಣೆಯ ಪಿಎಸ್‌ಐ ಸುದೀಪ್ ಎಂ.ವಿ ಮತ್ತು ಅವರ ತಂಡ ಆರೋಪಿಯನ್ನು ಬಂಧಿಸಲು ಕಾರ್ಯಾಚರಣೆ ನಡೆಸಿತು. ಈ ವೇಳೆ, ಪ್ರಗತಿ ನಗರದ ಬಳಿಯ ಮಣ್ಣಿನ ರಸ್ತೆಯ ಪಕ್ಕದಲ್ಲಿ ಮರದ ಕೆಳಗೆ ಗುರುರಾಜ್ ಅಡಗಿರುವುದು ಪತ್ತೆಯಾಯಿತು. ಪೊಲೀಸರು ಆತನ ಗುರುತನ್ನು ಖಚಿತಪಡಿಸಿ ಹತ್ತಿರ ಬಂದಾಗ, ಗುರುರಾಜ್ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಪೊಲೀಸ್ ಕಾನ್‌ಸ್ಟೆಬಲ್ ವಿನಾಯಕ ಅವರು ಆರೋಪಿಯನ್ನು ಹಿಂಬಾಲಿಸಿದಾಗ, ಆರೋಪಿಯು ನೆಲದ ಮೇಲೆ ಬಿದ್ದಿದ್ದ ಮರದ ಕೋಲನ್ನು ತೆಗೆದುಕೊಂಡಿದ್ದಾನೆ. ಅಧಿಕಾರಿಗಳು ತಮ್ಮನ್ನು ತಾವು ಪರಿಚಯಿಸಿಕೊಂಡು, ಗುರುತಿನ ಚೀಟಿ ತೋರಿಸಿದರೂ, ಗುರುರಾಜ್ ಅದನ್ನು ನಿರ್ಲಕ್ಷಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ,…

Read More

ಬೆಂಗಳೂರು: ರಾಜ್ಯದ ಪೊಲೀಸ್‌ ಕಾನ್‌ಸ್ಟೆಬಲ್‌ ಹಾಗೂ ಹೆಡ್‌ ಕಾನ್‌ಸ್ಟೆಬಲ್‌ಗಳು ಧರಿಸುತ್ತಿದ್ದ ‘ಸ್ಲೋಚ್ ಹ್ಯಾಟ್’ ಬದಲಿಗೆ ‘ಪಿ-ಕ್ಯಾಪ್‌’ಗಳನ್ನು (P-Cap) ವಿತರಣೆ ಮಾಡಲಾಗುತ್ತಿದೆ. ಹೊಸ ಟೋಪಿಗಳು ಇಂದಿನಿಂದಲೇ ಪೊಲೀಸರ ಕೈಸೇರಲಿವೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮಂಗಳವಾರ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ.ಪರಮೇಶ್ವರ ಅವರು ಹೊಸ ಕ್ಯಾಪ್‌ಗಳನ್ನು ವಿತರಣೆ ಮಾಡಲಿದ್ದಾರೆ. ನಂತರ, ಹಂತಹಂತವಾಗಿ ವಿವಿಧ ಜಿಲ್ಲೆಗಳ ಕಾನ್‌ಸ್ಟೆಬಲ್‌ ಹಾಗೂ ಹೆಡ್‌ಕಾನ್‌ಸ್ಟೆಬಲ್‌ಗಳಿಗ ಹೊಸ ಕ್ಯಾಪ್‌ ವಿತರಣೆ ನಡೆಯಲಿದೆ. ಜೂನ್‌ನಲ್ಲಿ ನಡೆದಿದ್ದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಹೊಸ ಕ್ಯಾಪ್‌ ವಿತರಣೆಗೆ ನಿರ್ಧರಿಸಲಾಗಿತ್ತು. ಅದಾದ ಮೇಲೆ ತೆಲಂಗಾಣ ಪೊಲೀಸರು ಧರಿಸುತ್ತಿರುವ ತೆಳುವಾದ ‘ಪಿ ಕ್ಯಾಪ್‌’ ವಿತರಣೆ ಮಾಡಲು ರಾಜ್ಯ ಸರ್ಕಾರವು ಒಪ್ಪಿಗೆ ಸೂಚಿಸಿತ್ತು. ಆ.7 ರಂದು ನಡೆದಿದ್ದ ಕಿಟ್‌ ನಿರ್ದಿಷ್ಟಿತಾ ಸಮಿತಿ ಸಭೆಯಲ್ಲಿ ಟೆಂಡರ್ ಅಂತಿಮಗೊಳಿಸಲಾಗಿತ್ತು. ಇದೀಗ ಹೊಸ ಟೋಪಿಗಳು ಸಿದ್ಧಗೊಂಡಿದ್ದು, ಮೊದಲ ಹಂತದಲ್ಲಿ ಪೊಲೀಸರಿಗೆ ‘ಪಿ ಕ್ಯಾಪ್‌’ ವಿತರಣೆ ನಡೆಯಲಿದೆ.

Read More

ಮಂಗಳೂರು: ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಆರೆಸ್ಸೆಸ್ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಯಾವುದೇ ರೀತಿಯ ಬಲವಂತದ ಕ್ರಮ ಕೈಗೊಳ್ಳುವುದು ಬೇಡ ಎಂದು ಪುತ್ತೂರು ಹೆಚ್ಚುವರಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ ಸೂಚಿಸಿದೆ. ಮುಸ್ಲಿಂ ಮಹಿಳೆಯರ ವಿರುದ್ಧ ಅವಮಾನಕಾರಿ ಹೇಳಿಕೆ ನೀಡಿದ್ದಾರೆಂಬ ಆರೋಪದಲ್ಲಿ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕಲ್ಲಡ್ಕ ಭಟ್ ವಿರುದ್ಧ ಎಫ್‌ಐಆ‌ರ್ ದಾಖಲಾಗಿತ್ತು. ಅಲ್ಲದೆ, ಕೇಸು ದಾಖಲು ಹಿನ್ನೆಲೆಯಲ್ಲಿ ಅ.30ರಂದು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಪ್ರಭಾಕರ ಭಟ್ ಅವರಿಗೆ ನೋಟೀಸ್ ನೀಡಿದ್ದರು. ಇದರ ಬೆನ್ನಲ್ಲೇ ಪುತ್ತೂರು ಸೆಶನ್ಸ್ ಕೋರ್ಟಿನಲ್ಲಿ ಮಧ್ಯಂತರ ಜಾಮೀನು ನೀಡುವಂತೆ ಪ್ರಭಾಕರ ಭಟ್ ಪರವಾಗಿ ಅಪೀಲು ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ, ಮುಂದಿನ ವಿಚಾರಣೆ ದಿನಾಂಕದ ವರೆಗೆ ಬಲವಂತದ ಕ್ರಮ ಬೇಡವೆಂದು ಹೇಳಿ ಅ.29ಕ್ಕೆ ಮುಂದೂಡಿದೆ. ಅಲ್ಲದೆ, ಪ್ರತಿವಾದಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿಗೆ ನೋಟಿಸ್ ಜಾರಿ ಮಾಡಿದೆ.

Read More

ಕಾಸರಗೋಡು: ಅನಂತಪುರದ ಪ್ರೈವುಡ್ ಕಾರ್ಖಾನೆಯಲ್ಲಿ ಸುಮಾರು 300 ಕಾರ್ಮಿಕರು ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ಒಬ್ಬರು ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.ಅ.27ರಂದು ಸುಮಾರು ಗಂಟೆ 7ರಿಂದ 7.30ರೊಳಗೆ ನಡೆದ ದುರ್ಘಟನೆ ನಡೆದಿದೆ. ಇದರಲ್ಲಿ ಒಬ್ಬ ವಲಸೆ ಕಾರ್ಮಿಕ ಮೃತಪಟ್ಟಿದ್ದಾರೆ. ಅನಂತಪುರ ಬಳಿಯ ಕಣ್ಣೂರು ಕುನ್ನಿಲ್ ಸಮೀಪದ ಡೆಕ್ಕೂರು ಪ್ರೈವುಡ್ ಫ್ಯಾಕ್ಟರಿಯಲ್ಲಿನ ಬಾಯ್ಸರ್ ಸ್ಪೋಟಗೊಂಡಿದ್ದು ವಿವಿದೆಡೆ ಬೆಂಕಿ ಹರಡಿತು. 300 ರಷ್ಟು ಕಾರ್ಮಿಕರು ಸ್ಪೋಟ ಸಮಯದಲ್ಲಿ ಸ್ಥಳದಲ್ಲಿದ್ದರು ಎಂದು ವರದಿಯಾಗಿದೆ. ಸ್ಫೋಟದ ಪರಿಣಾಮ ಪೆರಾಲ್ ಕಣ್ಣೂರು, ಸಿದ್ದಿಬಯಲು ಸಮೀಪದವರೆಗೆ ಇದರ ಅಪಾಯ ಸಂಭವಿಸಿದೆ. ಈ ಬಗ್ಗೆ ಅಗ್ನಿಶಾಮಕ ದಳ ಸಮೇತ ಹಲವರು ಪರಿಸ್ಥಿತಿ ನಿಯಂತ್ರಣದಲ್ಲಿ ತೊಡಗಿದ್ದಾರೆ. ಈ ಭಾಗಕ್ಕೆ ವಾಹನ ಸಂಚಾರ ನಿಷೇಧಿಸಲಾಗಿದೆ.

Read More

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಕ್ಟೋಬರ್ 31ರ ಒಳಗೆ ಧರ್ಮಸ್ಥಳ ಪ್ರಕರಣ ಸಂಪೂರ್ಣಗೊಳ್ಳುತ್ತದೆ. ಬೆಂಗಳೂರಿನಲ್ಲಿ ಈ ವಿಚಾರವಾಗಿ ಜಿ ಪರಮೇಶ್ವರ್ ಮಹತ್ವದ ಸುಳಿವು ನೀಡಿದ್ದು, ಅಕ್ಟೋಬರ್ 31ರ ಒಳಗಾಗಿ ಸೊಸೈಟಿ ಅಧಿಕಾರಿಗಳು ಧರ್ಮಸ್ಥಳ ಪ್ರಕರಣದ ಕುರಿತು ವರದಿ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು. ಧರ್ಮಸ್ಥಳ ವಿರುದ್ಧ ರೂಪಿಸಿದ ಆರೋಪಕ್ಕೆ ಸಂಬಂಧಪಟ್ಟಂತೆ ಅಕ್ಟೋಬರ್ ನಲ್ಲಿ ಎಸ್ಐಟಿ ವರದಿ ನೀಡುವುದಾಗಿ ಹೇಳಿದೆ ಅಕ್ಟೋಬರ್ 31ರ ಒಳಗೆ ತನಿಖಾ ವರದಿ ಕೊಡಬಹುದು ಒಂದೆರಡು ದಿನ ಹಿಂದೆ ಮುಂದೆ ಆಗಬಹುದು ಅಷ್ಟೇ ಎಲ್ಲವನ್ನು ಸೇರಿಸಿ ಕೊಡಲು ಹೇಳಿದ್ದೇವೆ ಯಾವ ರೀತಿ ವರದಿ ಕೊಡುತ್ತಾರೆ ಅನ್ನುವುದು ನೋಡಬೇಕು ಅಂತ ಹೇಳಿದ್ದಾರೆ ಎಂದು ಜಿ ಪರಮೇಶ್ವರ್ ತಿಳಿಸಿದರು

Read More