ಮಂಗಳೂರು:ವಿದೇಶಿ ಮೂಲದ ಹಡಗೊಂದು ಉಳ್ಳಾಲದ ಬಟಪಾಡಿ ಸಮುದ್ರದಲ್ಲಿ ಜೂ.21ರಂದು ಮುಳುಗಡೆಯಾಗಿದ್ದು, ‘ಎಂವಿ ಪ್ರಿನ್ಸೆಸ್ ಮಿರಾಲ್’ ಎಂಬ ಹೆಸರಿನ ಹಡಗಿನ ತೆರವಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಕರಾವಳಿಯ ರಕ್ಷಣಾ ಪಡೆಗೆ ಸೇರಿದ ಮೂರು ವಿಶೇಷ ಹಡಗಲ್ಲದೆ ಡೋರ್ನಿಯರ್ ವಿಮಾನದ ಮೂಲಕವೂ ಕಣ್ಗಾವಲಿಡಲಾಗಿದೆ. ತೈಲ ಸೋರಿಕೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ, ಸುರಕ್ಷತೆಗಳ ಬಗ್ಗೆ ಈಗಾಗಲೇ ಜಿಲ್ಲಾಡಳಿತದ ವತಿಯಿಂದ ಅಣಕು ಕಾರ್ಯಾಚರಣೆಗಳನ್ನು ನಡೆಸಲಾಗಿದ್ದು, ಅಗತ್ಯ ಪರಿಕರಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಿಕೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.ಹಡಗಿನ ಸುತ್ತ ಈಗಾಗಲೇ ಕಣ್ಗಾವಲಿಟ್ಟಿದೆ. ಮತ್ತೊಂದೆಡೆ ಈ ಭಾಗದಲ್ಲಿ ಮೀನುಗಾರಿಯನ್ನು ಕೂಡ ನಿಷೇಧಿಸಲಾಗಿದೆ. ಹಡಗಿನಿಂದ ಇಂಧನ ಹೊರ ತೆಗೆಯುವ ಬಗ್ಗೆ ಚಿಂತನೆ ನಡೆಸಲಾಗಿದೆ.
Author: main-admin
ವಿಟ್ಲ: ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಬಿದ್ದು ಸಾರ್ವಜನಿಕರ ಬಸ್ಸು ತಂಗುದಾಣದಲ್ಲಿ ರಕ್ತ ಪತ್ತೆಯಾಗಿರುವ ಘಟನೆ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ವಿಟ್ಲ -ಪುತ್ತೂರು ರಸ್ತೆಯ ಬದನಾಜೆಯಲ್ಲಿ ನಡೆದಿದೆ.ಬದನಾಜೆ ಬಸ್ಸು ತಂಗುದಾಣದ ಪಕ್ಕದಲ್ಲಿ ಹಾಲು ಸಂಗ್ರಹಣಾ ಕೇಂದ್ರವಿದ್ದು, ಅಲ್ಲಿಗೆ ಬಂದವರು ರಕ್ತವನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಇನ್ನು ಸ್ಥಳಕ್ಕಾಗಮಿಸಿದ ವಿಟ್ಲ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ತನಿಖೆ ಕೈಗೆತ್ತಿಕೊಂಡಾಗ ಪ್ರಕರಣದ ಸತ್ಯಾಂಶ ಬೆಳಕಿಗೆ ಬಂದಿದೆ.ನೆಲ್ಲಿಗುಡ್ಡೆ ಮೂಲದ ವ್ಯಕ್ತಿ ಕುಡಿತದ ಮತ್ತಿನಲ್ಲಿ ಬದನಾಜೆ ಬಸ್ಸು ನಿಲ್ದಾಣದಲ್ಲಿ ಕುಳಿತಿದ್ದು, ಈ ವೇಳೆ ಆ ವ್ಯಕ್ತಿ ಬಿದ್ದು ಮುಖ ಹಾಗೂ ಮೂಗಿನ ಭಾಗಕ್ಕೆ ಗಾಯವಾಗಿ ರಕ್ತ ಬಂದಿದ್ದು, ಬೆಳಗ್ಗಿನ ವೇಳೆ ಅಲ್ಲಿಂದ ಆತ ಎದ್ದು ವಿಟ್ಲ ಕಡೆಗೆ ತೆರಳಿದ್ದಾನೆ ಎಂದು ತಿಳಿದು ಬಂದಿದೆ.
ಮಂಗಳೂರು: ಇತ್ತೀಚೆಗೆ ಉಳ್ಳಾಲ ಬಟ್ಟಪ್ಪಾಡಿ ಸಮೀಪ ಸಮುದ್ರದಲ್ಲಿ ಮುಳುಗಡೆಯಾ ಹಡಗಿನಿಂದ ಸಣ್ಣ ಪ್ರಮಾಣದ ತೈಲ ಸೊರಿಕೆ ಹಿನ್ನಲೆ ಉಳ್ಳಾಲ ವಲಯ ಸುತ್ತಮುತ್ತಲಿನ ಸಮುದ್ರದಲ್ಲಿ ಮೀನುಗಾರಿಕೆಯನ್ನು ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಉಳ್ಳಾಲ ವಲಯದ ಬಟ್ಟಪ್ಪಾಡಿ ಹತ್ತಿರದ ಸಮುದ್ರದಲ್ಲಿ ಪ್ರಿನ್ಸೆಸ್ ಮಿರಾಲ್ ಹೆಸರಿನ ಸರಕು ಸಾಗಾಟದ ಹಡಗು ಮುಳುಗಡೆಯಾಗಿದ್ದು, ಹಡಗಿನ ಡರ್ಟಿ ವಾಟರ್ ಟ್ಯಾಂಕಿನಿಂದ ಸಣ್ಣ ಪ್ರಮಾಣದಲ್ಲಿ ತೈಲ ಸೋರಿಕೆಯಾಗುತ್ತಿದೆ. ಈ ಹಿನ್ನಲೆ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ. ಇನ್ನು ಜಿಲ್ಲಾಡಳಿತದ ಆದೇಶ ಉಲ್ಲಂಘಿಸಿ ಯಾರಾದರೂ ಮೀನುಗಾರಿಕೆ ನಡೆಸಿದರೆ ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ
ಬೆಳ್ತಂಗಡಿ : ಮುಸ್ಲಿಂ ಸಮುದಾಯದ ಮಸೀದಿಯಲ್ಲಿರು ಕಲ್ಲನ್ನು ಶಿವಲಿಂಗಕ್ಕೆ ಹೋಲಿಸಿ ಬೆಳ್ತಂಗಡಿ ಕಾಂಗ್ರೇಸ್ ಮುಖಂಡ ವಿವಾದ ಹುಟ್ಟು ಹಾಕಿದ್ದು, ಇದೀಗ ಕಾಂಗ್ರೇಸ್ ಮುಖಂಡನ ವಿರುದ್ದ ಹಿಂದೂ ಸಂಘಟನೆಗಳು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬೆಳ್ತಂಗಡಿಯ ಕಾಜೂರು ಮಸೀದಿಗೆ ಸಂಬಂಧಿಸಿದಂತೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಜೂರು ಮಸೀದಿ ಪಕ್ಕದಲ್ಲಿ ಕಬರ್ ಸ್ತಾನಗಳು ಇದ್ದು, ಅಲ್ಲಿ ಹಾಕಿರುವ ಕಲ್ಲುಗಳನ್ನು ಹಿಂದೂ ಸಂಘಟನೆಗಳು ಶಿವಲಿಂಗ ಎಂದು ಹೇಳಬಹುದು ಆ ಕಾರಣಕ್ಕೆ ಬಿಜೆಪಿ ಸಚಿವರನ್ನು,ಜನಪ್ರತಿನಿಧಿಗಳನ್ನು,ಹಿಂದೂ ಸಂಘಟನೆಯವರನ್ನು ಮಸೀದಿ ಪಕ್ಕ ಬರಲು ಬಿಡಬೇಡಿ, ಅವರು ಬಂದಾಗ ಎಚ್ಚರದಿಂದಿರಿ ಎಂದು ಮುಸ್ಲಿಂ ಸಮುದಾಯಕ್ಕೆ ಎಚ್ಚರಿಸಿದ್ದಾರೆ. ಇದೀಗ ಬೆಳ್ತಂಗಡಿ ಕಾಂಗ್ರೇಸ್ ಮುಖಂಡ ಸಲೀಂ ಶಿವಲಿಂಗಕ್ಕೆ ಅವಹೇಳನ ಮಾಡಿದ ಹಿನ್ನಲೆ ಸಲೀಂ ವಿರುದ್ಧ ಪೋಲೀಸರಿಗೆ ದೂರು ನೀಡಲಾಗಿದೆ. ಸ್ಥಳೀಯ ವಿಶ್ವಹಿಂದೂ ಪರಿಷತ್ ನಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಾಗಿದೆ.
ತೀವ್ರ ಶ್ವಾಸಕೋಶದ ಸೋಂಕಿನ ಸಮಸ್ಯೆಯಿಂದ ಚೆನ್ನೈನ ಖಾಸಗಿ ಆಸ್ಪತ್ರೆಗೆ ವಿದ್ಯಾ ಸಾಗರ್ ಅವರು ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಮಂಗಳವಾರ ರಾತ್ರಿ ಇಹಲೋಕ ತ್ಯಜಿಸಿದ್ದಾರೆ. ಆಸ್ಪತ್ರೆಯ ಮೂಲಗಳ ಪ್ರಕಾರ ವಿದ್ಯಾಸಾಗರ್ ಅವರು ಕಳೆದ ಕೆಲವು ವರ್ಷಗಳಿಂದ ಶ್ವಾಸಕೋಸ ಸಮಸ್ಯೆಯಿಂದ ಬಳಲುತ್ತಿದ್ದರು. ಪಾರಿವಾಳದ ಹಿಕ್ಕೆಗಳಲ್ಲಿರುವ ಸೋಂಕಿತ ಗಾಳಿಯನ್ನು ಉಸಿರಾಡುವ ಮೂಲಕ ಉಂಟಾಗುವ ಅಲರ್ಜಿಯಾಗಿದೆ. ಈ ವರ್ಷದ ಜನವರಿಯಲ್ಲಿ ಮೀನಾ ಅವರ ಇಡೀ ಕುಟುಂಬ ಕೋವಿಡ್ 19 ಸೋಂಕಿಗೆ ಒಳಗಾದಾಗ ವಿದ್ಯಾಸಾಗರ್ ಅವರಿಗೆ ಶ್ವಾಸಕೋಸದ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ವಿದ್ಯಾಸಾಗರ್ ಅವರು ಕರೊನಾ ಸ್ಥಿತಿಯಿಂದ ಚೇತರಿಸಿಕೊಂಡಿದ್ದರೂ, ನಂತರ ಶ್ವಾಸಕೋಸದ ಸಮಸ್ಯೆ ಇನ್ನಷ್ಟು ಹದಗೆಟ್ಟಿತು ಎಂದು ಹೇಳಲಾಗುತ್ತದೆ. ಕೆಲವು ವಾರಗಳ ಹಿಂದೆ ವೈದ್ಯರು, ವಿದ್ಯಾಸಾಗರ್ ಅವರ ಶ್ವಾಸಕೋಶವನ್ನು ಕಸಿ ಮಾಡಲು ನಿರ್ಧರಿಸಿದ್ದರು. ಆದರೆ, ದಾನಿಯನ್ನು ಪಡೆಯುವಲ್ಲಿ ತೊಂದರೆ ಉಂಟಾಗಿದೆ ಎಂದು ಮೂಲಗಳು ತಿಳಿಸಿವೆ. ಏಕೆಂದರೆ ಮಿದುಳು ಸತ್ತ ರೋಗಿಗಳಿಂದ ಮಾತ್ರ ಶ್ವಾಸಕೋಸ ಕಸಿ ಬೇಕಾದನ್ನು ಪಡೆಯಲು ಸಾಧ್ಯ. ಆದರೆ, ಅದಕ್ಕೆ ಕಾಯುತ್ತಿರುವವರ ಪಟ್ಟಿಯೂ ಕೂಡ ದೊಡ್ಡದಾಗಿದೆ.…
ಉಡುಪಿ: ಕುತೂಹಲಕಾರಿ ಘಟನೆಯೊಂದನ್ನು ಜಿಲ್ಲಾ ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಯುವಕನಿಗೆ ನ್ಯಾಯಾಲಯವು 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ವರುಣ್ ನಾಯಕ್(25) ನ್ಯಾಯಾಂಗ ಬಂಧನಕ್ಕೆ ಒಳಗಾದ ವ್ಯಕ್ತಿ. ಜೂನ್ 26ರಂದು ವರುಣ್ ಭಯದ ಧ್ವನಿಯಲ್ಲಿ ತನ್ನ ಪೋಷಕರಿಗೆ ಕರೆ ಮಾಡಿ ತನ್ನನ್ನು ಯಾರೋ ದುಷ್ಕರ್ಮಿಗಳು ಅಪಹರಿಸಿದ್ದಾರೆ ಎಂದು ತಿಳಿಸಿದ್ದ. ಅಪಹರಣಕಾರರು 5 ಲಕ್ಷ ರೂ. ಬೇಡಿಕೆ ಇಟ್ಟಿದ್ದ ಎಂದು ತಿಳಿಸಿದ್ದ. ಈ ಹಿನ್ನೆಲೆಯಲ್ಲಿ ಪೋಷಕರು ಆತಂಕಗೊಂಡು ಉಡುಪಿ ಪೊಲೀಸರಿಗೆ ದೂರು ನೀಡಿದ್ದರು. ಅಪಹರಣ ಕುರಿತಂತೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಈ ನಡುವೆ ವರುಣ್ ಆಗಾಗ್ಗೆ ತನ್ನ ಪೋಷಕರೊಂದಿಗೆ ವಾಟ್ಸಾಪ್ ಚಾಟ್ಗಳ ಮೂಲಕ ಸಂಪರ್ಕದಲ್ಲಿರುತ್ತಿದ್ದ. ಅವನ ತಾಯಿ ಕೊನೆಗೆ ಫೋನ್ ಕರೆಯಲ್ಲಿ ಮಾತನಾಡಲು ಅವನನ್ನು ಒಪ್ಪಿಸಿದರು. ವರುಣ್ ತನ್ನ ಪೋಷಕರಿಗೆ ಕರೆ ಮಾಡಿದಾಗ, ಎಚ್ಚೆತ್ತ ಪೊಲೀಸರು ಫೋನ್ ಕರೆ ಸ್ಥಳವನ್ನು ಟ್ರ್ಯಾಕ್ ಮಾಡಿದ್ದಾರೆ. ಯುವಕನ ಮೊಬೈಲ್ ಲೊಕೇಷನ್ ಪತ್ತೆ ಮಾಡುವಾಗ ಅದು ಗೋವಾದಲ್ಲಿರುವುದು ಗೊತ್ತಾಗಿದೆ ಕೂಡಲೇ ಗೋವಾಕ್ಕೆ ಇಬ್ಬರು ಸಿಬ್ಬಂದಿಗಳನ್ನು…
ರಿಲಯನ್ಸ್ ಇಂಡಸ್ಟ್ರೀಸ್ನ ಮುಖ್ಯಸ್ಥ ಮುಕೇಶ್ ಅಂಬಾನಿ ಮಂಗಳವಾರ ರಿಲಯನ್ಸ್ ಜಿಯೋ ಮುಖ್ಯಸ್ಥ ಸ್ಥಾನದಿಂದ ಕೆಳಕ್ಕೆ ಇಳಿದಿದ್ದು, ಪುತ್ರ ಆಕಾಶ್ ಅಂಬಾನಿ ನೂತನ ಮುಖ್ಯಸ್ಥರಾಗಿದ್ದಾರೆ. ಅಂಬಾನಿಯವರ ಪುತ್ರ ಆಕಾಶ್ ಅಂಬಾನಿಯವರನ್ನು ನೂತನ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ ಎಂದು ಸಂಸ್ಥೆಯು ಮಾಹಿತಿ ನೀಡಿದೆ. ಜೂನ್ 27ರಿಂದ ಪಂಕಜ್ ಮೋಹನ್ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಜೂನ್ 27ರಂದು ನಡೆದ ಜಿಯೋ ಸಮಿತಿ ಸಭೆಯ ಬಳಿಕ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ವರದಿಯು ಉಲ್ಲೇಖ ಮಾಡಿದೆ. ಇನ್ನು ಪಂಕಜ್ ಮೋಹನ್ ವ್ಯವಸ್ಥಾಪಕ ನಿರ್ದೇಶಕರಾಗಿ ಐದು ವರ್ಷಗಳ ಕಾಲ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಸ್ವತಂತ್ರ ವ್ಯವಸ್ಥಾಪಕರಾಗಿ ಐದು ವರ್ಷಗಳ ಅವಧಿಗೆ ರಾಮಿಂದರ್ ಸಿಂಗ್ ಗುರ್ಜಲ್ ಹಾಗೂ ಕೆವಿ ಔಧರಿರನ್ನು ನೇಮಕ ಮಾಡಲಾಗಿದೆ. ಇದು ಕೂಡಾ ಜೂನ್ 27ರಿಂದ ಜಾರಿಗೆ ಬರಲಿದೆ. ಆಕಾಶ್ ಅಂಬಾನಿ ಯಾರು? ಮುಕೇಶ್ ಅಂಬಾನಿ ಪುತ್ರ ಆಕಾಶ್ ಅಂಬಾನಿ ಈ ಹಿಂದೆ ರಿಲಯನ್ಸ್ ಜಿಯೋ ನಾನ್ ಎಕ್ಸಿಕ್ಯುಟಿವ್ ಡೈರೆಕ್ಟರ್ ಆಗಿದ್ದರು. ಈಗ ನೂತನ ಮುಖ್ಯಸ್ಥರಾಗಿ ಆಯ್ಕೆ…
ಮುಂಬೈ (ಮಹಾರಾಷ್ಟ್ರ): ಏಳು ಪ್ರಯಾಣಿಕರು ಮತ್ತು ಇಬ್ಬರು ಪೈಲಟ್ಗಳನ್ನು ಹೊತ್ತ ಹೆಲಿಕಾಪ್ಟರ್ ಮುಂಬೈ ಹೈನಲ್ಲಿರುವ ತೈಲ ಮತ್ತು ನೈಸರ್ಗಿಕ ಅನಿಲ ಕಾರ್ಪೊರೇಷನ್ ಲಿಮಿಟೆಡ್ (ONGC) ರಿಗ್ ಬಳಿ ಸಾಗರ್ ಕಿರಣ್ ಬಳಿ ಇಂದು ಅರಬ್ಬಿ ಸಮುದ್ರದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಕಂಪನಿ ಹೇಳಿದೆ. ಈ ಘಟನೆ ನಡೆದಿರುವ ಸ್ಥಳವು ಮುಂಬೈನಿಂದ ಅರಬ್ಬಿ ಸಮುದ್ರದೊಳಗೆ 7 ನಾಟಿಕಲ್ ಮೈಲಿ ದೂರದಲ್ಲಿದೆ. ಇದುವರೆಗೆ ಒಟ್ಟು ಆರು ಮಂದಿಯನ್ನು ರಕ್ಷಿಸಲಾಗಿದ್ದು, ಉಳಿದವರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ ಎಂದು ಒಎನ್ಜಿಸಿ ತಿಳಿಸಿದೆ. ಅಧಿಕೃತ ಮೂಲಗಳ ಪ್ರಕಾರ ಭಾರತೀಯ ಕೋಸ್ಟ್ ಗಾರ್ಡ್ ಕೂಡ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದೆ. ರಕ್ಷಣಾ ಕಾರ್ಯಾಚರಣೆಗಾಗಿ ಕೋಸ್ಟ್ ಗಾರ್ಡ್ ಎರಡು ಹಡಗುಗಳನ್ನು ಸ್ಥಳದ ಕಡೆಗೆ ತಿರುಗಿಸಿದೆ. ದಮನ್ನಿಂದ ಟೇಕಾಫ್ ಆದ ಡಾರ್ನಿಯರ್ ವಿಮಾನವು ಒಂದು ಲೈಫ್ ರಾಫ್ಟ್ ಅನ್ನು ಈ ಪ್ರದೇಶದಲ್ಲಿ ಬೀಳಿಸಿತು ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಕುಂದಾಪುರ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವೈಯಕ್ತಿಕ ಕಾರಣದಿಂದ ಮನನೊಂದು ಬ್ರಹ್ಮಾವರ ತಾಲೂಕಿನ ಪಾರಂಪಳ್ಳಿ ಗ್ರಾಮದಲ್ಲಿ ನಿನ್ನೆ ಈ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ಮೃತರನ್ನು ಪಾರಂಪಳ್ಳಿ ನಿವಾಸಿ ಸಯ್ಯದ್ ಬ್ಯಾರಿ ಎಂಬವರ ಮಗಳು ಮಿಸ್ರಿಯಾ(19) ಎಂದು ಗುರುತಿಸಲಾಗಿದೆ. ಕುಂದಾಪುರ ಬ್ಯಾರೀಸ್ ಕಾಲೇಜಿನಲ್ಲಿ ದ್ವಿತೀಯ ಪಿ.ಯು.ಸಿ. ವ್ಯಾಸಂಗ ಮಾಡುತ್ತಿದ್ದ ಈಕೆ ತಲೆನೋವು ಎಂದು ಕೋಣೆಗೆ ಹೋಗಿ ಮಲಗಿದ್ದಳು. ಅಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಳ್ಯ:ಸುಳ್ಯದ ಗೂನಡ್ಕ, ಪೆರಾಜೆ, ಕಲ್ಲುಗುಂಡಿ, ಅರಂತೋಡು, ಜಾಲ್ಸೂರು ಭಾಗದಲ್ಲಿ ಮತ್ತೆ ಭೂ ಕಂಪನದ ಅನುಭವವಾಗಿದೆ. ಇದರಿಂದಾಗಿ ಮತ್ತೆ ಜನರಲ್ಲಿ ಆತಂಕ ಶುರುವಾಗಿದೆ. ಎರಡು ದಿನಗಳ ಹಿಂದೆಯಷ್ಟೆ ಕೊಡಗು ದಕ್ಷಿಣ ಕನ್ನಡ ಗಡಿ ಪ್ರದೇಶ ಸೇರಿ ಇದೇ ಭಾಗದಲ್ಲಿ ಭೂ ಕಂಪನ ಸಂಭವಿಸಿತ್ತು. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 2.7ರಷ್ಟು ದಾಖಲಾಗಿತ್ತು. ಇಂದು ಬೆಳಿಗ್ಗೆ 7.45 ರ ವೇಳೆಗೆ ಮತ್ತೆ ಭೂಮಿ ಕಂಪಿಸಿದೆ.ತಾಲೂಕಿನ ಬಹುತೇಕ ಕಡೆ ಶಬ್ದದೊಂದಿಗೆ ಎರಡು ಮೂರು ಸೆಕೆಂಡುಗಳಷ್ಟು ಕಂಪಿಸಿದೆ. ಯಾವುದೇ ಅಪಾಯದ ಬಗ್ಗೆ ತಿಳಿದು ಬಂದಿಲ್ಲ.