Author: main-admin

ಮಂಗಳೂರು: ನಗರದ ಹೊರವಲಯದ ತೊಕ್ಕೊಟ್ಟು ಫ್ಲೈಓವರ್ ಮೇಲ್ಭಾಗದಲ್ಲಿ ಬೆಳ್ಳಂಬೆಳಗ್ಗೆ ರೌಡಿಶೀಟರ್‌ ಒಬ್ಬರನ್ನು ಮಾರಕಾಸ್ತ್ರಗಳಿಂದ ಕಡಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮೃತರನ್ನು ತಲಪಾಡಿ ನಿವಾಸಿ, ‘ಟಾಬ್ಲೆಟ್ ಆರಿಫ್’ ಎಂದೇ ಪರಿಚಿತನಾಗಿದ್ದ ಆರಿಫ್ (46) ಎಂದು ಗುರುತಿಸಲಾಗಿದೆ. ಬೆಳಗಿನ ಜಾವ ಆರಿಫ್ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ಕಾರೊಂದು ಉದ್ದೇಶಪೂರ್ವಕವಾಗಿ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಿಂದ ಆರಿಫ್ ರಸ್ತೆಗೆ ಬಿದ್ದ ತಕ್ಷಣ ಕಾರಿನಿಂದ ಇಳಿದ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಕ್ರೂರವಾಗಿ ದಾಳಿ ನಡೆಸಿದ್ದು, ತೀವ್ರ ಗಾಯಗಳಿಂದ ಆರಿಫ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೃತ್ಯ ಎಸಗಿದ ಬಳಿಕ ಆರೋಪಿಗಳು ಅದೇ ಕಾರಿನಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ. ಮೃತ ಆರಿಫ್ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿಶೀಟರ್ ಆಗಿ ದಾಖಲಾಗಿದ್ದಾನೆ ಎಂದು ತಿಳಿದುಬಂದಿದೆ. ಈತನ ವಿರುದ್ಧ ಹಲವು ಅಪರಾಧ ಪ್ರಕರಣಗಳು ದಾಖಲಾಗಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಘಟನೆಯ ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸುತ್ತಮುತ್ತಲಿನ ಸಿಸಿ ಟಿವಿ ದೃಶ್ಯಗಳನ್ನು…

Read More

ಕುಂದಾಪುರ :ಆನ್‌ಲೈನ್ ಹೂಡಿಕೆ ಹೆಸರಿನಲ್ಲಿ ಭಾರೀ ವಂಚನೆ ನಡೆದ ಘಟನೆ ಕುಂದಾಪುರದಲ್ಲಿ ಬೆಳಕಿಗೆ ಬಂದಿದೆ. ಹಾಲಾಡಿ ಗ್ರಾಮದ 43 ವರ್ಷದ ಯಶೋಧ ಅವರು ನೀಡಿದ ದೂರಿನ ಪ್ರಕಾರ, ಅಂಕದಕಟ್ಟೆಯ ಚಂದ್ರಿಕಾ (38) ಮತ್ತು ಶಿವಮೊಗ್ಗದ ಭಾಸ್ಕರ (45) ಇವರಿಬ್ಬರು ಬಿಟ್‌ಕಾಯಿನ್ ಹೂಡಿಕೆ ಮೂಲಕ ಹಣವನ್ನು ದ್ವಿಗುಣಗೊಳಿಸುವುದಾಗಿ ನಂಬಿಕೆ ಮೂಡಿಸಿದ್ದರು. ಬೈಂದೂರಿನ ಪ್ರದೀಪ್ ಶೆಟ್ಟಿ ಮೂಲಕ ಸಂಪರ್ಕ ಸಾಧಿಸಿ, ಕೋಟೇಶ್ವರ ಗ್ರಾಮದ ಅಂಕದಕಟ್ಟೆ ಸಹನಾ ಹಾಲ್ ಸಮೀಪ ಇರುವ ಕಚೇರಿಗೆ ಹಣ ತರಲು ಸೂಚಿಸಿದ್ದರು. ದೂರಿನ ಪ್ರಕಾರ, ಕಚೇರಿಗೆ ಹೋದ ಯಶೋಧ ಅವರಿಗೆ ವ್ಯವಹಾರ ಕಾನೂನುಬದ್ದವಾಗಿದೆ, ಲೈಸೆನ್ಸ್ ಹೊಂದಿದೆ ಎಂದು ಹೇಳಿ ನಕಲಿ ದಾಖಲೆಗಳನ್ನು ತೋರಿಸಿ ನಂಬಿಸಿದ್ದರು. 2024 ಡಿಸೆಂಬರ್ 11 ರಂದು ಮೊದಲಿಗೆ ₹3.80 ಲಕ್ಷ ಪಡೆದುಕೊಂಡಿದ್ದು, ನಂತರ ಹಂತ ಹಂತವಾಗಿ ಒಟ್ಟು ₹17 ಲಕ್ಷ ಹೂಡಿಕೆ ಮಾಡಿಸಿಕೊಂಡಿದ್ದಾರೆ. ಆದರೆ, ಹೂಡಿಕೆಯ ದೃಢೀಕರಣಕ್ಕಾಗಿ ಬಾಂಡ್ ನೀಡದೇ ಸಮಯ ಕಳೆಯುತ್ತ ಬಂದಿದ್ದಾರೆ ಎನ್ನಲಾಗಿದೆ. 2026 ಮಾರ್ಚ್ 16 ರಂದು ಸಂಜೆ 5 ಗಂಟೆಗೆ…

Read More

ಬೆಂಗಳೂರು : ಇನ್ಸ್ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನ ಕೋಣನಕುಂಟೆ ಇನ್ಸ್ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ ಕಿರುಕುಳ ಕೇಳಿ ಬಂದಿದ್ದು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸಿಮಂತ್ ಕುಮಾರ್ ಸಿಂಗ್ ಆದೇಶ ನೀಡಿದ್ದಾರೆ. ಮಹಿಳಾ ರೌಡಿಶೀಟರ್ ಗೆ ಅಶ್ಲೀಲ ಸಂದೇಶ ಕಳುಹಿಸಿ ಲೈಂಗಿಕ ಕಿರುಕುಳ ನೀಡಿದ್ದ ಪಾಪಣ್ಣ ಕರೆ ಮಾಡಿ, ವಾಟ್ಸಪ್ ಸಂದೇಶ ಕಳುಹಿಸಿದ್ದ ಆರೋಪ ಕೇಳಿ ಬಂದಿದೆ. ಪಾಪಣ್ಣ ಮೇಲಿನ ಆರೋಪಗಳ ಕುರಿತು ತನಿಖೆಗೆ ಕಮಿಷನರ್ ಆದೇಶ ಹೊರಡಿಸಿದ್ದಾರೆ. ಪಾಪಣ್ಣ ಮಹಿಳಾ ರೌಡಿ ಶೀಟರ್ ಗೆ ಕರೆ ಮಾಡಿರುವ ಹಾಗೂ ವಾಟ್ಸಪ್ ನಲ್ಲಿ ಸ್ಟೀಲ್ ಮೆಸೇಜ್ ಮಾಡಿರುವ ಕೆಲವು ವಿಡಿಯೋಗಳು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿವೆ.

Read More

ಉಡುಪಿ: ನಗರದಲ್ಲಿ ಎನ್‌ಡಿಪಿಎಸ್ ಪ್ರಕರಣದಲ್ಲಿ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಆರೋಪಿಯಾಗಿದ್ದ ಮಹಮ್ಮದ್ ಇಕ್ಬಾಲ್ ಎಂಬಾತನು ಸುಮಾರು ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದನು. ಉಡುಪಿ ನಗರ ಠಾಣೆಯ ಹೆಡ್ ಕಾನ್ಸ್ಟೇಬಲ್ 40 ಹಾಗೂ 115ರವರ ತಂಡ ಭಟ್ಕಳದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದೆ. ಬಂಧಿತ ಆರೋಪಿಯನ್ನು ಮಾನ್ಯ ಪಿಸಿಜೆ & ಜೆಎಂಎಫ್‌ಸಿ ನ್ಯಾಯಾಲಯ, ಉಡುಪಿ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Read More

ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಮಹಿಳಾ ಘಟಕವು, ಸಂಸ್ಥೆಯ ಇನ್ನೋವೇಶನ್ ಕೌನ್ಸಿಲ್ (IIC) ಸಹಯೋಗದೊಂದಿಗೆ, 2026ರ ಮಾರ್ಚ್ 17ರಂದು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ‘ಮಹಿಳಾ ಸಬಲೀಕರಣ’ ಕುರಿತು ಚಿಂತನಶೀಲ ಉಪನ್ಯಾಸವನ್ನು ಆಯೋಜಿಸಿತ್ತು. ಭಾರತೀಯ ರಕ್ಷಣಾ ಇಂಜಿನಿಯರಿಂಗ್ ಸೇವೆಯ (IDSE) ಪ್ರತಿಷ್ಠಿತ ಅಧಿಕಾರಿ ಶ್ರೀಮತಿ ನಾಜ್ನೀನ್ ಬಾನು ಅವರು ಈ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣ ಮಾಡಿದರು. ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ವಿಶ್ವವಿದ್ಯಾಲಯದ ಹಿರಿಯ ನಾಯಕರನ್ನು ಉದ್ದೇಶಿಸಿ ಮಾತನಾಡಿದ ಶ್ರೀಮತಿ ನಾಜ್ನೀನ್ ಬಾನು ಅವರು, ತಮ್ಮ ವೈಯಕ್ತಿಕ ಮತ್ತು ವೃತ್ತಿಜೀವನದ ಸ್ಪೂರ್ತಿದಾಯಕ ಪಯಣವನ್ನು ಹಂಚಿಕೊಂಡರು. ಇದೇ ವೇಳೆ, ಐ.ಡಿ.ಎಸ್.ಇ (IDSE) ಕ್ಷೇತ್ರದಲ್ಲಿ ಮಹಿಳೆಯರ ಪ್ರಾತಿನಿಧ್ಯ ಬಹಳ ಕಡಿಮೆ ಇರುವುದರ ಬಗ್ಗೆ ಅವರು ಗಮನ ಸೆಳೆದರು. ಮಹಿಳೆಯರು ಕೆಲಸದ ಸ್ಥಳದಲ್ಲಿ ಮಾತ್ರವಲ್ಲದೆ, ಕುಟುಂಬ ಮತ್ತು ಸಮಾಜದಲ್ಲಿ ಎದುರಿಸುತ್ತಿರುವ ಸಾಮಾಜಿಕ ಮತ್ತು ರಚನಾತ್ಮಕ ಅಡೆತಡೆಗಳನ್ನು ಅವರು ಎತ್ತಿ ತೋರಿಸಿದರು. ತಮ್ಮ ಬಾಲ್ಯದ ದಿನಗಳನ್ನು ಸ್ಮರಿಸುತ್ತಾ, ಬಿಹಾರದ ಛಾಪ್ರಾ ಜಿಲ್ಲೆಯ ಅತ್ಯಂತ ಸಂಪ್ರದಾಯಬದ್ಧ ಗ್ರಾಮೀಣ ಪ್ರದೇಶದಲ್ಲಿ ತಾವು ಬೆಳೆದ ರೀತಿಯನ್ನು…

Read More

ಉಡುಪಿ : ಕಾಪು ಕಡಲ ಕಿನಾರೆಯಲ್ಲಿ ಅಕ್ರಮ ಪಚ್ಚಿಲೆ (ಅಜಿರ್ ) ತೆಗೆಯುತ್ತಿದ್ದ ತಮಿಳುನಾಡು ಮೂಲದ ಮೀನುಗಾರರಿದ್ದ ದೋಣಿ ಗುದ್ದಿದ ಪರಿಣಾಮ ಸ್ಥಳೀಯ ಮೀನುಗಾರರ ದೋಣಿ ಮಗುಚಿ ಇಬ್ಬರು ಮೀನುಗಾರರು ನೀರಿಗೆ ಬಿದ್ದಿದ್ದು, ಒಬ್ಬನನ್ನು ರಕ್ಷಿಸಲಾಗಿದ್ದು, ಇನ್ನೊಬ್ಬ ಮೀನುಗಾರ ನಾಪತ್ತೆಯಾದ ಘಟನೆ ನಡೆದಿದೆ. ಏನಿದು ಘಟನೆ? ಕಳೆದ ಕೆಲವು ದಿನಗಳಿಂದ ತಮಿಳುನಾಡು ಮೂಲದ ಮೀನುಗಾರರು ಅಕ್ರಮ ಪಚ್ಚಿಲೆ ಮೀನುಗಾರಿಕೆ ಮಾಡುತ್ತಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಮೀನುಗಾರರು ಸಣ್ಣ ದೋಣಿಯಲ್ಲಿ ತೆರಳಿ ತಮಿಳುನಾಡು ಮೂಲದ ಮೀನುಗಾರರ ಜೊತೆ ಮೀನುಗಾರಿಕೆ ಮಾಡದಂತೆ ಮನವಿ ಮಾಡಲು ಮುಂದಾಗಿದ್ದರು. ಈ ವೇಳೆ ತಮಿಳುನಾಡಿನ ದೊಡ್ಡ ದೋಣಿಯನ್ನು ಸ್ಥಳೀಯ ಮೀನುಗಾರರ ಸಣ್ಣ ದೋಣಿಗೆ ಉದ್ದೇಶಪೂರ್ವಕವಾಗಿ ಡಿ*ಕ್ಕಿ ಹೊಡೆಸಿದ್ದಾರೆ. ಈ ವೇಳೆ ಕಾಪು ಮೂಲದ ದೋಣಿ ಮಗುಚಿ ಬಿ*ದ್ದು ಇಬ್ಬರು ಮೀನುಗರಾರು ನೀರಿಗೆ ಬಿ(ದ್ದಿದ್ದು ಒಬ್ಬನನ್ನು ರಕ್ಷಿಸಲಾಗಿದ್ದು, ಇನ್ನೊಬ್ಬ ಮೀನುಗಾರ ನಾಪತ್ತೆಯಾಗಿದ್ದಾನೆ. ಘಟನೆ ಬಳಿಕ ತಮಿಳುನಾಡು ಮೂಲದ ಮೀನುಗಾರರು ಮಲ್ಪೆಯತ್ತ ಪಲಾಯನ ಮಾಡಿದ್ದಾಗಿ ಸ್ಥಳೀಯರು ದೂರಿದ್ದಾರೆ.

Read More

ಸುಳ್ಯ: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಮೆಸ್ಕಾಂ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಬೈಕ್ ಸವಾರ ಲೋಕನಾಥ (35) ಎಂಬವರು ಮೃತಪಟ್ಟ ವ್ಯಕ್ತಿ. ಸುಳ್ಯದಿಂದ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದ್ದು ಗಂಭೀರ ಗಾಯಗೊಂಡ ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆ ತರಲಾಗಿತ್ತು . ಅಲ್ಲಿ ಅವರಿಗೆ ಚಿಕಿತ್ಸೆ ಫಲಿಸದೇ ಮೃತಪಟ್ಟರೆನ್ನಲಾಗಿದೆ. ಸುಳ್ಯ ಮೆಸ್ಕಾಂ ನಲ್ಲಿ ಗುತ್ತಿಗೆ ಆಧಾರದಲ್ಲಿ ಮೀಟರ್ ರೀಡಿಂಗ್ ಕೆಲಸ ನಿರ್ವಹಿಸುತ್ತಿದ್ದರು.

Read More

ಬೆಂಗಳೂರು : “ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ವಿಚಾರದಲ್ಲಿ ಅಧಿಕಾರಿಗಳು ಶಿಷ್ಟಾಚಾರ ಉಲ್ಲಂಘಿಸುತ್ತಿದ್ದಾರೆ. ಚುನಾಯಿತ ಶಾಸಕರಿಗಿಂತ ಪರಾಜಿತ ಅಭ್ಯರ್ಥಿಗಳ ಪತ್ರಕ್ಕೇ ಹೆಚ್ಚಿನ ಬೆಲೆ ಸಿಗುತ್ತಿದೆ,” ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ವಿಧಾನಸಭೆಯಲ್ಲಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸದನದಲ್ಲಿ ವಿಷಯ ಪ್ರಸ್ತಾಪಿಸಿದ ರಾಜೇಶ್ ನಾಯ್ಕ್ , “ಮಾಜಿ ಸಚಿವ ರಮಾನಾಥ್ ರೈ ಅವರನ್ನು ಅಧಿಕಾರಿಗಳು ಇಂದಿಗೂ ಸಚಿವ ಎಂದೇ ಭಾವಿಸಿದಂತಿದೆ. ಕಾಮಗಾರಿಗಳ ಏಜೆನ್ಸಿಗಳನ್ನು ಗುರುತಿಸಲು ಮಾಜಿ ಶಾಸಕರಿಗೆ ಅಧಿಕಾರಿಗಳು ಪತ್ರ ಬರೆಯುತ್ತಿದ್ದಾರೆ. ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪರಾಜಿತ ಅಭ್ಯರ್ಥಿಗಳ ಶಿಫಾರಸಿನ ಮೇಲೆ ಹಣ ಬಿಡುಗಡೆ ಮಾಡುತ್ತಿರುವುದು ಶಾಸಕರ ಹಕ್ಕುಚ್ಯುತಿಯಲ್ಲವೇ?” ಎಂದು ಪ್ರಶ್ನಿಸಿದರು. ರಾಜೇಶ್ ನಾಯ್ಕ್ ಅವರ ಈ ಗಂಭೀರ ಆರೋಪಕ್ಕೆ ಬಿಜೆಪಿ ಶಾಸಕರು ದನಿಗೂಡಿಸಿದರು. ಎಲ್ಲಾ ಕ್ಷೇತ್ರಗಳಲ್ಲೂ ಪರಾಜಿತ ಅಭ್ಯರ್ಥಿಗಳ ಹಸ್ತಕ್ಷೇಪ ಹೆಚ್ಚಾಗುತ್ತಿದೆ ಎಂದು ವಿರೋಧ ಪಕ್ಷದ ಸದಸ್ಯರು ದೂರಿದರು. ಈ ಸಂದರ್ಭದಲ್ಲಿ ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆಯಿತು.…

Read More

ಉಡುಪಿ: ಟಿಪ್ಪರ್‌ ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ದಾರುಣವಾಗಿ ಸಾವನಪ್ಪಿದ ದುರ್ಘಟನೆ ಮಾ. 24ರಂದು ಬೆಳಿಗ್ಗೆ ಮಾಳ ಮುಳ್ಳೂರಿನಲ್ಲಿ ನಡೆದಿದೆ. ನವೀನ್‌ ಬಜಗೋಳಿ (45) ಮೃತ ದುರ್ದೈವಿ. ನವೀನ್‌ ವೆಲ್ಡಿಂಗ್‌ ಕೆಲಸ ನಿರ್ವಹಿಸುತ್ತಿದ್ದು, ಹಾವು ಹಿಡಿಯುವ ಕೆಲಸವನ್ನು ಮಾಡುತ್ತಿದ್ದರು. ಇಂದು ಬೆಳಿಗ್ಗೆ ಎಲ್ಲಿಯೋ ಹಾವು ಹಿಡಿದು ಕಾಡಿಗೆ ಬಿಡಲೆಂದು ಹೋಗುತ್ತಿರುವಾಗ ಅವಘಡ ಸಂಭವಿಸಿದೆ. ಪರಿಣಾಮವಾಗಿ ನವೀನ್‌ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸ್ಕೂಟಿಯ ಸಹಸವಾರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ವಿಟ್ಲ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ  ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ವಿಟ್ಲ ಪೊಲೀಸರು ಕೇರಳದ ಮಂಜೇಶ್ವರದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಜೇಶ್ವರ ನಿವಾಸಿ ಮೊಹಮ್ಮದ್ ಫಯಾಜ್ (33) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. 2019ರಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಫಯಾಜ್ ವಿರುದ್ಧ ಐಪಿಸಿ ಕಲಂ 323, 507, 353 ಹಾಗೂ 504 ರಡಿ (ಅ.ಕ್ರ ನಂ: 181/2019) ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದ್ದರೂ, ಆರೋಪಿಯು ಸುದೀರ್ಘ ಕಾಲದಿಂದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಆರೋಪಿಯ ವಿರುದ್ಧ ಬಂಧನ ವಾರಂಟ್ ಹೊರಡಿಸಿತ್ತು. ಆರೋಪಿಯು ಕೇರಳ ರಾಜ್ಯದ ಮಂಜೇಶ್ವರದ ಬಾಯಾರು ಪದವು ಎಂಬಲ್ಲಿ ಅಡಗಿರುವ ಬಗ್ಗೆ ವಿಟ್ಲ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ವಿಟ್ಲ ಠಾಣೆಯ ಪೊಲೀಸರ ತಂಡವು ಮಂಜೇಶ್ವರಕ್ಕೆ ತೆರಳಿ ಆರೋಪಿಯನ್ನು ವಶಕ್ಕೆ ಪಡೆದಿದೆ. ಈ ಕಾರ್ಯಾಚರಣೆಯಲ್ಲಿ ಎಎಸ್‌ಐ ಜಯರಾಮ ಅವರಿಗೆ ಠಾಣಾ ಸಿಬ್ಬಂದಿಗಳಾದ ಶ್ರೀಕುಮಾರ್, ಗೋಪಾಲಕೃಷ್ಣ, ಮಾಯಪ್ಪ ಮತ್ತು ವೆಂಕಪ್ಪ ಅವರು ಸಾಥ್ ನೀಡಿದ್ದಾರೆ.…

Read More