Author: main-admin

ನವದೆಹಲಿ: ಬೇರೆ ಧರ್ಮಕ್ಕೆ ಮತಾಂತರಗೊಂಡವರಿಗೆ ಪರಿಶಿಷ್ಟ ಜಾತಿಯ (ಎಸ್‌ಸಿ) ಸ್ಥಾನಮಾನ ಅನ್ವಯವಾಗುವುದಿಲ್ಲ ಎಂಬ ಐತಿಹಾಸಿಕ ತೀರ್ಪನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ನೀಡಿದೆ. ಹಿಂದೂ, ಸಿಖ್‌ ಅಥವಾ ಬೌದ್ಧ ಧರ್ಮದವರು ಎಸ್‌ಸಿ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ. ಆದರೆ ಕ್ರೈಸ್ತ ಸೇರಿದಂತೆ ಬೇರೆ ಯಾವುದೇ ಧರ್ಮಕ್ಕೆ ಮತಾಂತರವಾದರೆ ಅವರು ಎಸ್‌ಸಿ ಸ್ಥಾನಮಾನ ಕಳೆದುಕೊಳ್ಳುತ್ತಾರೆ ಎಂದು ಭಾರಿ ಮಹತ್ವದ ತೀರ್ಪಿನಲ್ಲಿ ಹೇಳಲಾಗಿದೆ. ನ್ಯಾ. ಪಿ.ಕೆ.ಮಿಶ್ರಾ ಮತ್ತು ನ್ಯಾ.ಎನ್‌.ವಿ.ಅಂಜಾರಿಯ ಅವರನ್ನೊಳಗೊಂಡ ನ್ಯಾಯಪೀಠ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಗೆ ಪರಿಶಿಷ್ಟ ಜಾತಿಯವರ ಸೌಲಭ್ಯಗಳನ್ನು ನೀಡಲು ಸಾಧ್ಯವಿಲ್ಲ ಎಂದು ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ. ಆಂಧ್ರ ಪ್ರದೇಶದ ಹೈಕೋರ್ಟ್‌ ಕಳೆದ ವರ್ಷ ಮೇ ತಿಂಗಳಲ್ಲಿ ನೀಡಿದ ತೀರ್ಪಿನ ವಿರುದ್ಧ ಪಾದ್ರಿ ಚಿಂತಾಡ ಆನಂದ್‌ ಎಂಬವರು ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆಗೊಳಪಡಿಸಿ ನ್ಯಾಯಪೀಠ ಈ ತೀರ್ಪು ನೀಡಿದೆ. ಜಾತಿ ಆಧಾರಿತ ತಾರತಮ್ಯ ಮತ್ತು ನಿಂದನೆಯನ್ನು ಸಮಾಜದಲ್ಲಿ ಎದುರಿಸುತ್ತಿದ್ದೇನೆ ಎಂದು ಪಾದ್ರಿ ಚಿಂತಾಡ ಆನಂದ್‌ ಅರ್ಜಿಯಲ್ಲಿ ವಾದಿಸಿದ್ದರು. ಒಬ್ಬ ವ್ಯಕ್ತಿ ಕ್ರಿಶ್ಚಿಯನ್‌ ಧರ್ಮಕ್ಕೆ ಮತಾಂತರಗೊಂಡು ಆ ಧರ್ಮದ ಆಚಾರ…

Read More

ಬಂಟ್ವಾಳ : ಉಳ್ಳಾಲ ತಾಲೂಕಿನ ಸಜಿಪಪಡು ಗ್ರಾಮದ ತಲೆಮೊಗರು ಮಸೀದಿಯ ವಿಚಾರಕ್ಕೆ ಸಂಬಂಧಿಸಿದಂತೆ ಭಾರಿ ಮಾರಾಮಾರಿ ನಡೆದಿದ್ದು, ಕೆಲವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಈ ಹೊಡೆದಾಟದ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ. ಮೊದಲ ಪ್ರಕರಣದಲ್ಲಿ ಸಜಿಪಪಡು ನಿವಾಸಿ ಅಬ್ದುಲ್ ನವಾಝ್ (42) ಎಂಬವರು ನೀಡಿದ ದೂರಿನಂತೆ ಮಾರ್ಚ್ 22ರಂದು ಬೆಳಗ್ಗೆ ಇವರು ಮತ್ತು ಅವರ ಸಂಬಂಧಿ ದಾವೂದ್ ಜೊತೆಯಲ್ಲಿ ತಲೆಮೊಗರು ಮಸೀದಿಯಿಂದ ಬರುತ್ತಿರುವಾಗ ಮಸೀದಿಗೆ ಸಂಬಂಧಿಸಿದ ಕಟ್ಟಡದಲ್ಲಿರುವ ಶೌಕತ್ ಎಂಬಾತನ ಅಂಗಡಿಯ ಬಳಿ ಆರೋಪಿಗಳಾದ ಶೌಕತ್, ಇಸಾಕ್, ಶಫೀಕ್, ಯಾಕೂಬ್, ಮಹಮ್ಮದ್ ಮುಸ್ತಫಾ, ನಾಸಿರ್ ಹಾಗೂ ನಿಝಾಲ್ ಎಂಬವರು ಗುಂಪು ಕಟ್ಟಿಕೊಂಡು ನಿಂತಿದ್ದು, ನವಾಝ್ ಹಾಗೂ ದಾವೂದ್ ಸ್ಥಳಕ್ಕೆ ಬಂದಾಗ ಆರೋಪಿಗಳು ಮಸೀದಿಯ ವಿಚಾರದಲ್ಲಿ ತಕರಾರು ತೆಗೆದು ಅವಾಚ್ಯವಾಗಿ ನಿಂದಿಸಿ, ಕತ್ತಿ ಹಾಗೂ ದೊಣ್ಣೆಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾರೆ. ಹಲ್ಲೆಯಿಂದ ಗಾಯಗೊಂಡ ನವಾಝ್…

Read More

ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ನಗರ ಪೊಲೀಸ್ ಠಾಣಾ ಅ.ಕ್ರ :117/2019 ಹಾಗೂ ಅ.ಕ್ರ :111/2020 ಪ್ರಕರಣಗಳಿಗೆ ಸಂಬಂಧಿಸಿದಂತೆ, ಬಂಟ್ವಾಳ ACJ & JMFC ನ್ಯಾಯಾಲಯಕ್ಕೆ ಹಲವು ಬಾರಿ ಹಾಜರಾಗದೇ ತಪ್ಪಿಸಿಕೊಂಡಿದ್ದ ಬಂಟ್ವಾಳ ವೀರಕಂಬ ನಿವಾಸಿ ಮಹಮ್ಮದ್ ಅಶ್ರಫ್ (38) ಅವರನ್ನು ಬಂಧಿಸಲಾಗಿದೆ. ಆರೋಪಿತನ ವಿರುದ್ಧ ಈಗಾಗಲೇ 10ಕ್ಕೂ ಹೆಚ್ಚು ಬಾರಿ ವಾರಂಟ್ ಜಾರಿಯಾಗಿದ್ದರೂ, ಆತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಇದೀಗ ಬಂಟ್ವಾಳ ನಗರ ಪೊಲೀಸ್ ಠಾಣೆಯ ASI ಸುಜು ಹಾಗೂ CHC 665 ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಕ್ರಮ ಕೈಗೊಳ್ಳಲಾಗಿದೆ.

Read More

ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷ ಪ್ರಚೋದಿಸುವ ಉದ್ದೇಶದಿಂದ ತಿರುಚಿದ ವಿಡಿಯೋ ಹಂಚಿದ ಆರೋಪಿಯನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. 2025ರ ಅಕ್ಟೋಬರ್ ತಿಂಗಳಲ್ಲಿ “ನಝೀರ ಮಂಗಳೂರು” ಎಂಬ ಫೇಸ್‌ಬುಕ್ ಖಾತೆಯಿಂದ AI ತಂತ್ರಜ್ಞಾನದ ಸಹಾಯದಿಂದ ತಿರುಚಿದ ವಿಡಿಯೋವನ್ನು ಶೇರ್ ಮಾಡಲಾಗಿತ್ತು. ಈ ವಿಡಿಯೋ ಮೂಲಕ ಸಮಾಜದಲ್ಲಿ ಕೋಮು ದ್ವೇಷ ಹುಟ್ಟುಹಾಕಲು ಪ್ರಚೋದನೆ ನೀಡಲಾಗಿದೆ ಎಂಬ ಆರೋಪದ ಮೇಲೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS)ಯ ಕಲಂ 196, 353(1), 351(2) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರ ತನಿಖೆ ವೇಳೆ “ನಝೀರ ಮಂಗಳೂರು” ಖಾತೆಯನ್ನು ಬಳಸುತ್ತಿದ್ದ ವ್ಯಕ್ತಿ ಮಹಮ್ಮದ್ ರಫೀಕ್ (38) ಎಂದು ಗುರುತಿಸಲಾಗಿದೆ. ಆತ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ.ಆರೋಪಿಯನ್ನು ಮಾರ್ಚ್ 22, 2026ರಂದು ಬೆಂಗಳೂರುನಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಮತ್ತು…

Read More

ಮಂಗಳೂರು ನಗರದಲ್ಲಿ ನಿಷೇಧಿತ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಲಕ್ಷಾಂತರ ಮೌಲ್ಯದ ಮಾದಕ ವಸ್ತು ಸೇರಿದಂತೆ ವಿವಿಧ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪಂಪ್‌ವೆಲ್–ಎಕ್ಕೂರು ಪರಿಸರದಲ್ಲಿ ಆಟೋ ರಿಕ್ಷಾದ ಮೂಲಕ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ, ಸಿಸಿಬಿ ಪೊಲೀಸರು ಮಾರ್ಚ್ 22ರಂದು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದರು. ಬಂಧಿತರನ್ನು ಹೈದರ್ @ ಹೈದರ್ ಆಲಿ (53), ಮೊಹಮ್ಮದ್ ಸಜಾದ್ (29) ಹಾಗೂ ಜೈಸನ್ ಮೆನೆಜಸ್ (26) ಎಂದು ಗುರುತಿಸಲಾಗಿದೆ. ಬಂಧಿತರಿಂದ 2,50,000 ಮೌಲ್ಯದ 26 ಗ್ರಾಂ ಎಂಡಿಎಂಎ ಮಾದಕ ವಸ್ತು, ರೂ.37,000 ನಗದು, 5 ಮೊಬೈಲ್ ಫೋನ್‌ಗಳು, ತೂಕಮಾಪನ ಯಂತ್ರ ಹಾಗೂ KA-19-AC-2245 ಸಂಖ್ಯೆಯ ಆಟೋ ರಿಕ್ಷಾ ಸೇರಿದಂತೆ ಒಟ್ಟು ರೂ.4,37,500 ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.   ಪ್ರಮುಖ…

Read More

ಬೆಂಗಳೂರು: ಮಹಿಳೆಯರ ಮೇಲೆ ಮೂಡುಬಿದರೆ ಪೊಲೀಸ್ ಇನ್‌ಸ್ಪೆಕ್ಟರ್ ದೌರ್ಜನ್ಯ ಎಸಗಿರುವ ಆರೋಪ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂಡುಬಿದರೆ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಹಾಗೂ ಸಂತ್ರಸ್ತೆಯ ಭೇಟಿ ಮಾಡಿದ್ದಾರೆ. ಪ್ರಕರಣಕ್ಕೆ‌ ಸಂಬಂಧಿಸಿದಂತೆ ಅನೇಕ ವಿಚಾರಗಳ ಬಗ್ಗೆ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವಂತೆ ಡಿಜಿಪಿ ಅವರಿಗೆ ಸೂಚಿಸಿದ್ದೇನೆ ಎಂದರು. ಮೂಡುಬಿದರೆ ಪೊಲೀಸ್ ಇನ್‌ಸ್ಪೆಕ್ಟರ್ ಮೇಲೆ ಆರೋಪ ಬಂದ ಬಳಿಕ ಅಮಾನತು ಮಾಡುವ ಮೂಲಕ ತಕ್ಷಣದ ಕ್ರಮ‌ಕೈಗೊಳ್ಳಲಾಗಿದೆ. ವರದಿ ನೀಡುವಂತೆ ಸೂಚಿಸಲಾಗಿದ್ದು, ಕೊಡುತ್ತಾರೆ. ಇನ್ನೂ ಅನೇಕ ವಿಚಾರಗಳನ್ನು ಕೇಳಿದ ಮೇಲೆ ಹೆಚ್ಚಿನ ತನಿಖೆ ಮಾಡಬೇಕೆಂದು ಸಿಐಡಿ ತನಿಖೆಗೆ ವಹಿಸಲಾಗಿದೆ. ತನಿಖೆ ಬಳಿಕ ಸತ್ಯಾಂಶ ಹೊರಬರುತ್ತದೆ. ಇನ್ನು ಎಷ್ಟು ಜನ ಸಂತ್ರಸ್ತರಿದ್ದಾರೆ ಎಂಬುದು ತನಿಖೆ ವೇಳೆ ಗೊತ್ತಾಗಲಿದೆ.‌ ಇದಕ್ಕಾಗಿಯೇ ಸಿಐಡಿ…

Read More

ಪುತ್ತೂರು: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದು, ಈ ಹಿನ್ನೆಲೆಯಲ್ಲಿ ಮತ್ತೊಂದು ಪ್ರಕರಣವನ್ನು ದಾಖಲಿಸಿದ್ದಾರೆ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ.169/2018ರ ಕಲಂ 323, 504, 506, 406, 424 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿದ್ದ ಕೇರಳದ ಮಲಪ್ಪುರಂ ನಿವಾಸಿ ನಿಖಿಲ್ ಕೆ (36) ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಈತನನ್ನು ಪುತ್ತೂರು ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಜನಾರ್ದನ ಕೆ.ಎಂ ಹಾಗೂ ಸಿಬ್ಬಂದಿ ತಂಡ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಶಿಲುವೈಪುರದಲ್ಲಿ ಮಾ.21ರಂದು ಪತ್ತೆಹಚ್ಚಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಆರೋಪಿ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಪಡೆದ ನಂತರವೂ ವಿಚಾರಣೆಗೆ ಹಾಜರಾಗದೆ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದ್ದ ಹಿನ್ನೆಲೆಯಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ.34/2026ರಡಿ ಕಲಂ 269 ಬಿಎನ್‌ಎಸ್ 2023ರಂತೆ ಮತ್ತೊಂದು ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ.

Read More

ಟ್ರೇಡಿಂಗ್ ಆ್ಯಪ್‌ನಲ್ಲಿ ಹೂಡಿಕೆ ಮಾಡುವ ನೆಪದಲ್ಲಿ ಮಹಿಳೆಯೊಬ್ಬರಿಂದ 11.75 ಲಕ್ಷ ರೂಪಾಯಿ ಆನ್‌ಲೈನ್ ಮೂಲಕ ವಂಚನೆ ನಡೆಸಿದ ಪ್ರಕರಣ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಟ್ರೇಡಿಂಗ್ ಕುರಿತು ತಿಳಿದುಕೊಳ್ಳುವ ಉದ್ದೇಶದಿಂದ ಸಹನಾ, ಒಂದು ಆ್ಯಪ್‌ ಅನ್ನು ಡೌನ್‌ಲೋಡ್ ಮಾಡಿಕೊಂಡಿದ್ದರು. ಸುಮಾರು 15 ದಿನಗಳ ಬಳಿಕ ಅಪರಿಚಿತ ವ್ಯಕ್ತಿ ಕರೆ ಮಾಡಿ ಅವರನ್ನು ವಾಟ್ಸಾಪ್ ಗುಂಪಿಗೆ ಸೇರಿಸಿದ್ದಾನೆ. ಆ ಗುಂಪಿನಲ್ಲಿ ಲಿಂಕ್ ಕಳುಹಿಸಿ, ಕೆವೈಸಿ ವಿವರಗಳನ್ನು ಭರ್ತಿ ಮಾಡಲು ಸೂಚಿಸಲಾಗಿದೆ. ಬಳಿಕ ಟ್ರೆಡಿಂಗ್ ಮೂಲಕ ಲಾಭ ದೊರೆಯುತ್ತದೆ ಎಂದು ನಂಬಿಸಿ, ಆರೋಪಿಗಳು ನೀಡಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಸಹನಾ ಅವರು ಮಾರ್ಚ್ 6ರಿಂದ 14ರವರೆಗೆ ಹಂತ ಹಂತವಾಗಿ ಒಟ್ಟು 11,75,000 ರೂಪಾಯಿ ಹಣ ವರ್ಗಾವಣೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಆದರೆ ಹಣ ವರ್ಗಾವಣೆ ಮಾಡಿದ ಬಳಿಕ ಆರೋಪಿಗಳು ಯಾವುದೇ ಲಾಭಾಂಶ ನೀಡದೇ, ಹೂಡಿಕೆ ಮಾಡಿದ ಹಣವನ್ನೂ ಹಿಂತಿರುಗಿಸದೇ ಮೋಸ ಮಾಡಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಉಡುಪಿ ಸೆನ್…

Read More

ಹುಬ್ಬಳ್ಳಿಯಲ್ಲಿ ರಿಲ್ಸ್ ಹುಚ್ಚಾಟಕ್ಕೆ ಬಾಲಕ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಾಲಕನ ಸಾವಿಗೆ ಕಾರಣರಾದ ಇಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹುಬ್ಬಳ್ಳಿ ವಿದ್ಯಾನಗರ ಠಾಣೆ ಪೋಲಿಸರಿಂದ ನಾಗರಾಜ್ ಎನ್ನುವ ವ್ಯಕ್ತಿಯನ್ನು ಬಂಧಿಸಲಾಗಿದೆ. ಅಪ್ರಾಪ್ತ ಮಗನ ಕೈಯಲ್ಲಿ ಕಾರು ಕೊಟ್ಟು ಇದೀಗ ನಾಗರಾಜ್ ಜೈಲು ಸೇರಿದ್ದಾನೆ. ಕಾರು ಮಾಲಿಕ ನಾಗರಾಜ್ ರಾಯ್ಕರ್ ಸೇರಿ ಇಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆಕ್ಷನ್ ರಿಲ್ಸ್ ವೇಳೆ 15 ವರ್ಷದ ನಮಿಷ ಸಂಗಳದ ಮೃತಪಟ್ಟಿದ್ದ. ಆಡಿ ಕಾರು ಡಿಕ್ಕಿಯಾಗಿ ಸ್ಕೂಟಿಯಲ್ಲಿ ಇದ್ದ ನಮಿಷ ಮೃತಪಟ್ಟಿದ್ದ. ಹುಬ್ಬಳ್ಳಿ ನಗರದ ಶೇಜವಾಡಕರ್ ಪ್ಲಾಟ್ ನಲ್ಲಿ ಈ ಒಂದು ಘಟನೆ ನಡೆದಿತ್ತು. ಉತ್ತರ ಪ್ರದೇಶದಲ್ಲಿ ನಾಗರಾಜ ರಾಯ್ಕರ್ ಈ ಒಂದು ಕಾರು ಖರೀದಿಸಿದ್ದ. ವಶಕ್ಕೆ ಪಡೆದಿದ್ದ ಬಾಲಕನನ್ನು ಬಾಲ ಮಂದಿರಕ್ಕೆ ಪೊಲೀಸರು ಕಳುಹಿಸಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು.

Read More

ಮಂಗಳೂರು : ಮೂಡುಬಿದಿರೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್ ಬಿ ಜಿ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ತನಿಖೆ ನಡೆಯುತ್ತಿರುವಾಗಲೇ ಮತ್ತೆ ಸಂಕಷ್ಟ ಶುರುವಾಗಿದೆ. ಮಹಿಳೆ ಜೊತೆ ಅಸಭ್ಯ ರೀತಿಯಲ್ಲಿ ವರ್ತಿಸಿದ ವಿಡಿಯೋ ವೈರಲ್ ಆಗಿದೆ ಈ ವಿಷಯದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಕೋರಿ ಬೆಂಗಳೂರಿನಲ್ಲಿ ಮೂವರು ಮಹಿಳೆಯರು ಮುಖ್ಯಮಂತ್ರಿ, ಗೃಹ ಸಚಿವರು, ಪೊಲೀಸ್ ಮಹಾನಿರ್ದೇಶಕರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದರು.ಇದೀಗ ವೇಣೂರು ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಮೂಡಬಿದ್ರೆ ಠಾಣೆಯ ಪೊಲೀಸ್ ನಿರೀಕ್ಷಕರಾಗಿದ್ದ ಸಂದೇಶ್ ಪಿ.ಜಿ ವಿರುದ್ದ ವೇಣೂರು ಠಾಣಾ ವ್ಯಾಪ್ತಿಯ ಅಳದಂಗಡಿ ನಿವಾಸಿ ಸಂತ್ರಸ್ಥ ಮಹಿಳೆ ಅತ್ಯಾಚಾರ ಆರೋಪದ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನನ್ವಯ ಮಾ 22ರಂದು ರಾತ್ರಿ 02-00 ಗಂಟೆಗೆ ವೇಣೂರು ಪೊಲೀಸ್ ಠಾಣಾ ಅಕ್ರ 22/2026 ಕಲಂ 376(2)(a)(1),376(2)(n),384,506 ಐಪಿಸಿ ಪ್ರಕರಣ ದಾಖಲಾಗಿರುವುದು. ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಳದಂಗಡಿ ನಿವಾಸಿ…

Read More