ಬೈಂದೂರು: ಬೈಂದೂರು ತಾಲೂಕಿನ ಒತ್ತಿನಣೆ ಕಾಡಲ್ಲಿ ಕಾರು ಮತ್ತು ವ್ಯಕ್ತಿಯ ಶವವೊಂದು ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಸುಟ್ಟು ಕರಕಲಾದ ಕಾರಿನಲ್ಲಿ ಓರ್ವ ವ್ಯಕ್ತಿಯ ಅಸ್ಥಿಪಂಜರ ಕಾಣಿಸುತ್ತಿದ್ದು ಬೈಂದೂರು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಬೈಂದೂರು ವೃತ್ತನಿರೀಕ್ಷಕ ಸಂತೋಷ್ ಕಾಯ್ಕಿಣಿ ಮತ್ತು ಪಿ.ಎಸ್.ಐ ಪವನ್ ನಾಯಕ್ ತಂಡ ಆಗಮಿಸಿದ್ದು ಪ್ರಾಥಮಿಕ ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ. ಈ ಕಾರು ಸುಟ್ಟು ಹೋಗಿ ದಿನಗಳೇ ಕಳೆದಿದ್ದು ಇದೊಂದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಬೈಂದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Author: main-admin
ಮಂಗಳೂರು: ನಗರದ ಹೊರವಲಯದ ಪಾವಂಜೆಯಲ್ಲಿರುವ ನಂದಿನಿ ನದಿಗೆ ಹಾರಿದ ಅಂಚೆ ನೌಕರ ನಾಪತ್ತೆಯಾಗಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ಮಂಡ್ಯ ಮೂಲದ ಪ್ರಸ್ತುತ ಮಂಗಳೂರಿನ ಅಂಚೆ ಕಚೇರಿಯಲ್ಲಿ ಉದ್ಯೋಗಿಯಾಗಿರುವ ರಾಕೇಶ್ ಗೌಡ ನದಿಗೆ ಹಾರಿದವರು. ರಾಕೇಶ್ ಗೌಡ ನದಿಗೆ ಹಾರುವ ಮುನ್ನ ತನ್ನ ಮೊಬೈಲ್ ಹಾಗೂ ಇನ್ನಿತರ ವಸ್ತುಗಳನ್ನು ಬೈಕ್ ನಲ್ಲಿ ಇಟ್ಟಿದ್ದಾರೆ. ಅಲ್ಲದೆ ತಾನು ನದಿಗೆ ಹಾರುತ್ತಿರುವ ಕುರಿತು ಸಂಬಂಧಿಕರಿಗೆ ವಾಟ್ಸ್ಆ್ಯಪ್ ನಲ್ಲಿ ಮಾಹಿತಿ ರವಾನಿಸಿದ್ದಾರೆ. ಅಲ್ಲದೆ ನದಿಯಿರುವ ಪ್ರದೇಶದ ಲೊಕೇಶನ್ ಕೂಡಾ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಮುಲ್ಕಿ ಮತ್ತು ಸುರತ್ಕಲ್ ವ್ಯಾಪ್ತಿಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ಶೋಧ ಕಾರ್ಯ ನಡೆಸುತ್ತಿದ್ದಾರೆ. ರಾಕೇಶ್ ಗೌಡ ಅವರ ಮಾವ ಅಬಕಾರಿ ಇಲಾಖೆಯ ಡಿವೈಎಸ್ಪಿ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಅಬಕಾರಿ ಡಿವೈಎಸ್ಪಿಯವರ ಸೂಚನೆಯಂತೆ ಅಬಕಾರಿ ಇಲಾಖೆಯ ಸಿಬ್ಬಂದಿ ಬಂದಿದ್ದಾರೆ ಎನ್ನಲಾಗಿದೆ.
ಮಂಗಳೂರು: ಭಾರೀ ಮಳೆಯಿಂದಾಗಿರುವ ಗೃಹಪ್ರವೇಶಕ್ಕೆ ಸಿದ್ಧವಾಗಿದ್ದ ಮನೆ ನೆಲಸಮವಾಗಿದೆ. ಹರಿಹರ ಪಲ್ಲತಡ್ಕ ಎಂಬಲ್ಲಿ ಮನೆ ಸಂಪೂರ್ಣ ನೆಲಸಮವಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಹರಿಹರ ಪಲ್ಲತಡ್ಕ ಬಳಿ ಮೂರು ದಿನದ ಹಿಂದೆ ಮರ ಬಿದ್ದು ಮನೆ ಗೋಡೆಗಳಲ್ಲಿ ಬಿರುಕು ಮೂಡಿದೆ. ಬಿರುಕು ಬಿಟ್ಟಿದ್ದ ಗೋಡೆ ದುರಸ್ತಿ ಕೆಲಸ ಮಾಡಲಾಗಿದ್ದು, ಜುಲೈ 18ರಂದು ಗೃಹಪ್ರವೇಶ ನೆರವೇರಿಸಲು ಎಲ್ಲಾ ತಯಾರಿ ಮಾಡಿಕೊಳ್ಳಲಾಗಿತ್ತು. ಅಷ್ಟರಲ್ಲಿ ಗುಡ್ಡ ಕುಸಿದು ಮನೆ ಸಂಪೂರ್ಣ ನೆಲಸಮವಾಗಿದೆ. ಕಷ್ಟಪಟ್ಟು ಕಟ್ಟಿದ್ದ ಮನೆ ಗೃಹಪ್ರವೇಶಕ್ಕೆ ಮೊದಲೇ ನೆಲಸಮವಾಗಿದ್ದರಿಂದ ಮನೆಯವರು ಕಂಗಾಲಾಗಿದ್ದಾರೆ.
ಪುತ್ತೂರು;ಮರದ ಕೊಂಬೆ ಕಡಿಯುವ ವೇಳೆ ಅವಘಡ ಸಂಭವಿಸಿ ವಿದ್ಯುತ್ ಶಾಕ್ ಹೊಡೆದು ಮೆಸ್ಕಾಂ ಪವರ್ಮ್ಯಾನ್ ಮೃತಪಟ್ಟ ಘಟನೆ ಕುಂಬ್ರ ಸಮೀಪದ ಪರ್ಪುಂಜದಲ್ಲಿ ನಡೆದಿದೆ. ಕುಂಬ್ರ ಮೆಸ್ಕಾಂ ಶಾಖೆಯ ಪವರ್ಮ್ಯಾನ್ ಬಸವರಾಜ್ (26) ಮೃತಪಟ್ಟವರು. ಇವರು ಮೂಲತಃ ಬಾಗಲಕೋಟೆ ನಿವಾಸಿಯಾಗಿದ್ದು ಕೆಲವು ಸಮಯಗಳಿಂದ ಮೆಸ್ಕಾಂನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.
ಶಿವಮೊಗ್ಗ: ಗುಡ್ಡ ಕುಸಿದು ಬಿದ್ದು ಬಂದ್ ಆಗಿದ್ದ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿ ರಸ್ತೆಯಲ್ಲಿ ಇಂದಿನಿಂದ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿದು ಬಂದ್ ಆಗಿತ್ತು. ರಸ್ತೆಯ ಮೇಲೆ ಗುಡ್ಡ ಕುಸಿದ ಮಣ್ಣು ಹಾಗೂ ಮರಗಳು ಬಿದ್ದಿದ್ದವು. ಇದೀಗ ತೆರವು ಕಾರ್ಯಾಚರಣೆ ಮುಕ್ತಾಯವಾಗಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ಆಗುಂಬೆ ಘಾಟಿಯ ರಸ್ತೆಯಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ ನೀಡಲಾಗುತ್ತಿದೆ. ಜುಲೈ 30 ರವರೆಗೆ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಶಿವಮೊಗ್ಗ – ಉಡುಪಿ – ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಆಗುಂಬೆ ಘಾಟಿಯ 11 ನೇ ತಿರುವಿನಲ್ಲಿ ಗುಡ್ಡ ಕುಸಿದಿತ್ತು.
ಕಾಣಿಯೂರು: ಕಾಣಿಯೂರು ಸಮೀಪದ ಕಾಣಿಯೂರು ಬೈತ್ತಡ್ಕ ಹೊಳೆಗೆ ಕಾರು ಬಿದ್ದ ಪ್ರಕರಣಕ್ಕೆ ಸಂಬಂಧಿಸಿ ಬೈತ್ತಡ್ಕದಿಂದ 200 ಮೀಟರ್ ದೂರ ಮರಕ್ಕಡ ಹೊಳೆಯಲ್ಲಿ ಇಬ್ಬರ ಮೃತ ದೇಹ ಮಂಗಳವಾರ ಮುಂಜಾನೆ ಪತ್ತೆಯಾಗಿದೆ. ಮೃತದೇಹ ಎಂದು ಇನ್ನೂ ಗುರುತಿಸಲಾಗಿಲ್ಲ. ಓರ್ವನ ಮೃತ ದೇಹವು ಹೊಳೆಯ ಬದಿಯಲ್ಲಿದ್ದ ಮರದ ದಿಮ್ಮಿಯಲ್ಲಿ ಪತ್ತೆಯಾಗಿದ್ದು, ಹೊಳೆಯಲ್ಲಿ ನೀರು ಕಡಿಮೆಯಾದ ಹಿನ್ನಲೆಯಲ್ಲಿ ಬೆಳಕಿಗೆ ಬಂದಿದೆ. ಮತ್ತೊಬ್ಬನ ಮೃತದೇಹವು ೫೦ ಮೀಟರ್ ದೂರದ ಅಂತರದಲ್ಲಿ ಪತ್ತೆಯಾಗಿದೆ.ಕಡಬ ತಾಲೂಕಿನ ಕಾಣಿಯೂರು ಸಮೀಪದ ಬೈತಡ್ಕ ಗೌರಿ ಹೊಳೆಗೆ ಕಾರೊಂದು ಬಿದ್ದು ಯುವಕರಿಬ್ಬರು ನಾಪತ್ತೆಯಾದ ಘಟನೆ ಜು. 9ರಂದು ತಡರಾತ್ರಿ ನಡೆದಿತ್ತು. ಬಂಟ್ವಾಳ ತಾಲೂಕಿನ ವಿಟ್ಲ ಮುಟ್ನೂರು ಗ್ರಾಮದ ಕುಂಡಡ್ಕ-ಸಾಂತ್ಯಡ್ಕ ನಿವಾಸಿ ಚೋಮ ನಾಯ್ಕ ಅವರ ಪುತ್ರ ಧನುಷ್ (25) ಹಾಗೂ ವಿಟ್ಲ ಕನ್ಯಾನ ನಿವಾಸಿ ಧನುಷ್ (21) ಕಾರಿನಲ್ಲಿದ್ದರು ಎನ್ನಲಾಗಿದ್ದು, ಅವರು ನಾಪತ್ತೆಯಾಗಿದ್ದರು.
ಪುತ್ತೂರು; ಕಾಣಿಯೂರು ಬೈತಡ್ಕ ಮಸೀದಿ ಬಳಿಯ ಸೇತುವೆಯಿಂದ ಕೆಳಗೆ ಕಾರೊಂದು ಬಿದ್ದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಬೈತಡ್ಕದಿಂದ ಸುಮಾರು 200 ಮೀಟರ್ ದೂರದಲ್ಲಿ ಹೊಳೆಯಲ್ಲಿ ಮೃತದೇಹವೊಂದು ಪತ್ತೆಯಾಗಿದೆ. ಮರದ ದಿಮ್ಮಿಯಲ್ಲಿ ಮೃತದೇಹ ಸಿಲುಕಿಕೊಂಡಿದೆ. ಅಧಿಕಾರಿಗಳು, ಇಲಾಖೆಯ ಸಿಬಂದಿಗಳು ಸ್ಥಳಕ್ಕೆ ಆಗಮಿಸುತ್ತಿದ್ದಾರೆ. ಜು.9ರಂದು ರಾತ್ರಿ ಹೊಳೆಯಲ್ಲಿ ವಿಟ್ಲ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿದ್ದಾರೆ. ಪ್ರಕರಣ ಹಲವು ಸಂಶಯಕ್ಕೆ ಕಾರಣವಾಗಿತ್ತು.
ಸುಳ್ಯ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಯಿ ಅವರು ಇಂದು ಜು.12 ರಿಂದ ದ.ಕ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅವರು ಇಂದು ಮಧ್ಯಾಹ್ನ 2.30 ಕ್ಕೆ ಕೊಡಗು ಜಿಲ್ಲೆಯ ಮಡಿಕೇರಿಯಿಂದ ನಿರ್ಗಮಿಸಿ, ರಸ್ತೆ ಮೂಲಕ ಮಾರ್ಗವಾಗಿ ಸುಳ್ಯ ತಾಲೂಕಿಗೆ ಆಗಮಿಸಿ ಮಳೆಯಿಂದ ಹಾನಿಗೊಳಗಾದ ಸುಳ್ಯದ ಗಡಿ ಪ್ರದೇಶ ಸಂಪಾಜೆಗೆ ಭೇಟಿ ನೀಡಲಿದ್ದಾರೆ. ಇಲ್ಲಿ ಮಾನ್ಯ ಮುಖ್ಯಮಂತ್ರಿಗಳಿಗೆ ಜಿಲ್ಲಾಡಳಿತ ವತಿಯಿಂದ ಸ್ವಾಗತ ನೀಡಲಿದ್ದು, ಭೂಕಂಪನದ ಬಗ್ಗೆ ಜಿಲ್ಲಾಧಿಕಾರಿಗಳು ವರದಿ ನೀಡಲಿದ್ದಾರೆ. ನಂತರದಲ್ಲಿ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ಸಂಗಮ ಸ್ಥಳದ ನದಿ ಮಟ್ಟದ ವೀಕ್ಷಣೆ ಮತ್ತು ಬೆಳೆಹಾನಿ ಪರಿಶೀಲನೆ ಮಾಡಲಿದ್ದಾರೆ.ನಂತರ ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮದಲ್ಲಿ ಭೂಕುಸಿತದಲ್ಲಿ ಮೃತಪಟ್ಟವರ ವಾರಿಸುದಾರರಿಗೆ ಪರಿಹಾರ ಚೆಕ್ ವಿತರಣೆ ನಂತರ ಉಳ್ಳಾಲ ತಾಲೂಕಿನ ಕಡಲ್ಕೋರೆತದ ಪ್ರದೇಶಗಳಿಗೆ ಭೇಟಿ,ನಂತರ ಮುಲ್ಕಿ ತಾಲೂಕಿನ ಬೆಳೆಹಾನಿ ಪ್ರದೇಶ ಹಾಗೂ ನದಿ ಪ್ರವಾಹ ಸ್ಥಳಗಳಿಗೆ ಭೇಟಿ ನೀಡುವರು. ರಾತ್ರಿ 7.30 ಕ್ಕೆ ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ಉಡುಪಿಗೆ ತೆರಳುವರು .ಜು .13 ರ ಬುಧವಾರ ಸಂಜೆ…
ಕಾರ್ಕಳ: ಬೋಳ ಶ್ರೀ ಮೃತ್ಯುಂಜಯ ದೇವಸ್ಥಾನದಿಂದ ಪಂಚಲೋಹದ ಬಲಿ ಮೂರ್ತಿ, ಕಾಣಿಕೆ ಹುಂಡಿ, ಸಿಸಿ ಕ್ಯಾಮರದ ಡಿವಿಆರ್ ಕಳವಾಗಿದೆ. ಭಾನುವಾರ ರಾತ್ರಿ ದೇವಸ್ಥಾನದ ಬಾಗಿಲು ಒಡೆದು ಒಳಪ್ರವೇಶಿಸಿದ ಕಳ್ಳರು ಲಕ್ಷಾಂತರ ಬೆಲೆಬಾಳುವ ಬಲಿ ಮೂರ್ತಿ, ಹುಂಡಿಯಲ್ಲಿದ್ದ ಅಂದಾಜು 1.5 ಲಕ್ಷ ರೂ. ಕಳ್ಳತನವಾಗಿದೆ. ಸೋಮವಾರ ಬೆಳಗ್ಗೆ ಆರು ಗಂಟೆಗೆ ಅರ್ಚಕರು ದೇವಸ್ಥಾನಕ್ಕೆ ಬಂದಾಗ ಕಳ್ಳತನದ ವಿಚಾರ ಬೆಳಕಿಗೆ ಬಂದಿದೆ. ದೇವಸ್ಥಾನದ ಹಿಂಬದಿ ಬಾಗಿಲು ಒಡೆದು ಒಳ ನುಗ್ಗಿರುವ ಕಳ್ಳರು ಪಂಚಲೋಹದ ಬಲಿಮೂರ್ತಿ ಕಳವು ಮಾಡಿದ್ದಾರೆ. ಅಲ್ಲದೆ ಕಾಣಿಕೆ ಡಬ್ಬಿ ಒಡೆದು ಹಣ ದೋಚಿ ಪರಾರಿಯಾಗಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಳ್ಳರ ಪತ್ತೆಗಾಗಿ ಬಲೆ ಬೀಸಿದ್ದಾರೆ.
ಕಾಣಿಯೂರು;ಬೈತಡ್ಕ ಮಸೀದಿಯ ಬಳಿಯಿರುವ ಕಿರುಸೇತುವೆಯಿಂದ ಕಾರೊಂದು ಕೆಳಗೆ ಬಿದ್ದು ಯುವಕರಿಬ್ಬರು ನಾಪತ್ತೆಯಾದ ಘಟನೆ ಕುರಿತಂತೆ ಇದೀಗ ಮತ್ತೊಂದು ಮಾಹಿತಿ ಲಭ್ಯವಾಗಿದೆ. ನಾಪತ್ತೆಯಾಗಿರುವ ಯುವಕರನ್ನು ಬಂಟ್ವಾಳ ತಾಲೂಕಿನ ವಿಟ್ಲಮುಡ್ನೂರು ಗ್ರಾಮದ ಕುಂಡಡ್ಕದ ಧನುಷ್ (25) ಹಾಗೂ ವಿಟ್ಲ ಕನ್ಯಾನ ನಿವಾಸಿ ಧನುಷ್ (21) ಎಂದು ಗುರುತಿಸಲಾಗಿದೆ. ಸವಣೂರಿನಲ್ಲಿ ಪೊಲೀಸ್ ಚೆಕ್ ಪೋಸ್ಟ್ನಲ್ಲಿ ರಾತ್ರಿ 11.53 ಕ್ಕೆ ತಪಾಸಣೆಗೆ ಒಳಪಟ್ಟು ಮುಂದೆ ಸಾಗಿ 12. 02 ನಿಮಿಷಕ್ಕೆ ಕಾರು ಸೇತುವೆಗೆ ಢಿಕ್ಕಿಯಾಗಿ ತಡೆಗೋಡೆ ಮುರಿದು ಕೆಳಕ್ಕೆ ಬಿದ್ದಿದೆ. ನಾಪತ್ತೆಯಾಗಿರುವ ಪೈಕಿ ವಿಟ್ಲ ಕನ್ಯಾನ ನಿವಾಸಿ ಧನುಷ್ ಕುಂಡಡ್ಕ ನಿವಾಸಿ ಧನುಷ್ ಅವರ ತಾಯಿಗೆ ಕರೆ ಮಾಡಿ ನಮ್ಮ ಕಾರು ಹಳೆಯಂಗಡಿಯಲ್ಲಿ ಲಾರಿಗೆ ಢಿಕ್ಕಿಯಾಗಿದೆ, ನಾವು ಬದುಕಿ ಉಳಿದಿರುವುದೇ ಹೆಚ್ಚು, ಏನೂ ತೊಂದರೆಯಿಲ್ಲ, ನಾವು ಮನೆಗೆ ಮುಟ್ಟುವಾಗ ಬೆಳಿಗ್ಗೆ ಆಗಬಹುದು ಎಂದು ಹೇಳಿದ್ದಾರೆ. ಪೊಲೀಸರು ತನಿಖೆ ನಡೆಸಿದಾಗ ಧನುಷ್ ತಾಯಿಗೆ ಕರೆ ಮಾಡಿರುವುದು 11.52 ಕ್ಕೆ ಎಂದು ಸ್ಪಷ್ಟವಾಗಿ ತಿಳಿದು ಬಂದಿದೆ. ಕಾರು ಹೊಳೆಗೆ ಬಿದ್ದಿರುವುದು…