ಬೆಳ್ತಂಗಡಿ : ವೈಯಕ್ತಿಕ ಕಾರಣಗಳಿಂದ ವ್ಯಕ್ತಿಯೊಬ್ಬರು ಮನೆಯ ಕೊಟ್ಟಿಗೆಯ ಪಕಾಸಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಮರೋಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಕಂಬಳದಡ್ಕ ನಿವಾಸಿ ಗೋಪಾಲ ಪೂಜಾರಿ ಮಗ ಅಶೋಕ್(54) ಮೃತರು. ಅಶೋಕ್ ಯಾವುದೋ ಕಾರಣದಿಂದ ನೊಂದು ನ.30 ರಂದು ಬೆಳಗ್ಗೆ 11:30 ರಿಂದ 2 ಗಂಟೆ ಅವಧಿಯಲ್ಲಿ ಕಂಬಳದಡ್ಕ ಮನೆಯ ಪಕ್ಕದ ಕೊಟ್ಟಿಗೆಯ ಪಕಾಸಿಗೆ ನೈಲಾನ್ ಹಗ್ಗದಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮೃತಪಟ್ಟ ಅಶೋಕ್ ತಂದೆ ಗೋಪಾಲ ಪೂಜಾರಿ ವೇಣೂರು ಪೊಲೀಸ್ ಠಾಣೆಗೆ ನ.30 ರಂದು ದೂರು ನೀಡಿದ್ದಾರೆ. ಅದರಂತೆ ವೇಣೂರು ಪೊಲೀಸರು ಯುಡಿಆರ್ ಪ್ರಕರಣ ದಾಖಲಿಸಿಕೊಂಡಿದ್ದಾರೆ
Author: main-admin
ಮದುವೆ ನಿರಾಕರಿಸಿದ ಯುವತಿಯ ಬಲಾತ್ಕಾರಕ್ಕೆ ಪ್ರಯತ್ನ ಮಾಡಿ ಕೊಲೆಗೈಯಲು ಯತ್ನಿಸಿದ ಆರೋಪದಲ್ಲಿ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತನೊಬ್ಬನನ್ನು ಬಂಧಿಸಲಾಗಿದೆ. ಪೆರ್ಡೂರಿನ ಪ್ರದೀಪ್ ಪೂಜಾರಿ (26) ಬಂಧಿತ ಆರೋಪಿ. ಮದುವೆಯಾಗುವುದಾಗಿ ಒತ್ತಾಯಿಸಿದ ಆರೋಪಿ ಯುವತಿ ನಿರಾಕರಿಸಿದಾಗ ಅತ್ಯಾಚಾರಕ್ಕೆ ಯತ್ನಿಸಿದ್ದ. ಅಲ್ಲದೇ ಕತ್ತು ಹಿಸುಕಿ ಕೊಲೆಗೆ ಯತ್ನಿಸಿದ್ದ ಎಂದು ಉಡುಪಿ ಮಹಿಳಾ ಠಾಣೆಗೆ ದೂರು ನೀಡಲಾಗಿತ್ತು. ಅದರಂತೆ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಉಡುಪಿ: ಆನ್ಲೈನ್ ಮೂಲಕ ಲಕ್ಷಾಂತರ ರೂ. ವಂಚನೆಗೈದ ಪ್ರಕರಣಕ್ಕೆ ಸಂಬAಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಡುಪಿ ಜಿಲ್ಲಾ ಸೆನ್ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, 6,15,000 ರೂ. ಮೌಲ್ಯದ ನಗದು, ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಿಹಾರ ರಾಜ್ಯದ ಪಟ್ನಾ ಜಿಲ್ಲೆಯ ದೇವ್ ಹರ್ಷ(೨೦) ಹಾಗೂ ಬಿಹಾರ ನಳಂದಾ ಜಿಲ್ಲೆಯ ಚಂದನ ಕುಮಾರ್(೨೯) ಬಂಧಿತ ಆರೋಪಿಗಳು. ಇವರಿಂದ ೯೭ಸಾವಿರ ರೂ. ಮೌಲ್ಯದ ೧೦ ಮೊಬೈಲ್ ಸೆನ್, ೬೮,೦೦೦ರೂ. ಮೌಲ್ಯದ ೪ ಲ್ಯಾಪ್ಟಾಪ್ಗಳು ಹಾಗೂ ೪,೫೦,೦೦೦ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಅವಿನಾಶ್ ಎಂಬವರು ರಿಲಯನ್ಸ್ ಇಂಡಸ್ಟ್ರೀಸ್ ಮಾಲಕತ್ವದ ಕ್ಯಾಂಪಾ ಕೋಲಾ ಪ್ರಾಂಚೈಸ್ಗೆ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಿದ್ದು, ಕೆಲವು ದಿನಗಳಲ್ಲಿ ಅವಿನಾಶ್ಗೆ ಮೇಲ್ ಹಾಗೂ ಪೋನ್ ಮೂಲಕ ಹೆಚ್ಚಿನ ಮಾಹಿತಿಗಾಗಿ ಹಾಗೂ ದಾಖಲಾತಿಗಾಗಿ ಕರೆ ಬಂದಿತ್ತು. ಅವಿನಾಶ್ ವಿದ್ಯಾÁ್ಯಸ, ಬ್ಯಾಂಕ್ ಹಾಗೂ ಆರ್ರ್ ಕಾರ್ಡ್ ದಾಖಲಾತಿಗಳನ್ನು ಕಳುಹಿಸಿದ್ದರು. ಆಗ ಅವರು ಪ್ರಾಂಚೈಸ್ ಅರ್ಜಿ ಸಲ್ಲಿಕೆ ಆಗಿರುವುದಾಗಿ ತಿಳಿಸಿದ್ದು, ಆರೋಪಿಗಳು ತಿಳಿಸಿದಂತೆ ಅವಿನಾಶ್ ರಿಜಿಸ್ಟೇಷನ್, ಪ್ರೋಡಕ್ಟ್ ಬುಕಿಂಗ್ಗೆ…
ಕಾಪು: ಗೂಡ್ಸ್ ಟೆಂಪೋವೊAದು ಪಲ್ಟಿಯಾದ ಪರಿಣಾಮ ನಾಲ್ವರು ಮೃತಪಟ್ಟು ಹಲವು ಮಂದಿ ಗಾಯಗೊಂಡ ಘಟನೆ ಕಾಪು ಸಮೀಪದ ಕೋತಲ್ಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ 66ರಲ್ಲಿ ರವಿವಾರ ನಡೆದಿದೆ. ಕಾಪು ಮಜೂರಿನಿಂದ ಮಲ್ಪೆಗೆ ಡೆಕರೋಷನ್ ಸಂಬAಧಿಸಿದ ಸಲಕರಣೆ ಗಳನ್ನು ಸಾಗಿಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್ಗೆ ಹತ್ತಿ ರಸ್ತೆಯಲ್ಲಿ ಪಲ್ಟಿಯಾಗಿ ಬಿತ್ತೆನ್ನಲಾಗಿದೆ. ವಾಹನದಲ್ಲಿ ಒಟ್ಟು ಒಂಭತ್ತು ಮಂದಿ ಕೆಲಸಗಾರರು ಇದ್ದು, ಅವರಲ್ಲಿ ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆನ್ನಲಾಗಿದೆ. ಇವರ ಪೈಕಿ ನಾಲ್ವರು ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ವೇಳೆ ಮೃತಪಟ್ಟರೆಂದು ತಿಳಿದು ಬಂದಿದೆ. ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಹಾಸ್ಯನಟ ಎಂ.ಎಸ್. ಉಮೇಶ್ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. 80 ವರ್ಷ ವಯಸ್ಸಿನ ಅವರು ಚಿಕಿತ್ಸೆ ಫಲಕಾರಿ ಆಗದೆ ಕೊನೆಯುಸಿರು ಎಳೆದಿದ್ದಾರೆ. ನೂರಾರು ಸಿನಿಮಾಗಳಲ್ಲಿ ನಟಿಸಿ ಎಂ.ಎಸ್. ಉಮೇಶ್ ಅವರು ಜನಪ್ರಿಯತೆ ಪಡೆದಿದ್ದರು. ಕಳೆದ ಕೆಲವು ದಿನಗಳಿಂದ ಅವರಿಗೆ ತೀವ್ರ ಅನಾರೋಗ್ಯ ಉಂಟಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿ ಆಗದೇ ಅವರು ಮೃತರಾಗಿದ್ದಾರೆ. ಉಮೇಶ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾಗ ಅನೇಕ ಕಲಾವಿದರು ಹೋಗಿ ಮಾತನಾಡಿಸಿದ್ದರು. ಅವರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದರು. ಆದರೆ ಪ್ರಾರ್ಥನೆ ಫಲಿಸಿಲ್ಲ. ತನ್ನ ವಿಶಿಷ್ಟವಾದ ಸ್ವರ, ಮ್ಯಾನರಿಸಂ ಮತ್ತು ನಟನೆಯಿಂದ ಉಮೇಶ್ ಅಪಾರ ಅಭಿಮಾನಿಗಳನ್ನು ಗಳಿಸಿದ್ದರು. 300ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಅವರು ಬಹುತೇಕ ಎಲ್ಲ ನಾಯಕ ನಟರ ಚಿತ್ರಗಳಲ್ಲಿ ಹಾಸ್ಯ ಪಾತ್ರಗಳಿಗೆ ಜೀವ ತುಂಬಿದ್ದರು. ಇತ್ತೀಚೆಗೆ ಉಮೇಶ್ ಮನೆಯಲ್ಲೇ ಕಾಲು ಜಾರಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಪರೀಕ್ಷೆ ವೇಳೆ…
ಮಂಗಳೂರು : ಆದಿತ್ಯ ಬಿರ್ಲಾ ಜ್ಯುವೆಲ್ಲರಿಯ ಇಂದ್ರಿಯಾ, ಮಂಗಳೂರಿನಲ್ಲಿ ತನ್ನ ಹೊಸ ಮಳಿಗೆಯನ್ನು ಪ್ರಾರಂಭಿಸುವುದರೊಂದಿಗೆ ಕರ್ನಾಟಕದಲ್ಲಿ ತನ್ನ ಹೆಜ್ಜೆಗುರುತನ್ನು ಬಲಪಡಿಸಿದೆ. ಇದು ಭಾರತದಲ್ಲಿ ಚಿಲ್ಲರೆ ಆಭರಣ ವ್ಯಾಪಾರಕ್ಕೆ ಹೊಸ ವ್ಯಾಖ್ಯಾನ ನೀಡುವ ಸಂಸ್ಥೆಯ ಪ್ರಯಾಣದಲ್ಲಿ ಮಹತ್ವದ ಹೆಜ್ಜೆಯಾಗಿದೆ. ಮಂಗಳೂರಿನ ಬೆಂದೂರ್ವೆಲ್ನಲ್ಲಿ ನೆಲೆಗೊಂಡಿರುವ ಈ ಹೊಸದಾಗಿ ಪ್ರಾರಂಭಿಸಲಾದ ಇಂದ್ರಿಯಾ ಮಳಿಗೆಯಲ್ಲಿ ಭಾರತೀಯ ಕರಕುಶಲತೆಗೆ ಹೊಸ ರೂಪ ಸಿಗುತ್ತದೆ. ಸಂಸ್ಕೃತಿಯಲ್ಲಿ ಆಧುನಿಕ ಸೊಬಗಿನೊಂದಿಗೆ ಬೆಸೆಯುತ್ತದೆ. ಮಳಿಗೆಯಲ್ಲಿ ಗ್ರಾಹಕರು ಕ್ಯುರೇಟೆಡ್ ವಲಯಗಳನ್ನು ಕಾಣಬಹುದು. ಇದರಲ್ಲಿ ಮೀಸಲಾದ ಕಾರೀಗರಿ (ಕುಶಲಕರ್ಮಿಗಳ) ಸ್ಥಳ ಮತ್ತು 28,೦೦೦ ಕ್ಕೂ ಹೆಚ್ಚು ವಿನ್ಯಾಸಗಳ ಪ್ರದರ್ಶನವಿದೆ. ಈ ಉದ್ಘಾಟನೆಯ ಮೂಲಕ, ಇಂದ್ರಿಯಾ ಮಂಗಳೂರಿನ ಶ್ರೀಮಂತ ಕರಾವಳಿ ಸಂಸ್ಕೃತಿ ಮತ್ತು ಆಭರಣಗಳೊಂದಿಗೆ ತಾನು ಎಷ್ಟು ಆಳವಾಗಿ ಸಂಬಂಧ ಹೊಂದಿದ್ದೇನೆ ಎಂಬುದನ್ನು ಸೂಚಿಸುತ್ತದೆ. ಇಂದ್ರಿಯಾದ ಸಿಇಒ ಸಂದೀಪ್ ಕೋಹ್ಲಿ ಅವರು ಮಾತನಾಡುತ್ತಾ, “ಕರ್ನಾಟಕದಲ್ಲಿ ಇಂದ್ರಿಯಾ ಹೆಜ್ಜೆಗುರುತು ವಿಸ್ತರಿಸುತ್ತಿದ್ದು, ಮಂಗಳೂರಿಗೆ ಕಾಲಿಟ್ಟಿದ್ದು ಮಹತ್ವದ ಸೇರ್ಪಡೆಯಾಗಿದೆ. ಕರಾವಳಿ ನಗರದ ಉತ್ಸಾಹಭರಿತ ಸಂಸ್ಕೃತಿ ಮತ್ತು ಸನಾತನ ಸೌಂದರ್ಯದಿಂದ ಪ್ರೇರಿತವಾದ ನಮ್ಮ…
ಪುತ್ತೂರು ಸರ್ವೆ ಗಡಿಪಿಲದಲ್ಲಿ ಆಕ್ರಮ ಗೋಸಾಗಾಟ – ಗೋವುಗಳನ್ನು ರಸ್ತೆಬದಿ ಬಿಟ್ಟು ಪರಾರಿ- ವಿಶ್ವ ಹಿಂದೂ ಪರಿಷದ್ ಬಜರಂಗದಳದ ಕಾರ್ಯಕರ್ತರ ಸಹಕಾರದಿಂದ ಸುರಕ್ಷಿತವಾಗಿ ಪೋಲಿಸ್ ಠಾಣೆಗೆ ಗೋವುಗಳು – ಘಟನೆಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ವಿಶ್ವ ಹಿಂದೂ ಪರಿಷದ್ ಬಜರಂಗದಳ ಆಗ್ರಹ ಪುತ್ತೂರು ಸುಬ್ರಹ್ಮಣ್ಯ ರಸ್ತೆಯ ಸರ್ವೆ ಸಮೀಪದ ಗಡಿಪಿಲ ಎಂಬಲ್ಲಿ ಇಂದು ಮುಂಜಾನೆ ಆಕ್ರಮ ಗೋಸಾಗಾಟ ನಡೆದಿದ್ದು ಗೋಕಳ್ಳರು ಅವರ ಗೋಸಾಗಾಟದ ವಾಹನ ಹಾಳಾದುದರಿಂದ ಗೋವುಗಳನ್ನು ರಸ್ತೆ ಬದಿಯಲ್ಲಿ ಬಿಟ್ಟು ಪರಾರಿಯಾದ ಶಂಕೆ ವ್ಯಕ್ತವಾಗಿದ್ದು ಸ್ಥಳದಲ್ಲಿ 5 ಗೋವುಗಳು ಪತ್ತೆಯಾಗಿವೆ. ತಕ್ಷಣ ಕಾರ್ಯಪ್ರವೃತರಾದ ಸ್ಥಳೀಯ ವಿಶ್ವ ಹಿಂದೂ ಪರಿಷದ್ ಬಜರಂಗದಳದ ಕಾರ್ಯಕರ್ತರು ಮತ್ತು ಸ್ಥಳೀಯರು ಪುತ್ತೂರು ಪೋಲಿಸ್ ಇಲಾಖೆಯ ಸಿಬ್ಬಂದಿಗಳ ಜೋತೆ ಸೇರಿ ಗೋವುಗಳನ್ನು ಸುರಕ್ಷಿತವಾಗಿ ಪುತ್ತೂರು ನಗರ ಫೋಲಿಸ್ ಠಾಣೆಗೆ ಸಾಗಿಸಿ ರಕ್ಷಿಸಲಾಗಿದೆ. ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಾರ್ಯಕರ್ತರ ಸಹಕಾರದಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಗೋಶಾಲೆಯಿಂದ ಗೋವುಗಳಿಗೆ ಬೈಹುಲ್ಲು ವ್ಯವಸ್ಥೆ ಮಾಡಲಾಗಿದೆ. ಈ ಆಕ್ರಮ…
ಮಂಗಳೂರು : ಮಂಗಳೂರಿನ ಸ್ವರ್ಣ ಜುವೆಲರ್ಸ್ ಅಂಗಡಿಗೆ ಗ್ರಾಹಕರಂತೆ ಭೇಟಿ ನೀಡಿ, ತನ್ನ ಹೆಸರನ್ನು ಬದಲಿಸಿ 31 ಲಕ್ಷ ರೂ. ಮೌಲ್ಯದ ಚಿನ್ನದ ಬಿಸ್ಕಿಟ್ಗಳನ್ನು ಮೂಲಕ ಪಡೆದು ಪರಾರಿಯಾಗಿದ್ದ ಅಂತರ್ರಾಜ್ಯ ವಂಚನೆ ಆರೋಪಿಯನ್ನು ಉರ್ವಾ ಪೊಲೀಸರು ಕೊಯಂಬತ್ತೂರಿನ ಪುಲಿಯಕುಲಂ ಎಂಬಲ್ಲಿ ಪತ್ತೆಹಚ್ಚಿ ಬಂಧಿಸಿದ್ದಾರೆ. ಆರೋಪಿಯಿಂದ 240 ಗ್ರಾಂ 24 ಕ್ಯಾರೆಟ್ ಶುದ್ಧತೆಯ ಚಿನ್ನದ ಬಿಸ್ಕಿಟ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ತಮಿಳುನಾಡು ಕೊಯಂಬತ್ತೂರಿನ ಸಿಂಗನಲ್ಲೂರಿನಲ್ಲಿ ಪದ್ಮ ಕಿರಣ್ ಎನ್ಕ್ಲೇವ್ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ವಾಸವಾಗಿದ್ದ ಪುಗಲ್ ವಾಸನ್ @ ಪುಗಲ್ ಹಸನ್ @ ಅರುಣ್ (50) ಬಂಧಿತ ಆರೋಪಿ. ಘಟನೆಯ ವಿವರ: 21-11-2025ರಂದು ಸಂಜೆ, ಉರ್ವಾಸ್ಟೋರ್–ಚಿಲಿಂಬಿ ಪ್ರದೇಶದ ಗುಜ್ಜಾಡಿ ಚೆಂಬರ್ಸ್ನಲ್ಲಿರುವ ಸ್ವರ್ಣ ಜುವೆಲರ್ಸ್ ಗೆ ಬಂದಿದ್ದ ‘ಅರುಣ್’ ಎಂಬ ನಕಲಿ ಹೆಸರಿನಲ್ಲಿ ಬಂದಿದ್ದ ವ್ಯಕ್ತಿ, ಬಿಜೈ–ಕಾಫಿಕಾಡ್ನಲ್ಲಿರುವ ಅಜಂತ್ ಬಿಸಿನೆಸ್ ಸೆಂಟರ್ನಲ್ಲಿ ತಾನು ಹೊಸದಾಗಿ ಕಚೇರಿ ತೆರೆಯುತ್ತಿರುವುದಾಗಿ ಅಂಗಡಿ ಮಾಲಕರಿಗೆ ಪರಿಚಯ ಮಾಡಿಕೊಂಡಿದ್ದ. ಅಲ್ಲಿಗೆ ಬರುವ ಅತಿಥಿಗಳಿಗೆ ಉಡುಗೊರೆಯಾಗಿ ನೀಡುವುದಕ್ಕಾಗಿ ತಲಾ 10 ಗ್ರಾಂ ತೂಕದ 24…
ಸುಬ್ರಹ್ಮಣ್ಯ: ಅಪ್ರಾಪ್ತ ಬಾಲಕನಿಗೆ ವ್ಯಕ್ತಿಯೋರ್ವ ಗದರಿಸಿ ಕೋಲಿನಿಂದ ಹೊಡೆದ ಘಟನೆ ನಡೆದಿದ್ದು, ಈ ಬಗ್ಗೆ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆಯ ಅಪ್ರಾಪ್ತ ಪ್ರಾಯದ ಮಗ ಸ್ಥಳೀಯ ಶಾಲೆಯಲ್ಲಿ ಓದುತ್ತಿದ್ದು, ನ.24ರಂದು ಆರೋಪಿ ಚೇತನ್ ಎಂಬಾತ ಬಾಲಕನಿಗೆ ಗದರಿಸಿ ಕೋಲಿನಿಂದ ಹೊಡೆಯುತ್ತಿರುವ ವಿಡಿಯೋ ಮೊಬೈಲ್ನಲ್ಲಿ ಪ್ರಸಾರವಾಗಿರುವುದು ಮಹಿಳೆಯ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಬಾಲಕನ ತಾಯಿ ಆರೋಪಿ ಚೇತನ್ ವಿರುದ್ಧ ನೀಡಿದ ದೂರಿನ ಮೇರೆಗೆ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ ನಂಬ್ರ :60/2025, ಕಲಂ:118(1)BNS-2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಮಂಗಳೂರು: ನಗರ ಹೊರವಲಯದ ಮೂಡುಶೆಡ್ಡೆ ಗ್ರಾ.ಪಂ. ಆವರಣದಲ್ಲಿ ಮಗಳು ತನ್ನ ತಾಯಿಗೆ ಅಮಾನವೀಯವಾಗಿ ಹಲ್ಲೆ ನಡೆಸುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೂಡುಶೆಡ್ಡೆಯ ಶಿವನಗರ ಎಂಬಲ್ಲಿ ತಾಯಿ ಮತ್ತು ಮಗಳು ವಾಸಿಸುತ್ತಿದ್ದು, ಇವರ ಮಧ್ಯೆ ಆಗಾಗ ಜಗಳವಾಗುತ್ತಿತ್ತು ಎನ್ನಲಾಗಿದೆ. ಈ ಬಗ್ಗೆ ತಾಯಿ ಕಾವೂರು ಠಾಣೆಗೆ ತೆರಳಿ ದೂರುತ್ತಿದ್ದರು ಎಂದು ತಿಳಿದು ಬಂದಿದೆ. ಪೊಲೀಸರು ತಾಯಿ ಮತ್ತು ಮಗಳಿಗೆ ಬುದ್ಧಿ ಹೇಳಿ ಕಳುಹಿಸಿಕೊಡುತ್ತಿದ್ದರು ಎನ್ನಲಾಗಿದೆ. ಇತ್ತೀಚೆಗೆ ತಾಯಿಯು ಮೂಡುಶೆಡ್ಡೆ ಗ್ರಾ.ಪಂ.ಗೆ ತೆರಳಿ ಮಗಳ ವಿರುದ್ಧ ದೂರು ನೀಡತೊಡಗಿದ್ದಾರೆ. ಮೂರು ದಿನದ ಹಿಂದೆ ತಾಯಿ ಗ್ರಾ.ಪಂ. ಕಚೇರಿಗೆ ತೆರಳಿ ದೂರು ನೀಡುತ್ತಿದ್ದಾಗ ಮಗಳು ತಾಯಿಯನ್ನು ತಳ್ಳಿದ್ದಾಳೆ. ತಾಯಿ ಕೂಡ ಮಗಳಿಗೆ ತಿರುಗೇಟು ನೀಡಿದ್ದರೂ ಕೂಡ ಆಕ್ರೋಶಗೊಂಡ ಮಗಳು ಚಪ್ಪಲಿಯಿಂದ ತಾಯಿಯ ಮುಖಕ್ಕೆ ಅಮಾನವೀಯವಾಗಿ ಹಲ್ಲೆ ನಡೆಸಿರುವುದು ವೀಡಿಯೋದಲ್ಲಿ ಕಂಡು ಬಂದಿದೆ. ಇದನ್ನು ಗ್ರಾ.ಪಂ. ಕಚೇರಿಯಲ್ಲಿದ್ದವರು ವೀಡಿಯೋ ಮಾಡಿದ್ದು, ಅದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮಗಳ ಅಮಾನವೀಯ ಕೃತ್ಯಕ್ಕೆ…










