Author: main-admin

ವಾರಣಾಸಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಗೆ ಪಕ್ಷಿಯೊಂದು ಡಿಕ್ಕಿ ಹೊಡೆದ ಘಟನೆ ನಡೆದಿದೆ. ಇದಾದ ಬಳಿಕ ವಾರಣಾಸಿಯ ಪೊಲೀಸ್ ಲೈನ್ ನಲ್ಲಿ ಸಿಎಂ ಯೋಗಿ ಇದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಲಾಗಿದೆ. ಹೆಲಿಕಾಪ್ಟರ್ ಪೊಲೀಸ್ ಲೈನ್‌ ನಿಂದ ಸುಲ್ತಾನ್‌ ಪುರಕ್ಕೆ ಟೇಕ್ ಆಫ್ ಆಗಿತ್ತು, ಆದರೆ ಪಕ್ಷಿ ಡಿಕ್ಕಿ ಹೊಡೆದ ನಂತರ, ಪೊಲೀಸ್ ಲೈನ್‌ ನಲ್ಲಿಯೇ ತುರ್ತು ಲ್ಯಾಂಡಿಂಗ್ ಮಾಡಲಾಯಿತು. ಹೆಲಿಕಾಪ್ಟರ್‌ ನ ತಾಂತ್ರಿಕ ಪರೀಕ್ಷೆ ನಡೆಸಲಾಗಿದೆ. ವಿಶೇಷ ವಿಮಾನ ಲಕ್ನೋದಿಂದ ವಾರಣಾಸಿಗೆ ತಲುಪಿದ ನಂತರ ಸಿಎಂ ಯೋಗಿ ಪ್ರಯಾಣ ಮುಂದುವರೆಸಿದ್ದಾರೆ. ಸಿಎಂ ಯೋಗಿ ಹೆಲಿಕಾಪ್ಟರ್ ಸುರಕ್ಷಿತವಾಗಿ ಲ್ಯಾಂಡ್ ಆದ ನಂತರ ಎಲ್ಲರೂ ನಿಟ್ಟುಸಿರು ಬಿಟ್ಟಿದ್ದಾರೆ ಎಂದು ಹೇಳಲಾಗಿದೆ.

Read More

ಉಳ್ಳಾಲ: ಪ್ರವಾಸಕ್ಕೆಂದು ಬೆಂಗಳೂರಿನಿಂದ ಬಂದ ತಂಡಗಳೆರಡು ಕುಡಿದ ಅಮಲಿನಲ್ಲಿ ಪರಸ್ಪರ ಹೊಡೆದಾಡಿಕೊಂಡು ಸ್ಥಳೀಯ ಮನೆಗೆ ನುಗ್ಗಿ ತೊಂದರೆ ನೀಡಿದ ಘಟನೆ ಉಚ್ಚಿಲ ಬಟ್ಟಪ್ಪಾಡಿಯ ಖಾಸಗಿ ಗೆಸ್ಟ್‌ ಹೌಸ್‌ನಲ್ಲಿ ನಡೆದಿದೆ.ಗೆಸ್ಟ್‌ಹೌಸ್‌ನಲ್ಲಿ ತಡರಾತ್ರಿಯವರೆಗೂ ಪಾರ್ಟಿ ನಡೆಯುತ್ತಿತ್ತು. ಇದಕ್ಕಾಗಿ ಎರಡು ಬಸ್‌ಗಳಲ್ಲಿ ಬೆಂಗಳೂರಿನಿಂದ ಜನರು ಬಂದಿದ್ದರು. ಪಾರ್ಟಿ ನಡೆಸಿ ಕೊನೆಗೆ ಬಂದಿದ್ದ ಜನರು ಎರಡು ತಂಡಗಳಾಗಿ ಹೊಡೆದಾಡಿಕೊಂಡಿದ್ದಾರೆ. ಈ ಹೊಡೆದಾಟವು ಗೆಸ್ಟ್‌ಹೌಸ್‌ ಒಳಗಿನಿಂದ ಹೊರಭಾಗಕ್ಕೂ ಬಂದಿದ್ದು, ಈ ವೇಳೆ ಕುಡಿತದ ಅಮಲಿನಲ್ಲಿದ್ದವರು ಸ್ಥಳೀಯ ಮನೆಯೊಂದಕ್ಕೆ ನುಗ್ಗಿ ಮನೆಯವರಿಗೆ ತೊಂದರೆ ನೀಡಿದ್ದಾರೆ.ಪಾರ್ಟಿ, ಕುಡಿತದ ಅಮಲಿನಲ್ಲಿದ್ದವರು ಮನೆಗೆ ನುಗ್ಗಿ ತೊಂದರೆ ನೀಡಿದ್ದನ್ನು ವಿರೋಧಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ ಘಟನೆಯೂ ನಡೆಯಿತು.

Read More

ಕೋಲ್ಕತ: ಚಿಕಿತ್ಸೆಗೆ ಹೆದರಿ ಅವಿತು ಕೂತ ರೋಗಿಯೊಬ್ಬ ಆಸ್ಪತ್ರೆಯ ಏಳನೇ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾನೆ. ನೆಲಕ್ಕೆ ಬೀಳುವ ಮೊದಲು ಕಟ್ಟಡದ ಗೋಡೆಯ ಅಂಚಿಗೆ ಎರಡು ಸಲ ತಾಗಿದ್ದರಿಂದ ಈತನ ತಲೆಬುರುಡೆ, ಪಕ್ಕೆಲುಬು ಮತ್ತು ಕೈಗಳಿಗೆ ಗಂಭಿರ ಗಾಯಗಳಾಗಿವೆ. ಪಶ್ಚಿಮಬಂಗಾಳದ ಕೋಲ್ಕತದ ಮುಲ್ಲಿಕ್​ಬಜಾರ್ ಎಂಬಲ್ಲಿನ ಖಾಸಗಿ ಮಾನಸಿಕ ಆಸ್ಪತ್ರೆಯೊಂದರಲ್ಲಿ ಈ ಅವಘಡ ಸಂಭವಿಸಿದೆ. ಸುಜಿತ್ ಅಧಿಕಾರಿ ಎಂಬಾತನೇ ಕೆಳಕ್ಕೆ ಬಿದ್ದ ರೋಗಿ. ಈತ ಚಿಕಿತ್ಸೆಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ಶನಿವಾರ ಬೆಳಗ್ಗೆ ಏಳನೇ ಮಹಡಿಯಲ್ಲಿದ್ದ ವಾರ್ಡ್​ನ ಕಿಟಕಿಯಿಂದ ಹೊರಗೆ ಬಂದು ಅಂಚಿನಲ್ಲಿ ಸುಮಾರು ಎರಡು ಗಂಟೆ ಕೂತಿದ್ದ. ಹೈಡ್ರಾಲಿಕ್ ಏಣಿ ಬಿಟ್ಟು ಅದರಿಂದ ಇಳಿ ಎಂದರೂ ಇಳಿಯದ ಈತನನ್ನು ರಕ್ಷಿಸಲು ಆಸ್ಪತ್ರೆಯವರು ಹಾಗೂ ಇತರರು ಎಷ್ಟೇ ಮನವೊಲಿಸಲು ಯತ್ನಿಸಿದರೂ ಪ್ರಯೋಜನ ಆಗಲಿಲ್ಲ. ಬಳಿಕ ರಕ್ಷಣಾ ತಂಡದವರು ಕೆಳಗ್ಗೆ ನೆಟ್ ಹಾಕಿ ಈತನನ್ನು ಬಚಾವ್ ಮಾಡಲು ಪ್ರಯತ್ನಿಸಿದ್ದರು. ಅಷ್ಟರಲ್ಲಿ ಆತ ಕೈಜಾರಿ ಕೆಳಕ್ಕೆ ಬಿದ್ದಿದ್ದು, ಬೀಳುವ ಎರಡು ಕಡೆ ಕಟ್ಟಡದ ಭಾಗ ತಾಗಿದ್ದು, ತಲೆಬುರುಡೆ ಪಕ್ಕೆಲುಬು, ಕೈಗಳು…

Read More

ಬ್ರಹ್ಮಾವರ: ಬ್ರಹ್ಮಾವರ ಠಾಣೆ ವ್ಯಾಪ್ತಿಯ ಮಾಬುಕಳ ಸೇತುವೆಯ ಸಮೀಪ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಗಂಭೀರ ಗಾಯಗೊಂಡಿದ್ದಾರೆ. ಕಾರು ಚಾಲಕ ಅತಿ ವೇಗದಿಂದ ಕುಂದಾಪುರದಿಂದ ಉಡುಪಿಯತ್ತ ಕಾರು ಚಲಾಯಿಸಿಕೊಂಡು ಬರುತ್ತಿದ್ದಾಗ ನಿಯಂತ್ರಣ ಸಿಗದೆ ರಸ್ತೆ ವಿಭಜಕ ದಾಟಿ ಕುಂದಾಪುರದತ್ತ ಸಾಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದಿಂದ ಕಾರು ನಜ್ಜುಗುಜ್ಜಾಗಿದೆ. ಅಪಘಾತದ ತೀವ್ರತೆಗೆ ಕಾರು ಚಾಲಕನ ಕೈ ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬ್ರಹ್ಮಾವರ ಠಾಣೆಯ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಬೆಂಗಳೂರು: ಸಾಲುಮರದ ತಿಮ್ಮಕ್ಕಗೆ ಬಿಡಿಎ ನಿವೇಶನ ಮಂಜೂರು ಮಾಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಮ್ಮಕ್ಕಗೆ ನಿವೇಶನ ಕ್ರಯಪತ್ರವನ್ನು ಹಂಚಿಕೆ ಮಾಡಿದರು. ಕೆಲ ದಿನಗಳ ಹಿಂದಷ್ಟೇ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಸಾಲುಮರದ ತಿಮ್ಮಕ್ಕ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ನಂತರ ಸಿಎಂ ಸೂಚನೆ ಮೇರೆಗೆ ಬಿಡಿಎ ನಿವೇಶನ ಹಂಚಿಕೆ ಪತ್ರವನ್ನು ತಿಮ್ಮಕ್ಕನಿಗೆ ನೀಡಿತ್ತು.ಇಂದು ಬೆಳಗ್ಗೆ ರೇಸ್ ಕೋರ್ಸ್ ನಿವಾಸದಲ್ಲಿ ಸಾಲುಮರದ ತಿಮ್ಮಕ್ಕ ಹಾಗೂ ಆಕೆಯ ಸಾಕು ಪುತ್ರನಿಗೆ ಕರಾರು ಪತ್ರವನ್ನು ಸಿಎಂ ನೀಡಿದರು. ಇನ್ನು ಮುಖ್ಯಮಂತ್ರಿ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಕೆಂಪೇಗೌಡ ಬಡಾವಣೆಯ 7ನೇ ಬ್ಲಾಕ್‌ ನಲ್ಲಿ ನಿವೇಶನವನ್ನು ಗುರುತಿಸಿ ವಿತರಿಸಲಾಗುತ್ತಿದೆ ಎಂದು ಬಿಡಿಎ ಅಧ್ಯಕ್ಷ ವಿಶ್ವನಾಥ್‌ ಹೇಳಿದ್ದಾರೆ. ತಿಮ್ಮಕ್ಕನಿಗೆ 50#80 ಚದರ ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ ಎಂದರು.

Read More

ದಕ್ಷಿಣ ಕನ್ನಡದ ಸುಳ್ಯ ತಾಲೂಕು, ಕೊಡಗು ಜಿಲ್ಲೆಯ ಕೆಲವೆಡೆ ಶನಿವಾರ ಬೆಳಗ್ಗೆ ಭೂಕಂಪನ ಅನುಭವವಾಗಿದ್ದು, ಸ್ಥಳೀಯರಲ್ಲಿ ಮತ್ತೆ ಆತಂಕ ಹುಟ್ಟಸಿದೆ. ಬೆಳಗ್ಗೆ ಸುಮಾರು 9.10ಕ್ಕೆ ಭೂಕಂಪನದ ಅನುಭವವಾಗಿದ್ದು, ಕೆಲ ಕ್ಷಣ ದೊಡ್ಡ ಶಬ್ದದೊಂದಿಗೆ ಭೂಮಿ ಕಂಪಿಸಿದೆ. ಇದರಿಂದಾಗಿ ಮನೆಯಲ್ಲಿದ್ದ ವಸ್ತುಗಳು ಕಂಪಿಸಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮಡಿಕೇರಿ ತಾಲೂಕಿನ ಚೆಂಬು, ಕರಿಕೆ ಸಂಪಾಜೆ, ಕೊಡಗು ಗಡಿಗೆ ಹೊಂದಿಕೊಂಡಿರುವ ದ.ಕ ಜಿಲ್ಲೆಯ ಕಲ್ಲುಗುಂಡಿ, ಗೂನಡ್ಕ ಭಾಗದಲ್ಲೂ ಕಂಪಿಸಿದೆ ಎಂದು ತಿಳಿದು ಬಂದಿದೆ.

Read More

ಮಂಗಳೂರು: ಮಾವಿನಕಾಯಿ ಕೊಯ್ಯಲೆಂದು ಮರ ಏರಿದ ಯುವಕನೋರ್ವ ವಿದ್ಯುತ್ ಶಾಕ್ ತಗಲಿ ಸಾವನ್ನಪ್ಪಿರುವ ದಾರುಣ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಜಲಾಲ್ ಬಾಗ್ ನಲ್ಲಿ ಶುಕ್ರವಾರ ಸಂಜೆ ವೇಳೆ ಸಂಭವಿಸಿದೆ.ಮಹಮ್ಮದ್ ಇಲಿಯಾಸ್ (21) ಮೃತ ಯುವಕನಾಗಿದ್ದಾನೆ . ಸಂಜೆ ವೇಳೆ ಮನೆ ಸಮೀಪದ ಕಾಂಪೌಂಡಿನಲ್ಲಿರುವ ಮಾವಿನಮರಕ್ಕೆ ಕಾಯಿ ಕೀಳಲೆಂದು ತೆರಳಿದ ಸಂದರ್ಭ ಘಟನೆ ನಡೆದಿದೆ.ಮಾವಿನ ಕಾಯಿ ಕೀಳಲು ಬಳಸುತ್ತಿದ್ದ ಕೋಲಿನ ಕಬ್ಬಿಣದ ಕೊಕ್ಕೆಗೆ ಮರದ ಕೊಂಬೆಗಳ ಮೂಲಕ ಹಾದು ಹೋಗಿದ್ದ  ವಿದ್ಯುತ್ ತಂತಿಗೆ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

Read More

ಕಾಸರಗೋಡು : ಮನೆಯೊಂದಕ್ಕೆ ನುಗ್ಗಿ ಮನೆಯವರ ಪ್ರಜ್ಞೆ ತಪ್ಪಿಸಿ 30 ಪವನ್ ಚಿನ್ನಾಭರಣ ಹಾಗೂ ನಾಲ್ಕು ಲಕ್ಷ ರೂ. ಕಳವು ಗೈದ ಘಟನೆ ಬೇಕಲ ಠಾಣಾ ವ್ಯಾಪ್ತಿಯ ಪೂಚ ಕ್ಕಾಡ್ ನಲ್ಲಿ ನಡೆದಿದೆ. ಪೂಚಕ್ಕಾಡ್ ಮುನೀರ್ ಎಂಬವರ ಮನೆಯ ಮೇಲಂತಸ್ತಿನ ಕಿಟಿಕಿ ಸರಳು ಮುರಿದು ಕಳ್ಳರು ಒಳನುಗ್ಗಿದ್ದು, ಕಪಾಟಿನಲ್ಲಿ ಇರಿಸಲಾಗಿದ್ದ ಚಿನಾಭರಣ ಮತ್ತು ನಗದು ಕಳವು ಮಾಡಿದ್ದಾರೆ. ಮುನೀರ್ ಹಾಗೂ ಮನೆಯವರು ಮನೆಯಲ್ಲಿ ಮಲಗಿದ್ದು, ಬೆಳಿಗ್ಗೆ ತಡವಾಗಿ ಎಚ್ಚೆತ್ತಿದ್ದು, ಈ ಸಂದರ್ಭದಲ್ಲಿ ಕೃತ್ಯ ಬೆಳಕಿಗೆ ಬಂದಿದೆ. ಕಳ್ಳರು ಪ್ರಜ್ಞೆ ತಪ್ಪಿಸುವ ರಾಸಾಯನಿಕ ವಸ್ತು ಸಿಂಪಡಿಸಿರಬಹುದು ಎಂದು ಶಂಕಿಸಲಾಗಿದೆ. ಸಾಮಾನ್ಯ ವಾಗಿ ಮುನೀರ್ ಮುಂಜಾನೆ 4 ಗಂಟೆಗೆ ಏಳುತ್ತಿದ್ದು, ಇಂದು ಬೆಳಿಗ್ಗೆ ಎಂಟು ಗಂಟೆಗೆ ಎಚ್ಚರವಾಗಿದೆ. ಇದರಿಂದ ಪ್ರಜ್ಞೆ ತಪ್ಪಿಸುವ ರಾಸಾಯನಿಕ ಸ್ಪ್ರೇ ಮಾಡಿ ಕಳ್ಳರು ಕೃತ್ಯ ನಡೆಸಿರಬಹುದು ಎಂದು ಸಂಶಯಿಸಲಾಗಿದೆ. ಇನ್ನು ಬೇಕಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Read More

ಉಳ್ಳಾಲ: ಕಳೆದೆರಡು ದಿವಸಗಳಿಂದ ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು ಸೋಮೇಶ್ವರ, ಉಚ್ಚಿಲದ ಬಟ್ಟಂಪಾಡಿಯಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು ಕಳೆದ ವರುಷ ಭಾಗಶಃ ಅಳಿದುಹೋಗಿ ಉಳಿದಿದ್ದ ರಸ್ತೆಯು ಸಮುದ್ರ ಪಾಲಾಗಿದೆ. ಸೋಮೇಶ್ವರ, ಉಚ್ಚಿಲ ಪ್ರದೇಶಗಳು ಕಳೆದ ಐದು ವರುಷಗಳಿಂದಲೂ ಕಡಲ್ಕೊರೆತ ಸಮಸ್ಯೆಯಿಂದ ನಲುಗುತ್ತಿದೆ.ಈ ಪ್ರದೇಶದಲ್ಲಿ ನಡೆದ ಅವೈಜ್ಞಾನಿಕ ಬ್ರೇಕ್ ವಾಟರ್ ಕಾಮಗಾರಿಯು ಯಾವುದೇ ಪರಿಣಾಮ ಬೀರಿಲ್ಲ. ಕಳೆದ ಕೆಲ ದಿನಗಳ ಹಿಂದಷ್ಟೇ ಬಂದರು ಸಚಿವ ಎಸ್.ಅಂಗಾರ ಅವರು ಇಲ್ಲಿಗೆ ಭೇಟಿ ನೀಡಿ ಕಾಸರಗೋಡಿನ ನೆಲ್ಲಿಕುನ್ನು ಮಾದರಿಯ ಸೀ ಬ್ರೇಕ್ ವಾಟರ್ ಕಾಮಗಾರಿಯನ್ನ ಇಲ್ಲಿಯೂ ನಡೆಸುವ ಬಗ್ಗೆ ಅಧ್ಯಯನ ಮತ್ತು ಸ್ಥಳ ಪರಿಶೀಲನೆ ನಡೆಸಿದ್ದರು. ಸರಕಾರವು ಸುಖಾ ಸಮ್ಮನೆ ವ್ಯರ್ಥ ಯೋಜನೆಗಳಿಗೆ ಹಣ ಪೋಲು ಮಾಡದೇ ಆದಷ್ಟು ಶೀಘ್ರದಲ್ಲಿ ಶಾಶ್ವತ ಕಡಲ್ಕೊರೆತ ತಡೆ ಕಾಮಗಾರಿ ನಡೆಸುವಂತೆ ಸ್ಥಳೀಯ ಮೀನುಗಾರ ಸುಖೇಶ್ ಉಚ್ಚಿಲ್ ಆಗ್ರಹಿಸಿದ್ದಾರೆ.

Read More

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿ ನೀಡಿದ್ದ ಹಿನ್ನೆಲೆಯಲ್ಲಿ ಕಳಪೆ ರಸ್ತೆಗಳನ್ನು ದುರಸ್ಥಿತಿಗೊಳಿಸಿದರ ಬಗ್ಗೆ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ (ಬೇಸ್) ಬಳಿಯ ರಸ್ತೆಯನ್ನು ಮೋದಿ ಅವರು ಬೇಸ್ ಕ್ಯಾಂಪಸ್ ಅನ್ನು ಉದ್ಘಾಟಿಸಲು ಭೇಟಿ ನೀಡುವ ಕೆಲವು ದಿನಗಳಷ್ಟೇ ರಸ್ತೆಯನ್ನು ಸರಿ ಮಾಡಿದ್ದರು. ಇದೀಗ ಕಳಪೆ ಕಾಮಗಾರಿಯ ಬಗ್ಗೆ ತನಿಖೆ ನಡೆಸುವಂತೆ, ಹಾಗೂ ತಪ್ಪಿಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ಮೂಲಗಳ ಪ್ರಕಾರ, ನೀರಿನ ಪೈಪ್ ಸೋರಿಕೆಯಿಂದಾಗಿ ರಸ್ತೆ ಕುಸಿದಿದೆ ಎಂದು ತಿಳಿದುಬಂದಿದೆ. ಬೊಮ್ಮಾಯಿ ಅವರ ದೆಹಲಿ ಭೇಟಿಯು ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆಗಳ ಹೊಸ ಊಹಾಪೋಹಗಳಿಗೆ ಕಾರಣವಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಮಂಗಳವಾರ ಮೋದಿ ಅವರ ನಗರಕ್ಕೆ ಭೇಟಿ ನೀಡುವ ಮುನ್ನ ಸುಮಾರು 14 ಕಿ.ಮೀ ರಸ್ತೆಗಳನ್ನು ಸರಿಪಡಿಸಲು ಹಗಲಿರುಳು ಶ್ರಮಿಸಿದ್ದಾರೆ.ಇನ್ನು ಪ್ರಧಾನಿ ನರೇಂದ್ರ ಮೋದಿ…

Read More