Author: main-admin

ಬೆಳ್ತಂಗಡಿ: ಬಾಲಕನೋರ್ವ ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ಸಾವನ್ನಪ್ಪಿದ ಘಟನೆ ಆರಂಬೋಡಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ. ಉಪ್ಪಿನಂಗಡಿಯ ರಾಮಕುಂಜ ಸಮೀಪದ ಆತೂರು ವಸಂತ ಮತ್ತು ವಿಜಯ ದಂಪತಿಯ ಪುತ್ರ ಪವನ್ (16) ಮೃತ ದುರ್ದೈವಿ. ಪವನ್ ಆರಂಬೋಡಿ ಗ್ರಾಮದಲ್ಲಿರುವ ಸೂರಂಟೆ ಮನೆಯ ಅಜ್ಜಿಯ ಮನೆಯಲ್ಲಿದ್ದು ಸಿದ್ಧಕಟ್ಟೆ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಅಜ್ಜಿ ಮನೆಗೆಂದು ಬಂದವ ಆಕಸ್ಮಿಕವಾಗಿ ನದಿಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉಪ್ಪಿನಂಗಡಿ: ಹೃದಯಾಘಾತದಿಂದ ನವವಿವಾಹಿತ ಯುವಕನೋರ್ವ ಮೃತಪಟ್ಟ ದಾರುಣ ಘಟನೆ 34 ನೆಕ್ಕಿಲಾಡಿಯ ಕೊಳಕ್ಕೆ ಎಂಬಲ್ಲಿ ನಡೆದಿದೆ. ಕೊಳಕ್ಕೆ ನಿವಾಸಿ ದಿ. ಕೃಷ್ಣಪ್ಪ ನಾಯ್ಕ ಎಂಬವರ ಪುತ್ರ ಕೇಶವ ಕೆ. (28 ವ.) ಮೃತಪಟ್ಟವರು.ಇಲ್ಲಿನ ವೈನ್‌ ಶಾಪ್ ವೊಂದರಲ್ಲಿ ಉದ್ಯೋಗಿಯಾಗಿದ್ದ ಇವರಿಗೆ ಎರಡು ದಿನಗಳಿಂದ ಜ್ವರವಿದ್ದು, ಉಪ್ಪಿನಂಗಡಿಯ ಖಾಸಗಿ ಆಸ್ಪತ್ರೆಯೊಂದರಿಂದ ಔಷಧಿ ಪಡೆದುಕೊಂಡಿದ್ದರು. ಶನಿವಾರ ನಸುಕಿನ ಜಾವ ಸುಮಾರು 3 ಗಂಟೆಗೆ ಪತ್ನಿ ಎಚ್ಚರಗೊಂಡು ಇವರನ್ನು ನೋಡಿದಾಗ ಮಲಗಿದ್ದ ಹಾಸಿಗೆಯಲ್ಲಿಯೇ ಎದ್ದು ಕುಳಿತು ಗೋಡೆಗೊರಗಿ ಎದೆಯ ಬಳಿ ತನ್ನ ಕೈಯನ್ನಿಟ್ಟುಕೊಂಡ ಸ್ಥಿತಿಯಲ್ಲಿ ಕಂಡು ಬಂದಿದ್ದರು. ಪತ್ನಿ ಮಾತನಾಡಲೆತ್ನಿಸಿದಾಗ ಇವರು ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ. ಕೂಡಲೇ ನೆರೆಹೊರೆಯವರ ಸಹಕಾರದೊಂದಿಗೆ ಇವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲೇ ಅವರು ಮೃತರಾಗಿದ್ದಾರೆ.ಕೇಶವರವರು ಪ್ರಾಮಾಣಿಕ ದುಡಿಮೆಯಿಂದ ತನ್ನ ಬದುಕನ್ನು ಕಟ್ಟಿಕೊಂಡಿದ್ದರು.’ ಸುಮಾರು ಒಂದೂವರೆ ವರ್ಷದ ಹಿಂದೆಯಷ್ಟೇ ಇವರಿಗೆ ಮದುವೆಯಾಗಿದ್ದು, ಮೂರು ತಿಂಗಳ ಹಸುಗೂಸು ಇದೆ. ಎಲ್ಲರೊಂದಿಗೂ ನಗು ಮುಖದಿಂದಲೇ ಮಾತನಾಡುತ್ತಿದ್ದ ಇವರು ಸೌಮ್ಯ ಸ್ವಭಾವದ ವ್ಯಕ್ತಿಯಾಗಿದ್ದರು. ಮೃತರು…

Read More

ಮಂಗಳೂರು : ಪಿಕಪ್ ವಾಹನವೊಂದು ಕಾರಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ನಿಯಂತ್ರಣ ತಪ್ಪಿ ರಸ್ತೆಬದಿಯಲ್ಲಿ ಓಡಾಡುತ್ತಿದ್ದ ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಘಟನೆಯಲ್ಲಿ ಸಿಂಧನೂರು ಶಾಸಕರ ಸೋದರಳಿಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಗಳೂರು ಹೊರವಲಯದಲ್ಲಿರುವ ಕುಲೈನಲ್ಲಿ ಶನಿವಾರ ಈ ಘಟನೆ ನಡೆದಿದೆ. ಮೃತರನ್ನು ದೀಪು ಗೌಡ ಅಲಿಯಾಸ್ ಪೊಂಪ ಗೌಡ (48) ಎಂದು ಗುರುತಿಸಲಾಗಿದ್ದು, ರಾಯಚೂರು ಜಿಲ್ಲೆಯ ಸಿಂಧನೂರು ಮೂಲದವರು. ಅವರು ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ ಅವರ ಸಹೋದರಿಯ ಮಗ. ಪ್ರದೀಪ್ ಮತ್ತು ನಾಗರಾಜ್ ಎಂಬ ಇಬ್ಬರು ಗಾಯಗೊಂಡಿದ್ದು, ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Read More

ಮಂಗಳೂರು: ಔಷಧಿ ಖರೀದಿಸುವ ನೆಪದಲ್ಲಿ ಬಂದು ಮೆಡಿಕಲ್ ಶಾಪ್ ಮಾಲಕಿಯ ಕತ್ತಿನಲ್ಲಿದ್ದ ಚಿನ್ನದ ಕರಿಮಣಿ ಸರ ಎಗರಿಸಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬದಿಯಡ್ಕ ಠಾಣಾ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ಕುಂಜೂರು ಪಂಜ ನಿವಾಸಿ ಶಂಸುದ್ದೀನ್ ಅಸ್ಟರ್ ಅಲಿ (28), ಪುತ್ತೂರು ಬನ್ನೂರು ನಿವಾಸಿ ನೌಷಾದ್ ಬಿ.ಎ.(37) ಬಂಧಿತ ಆರೋಪಿಗಳು. ಠಾಣಾ ಬದಿಯಡ್ಕ ಪೊಲೀಸರು ಇವರನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಜನವರಿ 11 ರಂದು ಸಂಜೆ ನೀರ್ಚಾಲು ಮೇಲಿನ ಪೇಟೆಯಲ್ಲಿ ಈ ಘಟನೆ ನಡೆದಿದೆ. ಸರೋಜಿನಿ ಎಸ್.ಎನ್.ಅವರ ಮಾಲಕತ್ವದಲ್ಲಿರುವ ರಾಘವೇಂದ್ರ ಆಯುರ್ವೇದ ಮೆಡಿಕಲ್ ನಲ್ಲಿ ಕಳವು ನಡೆದಿತ್ತು. ಇಬ್ಬರು ಯುವಕರು ಬೈಕ್ ನಲ್ಲಿ ಬಂದು, ಒಬ್ಬ ಬೈಕಿನಲ್ಲೇ ಕುಳಿತಿದ್ದ ಇನ್ನೊಬ್ಬ ಮೆಡಿಕಲ್ ಒಳಗೆ ಪ್ರವೇಶಿಸಿ ಔಷದ ಬೇಕೆಂದು ಕೇಳಿದ್ದ. ಔಷದಿ ನೀಡುವ ಮಧ್ಯೆ ಯುವಕ ಸರೋಜಿನಿಯವರ ಕತ್ತಿನಲ್ಲಿದ್ದ ಚಿನ್ನದ ಕರಿಮಣಿ ಸರ ಎಗರಿಸಿ ಬೈಕ್ ಹತ್ತಿ ಪರಾರಿಯಾಗಿದ್ದಾರೆ ಎಂದು ದೂರಲಾಗಿತ್ತು.ಈ ಬಗ್ಗೆ ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು , ಸಿಸಿ ಟಿ.ವಿ.ಕ್ಯಾಮರಾ, ಸೈಬರ್ ಸೆಲ್…

Read More

ಉಡುಪಿ: ನೇಜಾರಿನಲ್ಲಿ ನಡೆದ ತಾಯಿ, ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ಸಾಕ್ಷ್ಯಗಳ ವಿಚಾರಣೆಯ ಆಡಿಯೋ ಮತ್ತು ವೀಡಿಯೋ ದಾಖಲಿಸಬೇಕೆಂಬ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿದ ಅರ್ಜಿ ಹಾಗೂ ಆರೋಪಿಯ ಕಾರನ್ನು ವಶಕ್ಕೆ ನೀಡಬೇಕೆಂಬ ಬ್ಯಾಂಕಿನವರ ಅರ್ಜಿಯ ಕುರಿತ ಅಂತಿಮ ಆದೇಶವನ್ನು ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಾ. 7ಕ್ಕೆ ಕಾಯ್ದಿರಿಸಿದೆ. ಫೆ. 20ರಂದು ವಿಚಾರಣೆ ಹಿನ್ನೆಲೆಯಲ್ಲಿ ಬೆಂಗಳೂರು ಜೈಲಿನಲ್ಲಿರುವ ಆರೋಪಿ ಪ್ರವೀಣ್ ಚೌಗುಲೆಯನ್ನು ವಿಡಿಯೋ ಕಾನ್ಸರೆನ್ಸ್ ಮೂಲಕ ಕೋರ್ಟ್ ಗೆ ಹಾಜರುಪಡಿಸಲಾಯಿತು. ಆರೋಪಿ ಚೌಗುಲೆಯು ಕೃತ್ಯಕ್ಕೆ ಬಳಸಿದ ಕಾರನ್ನು ಸಾಲದ ಕಂತು ಪಾವತಿಸದ ಹಿನ್ನೆಲೆಯಲ್ಲಿ ತಮ್ಮ ವಶಕ್ಕೆ ನೀಡುವಂತೆ ಬ್ಯಾಂಕ್ ಪರ ವಕೀಲರು ವಾದ ಮಂಡಿಸಿದರು. ಆರೋಪಿ ಪರ ವಕೀಲರು ಕಾರನ್ನು ಬ್ಯಾಂಕಿನವರ ವಶಕ್ಕೆ ನೀಡಲು ನಮ್ಮ ಆಕ್ಷೇಪವಿಲ್ಲ ಎಂದರು.ಆದರೆ ವಿಶೇಷ ಸರಕಾರಿ ಅಭಿಯೋಜಕರು, ಕಾರನ್ನು ಬ್ಯಾಂಕಿನವರಿಗೆ ನೀಡಿದರೆ ಮುಂದೆ ಅವರು ಅದನ್ನು ಮಾರಾಟ ಮಾಡಿದರೆ ಸಾಕ್ಷ್ಯ ವಿಚಾರಣೆಗೆ ತೊಂದರೆಯಾಗುತ್ತದೆ ಎಂಬುದಾಗಿ ಆಕ್ಷೇಪಣೆ ವ್ಯಕ್ತಪಡಿಸಿದರು. ವಾದ ಪ್ರತಿವಾದವನ್ನು ಆಲಿಸಿದ…

Read More

ಕಾಸರಗೋಡು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಜೀವಾವಧಿ ಕಠಿನ ಸಜೆ, ಅದರೊಂದಿಗೆ 137 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 7.5 ಲ.ರೂ ದಂಡ ವಿಧಿಸಿ ಕಾಸರಗೋಡು ಫಾಸ್ಟ್ ಟ್ರ‍್ಯಾಕ್ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಮೀಯಪದವು ಮೂಡಂಬೈಲು ಕುಳವಯಲ್ ನಿವಾಸಿ ವಲ್ಲಿ ಡಿ’ಸೋಜಾ(47)ನಿಗೆ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ನೀಡಿದೆ. ಆರೋಪಿ ವಲ್ಲಿ ಡಿ’ಸೋಜಾ ಒಂದು ವೇಳೆ ದಂಡ ಪಾವತಿಸದಿದ್ದಲ್ಲಿ 28 ತಿಂಗಳು ಹೆಚ್ಚುವರಿ ಕಠಿನ ಸಜೆ ಅನುಭವಿಸುವಂತೆ ಕೋರ್ಟ್ ತೀರ್ಪಿನಲ್ಲಿ ತಿಳಿಸಿದೆ. 2020 ಮಾರ್ಚ್ ತಿಂಗಳಲ್ಲಿ ಪ್ರಕರಣ ನಡೆದಿದ್ದು ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿದ್ದರು. ವಲ್ಲಿ ಡಿ’ಸೋಜಾ 16ರ ಹರೆಯದ ಬಾಲಕಿಯನ್ನು ಕಾರಿನಲ್ಲಿ ಕುಳೂರು ಮೀಯಪದವು ಪಾಲಡಿಯ ಜನವಾಸವಿಲ್ಲದ ಮನೆಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದಾಗಿ ಪೊಲೀಸರಿಗೆ ದೂರು ನೀಡಲಾಗಿತ್ತು. ಆರೋಪಿಯ ವಿರುದ್ಧ ಪರಿಶಿಷ್ಟ ಜಾತಿ-ಪರಿಶಿಷ್ಟ ವರ್ಗ ದೌರ್ಜನ್ಯ ನಿಷೇಧ ಕಾನೂನು ಪ್ರಕಾರ ಕಾಯ್ದೆಯಡಿ ಶಿಕ್ಷೆ ವಿಧಿಸಲಾಗಿದೆ.

Read More

ವಿಟ್ಲ : ವಿಟ್ಲದ ಬೋಳಂತೂರಿನ ಸಿಂಗಾರಿ ಬಿಡಿ ಮಾಲೀಕರ ಮನೆ ಮೇಲೆ ನಕಲಿ ಇಡಿ ಅಧಿಕಾರಿಗಳ ಹೆಸರಿನಲ್ಲಿ ದಾಳಿ ನಡೆಸಿ ಲಕ್ಷಾಂತರ ಹಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೋರ್ವ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಕೇರಳದ ಕಣ್ಣೂರು ನಿವಾಸಿ ಅಬ್ದುಲ್‌ ನಾಸೀರ್‌(52) ಎಂದು ಗುರುತಿಸಲಾಗಿದೆ. ಈ ಪ್ರಕರಣದಲ್ಲಿ ಇದೀಗ ಬಂಧಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ದರೋಡೆ ಪ್ರಕರಣದಲ್ಲಿ ಸದ್ಯಕ್ಕೆ ಬಂಧಿತನಾಗಿರುವ ಕಣ್ಣೂರು ಮೂಲದ ಅಬ್ದುಲ್‌ ನಾಸೀರ್‌, ಸ್ಥಳೀಯ ಆರೋಪಿ ಸಿರಾಜುದ್ದೀನ್‌ ಹಾಗೂ ಪ್ರಧಾನ ಸೂತ್ರಧಾರಿ ಎಎಸ್‌ಐ ಮಧ್ಯೆ ಸಂಪರ್ಕ ಸೇತುವಾಗಿದ್ದ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಸಿಂಗಾರಿ ಬೀಡಿ ಸಂಸ್ಥೆಯಲ್ಲಿ ಬೀಡಿ ಪ್ಯಾಕಿಂಗ್‌ ಕಾರ್ಯ ನಿರ್ವಹಿಸುತ್ತಿದ್ದ ಸಿರಾಜುದ್ದೀನ್‌ ತನ್ನ ಮಾಲಕನ ಮೇಲಿನ ಮನಸ್ತಾಪದಿಂದ ಕೆಲಸ ತ್ಯಜಿಸಿದ್ದ. ಜತೆಗೆ ಮಾಲಕನ ವಿರುದ್ಧ ಸೇಡು ತೀರಿಸಲು ಇ.ಡಿ.ಗೆ ದೂರು ನೀಡುವುದಾಗಿ ಹೇಳುತ್ತಿದ್ದ. ಸಿರಾಜುದ್ದೀನ್‌ನ ಸೇಡಿನ ವಿಚಾರವನ್ನು ಎಎಸ್‌ಐಗೆ ತಿಳಿಸಿ ಇಂತಹ ನಕಲಿ ಇಡಿ ದಾಳಿ ಸಂಘಟಿಸಲು ನಾಸೀರ್‌ ಪ್ರಮುಖ ಪಾತ್ರ…

Read More

ಪುತ್ತೂರು : ಗೃಹಿಣಿಯೊಬ್ಬರ ಮೇಲೆ ಆಕೆಯ ಪತಿ ಹಾಗೂ ಇತರ ಮೂವರು ಸೇರಿಕೊಂಡು ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿರುವ ಪ್ರಕರಣ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಕೊಡಿಪ್ಪಾಡಿಯ ಎಚ್.ಅಮೀನಾ ಅವರು ಈ ಬಗ್ಗೆ ದೂರು ನೀಡಿದ್ದು, ತನ್ನ ಪತಿ ಕೆ.ಎಂ. ಅಬ್ದುಲ್ಲಾ, ಝಾರಾ, ಗಝಾಲಿ ಹಾಗೂ ರೈಸ ಎಂಬವರು ಹಲ್ಲೆ ನಡೆಸಿದ್ದಾರೆ. ಅಕ್ರಮವಾಗಿ ತನ್ನ ಮನೆಗೆ ಪ್ರವೇಶಿಸಿ ಜೀವ ಬೆದರಿಕೆ ಒಡ್ಡಿದ್ದಾರೆ. ಮನೆಯ ಸಾಮಾನುಗಳನ್ನು ಬಿಸಾಡಿದ್ದಾರೆ. ಮನೆಯಿಂದ ಹೊರಗೆ ಹೋಗುವಂತೆ ಬೆದರಿಕೆ ಹಾಕಿದ್ದಾರೆ. ಮಾನಭಂಗಕ್ಕೆ ಯತ್ನಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಈ ಕುರಿತು ಪೊಲೀಸರು ಮತ್ತೂ ಮಾಹಿತಿಗಾಗಿ ತನಿಖೆ ನಡೆಸುತ್ತಿದ್ದಾರೆ

Read More

ಕಾಸರಗೋಡು:ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಮಾದಕ ವಸ್ತು ಸಹಿತ ನಾಲ್ವರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಉಪ್ಪಳ ಕೋಡಿ ಬೈಲ್ ನ ಇಬ್ರಾಹಿಂ ಸಿದ್ದೀಕ್(33), ಉಪ್ಪಳ ಪ್ರತಾಪ ನಗರದ ಮೂಸಾ ಶಫೀಕ್ (30), ಆಡ್ಕ ತ್ತ ಬೈಲ್ ನ ಮುಹಮ್ಮದ್ ಸಾಲಿ (46) ಮತ್ತು ಮುಹಮ್ಮದ್ ಸವಾದ್ (20) ಬಂಧಿತ ಆರೋಪಿಗಳು.ಇವರ ಬಳಿಯಿಂದ 21.5 ಗ್ರಾಂ ಎಂ ಡಿ ಎಂ ಎ ಮಾದಕ ವಸ್ತು ವನ್ನು ವಶಪಡಿಸಿಕೊಳ್ಳಲಾಗಿದೆ. ಕುಂಬಳೆ ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿ ಚೇವಾರ್ ಎಂಬಲ್ಲಿ ಕಾರು ತಡೆದ ಪೊಲೀಸರು ತಪಾಸಣೆ ನಡೆಸಿದಾಗ ಇವರ ಬಳಿಯಿಂದ ಮಾದಕ ವಸ್ತು ಪತ್ತೆಯಾಗಿದೆ.

Read More

ಮಂಗಳೂರು: ಬ್ಯಾಂಕ್ ಲಾಕರ್ ಅತ್ಯಂತ ಸುರಕ್ಷಿತ ಇಲ್ಲಿಡುವ ದಾಖಲೆಗಳು ಮತ್ತು ಆಭರಣಗಳು ಅತ್ಯಂತ ಸುರಕ್ಷಿತವಾಗಿರುತ್ತದೆ ಎನ್ನುವುದು ಜನಸಾಮಾನ್ಯರ ನಂಬಿಕೆ ಹಾಗೂ ಬ್ಯಾಂಕ್ ಗಳು ನೀಡುವ ಖಾತರಿ. ಇದನ್ನು ನಂಬಿ ಲಾಕರ್ ನಲ್ಲಿ ನಗದು ಇಟ್ಟ ಗ್ರಾಹಕರೊಬ್ಬರು ಇದೀಗ ಪರಿತಪಿಸುವಂತಾಗಿದೆ. ಮಂಗಳೂರಿನ ಕೆನರಾ ಬ್ಯಾಂಕ್ ಶಾಖೆಯೊಂದರ ಲಾಕರ್‌ನಲ್ಲಿಟ್ಟಿದ್ದ 8 ಲಕ್ಷ ರೂಪಾಯಿ ನೋಟುಗಳು ಗೆದ್ದಲು ಹಿಡಿದು ಪುಡಿಯಾಗಿವೆ. ಈ ಸಂಬಂಧ ಗ್ರಾಹಕರೊಬ್ಬರು ಬೆಂಗಳೂರಿನಲ್ಲಿರುವ ಕೆನರಾ ಬ್ಯಾಂಕ್ ಪ್ರಧಾನ ಕಚೇರಿಗೆ ಬಂದು ದೂರು ನೀಡಿದ್ದಾರೆ.ಆದರೆ ಬ್ಯಾಂಕ್ ಇದಕ್ಕೆ ನಾವು ಜವಾಬ್ದಾರರಲ್ಲ ಎಂದು ಹೇಳುತ್ತಿದೆ. ಮಂಗಳೂರಿನ ಕೋಟೆಕಾರ್‌ನ ಸಫಲ್‌ ಎಂಬ ಗ್ರಾಹಕರೊಬ್ಬರು ಹತ್ತಿರದ ಕೆನರಾ ಬ್ಯಾಂಕ್ ಶಾಖೆಯಲ್ಲಿ 8 ಲಕ್ಷ ರೂ. ಇಟ್ಟಿದ್ದರು. 6 ತಿಂಗಳ ಬಳಿಕ ಔಷಧಿಗಾಗಿ ದುಡ್ಡು ತೆಗೆಯಲು ಬ್ಯಾಂಕ್‌ಗೆ ಬಂದಿದ್ದಾರೆ ಅಧಿಕಾರಿಗಳು ಖುದ್ದಾಗಿ ಲಾಕರ್ ತೆರೆದಿದ್ದಾರೆ. ಲಾಕರ್ ಒಳಗೆ ನೋಡಿದರೆ ಮಳೆ ನೀರಿನಲ್ಲಿ ನೆಂದ ಸ್ಥಿತಿಯಲ್ಲಿದ್ದ ದುಡ್ಡು ಸಂಪೂರ್ಣವಾಗಿ ಕಪ್ಪಾಗಿತ್ತು ಏನಿದು ಎಂದು ತೆಗೆದು ನೋಡಿದರೆ ಗೆದ್ದಲು ಹಿಡಿದು ನೋಟುಗಳು ಚೂರಾಗಿ…

Read More