ಮೂಡುಬಿದಿರೆ ಪೊಲೀಸ್ ಠಾಣಾ ಸರಹದ್ದಿನ ಮೂಡುಮೂರ್ನಾಡು ಗ್ರಾಮದ ಹೊಯಿಪಾಲಬೆಟ್ಟು ಎಂಬಲ್ಲಿ ಮಾ.18 ರಂದು ಶ್ರೀ ಕೊಡಮಣಿತ್ತಾಯ ಹಾಗೂ ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆಯು ಮುಗಿದ ಬಳಿಕ ರಾಜೇಂದ್ರ ಪೂಜಾರಿ ಹಾಗೂ ರಾಜೇಶ್ ಬಲ್ಲಾಳ್ ರವರ ನೇತೃತ್ವದಲ್ಲಿ ಕೆಲವು ವ್ಯಕ್ತಿಗಳು ಅಕ್ರಮವಾಗಿ ಸೇರಿಕೊಂಡು ಕೋಳಿಗಳಿಗೆ ಹರಿತವಾದ ಬಾಲ್ ಗಳನ್ನು ಕಟ್ಟಿ ಹಿಂಸಾತ್ಮಕವಾಗಿ ಕಾದಾಡಲು ಬಿಟ್ಟು ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದರು. ಈ ಬಗ್ಗೆ ದಾಳಿ ನಡೆಸಿ ಕೋಳಿ ಅಂಕದಲ್ಲಿ ನಿರತರಾಗಿದ್ದ 6 ಜನ ಅರೋಪಿಗಳನ್ನು ಹಾಗೂ ಕೋಳಿ ಅಂಕದಲ್ಲಿ ಪಣಕ್ಕಿಟ್ಟಿದ್ದ 1480/- ರೂ ಹಣವನ್ನು ಹಾಗೂ 17 ಜೀವಂತ ಹುಂಜಗಳು ಮತ್ತು ಕೋಳಿ ಅಂಕಕ್ಕೆ ಬಳಸುವ ಎರಡು ಬಾಲುಗಳನ್ನು ವಶಕ್ಕೆ ಪಡೆದು ದೈವಸ್ದಾನದ ವ್ಯವಸ್ಥಾಪನಾ ಸಮಿತಿ ಹಾಗೂ ಆರೋಪಿಗಳ ಮೇಲೆ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಅ ಕ್ರ 30/2026 ಕಲಂ 189(2), 193 ಜೊತೆಗೆ 190 ಬಿ ಎನ್ ಎಸ್ ಮತ್ತು 87, 93 ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 11(1)(ಟಿ)…
Author: main-admin
ಮಂಗಳೂರು: 9 ವರ್ಷದ ಬಾಲಕನನ್ನು ಹಣ ಹಾಗೂ ತಿಂಡಿ ನೀಡುವ ನೆಪದಲ್ಲಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಮಾರ್ಚ್ 18, 2026ರಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ಬಂಧಿತ ಆರೋಪಿಯನ್ನು ಆಶೀಶ್ ಪೂಜಾರಿ (33), ಮಂಜುನಾಥ್ ಅವರ ಪುತ್ರ, ಕೋಟೆಕಾರು ಪೋಸ್ಟ್ನ ಮಡ್ಯಾರ್ ನಿವಾಸಿ ಎಂದು ಗುರುತಿಸಲಾಗಿದೆ. ಇವರು ಬಿಜೈಯ ಎಂಎಸ್ಸಿ ಲಾಜಿಸ್ಟಿಕ್ಸ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ದೂರಿನ ಪ್ರಕಾರ, ಆರೋಪಿಯು ಬಾಲಕನಿಗೆ ಅಶ್ಲೀಲ ವಿಡಿಯೋಗಳನ್ನು ತೋರಿಸಿ ಅಸಭ್ಯ ಕ್ರಿಯೆಗಳಿಗೆ ಪ್ರೇರೇಪಿಸಿರುವುದು ತನಿಖೆಯಲ್ಲಿ ತಿಳಿದುಬಂದಿದೆ. ಈ ಸಂಬಂಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೊಕ್ಸೋ ಕಾಯ್ದೆಯ ಸೆಕ್ಷನ್ 4, 6, 12 ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) ಕಾಯ್ದೆಯ ಸೆಕ್ಷನ್ 75 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು: ದನಗಳನ್ನು ವಧೆಗಾಗಿ ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಸಾಗಿಸುತ್ತಿದ್ದ ಕಾರನ್ನು ಪೊಲೀಸರು ತಡೆದು ಪರಿಶೀಲಿಸಿದ ವೇಳೆ ಆರೋಪಿಗಳು ಸ್ಥಳದಿಂದ ಪರಾರಿಯಾದ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬುಧವಾರ ಮುಂಜಾನೆ ಸುಮಾರು 4.30ರ ವೇಳೆಗೆ ಶಾಸ್ತಾವು ಶ್ರೀ ಭೂತನಾಥೇಶ್ವರ ದೇವಸ್ಥಾನದ ಬಡಗ ಎಡಪದವು ಗ್ರಾಮದ ಬಳಿ ಬಜರಂಗದಳ ಸಂಘಟನೆಯ ಮಾಹಿತಿ ಆಧರಿಸಿ ಪೊಲೀಸರು ವಾಹನವನ್ನು ತಡೆದು ಪರಿಶೀಲನೆ ನಡೆಸಿದರು. ಈ ವೇಳೆ ಕಾರಿನೊಳಗೆ ಹಿಂಸಾತ್ಮಕ ರೀತಿಯಲ್ಲಿ 4 ದನಗಳನ್ನು ಸಾಗಿಸುತ್ತಿರುವುದು ಪತ್ತೆಯಾಯಿತು. ಪೊಲೀಸರು ವಾಹನವನ್ನು ತಡೆದ ತಕ್ಷಣ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಪರಾರಿಯಾದ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಈ ಸಂಬಂಧ ತನಿಖೆ ಮುಂದುವರಿದಿದೆ. ಇನ್ನಷ್ಟು ಪರಿಶೀಲನೆ ನಡೆಸಿದ ವೇಳೆ ಫಾರ್ಚುನರ್ ಕಾರಿನಲ್ಲಿ ಮಾರಕಾಯುಧವೂ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದ ಪಿಯುಸಿ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಸಮೀಪದ ಅರಸಮಜಲು ಪ್ರದೇಶದಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ನಿಶಾಂತ್ (16) ಎಂದು ಗುರುತಿಸಲಾಗಿದೆ. ಘಟನೆಗೆ ಸಂಬ0ಧಿಸಿದ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
ಮಂಗಳೂರು : ನಗರದ ಹೊರವಲಯದ ಪಡುಶೆಡ್ಡೆ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಕಾವೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಮರಕಡ ಕುಂಜತ್ತಬೈಲು ನಿವಾಸಿ ಪ್ರತೀಕ್ (32) ಮತ್ತು ಯೆಯ್ಯಾಡಿ ದಂಡಕೇರಿ ನಿವಾಸಿ ವೀಕ್ಷಿತ್ (21) ಬಂಧಿತ ಆರೋಪಿಗಳು. ಕಾವೂರು ಪೊಲೀಸರು ಗಸ್ತಿನಲ್ಲಿದ್ದ ವೇಳೆ ಪಡುಶೆಡ್ಡೆ ಬಳಿ ಸಾರ್ವಜನಿಕ ಸ್ಥಳದಲ್ಲಿ ಕಾರು ನಿಲ್ಲಿಸಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದಇಬ್ಬರನ್ನು ವಿಚಾರಣೆ ಒಳಪಡಿಸಿದ್ದಾರೆ. ಈ ವೇಳೆ ಅವರು ಎಂಡಿಎಂಎ ಮಾರಾಟ ಮಾಡಲು ಗ್ರಾಹಕರಿಗಾಗಿ ಕಾಯುತ್ತಿರುವುದಾಗಿ ತಿಳಿಸಿದ್ದಾರೆ. ತಪಾಸಣೆ ನಡೆಸಿದಾಗ ಪ್ರತೀಕ್ ಬಳಿ ಸುಮಾರು 30 ಸಾವಿರ ರೂ. ಮೌಲ್ಯದ 2.29 ಗ್ರಾಂ ತೂಕದ ಎಂಡಿಎಂಎ ಮತ್ತು ವೀಕ್ಷಿತ್ ಬಳಿ 40 ಸಾವಿರ ರೂ. ಮೌಲ್ಯದ 4.03 ಗ್ರಾಂ ತೂಕದ ಎಂಡಿಎಂಎ ಪತ್ತೆಯಾಗಿದೆ. ಜತೆಗೆ 20 ಸಾವಿರ ರೂ. ಮೌಲ್ಯದ 2 ಮೊಬೈಲ್ ಫೋನ್, 5 ಲಕ್ಷ ರೂ. ಮೌಲ್ಯದ ಕಾರು, 350 ರೂ. ಮೌಲ್ಯದ ಡಿಜಿಟಲ್ ತೂಕ ಮಾಪನ…
ಮಂಗಳೂರು: ಹತ್ಯೆಗೆ ಯತ್ನ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳೂರು ಪೂರ್ವ ಪೊಲೀಸರು ಪಳ್ನೀರ್ ನಿವಾಸಿ ಮಹಮ್ಮದ್ ಇಕ್ಬಾಲ್ ಅವರ ಪುತ್ರ ಮಹಮ್ಮದ್ ಶರೀಫ್ (26) ಅವರನ್ನು ಬಂಧಿಸಿದ್ದಾರೆ. ಮಲ್ಲಿಕಟ್ಟೆ ನಿವಾಸಿ, ಮೃತ ಶಿವಪ್ಪ ಶೆಟ್ಟಿ ಅವರ ಪುತ್ರ ಮೋಹನದಾಸ್ ಶೆಟ್ಟಿ (56) ನೀಡಿದ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಆರೋಪಿತ ಹಾಗೂ ಅವರ ತಂದೆ ಮಹಮ್ಮದ್ ಇಕ್ಬಾಲ್ ಮತ್ತು ದೂರುದಾರರ ನಡುವೆ ಭೂ ವ್ಯವಹಾರಕ್ಕೆ ಸಂಬಂಧಿಸಿದ ದೀರ್ಘಕಾಲದ ತಕರಾರು ಈ ಘಟನೆಯ ಮೂಲವಾಗಿದೆ. ಕನಾ ಸುರತ್ಕಲ್ ಮತ್ತು ವಾಮಂಜೂರು ಪ್ರದೇಶಗಳಲ್ಲಿ ನಡೆದ ಭೂ ವ್ಯವಹಾರಗಳಲ್ಲಿ ಸುಮಾರು ₹2 ಕೋಟಿ ಹೂಡಿಕೆ ಮಾಡಿದ್ದ ಆರೋಪಿತ, ದೂರುದಾರರು ತಮ್ಮನ್ನು ಮೋಸ ಮಾಡಿದ್ದಾರೆ ಎಂಬ ಅನುಮಾನ ಹೊಂದಿದ್ದನು ಎಂದು ತಿಳಿದುಬಂದಿದೆ. ದೂರಿನ ಪ್ರಕಾರ, ಮಾರ್ಚ್ 17, 2026ರಂದು ಬೆಳಿಗ್ಗೆ ಸುಮಾರು 11:00 ಗಂಟೆ ವೇಳೆಗೆ ಆರ್ಯ ಸಮಾಜ್ ರಸ್ತೆಯಲ್ಲಿ ಮಹಮ್ಮದ್ ಶರೀಫ್ ಅವರು ಮೋಹನದಾಸ್ ಶೆಟ್ಟಿ ಅವರನ್ನು ಅಡ್ಡಗಟ್ಟಿ ವಾಗ್ವಾದ ನಡೆಸಿದರು. ಈ…
ಮೂಡುಬಿದಿರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧ ಕೇಳಿಬಂದ ಲೈಂಗಿಕ ಕಿರುಕುಳ ಮತ್ತು ಭ್ರಷ್ಟಾಚಾರದ ಆರೋಪಗಳು ಗಂಭೀರ ಸ್ವರೂಪ ಪಡೆದುಕೊಂಡ ಹಿನ್ನೆಲೆ, ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಈ ಸಂಬಂಧ ಆದೇಶ ಹೊರಡಿಸಿದ್ದಾರೆ. ಈ ಕ್ರಮಕ್ಕೆ ಪ್ರಮುಖ ಕಾರಣವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಆಡಿಯೋ ಮತ್ತು ವಿಡಿಯೋ ತುಣುಕುಗಳು ಪರಿಣಮಿಸಿವೆ. ಫೋನ್ ಮೂಲಕ ಮಹಿಳೆಯೊಬ್ಬರೊಂದಿಗೆ ಇನ್ಸ್ಪೆಕ್ಟರ್ ನಡೆಸಿದ ಅಸಭ್ಯ ಸಂಭಾಷಣೆ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದ್ದು, ಇಲಾಖೆಯ ಘನತೆಗೆ ಧಕ್ಕೆಯಾಗಿದೆ ಎಂದು ಪ್ರಾಥಮಿಕ ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಪ್ರಾಥಮಿಕ ತನಿಖೆಯ ವರದಿ ಆಧಾರ:ಎಸಿಪಿ ಮಟ್ಟದಲ್ಲಿ ನಡೆದ ಪ್ರಾಥಮಿಕ ಪರಿಶೀಲನೆಯಲ್ಲಿ ಸಂದೇಶ್ ವಿರುದ್ಧದ ಆರೋಪಗಳಿಗೆ ತಕ್ಕ ಮಟ್ಟಿನ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗಿದೆ. ವೈರಲ್ ಆಗಿರುವ ಆಡಿಯೋದಲ್ಲಿ ಮಹಿಳೆಯರೊಂದಿಗೆ ಅನಾಚಾರಿಕವಾಗಿ ವರ್ತಿಸಿರುವುದು ಮೇಲ್ನೋಟಕ್ಕೆ ದೃಢಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೂರುದಾರರ ಹಿನ್ನೆಲೆ:ಇನ್ಸ್ಪೆಕ್ಟರ್ ವಿರುದ್ಧ ಆರೋಪ ಮಾಡಿದ್ದ ಸುಮತಿ ನಾಯಕ್…
ಬೆಳ್ತಂಗಡಿ: ಸೌಜನ್ಯಾ ಪರ ಹೊರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿಗೆ ಗಡಿಪಾರು ಆದೇಶ ಹೊರಡಿಸಲಾಗಿದೆ. ಮಹೇಶ್ ಶೆಟ್ಟಿ ತಿಮರೋಡಿಯನ್ನು ಹೈಕೋರ್ಟ್ ಆದೇಶದಂತೆ ಆರು ತಿಂಗಳು ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರು ಮಾ.16ರಂದು ಆದೇಶ ಹೊರಡಿಸಿದ್ದಾರೆ. ಗಡಿಪಾರು ಅವಧಿಯು ಮಾ.16ರಿಂದ ಸೆಪ್ಟಂಬರ್ 16ರವರೆಗೆ ಆರು ತಿಂಗಳು ಕಾಲಾವಧಿಯನ್ನು ಹೊಂದಿದೆ. ಪುತ್ತೂರು ಎಸಿಯವರ ಗಡಿಪಾರು ಆದೇಶದಂತೆ ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿಣಿ ಸಿ.ಕೆ. ನೇತೃತ್ವದಲ್ಲಿ ಪೊಲೀಸರು ಗಡಿಪಾರು ಆದೇಶ ಪ್ರತಿಯನ್ನು ಜಾರಿ ಮಾಡುವುದಕ್ಕಾಗಿ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯವರ ಮನೆಗೆ ಸೋಮವಾರ ಮಧ್ಯರಾತ್ರಿಯೇ ತೆರಳಿದ್ದರು. ಆದರೆ ಈ ವೇಳೆ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿರಲಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ತಿಮರೋಡಿಯ ಮನೆಯ ಗೋಡೆಗೆ ನೋಟಿಸ್ ಅಂಟಿಸಿರುವುದಾಗಿ ತಿಳಿದು ಬಂದಿದೆ
ಮೂಡುಬಿದಿರೆ: ಮೂಡುಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ವಿರುದ್ದ ಮಹಿಳೆ ಆರೋಪ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ಮಹಿಳೆ ಹಾಗೂ ಇನ್ಸ್ಪೆಕ್ಟರ್ ಸಂದೇಶ್ ಫೋನ್ ಸಂಭಾಷಣೆ ಮಾಡಿದ್ದಾರೆ ಎನ್ನಲಾದ ಆಡಿಯೋ ಭಾರಿ ವೈರಲ್ ಆಗಿದೆ. 8 ವರ್ಷ ಅಕ್ರಮ ಸಂಬಂಧ ಇಟ್ಟುಕೊಂಡರೂ ಇನ್ಸ್ಪೆಕ್ಟರ್ ಅನ್ನೋ ಕಾರಣಕ್ಕೆ ಸಹಿಸಿಕೊಂಡಿದ್ದೇನೆ. ಆದರೆ ಮಗಳ ಮೇಲೆ ಕಣ್ಣು ಹಾಕಿದರೆ ಸುಮ್ಮನಿರಲ್ಲ ಅನ್ನೋ ಆಡಿಯೋ ಕೋಲಾಹಲ ಸೃಷ್ಟಿಸಿದೆ. ಈ ಆಡಿಯೋ ವೈರಲ್ ಆದ ಬೆನ್ನಲ್ಲೇ ರಾಜ್ಯದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ. ಇದರ ಬೆನ್ನಲ್ಲೇ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಮಹತ್ವದ ಆದೇಶ ನೀಡಿದ್ದಾರೆ. ಉತ್ತರ ವಿಭಾಗದ ಎಸಿಪಿಗೆ ವಿಚಾರಣೆ ನಡೆಸಿ ವರದಿ ಸಲ್ಲಿಸಲು ಕಮಿಷನರ್ ಸೂಚನೆ ನೀಡಿದ್ದಾರೆ. ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪ್ರಕರಣ ಕುರಿತು ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಪ್ರಾಥಮಿಕ ಮಾಹಿತಿ ನೀಡಿದ್ದಾರೆ. ಇದುವರೆಗೆ ಯಾವುದೇ ಮಹಿಳೆ ಇನ್ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಬಗ್ಗೆ ಅಧಿಕೃತ ದೂರು ನೀಡಿಲ್ಲ. ಸಂತ್ರಸ್ತ ಮಹಿಳೆ ಮತ್ತು ಅವರ ಸಹೋದರಿಯ ನಡುವೆ…
ಮಂಗಳೂರಿನ ಖ್ಯಾತ ಕೊಂಕಣಿ ಸಾಹಿತಿ / ಪತ್ರಕರ್ತ ಎಚ್.ಎಂ. ಪೆರ್ನಾಲ್ (ಹೆನ್ರಿ ಮೆಂಡೋನ್ಸಾ) ಅವರಿಗೆ 2025 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಇದು ಅವರ ಪ್ರಶಂಸಿತ ಸಾಹಿತ್ಯ ವಿಮರ್ಶೆ ಕೃತಿಯಾದ ಕೊಂಕಣಿ ಕಾವ್ಯೆಂ: ರುಪಾಂ ಆನಿ ರೂಪಕಾಂ (2021) ಗೆ ನೀಡಲಾಗಿದೆ. ಸಾಹಿತ್ಯ ಅಕಾಡೆಮಿ ಪ್ರಶಸ್ತಿಯು ಭಾರತ ಸರಕಾರ ಸಾಹಿತ್ಯಕ್ಕಾಗಿ ನೀಡುವ ದೇಶದ ಅತ್ಯುನ್ನತ ಪ್ರಶಸ್ತಿಯಾಗಿದ್ದು, ಪ್ರತೀ ವರ್ಷ 22 ಅನುಸೂಚಿತ ಭಾಷೆಗಳ ಜೊತೆಗೆ ಇಂಗ್ಲಿಷ್ ಮತ್ತು ರಾಜಸ್ಥಾನಿ ಹೀಗೆ 24 ಭಾಷೆಗಳ ಉತ್ಕೃಷ್ಟ ಕೃತಿಗಳನ್ನು ಆಯ್ದು ಈ ಪುರಸ್ಕಾರ ನೀಡಲಾಗುತ್ತದೆ. ಕೊಂಕಣಿ ಭಾಷೆಯು 1992 ರಿಂದ ಅನುಸೂಚಿತ ಭಾಷೆಯಾಗಿದ್ದು, ಗೋವಾ, ಕರ್ನಾಟಕ, ಕೇರಳ, ಮಹಾರಾಷ್ಟ್ರ ಮತ್ತು ಗುಜರಾತ್ ಐದು ರಾಜ್ಯಗಳಲ್ಲಿ ಪ್ರಚಲಿತವಾಗಿರುವ ಕೊಂಕಣಿ ಭಾಷೆಗೆ 1975 ರಲ್ಲಿ ಸಾಹಿತ್ಯ ಅಕಾಡೆಮಿಯಿಂದ ಮಾನ್ಯತೆ ದೊರಕಿತ್ತು. 1977 ರಿಂದ ಸಾಹಿತ್ಯ ಅಕಾಡೆಮಿ ಕೊಂಕಣಿ ಭಾಷೆಯ ಕೃತಿಗಳಿಗೂ ಪ್ರಶಸ್ತಿ ನೀಡುತ್ತಾ ಬಂದಿದ್ದು, ಈ ಹಿಂದೆ ಮಂಗಳೂರಿನ ಚಾ. ಫ್ರಾ. ದೆಕೊಸ್ತಾ…










