ಬೆಳ್ತಂಗಡಿ: ಶಕ್ತಿನಗರದಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಕಸಾಯಿಖಾನೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ್ದಾರೆ. ಹಿಂದೂ ಸಂಘಟನೆಯ ಕಾರ್ಯಕರ್ತರು ನೀಡಿದ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರಿಗೆ ದನದ ಮಾಂಸ ಕತ್ತರಿಸುತ್ತಿದ್ದ ಇಬ್ಬರು ಸಿಕ್ಕಿಹಾಕಿಕೊಂಡಿದ್ದಾರೆ. ದಾಳಿ ವೇಳೆ ದನದ ಮಾಂಸ ಮತ್ತು ಪುಟ್ಟ ಕರು ಪತ್ತೆಯಾಗಿದ್ದು, ಪೊಲೀಸರ ಕಣ್ಣು ತಪ್ಪಿಸಲು ರಾತ್ರಿಯ ಬದಲು ಹಗಲಿನಲ್ಲಿ ಕಾರ್ಯಾಚರಿಸುತ್ತಿದ್ದಾರೆಂದು ಸ್ಥಳೀಯರು ಆರೋಪಿಸಿದ್ದಾರೆ ಅನ್ವರ್ ಎಂಬವರಿಗೆ ಸೇರಿದ ಜಾಗದಲ್ಲಿ ಅಕ್ರಮ ಕಸಾಯಿಖಾನೆ ನಡೆಸುತ್ತಿದ್ದು, ವಿಷಯ ತಿಳಿದು ಸ್ಥಳೀಯರು ಅಪಾರ ಸಂಖ್ಯೆಯಲ್ಲಿ ಸೇರಿದ್ದರು
Author: main-admin
ಸುರತ್ಕಲ್ : ಸುರತ್ಕಲ್ ನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್ ಐಟಿಕೆ) ಮತ್ತು ಬೆಂಗಳೂರಿನ ಸೆಂಟ್ರಲ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಾಲಜಿ ಇನ್ಸ್ಟಿಟ್ಯೂಟ್ (ಸಿಎಂಟಿಐ) ಜಂಟಿ ಸಂಶೋಧನೆ ಮತ್ತು ಅಭಿವೃದ್ಧಿ ಚಟುವಟಿಕೆಗಳನ್ನು ಹೆಚ್ಚಿಸುವ ಉದ್ದೇಶದಿಂದ ತಿಳುವಳಿಕಾ ಒಡಂಬಡಿಕೆಗೆ ಸಹಿ ಹಾಕಿವೆ. ಈ ಪಾಲುದಾರಿಕೆಯನ್ನು 2025ರ ಜನವರಿ 21ರಂದು ತಿಳಿವಳಿಕೆ ಒಪ್ಪಂದಕ್ಕೆ ಅಂಕಿತ ಹಾಕುವ ಮೂಲಕ ಔಪಚಾರಿಕಗೊಳಿಸಲಾಯಿತು. ಈ ಒಪ್ಪಂದದ ಅಡಿಯಲ್ಲಿ, ಬೋಧಕವರ್ಗದ ಸದಸ್ಯರು, ವಿದ್ಯಾರ್ಥಿಗಳು, ಎನ್ಐಟಿಕೆಯ ಸಂಶೋಧನಾ ವಿದ್ಯಾರ್ಥಿಗಳು ಮತ್ತು ಸಿಎಂಟಿಐನ ವಿಜ್ಞಾನಿಗಳು ಸೇರಿದಂತೆ ಎರಡೂ ಸಂಸ್ಥೆಗಳ ಮಾನವ ಸಂಪನ್ಮೂಲಗಳನ್ನು ಸಂಯೋಜಿತ ಸಂಶೋಧನಾ ಯೋಜನೆಗಳಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸಲಾಗುತ್ತದೆ. ಜಂಟಿ ಪ್ರಕಟಣೆಗಳು, ಪೇಟೆಂಟ್ ಫೈಲಿಂಗ್ಗಳು, ಪರಿಕಲ್ಪನೆಯ ಮೌಲ್ಯಮಾಪನಗಳ ಪುರಾವೆಗಳು ಮತ್ತು ಉದ್ಯಮದ ಅಗತ್ಯಗಳಿಗೆ ಅನುಗುಣವಾಗಿ ತಂತ್ರಜ್ಞಾನ ವರ್ಗಾವಣೆಗಳಂತಹ ಸ್ಪಷ್ಟ ಫಲಿತಾಂಶಗಳಿಗೆ ಕಾರಣವಾಗುವ ಚಟುವಟಿಕೆಗಳಲ್ಲಿ ಎನ್ಐಟಿಕೆಯ ಬೋಧಕ ಸದಸ್ಯರು ಸಿಎಂಟಿಐ ವಿಜ್ಞಾನಿಗಳೊಂದಿಗೆ ಸಹಕರಿಸಲಿದ್ದಾರೆ. ವಿದ್ಯಾರ್ಥಿಗಳು (ಪದವಿಪೂರ್ವ ಮತ್ತು ಸ್ನಾತಕೋತ್ತರ ಎರಡೂ) ಮತ್ತು ಪಿಎಚ್ಡಿ ವಿದ್ವಾಂಸರು ಇಂಟರ್ನ್ಶಿಪ್, ಪ್ರಾಜೆಕ್ಟ್ ವರ್ಕ್ ಅಥವಾ ಪ್ರಬಂಧ ಸಂಶೋಧನೆಗಾಗಿ ಸಿಎಂಟಿಐನ…
ಕಾಸರಗೋಡು: ಗೆಳೆಯರೊಂದಿಗೆ ಸ್ನಾನಕ್ಕಿಳಿದ ವಿದ್ಯಾರ್ಥಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಬೇಕಲ ಠಾಣಾ ವ್ಯಾಪ್ತಿಯ ಉದುಮ ಎಂಬಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ಉದುಮ ಹಯರ್ ಸೆಕಂಡರಿ ಶಾಲೆಯ 9 ನೇ ತರಗತಿ ವಿದ್ಯಾರ್ಥಿ ಎಸ್.ವಿ ಅಬ್ದುಲ್ಲ (14) ಎಂದು ಗುರುತಿಸಲಾಗಿದೆ. ಕೋಟೆಕುನ್ನು ಎಂಬಲ್ಲಿ ನಡೆದ ಕುಟುಂಬ ಸಂಗಮದಲ್ಲಿ ಪಾಲ್ಗೊಂಡಿದ್ದ ಈತ ಸಂಜೆ ಗೆಳೆಯರ ಜೊತೆ ನದಿಗೆ ಸ್ನಾನಕ್ಕಿಳಿದ ಸಂದರ್ಭದಲ್ಲಿ ಘಟನೆ ನಡೆದಿದೆ. ಉಳಿದವರ ಬೊಬ್ಬೆ ಕೇಳಿ ಸಕಾಲಕ್ಕೆ ಧಾವಿಸಿದ ಸ್ಥಳೀಯರು ವಿದ್ಯಾರ್ಥಿಯನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ. ಮೃತ ದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟು ಕೊಡಲಿದೆ ಎಂದು ತಿಳಿದು ಬಂದಿದೆ.
ಬೆಂಗಳೂರು : ಮಾವನ ಆಸ್ತಿಗಳಿಗೆ ಅಳಿಯ ಉತ್ತರಾಧಿಕಾರಿಯಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಕಾನೂನುಬದ್ಧ ಉತ್ತರಾಧಿಕಾರಿ ಮಾತ್ರ ಆಸ್ತಿಗೆ ಪ್ರತಿನಿಧಿ ಎಂದು ತಿಳಿಸಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ನಿವಾಸಿ ಬಸವರಾಜು ಸಲ್ಲಿಸಿಸದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಲಲಿತಾ ಕನಗಂಟಿ ಅವರ ಪೀಠ ಈ ಆದೇಶ ನೀಡಿದೆ. ಮೃತ ಮಾವನಿಗೆ ನಾಲ್ಕು ಹೆಣ್ಣು ಮಕ್ಕಳಿರುವುದರಿಂದ ತನ್ನನ್ನೇ ಮೃತನ ಆಸ್ತಿಯನ್ನು ಪ್ರತಿನಿಧಿಸಲು ಮತ್ತು ಹಿತಾಸಕ್ತಿ ರಕ್ಷಣೆ ಮಾಡಲು ಕಾನೂನುಬದ್ಧ ಉತ್ತರಾಧಿಕಾರಿ ಎಂಬುದಾಗಿ ಘೋಷಣೆ ಮಾಡುವಂತೆ ಕೋರಿ ವ್ಯಕ್ತಿಯೋರ್ವ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಕಾನೂನು ಬದ್ದ ಉತ್ತರಾಧಿಕಾರಿ ಮಾತ್ರ ಮೃತಪಟ್ಟ ವ್ಯಕ್ತಿಯ ಆಸ್ತಿ ಪ್ರತಿನಿಧಿಸುವ ಮತ್ತು ಹಿತಾಸಕ್ತಿ ರಕ್ಷಣೆ ಮಾಡುವ ಜವಾಬ್ದಾರಿ ಹೊಂದಿರುತ್ತಾನೆ. ಆದರೆ ಈ ಪ್ರಕರಣದಲ್ಲಿ ಆದರೆ, ಈ ಪ್ರಕರಣದಲ್ಲಿ ಅರ್ಜಿದಾರರು ಮೃತರ ಆಸ್ತಿಯಲ್ಲಿ ಭಾಗಕ್ಕೆ ಅರ್ಹರಾಗಿದ್ದಾರೆಯೇ ಹೊರತು ಉತ್ತರಾಧಿಕಾರಿಯಾಗುವುದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಕೋರ್ಟ್ ತಿಳಿಸಿದೆ. ತನ್ನದೇ ಗ್ರಾಮದ ಮಹಿಳೆಯನ್ನು ವಿವಾಹವಾಗಿ ವ್ಯಕ್ತಿಯೊಬ್ಬರು ಮಾವನ ಆಸ್ತಿಯಲ್ಲಿ ಪತ್ನಿಗೆ…
ವಿಟ್ಲ: ವ್ಯಕ್ತಿಯೋರ್ವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಮುನ್ನೂರು ನ ಅಲಂಗಾರು ಎಂದು ತಿಳಿದು ಬಂದಿದೆ.ಮೃತರನ್ನು ರಮೇಶ್ ಪಲ್ಲೆದಗುರಿ (37) ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡಿಕೊಂಡಿದ್ದ ರಮೇಶ್ ನಿನ್ನೆ ಕೆರೆಗೆ ಹಾರಿದ್ದರು ಇಂದು ಅವರ ಮೃತದೇಹ ಪತ್ತೆಯಾಗಿದೆ.ಮೃತರು ಪತ್ನಿ ಹಾಗು ಓರ್ವ ಪುತ್ರನನ್ನು ಅಗಲಿದ್ದಾರೆ.ಶವವನ್ನು ಪ್ರೆಂಡ್ಸ್ ವಿಟ್ಲದ ಮುರಳೀದರ ಮತ್ತು ತಂಡದವರು ಕೆರೆಯಿಂದ ಮೇಲಕ್ಕೆತ್ತಿದರು.
ಬೆಂಗಳೂರು: ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಜಾರಿ ಕುರಿತು ಸಿಎಂ ಸಿದ್ದರಾಮಯ್ಯ ಇಂದು ಸಂಜೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಕೆಲ ಸೂಚನೆಗಳನ್ನ ನೀಡಿದರು. 1) ಈ ಕಾಯ್ದೆಯ ಎಲ್ಲಾ ಅಂಶಗಳನ್ನು ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು. 2) ಪರವಾನಿಗೆ ಪಡೆಯದ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ನಿರಂತರ ನಿಗಾ ಇರಿಸಬೇಕು. 3)ಪರವಾನಿಗೆ ಪಡೆದಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಆರ್ಬಿಐ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವುದನ್ನು ಖಾತ್ರಿಪಡಿಸಬೇಕು. 4) ಬಲವಂತದ ವಸೂಲಾತಿ ಮಾಡುವವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. 5) ಬಲವಂತದ ಸಾಲ ವಸೂಲಾತಿ ಮಾಡುವ ಪ್ರಕರಣಗಳಲ್ಲಿ ಸ್ವಯಂಪ್ರೇರಿತವಾಗಿ ಮೊಕದ್ದಮೆ ದಾಖಲಿಸಬೇಕು 6) ಯಾವುದೇ ಜಿಲ್ಲೆಗಳಲ್ಲಿ ಸಾಲಗಾರರ ಕಿರುಕುಳ ಮುಂದುವರೆದಿರುವುದು ಗಮನಕ್ಕೆ ಬಂದರೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಅವರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದರು.
ಉಡುಪಿ: ತೆಳ್ಳಾರು ರಸ್ತೆ 11ನೇ ಕ್ರಾಸ್ನ ಮರತ್ತಪ್ಪ ಶೆಟ್ಟಿ ಕಾಲನಿಯ ಕಿಶೋರ್ ಕುಮಾರ್ ಶೆಟ್ಟಿ ಅವರ ಮನೆಯಲ್ಲಿ ಚಾರ್ಜ್ಗಿಟ್ಟ ಮೊಬೈಲ್ ಸ್ಫೋಟಗೊಂಡು ಇಡೀ ಮನೆ ಸುಟ್ಟುಹೋಗಿ ಲಕ್ಷಾಂತರ ರೂ. ನಷ್ಟ ಸಂಭವಿಸಿದ ಘಟನೆ ಸಂಭವಿಸಿದೆ. ಎರಡು ಅಂತಸ್ತುಗಳ 6 ಕೋಣೆಗಳ ಮನೆಯಲ್ಲಿ ಮುಂಜಾನೆ 4 ಗಂಟೆ ವೇಳೆಗೆ ಅವಘಡ ಸಂಭವಿಸಿದೆ. ಮೊಬೈಲನ್ನು ಸೋಫಾದ ಮೇಲೆ ಇರಿಸಿದ್ದ ಕಾರಣ ಸ್ಫೋಟಗೊಂಡ ಕೂಡಲೇ ಬೆಂಕಿ ಹತ್ತಿಕೊಂಡು ಇಡೀ ಮನೆಯನ್ನು ಆವರಿಸಿತು. ಮಾಹಿತಿ ತಿಳಿದ ತತ್ಕ್ಷಣ ಆಗಮಿಸಿದ ಅಗ್ನಿಶಾಮಕ ದಳದ ಸಿಬಂದಿ ಎರಡೂವರೆ ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು. ಈ ವೇಳೆ ಮನೆಯಲ್ಲಿ ಎಸಿ ಆನ್ ಇದ್ದುದು ಕೂಡ ಬೆಂಕಿ ವ್ಯಾಪಿಸಲು ಕಾರಣವಾಯಿತು ಎನ್ನಲಾಗಿದೆ. ಮನೆಯ ಮಾಲಕ ಕಿಶೋರ್ ಕುಮಾರ್ ಶೆಟ್ಟಿ ಅವರಿಗೆ ಬೆಂಕಿಯಿಂದ ಸಣ್ಣಪುಟ್ಟ ಗಾಯಗಳಾಗಿವೆ. ಠಾಣಾಧಿಕಾರಿ ಆಲ್ಪರ್ಟ್ ಮೊನಿಸ್, ಪ್ರಮುಖರಾದ ಹರಿಪ್ರಸಾದ್ ಶೆಟ್ಟಿಗಾರ್, ಚಾಲಕ ಜಯ ಮೂಲ್ಯ, ರವಿಚಂದ್ರ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಮಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಬಂಟ್ವಾಳ ಮೂಲದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ (ಎಫ್ಟಿಎಸ್ಸಿ-1) ನ್ಯಾಯಾಧೀಶ ವಿನಯ್ ದೇವರಾಜ್ 5 ವರ್ಷಗಳ ಶಿಕ್ಷೆ ವಿಧಿಸಿ ನಿನ್ನೆ (ಫೆ.15) ತೀರ್ಪು ನೀಡಿದ್ದಾರೆ. ಅಬ್ದುಲ್ ಅಶ್ರಫ್ (42) ಶಿಕ್ಷೆಗೊಳಗಾದ ಆರೋಪಿ ಎಂದು ಗುರುತಿಸಲಾಗಿದೆ. ಏನಿದು ಪ್ರಕರಣ ? ಆರೋಪಿತು 2024ರ ಆ.11ರಂದು ತನ್ನ ಅಂಗಡಿಗೆ ಬಂದಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದದೆ. ಮನೆಯಲ್ಲಿ ನೊಂದು ಕುಳಿತಿದ್ದ ಬಾಲಕಿಯನ್ನು ತಾಯಿ ಪ್ರಶ್ನಿಸಿದಾಗ ನಡೆದ ಘಟನೆಗಳನ್ನು ವಿವರಿಸಿದ್ದಳು. ಘಟನೆಯ ಕುರಿತು ಆ.12ರಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಸ್ಸೈ ರತನ್ ಕುಮಾರ್ ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ವೇಳೆ ನ್ಯಾಯಾಧೀಶರು ಆರೋಪಿ ಅಶ್ರಫ್ ಗೆ ಬಿಎನ್ಎಸ್ ಕಲಂ 74ರಡಿ 3 ವರ್ಷ ಸಾದಾ ಸಜೆ, 10,000 ರೂ. ದಂಡ, ಒಂದು ವೇಳೆ ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 6 ತಿಂಗಳ ಸಾದಾ ಸಜೆ,…
ಕಾರ್ಕಳ: ಚಾಲಕನ ಮೇಲೆ ಟಿಪ್ಪರ್ ಮಾಲೀಕ ಮತ್ತು ಅವರ ಜೊತೆಗಿದ್ದ ವ್ಯಕ್ತಿಯೋರ್ವ ಹಲ್ಲೆ ಮಾಡಿ ಅಟ್ಟಹಾಸ ಮೆರೆದ ಘಟನೆ ಕಾರ್ಕಳದಲ್ಲಿ ನಡೆದಿದೆ. ಯೋಗಿಶ್ ಎಂಬವರು ಬಂಧಿತ ಆರೋಪಿ. ಚಾಲಕ ಅರ್ಜುನ್ ಹಲ್ಲೆಗೊಳಗಾದ ವ್ಯಕ್ತಿ. ಯೋಗಿಶ್ ಎಂಬವರ ಟಿಪ್ಪರ್ ನಲ್ಲಿ ಅರ್ಜುನ್ ಚಾಲಕರಾಗಿ ದುಡಿಯುತ್ತಿದ್ದರು. ಅರ್ಜುನ್ ಗೆ ಸಂಬಳ ಬಾಕಿಯಿಟ್ಟದ್ದನ್ನು ಕೇಳಿದ ಪದೇ ಪದೇ ಕೇಳಿದ ಬಳಿಕ ಯೋಗಿಶ್ ಅದನ್ನು ನವೆಂಬರ್ ನಲ್ಲಿ ಕೊಟ್ಟಿದ್ದರು. ಫೆ.೧೩ಕ್ಕೆ ರಾತ್ರಿ ಬೆಳ್ಮಣ್ ನಲ್ಲಿರುವ ತನ್ನ ಮಾವನ ಹೋಟೆಲ್ ಗೆ ಅರ್ಜುನ್ ಹೋದಾಗ ಅಲ್ಲಿದ್ದ ಯೋಗಿಶ್ ಅವಾಚ್ಯ ಶಬ್ಧಗಳಿಂದ ಬೈದು ಆತನ ಮುಖಕ್ಕೆ ಹೊಡೆದಿದ್ದಾನೆ. ಯೋಗಿಶ್ ಜೊತೆಗಿದ್ದ ಗಡ್ಡಧಾರಿ ವ್ಯಕ್ತಿ ಕೂಡಾ ಸೋಡಾ ಬಾಟಲಿಯಿಂದ ಹಲ್ಲೆ ಮಾಡಿದ್ದಾನೆ. ಈ ಬಗ್ಗೆ ಅರ್ಜುನ್ ಕಾರ್ಕಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಅವರು ಹಲ್ಲೆ ನಡೆಸಿದ ಸಂದರ್ಭ ತನ್ನ ಜೇಬಿನಲ್ಲಿದ್ದ ಹಣ ಕಳೆದುಹೋಗಿದೆ ಎಂದು ಕೂಡಾ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಮಂಗಳೂರು: ಸಿಗರೇಟ್ ನಲ್ಲಿ ಮಾದಕ ವಸ್ತುವನ್ನು ಬೆರೆಸಿ ಸಾರ್ವಜನಿಕ ಸ್ಥಳದಲ್ಲಿ ಸೇವನೆ ಮಾಡುತ್ತಿದ್ದ ಇಬ್ಬರು ಯುವಕರನ್ನು ಬರ್ಕೆ ಠಾಣಾ ಪೊಲೀಸರು ಬಂಧಿಸಿರುವ ಘಟನೆ ಮಂಗಳೂರಿನ ಬಿಜೈಯಲ್ಲಿ ನಡೆದಿದೆ. ಕೇರಳ ಕೋಯಿಕ್ಕೋಡ್ ಜಿಲ್ಲೆಯ ಕೊಯಿಲಾಂಡಿ ನಿವಾಸಿ ಶಾಮಿಲ್ (21) ಹಾಗೂ ಬಿಜೈ ನ್ಯೂ ರೋಡ್ ಬಳಿ ಸಾರ್ವಜನಿಕ ರಸ್ತೆ ಬದಿಯಲ್ಲಿ ಸಿಗರೇಟು ಸೇದುತ್ತಿದ್ದ ಮಲಪ್ಪುರ ಜಿಲ್ಲೆಯ ಪೆರುಂಪಡಪ್ಪು ನಿವಾಸಿ ಸಫ್ವಾನ್ (22) ಬಂಧಿತ ಆರೋಪಿಗಳು. ಇವರು ಸಾರ್ವಜನಿಕ ಸ್ಥಳಗಳಲ್ಲಿ ಡ್ರಗ್ಸ್ ಸೇದುತ್ತಿದ್ದ ಬಗ್ಗೆ ಅನುಮಾನಗೊಂಡು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮಾದಕ ವಸ್ತು ಸೇವನೆ ಮಾಡಿರುವ ಬಗ್ಗೆ ಒಪ್ಪಿಕೊಂಡಿದ್ದರು. ಇದೀಗ ಅವರನ್ನು ವಶಪಡಿಸಿಕೊಂಡು ಪೊಲೀಸರು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಡ್ರಗ್ಸ್ ಸೇವಿಸಿರೋದು ದೃಢಪಟ್ಟಿದೆ. ಈ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.