ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮುಖಂಡರು ಸ್ವಾಗತಿಸಿದರು. ಈ ವೇಳೆ ಮುಖ್ಯಮಂತ್ರಿ ಪೊಲೀಸರಿಂದ ಗೌರವ ರಕ್ಷೆ ಸ್ವೀಕರಿಸಿದರು. ಗೃಹ ಸಚಿವ ಡಾ.ಜಿ.ಪರಮೇಶ್ವರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಸಚಿವ ಬಿ.ರಮಾನಾಥ ರೈ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಐವನ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು. ಶಿವಗಿರಿ ಮಠ, ವರ್ಕಲ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠ, ಮಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯ ಕ್ಯಾಂಪಸ್ ನಲ್ಲಿ ನಡೆಯಲಿರುವ ಶ್ರೀ ನಾರಾಯಣ ಗುರು-ಗಾಂಧೀಜಿ ಸಂವಾದ ಶತಮಾನೋತ್ಸವದ ಪ್ರಯುಕ್ತ ಆಯೋಜಿಸಿರುವ ಶ್ರೀ ಮಹಾಗುರುವಿನ ಮಹಾ ಸಮಾಧಿ ಶತಾಬ್ದಿ ಸರ್ವಮತ ಸಮ್ಮೇಳನ ಶತಮಾನೋತ್ಸವ ಕಾರ್ಯಕ್ರಮ ಸಹಿತ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಮುಖ್ಯಮಂತ್ರಿ ಮಂಗಳೂರಿಗೆ ಆಗಮಿಸಿದ್ದಾರೆ.
Author: main-admin
ಮಂಗಳೂರು: ದ.ಕ. ಜಿಲ್ಲಾಡಳಿತವು, ಸ್ಥಳೀಯ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ, ಸಾಂಸ್ಕೃತಿಕ, ಕ್ರೀಡಾ ಮತ್ತು ಮನರಂಜನಾ ಚಟುವಟಿಕೆಗಳ ಸಮಾಗಮವಾದ ‘ಕರಾವಳಿ ಉತ್ಸವ 2025-26’ ಅನ್ನು ಡಿ.20ರಿಂದ ಜ.4ರವರೆಗೆ ಆಯೋಜಿಸಲು ಸಜ್ಜಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿ ಉತ್ಸವ ಮೈದಾನ, ಕದ್ರಿ ಪಾರ್ಕ್ ಮತ್ತು ನಗರದ ಕಡಲತೀರಗಳಲ್ಲಿ ವಿಜೃಂಭಣೆಯಿಂದ ಜರುಗಲಿದೆ ಎಂದು ಅವರು ಹೇಳಿದರು. ಡಿ.20ರಂದು ಸಭಾಧ್ಯಕ್ಷರು, ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಜಿಲ್ಲೆಯ ಶಾಸಕರು, ವಿಧಾನ ಪರಿಷತ್ನ ಶಾಸಕರು, ವಿವಿಧ ಅಕಾಡಮಿ, ನಿಗಮ ಮತ್ತು ಮಂಡಳಿಗಳ ಅಧ್ಯಕ್ಷರ ಉಪಸ್ಥಿತಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಕರಾವಳಿ ಉತ್ಸವ ಮೈದಾನದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ ಎಂದು ವಿವರಿಸಿದರು. ಕರಾವಳಿ ಉತ್ಸವ ಮೈದಾನದಲ್ಲಿ ವಿವಿಧ ಮಳಿಗೆಗಳು, ಪ್ರದರ್ಶನಗಳು ಮತ್ತು ಅಮ್ಯೂಸ್ಮೆಂಟ್ ಪಾರ್ಕ್ ಸಾರ್ವಜನಿಕರಿಗಾಗಿ ಲಭ್ಯವಿರಲಿದೆ. ಡಿ.20ರಿಂದ ಜ.4ರವರೆಗೆ ಪ್ರತೀ ಶನಿವಾರ ಮತ್ತು ರವಿವಾರ ಕರಾವಳಿ ಉತ್ಸವ ಮೈದಾನದ ವೇದಿಕೆಯಲ್ಲಿ ಕರಾವಳಿಯ ಕಲೆ ಮತ್ತು ಸಾಂಸ್ಕೃತಿಕ ಪ್ರದರ್ಶನಗಳನ್ನು ಆಯೋಜಿಸಲಾಗಿದೆ. ಜ.3 ಮತ್ತು 4ರಂದು…
ಉಡುಪಿಯ ಒಳಕಾಡು ಮನೆಯೊಂದರಿಂದ ಚಿನ್ನಾಭರಣ ಕಳವುಗೈದ ಆರೋಪಿಯನ್ನು ಉಡುಪಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕುಕ್ಕಿಕಟ್ಟೆ ನಿವಾಸಿ ಸುಕೇಶ್ ನಾಯ್ಕ್ (37) ಬಂಧಿತ ಆರೋಪಿ. ಡಿ.30ರಂದು ಶೈಲಾ ವಿಲ್ಹೆಲ್ ಮೀನಾ ಎಂಬವರ ಮನೆಯಲ್ಲಿ ಸುಮಾರು 548.31 ಗ್ರಾಂ ಚಿನ್ನಾಭರಣ ಹಾಗೂ ಮೊಬೈಲ್ ಫೋನ್ ನ್ನು ಕಳವು ಮಾಡಲಾಗಿತ್ತು. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿಯನ್ನು ಉಡುಪಿ ನಗರದ ಕಿನಿಮೂಲ್ಕಿ ಹಿರೇನ್ ಬಾರ್ ಬಳಿ ಬಂಧಿಸಲಾಗಿದೆ. ಬಂಧಿತನಿಂದ 65,79,720 ರೂ ಮೌಲ್ಯದ ಸೊತ್ತುಗಳನ್ನು ಸ್ವಾಧಿನಪಡಿಸಿಕೊಳ್ಳಲಾಗಿದೆ. ಆರೋಪಿಯ ವಿರುದ್ದ ಈಗಾಗಲೇ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 11 ಮನೆಕಳ್ಳತನ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ ಉಡುಪಿ ನಗರ ಠಾಣೆಯಲ್ಲಿ 5 ಪ್ರಕರಣಗಳು ದಾಖಲಾಗಿದ್ದು 4 ಪ್ರಕರಣಗಳಲ್ಲಿ ಶಿಕ್ಷೆಯಾಗಿರುತ್ತದೆ. ಹಿರಿಯಡ್ಕ ಠಾಣೆಯಲ್ಲಿ 3 ಪ್ರಕರಣಗಳು ದಾಖಲಾಗಿದ್ದು ಅದರಲ್ಲಿ 1 ಪ್ರಕರಣದಲ್ಲಿ ಶಿಕ್ಷೆಯಾಗಿರುತ್ತದೆ, ಬ್ರಹ್ಮಾವರ ಠಾಣೆಯಲ್ಲಿ 2 ಪ್ರಕರಣ ದಾಖಲಾಗಿರುತ್ತದೆ ಹಾಗೂ ಮಣಿಪಾಲ ಠಾಣೆಯಲ್ಲಿ 1 ಪ್ರಕರಣವು ನ್ಯಾಯಲಯದ ವಿಚಾರಣೆಯಲ್ಲಿರುತ್ತದೆ.
ಶಿವಮೊಗ್ಗ: ಕೆಎಸ್ಆರ್ಟಿಸಿ ಬಸ್ಸಿನ ಚಕ್ರಕ್ಕೆ ಸಿಲುಕಿ ನಾಡಬಾಂಬ್ ಸ್ಫೋಟಗೊಂಡ ಘಟನೆ ಶಿಕಾರಿಪುರ ತಾಲೂಕಿನ ಹಿರೇಕಲವತ್ತಿ ಗ್ರಾಮದಲ್ಲಿ ನಡೆದಿದ್ದು, ರಾಜ್ಯವನ್ನೇ ಬೆಚ್ಚಿಬೀಳುವಂತೆ ಮಾಡಿದೆ. ಅಷ್ಟಕ್ಕೂ ಬಸ್ನಡಿ ಬಾಂಬ್ ಇಟ್ಟವರು ಯಾರು? ಇದರ ಹಿಂದಿನ ಉದ್ದೇಶವೇನು ಎಂಬ ಚರ್ಚೆ ಆರಂಭಗೊಂಡಿದೆ. ಬಸ್ ಮುಡಬ ಸಿದ್ದಾಪುರದಿಂದ ಶಿಕಾರಿಪುರಕ್ಕೆ ತೆರಳುತ್ತಿತ್ತು. ಈ ವೇಳೆ ಬಸ್ ಹಿರೇಕಲವತ್ತಿ ಗ್ರಾಮದ ಬಳಿ ಬರುತ್ತಿದ್ದಾಗ ಈ ಸ್ಫೋಟ ಸಂಭವಿಸಿದೆ. ಜೋರಾದ ಸ್ಫೋಟದ ಶಬ್ದದಿಂದ ಚಾಲಕ ನಿಯಂತ್ರಣ ಕಳೆದುಕೊಂಡಿದ್ದಾನೆ ಇದರಿಂದ ಪಕ್ಕದಲ್ಲಿದ್ದ ಟಿಸಿಗೆ (ವಿದ್ಯುತ್ ಪರಿವರ್ತಕಕ್ಕೆ) ಬಸ್ ಡಿಕ್ಕಿ ಹೊಡೆದಿದೆ. ಸ್ಫೋಟಕ್ಕೂ 5 ನಿಮಿಷಗಳ ಮುನ್ನ ಹಿಂದಿನ ನಿಲ್ದಾಣದಲ್ಲಿ 45 ವಿದ್ಯಾರ್ಥಿಗಳು ಬಸ್ನಿಂದ ಇಳಿದಿದ್ದರು. ಇದರಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಸ್ಸಿನ ಟೈಯರ್ ಅಂಚಿಗೆ (ರಿಮ್ಗೆ) ನಾಡಬಾಂಬ್ ತಗುಲಿ ಸ್ಫೋಟಗೊಂಡಿದ್ದರಿಂದ ದುರಂತದ ಪ್ರಮಾಣ ಕಡಿಮೆ ಆಗಿದೆ. ಒಂದು ವೇಳೆ ಬಾಂಬ್ ಟೈಯರ್ಗಳ ನಡುವೆ ಅಥವಾ ಬಸ್ನ ಮುಖ್ಯ ಭಾಗದ ಅಡಿಯಲ್ಲಿ ಸ್ಫೋಟಗೊಂಡಿದ್ದರೆ, ಬಸ್ನಲ್ಲಿದ್ದ ಪ್ರಯಾಣಿಕರಿಗೆ ಪ್ರಾಣಾಪಾಯ ಅಥವಾ…
ನವದೆಹಲಿ: ಆಧಾರ್ ಕಾರ್ಡ್ ಬಳಸಿ ಅಕ್ರಮವಾಗಿ ಸಿಮ್ ಖರೀದಿಸುವುದು, ಮೊಬೈಲ್ ಕಳ್ಳತನ ಆಗುವುದು, ಪ್ರತಿ ಮೊಬೈಲ್ಗೂ ನೀಡಲಾಗುವ ಅಂತರರಾಷ್ಟ್ರೀಯ ಮೊಬೈಲ್ ಗುರುತಿನ ಸಂಖ್ಯೆ (ಐಎಂಇಐ) ನಕಲು ಮಾಡುವುದು ಸೇರಿದಂತೆ ಹಲವು ವಂಚನೆಗಳಿಂದ ಜನರನ್ನು ರಕ್ಷಿಸುವ ಸಲುವಾಗಿ ಎಲ್ಲ ಮೊಬೈಲ್ಗಳಲ್ಲಿಯೂ ‘ಸಂಚಾರ್ ಸಾಥಿ’ ಆ್ಯಪ್ ಅಳವಡಿಕೆ (ಇನ್ಸ್ಟಾಲ್) ಮಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದೆ. ಈ ಸಂಬಂಧ ಭಾರತದ ಎಲ್ಲಾ ಮೊಬೈಲ್ ತಯಾರಕರಿಗೆ, ಮೊಬೈಲ್ ಸೆಟ್ಗಳನ್ನು ಆಮದು ಮಾಡಿಕೊಳ್ಳುವ ಕಂಪನಿಗಳಿಗೆ ದೂರಸಂಪರ್ಕ ಸಚಿವಾಲಯವು ನ.28ರಂದು ಕೆಲವು ನಿರ್ದೇಶನಗಳನ್ನು ನೀಡಿ ಆದೇಶ ಹೊರಡಿಸಿದೆ.‘ಭಾರತದಲ್ಲಿ ತಯಾರಾಗುವ ಅಥವಾ ಆಮದು ಮಾಡಿಕೊಳ್ಳಲಾಗುವ ಎಲ್ಲಾ ಮೊಬೈಲ್ಗಳಲ್ಲಿಯೂ ‘ಸಂಚಾರ್ ಸಾಥಿ’ ಆ್ಯಪ್ ಅನ್ನು ಮೊದಲೇ ಇನ್ ಸ್ಟಾಲ್ ಮಾಡಿರಬೇಕು. ಈಗಾಗಲೇ ಮಾರುಕಟ್ಟೆಯಲ್ಲಿರುವ (ಇನ್ನೂ ಖರೀದಿಯಾಗದ) ಮೊಬೈಲ್ಗಳಲ್ಲಿ ಮೊದಲ ಸಾಫ್ಟ್ವೇರ್ ಅಪ್ಡೇಟ್ ವೇಳೆ ಈ ಆ್ಯಪ್ ಅನ್ನು ಬಳಕೆದಾರರಿಗೆ ನೀಡಬೇಕು’ ಎಂದು ಸಚಿವಾಲಯ ಹೇಳಿದೆ. ‘ಈ ಆ್ಯಪ್ ಅನ್ನು ಮೊದಲೇ ‘ಇನ್ಸ್ಟಾಲ್’ ಮಾಡಿರುವ ಹೊಸ ಮೊಬೈಲ್ಗಳನ್ನು ‘ಸೆಟ್ಟಿಂಗ್’ ಮಾಡಿಕೊಳ್ಳುವಾಗಲೇ ಬಳಕೆದಾರರಿಗೆ ಈ…
ಮಂಗಳೂರು: ಕುದ್ರೋಳಿ ಗ್ರೀನ್ ಪಾರ್ಕ್ ಬಳಿ ಗಾಂಜಾ ಸೇವಿಸಿ ತೂರಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂದರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬಂದರು ಅನ್ಸಾರಿ ರೋಡ್ ನಿವಾಸಿ ಮಹಮ್ಮದ್ ಹನೀಫ್ (42) ಎಂದು ಗುರುತಿಸಲಾಗಿದೆ. ತೂರಾಡಿಕೊಂಡು ಹೋಗುತ್ತಿದ್ದ ಆತನನ್ನು ಗಸ್ತು ಕರ್ತವ್ಯದಲ್ಲಿದ್ದ ಪೊಲೀಸರು ವಿಚಾರಣೆ ನಡೆಸಿದಾಗ ಗಾಂಜಾ ಸೇವಿಸಿರುವುದಾಗಿ ಒಪ್ಪಿಕೊಂಡಿದ್ದಾನೆ. ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವನೆ ದೃಢಪಟ್ಟಿದೆ. ಆರೋಪಿ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ.
ಮಂಗಳೂರಿನ ನಾಗುರಿ ಮತ್ತು ಜಪ್ಪಿನಮೊಗರು ದೇವಸ್ಥಾನದ ಬಳಿ ಪಾರ್ಕ್ ಮಾಡಲಾಗಿದ್ದ ದ್ವಿಚಕ್ರ ವಾಹನವನ್ನು ಕಳವು ಮಾಡಿದ ಇಬ್ಬರು ಅಂತಾರಾಜ್ಯ ಕಳ್ಳರನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕೇರಳದ ವೆಲ್ಲಾಡ್ ಒಟ್ಟತ್ತಾಯಿ ನಿವಾಸಿ ಅಲೆಕ್ಸ್ ಡೊಮಿನಿಕ್ (25) ಮತ್ತು ಕಲ್ಲಿಕೋಟೆಯ ಕುರಚೂರು ನಿವಾಸಿ ಅಮಲ್ ಕೃಷ್ಣ (25) ಬಂಧಿತ ಆರೋಪಿಗಳು. ನ.14ರಂದು ಮಂಗಳೂರಿನ ನಾಗುರಿಯ ಬಸ್ ತಂಗುದಾಣ ಬಳಿ ಪಾರ್ಕ್ ಮಾಡಿದ್ದ ಸ್ಕೂಟರ್ ಹಾಗೂ ಜೆಪ್ಪಿನಮೊಗರು ಆದಿಮಾಯೆ ದೇವಸ್ಥಾನ ಬಳಿ ಪಾರ್ಕ್ ಮಾಡಿದ್ದ ಸ್ಕೂಟರ್ ಕಳವು ಮಾಡಿದ್ದರು. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನ.30ರಂದು ಮಂಗಳೂರಿಗೆ ಬರುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿAದ ಎರಡು ಸ್ಕೂಟರ್ ಹಾಗೂ ಕೃತ್ಯಕ್ಕೆ ಬಳಸಿದ 2 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಒಟ್ಟು ಮೊತ್ತ 1.23 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಆರೋಪಿ ಅಲೆಕ್ಸ್ ವಿರುದ್ದ ಕೇರಳದ ಅಲಕ್ಕೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು…
ಬಂಟ್ವಾಳ: ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ್ದ ರಮಾನಂದ ಅವರದು ಆತ್ಮಹತ್ಯೆ ಅಲ್ಲ, ಇದೊಂದು ವ್ಯವಸ್ಥಿತ ಕೊಲೆಯಾಗಿರುವ ಬಗ್ಗೆ ಸಂಶಯವಿದ್ದು,ಈ ಬಗ್ಗೆ ಸೂಕ್ತವಾದ ತನಿಖೆ ನಡೆಸಿ ನ್ಯಾಯ ಒದಗಿಸಿ ಕೊಡಿ ಎಂದು ತಾಯಿ ಜಾನಕಿ ಅವರು ವಾಮಂಜರೂರು ಪೋಲೀಸ್ ಠಾಣೆಗೆ ದೂರು ನೀಡಿದ ಘಟನೆ ನಡೆದಿದೆ. ಬರಿಮಾರು ಗ್ರಾಮದ ದೇಲಬೆಟ್ಟು ನಿವಾಸಿ ರಮಾನಂದ (25) ಎಂಬಾತ ನ.25 ರಂದು ನಾಪತ್ತೆಯಾಗಿದ್ದ , ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ನಾಪತ್ತೆ ದೂರು ಕೂಡ ದಾಖಲಾಗಿತ್ತು. ಈ ಮಧ್ಯೆ ಅದೇ ದಿನ ಮಧ್ಯಾಹ್ನದ ವೇಳೆ ಈತನ ಮೃತದೇಹ ಮಂಗಳೂರು ತಾಲೂಕಿನ ವಾಮಂಜೂರು ಕೆತ್ತಿಕಲ್ಲು ಎಂಬಲ್ಲಿ ಪತ್ತೆಯಾಗಿದೆ. ರಮಾನಂದ ಅವರ ಮೃತದೇಹ ಕೆತ್ತಿಕಲ್ಲು ಎಂಬಲ್ಲಿ ಗುಡ್ಡದಲ್ಲಿ ಮರದ ಕೆಳಗೆ ಬಿದ್ದ ಸ್ಥಿತಿಯಲ್ಲಿ ಇತ್ತು, ಮೇಲ್ನೋಟಕ್ಕೆ ಈತ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಹಗ್ಗ ತುಂಡಾಗಿ ಕೆಳಗೆ ಬಿದ್ದಂತೆ ಕಾಣಿಸಿಕೊಂಡಿದ್ದು, ವಾಮಂಜರೂ ಪೋಲೀಸ್ ಠಾಣೆಯಲ್ಲಿ ಈ ಬಗ್ಗೆ ಆತ್ಮಹತ್ಯೆ ಪ್ರಕರಣ ದಾಖಲಾಗಿತ್ತು. ಆದರೆ ಮನೆಯವರಿಗೆ…
ಪುತ್ತೂರು: ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ ಘಟನೆ ಮಾಣಿಯಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಬಂಟ್ವಾಳ ತಾಲೂಕಿನ ಸಜಿಪನಡು ನಿವಾಸಿಗಳಾದ, ಅಬ್ದುಲ್ ಲತೀಫ್ ಮತ್ತು ಆಶೀಕ್ ಪಾಷಾ ಎಂದು ಗುರುತಿಸಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಪುತ್ತೂರಿನ ಗಡಿಪಿಲದಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಆರೋಪಿಗಳು ಕಾರು ಕೆಟ್ಟು ನಿಂತ ಪರಿಣಾಮ ಗೋವುಗಳನ್ನ ಅಲ್ಲೇ ಬಿಟ್ಟು ಪರಾರಿಯಾಗಿದ್ದರು. ಈ ವೇಳೆ ಸುಮಾರು 5 ಗೋವುಗಳನ್ನ ವಿಶ್ವ ಹಿಂದೂ ಬಜರಂಗದಳ ಕಾರ್ಯಕರ್ತರು ರಕ್ಷಿಸಿದ್ದರು. ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದವರನ್ನ ಕೂಡಲೇ ಪತ್ತೆಹಚ್ಚುವಂತೆ ವಿಎಚ್ಪಿ ಆಗ್ರಹಿಸಿತ್ತು. ಘಟನೆ ನಡೆದ ಎರಡು ದಿನಗಳ ಬಳಿಕ ಇದೀಗ ಇಬ್ಬರು ಆರೋಪಿಗಳನ್ನ ಬಂಧಿಸುವಲ್ಲಿ ಪುತ್ತೂರು ನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಪುತ್ತೂರು ವೃತ್ತ ಪೊಲೀಸ್ ನಿರೀಕ್ಷಕ ಜಾನ್ಸನ್ ಡಿಸೋಜಾ ಮಾರ್ಗದರ್ಶನದಲ್ಲಿ ಉಪನಿರೀಕ್ಷಕರಾದ ಸೇಸಮ್ಮ ಮತ್ತು ಅಪರಾಧ ವಿಭಾಗದ ತಂಡ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
ಮಂಗಳೂರು: ಕೊಂಕಣಿ ಲೇಖಕ್ ಸಂಘ–ಕರ್ನಾಟಕದ ಆಶ್ರಯದಲ್ಲಿ ಆಯೋಜಿಸಲಾದ ಖ್ಯಾತ ಕೊಂಕಣಿ ಲೇಖಕ ಶ್ರೀ ವಲ್ಲಿ ವಗ್ಗ ( ವಲೇರಿಯನ್ ಡಿಸೋಜ) ಅವರೊಂದಿಗಿನ ಸಾಹಿತ್ಯ ಮಂಥನ ಕಾರ್ಯಕ್ರಮವು ನವೆಂಬರ್ 30, ಭಾನುವಾರ ಮಂಗಳೂರಿನ ಸಂದೇಶ ಸಭಾಭವನದಲ್ಲಿ ನೆರವೇರಿತು. ಕಾರ್ಯಕ್ರಮದ ಆರಂಭದಲ್ಲಿ ಶ್ರೀ ವಲ್ಲಿ ವಗ್ಗ ಅವರಿಗೆ ಹೂಗುಚ್ಛ ನೀಡಿ ಡಾ. ಎಡ್ವರ್ಡ್ ನಜ್ರೆತ್ ಸ್ವಾಗತ ಕೋರಿದರು. ನಂತರ ಮಾತನಾಡಿದ ವಗ್ಗ ಅವರು ತಮ್ಮ ಬಾಲ್ಯ, ಶಿಕ್ಷಣ, ವೃತ್ತಿ ಜೀವನ, ಕೊಂಕಣಿ ಭಾಷೆಯಲ್ಲಿ ಬರವಣಿಗೆಯ ಆಸಕ್ತಿ ಹೇಗೆ ಮೂಡಿತು, ಕಥೆಗಳ ಪ್ರಕಟಣಾ ಪ್ರಯಾಣ, ಓದುಗರಿಂದ ಪಡೆದ ಪ್ರೋತ್ಸಾಹ ಹಾಗೂ ಅನುವಾದ ಕ್ಷೇತ್ರದಲ್ಲಿನ ತಮ್ಮ ಅನುಭವಗಳನ್ನು ವಿವರವಾಗಿ ಹಂಚಿಕೊಂಡರು. ನಂತರ ನಡೆದ ಸಂವಾದ ಕಾರ್ಯಕ್ರಮವನ್ನು ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯ ಹೆನ್ರಿ ಮಸ್ಕರೇನಸ್ ಯಶಸ್ವಿಯಾಗಿ ನಡೆಸಿಕೊಟ್ಟರು. ಸಂವಾದದಲ್ಲಿ ಲೇಖಕರಾದ ಎಚ್. ಆರ್. ಅಳ್ವ, ಕಾನ್ಸೆಪ್ಟ್ ಆಳ್ವ, ರಿಚ್ಚರ್ಡ್ ಪಿರೇರಾ, ಜೆಮ್ಮ ಪಡೀಲ್, ಡೊಲ್ಫಿ ಕಾಸ್ಸಿಯಾ, ‘ದಿರ್ವೆಂ’ ಪತ್ರಿಕೆಯ ಸಂಪಾದಕ ಜೋನ್ ಮೊನಿಸ್, ಮ್ಯಾಕ್ಸಿಂ ರೊಡ್ರಿಗಸ್ ಹಾಗೂ…










