ಮಂಗಳೂರು: ಚೀನಾಕ್ಕೆ ಹೊರಟಿದ್ದ ರಷ್ಯಾದ ತೈಲ ತುಂಬಿದ ಟ್ಯಾಂಕರ್ ಹಡಗು ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆದ ಮಹತ್ವದ ಬೆಳವಣಿಗೆಯಿಂದ ಯುಟರ್ನ್ ಹೊಡೆದು ಶನಿವಾರ ಮಂಗಳೂರಿಗೆ ಆಗಮಿಸಿದೆ. ರಷ್ಯಾದ ಅಕ್ವಾ ಟೈಟಾನ್ ಹಡಗು ಸುಮಾರು 86 ಸಾವಿರ ಮೆಟ್ರಿಕ್ ಟನ್ ತೈಲ ಹೊತ್ತು ಮಂಗಳೂರಿಗೆ ಆಗಮಿಸಿದೆ. ಚೀನಾಕ್ಕೆ ಹೊರಟ ಈ ಹಡಗಿಗೆ ಜನವರಿಯಲ್ಲಿ ತೈಲ ತುಂಬಲಾಗಿದ್ದು, ಮಾರ್ಚ್ ಮಧ್ಯದಲ್ಲಿ ಆಗ್ನೇಯ ಏಷ್ಯಾದಲ್ಲಿ ಸಂಚರಿಸುತ್ತಿತ್ತು. ಈ ಸಂದರ್ಭ ಚೀನಾದ ರಿಝಾವೊ ಬಂದರು ತನ್ನ ಗಮ್ಯ ಸ್ಥಾನ ಎಂದು ಈ ಟೈಟಾನ್ ತೋರಿಸುತ್ತಿತ್ತು. ಆದರೆ ಈ ಮಧ್ಯೆ ಭಾರತವು ರಷ್ಯಾಕ್ಕೆ ತುರ್ತು ತೈಲ ಪೂರೈಕೆಗೆ ಬೇಡಿಕೆಯಿರಿಸಿದ ಹಿನ್ನೆಲೆಯಲ್ಲಿ ಈ ಹಡಗು ಯೂಟರ್ನ್ ಹೊಡೆದಿದ್ದು ಮಾರ್ಚ್ 21 ರಂದು ರಾತ್ರಿ ಮಂಗಳೂರಿಗೆ ಆಗಮಿಸಿದೆ. ಮಂಗಳೂರು ಸಮುದ್ರ ವ್ಯಾಪ್ತಿಯಲ್ಲಿ ನಿಂತು ತೇಲು ಜೆಟ್ಟಿಯಲ್ಲಿ ತೈಲವನ್ನು ಖಾಲಿ ಮಾಡಿ ಎಂಆರ್ಪಿಎಲ್ಗೆ ಸರಬರಾಜು ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ. ಜಾಗತಿಕ ತೈಲ ಮಾರುಕಟ್ಟೆಯಲ್ಲಿನ ಬದಲಾವಣೆ ಮತ್ತು ಮಧ್ಯಪ್ರಾಚ್ಯದ ಪೂರೈಕೆ ಕೊರತೆಯನ್ನು ನೀಗಿಸಲು ಭಾರತವು…
Author: main-admin
ಮಂಗಳೂರು: ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ನ ಸಿಸಿಬಿ (CCB) ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಫರಾಜ್ @ ಮೊಹಮ್ಮದ್ ಫರಾಜ್ (32) ಎಂದು ಗುರುತಿಸಲಾಗಿದೆ. ಈತ ಮಂಗಳೂರು ದೇರಳಕಟ್ಟೆ ಸಮೀಪದ ಮದನಿನಗರದ ನಿವಾಸಿಯಾಗಿದ್ದಾನೆ. ಪೊಲೀಸರ ಮಾಹಿತಿ ಪ್ರಕಾರ, ಆರೋಪಿಯ ವಿರುದ್ಧ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ದರೋಡೆ, ಕೊಲೆಯತ್ನ, ಮಾದಕ ವಸ್ತು ಮಾರಾಟ, ಕಳವು ಸೇರಿದಂತೆ ಹಾಗೂ ಕಾರಾಗೃಹದಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿದ ಪ್ರಕರಣಗಳು ಸೇರಿ ಒಟ್ಟು ಸುಮಾರು 10 ಪ್ರಕರಣಗಳು ದಾಖಲಾಗಿವೆ. ನ್ಯಾಯಾಲಯದಿಂದ ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ, ದರೋಡೆ, ಹಲ್ಲೆ, ಕಳವು ಸೇರಿದಂತೆ 4 ಪ್ರಕರಣಗಳು, ಕೊಣಾಜೆ ಠಾಣೆಯಲ್ಲಿ ಹಲ್ಲೆ, ಬೆದರಿಕೆ, ಕಳವು ಸೇರಿ 2 ಪ್ರಕರಣಗಳು, ಉತ್ತರ ಠಾಣೆಯಲ್ಲಿ ಹಲ್ಲೆ, ಬೆದರಿಕೆ, ಅಪಹರಣ ಮತ್ತು ದರೋಡೆಗೆ…
ಬಂಟ್ವಾಳ: ಇಲ್ಲಿನ ಪಾಣೆಮಂಗಳೂರು ಗ್ರಾಮದ ಮೆಲ್ಕಾರ್ ಬೊಗೋಡಿ ಎಂಬಲ್ಲಿರುವ ಗ್ಯಾಸ್ ಪಂಪ್ ಏಜೆನ್ಸಿಗೆ ನುಗ್ಗಿದ ಅಟೊರಿಕ್ಷಾ ಚಾಲಕ ಸಜಿಪಮೂಡಾ, ಬಂಟ್ವಾಳ ನಿವಾಸಿ ಅಫ್ರೀಝ್ (28) ಎಂಬಾತ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ, ಕಚೇರಿಯ ಸೊತ್ತುಗಳನ್ನು ಹಾನಿಗೊಳಿಸಿರುವ ಘಟನೆ ಮಾರ್ಚ್ 20ರಂದು ಸಂಜೆ ನಡೆದಿದೆ. ಗ್ಯಾಸ್ ಪಂಪ್ ಏಜೆನ್ಸಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿರುವ ಕುನಲ್ ಭುಹ್ನಿಯಾ (27) ಎಂಬವರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಶುಕ್ರವಾರ ಸಂಜೆ ಕೆಎ 19 ಎಸಿ 2102 ನೊಂದಾವಣಿ ಸಂಖ್ಯೆಯ ಆಟೋರಿಕ್ಷಾವನ್ನು ಚಲಾಯಿಸಿಕೊಂಡು ಬಂದ ಚಾಲಕನು, ಏಜೆನ್ಸಿಯ ಒಳಗೆ ಪ್ರವೇಶಿಸಿ ಕಚೇರಿ ಸಿಬ್ಬಂದಿ ಅಶ್ವಿನ್ ಎಂಬವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಅಲ್ಲದೆ, ಅಶ್ವಿನ್ ಅವರ ಮೇಲೆ ಹಲ್ಲೆ ನಡೆಸಿರುವ ಆರೋಪಿ, ನಂತರ ಕಚೇರಿಯ ಹೊರಬಂದು ಗ್ಯಾಸ್ ಪಂಪ್ ಏಜೆನ್ಸಿಯ ಸೊತ್ತುಗಳನ್ನು ಜಖಂಗೊಳಿಸಿದ್ದಾನೆ. ಈ ಕೃತ್ಯದಿಂದ ಸುಮಾರು 48,000/- ರೂಪಾಯಿಗಳಷ್ಟು ನಷ್ಟ ಉಂಟಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ದೂರಿನ ಮೇರೆಗೆ ಬಂಟ್ವಾಳ ನಗರ ಠಾಣಾ ಅ.ಕ್ರ…
ಬಂಟ್ವಾಳ : ತೆಂಗಿನಕಾಯಿ ಕಾಯಿ ತೆಗೆಯುವ ವೇಳೆ ಮರದಿಂದ ಬಿದ್ದು ಕೂಲಿ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ತಾರಿಪಡ್ಪು ಎಂಬಲ್ಲಿ ನಡೆದಿದೆ. ಮೃತರನ್ನು ಗಣೇಶ್ (ವಯಸ್ಸು ಅಂದಾಜು 45) ಎಂದು ಗುರುತಿಸಲಾಗಿದೆ. ಅವರು ತಮ್ಮ ಅಣ್ಣ ಪ್ರಕಾಶ್ ಅವರೊಂದಿಗೆ ತೆಂಗಿನ ಕಾಯಿ ಮತ್ತು ಅಡಿಕೆ ಕೊಯ್ಯುವ ಕೂಲಿ ಕೆಲಸ ಮಾಡಿಕೊಂಡಿದ್ದರು. ದಿನಾಂಕ 19ರಂದು ಬೆಳಿಗ್ಗೆ ಸುಮಾರು 8 ಗಂಟೆಗೆ ಇಬ್ಬರೂ ನರಿಕೊಂಬು ಗ್ರಾಮದ ತಾರಿಪಡ್ಪು ಪ್ರದೇಶದಲ್ಲಿರುವ ವಿಠಲ ಮೂಲ್ಯ ಅವರ ಮನೆಯ ತೆಂಗಿನ ಮರದಿಂದ ತೆಂಗಿನ ಕಾಯಿ ತೆಗೆಯಲು ತೆರಳಿದ್ದರು. ಮಧ್ಯಾಹ್ನ ಸುಮಾರು 11 ಗಂಟೆ ಸುಮಾರಿಗೆ ಗಣೇಶ್ ಅವರು ಕಾಲಿಗೆ ಮತ್ತು ಕೈಗೆ ಹಗ್ಗವನ್ನು ಹಾಕಿಕೊಂಡು ತೆಂಗಿನ ಮರಕ್ಕೆ ಹತ್ತಿ ಸುಮಾರು 25 ಅಡಿ ಎತ್ತರಕ್ಕೆ ತೆರಳಿದ್ದ ವೇಳೆ ಕಾಲಿಗೆ ಕಟ್ಟಿದ್ದ ಹಗ್ಗ ಆಕಸ್ಮಿಕವಾಗಿ ತುಂಡಾಗಿ ಮರದ ಬುಡದ ಪಕ್ಕಕ್ಕೆ ಬಿದ್ದು ತೀವ್ರವಾಗಿ ಗಾಯಗೊಂಡರು. ತಕ್ಷಣವೇ ಪ್ರಕಾಶ್ ಮತ್ತು ವಿಠಲ ಮೂಲ್ಯ ಅವರು ಗಣೇಶ್ ಅವರನ್ನು…
ಮಂಗಳೂರು: ಮೂಡಬಿದ್ರೆ ಇನ್ಸ್ ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧ ಕೇಳಿಬಂದಿರುವ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಗಳು ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಎಸಿಪಿ ನೇತೃತ್ವದಲ್ಲಿ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಲೈಂಗಿಕ ದೌರ್ಜನ್ಯ ಕುರಿತಾಗಿ ಯಾವುದೇ ಸಾಕ್ಷ್ಯಗಳು ಲಭಿಸಿಲ್ಲ ಎನ್ನಲಾಗುತ್ತಿದ್ದು, ಈ ಬಗ್ಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಸುಮತಿ ನಾಯಕ್ ಮತ್ತು ಅವಿತಾ ಮಿನೇಜಸ್ ಮಹಿಳಾ ಆಯೋಗಕ್ಕೆ ನೀಡಿರುವ ದೂರಿಗೆ ಸಂಬಂಧಿಸಿದಂತೆ ಯಾವುದೇ ಲೈಂಗಿಕ ದೌರ್ಜನ್ಯದ ಸಾಕ್ಷ್ಯಗಳು ಲಭಿಸಿಲ್ಲ ಎಂದಿದ್ದಾರೆ. ಆಡಿಯೋ ಮತ್ತು ವಿಡಿಯೋದಲ್ಲಿ ಇನ್ಸ್ ಪೆಕ್ಟರ್ ವರ್ತನೆ ಆಕ್ಷೇಪಾರ್ಹ, ದುರ್ನಡತೆಯಿಂದ ಕೂಡಿರುವಂಥದ್ದು. ಅದಕ್ಕೆ ಆತ ಬೆಲೆ ತೆರಬೇಕಾಗುತ್ತದೆ. ಆದರೆ ಈ ಆಡಿಯೋ ಅಥವಾ ವಿಡಿಯೋದಲ್ಲಿರುವವರು ಸುಮತಿ ನಾಯಕ್ ಆಗಲೀ, ಅವಿತಾ ಮಿನೇಜಸ್ ಆಗಲೀ ಅಲ್ಲ. ಯಾರು ಅದರಲ್ಲಿದ್ದಾರೋ ಅವರನ್ನು ತನಿಖೆಗೆ ಒಳಪಡಿಸಿದ್ದು ಅವರು ದೂರು ನೀಡಲು ನಿರಾಕರಿಸಿದ್ದಾರೆ. ಆದರೆ ಈ ಆಡಿಯೋ, ವಿಡಿಯೋಗಳನ್ನು ಮುಂದಿಟ್ಟು ಸುಮತಿ ನಾಯಕ್…
ಪುತ್ತೂರು: ದಾಂಪತ್ಯ ಕಲಹವು ದಾರುಣ ಅಂತ್ಯ ಕಂಡ ಘಟನೆಯೊಂದು ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಕಟ್ಟತ್ತಾರು ಸಮೀಪದ ಗೋಳ್ತಿಲದಲ್ಲಿ ಶುಕ್ರವಾರ (ಮಾ.20) ಬೆಳಿಗ್ಗೆ ನಡೆದಿದೆ. ಗಂಡ-ಹೆಂಡತಿಯ ನಡುವಿನ ತೀವ್ರ ವಾಗ್ವಾದವು ಹಿಂಸಾತ್ಮಕ ಸ್ವರೂಪ ಪಡೆದು, ಗಂಡನು ಹೆಂಡತಿಯನ್ನು ಹತ್ಯೆಗೈದಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಘಟನೆ ಬಳಿಕ ಆತನೇ ಆತ್ಮಹತ್ಯೆಗೆ ಯತ್ನಿಸಿದ್ದು, ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಸುದ್ದಿ ತಿಳಿದ ಕೂಡಲೇ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ, ಮೃತದೇಹವನ್ನು ವಶಕ್ಕೆ ಪಡೆದಿದ್ದಾರೆ. ಘಟನೆಯ ನಿಖರ ಕಾರಣ ಹಾಗೂ ಹಿನ್ನೆಲೆಯನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಮುಂದುವರಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿದೆ.
ಮಂಗಳೂರು: ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಾನುವಾರುಗಳನ್ನು ಕಳ್ಳತನ ಮಾಡಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪೊಲೀಸರು ಪತ್ತೆಹಚ್ಚಿ, ಒಟ್ಟು ₹8 ಲಕ್ಷ 42 ಸಾವಿರ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ದಿನಾಂಕ 18-03-2026 ರಂದು ಬೆಳಿಗ್ಗೆ 4:45 ಗಂಟೆ ಸುಮಾರಿಗೆ ಮಂಗಳೂರು ತಾಲೂಕು ಬಡಗ ಎಡಪದವು ಗ್ರಾಮದ ಸಸ್ತಾವು ಪ್ರದೇಶದಲ್ಲಿ ಬಾತ್ಮಿದಾರರಿಂದ ಬಂದ ಖಚಿತ ಮಾಹಿತಿಯ ಮೇರೆಗೆ, ಫಾರ್ಚೂನರ್ ಕಾರು (ನಂ. DL 10 CE 6227) ಯಲ್ಲಿ ದನಗಳ ಕಾಲುಗಳನ್ನು ಕಟ್ಟಿ ಹಿಂಸಾತ್ಮಕವಾಗಿ ತುಂಬಿಕೊಂಡು ಮಾರಾಟಕ್ಕಾಗಿ ಸಾಗಾಟ ಮಾಡಲಾಗುತ್ತಿದೆ ಎಂಬುದಾಗಿ ತಿಳಿದುಬಂದಿತು. ಈ ಮಾಹಿತಿ ಆಧರಿಸಿ ಎ.ಸಿ.ಪಿ ಶ್ರೀಕಾಂತ್ ಹಾಗೂ ಪಿ.ಐ ಬಾಲಕೃಷ್ಣ ಅವರ ಮಾರ್ಗದರ್ಶನದಲ್ಲಿ ಬಜಪೆ ಠಾಣೆಯ ಪಿ.ಎಸ್.ಐ ಶ್ರೀಮತಿ ಲತಾ ಮತ್ತು ಸಿಬ್ಬಂದಿಗಳಾದ ರಾಜೇಶ್, ಚಿದಾನಂದ, ಪ್ರಕಾಶ್ ಅವರು ದಾಳಿ ನಡೆಸಿದರು. ದಾಳಿ ವೇಳೆ 4 ದನಗಳನ್ನು ತುಂಬಿಕೊಂಡಿದ್ದ ಫಾರ್ಚೂನರ್ ಕಾರು, ಒಂದು ತಲವಾರ್ ಹಾಗೂ ಒಂದು ಕಬ್ಬಿಣದ ರಾಡ್ ಅನ್ನು ವಶಪಡಿಸಿಕೊಳ್ಳಲಾಗಿದೆ. ದಾಳಿಯ ವೇಳೆ ಆರೋಪಿಗಳು ಕಾರು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹುಳಿಯಾರು ಪೊಲೀಸ್ ಠಾಣೆಯಲ್ಲಿ ಸಂಭವಿಸಿದ ಲಾಕಪ್ ಡೆತ್ (Lockup Death) ಪ್ರಕರಣ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಜೂಜಾಟದ ಆರೋಪದ ಮೇರೆಗೆ ಪೊಲೀಸರು ವಶಕ್ಕೆ ಪಡೆದ ವ್ಯಕ್ತಿಯೊಬ್ಬರು ಠಾಣೆಯೊಳಗೆ ಮೃತಪಟ್ಟಿದ್ದು, ಗ್ರಾಮಸ್ಥರು ಮತ್ತು ಆಪ್ತರು ಪೊಲೀಸರ ಕಿರುಕುಳವೇ ಸಾವಿಗೆ ಕಾರಣ ಎಂದು ಆರೋಪಿಸಿದ್ದಾರೆ. ಮೃತ ವ್ಯಕ್ತಿಯನ್ನು ಯಳನಾಡು ಗ್ರಾಮದ 50 ವರ್ಷದ ಕಾಂತರಾಜು ಎಂದು ಗುರುತಿಸಲಾಗಿದೆ. ಜೂಜಾಟದ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಸೇರಿದಂತೆ ಇನ್ನೂ ಕೆಲವರನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದರು. ವಿಚಾರಣೆ ನಡೆಯುತ್ತಿದ್ದ ವೇಳೆ ಕಾಂತರಾಜು ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಈ ಪ್ರಕರಣಕ್ಕೆ ಮೃತರ ಕುಟುಂಬದವರ ಆರೋಪ ಮಾಡಿದ್ದು, ಕಾಂತರಾಜು ಸಾವಿಗೆ ಹೃದಯಾಘಾತವಷ್ಟೇ ಕಾರಣವಲ್ಲ, ಪೊಲೀಸ್ ಸಿಬ್ಬಂದಿಯಿಂದ ನಡೆದ ಕಿರುಕುಳ ಮತ್ತು ಒತ್ತಡವೇ ಪ್ರಮುಖ ಕಾರಣ ಎಂದು ಆರೋಪಿಸಿದ್ದಾರೆ. ಇದರಿಂದ ಈ ಪ್ರಕರಣ “ಲಾಕಪ್ ಡೆತ್” ಆಗಿರಬಹುದೆಂಬ ಅನುಮಾನ ವ್ಯಕ್ತವಾಗಿದೆ. ಈ ಘಟನೆ ತಿಳಿಯುತ್ತಿದ್ದಂತೆ ಯಳನಾಡು…
ಶವ್ವಾಲ್ ತಿಂಗಳ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಶುಕ್ರವಾರ (ಮಾರ್ಚ್ 20, 2026) ಸಂಭ್ರಮದ ಈದ್ ಉಲ್ ಫಿತರ್ ಹಬ್ಬ ಆಚರಿಸಲಾಯಿತು. ರಂಜಾನ್ ತಿಂಗಳ ಉಪವಾಸದ ನಂತರ ಬರುವ ಈ ಹಬ್ಬವನ್ನು ‘ಈದ್ ಉಲ್ ಫಿತರ್’ ಎಂದು ಕರೆಯಲಾಗುತ್ತದೆ. ಬೆಳಿಗ್ಗೆಯಿಂದಲೇ ಮುಸ್ಲಿಂ ಸಮುದಾಯದವರು ಸ್ನಾನ ಮಾಡಿ, ಹೊಸ ಶುಭ್ರ ಬಟ್ಟೆಗಳನ್ನು ಧರಿಸಿ ಮಸೀದಿಗಳು ಹಾಗೂ ಈದ್ಗಾಹ್ಗಳಿಗೆ ಆಗಮಿಸಿದರು. ಮಕ್ಕಳು ವಿಶೇಷವಾಗಿ ಹೊಸ ಬಟ್ಟೆಗಳಲ್ಲಿ ಸಂಭ್ರಮಿಸುತ್ತಾ ಕಾಣಿಸಿಕೊಂಡರು. ಉಡುಪಿ, ಮಂಗಳೂರು ಸೇರಿದಂತೆ ಕರಾವಳಿ ಪ್ರದೇಶದ ಮಸೀದಿಗಳಲ್ಲಿ ಸಾಮೂಹಿಕ ಈದ್ ನಮಾಝ್ ನಡೆಯಿತು. ಪ್ರಾರ್ಥನೆಯ ನಂತರ ಮುಸ್ಲಿಂ ಬಾಂಧವರು ಪರಸ್ಪರ ಆಲಿಂಗನ ಮಾಡಿಕೊಂಡು ಈದ್ ಮುಬಾರಕ್ ಎಂದು ಶುಭಾಶಯಗಳನ್ನು ವಿನಿಮಯಿಸಿಕೊಂಡರು.ಈದ್ ಉಲ್ ಫಿತರ್ ರಂಜಾನ್ ಉಪವಾಸದ ಪೂರ್ಣಗೊಳ್ಳುವಿಕೆಯ ಸಂಕೇತವಾಗಿದ್ದು, ದಾನ-ಧರ್ಮ, ಸಹಾಯ-ಸಹಕಾರದ ಮಹತ್ವವನ್ನು ಒತ್ತಿಹೇಳುವ ಹಬ್ಬವಾಗಿದೆ. ಫಿತ್ರ್ ಝಕಾತ್ (ಕಡ್ಡಾಯ ದಾನ) ನೀಡಿ ಬಡವರಿಗೆ ಸಹಾಯ ಮಾಡುವ ಸಂಪ್ರದಾಯವನ್ನು ಇಲ್ಲಿ ಅನುಸರಿಸಲಾಯಿತು. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾಧಿಕಾರಿಗಳು…
ಉಳ್ಳಾಲ: ಮದುವೆಯಾಗಿ 2 ಮಕ್ಕಳಿದ್ದ ಮಹಿಳೆಯನ್ನು ಪ್ರೀತಿ ಪ್ರೇಮ ಎಂದು ಬಲೆಗೆ ಬಿಳಿಸಿ ಬಳಿಕ ಹಲ್ಲೆಗೈದು, ಕೊಲೆಗೆ ಯತ್ನಿಸಿದ ಘಟನೆ ಉಳ್ಳಾಲದ ಮಿಲ್ಲತ್ ನಲ್ಲಿ ನಡೆದಿದೆ. ಘಟನೆ ವಿವರ:ಪ್ರಕರಣದ ಸಾರಾಂಶ: ಮದುವೆಯಾಗಿ 2 ಮಕ್ಕಳಿದ್ದ ಮಹಿಳೆ ಒಂದು ವರ್ಷಗಳಿಂದ ಉಳ್ಳಾಲದ ಮಿಲ್ಲತ್ ನಗರದ ಮೊಹಮ್ಮದ್ ಅರ್ಫಾಝ್ ಎಂಬಾತನೊಂದಿಗೆ ಪ್ರೇಮ ಉಂಟಾಗಿ ಸುಮಾರು 06 ತಿಂಗಳಿನಿಂದ ಜೊತೆ ಜೀವನ ನಡೆಸುತ್ತಿದ್ದು, ಇದೀಗ ಆರೋಪಿತನು ಗಾಂಜಾ ಸೇವಿಸುತ್ತಿದ್ದ ಬಗ್ಗೆ ಮಾಹಿತಿ ಇದ್ದು, ಆತನು ಮಹಿಳೆಯ ಮನೆಯಲ್ಲಿ ಗಾಂಜಾ ಪ್ಯಾಕ್ ಮಾಡಿ ಮಾರಾಟ ಮಾಡುತ್ತೇನೆ ಎಂದು ಹೇಳುತ್ತಿದ್ದಾಗ ಮಹಿಳೆ ಆಕ್ಷೇಪ ಮಾಡಿದ್ದರಿಂದ ಆಕೆಗೆ ಮಂಗಳೂರು ನಗರದ ಬಂದರಿನ ಜೆ.ಎಂ ರಸ್ತೆ ಎಂಬಲ್ಲಿರುವ ಗಣಪತಿ ಭಂಡಾರ್ಕರ್ ಅಂಗಡಿಯ ಎದುರಿನಲ್ಲಿರುವ ಬಾಡಿಗೆ ಮನೆಯಲ್ಲಿ ದಿನಾಂಕ 13-03-2026 ರಂದು ಸಂಜೆ 06-00 ಗಂಟೆಗೆ ಕೈಯಿಂದ ಹಲ್ಲೆ ನಡೆಸಿ ಕಾಲಿನಿಂದ ತುಳಿದು ಚೂಡಿದಾರರ ಶಾಲುವಿನಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡುವ ಉದ್ದೇಶದಿಂದ ಎಳೆದು ಅಲ್ಲದೇ ಸಣ್ಣ ಕತ್ತರಿಯಿಂದ ಕುತ್ತಿಗೆ, ಎದೆಗೆ ಚುಚ್ಚಿಗೆ…










